CoolCoder44 commited on
Commit
24be807
·
verified ·
1 Parent(s): 090d7a8

Delete PublicTV_World

Browse files
This view is limited to 50 files because it contains too many changes.   See raw diff
Files changed (50) hide show
  1. PublicTV_World/0000508e.txt +0 -16
  2. PublicTV_World/0001a090.txt +0 -20
  3. PublicTV_World/0002539d.txt +0 -24
  4. PublicTV_World/000c45a8.txt +0 -16
  5. PublicTV_World/000e0f25.txt +0 -20
  6. PublicTV_World/0011b7d2.txt +0 -14
  7. PublicTV_World/001318e2.txt +0 -16
  8. PublicTV_World/0016f8c3.txt +0 -12
  9. PublicTV_World/001c3940.txt +0 -14
  10. PublicTV_World/001d7557.txt +0 -18
  11. PublicTV_World/001f61a8.txt +0 -14
  12. PublicTV_World/001ffbf3.txt +0 -10
  13. PublicTV_World/002063a1.txt +0 -18
  14. PublicTV_World/0020d6d8.txt +0 -18
  15. PublicTV_World/00230bec.txt +0 -18
  16. PublicTV_World/002718ac.txt +0 -42
  17. PublicTV_World/00289422.txt +0 -24
  18. PublicTV_World/002b8697.txt +0 -16
  19. PublicTV_World/002ec927.txt +0 -22
  20. PublicTV_World/00319a11.txt +0 -16
  21. PublicTV_World/00335b73.txt +0 -16
  22. PublicTV_World/00337c87.txt +0 -14
  23. PublicTV_World/0034d360.txt +0 -22
  24. PublicTV_World/003d44b6.txt +0 -16
  25. PublicTV_World/0042acc7.txt +0 -16
  26. PublicTV_World/0042ec44.txt +0 -10
  27. PublicTV_World/0044a24d.txt +0 -24
  28. PublicTV_World/00458d7e.txt +0 -18
  29. PublicTV_World/00482b04.txt +0 -18
  30. PublicTV_World/004f93b9.txt +0 -16
  31. PublicTV_World/0050684a.txt +0 -14
  32. PublicTV_World/0054782e.txt +0 -14
  33. PublicTV_World/0055cf03.txt +0 -14
  34. PublicTV_World/0056adb5.txt +0 -10
  35. PublicTV_World/005b604d.txt +0 -12
  36. PublicTV_World/0061dcd4.txt +0 -14
  37. PublicTV_World/00645a50.txt +0 -10
  38. PublicTV_World/006575fd.txt +0 -22
  39. PublicTV_World/0065c643.txt +0 -14
  40. PublicTV_World/0066074f.txt +0 -16
  41. PublicTV_World/0067bf85.txt +0 -10
  42. PublicTV_World/006b0e2b.txt +0 -14
  43. PublicTV_World/006df185.txt +0 -22
  44. PublicTV_World/00706c05.txt +0 -18
  45. PublicTV_World/0070ce25.txt +0 -24
  46. PublicTV_World/0071b842.txt +0 -16
  47. PublicTV_World/007255a0.txt +0 -20
  48. PublicTV_World/00742bf4.txt +0 -12
  49. PublicTV_World/007436fc.txt +0 -18
  50. PublicTV_World/00744dc3.txt +0 -24
PublicTV_World/0000508e.txt DELETED
@@ -1,16 +0,0 @@
1
- ಬೆಂಗಳೂರು:ನನಗೆ ಯಾವುದೇ ರೋಗ ಲಕ್ಷಣ ವಿಲ್ಲದಿದ್ದರೂ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ.
2
-
3
- ನಾನು ಶ್ರೀ.ಶಂತವೇರಿ ಗೋಪಾಲ್ ಗೌಡ ಆಸ್ಪತ್ರೆಯಲ್ಲಿ ರೋಗಿಯನ್ನು ನೋಡಲು ಹೋಗಿದ್ದೆ. ಆಂಟಿಜೆನ್ ಟೆಸ್ಟ್ ಇತ್ತು ಅಲ್ಲಿ ನೆಗೆಟಿವ್ ಎಂದು ಬಂದಿತ್ತು. ಆದರೂ ನಾನು ಆರ್‌ಟಿಪಿಸಿಆರ್‌ಗಾಗಿ ಹೋಗಿದ್ದೆನು. ನನಗೆ ಯಾವುದೇ ರೋಗಲಕ್ಷಣಗಳನ್ನು ನಾನು ಹೊಂದಿಲ್ಲದಿದ್ದರೂ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಯಾರು ನನ್ನೊಂದಿಗೆ ಸಂಪರ್ಕಕ್ಕೆ ಬಂದರು ಟೆಸ್ಟ್ ಮಾಡಿಸಿಕೊಳ್ಳಿ, ಪ್ರತ್ಯೇಕವಾಗಿ ಜಾಗೃತರಾಗಿರಿ ಎಂದು ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ.
4
-
5
- Dear all, morning I went to see a patient at Sri.Shantaveri Gopal Gowda hospital n had a Rapid Antigen Test n it was negative. Yet I went for RTPCR n it turned out to be positive though I don’t hv any symptoms. Whoever came in contact with me, pls isolate yourself. Sorry.
6
-
7
- — Pratap Simha (@mepratap)May 11, 2021
8
-
9
-
10
-
11
- ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, 480 ಮಂದಿ ಮೃತಪಟ್ಟಿದ್ದಾರೆ. ಏಪ್ರಿಲ್ ನಲ್ಲಿ ಮೃತಪಟ್ಟವರ ವಿವರಗಳನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ತಡವಾಗಿ ನೀಡುತ್ತಿರುವುದರಿಂದ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 19,852ಕ್ಕೆ ಏರಿಕೆಯಾಗಿದೆ.
12
-
13
- ಇಂದು ಆಸ್ಪತ್ರೆಯಿಂದ 22,584 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.33.66 ಮತ್ತು ಮರಣ ಪ್ರಮಾಣ ಶೇ.1.21ರಷ್ಟಿದೆ. ಟೆಸ್ಟಿಂಗ್ ಇಳಿಕೆಯಾಗಿದ್ದು, ಇಂದು 1,16,238 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/0001a090.txt DELETED
@@ -1,20 +0,0 @@
1
- ಮಂಡ್ಯ:ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ. ಮಂಡ್ಯ ಜಿಲ್ಲೆಯ ಜನತೆಯ ನಿರೀಕ್ಷೆಯನ್ನು ಈ ಸರ್ಕಾರ ಹುಸಿಗೊಳಿಸಿದೆ ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ.
2
-
3
- ಮಂಡ್ಯ ಜಿಲ್ಲೆಯ ಬಹುಪಾಲು ವರ್ಗದ ಜೀವನೋಪಾಯಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅನುಕೂಲ ಮಾಡಿಕೊಡುತ್ತಿದ್ದ ಬಹು ಆಕಾಂಕ್ಷಿತ ಮೈಸೂರು ಸಕ್ಕರೆ ಕಾರ್ಖಾನೆಗೆ ಘೋಷಿಸಿರುವ 50 ಕೋಟಿ ರೂಪಾಯಿ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ. ಯಂತ್ರೋಪಕರಣ ದುರಸ್ತಿಗೆ ಈ ಹಣವನ್ನು ಒದಗಿಸುವುದಾಗಿ ಹೇಳಲಾಗಿದೆ. ಆದರೆ ಕಾರ್ಖಾನೆ ಅಭಿವೃದ್ಧಿಗೆ ಈ ಹಣ ಯಾವುದಕ್ಕೂ ಸಾಲದು ಎಂಬುದು ತಿಳಿಯುತ್ತದೆ. ಹಾಲಿ ಕಾರ್ಖಾನೆ ಅಭಿವೃದ್ಧಿಗೆ 200 ಕೋಟಿ ರೂಪಾಯಿಯ ಅನುದಾನವನ್ನು ಕೇಳಿದ್ದೇವು. ಅಲ್ಲದೇ ಎಥೆನಾಲ್ ಘಟಕವನ್ನು ಸ್ಥಾಪಿಸಿ ಕಾರ್ಖಾನೆಯನ್ನು ಲಾಭದಾಯಕವನ್ನಾಗಿ ಮಾಡಲೂ ಕೇಳಿಕೊಂಡಿದ್ದೇವು. ಆದರೆ, ಸರ್ಕಾರಕ್ಕೆ ಇದಾವುದರ ಮೇಲೂ ಆಸಕ್ತಿ ಇಲ್ಲ ಎಂಬುದು ಈ ಬಜೆಟ್ ಮೂಲಕ ಸಾಬೀತಾಗಿದೆ ಎಂದಿದ್ದಾರೆ.ಇದನ್ನೂ ಓದಿ:ಬಿಸಿಯೂಟ ತಯಾರಕರಿಗೆ 1,000 ರೂ. ಗೌರವಧನ ಹೆಚ್ಚಳ
4
-
5
-
6
-
7
- ನಾನು ಮಾನ್ಯ ಮುಖ್ಯಮಂತ್ರಿಯವರಲ್ಲಿ ಮನವಿ ಈಗಲೂ ಕಾಲಾವಕಾಶ ಮಿಂಚಿಲ್ಲ. ತಾವು ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಇದನ್ನು ಮರುಪರಿಶೀಲನೆ ಮಾಡಿ 200 ಕೋಟಿ ರೂ. ಅನುದಾನ ಮೀಸಲಿಡಬೇಕು. ಜೊತೆಗೆ ಎಥೆನಾಲ್ ಘಟಕ ಸ್ಥಾಪನೆಗೆ ಕ್ರಮ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ವಿಶ್ವೇಶ್ವರಯ್ಯ ನಾಲೆ ಆಧುನೀಕರಣಕ್ಕೆ 500 ಕೋಟಿ ರೂಪಾಯಿಯನ್ನು ಕೇಳಲಾಗಿತ್ತು. ಅದನ್ನೂ ನೀಡದಿರುವುದು ತೀವ್ರ ಬೇಸರ ತಂದಿದೆ. ಇದನ್ನೂ ಸಹ ಮುಖ್ಯಮಂತ್ರಿಯವರು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
8
-
9
-
10
-
11
- ಅಂತಾರಾಷ್ಟ್ರೀಯ ಗುಣಮಟ್ಟದ ರೈತ ತರಬೇತಿ ಕೇಂದ್ರಕ್ಕೋಸ್ಕರ ಅಂತಾರಾಷ್ಟ್ರೀಯ ಮಟ್ಟದ ರೈತ ಭವನವನ್ನು ಸ್ಥಾಪಿಸುವಂತೆ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಇದನ್ನು ಹುಸಿಗೊಳಿಸಿದೆ. ಕೋವಿಡ್ ಸಮಯದಲ್ಲಿ ಮೃತಪಟ್ಟ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಬೇಕಿತ್ತು. ಆದರೆ ಅದರ ಬಗ್ಗೆ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದನ್ನು ಸಹ ಬಜೆಟ್ ಮೇಲಿನ ಚರ್ಚೆ ಸಮಯದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಮರುಪರಿಶೀಲಿಸಿ ಕೋವಿಡ್ ಸಮಯದಲ್ಲಿ ಮೃತಪಟ್ಟ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತ ಕುಟುಂಬಗಳಿಗೆ ನೆರವಾಗಬೇಕು ಎಂದು ತಿಳಿಸಿದ್ದಾರೆ.ಇದನ್ನೂ ಓದಿ:Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ
12
-
13
-
14
-
15
- ಮಂಡ್ಯ ಜಿಲ್ಲೆ ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ವಿಶೇಷವಾದಂತಹ ಯಾವುದೇ ರೀತಿಯ ಕೊಡುಗೆಯನ್ನು ನೀಡಿಲ್ಲ. ಯಾವುದೇ ರೀತಿಯ ಕಾರ್ಯಕ್ರಮವನ್ನು ಘೋಷಣೆ ಮಾಡದೇ ಮುಖ್ಯಮಂತ್ರಿಯವರು ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನೂ ರೈತರ ಆದಾಯವನ್ನು ದ್ವಿಗುಣ ಮಾಡುತ್ತೇವೆ ಎಂದು ಹೇಳುತ್ತಾ ಬರಲಾಗುತ್ತಿದೆಯೇ ಹೊರತು ಅಂತಹ ಯಾವುದೇ ಘೋಷಣೆಗಳು, ನಿರ್ಧಾರಗಳು ಈ ಬಜೆಟ್‍ನಲ್ಲಿ ಕಾಣಿಸಲಿಲ್ಲ. ಹೀಗಾಗಿ ಇದು ನಿರಾಶಾದಾಯಕ ಬಜೆಟ್ ಎಂದು ಹೇಳಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾರೆ.
16
-
17
-
18
-
19
-
20
-
 
 
 
 
 
 
 
 
 
 
 
 
 
 
 
 
 
 
 
 
 
PublicTV_World/0002539d.txt DELETED
@@ -1,24 +0,0 @@
1
- ಬಿಗ್‍ಬಾಸ್ ಮನೆಗೆ ಕಳುಹಿಸುವ ಮುನ್ನ ಹುಡುಗರ ಜೊತೆ ಹೆಚ್ಚಾಗಿ ಸೇರಬೇಡ ಎಂದು ಅಮ್ಮ ಹೇಳಿದ್ದ ವಿಚಾರವನ್ನು ವೈಷ್ಣವಿ ಇಂದು ಬಹಿರಂಗ ಮಾಡಿದ್ದಾರೆ.
2
-
3
- ಬಿಗ್‍ಬಾಸ್ ಮನೆಯಿಂದ ಹೊರಗೆ ಹೋಗುತ್ತಿರುವ ಸ್ಪರ್ಧಿಗಳಿಗೆ ಏನಾದರೂ ಭಯ ಕಾಡುತ್ತಿದ್ಯಾ ಎಂದು ಕಣ್ಮಣಿ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ವೈಷ್ಣವಿ ನಮ್ಮ ಅಮ್ಮ ದೊಡ್ಮನೆಗೆ ಬರುವಾಗ ಹುಡುಗರ ಜೊತೆ ಜಾಸ್ತಿ ಸೇರಬೇಡ, ಇರಬೇಡ ಎಂದು ಹೇಳಿ ಕಳುಹಿಸಿದ್ದರು. ಆದರೆ ನಾನು ಇಲ್ಲಿ ಇದ್ದಿದ್ದೆ ಹೆಚ್ಚಾಗಿ ಹುಡುಗರ ಜೊತೆ ಹಾಗಾಗಿ ಭಯ ಆಗುತ್ತಿದೆ. ಇನ್ನೊಂದು ವಿಪರ್ಯಾಸ ಎಂದರೆ ಈ ಎಪಿಸೋಡ್‍ನ ನಾನು ಅವರೊಟ್ಟಿಗೆಯೇ ಕುಳಿತು ನೋಡಬೇಕು. ಸೋ ಹಾಗಾಗಿ ಸ್ವಲ್ಪ ಟೆನ್ಷನ್ ಆಗ್ತಿದೆ ಎನ್ನುತ್ತಾರೆ.
4
-
5
-
6
-
7
- ಈ ವೇಳೆ ರಘು ನಾನು ಕೂಡ ಆಗಾಗ ಎಕ್ಸ್ ಗರ್ಲ್ ಫ್ರೆಂಡ್, ಹಾಗೇ, ಹೀಗೆ ಅಂತ ಹೇಳಿಬಿಟ್ಟಿದ್ದೇನೆ. ಸೋ ನೀವು ಸ್ವಲ್ಪ ಎಕ್ಸ್‌ಪ್ಲೇನ್ ಮಾಡಿ ಬಿಡಿ ಕಣ್ಮಣಿ ಎಂದು ಹೇಳುತ್ತಾಳೆ. ಆಗ ಕಣ್ಮಣಿ ಇನ್ನೂ ನಾಲ್ಕೆ ಘಂಟೆ ರಘು ನೀವೇ ಮಾಡಬಹುದು ಅಂತಾಳೆ.
8
-
9
-
10
-
11
- ನಂತರ ವೈಷ್ಣವಿಗೆ ಒಂದೇ ಒಂದು ಪ್ರಶ್ನೆ ಕೇಳುತ್ತೇನೆ. ನಿಮ್ಮ ಮನೆ ಇರುವುದು ಯಾವ ಏರಿಯಾ ಎಂದು ಕಣ್ಮಣಿ ಕೇಳುತ್ತಾಳೆ. ಆಗ ವೈಷ್ಣವಿ ರಾಜಾಜಿನಗರ ಎಂಬ ಸತ್ಯ ರಿವೀಲ್ ಮಾಡಿದ್ದಾರೆ. ನಂತರ ರಘುಗೆ ಆ ಕಡೆ ತಲೆ ಹಾಕಿ ಕೂಡ ಮಲಗಬೇಡಿ ಅಂತ ಕಣ್ಮಣಿ ಅಣುಗಿಸುತ್ತಾಳೆ. ಈ ವೇಳೆ ನಗುತ್ತಾ ರಘು ನಮ್ಮಿಬ್ಬರದ್ದು ಒಂದೇ ಏರಿಯಾ ನಮ್ಮ ಏರಿಯಾಗೆ ಹೋಗಲೇ ಬೇಕು ಕಣ್ಮಣಿ ನಾನೇದರೂ ಜಾಸ್ತಿ ಮಾತನಾಡಿದ್ನಾ ಎಂದು ಕೇಳುತ್ತಾರೆ.
12
-
13
-
14
-
15
- ವೈಷ್ಣವಿ ಬಿಗ್‍ಬಾಸ್ ಕಾರ್ಯಕ್ರಮದ ಆರಂಭದಲ್ಲಿ ನೀವು ವೇದಿಕೆ ಮೇಲೆ ಸುದೀಪ್ ಅವರ ಜೊತೆ ಹೇಳಿದ್ದನ್ನೆಲ್ಲಾ ರಘು ಜೊತೆ ಹಂಚಿಕೊಂಡಿದ್ದೀರಾ, ಅದೇ ನಿಮ್ಮ ಅಮ್ಮ ಯಾವ ಯಾವದರಲ್ಲಿ ನಿಮಗೆ ಹೊಡೆಯುತ್ತಾರೆ ಅಂತ ಎಂದು ಕಣ್ಮಣಿ ನೆನಪಿಸುತ್ತಾರೆ. ಆಗ ಮನೆಮಂದಿ ಜೋರಾಗಿ ನಗುತ್ತಾ ಚಪ್ಪಾಳೆ ಹೊಡೆಯುತ್ತಾರೆ.
16
-
17
-
18
-
19
- ಈ ವೇಳೆ ರಘು ಈ ಸೈಡ್ ಹೋದರೆ ನನ್ನ ಹೆಂಡತಿ, ಆ ಸೈಡ್ ಹೋದರೆ ವೈಷ್ಣವಿ ಅಮ್ಮ ನಾನು ಎಲ್ಲಿ ಹೋಗಲಿ ಎಂದು ಹೇಳುತ್ತಾ ಹಾಸ್ಯ ಮಾಡುತ್ತಾರೆ.
20
-
21
-
22
-
23
-
24
-
 
 
 
 
 
 
 
 
 
 
 
 
 
 
 
 
 
 
 
 
 
 
 
 
 
PublicTV_World/000c45a8.txt DELETED
@@ -1,16 +0,0 @@
1
- ಉಡುಪಿ:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಕಂಡುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಈ ಕೇಸ್‍ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
2
-
3
- ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಅವರು 40 ಪರ್ಸೆಂಟ್ ಆರೋಪ ಮಾಡಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‍ನಲ್ಲಿ ಶವ ಪತ್ತೆ ಆಗಿದೆ. ಈಗಾಗಲೇ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ರೀತಿಯ ತನಿಖೆ ಆಗುತ್ತದೆ. ಇದರ ಪ್ರಾಥಮಿಕ ವರದಿ ಏನು ಬರುತ್ತದೆ ಎನ್ನುವುದರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಈ ಸಾವಿನ ಹಿನ್ನೆಲೆ ಸಂಪೂರ್ಣವಾಗಿ ತನಿಖೆ ನಡೆಯುತ್ತದೆ ಎಂದು ಹೇಳಿದರು.
4
-
5
-
6
-
7
- ಪ್ರತಿಪಕ್ಷಗಳು ರಾಜೀನಾಮೆಗೆ ಒತ್ತಾಯಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡರು. ಆಗ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರಾ ಪ್ರಶ್ನಿಸಿದರು. ಈ ಕುರಿತು ತನಿಖೆ ನಡೆಸುತ್ತೇವೆ. ಇದರ ಸತ್ಯಾಂಶ ಹೊರಬರುತ್ತದೆ. ಅದಾದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.ಇದನ್ನೂ ಓದಿ:ರಾಜ್ಯದಲ್ಲಿ ಡಿಜಿಪಿ ಬದುಕಿದ್ದರೆ, ಕ್ರಮ ಕೈಗೊಳ್ಳಬೇಕು: ಡಿಕೆಶಿ
8
-
9
-
10
-
11
- ಪೊಲೀಸ್ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಹೇಳಿದ್ದೇವೆ. ಸಂತೋಷ್ ಸಾವಿನ ಕುರಿತು ಕಾನೂನು ಬದ್ಧವಾಗಿ ಆಗಬೇಕು. ಪಾರದರ್ಶಕ ತನಿಖೆ ಆಗುತ್ತದೆ. ಗುತ್ತಿಗೆದಾರ ಸಂತೋಷ್ ಮಾಡಿದ್ದ ಆರೋಪವನ್ನು ಈಶ್ವರಪ್ಪ ಅವರು ಅಲ್ಲಗಳೆದಿದ್ದಾರೆ. ಅಷ್ಟೇ ಅಲ್ಲದೇ ಕೋಟ್‍ನಲ್ಲಿ ಕೇಸ್ ಹಾಕಿದ್ದಾರೆ. ಸಂತೋಷ್‍ಗೆ ನೋಟಿಸ್ ಹೋಗಿದೆ. ಇದೆಲ್ಲವನ್ನು ತನಿಖೆ ಸಂದರ್ಭದಲ್ಲಿ ಒಳಪಡುತ್ತದೆ. ಯಾವ ಸಂದರ್ಭದಲ್ಲಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ:ನಾನು ಯಾವುದೇ ತಪ್ಪು ಮಾಡಿಲ್ಲ, ಸಂತೋಷ್ ತಪ್ಪು ಮಾಡಿರೋದು : ಈಶ್ವರಪ್ಪ
12
-
13
-
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/000e0f25.txt DELETED
@@ -1,20 +0,0 @@
1
- ನವದೆಹಲಿ: ಕಾಂಗ್ರೆಸ್ ತಮ್ಮ ಅಧಿಕಾರವಧಿಯಲ್ಲಿನ ಸ್ಥಿತಿಯನ್ನು ಮರೆತು ಈಗಿನ ತೈಲ ಬೆಲೆ ಏರಿಕೆಗೆ ಕೇಂದ್ರಸರ್ಕಾರವೇ ಕಾರಣ ಎಂದು ಆರೋಪಿಸುತ್ತಿದೆ ಎಂದು ಬಿಜೆಪಿ ಮುಖಂಡ ಜೆ ಮಿಶ್ರಾ ಆರೋಪಿಸಿದ್ದಾರೆ.
2
-
3
- 2004 ರಲ್ಲಿ ಒಂದು ಲೀಟರ್ ಪೆಟ್ರೋಲ್ ಗೆ 29 ರೂ. ಇತ್ತು. 2014 ರಲ್ಲಿ 74 ರೂ ಆಗಿತ್ತು. ಒಂದು ಕೆಜಿ ತುಪ್ಪಕ್ಕೆ 2004 ರಲ್ಲಿ 130 ರೂ ಇತ್ತು. 2014 ರಲ್ಲಿ 380 ರೂ ಆಗಿತ್ತು. ಮೊಬೈಲ್ ಡೆಟಾ ದರ 1 ಜಿಬಿ ಗೆ 300 ರೂ ಇತ್ತು. ಈಗ 300 ರೂ. ಗೆ 100 ಜಿಬಿ ಸಿಗುತ್ತೆ. ಕಾಂಗ್ರೆಸ್ ಇದ್ದಾಗ ಕಾಲ್ ದರಗಳು 1 ನಿಮಿಷಕ್ಕೆ 8 ರೂ. ಇತ್ತು. ಈಗ ಡೆಟಾ ಪ್ಯಾಕ್ ಜೊತೆ ಕಾಲ್ ಉಚಿತವಾಗಿದೆ ಎಂದು ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.
4
-
5
- ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 25 ರೂ. ಕಡಿಮೆ ಮಾಡಬಹುದು. ಆದರೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಬುಧವಾರ ಆರೋಪಿಸಿದ್ದರು.
6
-
7
- ಈ ಸಂಬಂಧ ನಿರಂತರ ಟ್ವಿಟ್ ಮಾಡಿರುವ ಅವರು, ಪೆಟ್ರೋಲ್ ದರದಲ್ಲಿ ಕೇಂದ್ರ ಸರ್ಕಾರವು ಹೆಚ್ಚು ಹಣ ಉಳಿತಾಯ ಮಾಡುತ್ತಿದೆ. ಕಚ್ಚಾ ತೈಲದಲ್ಲಿ ಕೇಂದ್ರ ಸರ್ಕಾರವು ಪ್ರತಿ ಲೀಟರ್ ಗೆ  15 ರೂ. ಉಳಿತಾಯ ಮಾಡುತ್ತಿದೆ. ಅಲ್ಲದೇ 10 ರೂ. ಅಬಕಾರಿ ಸುಂಕ ಹಾಕುತ್ತಿದೆ ಎಂದು ಅವರು ಹೇಳಿದ್ದರು.
8
-
9
- ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 24ರಿಂದ ಮೇ14ರವರೆಗೆ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಆಗಿರಲಿಲ್ಲ. ಈಗ ಪ್ರತಿ ದಿನ ಹೆಚ್ಚಾಗುತ್ತಿದ್ದು, ಗುರುವಾರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 78.43 ರೂ ಇದ್ದರೆ, ಪ್ರತಿ ಲೀಟರ್ ಡೀಸೆಲ್ ಬೆಲೆ 69.74 ರೂ ಇದೆ.
10
-
11
- Congress talks about fuel price to criticise govt. Don't they remember their past? Petrol was Rs29/l in '04&Rs74/l in '14, Ghee Rs130/kg in '04&Rs380/kg in '14, data charges Rs300 for 1 GB,100 GB at Rs300 now, call rates Rs 8/min & free with data pack today: J Mishra, BJP (23.05)pic.twitter.com/BqSSuvSoko
12
-
13
- — ANI (@ANI)May 24, 2018
14
-
15
-
16
-
17
-
18
-
19
-
20
-
 
 
 
 
 
 
 
 
 
 
 
 
 
 
 
 
 
 
 
 
 
PublicTV_World/0011b7d2.txt DELETED
@@ -1,14 +0,0 @@
1
- ಬೆಳಗಾವಿ:ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶಹೊರಹಾಕಿದ್ದಾರೆ.
2
-
3
-
4
-
5
- ಬೆಳಗಾವಿ ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನಿಲಜಿ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಲಾಗಿದೆ.ಇದನ್ನೂ ಓದಿ:ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ
6
-
7
-
8
-
9
- ಯಾವುದೇ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕಾದರೆ ಮೊದಲಿಗೆ ಟೆಂಡರ್ ಕರೆಯಬೇಕು. ಅದಕ್ಕೆ ಅನುಮೋದನೆ ಸಿಗಬೇಕು. ಆದರೆ ಇದ್ಯಾವುದನ್ನು ಪಾಲಿಸದೇ ವರ್ಕ್ ಆರ್ಡರ್ ಇಲ್ಲದೇ ಇದ್ದರೂ ಶಾಸಕಿ ಪುತ್ರನಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದಲ್ಲದೇ ಸಂಬಂಧಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರ ಗಮನಕ್ಕೆ ತರದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಡಿಸಿಗೆ ಒತ್ತಾಯಿಸಿದರು.ಇದನ್ನೂ ಓದಿ:ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ
10
-
11
-
12
-
13
-
14
-
 
 
 
 
 
 
 
 
 
 
 
 
 
 
 
PublicTV_World/001318e2.txt DELETED
@@ -1,16 +0,0 @@
1
- ಗದಗ:ಇಂದು 2ನೇ ದಿನವೂ ಸಾರಿಗೆ ಬಸ್ ಬಂದ್ ನಿಂದ ಸಾರ್ವಜನಿಕರು ಸಾಕಷ್ಟು ಪರದಾಡಿದರು. ಅನಿವಾರ್ಯತೆ ಇರುವ ಪ್ರಯಾಣಿಕರು ರೈಲು ಪ್ರಯಾಣದತ್ತ ಮುಖ ಮಾಡಿದ್ದಾರೆ. ಬಸ್ ಇಲ್ಲದೇ ಸರಿಯಾಗಿ ರೈಲು ಇಲ್ಲದೆ ಅಸ್ತವ್ಯಸ್ತತೆಯಿಂದ ಮಹಿಳಾ ಪ್ರಯಾಣಿಕರೊಬ್ಬರು ಪಬ್ಲಿಕ್ ಟಿವಿ ಎದುರು ಕಣ್ಣೀರಿಟ್ಟು ತನ್ನ ಅಳಲನ್ನು ತೋಡಿಕೊಂಡಿದ್ದಾರೆ.
2
-
3
-
4
-
5
- ಕೊಪ್ಪಳ ಮೂಲದ ದೀಪಾ ಕುಲಕರ್ಣಿ ಎಂಬ ಮಹಿಳೆ ಮಗಳೊಂದಿಗೆ ಗದಗಿನಲ್ಲಿ ಅನಾರೋಗ್ಯಕ್ಕೊಳಗಾದ ಸಂಬಂಧಿಕರೊಬ್ಬರನ್ನು ಮಾತನಾಡಿಸಲು ಬಂದಿದ್ದರು. ನಿನ್ನೆ ಏಕಾಏಕಿ ಬಸ್ ಬಂದ್ ನಿಂದ ಮರಳಿ ಊರಿಗೆ ಹೋಗಲಾಗದೆ ಸಾಕಷ್ಟು ಪರದಾಡಿದ್ದಾರೆ.
6
-
7
-
8
-
9
- ಇಂದು ರೈಲ್ವೆ ನಿಲ್ದಾಣದಲ್ಲೂ ಸರಿಯಾಗಿ ರೈಲು ಇಲ್ಲದಕ್ಕೆ ಕಣ್ಣೀರಿಟ್ಟ ಮಹಿಳೆ ತಮಗಾದ ತೊಂದರೆ ಬಗ್ಗೆ ಪಬ್ಲಿಕ್ ಟಿವಿ ಎದುರು ಕಣ್ಣೀರಿಟ್ಟು ಅಳಲು ತೋಡಿಕೊಂಡಿದ್ದಾರೆ. ದಿಢೀರ್ ಬಂದ್ ಮಾಡಿರುವುದು ಸಾಕಷ್ಟು ತೊಂದರೆಯಾಗಿದೆ. ಮಗಳನ್ನು ಕಟ್ಟಿಕೊಂಡು ಬಸ್ ಹಾಗೂ ರೈಲು ನಿಲ್ದಾಣದಲ್ಲಿ ಹೇಗೆ ಇರಬೇಕು. ಅರ್ಧ ದಾರಿನಲ್ಲಿ ಹೀಗಾದ ವೇಳೆ ಯಾರಾದರೂ ಸಂಬಂಧಿಕರು ಇದ್ದರೆ ಪರವಾಗಿಲ್ಲ ಇಲ್ಲವಾದರೆ ನಮ್ಮ ಪರಸ್ಥಿತಿ ಕೇಳುವವರು ಯಾರು. ಸರ್ಕಾರ ಜನಸಾಮಾನ್ಯರಿಗಾಗುವ ತೊಂದರೆ ತಪ್ಪಿಸಬೇಕು ಅಂತ ಆಗ್ರಹಿಸಿದರು.
10
-
11
- ಖಾಸಗಿ ವಾಹನಗಳ ದುಪ್ಪಟ್ಟು ದರದಿಂದ ಬೇಸತ್ತ ಜನರು ರೈಲು ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ದೂರದ ಪ್ರದೇಶಗಳಿಗೆ ತೆರಳುವ ಸಾರ್ವಜನಿಕರು ಟಿಕೆಟ್ ಕೌಂಟರ್ ನಲ್ಲಿ ಸರದಿಯ ಸಾಲಿನಲ್ಲಿ ನಿಂತು ಟಿಕೆಟ್ ಪಡೆದು ಪ್ರಯಾಣ ಮಾಡುತ್ತಿದ್ದಾರೆ.
12
-
13
- Advertisement
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/0016f8c3.txt DELETED
@@ -1,12 +0,0 @@
1
- ಬೆಂಗಳೂರು:ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.
2
-
3
-
4
-
5
- 2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.ಇದನ್ನೂ ಓದಿ:ಸರ್ಕಾರಿ ಅಂಗನವಾಡಿಗಳ ಕರೆಂಟ್ ಬಿಲ್ ಕಟ್ಟಲು ದುಡ್ಡಿಲ್ಲ – ಫ್ಯೂಸ್ ಕಿತ್ತ ಬೆಸ್ಕಾಂ
6
-
7
- ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.
8
-
9
-
10
-
11
-
12
-
 
 
 
 
 
 
 
 
 
 
 
 
 
PublicTV_World/001c3940.txt DELETED
@@ -1,14 +0,0 @@
1
- ಬೆಂಗಳೂರು:ಒಂದು ಕಡೆ ಕೊರೊನಾ ಕಾಟ ಹೆಚ್ಚಿದ್ದರೆ ಬೆಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಕಾಟ ಹೆಚ್ಚಾಗಿದೆ. ನಗರದಲ್ಲಿ ಒಟ್ಟು 14 ಮಂದಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.
2
-
3
- 14 ಮಂದಿಯಲ್ಲಿ 7 ಮಂದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ, 7 ಮಂದಿ ಇಎನ್‍ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ ಇಬ್ಬರು ಬ್ಲ್ಯಾಕ್ ಫಂಗಸ್‍ಗೆ ಮೃತಪಟ್ಟಿದ್ದಾರೆ.
4
-
5
-
6
-
7
- ಪಬ್ಲಿಕ್ ಟಿವಿಗೆ ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತ ಪ್ರತಿಕ್ರಿಯಿಸಿ, ಲಿವರ್, ಆಕ್ಸಿಜನ್, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದವರಲ್ಲೂ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. 14 ಜನ ಕೂಡ ಬೆಂಗಳೂರಿನವರಾಗಿದ್ದಾರೆ. ಕೋವಿಡ್‍ನಿಂದ ಬಳಲುತ್ತಿದ್ದು, ಡಯಾಬಿಟಿಸ್ ಹೆಚ್ಚು ಇದ್ದವರಿಗೆ ಬ್ಲ್ಯಾಕ್ ಫಂಗಸ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.
8
-
9
- ಬೆಳಗಾವಿಯಲ್ಲೂ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಹಿಡಕಲ್ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ. ಬೀದರ್ ನಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
10
-
11
-
12
-
13
-
14
-
 
 
 
 
 
 
 
 
 
 
 
 
 
 
 
PublicTV_World/001d7557.txt DELETED
@@ -1,18 +0,0 @@
1
- ಇಂದು ಸಂಜೆ  6.40ಕ್ಕೆ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಈ ಸಮಾರಂಭದಲ್ಲಿ ಭಾಗವಹಿಸುವುದಕ್ಕಾಗಿ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಬೆಂಗಳೂರಿಗೆ ಬಂದಿಳಿದ್ದಾರೆ. ಪ್ರತಿಷ್ಠಿತ ಹೊಟೇಲ್ ವೊಂದರಲ್ಲಿ ತಂಗಿರುವ ಅವರನ್ನು ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ಚಿತ್ರತಂಡ ಭೇಟಿ ಮಾಡಿದೆ.ಇದನ್ನೂ ಓದಿ :ಕೆಜಿಎಫ್ 2 ಟ್ರೈಲರ್ ಮೊದಲ ವಿಮರ್ಶೆ : ಹೇಗಿದೆ ರಾಕಿಭಾಯ್ KGF 2 ಹವಾ
2
-
3
-
4
-
5
- ಕೆಜಿಎಫ್ 2 ಸಿನಿಮಾದ ಟ್ರೈಲರ್ ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ  ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್.ಇದನ್ನೂ ಓದಿ :ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ
6
-
7
-
8
-
9
- ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್‍ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕೆಜಿಎಫ್ 2 ಮಲಯಾಳಂ ಟ್ರೈರಲ್ ಅನ್ನು ಅಲ್ಲಿನ ಖ್ಯಾತ ನಟ ಪೃಥ್ವಿರಾಜ್ ರಿಲೀಸ್ ಮಾಡಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ ಹೇಳಿದೆ.  ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ.ಇದನ್ನು ಓದಿ :ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ
10
-
11
-
12
-
13
- ಹಾಗೆಯೇ ಹಿಂದಿಯಲ್ಲೂ ಈ ಟ್ರೈಲರ್ ಬಿಡುಗಡೆ ಆಗುತ್ತಿದ್ದು, ಅದನ್ನು ಬಾಲಿವುಡ್ ಖ್ಯಾತ ನಟ ಫರಾನ್ ಅಖ್ತರ್ ರಿಲೀಸ್ ಮಾಡುತ್ತಿದ್ದಾರೆ. ಈಗಾಗಲೇ ನಾಲ್ಕು ಟ್ರೈಲರ್ ಗಳನ್ನು ಯಾರೆಲ್ಲ ರಿಲೀಸ್ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಕನ್ನಡದ ಟ್ರೈಲರ್ ರಿಲೀಸ್ ಯಾರು ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಇನ್ನೂ ಹಂಚಿಕೊಂಡಿಲ್ಲ. ಇವತ್ತು ಟ್ರೈಲರ್ ಬಿಡುಗಡೆಯ ಮುಖ್ಯ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗಿ ಆಗುತ್ತಿರುವುದರಿಂದ ಇವರೇ ಬಹುಶಃ ಟ್ರೈಲರ್ ಬಿಡುಗಡೆ ಮಾಡಬಹುದು ಎನ್ನಲಾಗುತ್ತಿದೆ.
14
-
15
-
16
-
17
-
18
-
 
 
 
 
 
 
 
 
 
 
 
 
 
 
 
 
 
 
 
PublicTV_World/001f61a8.txt DELETED
@@ -1,14 +0,0 @@
1
- ಗದಗ:ರಾಜ್ಯದೆಲ್ಲೆಡೆ ದ್ವಿತೀಯ ಪಿಯು ಪರೀಕ್ಷೆ ನಡೆದಿದ್ದು, ಹಲವೆಡೆ ವಿದ್ಯಾರ್ಥಿಗಳು ಗುಂಪಾಗಿ ಸೇರಿ ಅವಾಂತರ ಸೃಷ್ಟಿಸಿದ್ದರು. ಇನ್ನೂ ಹಲವೆಡೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಗದಗನಲ್ಲಿ ಒರ್ವ ವಿದ್ಯಾರ್ಥಿಯ ದೇಹದಲ್ಲಿ ಹೆಚ್ಚು ಉಷ್ಣಾಂಶ ಕಂಡು ಬಂದು ಆತಂಕಕ್ಕೀಡು ಮಾಡಿದೆ.
2
-
3
-
4
-
5
- ನಗರದ ಜೆ.ಟಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿ ದೇಹದಲ್ಲಿ ಹೆಚ್ಚು ಉಷ್ಣಾಂಶ ಕಂಡು ಬಂದಿದ್ದು, ಥರ್ಮಲ್ ಸ್ಕ್ರೀನಿಂಗ್ ಮಾಡುವ ವೇಳೆ ಹೆಚ್ಚು ಉಷ್ಣಾಂಶ ಇರುವುದು ಪತ್ತೆಯಾಗಿದೆ. ಪರೀಕ್ಷೆಗೆ ತಡವಾಗುತ್ತದೆ ಎಂಬ ತವಕದಿಂದ ಓಡಿಬಂದಿದ್ದಾನೆ. ಈ ವೇಳೆ ಹೈಟೆಂಪ್ರೆಚರ್ ತೋರಿಸಿದೆ ಎನ್ನಲಾಗುತ್ತಿದೆ. ಇನ್ನು ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಕಂಟೈನ್ಮೆಂಟ್ ಪ್ರದೇಶದ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಈ 3 ಜನರನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿದೆ. ಈ ಮೂವರು ವಿದ್ಯಾರ್ಥಿಗಳಿಗೆ ಸೋಂಕಿನ ಲಕ್ಷಣಗಳಿಲ್ಲ ಎನ್ನಲಾಗಿದೆ.
6
-
7
- ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ. ಜಿಲ್ಲೆಯ ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮಾಯವಾಗಿತ್ತು. ವಿದ್ಯಾರ್ಥಿಗಳು ಗುಂಪು ಗುಂಪಾಗಿ ಚರ್ಚೆಯಲ್ಲಿ ತೊಡಗಿದ್ದರು. ಮುನ್ಸಿಪಲ್ ಕಾಲೇಜ್ ಆವರಣದಲ್ಲಿ ಸೆಕ್ಷನ್ 144 ನಿಯಮ ಉಲ್ಲಂಘನೆ ಮಾಡಲಾಗಿದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜಾರಾಗಿದ್ದರೂ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುವ ದೃಶ್ಯಗಳು ಕಂಡುಬಂತು.
8
-
9
-
10
-
11
- ಪರೀಕ್ಷಾ ಕೇಂದ್ರದ ಬಳಿ ಹೇಳೋರು, ಕೆಳೋರು ಯಾರೂ ಇಲ್ಲದಂತಾಗಿತ್ತು. ಜಿಲ್ಲೆಯ ಗದಗ ರೋಣ, ಗಜೇಂದ್ರಗಡ, ಮುಂಡರಗಿ ಪಟ್ಟಣದಲ್ಲೂ ಇದೇ ರೀತಿಯ ಪರಿಸ್ಥಿತಿ ಇತ್ತು. ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 11,081 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಬೇರೆ ಜಿಲ್ಲೆಗಳಿಂದ ಬಂದ 541 ವಿದ್ಯಾರ್ಥಿಗಳು ಹಾಗೂ ಹೊರ ರಾಜ್ಯದಿಂದ ಬಂದ ಓರ್ವ ವಿದ್ಯಾರ್ಥಿ ಪರೀಕ್ಷೆ ಬರೆಯುತ್ತಿದ್ದಾರೆ.
12
-
13
-
14
-
 
 
 
 
 
 
 
 
 
 
 
 
 
 
 
PublicTV_World/001ffbf3.txt DELETED
@@ -1,10 +0,0 @@
1
- ಬೆಳಗಾವಿ/ಚಿಕ್ಕೋಡಿ:ಮೇ 19ರಂದು ಹಸೆಮಣೆ ಏರಬೇಕಿದ್ದ ಚಿಕ್ಕೋಡಿ ಪೊಲೀಸ್ ಠಾಣೆಯ ಪೇದೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
2
-
3
- 28 ವರ್ಷದ ರಾಮ್ ನಾಯಿಕ್ ಅಪಘಾತದಲ್ಲಿ ಮೃತ ಪೇದೆ. ಇಂದು ಕೆಲಸ ಮುಗಿಸಿ ಗೋಕಾಕ್ ತಾಲೂಕಿನ ಸ್ವಗ್ರಾಮ ಪಾಮಲದಿನ್ನಿಗೆ ಬೈಕಿನಲ್ಲಿ ಹೊರಟಿದ್ದರು. ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಬಳಿಯ ಬೆಳಗಲಿ ಕ್ರಾಸ್ ನಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಾಮ್ ನಾಯಿಕ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
4
-
5
-
6
-
7
- ಮೃತ ಪೇದೆಯ ಮದುವೆ ಇದೇ ಮೇ 19ರಂದು ನಿಗದಿಯಾಗಿತ್ತು. ಸದ್ಯ ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಚಿಕ್ಕೋಡಿಯ ಸರ್ಕಾರ ಆಸ್ಪತ್ರೆಯಲ್ಲಿರಿಸಲಾಗಿದೆ. ಘಟನೆ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
8
-
9
-
10
-
 
 
 
 
 
 
 
 
 
 
 
PublicTV_World/002063a1.txt DELETED
@@ -1,18 +0,0 @@
1
- ಬೆಂಗಳೂರು:ನಟ ದುನಿಯಾ ವಿಜಯ್ ಅವರ ತಾಯಿ ಇಂದು ನಿಧನರಾಗಿದ್ದಾರೆ.
2
-
3
- ಕಳೆದ ಕೆಲವು ದಿನಗಳಿಂದ ವಿಜಯ್ ತಾಯಿ ನಾರಾಯಣಮ್ಮ ಅವರು ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದಿನ ಕಳೆಯುತ್ತಿದ್ದಂತೆಯೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ.
4
-
5
-
6
-
7
- ಈ ಕುರಿತು ಸ್ವತಃ ನಟನೇ ತನ್ನ ತಾಯಿ ಜೊತೆಗಿನ ಫೋಟೋ ಹಾಕಿ ‘ಮತ್ತೆ ಹುಟ್ಟಿ ಬಾ ಅಮ್ಮ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ನಾರಾಯಣಮ್ಮ ಅವರ  ಅಂತಿಮ ವಿಧಿವಿಧಾನ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದು,  ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.
8
-
9
- ಕೆಲ ದಿನಗಳ ಹಿಂದಷ್ಟೇ ಕೋವಿಡ್ ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಗಂಭೀರವಾಗಿದ್ದು, ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.
10
-
11
-
12
-
13
- ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನ ಆಸೆ. ದಿನಂಪ್ರತಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಆದರೆ ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ ಎಂದು ದುನಿಯಾ ವಿಜಯ್ ಈ ಹಿಂದೆ ಹೇಳಿದ್ದರು.
14
-
15
-
16
-
17
-
18
-
 
 
 
 
 
 
 
 
 
 
 
 
 
 
 
 
 
 
 
PublicTV_World/0020d6d8.txt DELETED
@@ -1,18 +0,0 @@
1
- ಕಾರವಾರ:ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಇಂದು ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಭೇಟಿ ನೀಡಿದರು. ನೌಕಾಪಡೆಯ ಮುಖ್ಯಸ್ಥ, ಅಡ್ಮಿರಲ್ ಕರಂಬೀರ್ ಸಿಂಗ್‍ರೊಂದಿಗೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್‍ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್‍ಗೆ ಆಗಮಿಸುವ ವೇಳೆ ಕದಂಬ ನೌಕಾನೆಲೆಯ ಎರಡನೇಯ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.
2
-
3
-
4
-
5
- ನೌಕಾನೆಲೆಗೆ ಆಗಮಿಸಿದ ರಕ್ಷಣಾ ಸಚಿವರನ್ನ ವೆಸ್ಟರ್ನ್ ನೇವಲ್ ಕಮಾಂಡ್, ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೈಸ್ ಅಡ್ಮಿರಲ್ ಆರ್.ಹರಿ ಕುಮಾರ್ ಮತ್ತು ಕರ್ನಾಟಕ ನೌಕಾ ಪ್ರದೇಶದ ಧ್ವಜ ಅಧಿಕಾರಿ, ರಿಯರ್ ಅಡ್ಮಿರಲ್ ಮಹೇಶ್ ಸಿಂಗ್ ಸ್ವಾಗತಿಸಿದರು. ಬಳಿಕ ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್ ರಿಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು.ಇದನ್ನೂ ಓದಿ:ಕೋವಿಡ್ ವಾರ್ಡ್‍ನಲ್ಲಿ ಆಮ್ಲಜನಕ ಸೋರಿಕೆ ತಡೆಗೆ ನೌಕಾದಳದ ತಾಂತ್ರಿಕ ತಂಡ ನಿಯೋಜನೆ
6
-
7
-
8
-
9
- ಜೊತೆಗೆ ನೌಕಾ ಜಟ್ಟಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನ ಪರಿಶೀಲಿಸಿದರು. ಬಳಿಕ ನೌಕಾನೆಲೆ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾದ ವಸತಿಗೃಹಕ್ಕೆ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದು ಅಲ್ಲಿನ ಮೂಲಭೂತ ಸೌಕರ್ಯಗಳು, ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ವೀಕ್ಷಿಸಿದರು. ಈ ವೇಳೆ ನೌಕಾನೆಲೆಯ ಎರಡನೇಯ ಹಂತದ ಕಾಮಗಾರಿಯ ಕಾಂಟ್ರ್ಯಾಕ್ಟರ್, ಎಂಜಿನಿಯರ್, ಅಧಿಕಾರಿಗಳು ಹಾಗೂ ನೌಕಾನೆಲೆ ಸಿಬ್ಬಂದಿಯೊಂದಿಗೂ ರಾಜನಾಥ್ ಸಿಂಗ್ ಮಾತುಕತೆ ನಡೆಸಿದರು.ಇದನ್ನೂ ಓದಿ:ಕದಂಬ ನೌಕಾನೆಲೆಗೆ ಸಂಸದೀಯ ಸಮಿತಿ ಸದಸ್ಯರ ಭೇಟಿ
10
-
11
- Visited Karwar Naval Base today to review the progress of ongoing infrastructure development under ‘Project Seabird’. I am confident that after the completion of this project, the Karwar Naval Base would become Asia's largest and most efficient Naval base.pic.twitter.com/8z6QcST4QM
12
-
13
- — Rajnath Singh (@rajnathsingh)June 24, 2021
14
-
15
-
16
-
17
-
18
-
 
 
 
 
 
 
 
 
 
 
 
 
 
 
 
 
 
 
 
PublicTV_World/00230bec.txt DELETED
@@ -1,18 +0,0 @@
1
- ಬೆಂಗಳೂರು:ಜಿಂದಾಲ್ ದಂಗಾಲ್‍ಗೆ ಸ್ಫೋಟಕ ಟ್ವಿಸ್ಟ್ ದೊರಕಿದ್ದು, ಜಿಂದಾಲ್ ಅಕ್ರಮದ ಬಗ್ಗೆ ಬಿಜೆಪಿಗೆ ಮಾಹಿತಿ ಕೊಟ್ಟವರಾರು ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಒಂದು ಕಾಲದ ಬಿಎಸ್‍ವೈ ಶತ್ರುವಾಗಿದ್ದ ವ್ಯಕ್ತಿಯೇ ಈಗ ಮಿತ್ರರಾಗಿದ್ದಾರೆ. ಅವರು ಕೊಟ್ಟ ಮಾಹಿತಿಯಿಂದಾಗಿಯೇ ಬಿಜೆಪಿ ಈ ಹೋರಾಟಕ್ಕೆ ನಿರ್ಧರಿಸಿದ್ದು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
2
-
3
- ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್. ಆರ್ ಹಿರೇಮಠ್ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಜಿಂದಾಲ್‍ಗೆ ಸರ್ಕಾರಿ ಭೂಮಿ ಲೀಸ್ ಸಂಬಂಧ ಚರ್ಚೆ ನಡೆದಿದೆ. ಜಿಂದಾಲ್ ಹೋರಾಟ ಶುರುವಾಗುತ್ತಿದ್ದಂತೆಯೇ ಭೇಟಿ ನೀಡಿದ್ದು, ಆರ್‍ಎಸ್‍ಎಸ್ ನಾಯಕ ಸಂತೋಷ್ ಭೇಟಿಯ ಫೋಟೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
4
-
5
-
6
-
7
- ಸಂತೋಷ್ ಭೇಟಿ ಮೂಲಕ ಜಿಂದಾಲ್ ಹೋರಾಟಕ್ಕೆ ಹಿರೇಮಠ್ ಪ್ರೇರಿಪಿಸಿದ್ರಾ ಅನ್ನೋ ಅನುಮಾನ ಮೂಡಿದೆ. ಈ ಮೊದಲು ಯಡಿಯೂರಪ್ಪ ಭೇಟಿಗೆ ಎಸ್‍ಆರ್ ಹಿರೇಮಠ್ ಅವರು ಪತ್ರ ಬರೆದಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಹಿರೇಮಠ್ ಅವರು ಆರ್‍ಎಸ್‍ಎಸ್ ನಾಯಕ ಸಂತೋಷ್ ಭೇಟಿ ಮಾಡಿದ್ದಾರೆ.
8
-
9
- ಬೇಟಿ ವೇಳೆ ಜಿಂದಾಲ್ ಅಕ್ರಮದ ಬಗ್ಗೆ ಸಂತೋಷ್ ಅವರಿಗೆ ಎಳೆಎಳೆಯಾಗಿ ಮಾಹಿತಿ ನೀಡಿದ್ದಾರೆ. ಹಿರೇಮಠ್ ಕೊಟ್ಟ ದಾಖಲೆಗಳನ್ನು ಬಿಜೆಪಿ ನಾಯಕರಿಗೆ ಸಂತೋಷ್ ತಲುಪಿಸಿದ್ದಾರೆ. ಹಿರೇಮಠ್-ಸಂತೋಷ್ ಭೇಟಿ ಬೆನ್ನಲ್ಲೇ ನಿನ್ನೆ ಆರ್‍ಎಸ್‍ಎಸ್ ಮತ್ತು ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ ಎನ್ನಲಾಗಿದೆ.
10
-
11
-
12
-
13
- ಒಟ್ಟಿನಲ್ಲಿ ಒಂದು ಕಾಲದಲ್ಲಿ ಯಡಿಯೂರಪ್ಪ ವಿರುದ್ಧ ಹೋರಾಟ ಮಾಡಿದ್ದ ಹಿರೇಮಠ್, ಇಂದು ಅವರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಅಂದು ಯಡಿಯೂರಪ್ಪ ವಿರುದ್ಧ ಸಂಗ್ರಹಿಸಿದ್ದ ದಾಖಲೆಗಳು ಇಂದು ಸಿಎಂ ವಿರುದ್ಧ ಬಳಕೆಯಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.
14
-
15
-
16
-
17
-
18
-
 
 
 
 
 
 
 
 
 
 
 
 
 
 
 
 
 
 
 
PublicTV_World/002718ac.txt DELETED
@@ -1,42 +0,0 @@
1
- ಚಾಮರಾಜನಗರ:ಅಂಬುಲೆನ್ಸ್ ಡೋರ್ ಓಪನ್ ಆಗದ ಕಾರಣ ರೋಗಿ ಹಾಗೂ ರೋಗಿಯ ಸಂಬಂಧಿಗಳು ಅರ್ಧಗಂಟೆಗೂ ಹೆಚ್ಚು ಕಾಲ ಅಂಬುಲೆನ್ಸ್ ಒಳಗೆ ಪರದಾಡಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
2
-
3
- ತೆಂಗಿನಕಾಯಿ ಸುಲಿಯುವ ವೇಳೆ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಕರಿನಂಜನಪುರದಿಂದ ರೋಗಿಯನ್ನು ಅಂಬುಲೆನ್ಸ್ ಮೂಲಕ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಅರ್ಧ ಗಂಟೆಗೂ ಹೆಚ್ಚಿನ ಕಾಲ ಅಂಬುಲೆನ್ಸ್ ಡೋರ್ ಲಾಕ್ ಆಗಿತ್ತು. ಎಷ್ಟೆ ಪ್ರಯತ್ನ ಮಾಡಿದರೂ ಡೋರ್ ಓಪನ್ ಆಗಲಿಲ್ಲ.
4
-
5
- ಅಂಬುಲೆನ್ಸ್ ಒಳಗಿದ್ದ ರೋಗಿಯ ಹೊಟ್ಟೆ ಭಾಗದಲ್ಲಿ ಗಾಯವಾಗಿದ್ದು ತೀವ್ರವಾಗಿ ರಕ್ತ ಸ್ರಾವವಾಗುತ್ತಿತ್ತು. ಹೀಗಾಗಿ ಇದನ್ನು ಕಂಡು ರೋಗಿಯ ಸಂಬಂಧಿಕರು ಹಾಗೂ ಸ್ಥಳೀಯರು ಸುಮಾರು ಅರ್ಧ ಗಂಟೆಯಷ್ಟು ಪರಿಶ್ರಮ ಪಟ್ಟು ರಾಡ್ ಹಾಗೂ ಸುತ್ತಿಗೆ ಉಪಯೋಗಿಸಿ ಅಂಬುಲೆನ್ಸ್ ಬಾಗಿಲನ್ನು ತೆರೆದು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
6
-
7
-
8
-
9
-
10
-
11
-
12
-
13
-
14
-
15
-
16
-
17
-
18
-
19
-
20
-
21
-
22
-
23
-
24
-
25
-
26
-
27
-
28
-
29
-
30
-
31
-
32
-
33
-
34
-
35
-
36
-
37
-
38
-
39
-
40
-
41
-
42
-
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
PublicTV_World/00289422.txt DELETED
@@ -1,24 +0,0 @@
1
- ಬೆಂಗಳೂರು:ಸದಾ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ರಾಜಕೀಯ ವಿಭಾಗದ ಟೀಚರ್ ಆಗಿ ವಿದ್ಯಾರ್ಥಿಗಳಿಗೆ ಪಾಠ ಮಾಡೋ ರೀತಿ ಶಾಸಕರು, ಪಕ್ಷದ ನಾಯಕರಿಗೆ ಪಾಠ ಮಾಡಿದರು.
2
-
3
- ಬಿಡದಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಾರ್ಯಾಗಾರದಲ್ಲಿ ಇಂದು ಪಕ್ಷ ಸಂಘಟನೆ ಕುರಿತು ಶಾಸಕರು ಮತ್ತು ನಾಯಕರಿಗೆ ಮನವಿ ಮಾಡಿಕೊಡಲು ಟೀಚರ್ ಆಗಿದ್ದರು. ಪವರ್ ಪಾಯಿಂಟ್ ಪ್ರೆಸಂಟೇಷನ್ ಮೂಲಕ ಪಕ್ಷದ 2023 ಚುನಾವಣೆಯ ರೋಡ್ ಮ್ಯಾಪ್ ತೆರೆದಿಟ್ಟರು.
4
-
5
-
6
-
7
- ದೇಶದಲ್ಲಿ ಪ್ರಾದೇಶಿಕ ರಾಜಕಾರಣಕ್ಕೆ ಹೆಚ್ಚು ಬಲವಿದೆ. ಅದರ ಮೂಲ ಬೇರುಗಳು ನಮ್ಮ ರಾಜ್ಯದಲ್ಲೇ ಇವೆ. ಜೆಡಿಎಸ್ ಈ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ಪೋಷಿಸಲಿದೆ ಎಂದು ಹೆಚ್‍ಡಿಕೆ ಎಲ್ಲಾ ಮುಖಂಡರಿಗೆ ಉದಾಹರಣೆಗಳ ಮುಖೇನ ವಿವರಿಸಿದರು. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಸಂಸ್ಕೃತಿ ಇರೋದಿಲ್ಲ. ಕನ್ನಡಿಗರ ಕೈಯ್ಯಲ್ಲಿಯೇ ಅಧಿಕಾರ ಇರುತ್ತದೆ. ಪ್ರತಿಯೊಂದಕ್ಕೂ ದೆಹಲಿ ಕಡೆ ನೋಡಬೇಕಾಗಿಲ್ಲ. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಐತಿಹಾಸಿಕ ನಿರ್ಧಾರಗಳನ್ನು ಹೈಕಮಾಂಡ್ ಹಂಗಿಲ್ಲದೆ ತೆಗೆದುಕೊಳ್ಳಬಹುದು ಅಂತ ತಿಳಿಸಿದರು.ಇದನ್ನೂ ಓದಿ:2023ರ ವಿಧಾನಸಭಾ ಚುನಾವಣೆ, ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: ಹೆಚ್‍ಡಿಕೆ
8
-
9
-
10
-
11
- ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡೋಣ. ಕಾಲಮಿತಿಯಲ್ಲಿ ಅವುಗಳ ಪರಿಹಾರಕ್ಕೆ ಭರವಸೆ ಕೊಡೋಣ. ನೀರಾವರಿ ಯೋಜನೆಗಳು ಮತ್ತು ರೈತ ಪರ ಯೋಜನೆಗಳು ನಮ್ಮ ಪಕ್ಷದ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ಜನರ ಬಳಿಗೆ ಹೋಗಬೇಕು. ಪಕ್ಷದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು. ರಾಜ್ಯದ ಐದು ನೀರಾವರಿ ಯೋಜನೆಗಳಿಗೆ ಜೀವ ತುಂಬುವುದು ನಮ್ಮ ಮಹತ್ವದ ನಿಲುವು. ಮೇಕೆದಾಟು, ಯುಕೆಪಿ, ಮಹದಾಯಿ, ಎತ್ತಿನಹೊಳೆ ಯೋಜನೆಗಳ ಕ್ಷಿಪ್ರ ಕಾರ್ಯಗತದ ಭರವಸೆಯೊಂದಿಗೆ ಮುಂದಕ್ಕೆ ಹೋಗೋಣ ಅಂತ ತಿಳಿಸಿದರು.ಇದನ್ನೂ ಓದಿ:ದತ್ತಪೀಠಕ್ಕೆ ಮೌಲ್ವಿ ನೇಮಕ ರದ್ದು
12
-
13
-
14
-
15
- ಎತ್ತಿನಹೊಳೆ ಹೆಸರು ಹೇಳಿಕೊಂಡು ಮೊದಲು 8000 ಕೋಟಿ ರೂ. DPR ಮಾಡಲಾಯಿತು. ಆಮೇಲೆ 13000 ಕೋಟಿಗೆ ಮರು DPR ಮಾಡಲಾಯಿತು. ಈಗ ಪುನಾ 24000 ಕೋಟಿ ರೂ.ಗಳಿಗೆ ಆPಖ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಜೆಡಿಎಸ್ ವಿಷನ್- ಮಿಷನ್ 2023 ಪ್ರಸ್ತುತ ಪಡಿಸಿದ ಕುಮಾರಸ್ವಾಮಿ,2023 ಕ್ಕೆ ಸ್ವಂತ ಬಲದಲ್ಲಿ 123 ಸೀಟು ಪಡೆಯುವುದು ಪಕ್ಷದ ದೊಡ್ಡ ಗುರಿ. ಈ ನಿಟ್ಟಿನಲ್ಲಿ ಪಂಚರತ್ನ ಯೋಜನೆ ಜಾರಿ ಮಾಡೋದು ನಮ್ಮ ಗುರಿ. (ಆರೋಗ್ಯ, ಶಿಕ್ಷಣ, ಕೃಷಿ, ವಸತಿ, ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಯೋಜನೆ). ಈ ಮೂಲಕ ರಾಜ್ಯದ ಆಮೂಲಾಗ್ರ ಅಭಿವೃದ್ಧಿಗೆ ಕಾಣಿಕೆ ನೀಡುವುದು ಪಕ್ಷದ ಉದ್ದೇಶವಾಗಿದೆ. ತಳ ಮಟ್ಟದಿಂದ ಅಭಿವೃದ್ಧಿ ಸಾಧನೆ ಮಾಡುವುದು ನಮ್ಮ ಪರಿಕಲ್ಪನೆ ಆಗಿದ್ದು, ಅದಕ��ಕೆ ಬೇಕಾದ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಅಂತ ತಿಳಿಸಿದರು.
16
-
17
-
18
-
19
- ಜೆಡಿಎಸ್ ಸದಸ್ಯರ ನಿಧಿ ಸ್ಥಾಪನೆ ಮಾಡುವ ಮೂಲಕ ಪ್ರಾಮಾಣಿಕ ಕಾರ್ಯಕರ್ತರ ರಕ್ಷಣೆಗೆ ನಿಲ್ಲುವುದು ನಮ್ಮ ನಿಲುವು. ಪಕ್ಷದ ಸದಸ್ಯತ್ವ ನೋಂದಣಿಯಿಂದ ಬಂದ ಹಣದಿಂದ ಕಾರ್ಯಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಆರೋಗ್ಯ ಸಮಸ್ಯೆಗೆ ಹಣ ನೀಡುವುದು. ಕಾರ್ಯಕರ್ತರು ಮೃತರಾದಾಗ ಈ ನಿಧಿಯಿಂದ ಪರಿಹಾರ ನೀಡಲಾಗುತ್ತೆ ಅಂತ ತಿಳಿಸಿದರು.
20
-
21
- Advertisement
22
-
23
-
24
-
 
 
 
 
 
 
 
 
 
 
 
 
 
 
 
 
 
 
 
 
 
 
 
 
 
PublicTV_World/002b8697.txt DELETED
@@ -1,16 +0,0 @@
1
- ಹಾಸನ:ಜೋರು ಮಳೆಗಾಲ ಸಂದರ್ಭದಲ್ಲಿ ಯಾವುದೇ ಆಟ ಅಥವಾ ಸ್ಪರ್ಧೆ ನಡೆಯೋದು ಕಡಿಮೆ. ಆದರೆ ಹಾಸನದಲ್ಲಿ ಅದೇ ಮಳೆಯ ನಡುವೆ ರಾಜ್ಯಮಟ್ಟದ ಬೈಕ್ ರೇಸ್ ಸ್ಪರ್ಧೆ ನಡೆದಿದ್ದು, ಅಪಾರ ಮಂದಿಯ ಎದೆಯಲ್ಲಿ ಚಳಿ ಬದಲಿಗೆ ಬಿಸಿ ಹೆಚ್ಚಿಸಿತು.
2
-
3
- ಹಾಸನದ ಅಂಬೇಡ್ಕರ್ ಯುವ ಬ್ರಿಗೇಡ್ ಹಾಗೂ ಬಿ.ಝಡ್ ಸಂಘಟನೆ ಆಶ್ರಯದಲ್ಲಿ ಶನಿವಾರ ಕಾರ್ ರೇಸ್ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮುಂದುವರಿದು ಭಾನುವಾರ ಆಯೋಜನೆ ಮಾಡಿದ್ದ ರಾಜ್ಯಮಟ್ಟದ ಬೈಕ್ ರೇಸ್ ಸ್ಪರ್ಧೆ ನಿಜಕ್ಕೂ ಅದ್ಭುತವಾಗಿತ್ತು.
4
-
5
- ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ನೂರಾರು ಮಂದಿ ರೇಡರ್ ಗಳು ಬಂದಿದ್ದರು. ಭಾನುವಾರದ ರಜೆ ಮೂಡ್‍ನಲ್ಲಿ ಬಂದಿದ್ದ ಸಾವಿರಾರು ಮಂದಿ ರೇಡರ್ ಗಳ ಸಾಹಸಮಯ ಪ್ರದರ್ಶನ ನೋಡಿ ಎಂಜಾಯ್ ಮಾಡಿದ್ದಾರೆ. ಬೈಕ್ ರೇಡರ್ ಗಳ ಸ್ಪೀಡ್ ಮತ್ತು ಬ್ಯಾಲೆನ್ಸ್ ನಿಂದ ನೋಡುಗರನ್ನು ರೋಮಾಂಚನಗೊಳಿಸಿತ್ತು. ಒಬ್ಬರನ್ನು ಹಿಂದಿಕ್ಕಿ ಮತ್ತೊಬ್ಬರು ಗೆಲ್ಲಲು ನಡೆಸಿದ ಪೈಪೋಟಿ ಕ್ರೀಡಾಸಕ್ತರಿಗೆ ಹೊಸದೊಂದು ಥ್ರಿಲ್ ನೀಡಿತು. ಯುವಕರು ಮಾತ್ರವಲ್ಲದೇ ಸ್ಪರ್ಧೆ ನೋಡಲು ಆಗಮಿಸಿದ್ದ ಹಳ್ಳಿ ಜನರು ಸಖತ್ ಎಂಜಾಯ್ ಮಾಡಿದರು ಎಂದು ಪ್ರೇಕ್ಷಕರು ಹೇಳಿದ್ದಾರೆ.
6
-
7
-
8
-
9
- ವಿವಿಧೆಡೆಗಳಿಂದ ಆಗಮಿಸಿದ್ದ ರೈಡರ್ ಗಳು, ಅಂಕು-ಡೊಂಕಾದ ತಿರುವಿನ ತೇವವಾದ ಮಣ್ಣ ದಾರಿಯಲ್ಲಿ ಕೆಸರು ಹಾರಿಸುತ್ತ ಚಂಗನೆ ಹಾರಿದಂತೆ, ಬಳುಕಾಡುತ್ತಾ ಮಿಂಚಿನ ವೇಗದಲ್ಲಿ ಸಾಗಿದ ದೃಶ್ಯ ಅಬ್ಬಾಬ್ಬಾ ಎನಿಸಿತು. ಗೆದ್ದವರು ಸಖತ್ ಖುಷಿಯಿಂದ ಬೀಗಿದರು. ಈಗಾಗಲೇ ನಡೆದಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಕ್ಕೆ ಕೊರಳೊಡ್ಡಿದ್ದವರು, ತಮ್ಮ ಬಹುಮಾನಗಳ ಪಟ್ಟಿಯನ್ನು ಹಿಗ್ಗಿಸಿಕೊಂಡು ಸಂಭ್ರಮಿಸಿದರು. ಮಳೆಯಿಂದ ಟ್ರ್ಯಾಕ್ ತುಸು ಕ್ಲಿಷ್ಟಕರವಾಗಿದ್ದರೂ, ಸಾಹಸ ಪಟ್ಟು ರೈಡರ್ ಗಳು ಗುರಿಮುಟ್ಟಿ ಸಂತಸಪಟ್ಟರು.
10
-
11
- ಬೆಂಗಳೂರಿನ ಸೊಹೇಲ್ ಅಹಮದ್ 4 ಸ್ಟ್ರೋಕ್ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದು ಗಮನ ಸೆಳೆದಿದ್ದಾರೆ. ಸ್ಪರ್ಧೆ ಕಣ್ತುಂಬಿಕೊಳ್ಳಲು ಆಗಮಿಸಿದ್ದ ಮಹಿಳೆಯರು, ಮಕ್ಕಳು ಹಾಗೂ ಕ್ರೀಡಾ ಪ್ರೇಮಿಗಳು ಬೈಕ್ ಸವಾರರ ಮಿಂಚಿನ ಸಂಚಾರಕ್ಕೆ ಮಾರು ಹೋಗಿದ್ದು, ಕೆಲವರು ತಮ್ಮ ತಮ್ಮ ನೆಚ್ಚಿನ ರೈಡರ್ಸ್ ಗಳನ್ನು ಹುರಿದುಂಬಿಸಿ ತಾವೂ ಖುಷಿಪಟ್ಟರು.
12
-
13
- Advertisement
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/002ec927.txt DELETED
@@ -1,22 +0,0 @@
1
- ಬೆಂಗಳೂರು:ಮಾಜಿ ಸಚಿವರ ರಾಸಲೀಲೆ ವೀಡಿಯೋದಲ್ಲಿರುವ ಎನ್ನಲಾಗಿರುವ ಯುವತಿ ಮತ್ತೊಂದು ವೀಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ಸಂಜೆ ಲೀಕ್ ಆಗಿದ್ದ ಆಡಿಯೋ ಕ್ಲಿಪ್ ತಮ್ಮದೇ ಎಂದು ಒಪ್ಪಿಕೊಂಡಿರುವ ಯುವತಿ, ಸಹಾಯ ಕೇಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ಹೋಗಿದ್ದು ನಿಜ ಎಂದಿದ್ದಾರೆ.
2
-
3
-
4
-
5
- ಮಾರ್ಚ್ 2ರಂದು ನನ್ನ ಸಿಡಿ ರಿಲೀಸ್ ಆದಾಗ ಭಯ ಆಗಿತ್ತು. ಮಾಧ್ಯಮಗಳಲ್ಲಿ ಸುದ್ದಿ ನೋಡಿ ಆತಂಕವಾಗಿತ್ತು. ಮಾಧ್ಯಮಗಳಲ್ಲಿ ನನಗೆ ನರೇಶ್ ಒಬ್ಬರೇ ಪರಿಚಯ. ಹಾಗಾಗಿ ನರೇಶಣ್ಣನಿಗೆ ಫೋನ್ ಮಾಡಿ ಸಹಾಯ ಕೇಳಿದೆ. ಅದಕ್ಕೆ ನರೇಶ್ ಇದು ದೊಡ್ಡ ಪ್ರಕರಣ. ಇದಕ್ಕೆ ರಾಜಕೀಯ ಮುಖಂಡರ ಸಹಾಯ ಬೇಕಾಗುತ್ತೆ. ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯರನ್ನ ಸಂಪರ್ಕಿಸಿ ಸಹಾಯ ಕೇಳೋಣ ಎಂದು ನರೇಶ್ ಹೇಳಿದ್ರು.
6
-
7
-
8
-
9
- ನಾನಿರುವ ಸ್ಥಳಕ್ಕೆ ಬಂದ ನರೇಶ್ ನನ್ನನ್ನು ಪಿಕ್ ಮಾಡಿದರು. ಡಿ.ಕೆ.ಶಿವಕುಮಾರ್ ಮನೆ ಬಳಿ ಬಂದಾಗ ನನ್ನ ಕುಟುಂಬಸ್ಥರು ಪದೇ ಪದೇ ಫೋನ್ ಮಾಡುತ್ತಿದ್ದರು. ಅಮ್ಮ ಅಳುತ್ತಿದ್ದಾಗ ಸಮಾಧಾನ ಮಾಡೋಕೆ ಮುಂದಾದೆ. ಅವರು ಅಳೋದು ನೋಡಿ ನಾನು ಏನು ಮಾಡಿಲ್ಲ. ಕುಟುಂಬಸ್ಥರ ಆತಂಕ ನೋಡಿ ಭಯ ಆಗಿದ್ದರಿಂದ ಅವರ ಸಮಾಧಾನಕ್ಕೆ ಮುಂದಾಗಿ, ಡಿ.ಕೆ.ಶಿವಕುಮಾರ್ ಮನೆ ಬಳಿ ಬಂದಿದ್ದೇನೆ. ಅವರನ್ನ ಭೇಟಿಯಾಗಿ ಎಲ್ಲ ಹೇಳುತ್ತೇನೆ ಎಂದು ಹೇಳಿದೆ. ಆದ್ರೆ ನಮಗೆ ಡಿ.ಕೆ.ಶಿವಕುಮಾರ್ ಸಿಗದ ಕಾರಣ ವಾಪಸ್ ಅಲ್ಲಿಂದ ಹೊರಡಬೇಕಾಯ್ತು.ಇದನ್ನೂ ಓದಿ:ಸರ್ಕಾರವನ್ನೇ ಬೀಳಿಸಿದ್ದೀನಿ ಇದೇನು ಮಹಾ – ರಮೇಶ್ ಜಾರಕಿಹೊಳಿ
10
-
11
-
12
-
13
- ನಮ್ಮ ಅಪ್ಪ-ಅಮ್ಮ ಎಲ್ಲಿದ್ದಾರೆ ಅನ್ನೋದು ನನಗೆ ಗೊತ್ತಾಗುತ್ತಿಲ್ಲ. ಎಸ್‍ಐಟಿ ರಕ್ಷಣೆ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದ್ರೆ ಅವರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಅಪ್ಪ-ಅಮ್ಮ, ಅಜ್ಜಿ ಹಾಗೂ ತಮ್ಮಂದಿರನ್ನ ಬೆಂಗಳೂರಿಗೆ ಕರೆದುಕೊಂಡು ಬನ್ನಿ. ನನ್ನನ್ನು ಯಾರು ಅಪಹರಿಸಿಲ್ಲ, ಸುರಕ್ಷಿತವಾಗಿದ್ದೇನೆ. ಕಳೆದ 24 ದಿನಗಳಿಂದ ಏನು ಮಾಡಬೇಕು ಅನ್ನೋದು ಗೊತ್ತಾಗುತ್ತಿಲ್ಲ. ಎಸ್‍ಐಟಿ ತನಿಖೆಯಿಂದ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇದೆ.ಇದನ್ನೂ ಓದಿ:ನಾನು ಡಿ.ಕೆ.ಶಿವಕುಮಾರ್ ಮನೆ ಬಳಿಯೇ ಇದ್ದೇನೆ, ಯಾವುದೇ ಕಾರಣಕ್ಕೂ ಹೆದರಬೇಡಿ- ಯುವತಿಯ ಫೋನ್‌ ಕಾಲ್‌ ಲೀಕ್‌
14
-
15
-
16
-
17
- ಒಂದು ದಿನದಲ್ಲಿ ಸರ್ಕಾರ ಬೀಳಿಸಿಬಲ್ಲೆ. ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ. ಅವರನ್ನ ಜೈಲಿಗೆ ಹಾಕಿಸುತ್ತೇನೆ ಎಂದು ಬಹಿರಂಗವಾಗಿಯೇ ಬೆದರಿಕೆ ಹಾಕುತ್ತಾರೆ. ಎಷ್ಟೇ ಹಣ ಖರ್ಚಾಗಲಿ ಅಂದ್ರೆ ಏನರ್ಥ ಅನ್ನೋದನ ಜನರು ಅರ್ಥ ಮಾಡಿಕೊಳ್ಳಬೇಕು. ನಾಳೆ ನನ್ನನ್ನೇ ಕೊಲ್ಲಬಹುದು ಅಥವಾ ಅಪ್ಪ-ಅಮ್ಮನ ಜೀವಕ್ಕೆ ಅಪಾಯ ಉಂಟು ಮಾಡಬಹುದು. ದಯವಿಟ್ಟು ಅಪ್ಪ-ಅಮ್ಮನ ಬೆಂಗಳೂರಿಗೆ ಕರೆ ತಂದು ರಕ್ಷಣೆ ಕೊಡಿ ಎಂದು ಯುವತಿ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ:ಡಿ.ಕೆ.ಶಿವಕುಮಾರ್ ಒಳ್ಳೆಯವರು, ರಾಜೀನಾಮೆ ನ��ಡಬಾರದು: ರಮೇಶ್ ಜಾರಕಿಹೊಳಿ
18
-
19
-
20
-
21
-
22
-
 
 
 
 
 
 
 
 
 
 
 
 
 
 
 
 
 
 
 
 
 
 
 
PublicTV_World/00319a11.txt DELETED
@@ -1,16 +0,0 @@
1
- ನಿನ್ನೆಯಷ್ಟೇ ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಆಸ್ಪತ್ರೆಗೆ ದಾಖಲಾಗಿದ್ದರು. ಇದ್ದಕ್ಕಿದ್ದಂತೆಯೇ ಅಜಿತ್ ಪ್ರತಿಷ್ಠಿತ ಆಸ್ಪತ್ರೆಗೆ ಸೇರಿರುವುದು ನಾನಾ ಊಹಾಪೋಹಗಳನ್ನು ಸೃಷ್ಟಿ ಮಾಡಿತ್ತು. ನಟ ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಹೇಳಲಾಗಿತ್ತು. ಈ ಎಲ್ಲದಕ್ಕೂ ಅಜಿತ್ ಮ್ಯಾನೇಜರ್ ಸುರೇಶ್ ಚಂದ್ರ ಸ್ಪಷ್ಟನೆ ನೀಡಿದ್ದಾರೆ. ಅವರು ಸಣ್ಣದೊಂದು ಶಸ್ತ್ರ ಚಿಕಿತ್ಸೆ (Surgery) ಮಾಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
2
-
3
-
4
-
5
- ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಅಜಿತ್ ಆಸ್ಪತ್ರೆಗೆ (Hospital) ಭೇಟಿ ನೀಡಿದ್ದರು. ಈ ವೇಳೆ ಅವರ ಕಿವಿಯ ಕೆಳಗೆ ಸಣ್ಣದಾಗಿ ಊತ ಕಾಣಿಸಿಕೊಂಡಿರುವುದು ಗಮನಕ್ಕೆ ಬಂತು. ವೈದ್ಯರ ಸಲಹೆ ಮೇರೆಗೆ ಅದಕ್ಕೆ ಚಿಕಿತ್ಸೆ ನೀಡಲಾಯಿತು. ಅರ್ಧ ಗಂಟೆಯಲ್ಲಿ ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಸಾಮಾನ್ಯ ವಾರ್ಡ್ ನಲ್ಲಿ ಸದ್ಯ ಅವರು ಇದ್ದಾರೆ. ಯಾವುದೇ ಅಪಾಯವಿಲ್ಲ ಎಂದಿದ್ದಾರೆ ಮ್ಯಾನೇಜರ್.
6
-
7
-
8
-
9
- ಮೆದುಳಿನ ಗಡ್ಡೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎನ್ನುವುದು ಶುದ್ಧ ಸುಳ್ಳು. ಅಂಥದ್ದೇನೂ ಅವರಿಗೆ ಆಗಿಲ್ಲ. ಮೂರು ತಿಂಗಳ ವಿಶ್ರಾಂತಿ ಬೇಕು ಎನ್ನುವ ವದಂತಿಯನ್ನೂ ಮ್ಯಾನೇಜರ್ ತಳ್ಳಿ ಹಾಕಿದ್ದಾರೆ. ಆದಷ್ಟು ಬೇಗ ಅಜಿತ್ ಶೂಟಿಂಗ್ ನಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಸ್ಪಷ್ಟ ಪಡಿಸಿದ್ದಾರೆ. ಅತೀ ಶೀಘ್ರದಲ್ಲೇ ಡಿಸ್ಚಾರ್ಜ್ ಕೂಡ ಆಗಲಿದ್ದಾರೆ ಎಂದಿದ್ದಾರೆ.
10
-
11
-
12
-
13
- ನಿನ್ನ ಅಜಿತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಸಾಕಷ್ಟು ವದಂತಿಗಳು ಹರಡಿದ್ದವು. ಹಾಗಾಗಿ ಅಭಿಮಾನಿಗಳು ಸಹಜವಾಗಿ ಆತಂಕಕ್ಕೆ ಒಳಗಾಗಿದ್ದರು. ಯಾವುದೇ ಕಾರಣಕ್ಕೂ ಆತಂಕ ಪಡುವಂಥದ್ದು ಏನು ಆಗಿಲ್ಲ ಅಂದಿದ್ದಾರೆ ಸುರೇಶ್ ಚಂದ್ರ.
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/00335b73.txt DELETED
@@ -1,16 +0,0 @@
1
- ಸ್ಯಾಂಡಲ್‌ವುಡ್ ನಟ ದಿಗಂತ್ ಮಂಚಾಲೆ ಸ್ಪೈನಲ್ ಮೈನರ್ ಇಂಜುರಿ ಆಗಿದೆ ಎಂದು ದಿಗಂತ್ ತಂದೆ ತಂದೆ ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ. ಇದೀಗ ದಿಗಂತ್ ಆರೋಗ್ಯ ಸ್ಥಿತಿಯ ಕುರಿತು ಮಾಧ್ಯಮಕ್ಕೆ ದಿಗಂತ್ ತಂದೆ ಪ್ರತಿಕ್ರಿಯೆ ನೀಡಿದ್ದಾರೆ.
2
-
3
-
4
-
5
- ನಟ ದಿಗಂತ್ ತಮ್ಮ ಕುಟುಂಬ ಸಮೇತ ಗೋವಾ ಪ್ರವಾಸದಲ್ಲಿದ್ದರು. ಅಂತೆಯೇ ಬೀಚ್‌ನಲ್ಲಿ ಸ್ಟಂಟ್ ಮಾಡಲು ಹೋಗಿ ಕುತ್ತಿಗೆಗೆ ಏಟು ಮಾಡಿಕೊಂಡಿದ್ದಾರೆ. ಕೂಡಲೇ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡಿರುವ ನಟನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ. ಸದ್ಯ ನಟ ಚಿಕಿತ್ಸೆ ಪಡೆಯುತ್ತಿರುವುದರ ಬಗ್ಗೆ ದಿಗಂತ್ ತಂದೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.‌ಇದನ್ನೂ ಓದಿ:ದಿಗಂತ್‌ಗೆ ಆಗಿರೋದು ಸಣ್ಣ ಗಾಯ, ಗಾಬರಿಪಡುವ ಅಗತ್ಯವಿಲ್ಲ: ಯೋಗರಾಜ್ ಭಟ್
6
-
7
-
8
-
9
- ಡಾಕ್ಟರ್ ಹೇಳಿದ್ದಾರೆ ಏನೂ ಆಗಲ್ಲ ಅಂತ. ಒಂದೆರಡು ದಿನಗಳಲ್ಲಿ ಎದ್ದು ಓಡಾಡ್ತಾನೆ ಅಂತ ಹೇಳಿದ್ದಾರೆ. ಇನ್ಸಿಡೆಂಟ್ ಬಗ್ಗೆ ನಾನು ನೋಡಿಲ್ಲ. ಓಡಾಡುವಾಗ ಬೀಳೋದು ಸಹಜ. ಇದೀಗ ಚೆನ್ನಾಗಿ ಮಾತನಾಡ್ತಿದ್ದಾನೆ. ದಿಗಂತ್‌ನನ್ನು ಆಪರೇಷನ್ ಕರೆದುಕೊಂಡು ಹೋಗಿದ್ದಾರೆ. ಮೈನರ್ ಇಂಜುರಿ ಆಗಿರೋದ್ರಿಂದ ಈಗಲೇ ಆಪರೇಷನ್ ಮಾಡ್ತೀವಿ ಅಂತ ಕರೆದುಕೊಂಡು ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಸಮಸ್ಯೆ ಆಗಬಾರದು ಅಂತ ಈಗಲೇ ಆಪರೇಷನ್ ಮಾಡಲಿದ್ದಾರೆ. ಇನ್ನು ಡಾ.ವಿಧ್ಯಾದರ್ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ 3 ಗಂಟೆಗಳ ಕಾಲ ನಡೆಯಲಿದೆ ಅಂತಾ ದಿಗಂತ್ ತಂದೆ ಶ್ರೀ ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ.
10
-
11
-
12
-
13
-
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/00337c87.txt DELETED
@@ -1,14 +0,0 @@
1
- ಮಂಗಳೂರು:ಮೋದಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತಿದರೆ ಪೊಲೀಸ್ ಕೇಸ್ ಹಾಕಿ ಹೆದರಿಸುವ ಪರಿಪಾಠ ಹೆಚ್ಚುತ್ತಿದ್ದು, ಇಂತಹ ಕೇಸ್ ಗಳಿಗೆ ಹೆದರಿ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದರು.
2
-
3
- ರೈತ ಹೋರಾಟ ಬೆಂಬಲಿಸಿ ಸಿದ್ಧಪಡಿಸಿದ್ದ ಟೂಲ್ ಕಿಟ್ ಎಡಿಟ್ ಮಾಡಿದ್ದಾಳೆ ಎಂದು ಆರೋಪಿಸಿ ದೆಹಲಿ ಪೊಲೀಸರು ಬಂಧಿಸಿದ ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನವನ್ನು ಖಂಡಿಸಿ ಡಿವೈಎಫ್‍ಐ ಹಾಗೂ ಎಸ್.ಎಫ್.ಐ ಸಂಘಟನೆಗಳು ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸರ್ವಾಧಿಕಾರಿ ನೀತಿಯನ್ನು ಅನುಸರಿಸುತ್ತಿದೆ. ಕನ್ಹಯ್ಯ ಕುಮಾರ್ ನಿಂದ ಹಿಡಿದು ದಿಶಾ ರವಿವರೆಗೆ ಈ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿ ಅನೇಕ ಬುದ್ಧಿಜೀವಿಗಳು, ವಿದ್ಯಾರ್ಥಿಗಳು, ವಿದ್ವಾಂಸರನ್ನು ಜೈಲಿಗಟ್ಟಿದೆ. ಸರ್ಕಾರದ ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಎಡಪಂಥೀಯ ಸಂಘಟನೆಗಳ ಕಾರ್ಯಕರ್ತರಾದ ನಾವುಗಳು ಬೀದಿಗಿಳಿದು ಹೋರಾಡಿ ದೇಶದ ಸಂವಿಧಾವನ್ನು ರಕ್ಷಿಸಲಿದ್ದೇವೆ ಎಂದರು.
4
-
5
-
6
-
7
- ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್‍ಐ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆಸಿ ರೋಡ್, ರಾಜ್ಯ ಗೃಹ ಇಲಾಖೆಯ ಅಥವಾ ಸ್ಥಳೀಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರದೇ ಒಕ್ಕೂಟ ವ್ಯವಸ್ಥೆಯ ಎಲ್ಲಾ ಪದ್ಧತಿಗಳಿಗೆ ತಿಲಾಂಜಲಿ ನೀಡಿ ಪರಿಸರ ಹೋರಾಗಾರ್ತಿ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಇದೊಂದು ರಾಜ್ಯದ ಪೊಲೀಸ್ ಇಲಾಖೆಗೆ ಅವಮಾನವಾಗಿದ್ದು ಇದರ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡಬೇಕಿದ್ದ ಗೃಹ ಸಚಿವರು ಸರ್ವಾಧಿಕಾರಿ ಮೋದಿಯ ಮುಂದೆ ಮೂಗನಂತಾಗಿದ್ದಾರೆ. ಸರ್ಕಾರ ಕೂಡಲೇ ದಿಶಾ ರವಿಯನ್ನು ಬಿಡುಗಡೆ ಮಾಡಬೇಕು ಮತ್ತು ದೇಶ ವಿರೋಧಿ ಕೃಷಿ ಕಾಯ್ದೆಯನ್ನು ವಾಪಸ್ ಪಡೆದು ದೇಶದ ರೈತರ ಹಿತಕಾಯಲು ಮುಂದಾಗಬೇಕೆಂದು ಅವರು ಒತ್ತಾಯಿಸಿದರು.
8
-
9
- ಪ್ರತಿಭಟನೆಯಲ್ಲಿ ಡಿವೈಎಫ್‍ಐ ಮಂಗಳೂರು ನಗರ ಅಧ್ಯಕ್ಷ ನವೀನ್ ಕೊಂಚಾಡಿ, ಜಿಲ್ಲಾ ನಾಯಕ ನೌಷಾದ್ ಬೆಂಗ್ರೆ, ಸುನಿಲ್ ತೇವುಲ, ವರಪ್ರಸಾದ್ ಬಜಾಲ್, ಮಹಿಳಾ ಹೋರಾಟಗಾರ್ತಿ ಪ್ರಮೀಳಾ ದೇವಾಡಿಗ, ಅಸುಂತಾ ಡಿಸೋಜಾ, ಎಸ್.ಎಫ್.ಐ ನ ವಿನೀತ್ ದೇವಾಡಿಗ, ಸಿನಾನ್ ಬೆಂಗ್ರೆ, ತಿಲಕ್ ಕುತ್ತಾರ್ , ಸಾಮಾಜಿಕ ಕಾರ್ಯಕರ್ತ ಆಲ್ವಿನ್ ಮೊದಲಾದವರು ಭಾಗವಹಿಸಿದ್ದರು.
10
-
11
- Advertisement
12
-
13
-
14
-
 
 
 
 
 
 
 
 
 
 
 
 
 
 
 
PublicTV_World/0034d360.txt DELETED
@@ -1,22 +0,0 @@
1
- ಬೆಂಗಳೂರು:ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಹದಿನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
2
-
3
- ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ವಸಂತ ನಗರದ ವರ್ಚುವಲ್ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಪ್ರಕರಣದ ಗಂಭೀರತೆ, ಆರೋಪಿಗಳಿಂದ ಇನ್ನೂ ಸಾಕಷ್ಟು ಮಾಹಿತಿ ಕಲೆಹಾಕುವ ದೃಷ್ಟಿಯಿಂದ ಮೂವರನ್ನು ಹದಿನಾಲ್ಕು ದಿನಗಳ ಕಾಲ ಕಸ್ಟಡಿಗೆ ನೀಡಿ ಹತ್ತನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
4
-
5
-
6
-
7
- ಇದೇ ವೇಳೆ ಮತ್ತೋರ್ವ ಆರೋಪಿ ಕೊರೊನಾ ಪಾಸಿಟಿವ್ ಆಗಿದೆ ಅಂತಾ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದ. ಹಾಗಾಗಿ ಆ ಆರೋಪಿಗೆ ಠಾಣೆಯಲ್ಲೇ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
8
-
9
- ಇದೇ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡುವ ವೇಳೆ ಪ್ರಮುಖ ಇಬ್ಬರು ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಕಾಲಿಗೆ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದಾರೆ. ಸದ್ಯ ಯುವತಿ ಮೇಲೆ ಗ್ಯಾಂಗ್‍ರೇಪ್ ಸಂಬಂಧ ಇಬ್ಬರು ಮಹಿಳೆಯರು ಸೇರಿ ಆರು ಜನರನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ನಂತರ ಯುವತಿ ಕೇರಳದ ಸಂಬಂಧಿಕರ ಮನೆಯಲ್ಲಿ ವಾಸವಿರುವ ಮಾಹಿತಿ ಲಭ್ಯವಾಗಿದೆ. ಪೊಲೀಸರ ತಂಡ ಸಂತ್ರಸ್ತ ಯುವತಿಯ ಬಳಿ ಹೇಳಿಕೆ ಪಡೆಯಲು ಮುಂದಾಗಿದೆ.
10
-
11
-
12
-
13
- ಏನಿದು ಪ್ರಕರಣ?ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟೆಲ್ ಇರಿಸಿ ಕಾಮುಕರು ವಿಕೃತಿ ಮರೆದಿದ್ದಾರೆ. ವೀಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ವರು ಕಾಮುಕರಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ.ಇದನ್ನೂ ಓದಿ:ಬೆಂಗಳೂರು ಅತ್ಯಾಚಾರ ಪ್ರಕರಣ- ಕಾಮುಕರ ಕಾಲಿಗೆ ಗುಂಡು ಹೊಡೆದ ಪೊಲೀಸರು
14
-
15
- ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಬಂಧಿತ ಆರೋಪಿಗಳು. ಆರೋಪಿಗಳು ಬಾಂಗ್ಲಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಸಂತ್ರಸ್ಥೆ ಸೇರಿದಂತೆ ಆರೋಪಿಗಳು ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ನಲ್ಲಿ ವಾಸವಾಗಿದ್ದರು. ಯುವತಿಯನ್ನು ಅತ್ಯಾಚಾರಗೈದು, ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಯನ್ನು ಕಿರಾತಕರು ವೀಡಿಯೋ ಮಾಡಿದ್ದಾರೆ. ಯುವತಿಯ ಮೇಲೆ ದ್ವೇಷಕ್ಕಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
16
-
17
-
18
-
19
- ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ಅತ್ಯಾಚಾರದ ವೀಡಿಯೋ ವೈರಲ್ ಆಗಿತ್ತು. ಅಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಅಸ್ಸಾಂ ರಾಜ್ಯದ ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ವೀಡಿಯೋದಲ್ಲಿ ಬಾಂಗ್ಲಾ ಪ್ರಜೆಗಳು ಭಾಗಿಯಾಗಿದ್ದರಿಂದ ಅಲ್ಲಿನ ಪೊಲೀಸರಿಗೂ ಮಾಹಿತಿ ರವಾನಿಸಲಾಗಿತ್ತು. ಆ ಬಳಿಕ ಬಾಂಗ್ಲಾ ಪೊಲೀಸರು ಸಂತ್ರಸ್ತೆಯ ಕುಟುಂಬಸ್ಥರನ್ನ ಪತ್ತೆ ಮಾಡ���ದ್ದಾರೆ. ಆ ನಂತರ ಘಟನೆ ಬೆಂಗಳೂರಿನಲ್ಲಿ ನಡೆದಿರೋದು ಬಗ್ಗೆ ತಿಳಿದು ಬಂದಿದೆ.ಇದನ್ನೂ ಓದಿ:ಬೆಂಗ್ಳೂರಿನಲ್ಲೊಂದು ನಿರ್ಭಯಾ ಪ್ರಕರಣ – ಅತ್ಯಾಚಾರಗೈದು ಗುಪ್ತಾಂಗಕ್ಕೆ ಬಾಟಲ್ ಇರಿಸಿ ವಿಕೃತಿ!
20
-
21
-
22
-
 
 
 
 
 
 
 
 
 
 
 
 
 
 
 
 
 
 
 
 
 
 
 
PublicTV_World/003d44b6.txt DELETED
@@ -1,16 +0,0 @@
1
- ಯಾದಗಿರಿ:ಮುಂದಿನ ವಾರದಿಂದ ಅಕ್ಟೋಬರ್ ಎರಡನೇ ವಾರದ ವರೆಗೆ ಭೀಮಾ ನದಿಯ ನೀರಿನ ಪ್ರಮಾಣ ಜಾಸ್ತಿಯಾಗುವ ಸಂಭವಿದ್ದು, ಮತ್ತೆ ಭೀಮಾ ನದಿ ಪ್ರವಾಹ ಆತಂಕ ಶುರುವಾಗಿದೆ. ನದಿ ತೀರಕ್ಕೆ ಸಾರ್ವಜನಿಕರು ತೆರಳದಂತೆ ಮತ್ತು ಮೀನುಗಾರಿಕೆ ಮಾಡದಂತೆ ಯಾದಗಿರಿ ಡಿಸಿ ರಾಗಪ್ರಿಯಾ ಸೂಚನೆ ನೀಡಿದ್ದಾರೆ.
2
-
3
-
4
-
5
- ಈ ಬಗ್ಗೆ ಪಬ್ಲಿಕ್ ಟಿವಿಯ ಮುಖಾಂತರ ಜಿಲ್ಲೆಯ ಜನತೆ ಡಿಸಿ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಭೀಮಾ ನದಿಗೆ ಸದ್ಯ ಒಂದು ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ, 3 ರಿಂದ 4 ಲಕ್ಷ ನೀರು ಬಂದರೆ ತೊಂದರೆಯಾಗುತ್ತದೆ. ಈಗಾಗಲೇ ಸಂಬಂಧಪಟ್ಟ ತಹಶೀಲ್ದಾರರ ಸಭೆ ನಡೆಸಲಾಗಿದೆ. ನದಿ ತೀರದ ಗ್ರಾಮಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭೀಮಾ ನದಿ ತೀರದ ಜನರು ಜಿಲ್ಲಾಡಳಿತಕ್ಕೆ ಸಹಕಾರ ನೀಡಿ ಎಂದು ಮನವಿ ಮಾಡಿದ್ದಾರೆ.ಇದನ್ನೂ ಓದಿ:ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕೊಚ್ಚಿಹೋದ ಸೇತುವೆಗೆ ಡಿಸಿ, ಎಸ್ಪಿ ಭೇಟಿ, ಶೀಘ್ರ ದುರಸ್ತಿಗೆ ಆದೇಶ
6
-
7
-
8
-
9
- ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದೆ, ನಾಯ್ಕಲ್ ಸೇರಿದಂತೆ ಹಲವಾರು ಗ್ರಾಮದ ಮನೆಗಳಿಗೆ ಹಾನಿಯಾಗಿದೆ, ಯಡ್ಡಳ್ಳಿ ಸೇತುವೆ ಕೊಚ್ಚಿ ಹೋಗಿದೆ, ಈ ಬಗ್ಗೆ ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಕಾಳಜೀ ಕೇಂದ್ರಗಳನ್ನು ಓಪನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ:ಹಿಂದೂ ದೇವಸ್ಥಾನ ಟಾರ್ಗೆಟ್ ಮಾಡಿ ಧ್ವಂಸ ಮಾಡಲಾಗುತ್ತಿದೆ: ಪ್ರತಾಪ್ ಸಿಂಹ
10
-
11
-
12
-
13
- Advertisement
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/0042acc7.txt DELETED
@@ -1,16 +0,0 @@
1
- ಬೆಂಗಳೂರು:ಕ್ರಿಕೆಟ್ ಬೆಟ್ಟಿಂಗ್ ದಂಧೆ ಹಾಗೂ ಮೀಟರ್ ಬಡ್ಡಿ ಪ್ರತ್ಯೇಕ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐದು ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂದಿದ್ದಾರೆ.
2
-
3
- ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಗುಡ್ಡೆ ಮಂಜ, ಗಣೇಶ್, ಗೋಪಾಲನ್ ಹಾಗೂ ವಿಧ್ಯಾದರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ದೇಶ, ವಿದೇಶದಲ್ಲಿ ನಡೆಯುವ ಅಂತಾರಾಷ್ಟ್ರೀಯ ಪಂದ್ಯಗಳಿಂದ ಹಿಡಿದು ರಣಜಿ ಪಂದ್ಯಗಳು ನಡೆಯುವಾಗಲೂ ಬೆಟ್ಟಿಂಗ್ ದಂಧೆಯನ್ನು ನಡೆಸುತ್ತಿದ್ದರು. ಅಷ್ಟೇ ಅಲ್ಲದೆ ಬೆಟ್ ಪ್ಲೇ, ಲೈನ್ ಸೇರಿದಂತೆ ಹಲವು ಆಪ್ ಗಳ ಮೂಲಕ ಬಾಲ್ ಟೂ ಬಾಲ್ ಬೆಟ್ಟಿಂಗ್ ಆಡುತ್ತಿದ್ದರು.
4
-
5
- ಆರೋಪಿಗಳ ಮೇಲೆ ಕಳೆದ ಮೂರು ತಿಂಗಳಿಂದ ನೀಗಾ ಇಡಲಾಗಿತ್ತು. ಬಳಿಕ ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಪರ್ಕ ಹೊಂದಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
6
-
7
-
8
-
9
- ಮೀಟರ್ ಬಡ್ಡಿ ಆರೋಪಿ ಅರೆಸ್ಟ್:ಮೀಟರ್ ಬಡ್ಡಿ ಹೆಸರಲ್ಲಿ ಅಮಾಯಕರ ಜಮೀನುಗಳನ್ನ ಕಬಳಿಸುತ್ತಿದ್ದ ಆನೇಕಲ್ ಕೃಷ್ಣ ಎಂಬವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕಳೆದ ಹತ್ತು ವರ್ಷದಿಂದ ಪ್ರಜಾ ವಿಮೋಚನೆ ಎಂಬ ಚಳುವಳಿಯ ಅಧ್ಯಕ್ಷನಾಗಿ ಕೆಲಸ ಮಾಡಿಕೊಂಡಿದ್ದ. ಮೀಟರ್ ಬಡ್ಡಿಯನ್ನು ದಂಧೆಯಾಗಿಸಿಕೊಂಡು ಸಾಲ ಪಡೆದವರಿಂದ ಖಾಲಿ ಬಾಂಡ್‍ಗಳ ಮೇಲೆ ಸಹಿ ಹಾಕಿಸಿಕೊಳ್ಳುತ್ತಿದ್ದ.
10
-
11
- ಆರು ತಿಂಗಳಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ ಸಾಲ ಪಡೆದವರ ಆಸ್ತಿಯನ್ನು ಕೃಷ್ಣ ಕಬಳಿಸುತ್ತಿದ್ದ. ಈತನಿಂದ ಅನೇಕರು ಶೋಷಣೆಗೆ ಹಾಗೂ ವಂಚನೆಗೆ ಒಳಗಾಗಿದ್ದಾರೆ. ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿರುವ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
12
-
13
- ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv ,ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ:play.google.com/publictv
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/0042ec44.txt DELETED
@@ -1,10 +0,0 @@
1
- ಹಾಸನ:ಗ್ರಾಮದಲ್ಲಿ ಮತಗಟ್ಟೆ (Poll Booth) ತೆರೆಯುವಂತೆ ಒತ್ತಾಯಿಸಿ ಬೋವಿ ಕಾಲೋನಿ ಗ್ರಾಮಸ್ಥರು ಪ್ರತಿಭಟನೆ (Protest) ನಡೆಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
2
-
3
- ಹಾಸನ (Hassan) ಜಿಲ್ಲೆಯ ಬೇಲೂರು (Beluru) ತಾಲೂಕಿನ ಹಳೇಬೀಡು ಹೋಬಳಿಯ ಬೋವಿ ಕಾಲೋನಿ ಗ್ರಾಮಸ್ಥರು ಬೇಲೂರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು ಗ್ರಾಮದಲ್ಲಿ 550 ಮತದಾರರಿದ್ದಾರೆ. ಮತದಾನ ಮಾಡಲು 2 ಕಿ.ಮೀ ದೂರದ ನರಸೀಪುರ ಗ್ರಾಮದಲ್ಲಿ ಮತ ಚಲಾವಣೆ ಮಾಡಬೇಕು ಎಂದರು.ಇದನ್ನೂ ಓದಿ:ಶಾಲೆಗೆ ಬಾಂಬ್ ಬೆದರಿಕೆ – ಸ್ಥಳಕ್ಕೆ ಪೊಲೀಸರ ದೌಡು
4
-
5
-
6
-
7
- ಗ್ರಾಮದಲ್ಲಿ ವಯೋವೃದ್ದರು, ಅನಾರೋಗ್ಯ ಪೀಡಿತರಿದ್ದಾರೆ. ಎರಡು ಕಿಲೋ ಮೀಟರ್ ಹೋಗಿ ಮತದಾನ ಮಾಡಲು ಕಷ್ಟವಾಗುತ್ತದೆ. ಹಾಗಾಗಿ ಬೋವಿ ಕಾಲೋನಿಯಲ್ಲಿಯೇ ಮತಗಟ್ಟೆ ತೆರೆಯಿರಿ. ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.ಇದನ್ನೂ ಓದಿ:ಚುನಾವಣಾ ಅಧಿಕಾರಿಗಳಿಂದ ರಾಜ್ಯಾದ್ಯಂತ 145 ಕೋಟಿ ರೂ. ನಗದು ಜಪ್ತಿ – ಯಾವ ಜಿಲ್ಲೆಯಲ್ಲಿ ಎಷ್ಟು ಸೀಜ್?
8
-
9
-
10
-
 
 
 
 
 
 
 
 
 
 
 
PublicTV_World/0044a24d.txt DELETED
@@ -1,24 +0,0 @@
1
- – ರಸ್ತೆಯಲ್ಲಿ ಬೆಂಕಿ ಹಾಕಿ ಆಕ್ರೋಶ
2
-
3
- ಮಂಡ್ಯ:ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Issue) ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಜೆಪಿ (BJP) ಮಂಡ್ಯದ (Mandya) ಬೆಂಗಳೂರು – ಮೈಸೂರು ಹಳೆ ಹೆದ್ದಾರಿಯಲ್ಲಿ (Bengaluru-Mysuru highway) ಹುರುಳಿ ಬಿತ್ತಿ ಪ್ರತಿಭಟನೆ ನಡೆಸಿದೆ.
4
-
5
- ಸಂಜಯ್ ಸರ್ಕಲ್‍ನಲ್ಲಿ ಸಂಸದೆ ಸುಮಲತಾ ಅಂಬರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸದಾನಂದಗೌಡ, ಮಾಜಿ ಸಚಿವ ಅಶ್ವತ್ಥ್ ನಾರಾಯಣ್, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇನ್ನಿತರ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ.ಇದನ್ನೂ ಓದಿ:ತಮಿಳುನಾಡಿಗೆ ನೀರು ಬಿಡುಗಡೆ – ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 106 ಅಡಿಗೆ ಕುಸಿತ
6
-
7
-
8
-
9
- ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್ ಗೌಡ, ರಾಜ್ಯ ಸರ್ಕಾರಕ್ಕೆ ನಮ್ಮ ರಾಜ್ಯದ ರೈತರ ಹಿತ ಬೇಕಾಗಿಲ್ಲ. ವಾಸ್ತವ ಸ್ಥಿತಿಯನ್ನು ಕೋರ್ಟ್‍ಗೆ ಅರ್ಥ ಮಾಡಿಸದೇ ನೀರು ಬಿಟ್ಟಿದ್ದಾರೆ. ತಮಿಳುನಾಡು ಅರ್ಜಿ ಹಾಕಿದ ತಕ್ಷಣವೇ ನೀರು ಬಿಡುವ ಅಗತ್ಯ ಏನಿತ್ತು? ಲೋಕಸಭಾ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ರೈತರ ಹಿತ ಬಲಿಕೊಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
10
-
11
-
12
-
13
- ಪ್ರತಿಭಟನೆ ವೇಳೆ ಕಿವಿಗೆ ಹೂ ಇಟ್ಟುಕೊಂಡು, ಬಾಯಿ ಬಡಿದುಕೊಂಡು ತಮಿಳಿನಾಡಿಗೆ ನೀರು ಹರಿಸುವುದನ್ನು ನಿಲ್ಲುಸುವಂತೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇದೇ ವೇಳೆ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಸ್ತೆ ಮಧ್ಯೆ ಬೆಂಕಿ ಹಾಕಿ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ.
14
-
15
-
16
-
17
- ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಜಯ್ ಸರ್ಕಲ್‍ನಲ್ಲಿ 4 ಡಿಎಆರ್ ತುಕಡಿ ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ವೇಳೆ ಯಾವುದೇ ಅವಘಡಗಳು ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಮಂಡ್ಯದಲ್ಲಿ ಕಾವೇರಿದ ಹಿನ್ನೆಲೆಯಲ್ಲಿ ಐಜಿ ಬೋರಲಿಂಗಯ್ಯ ಬೇಟಿ ನೀಡಿ ಪೊಲೀಸ್ ಬಂದೋಬಸ್ತ್ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ:ಚಂದ್ರಯಾನ-3: ನೆಹರೂ ತಾರಾಲಯದಲ್ಲಿ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯೋ ದೃಶ್ಯ ನೇರಪ್ರಸಾರ
18
-
19
- Web StoriesActress Jyothi Rai New Photo Shootಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳುಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌!
20
-
21
-
22
-
23
-
24
-
 
 
 
 
 
 
 
 
 
 
 
 
 
 
 
 
 
 
 
 
 
 
 
 
 
PublicTV_World/00458d7e.txt DELETED
@@ -1,18 +0,0 @@
1
- ದಾವಣಗೆರೆ:ಮಾಜಿ ಸಚಿವರ ಸಿಡಿ ಪ್ರಕರಣದಲ್ಲಿ ನೈತಿಕತೆ ಬಗ್ಗೆ ಹೆಚ್ಚು ಆದ್ಯತೆ ಕೊಡಬೇಕಾಗುತ್ತದೆ. ನಾನು ಈ ಪ್ರಕರಣಕ್ಕೆ ಉತ್ತರಿಸಿದರೂ ಒಂದು ಮಾತು ಬರುತ್ತದೆ, ಉತ್ತರಿಸುತ್ತಿದ್ದರೂ ಒಂದು ಮಾತು ಬರುತ್ತದೆ. ನನ್ನದು ಅಂತಹ ಯಾವುದೇ ಸಿಡಿಗಳು ಇಲ್ಲ ಎಂದು ಸಚಿವ ಮಾಧುಸ್ವಾಮಿ ನಗೆ ಚಟಾಕಿ ಹಾರಿಸಿದರು.
2
-
3
-
4
-
5
- ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಪಂಚಮಸಾಲಿ ಗುರುಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವರ ವಿಚಾರದಲ್ಲಿ ತಪ್ಪು ಸರಿ ಎಂಬುದನ್ನ ಕೋರ್ಟ್ ಹೇಳುತ್ತದೆ. ಆದರೆ ಅಷ್ಟರಲ್ಲಿ ಅವರ ತೇಜೋವಧೆ ಆಗಿ ಹೋಗಿರುತ್ತದೆ. ಈ ಕಾರಣಕ್ಕಾಗಿಯೇ ಕೆಲ ಸಚಿವರು ಕೋರ್ಟ್ ಮೊರೆ ಹೋಗಿ ಮಾಧ್ಯಮಗಳಲ್ಲಿ ಪ್ರಸಾರ ಆಗದಂತೆ ತಡೆ ತರುತ್ತಿದ್ದಾರೆ ಎಂದರು.
6
-
7
-
8
-
9
- ತೇಜೋವಧೆ ತಡೆಯಲು ಇಂತಹ ಪ್ರಯತ್ನ ನಡೆದಿದೆ. ಮಾಜಿ ಸಚಿವರ ವಿಚಾರದಲ್ಲಿ ಸಂತ್ರಸ್ತೆ ಬಂದು ದೂರು ನೀಡಿಲ್ಲ ಎಂಬುದು ಚರ್ಚೆ ಆಗುತ್ತದೆ. ಯಾವುದೇ ಆರೋಪ ಇದ್ದರೆ ಅದರ ಬಗ್ಗೆ ಬೇಕಾದವರು ದೂರು ಸಲ್ಲಿಸಬಹುದು ಎಂದು ಈ ಹಿಂದೆ ಸುಪ್ರೀಂಕೋರ್ಟ್ ತೀರ್ಪು ಬಂದಿದೆ. ಅದನ್ನ ಬಳಕೆ ಮಾಡಿಕೊಂಡು ಮೂರನೇ ವ್ಯಕ್ತಿಗಳು ದೂರು ನೀಡುತ್ತಿದ್ದಾರೆ. ಇಲ್ಲವಾದ್ರೆ ಪ್ರಕರಣಕ್ಕೆ ಸಂಬಂಧಿಸಿವರು ಮಾತ್ರ ದೂರು ನೀಡಬೇಕು ಎಂದು ಹೇಳಿದರು.
10
-
11
-
12
-
13
- 25ಕ್ಕೂ ಹೆಚ್ಚು ಸಚಿವರು ಕೋರ್ಟ್ ಮೊರೆ ಹೋಗುತ್ತಿದ್ದಾರೆ ಎಂಬ ವಿಚಾರದ ಕುರಿತು ನನಗೆ ಗೊತ್ತಿಲ್ಲ ಎಂದು ಮಾಧುಸ್ವಾಮಿ ತಿಳಿಸಿದರು.
14
-
15
- Advertisement
16
-
17
-
18
-
 
 
 
 
 
 
 
 
 
 
 
 
 
 
 
 
 
 
 
PublicTV_World/00482b04.txt DELETED
@@ -1,18 +0,0 @@
1
- ಬಿಗ್ ಬಾಸ್ 9ನೇ (Bigg Boss Season 9) ಸೀಸನ್ ಶುರುವಾಗಿದೆ. ಪ್ರವೀಣರ ಜೊತೆ ನವೀನರ ಜುಗಲ್ ಬಂದಿ ಕೂಡ ಜೋರಾಗಿದೆ. ಇದೀಗ ದೊಡ್ಮನೆಯಲ್ಲಿ ಮೊದಲ ದಿನವೇ ಜಗಳ ಶುರುವಾಗಿದ್ದು,  ಕೆಣಕಲು ಬಂದ ಪ್ರಶಾಂತ್ ಸಂಬರ್ಗಿಗೆ ಆರ್ಯವಧನ್ ಗುರೂಜಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ:2024ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಮೋದಿ, ಹೇಮಾ ಮಾಲಿನಿಗೆ ರಾಖಿ ಸಾವಂತ್ ಥ್ಯಾಂಕ್ಸ್ ಹೇಳಿದ್ದೇಕೆ?
2
-
3
-
4
-
5
- ದೊಡ್ಮನೆಯಲ್ಲಿ 18 ಜನ ಭಿನ್ನ ವ್ಯಕ್ತಿಗಳಿದ್ದಾರೆ. ಮನೆಯ ರಂಗು ಮತ್ತಷ್ಟು ಜೋರಾಗಿದೆ. ಇನ್ನೂ ಈ ವೇಳೆ ಗುರೂಜಿ ಪ್ರಶಾಂತ್ ಸಂಬರ್ಗಿ (Prashant Sambargi) ಅವರನ್ನು ಸಂಪಂಗಿ ಅಂದಿದ್ದಾರೆ. ಈ ಮಾತು ಜಗಳಕ್ಕೆ ಎಡೆ ಮಾಡಿ ಕೊಟ್ಟಿದೆ. ರೀ ಅದು ಸಂಬರ್ಗಿ ಊರಿನ ಹೆಸರು ಎಂದು ಪ್ರಶಾಂತ್ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಬಳಿಕ ನೀವು ಆರ್ಯವರ್ಧನ್ ಅಂತಾ ಯಾಕೆ  ಇಟ್ಟುಕೊಂಡ್ರಿ ನಾನು ಹೇಳಲಾ ನಿಮ್ಮ ನಿಜವಾದ ಹೆಸರು ಎಂದು ಪ್ರಶಾಂತ್, ಗುರೂಜಿಗೆ ಟಾಂಗ್ ಕೊಟ್ಟಿದ್ದಾರೆ.
6
-
7
-
8
-
9
- ಆರ್ಯವರ್ಧನ್ (Aryavardhan Guruji) ಉರುಫ್ ಏನು ಎಂದು ಪ್ರಶಾಂತ್ ಮತ್ತೆ ಕೇಳಿದ್ದಾರೆ. ಈ ಮಾತಿನ ಚಕಮಕಿ ಉರ್ಫಿಯಿಂದ ಉರಿಸೋದರವೆಗೆ ಚರ್ಚೆ ಆಗಿದೆ. ಈ ಜಗಳದ ನಡುವೆ ಇತ್ತ ಅರುಣ್ ಸಾಗರ್ (Arun Sagar) ಉರ್ಫಿಗೆ ಉರವಿದ್ದಾರೆ ಎಂದು ನಗೆಚಟಾಕಿ ಹಾರಿಸಿದ್ದಾರೆ. ಇವರು ಇನ್ಮೇಲೆ ಆರ್ಯವರ್ಧನ್ ಉರಸು ಎಂದು ಅರಣ್ ಸಾಗರ್ ಮನೆ ಮಂದಿ ಮುಂದೆ ಹೇಳಿದ್ದಾರೆ. ಅಷ್ಟಕ್ಕೇ ನಿಲ್ಲದ ಈ ಚರ್ಚೆ ಕಡೆಗೆ ಗುರೂಜಿ ಸಂಬರ್ಗಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
10
-
11
-
12
-
13
- ನನಗೆ ಏನೇ ಹೇಳಬೇಕಿದ್ದರೂ ನೇರವಾಗಿ ಹೇಳಿ ಎಂದು ನಾನು ಸೈಲೆಂಟ್ (Silent) ಅಲ್ಲ ವೈಲೆಂಟ್.. ಫೈಯರ್ ನಾನು‌ ಎಂದು ಸಂಬರ್ಗಿಗೆ ನೇರವಾಗಿ ಟಾಂಗ್ ಕೊಟ್ಟಿದ್ದಾರೆ. ಉರಿಸಲು ಬಂದ ಪ್ರಶಾಂತ್ ಗೆ ಪಂಚಿಂಗ್ ಡೈಲಾಗ್ ಗಳ ಮೂಲಕ ಗುರೂಜಿ ಬೆವರಿಳಿಸಿದ್ದಾರೆ.
14
-
15
-
16
-
17
-
18
-
 
 
 
 
 
 
 
 
 
 
 
 
 
 
 
 
 
 
 
PublicTV_World/004f93b9.txt DELETED
@@ -1,16 +0,0 @@
1
- ಬೆಂಗಳೂರು:ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ತನಿಖೆ ಚುರುಕುಗೊಂಡಿದೆ. ಸಿಡಿಯಲ್ಲಿ ಇರುವ ಯವತಿ ಯಾರು? ಈಗ ಎಲ್ಲಿದ್ದಾಳೆ ಎಂಬುದರ ಬಗ್ಗೆ ಮಾಹಿತಿಗಳು ಲಭ್ಯವಾಗಿಲ್ಲ. ಆದರೆ ಆಕೆ ಬೆಂಗಳೂರಿನಲ್ಲಿ ನೆಲೆಸಿದ್ದ ಬಗ್ಗೆ ಹಲವು ಮಾಹಿತಿಗಳು ಈಗ ಲಭ್ಯವಾಗಿದ್ದು, ಮಾರ್ಚ್ 2ರ ರಾತ್ರಿ 9:30ಕ್ಕೆ ಮನೆಯಿಂದ ಯುವತಿ ಹೊರಕ್ಕೆ ಹೋಗಿದ್ದಾಳೆ.
2
-
3
- ಹೌದು. ಮಂಗಳವಾರ ಸಂಜೆ ಸ್ಫೋಟಕ ಸಿಡಿ ರಿಲೀಸ್‌ ಆಗಿತ್ತು. ಸಿಡಿ ರಿಲೀಸ್ ಆಗಿ 4 ಗಂಟೆ ಬಳಿಕ ಸಂತ್ರಸ್ತೆ ಮನೆಯಿಂದ ಹೊರಗಡೆ ಬಂದಿದ್ದಾಳೆ. ಬ್ಯಾಗ್ ಇಟ್ಟುಕೊಂಡು ಮನೆಯಿಂದ ಏಕಾಂಗಿಯಾಗಿ ಹೊರಗೆ ಬಂದ ಯುವತಿ ನಡೆದುಕೊಂಡೇ ಮುಖ್ಯ ರಸ್ತೆಗೆ ತಲುಪಿದ್ದಳು ಎಂಬ ವಿಚಾರ ಮೂಲಗಳಿಂದ ಲಭ್ಯವಾಗಿದೆ.
4
-
5
-
6
-
7
- ಮನೆಯಿಂದ ಹೊರಬಂದ ಬಳಿಕ ಮೊಬೈಲ್ ಸ್ವಿಚ್‍ಆಫ್ ಮಾಡಿ ಸಿಮ್ ಡಿಆಕ್ಟಿವೇಟ್ ಮಾಡಿದ್ದಾಳೆ. ಮೊಬೈಲ್ ಸ್ವಿಚ್‍ ಆಫ್‌ ಮಾಡಿರುವ  ವಿಚಾರ ತಾಂತ್ರಿಕ ದಾಖಲೆಗಳಿಂದ ಲಭ್ಯವಾಗಿದೆ
8
-
9
- ಆರಂಭದಲ್ಲಿ ಯುವತಿ ಆರ್‌ಟಿ ನಗರದ ಪಿಜಿಯಲ್ಲಿ ವಾಸವಾಗಿದ್ದಳು ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಈಗ ಆಕೆ ‌ಪಿಜಿಯಲ್ಲಿ ಇರಲಿಲ್ಲ. ಆರ್.ಟಿ.ನಗರದ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿ ಒಬ್ಬಳೇ ವಾಸವಾಗಿದ್ದ ವಿಚಾರ ಈಗ ಲಭ್ಯವಾಗಿದೆ.
10
-
11
- ಯುವತಿಯ ಬಗ್ಗೆ ಪಬ್ಲಿಕ್‌ ಟಿವಿ ಮನೆ ಮಾಲೀಕರನ್ನು ಮಾತನಾಡಿಸಿದೆ. ಈ ವೇಳೆ ಅವರು, ಇದು ಪಿಜಿಯಲ್ಲ. ಅವರಿಗೆ ಬಾಡಿಗೆ ನೀಡಿದ್ದೆ. ಬಾಡಿಗೆಯಲ್ಲಿ ನಾಲ್ಕು ಜನ ಸೇರಿ ಮನೆ ತೆಗೆದುಕೊಂಡಿದ್ದಾರೆ. 2018ರಿಂದ ಅವರು ಇಲ್ಲಿ ನೆಲೆಸಿದ್ದರು. ರೂಮಿನಲ್ಲ ಆಕೆ ಒಬ್ಬಳೇ ಇದ್ದಳು. ಸೋಮವಾರ ಇಲ್ಲಿಂದ ತೆರಳಿದ್ದಾಳೆ ಎಂದು ತಿಳಿಸಿದ್ದಾರೆ.
12
-
13
-
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/0050684a.txt DELETED
@@ -1,14 +0,0 @@
1
- ಬೀದರ್:ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ವಿಕ್ರಂ ಸಿಂಹರನ್ನು ಬಂಧಿಸಿರುವುದು ಕಾನೂನಿನ ವಿರುದ್ಧವಾಗಿದೆ. ಎಫ್‍ಐಆರ್‍ನಲ್ಲಿ ಹೆಸರಿಲ್ಲದಿದ್ದರೂ ಅವರನ್ನು ಬಂಧಿಸಲಾಗಿದ್ದು, ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಅವರು ಆರೋಪಿಸಿದ್ದಾರೆ.
2
-
3
- ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಕೆಟ್ಟ ಹೆಸರು ತರಲು ಹೀಗೆ ಮಾಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯನವರ ಕುತಂತ್ರವಾಗಿದೆ. ಈ ರೀತಿ ಕುತಂತ್ರ ಮಾಡಿದರೂ ಸಹ ಪ್ರತಾಪ್ ಸಿಂಹ ಅವರನ್ನು ಅಲ್ಲಿಯ ಜನ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದಿದ್ದಾರೆ.ಇದನ್ನೂ ಓದಿ:ನಮ್ಮನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ: ವಿಕ್ರಂ ಸಿಂಹ
4
-
5
-
6
-
7
- ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸರು ಯಾರ ಮೂಗಿನ ಅಳತೆ ಮೇಲೆ ಕೆಲಸ ಮಾಡುತ್ತಿರುವುದು ಗೊತ್ತಿದೆ. ಇದು ಸರಿಯಾದ ನಡೆಯಲ್ಲ. ಪ್ರತಾಪ್ ಸಿಂಹ ಅವರೇ ನೀವು ಎದೆಗುಂದುವುದು ಬೇಡ, ಸತ್ಯಕ್ಕೆ ಜಯವಾಗಲಿದೆ ಎಂದಿದ್ದಾರೆ.
8
-
9
-
10
-
11
- ಕಾನೂನು ಎಲ್ಲರಿಗೂ ಒಂದೇ ಎನ್ನುವುದು ದೇಶದ ಜನರಿಗೆ ಗೊತ್ತಿದೆ, ನಿಮ್ಮ ಕ್ಷೇತ್ರದಲ್ಲಿ ದಲಿತರ ಮೇಲೆ ಹಾಗೂ ಸಾಮಾನ್ಯರಿಗೆ ಎಷ್ಟು ದೌರ್ಜನ್ಯವಾಗುತ್ತಿದೆ ಗೊತ್ತಾ ಎಂದು ಅವರು ಪ್ರಶ್ನಿಸಿದ್ದಾರೆ.ಇದನ್ನೂ ಓದಿ:ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ
12
-
13
-
14
-
 
 
 
 
 
 
 
 
 
 
 
 
 
 
 
PublicTV_World/0054782e.txt DELETED
@@ -1,14 +0,0 @@
1
- ಚಾಮರಾಜನಗರ:ಇಂದು ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಾಮರಾಜನಗರದಲ್ಲಿ 15 ಮಂದಿ ಬಂಧಿಸಲಾಗಿದೆ.
2
-
3
- ಬೆಳಗ್ಗೆ 10:30ಕ್ಕೆ ಅಯೋಧ್ಯೆ ತೀರ್ಪು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಹಾಗೆಯೇ ರಾಜ್ಯದಲ್ಲಿಯೂ ನಿಗಾ ಇಡಲಾಗಿದ್ದು, ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚೆತ್ತಿರುವ ಚಾಮರಾಜನಗರ ಟೌನ್ ಪೋಲಿಸರು, ಮುಂಜಾಗ್ರತಾ ಕ್ರಮವಾಗಿ 15 ಮಂದಿ ಕಮ್ಯೂನಲ್ ಗೂಂಡಾಗಳನ್ನು ಬಂಧಿಸಿದ್ದಾರೆ.
4
-
5
-
6
-
7
- ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕೇಂದ್ರದಲ್ಲಿ ಪೊಲೀಸ್ ಬಲ ಪ್ರದರ್ಶನ ನಡೆಯಲಿದೆ. ಚಾಮರಾಜನಗರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
8
-
9
- ಎಸ್ಪಿ, ಎಎಸ್ಪಿ, ಇಬ್ಬರು ಡಿವೈಎಸ್ಪಿ ಸೇರಿದಂತೆ 2000 ಪೊಲೀಸರಿಂದ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.
10
-
11
-
12
-
13
-
14
-
 
 
 
 
 
 
 
 
 
 
 
 
 
 
 
PublicTV_World/0055cf03.txt DELETED
@@ -1,14 +0,0 @@
1
- ಜ್ಯೂನಿಯರ್ ಎನ್.ಟಿ.ಆರ್ ಸಹೋದರ ನಂದಮೂರಿ ಕಲ್ಯಾಣ್ ರಾಮ್ ಹುಟ್ಟುಹಬ್ಬಕ್ಕೆ (Birthday) ಸಾಲು ಸಾಲು ಉಡುಗೊರೆಗಳು ಸಿಕ್ಕಿದೆ. ಒಂದು ಕಡೆ ಡೆವಿಲ್ ಸಿನಿಮಾದ ಗ್ಲಿಂಪ್ಸ್, ಮತ್ತೊಂದು ಕಡೆ ಕಲ್ಯಾಣ್ ಅವರ 21ನೇ ಚಿತ್ರ ಕೂಡ ಅನೌನ್ಸ್ ಆಗಿದೆ. ಅಶೋಕ ಕ್ರಿಯೇಷನ್ ಹಾಗೂ ಎನ್ ಟಿಆರ್ ಆರ್ಟ್ಸ್ ಬ್ಯಾನರ್ ನಡಿ ಮೂಡಿ ಬರ್ತಿರುವ ಈ ಸಿನಿಮಾಗೆ ಅಶೋಕ್ ವರ್ಧನ್ ಮುಪ್ಪಾ ಮತ್ತು ಸುನಿಲ್ ಬಲುಸು (Sunil Balusu) ಅವರು ಬಂಡವಾಳ ಹೂಡಿದ್ದಾರೆ. ಪ್ರದೀಪ್ ಚಿಲುಕುರಿ (Pradeep Chilukuri) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ.
2
-
3
-
4
-
5
- ನಂದಮೂರಿ ಕಲ್ಯಾಣ್ ರಾಮ್ (Nandamuri Kalyan Ram)  ಸಿನಿಮಾ ಕರಿಯರ್ ನಲ್ಲಿ ಅತಿ ದೊಡ್ಡ ಬಜೆಟ್ ಚಿತ್ರ ಇದಾಗಿದೆ. ಔಟ್-ಅಂಡ್-ಔಟ್ ಆಕ್ಷನ್ ಎಂಟರ್‌ಟೈನರ್ ಕಥಾಹಂದರ ಚಿತ್ರದಲ್ಲಿ ಕಲ್ಯಾಣ್ ರಾಮ್ ಹಿಂದೆಂದೂ ಕಾಣದ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹರಿಕೃಷ್ಣ ಭಂಡಾರಿ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದಾರೆ. ಇನ್ನುಳಿದ ತಾರಾಗಣ ಮತ್ತು ತಾಂತ್ರಿಕ ಬಳಗವನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದಿದ್ದಾರೆ ನಿರ್ದೇಶಕರು.
6
-
7
-
8
-
9
- ಈ ಹಿಂದೆ ಎಟಿಆರ್ ಆರ್ಟ್ಸ್ ಬ್ಯಾನರ್ ನಡಿ ಕಲ್ಯಾಣ್ ರಾಮ್ ನಟಿಸಿದ್ದ ಬಿಂಬಿಸಾರ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಇದೇ ಬ್ಯಾನರ್ ನಡಿ ಯಂಗ್ ಟೈಗರ್ ಎನ್.ಟಿ.ಆರ್ ಹಾಗೂ ಕೊರಟಲಾ ಶಿವ ನಟನೆಯ ದೇವರ ಸಿನಿಮಾ ತಯಾರಾಗುತ್ತಿದ್ದು, ಪ್ರಶಾಂತ್ ನೀಲ್ ಹಾಗೂ ತಾರಕ್ ಚಿತ್ರ ಕೂಡ ಎನ್ ಟಿಆರ್ ಬ್ಯಾನರ್ ನಲ್ಲೇ ಮುಂದೊಂದು ದಿನ ಮೂಡಿ ಬರಲಿದೆ.
10
-
11
- Web StoriesActress Jyothi Rai New Photo Shootಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳುಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌!
12
-
13
-
14
-
 
 
 
 
 
 
 
 
 
 
 
 
 
 
 
PublicTV_World/0056adb5.txt DELETED
@@ -1,10 +0,0 @@
1
- ಚಾಮರಾಜನಗರ:ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರಿಂದಾಗಿ ಜಿಲ್ಲೆಯ ಜನ ಭಯಭೀತರಾಗಿದ್ದಾರೆ. ಹೀಗಾಗಿ ಬಸ್ ತಡೆದು ಪತಿಭಟನೆ ನಡೆಸಿದ್ದು, ನಮ್ಮೂರಿಗೆ ಯಾರೂ ಬರುವುದು ಬೇಡ, ಬಸ್ ನಮಗೆ ಅವಶ್ಯವೇ ಇಲ್ಲ ಮೊದಲು ಬಸ್ ಸಂಚಾರ ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2
-
3
- ಬಿಳಿಗಿರಿ ರಂಗನಾಥ ಬೆಟ್ಟದ ಹೊಸಪೋಡು ಬಳಿ ಘಟನೆ ನಡೆದಿದ್ದು, ಕೊರೊನಾ ಆತಂಕ ಹಿನ್ನೆಲೆ ಗ್ರಾಮಕ್ಕೆ ಬಸ್ ಬರದಂತೆ ಸೋಲಿಗರು ರಸ್ತೆ ತಡೆ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಬಿಳಿಗಿರಿ ರಂಗನಾಥನ ಸನ್ನಿಧಿಗೆ ಯಳಂದೂರಿನಿಂದ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಇದೀಗ ಬಸ್ ಸಂಚಾರಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
4
-
5
-
6
-
7
- ನಾವು ಕಳೆದ ಮೂರ್ನಾಲ್ಕು ದಿನಗಳಿಂದ ಮನವಿ ಮಾಡುತ್ತಿದ್ದೇವೆ. ನಮ್ಮೂರಿಗೆ ಬಸ್ ಬಿಡಬೇಡಿ, ನಮಗೆ ಬಸ್ ಅವಶ್ಯವಿಲ್ಲ ಎಂದು ಸಾರಿಗೆ ಅಧಿಕಾರಿಗಳಿಗೆ ಹೇಳಿದ್ದೇವೆ ಆದರೂ ಬಸ್ ಬಿಡಲಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಕೊರೊನಾ ಭಯ ಕಾಡುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇಂದು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರವಾಸಿಗರಿಗೆ, ಭಕ್ತರಿಗೆ ಬಿಆರ್‍ಟಿಗೆ ನಿರ್ಬಂಧ ವಿಧಿಸುವಂತೆ ಒತ್ತಾಯಿಸಿದ್ದಾರೆ.
8
-
9
-
10
-
 
 
 
 
 
 
 
 
 
 
 
PublicTV_World/005b604d.txt DELETED
@@ -1,12 +0,0 @@
1
- ತಮ್ಮದೇ ಆದ ಹೋರಾಟದ ದಿನಗಳಲ್ಲಿ ಬ್ಯುಸಿಯಾಗಿ ನಟನೆಯಿಂದ ದೂರವೇ ಉಳಿದು ಬಿಟ್ಟಿದ್ದವರು ಆ ದಿನಗಳು ಚೇತನ್. ಇದೀಗ ಅವರು ಮತ್ತೆ ನಟನೆಯತ್ತ ಮುಖ ಮಾಡಿದ್ದಾರೆ. ವಿಶೇಷವೆಂದರೆ ಇದೇ ಮೊದಲ ಬಾರಿ ಅವರು ಚಿತ್ರವೊಂದರಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.
2
-
3
- ರವಿಚಂದ್ರನ್ ಮತ್ತು ಚೇತನ್ ಜೊತೆಯಾಗಿ ನಟಿಸಲಿರೋ ಈ ಚಿತ್ರಕ್ಕೀಗ ಮುಹೂರ್ತವೂ ನೆರವೇರಿದೆ. ಆದರೆ ಈಗ ಇದಕ್ಕಾಗಿ ತಯಾರಿ ನಡೆಯುತ್ತಿದೆ. ಉಳಿಕೆ ತಾರಾಗಣದ ಆಯ್ಕೆ ಕಾರ್ಯವೆಲ್ಲ ಮುಗಿದ ನಂತರ ಸಂಪೂರ್ಣ ವಿವರ ಹೊರ ಬೀಳಲಿದೆ. ಈ ಚಿತ್ರದ ಮೂಲಕ ಚೇತನ್ ಸಂಪೂರ್ಣವಾಗಿ ಬೇರೆಯದ್ದೇ ರೂಪದಲ್ಲಿ ಕಾಣಿಸಿಕೊಳ್ಳಿದ್ದಾರೆಂಬುದಂತೂ ಸತ್ಯ.
4
-
5
-
6
-
7
- ಇತ್ತೀಚಿನ ದಿನಗಳಲ್ಲಿ ಚೇತನ್ ನೀಳವಾದ ಗಡ್ಡ ಮತ್ತು ಕೂದಲು ಬಿಟ್ಟ ರೂಪದಲ್ಲಿಯೇ ಕಾಣಿಸಿಕೊಂಡಿದ್ದರು. ಆದರೆ ಈ ಚಿತ್ರಕ್ಕಾಗಿ ವರ್ಷಗಳ ನಂತರ ಅವರ ಗಡ್ಡ ಮತ್ತು ಕೂದಲಿಗೆ ಕತ್ತರಿ ಬಿದ್ದು ಮತ್ತಷ್ಟು ಸ್ಟೈಲಿಶ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಪೊಂಗಲ್ ಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಫಸ್ಟ್ ಲುಕ್ ಟೀಸರ್ ಕೂಡಾ ಬಿಡುಗಡೆಯಾಗಲಿದೆಯಂತೆ.
8
-
9
- ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv ,ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ:play.google.com/publictv
10
-
11
-
12
-
 
 
 
 
 
 
 
 
 
 
 
 
 
PublicTV_World/0061dcd4.txt DELETED
@@ -1,14 +0,0 @@
1
- ಬೆಂಗಳೂರು:ಕುಮಾರ್ ನಿರ್ದೇಶನದ ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರ ಇದೇ ತಿಂಗಳು ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿಯೇ ಕರಿಯಪ್ಪನ ಹವಾ ಕನ್ನಡದ ಗಡಿ ದಾಟಿ ಬೇರೆ ಭಾಷೆಗಳಲ್ಲಿಯೂ ಜೋರಾಗಿದೆ. ಭಿನ್ನ ಹಾದಿಯ, ಹೊಸಾ ಅಲೆಯ ಕನ್ನಡ ಚಿತ್ರವೊಂದು ಈ ಪರಿಯಾಗಿ ಜನಪ್ರಿಯಗೊಂಡಿರೋದರ ಬಗ್ಗೆ ಎಲ್ಲರೂ ಅಚ್ಚರಿಗೊಂಡಿದ್ದಾರೆ!
2
-
3
- ಅಷ್ಟಕ್ಕೂ ಈ ಸಿನಿಮಾ ಟ್ರೈಲರ್ ಇಂಥಾದ್ದೊಂದು ಸಂಚಲನ ಸೃಷ್ಟಿಸಬಹುದೆಂಬ ಅಂದಾಜು ಯಾರಿಗೂ ಇರಲಿಲ್ಲ. ಆದರೆ ಬಿಡುಗಡೆಯಾಗಿ ಕ್ಷಣಗಳುರುಳುತ್ತಲೇ ಇದು ವ್ಯಾಪಕ ಮೆಚ್ಚುಗೆ ಪಡೆದುಕೊಂಡಿತ್ತು. ಲಕ್ಷ ಲಕ್ಷ ವೀವ್ಸನ್ನೂ ಪಡೆದುಕೊಂಡಿತ್ತು. ಹೀಗೆ ಕನ್ನಡದಲ್ಲಿ ಹೊಸತನ, ಕಚಗುಳಿಯಿಡೋ ಕಾಮಿಡಿಯೊಂದಿಗೆ ಕ್ರೇಜ್ ಕ್ರಿಯೇಟ್ ಮಾಡಿ ಬಾಲಿವುಡ್ ವರೆಗೂ ತಲುಪಿಕೊಂಡಿತ್ತು.
4
-
5
-
6
-
7
- ಈ ಟ್ರೈಲರನ್ನು ಬಾಲಿವುಡ್‍ನ ಖ್ಯಾತ ವಿಮರ್ಶಕ ಅನೂಪ್ ಕುಮಾರ್ ಸಿನ್ಹಾ ಮೆಚ್ಚಿಕೊಂಡಿದ್ದಾರೆ. ಮಾಮೂಲಿ ಧಾಟಿಯಾಚೆಗೆ ಭಿನ್ನ ಪ್ರಯೋಗವನ್ನ ಧ್ವನಿಸುತ್ತಿರೋ ಕೆಮಿಸ್ಟ್ರಿ ಆಫ್ ಕರಿಯಪ್ಪ ಟ್ರೈಲರ್ ತಾನು ಇತ್ತೀಚೆಗೆ ನೋಡಿರೋ ಬೆಸ್ಟ್ ಟ್ರೈಲರ್ ಅಂತ ಸಿನ್ಹಾ ಶಹಬ್ಬಾಸ್‍ಗಿರಿ ಕೊಟ್ಟಿದ್ದಾರೆ. ಯಾವ ಮುಲಾಜೂ ಇಲ್ಲದ ನಿಷ್ಠುರ ವಿಮರ್ಶೆಗೆ ಹೆಸರಾದ ಸಿನ್ಹಾ ಅವರೇ ಹೊಗಳಿರೋದರಿಂದ ಬಾಲಿವುಡ್ ಲೆವೆಲ್ಲಿನಲ್ಲಿಯೂ ಕರಿಯಪ್ಪ ಸದ್ದು ಮಾಡಿದ್ದಾನೆ. ನಾನಾ ಭಾಷೆಗಳಲ್ಲಿಯೂ ಇಂಥಾದ್ದೇ ಮೆಚ್ಚುಗೆ ಕೇಳಿ ಬರುತ್ತಿದೆ. ಈ ಕಾರಣದಿಂದಲೇ ಇದೀಗ ಕರಿಯಪ್ಪನ ಟ್ರೈಲರಿಗೆ ಮಿಲಿಯನ್ನುಗಟ್ಟಲೆ ವೀವ್ಸ್ ಸಿಕ್ಕಿದೆ.
8
-
9
-
10
-
11
- ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv ,ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ:play.google.com/publictv
12
-
13
-
14
-
 
 
 
 
 
 
 
 
 
 
 
 
 
 
 
PublicTV_World/00645a50.txt DELETED
@@ -1,10 +0,0 @@
1
- ಚಾಮರಾಜನಗರ:ಚೆಕ್​ಪೋಸ್ಟ್​ನಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಆರು ಜನರನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
2
-
3
- ಜಿಲ್ಲೆಯ ಹೆಗ್ಗವಾಡಿ ಕ್ರಾಸ್ ಚೆಕ್‍ಪೋಸ್ಟ್ ನಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ ಹಾಗೂ ಪೂರ್ವಾನುಮತಿ ಪಡೆಯದೇ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರನ್ನು ಹಾದು ಹೋಗಲು ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಕ್ಕಡಹಳ್ಳಿಯ ಗ್ರಾ.ಪಂ. ಬಿಲ್ ಕಲೆಕ್ಟರ್ ಮಹದೇವಸ್ವಾಮಿ, ನಂಜದೇವನಪುರ ವೃತ್ತದ ಗ್ರಾಮ ಲೆಕ್ಕಿಗ ಸಂತೋಷ್ ಕುಮಾರ್, ತಮ್ಮಡಹಳ್ಳಿ ವೃತ್ತದ ಗ್ರಾಮ ಲೆಕ್ಕಿಗ ಕೆ. ಶ್ರೀಧರ್, ಮುಕ್ಕಡಹಳ್ಳಿ ಗ್ರಾಮ ಪಂಚಾಯತಿಯ ನೀರುಗಂಟಿ ನಂಜುಂಡಸ್ವಾಮಿ, ಕುಲಗಾಣ ವೃತ್ತದ ಲೆಕ್ಕಿಗ ಡಿ.ಜೆ. ಮಹೇಶ್, ಮುಕ್ಕಡಹಳ್ಳಿ ವೃತ್ತದ ಗ್ರಾಮ ಲೆಕ್ಕಿಗ ನಂದೀಶ್ ಆರು ಜನರನ್ನು ಅಮಾನತುಗೊಳಿಸಲಾಗಿದೆ.
4
-
5
-
6
-
7
- ಕೊರೊನಾ ವೈರಸ್ ತಡೆಗಾಗಿ ಹೆಗ್ಗವಾಡಿ ಕ್ರಾಸ್ ನಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಲಾಗಿತ್ತು. ಮೊದಲನೇ ಮತ್ತು ಎರಡನೇ ಪಾಳಿಯಲ್ಲಿ ಕಾರ್ಯ ನಿರ್ವಹಿಸಿದ್ದ ಆರು ಮಂದಿ ನೌಕರರು 23 ವಾಹನಗಳನ್ನು ಪರಿಶೀಲನೆ ನಡೆಸದೇ ಬಿಟ್ಟಿದ್ದರು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸರ್ಕಾರದ ಮಾರ್ಗಸೂಚಿ ಅನ್ವಯ ಜೀವನಾವಶ್ಯಕ ವಸ್ತುಗಳನ್ನು ಮಾತ್ರ ಸಾಗಿಸಲು ಅವಕಾಶವಿದೆ. ಆದರೆ ಈ ನೌಕರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾದುಹೋಗಲು ಅವಕಾಶ ಕಲ್ಪಿಸಿದ್ದರಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
8
-
9
-
10
-
 
 
 
 
 
 
 
 
 
 
 
PublicTV_World/006575fd.txt DELETED
@@ -1,22 +0,0 @@
1
- ಮೈಸೂರು:ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಇಂದು ದಸರಾದ ಎರಡನೇ ದಿನ ಅರಮನೆ ನಗರಿಯಲ್ಲಿ ವಿವಿಧ ಕಾರ್ಯಕ್ರಮಗಳು ಜನರಿಗೆ ಮಸ್ತ್ ಮನರಂಜನೆ ನೀಡಿತು.
2
-
3
- ಭಾನುವಾರ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾದ ಚಾಲನೆ ಸಿಕ್ಕಿದೆ. ಇಂದು ಎರಡನೇ ದಿನದ ದಸರೆಯನ್ನು ಸ್ತ್ರೀಯರ ಕಲಾನೈಪುಣ್ಯತೆಯಾದ ರಂಗೋಲಿ ಸ್ಪರ್ಧೆಯಿಂದ ಆರಂಭಗೊಳಿಸಲಾಯಿತು. ಅಂಬಾ ವಿಲಾಸ ಅರಮನೆಯ ಮುಂಭಾಗ ಆಯೋಜಿಸಿದ್ದ, ದಸರಾ ರಂಗೋಲಿ ಸ್ಪರ್ಧೆಗೆ ಶಾಸಕ ಆರ್. ರಾಮದಾಸ್ ಚಾಲನೆ ನೀಡಿದರು. ಇಲ್ಲಿ ಮಹಿಳೆಯರು ಚಿತ್ತಾರಗಳನ್ನು ತುಂಬಿದ ರಂಗೋಲಿಗಳನ್ನು ಬಿಡಿಸುವ ಮೂಲಕ ಅರಮನೆಯ ಆವರಣವನ್ನು ವರ್ಣರಂಚಿತಗೊಳಿಸಿದರು.
4
-
5
-
6
-
7
- ಇನ್ನೊಂದೆಡೆ ಜಗನ್ಮೋಹನ ಅರಮನೆಯಲ್ಲಿ ಮಕ್ಕಳಿಗಾಗಿ ನಡೆಯುತ್ತಿರುವ ಚಿಣ್ಣರ ದಸರಾಗೆ ವಿ.ಸೋಮಣ್ಣ ಚಾಲನೆ ನೀಡಿದರು. ಮಹಿಳಾ ದಸರಾಗೆ ಬಂದರೆ ಅಲ್ಲಿ ಹಾಲಿ ಮಾಜಿ ಎಂದು ಬಿಜೆಪಿಯ ಮಹಿಳೆಯರು ಹಾಗೂ ಸಚಿವರು ಗರಂ ಆಗಿದರು. ಜೆಕೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ದಸರಾದ ಬ್ಯಾನರ್ ಅಲ್ಲಿ ಮಾಜಿ ಸಚಿವೆ ಉಮಾಶ್ರೀ ಫೋಟೋ ಇದ್ದ ಕಾರಣ ಸಚಿವ ಸೋಮಣ್ಣ ಮತ್ತು ಬಿಜೆಪಿಯ ಮಹಿಳೆಯರು ಗರಂ ಆಗಿದರು.
8
-
9
-
10
-
11
- ಒಂದು ಕಡೆ ಮೈಸೂರಿನಲ್ಲಿ ದಸರಾ ಕಾರ್ಯಕ್ರಮಗಳ ಮೂಲಕ ಮನರಂಜನೆ ದೊರೆಯುತ್ತಿದ್ರೆ, ಇನ್ನೊಂದೆಡೆ ಆಹಾರ ಮೇಳದಲ್ಲಿ ನೋಡುಗರ ಬಾಯಲ್ಲಿ ನೀರೂರಿಸುವ ಹಾಗೂ ಬಿದ್ದು ನಕ್ಕು ನಲಿಯುವ ಸ್ಪರ್ಧೆಗಳು ನಡೆದವು. ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆಹಾರ ಮೇಳದಲ್ಲಿ ಅತ್ತೆ-ಸೊಸೆ ಜೋಡಿ ಅಡುಗೆ ಮಾಡುವ ಸ್ಪರ್ಧೆ ಕಮಾಲ್ ಮಾಡಿತು. ಅತ್ತೆ-ಸೊಸೆಯರಿಬ್ಬರು ಕೂಡಿಗೊಂಡು ಅಕ್ಕಿ ರೊಟ್ಟಿ ಮತ್ತು ಎಣಗಾಯಿ ಪಲ್ಯ ಮಾಡುತ್ತಿದ್ದು, ಎಲ್ಲರ ಬಾಯಲ್ಲಿ ನೀರೂರಿಸುವಂತೆ ಇತ್ತು.
12
-
13
-
14
-
15
- ಮಹಿಳೆಯರಿಗಾಗಿಯೇ ಆಯೋಜಿಸಿದ್ದ ಇಡ್ಲಿ ತಿನ್ನುವ ಸ್ಪರ್ಧೆ ನೋಡುಗರು ನಕ್ಕು ನಲಿಯುವುದರ ಜೊತೆಗೆ ಬಾಯಿಯ ಮೇಲೆ ಬೆರಳಟ್ಟುಕೊಳ್ಳುವ ಹಾಗೆ ಮಾಡಿತು. ಈ ಸ್ಪರ್ಧೆಯಲ್ಲಿ 60 ವರ್ಷದ ಅಜ್ಜಿ ಸರೋಜಮ್ಮ ಒಂದೇ ನಿಮಿಷದಲ್ಲಿ 6 ಇಡ್ಲಿ ತಿನ್ನುವ ಮೂಲಕ ಮೊದಲ ಸ್ಥಾನ ಪಡೆದುಕೊಂಡರು.
16
-
17
- ದಸರಾ ಮಹೋತ್ಸವ ಮೈಸೂರಿಗೆ ವಿಶೇಷ ಮೆರಗನ್ನು ನೀಡುತ್ತಿದ್ದು, ಹಗಲಿನ ವೇಳೆ ವಿವಿಧ ಕಾರ್ಯಕ್ರಮಗಳ ಮೂಲಕ ಜನರನ್ನು ರಂಜಿಸುತ್ತಿದ್ರೆ, ರಾತ್ರಿಯ ವೇಳೆ ವಿದ್ಯುತ್ ಅಲಂಕಾರದ ಮೂಲಕ ಕೈಲಾಸವೇ ಧರೆಗಿಳಿದಂತೆ ಬಾಸವಾಗುತ್ತಿದೆ. ಈ ರಂಗು ಇನ್ನೂ ಎಂಟು ದಿನಗಳ ಕಾಲ ಮೈಸೂರನ್ನು ಗತಕಾಲಕ್ಕೆ ಕರೆದೊಯ್ಯಲಿದೆ.
18
-
19
-
20
-
21
-
22
-
 
 
 
 
 
 
 
 
 
 
 
 
 
 
 
 
 
 
 
 
 
 
 
PublicTV_World/0065c643.txt DELETED
@@ -1,14 +0,0 @@
1
- ಚಿತ್ರದುರ್ಗ:ದಾಖಲೆ ಇಲ್ಲದೆ ಚಿತ್ರದುರ್ಗದಿಂದ (Chitradurga) ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಬರೋಬ್ಬರಿ 8 ಕೋಟಿ ರೂ. ಹಣವನ್ನು (Money)  ಹೊಳಲ್ಕೆರೆ ಪೊಲೀಸರು (Holalkere Police) ಜಪ್ತಿ ಮಾಡಿದ್ದಾರೆ.
2
-
3
- ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಇನೋವಾ ಕಾರಿನಲ್ಲಿ ತೆರಳುತಿದ್ದ ಚಾಲಕ ಸಚಿನ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾರಿನಲ್ಲಿ ತಂಬಾಕು ಚೀಲಗಳಲ್ಲಿ ತುಂಬಲಾಗಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.
4
-
5
-
6
-
7
- ಈ ಹಣ ಚಿತ್ರದುರ್ಗದ ಅಡಿಕೆ ವರ್ತಕರಿಗೆ ಸೇರಿದ್ದು ಎಂಬ ಅನುಮಾನವಿದ್ದು, ಖಚಿತ ಮಾಹಿತಿಗಾಗಿ ಆದಾಯ ತೆರಿಗೆ ಅಧಿಕಾರಿಗಳಿಗೆ ಈ ಮಾಹಿತಿಯನ್ನು ನೀಡಲಾಗಿದೆ. ವಿಚಾರಣೆ ಬಳಿಕ ಈ ಹಣ ಯಾರಿಗೆ ಸೇರಿದ್ದು ಹಾಗೂ ಯಾವ ಕಾರಣಕ್ಕೆ ಸಾಗಿಸಲಾಗುತ್ತಿತ್ತು ಎಂಬುದು ತಿಳಿಯಲಿದೆ ಎಂದು ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ:ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿಯ ದರ್ಶನಕ್ಕೆ ಪ್ರಾಯೋಗಿಕ ಹಾರಾಟ
8
-
9
-
10
-
11
- ಜಪ್ತಿಯಾಗಿರುವ ಭಾರೀ ಮೊತ್ತದ ಹಣ ಎಣಿಕೆ ಕಾರ್ಯವನ್ನು ಹೊಳಲ್ಕೆರೆ ಪೊಲೀಸರು ಕೈಗೊಂಡಿದ್ದಾರೆ. ಈ ಪ್ರಕರಣ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಇದನ್ನೂ ಓದಿ:ಗೆಳೆಯನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ ಹೋಗಿದ್ದ ಅಂಜು ತವರಿಗೆ ವಾಪಸ್
12
-
13
-
14
-
 
 
 
 
 
 
 
 
 
 
 
 
 
 
 
PublicTV_World/0066074f.txt DELETED
@@ -1,16 +0,0 @@
1
- ಹಾಸನ:ಮ್ಯಾಕ್ಸಿ ಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದ ಆಲೂರು ಪಟ್ಟಣದ ಕೆಇಬಿ ಸರ್ಕಲ್‍ನಲ್ಲಿ ನಡೆದಿದೆ.
2
-
3
- 7 ವರ್ಷದ ಸಮರ್ಥ್ ಅಪಘಾತದಲ್ಲಿ ಮೃತಪಟ್ಟ ಬಾಲಕ. ಸಮರ್ಥ್ ಹಾಸನದ ಸಂಗಮೇಶ್ವರ ಬಡಾವಣೆಯ ರೂಪಾ ಎಂಬವರ ಪುತ್ರ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಸಮರ್ಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
4
-
5
- ಈ ಬಗ್ಗೆ ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
6
-
7
-
8
-
9
-
10
-
11
-
12
-
13
-
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/0067bf85.txt DELETED
@@ -1,10 +0,0 @@
1
- ಕಾರವಾರ:ಗಾಯದ ನೋವು ತಾಳಲಾರದೆ ಕೋತಿಯೊಂದು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಂಡು ತೆರಳಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.
2
-
3
- ದಾಂಡೇಲಿಯ ನರ್ಸಿಂಗ್ ಹೋಂಗೆ ಬಂದ ಕೋತಿಯು ಬೆನ್ನು ಉಜ್ಜಿಕೊಳ್ಳತೊಡಗಿತ್ತು. ಆದರೆ ಕೋತಿ ಕಂಡು ಹೆದರಿದ ಸಿಬ್ಬಂದಿ ಕೋಲು ಹಿಡಿದು ಓಡಿಸಲು ಪ್ರಯತ್ನಿಸಿದರು. ಇಷ್ಟಾದರೂ ಬೆನ್ನು ಉಜ್ಜಿಕೊಳ್ಳುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಗಾಯಗೊಂಡ ಕೋತಿಗೆ ಚಿಕಿತ್ಸೆ ನೀಡಲು ಮುಂದಾದರು.
4
-
5
-
6
-
7
- ಕೋತಿಯನ್ನು ಎತ್ತಿಕೊಂಡು ಕಟ್ಟೆಯ ಮೇಲೆ ಕೂರಿಸಿ ಔಷಧಿ ಹಚ್ಚಿದರು. ಈ ವೇಳೆಯೂ ಕೋತಿ ಯಾರಿಗೂ ಏನು ಮಾಡದೇ ಸುಮ್ಮನೆ ಕುಳಿತು ಚಿಕಿತ್ಸೆಗೆ ಸ್ಪಂದಿಸಿತ್ತು. ಇದು ನೆರೆದವರ ಅಚ್ಚರಿಗೂ ಕಾರಣವಾಗಿತ್ತು. ಚಿಕಿತ್ಸೆ ಬಳಿಕ ಕೋತಿ ಅಲ್ಲಿಂದ ತೆರಳಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.
8
-
9
-
10
-
 
 
 
 
 
 
 
 
 
 
 
PublicTV_World/006b0e2b.txt DELETED
@@ -1,14 +0,0 @@
1
- ಮಂಗಳೂರು: ರಸ್ತೆ ದಾಟುತಿದ್ದ ಮಹಿಳೆಗೆ (Woman) ಆಟೋ ರಿಕ್ಷಾ (Auto Rickshaw) ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ (Dakshina Kannada)  ಜಿಲ್ಲೆಯ ಮುಲ್ಕಿ (Mulki) ತಾಲೂಕಿನ ಕಿನ್ನಿಗೋಳಿಯ ರಾಮನಗರ ಬಳಿ ನಡೆದಿದೆ.
2
-
3
- ರಾಜರತ್ನಪುರ ನಿವಾಸಿ ಚೇತನಾ (35) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಮಹಿಳೆ ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆತರಲು ಬಂದಿದ್ದರು. ಪಿಗ್ಮಿ ಕಲೆಕ್ಷನ್ ಮುಗಿಸಿ ಚೇತನಾ ಟ್ಯೂಶನ್ ಸೆಂಟರ್‌ನತ್ತ ಬಂದಿದ್ದ ವೇಳೆ ಅಪಘಾತ ಸಂಭವಿಸಿದೆ.ಇದನ್ನೂ ಓದಿ:ಹರಿಯಾಣ ಚುನಾವಣೆ ಸ್ಪರ್ಧೆಗೆ ವಿನೇಶ್‌ ಫೋಗಟ್‌ಗೆ ಕಾಂಗ್ರೆಸ್‌ ಟಿಕೆಟ್‌
4
-
5
- ಟ್ಯೂಶನ್ ಸೆಂಟರ್ ಬಳಿ ಬಂದ ಚೇತನಾ ಏಕಾಏಕಿ ರಸ್ತೆ ದಾಟಲು ಮುಂದಾಗಿದ್ದರು. ಈ ವೇಳೆ ಕಟೀಲಿನಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದ್ದು, ಘಟನೆ ನಡೆದ ತಕ್ಷಣ ಆಟೋ ಎತ್ತಿ ತಾಯಿಯನ್ನು ಮಗಳು ಮೇಲಕ್ಕೆತ್ತಿದ್ದಾಳೆ.ಇದನ್ನೂ ಓದಿ:ಗಣೇಶನಿಗೆ ಮೊದಲ ಪೂಜೆ ಯಾಕೆ?
6
-
7
-
8
-
9
- ಘಟನೆಯಲ್ಲಿ ಆಟೋ ಚಾಲಕ, ಪ್ರಯಾಣಿಕ ಸೇರಿ ಸ್ಥಳದಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.ಇದನ್ನೂ ಓದಿ:Ganesh Chaturthi | ಗಣೇಶನಿಗೆ `ಏಕದಂತ’ ಹೆಸರು ಹೇಗೆ ಬಂತು? – ಇಲ್ಲಿದೆ ಪುರಾಣದ ಕಥೆ
10
-
11
- Advertisement
12
-
13
-
14
-
 
 
 
 
 
 
 
 
 
 
 
 
 
 
 
PublicTV_World/006df185.txt DELETED
@@ -1,22 +0,0 @@
1
- ಮಂಡ್ಯ:ಜಿಲ್ಲೆಯ ಬಸ್ ದುರಂತ ಪ್ರಕರಣ ಮನಕಲಕುವ ಕಥೆಯೊಂದು ಹೇಳುತ್ತಿದೆ. ಪ್ರಾಣದ ಹಂಗು ತೊರೆದು ಬಸ್‍ನೊಳಗಿದ್ದವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟ ಮೊಬೈಲ್ ವಿಡಿಯೋವೊಂದು ವೈರಲ್ ಆಗುತ್ತಿದೆ.
2
-
3
- ನವೆಂಬರ್ 24 ರಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ನಾಲೆಗೆ ಬಸ್ ಉರುಳಿ 30 ಜನ ಮೃತಪಟ್ಟಿದ್ದರು. ಬಸ್ ಬಿದ್ದ ವಿಷಯ ತಿಳಿದು ರಕ್ಷಣೆಗೆ ಧಾವಿಸಿದ ಗ್ರಾಮಸ್ಥರ ಪ್ರಾರಂಭದ ವಿಡಿಯೋ ವೈರಲ್ ಆಗಿದೆ.
4
-
5
-
6
-
7
- ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಆಗಮಿಸುವ ಮುನ್ನವೇ ಗ್ರಾಮಸ್ಥರು ನಾಲೆ ಬಳಿ ಆಗಮಿಸಿದ್ದರು. ಬಸ್‍ನಲ್ಲಿದ್ದವರನ್ನು ಉಳಿಸಲು ಪ್ರಾಣದ ಹಂಗು ತೊರೆದು ಸ್ಥಳೀಯರು ನಾಲೆಗೆ ಧುಮುಕಿದ್ದರು. ಬಸ್‍ನಲ್ಲಿದ್ದವರನ್ನು ಮೇಲೆತ್ತಲು ಸ್ಥಳೀಯರು ಹಗ್ಗವಿಲ್ಲದೆ ತಮ್ಮ ಪಂಚೆ, ವೇಲ್, ಬಟ್ಟೆಗಳನ್ನೆ ಬಿಚ್ಚಿ ಹಗ್ಗದ ರೀತಿ ಬಳಸಿದ್ದಾರೆ.
8
-
9
- ನೀರಿನಲ್ಲಿ ಬಿದ್ದವರ ಪೂರ್ವಾಪರ ತಿಳಿಯದಿದ್ದರೂ ತಮ್ಮ ಮನೆಯವರನ್ನೇ ಕಳೆದುಕೊಂಡ ರೀತಿ ರಕ್ಷಣಾ ಕಾರ್ಯದಲ್ಲಿ ಗ್ರಾಮಸ್ಥರು ತೊಡಗಿದ್ದರು. ಅಯ್ಯೋ ಬನ್ರೋ ಮಾರಾಯ. ಹಗ್ಗ ಏನಾದ್ರು ತನ್ನಿ. ಪಂಚೆ ಎಸೆಯಿರಿ ಎಂದು ಕೂಗುತ್ತ ನಾಲೆಗೆ ಧುಮುಕಿ ಬಸ್‍ನೊಳಗಿದ್ದವರನ್ನು ಮೇಲೆತ್ತುತ್ತಿರುವ ವಿಡಿಯೋ ವೈರಲ್ ಆಗಿದೆ.
10
-
11
-
12
-
13
-
14
-
15
- ಒಬ್ಬರನ್ನು ಮೇಲೆತ್ತುತ್ತಿದ್ದಂತೆ ಅಯ್ಯೋ ಎಲ್ಲ ಸತ್ತೋಗವ್ರೇ. ಮಕ್ಕಳನ್ನಾದ್ರು ಇಸ್ಕೊಳ್ಳಿ, ಅಯ್ಯಯ್ಯಪ್ಪೋ ಎಂದು ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ. ಸತ್ತವರನ್ನು ಬದುಕಿಸಲಾಗದಿದ್ರೂ, ಬದುಕಿಸಲು ಯತ್ನಿಸಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ.
16
-
17
- ವೈರಲ್ ಆಗಿರೋ ವಿಡಿಯೋದಲ್ಲಿ ಗ್ರಾಮಸ್ಥರ ಮಾನವೀಯತೆ, ಬಸ್‍ನೊಳಗಿದ್ದವರನ್ನು ಮನೆ ಮಕ್ಕಳಂತೆ ರಕ್ಷಿಸಲು ಯತ್ನಿಸಿ ಮರುಗುತ್ತಿರುವುದನ್ನು ನೋಡಿ ಮಂಡ್ಯ ಜನತೆ ಭಾವುಕರಾಗುತ್ತಿದ್ದಾರೆ. ಬಸ್ ದುರಂತದಲ್ಲಿ ಓರ್ವ ಶಾಲಾ ಬಾಲಕ ರೋಹಿತ್ ಮತ್ತು ಯುವಕ ಗಿರೀಶ್ ನನ್ನು ಮಾತ್ರ ಬದುಕಿಸುವಲ್ಲಿ ಗ್ರಾಮಸ್ಥರು ಯಶಸ್ವಿಯಾಗಿದ್ದರು.
18
-
19
- ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv ,ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ:play.google.com/publictv
20
-
21
-
22
-
 
 
 
 
 
 
 
 
 
 
 
 
 
 
 
 
 
 
 
 
 
 
 
PublicTV_World/00706c05.txt DELETED
@@ -1,18 +0,0 @@
1
- ಗದಗ:ಕೊರೊನಾದಿಂದ ಸಾವನ್ನಪ್ಪಿದ್ದ ವೃದ್ಧೆಯ ತಿಥಿ ಕಾರ್ಯ ಮುಗಿದ ಬಳಿಕ ಮೃತದೇಹದ ಅಂತ್ಯಕ್ರಿಯೆ ಮಾಡಿದ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದ ಮಹಾ ಎಡವಟ್ಟು ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
2
-
3
- ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ 70 ವರ್ಷದ ವೃದ್ಧೆಗೆ ಪಾಶ್ವವಾಯು ಹಾಗೂ ಅನಾರೋಗ್ಯದ ಹಿನ್ನಲೆ ಜುಲೈ 15 ರಂದು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಜುಲೈ 18 ರಂದು ಕೊವಿಡ್-19 ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಎಂದು ದೃಢಪಟ್ಟ ವರದಿ ಬಂದಿದೆ. ನಂತರ ಜುಲೈ 20 ರಂದು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾಳೆ ಎಂದು ಆರೋಗ್ಯ ಇಲಾಖೆ ಕುಟುಂಬಕ್ಕೆ ಫೋನ್ ಮೂಲಕ ತಿಳಿಸಿದ್ದರು.
4
-
5
-
6
-
7
- ತಾಯಿ ಸಾವನ್ನಪ್ಪಿದ ಎಂದು ತಿಳಿಸಿದ ಆರೋಗ್ಯ ಇಲಾಖೆ ಅಂತ್ಯಕ್ರಿಯೆಯನ್ನು ಕೋವಿಡ್ ನಿಯಮಗಳ ಅನ್ವಯ ನೆರವೇರಿಸುತ್ತೇವೆ ಎಂದು ಕುಟುಂಬಸ್ಥರಿಗೆ ತಿಳಿಸಿತ್ತು. ಇದರಿಂದ ಮೃತ ವೃದ್ಧೆಯ ಮಗ ಪರಸಪ್ಪ ಗಡ್ಡದ ಅವರು ಜುಲೈ 28 ರಂದು 9ನೇ ದಿನದ ತಿಥಿ ಕಾರ್ಯ ಮಾಡಿ ಮುಗಿಸಿದ್ದರು. ಆದರೆ ಇದೆಲ್ಲಾ ಮುಗಿದ ಬಳಿಕ ಮತ್ತೆ ಜುಲೈ 30 ರಂದು ಮತ್ತೆ ಗದಗ ಜಿಮ್ಸ್ ಆಸ್ಪತ್ರೆಯಿಂದ ಕರೆ ಮಾಡಿ, ವೃದ್ಧೆಯ ಸ್ವಗ್ರಾಮ ನರೇಗಲ್ ಪಟ್ಟಣಕ್ಕೆ ಶವ ತಂದು ಕೋವಿಡ್ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ಮಾಡುತ್ತೇವೆ ಎಂದು ಹೇಳಿದ್ದರು.
8
-
9
- ಆರೋಗ್ಯ ಇಲಾಖೆಯ ಕರೆಯಿಂದ ಕುಟುಂಬಕ್ಕೆ ಶಾಕ್ ಆಗಿದ್ದು, ಜುಲೈ 20 ರಂದೇ ವೃದ್ಧೆ ಸಾವನ್ನಪ್ಪಿದ ಸಂದರ್ಭದಲ್ಲಿ ಈಗ ಮತ್ತೆ ಹೇಗೆ ಮೃತದೇಹ ತರುತ್ತೀರಿ ಎಂದು ಕುಟುಂಬಸ್ಥರು ಪ್ರಶ್ನೆ ಮಾಡಿದ್ದಾರೆ. ಆದರೆ ಕುಟುಂಬಸ್ಥರ ಪ್ರಶ್ನೆಗೆ ಆರೋಗ್ಯ ಇಲಾಖೆ ಸರಿಯಾದ ಉತ್ತರ ನೀಡದೆ ಅವಾಜ್ ಹಾಕಿದ್ದಾರೆ.
10
-
11
-
12
-
13
- ಎಲ್ಲದರ ನಡುವೆ ನರೇಗಲ್‍ನಲ್ಲಿ ಕೊನೆಗೂ ಕೋವಿಡ್-19 ನಿಯಮದ ಪ್ರಕಾರ ಅಂತ್ಯಕ್ರಿಯೆ ಮಾಡಲಾಯಿತು. ಮುಖ ನೋಡಲು ಬಿಡದೆ ಬೇರೆ ಯಾರದ್ದೋ ಮೃತದೇಹ ತಂದು ಸಿಬ್ಬಂದಿ ಅಂತ್ಯಕ್ರಿಯೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಆದರೆ ಇತ್ತ ಸರಿಯಾದ ಮಾಹಿತಿ ನೀಡದ ಜಿಮ್ಸ್ ಆಸ್ಪತ್ರೆ, ಆರೋಗ್ಯ ಇಲಾಖೆ, ಜಿಲ್ಲಾಡಳಿತ ಬೇಜವಾಬ್ದಾರಿತನದ ವಿರುದ್ಧ ಮೃತ ವೃದ್ಧೆಯ ಮಗ ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿದ್ದಾರೆ.
14
-
15
-
16
-
17
-
18
-
 
 
 
 
 
 
 
 
 
 
 
 
 
 
 
 
 
 
 
PublicTV_World/0070ce25.txt DELETED
@@ -1,24 +0,0 @@
1
- ಬೆಂಗಳೂರು:ಸಹಜ ಸಾವು ಎಂದು ತಿಳಿದು ಮಹಿಳೆಯ ಅಂತ್ಯಸಂಸ್ಕಾರ ಮಾಡಲಾಗಿದ್ದ ಪ್ರಕರಣಕ್ಕೆ ಆಕೆಯ ಮಗು ಹೇಳಿದ ಭಯಾನಕ ಸತ್ಯದಿಂದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
2
-
3
- ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವೆಂಕಟೇಶ್ (28) ಎಂಬಾತ 30 ವರ್ಷದ ಗೃಹಿಣಿ ಸುಮಲತಾಳನ್ನು ಆಕೆಯ ಮಗುವಿನ ಮುಂದೆಯೇ ಕೊಲೆ ಮಾಡಿದ್ದಾನೆ. ನಂತರ ಯಾರಿಗೂ ಹೇಳಬೇಡ ಎಂದು ಮಗುವಿಗೆ ಹೇಳಿ ಪರಾರಿಯಾಗಿದ್ದ. ಆದರೆ ಅಪ್ಪನ ಜೊತೆ ಮಗು ಹೇಳಿದ ಒಂದು ಸತ್ಯದಿಂದ ಆರೋಪಿ ವೆಂಕಟೇಶ್ ಪೊಲೀಸರ ಅತಿಥಿಯಾಗಿದ್ದಾನೆ.
4
-
5
-
6
-
7
- ಸುಮಲತಾ ಆರು ವರ್ಷದ ಹಿಂದೆ ಆನೇಕಲ್ ತಾಲೂಕಿನ ಚಿನ್ನಯ್ಯನ ಪಾಳ್ಯದ ದೇವರಾಜು ಎಂಬುವನೊಂದಿಗೆ ಮದುವೆಯಾಗಿ ಸಂಸಾರ ಮಾಡುತ್ತಿದ್ದಳು. ಈಕೆಗೆ 5 ವರ್ಷ, 3 ವರ್ಷದ ಎರಡು ಗಂಡು ಮಕ್ಕಳಿದ್ದು ಅಕ್ಟೋಬರ್ 16 ರಂದು ಬೆಳಿಗ್ಗೆ ಪತಿ ದೇವರಾಜುಗೆ ಕರೆ ಮಾಡಿ ಎದೆ ನೋವು ಅಂದಿದ್ದಾಳೆ. ಜೊತೆಗೆ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿದ್ದಾಳೆ. ಮತ್ತೆ ರಾತ್ರಿ ಗಂಡನೊಂದಿಗೆ ಫೋನ್‍ನಲ್ಲಿ ಮಾತನಾಡಿ ಮಲಗಿದ್ದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಮಕ್ಕಳು ಅಳುತ್ತಿರುವುದನ್ನು ಕಂಡು ಒಂದು ನೋಡಿದಾಗ ಸುಮಲತಾ ಮೃತಪಟ್ಟಿದ್ದಳು.
8
-
9
- ಇತ್ತ ಪತಿ ದೇವರಾಜುಗೆ ಗ್ರಾಮಸ್ಥರು ವಿಷಯ ತಿಳಿಸಿದ್ದು, ದೇವರಾಜು ನಿನ್ನೆ ಎದೆನೋವು ಅಂದಿದ್ದಳು ಎಂದಿದ್ದಾನೆ. ಗ್ರಾಮಸ್ಥರು ಹೃದಯಾಘಾತದಿಂದ ಸಾವನಪ್ಪಿದ್ದಾಳೆ ಎಂದು ತಿಳಿದು ಗ್ರಾಮಸ್ಥರೆಲ್ಲ ಸೇರಿ ಅಂತ್ಯಸಂಸ್ಕಾರ ನಡೆಸಿದ್ದಾರೆ. ಅಂತ್ಯಸಂಸ್ಕಾರ ನಡೆದ ರಾತ್ರಿ ಮಗುವನ್ನು ಸೀರೆ ಜೋಲಿಗೆ ಮಲಗಿಸಲು ಮುಂದಾದಾಗ ಜೋಲಿ ನೋಡಿ ಮಗು ಮಾಮ ಅಮ್ಮನಿಗೆ ಹೊಡೆದಿದ್ದಾರೆ ಎಂದು ಹೇಳಿದೆ. ತಕ್ಷಣ ಪತಿ ದೇವರಾಜು ಮತ್ತವರ ತಂದೆ ತಾಯಿ ಪಕ್ಕದ ಮನೆಯಲ್ಲಿ ವಾಸವಿದ್ದ ವೆಂಕಟೇಶ್ (28) ಎಂಬುವವನ ಮೇಲೆ ಆನೇಕಲ್ ಪೊಲೀಸರಿಗೆ ದೂರು ನೀಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
10
-
11
-
12
-
13
- ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ವೆಂಕಟೇಶನನ್ನು ಬಂಧಿಸಿ ಹೂತಿದ್ದ ಶವ ಹೊರತೆಗೆದು ಮಹಜರ್ ನಡೆಸಿ ಶವ ಪರೀಕ್ಷೆ ನಡೆಸಿದ್ದಾರೆ. ಸುಮಲತಾ ದೇವರಾಜು ಮದುವೆ ಆದ ನಂತರ ಚಿಣ್ಣಯ್ಯನಪಾಳ್ಯದಲ್ಲಿ ವಾಸವಿದ್ದರು. ದೇವರಾಜು ವೃತ್ತಿಯಲ್ಲಿ ಚಾಲಕನಾಗಿದ್ದು, ಕೆಲಸದ ಮೇಲೆ ಹೊರ ಹೋದ್ರೆ ತಿರುಗಿ ಬರುತಿದ್ದದ್ದು ಮೂರ್ನಾಲ್ಕು ದಿನ ಅಥವಾ ವಾರಗಳೇ ಕಳೆಯುತಿತ್ತು. ಈ ವೇಳೆ ದೇವರಾಜನ ದೂರದ ಸಂಬಂಧಿ ಆನೇಕಲ್ ತಾಲೂಕಿನ ಚಿಕ್ಕಹಾಗಡೆ ಗ್ರಾಮದ ವೆಂಕಟೇಶ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ ದೇವರಾಜು ಮನೆಯ ಪಕ್ಕದಲ್ಲೇ ವಾಸಕ್ಕೆ ಬಂದಿದ್ದ.
14
-
15
- ಇತ್ತ ವಾರಗಟ್ಟಲೆ ಮನೆಯಿಂದ ಹೊರಗಿರುತ್ತಿದ್ದ ದೇವರಾಜು ವೆಂಕಟೇಶನನ್ನು ನಂಬಿ ಮನೆ ಕಡೆ ಸ್ವಲ್ಪ ನೋಡುಕೊಳ್ಳುವಂತೆ ತಿಳಿಸಿದ್ದ. ಮೊದಲಿಗೆ ಸಭ್ಯನಂತೆ ಇದ್ದ ವೆಂಕಟೇಶ ಸುಮಲತಾಳನ್ನು ಬಲೆಗೆ ಹಾಕಿಕೊಂಡಿದ್ದ. ಇತ್ತ ಗಂಡ ಹೊರಗೆ ಹೆಚ್ಚು ಇರುತ್ತಿದ್ದರಿಂದ ವೆಂಕಟೇಶನ ಸಹವಾಸ ಸುಮಲತಾಳಿಗೆ ಹಿತವಾಗಿತ್ತು. ಇನ್ನು ಕಾಲ ಕಳೆದಂತೆ ಇವರ ಸಂಬಂಧ ಜಗಜ್ಜಾಹೀರಾಗಿ ರಾಜಿ ಪಂಚಾಯಿತಿ ನಡೆದು ವೆಂಕಟೇಶನನ್ನು ಊರು ಬಿಡಿಸಲಾಗಿತ್ತು. ನಂತರ ಸುಮಲತಾ ಕೂಡ ಹಿರಿಯರ ಮಾತಿಗೆ ಬೆಲೆಕೊಟ್ಟು ಗಂಡನೊಂದಿಗೆ ಅನ್ಯೋನ್ಯವಾಗಿದ್ದಳು.
16
-
17
-
18
-
19
- ವೆಂಕಟೇಶ್ ಮಾತ್ರ ದೇವರಾಜು ಕೆಲಸಕ್ಕೆ ಹೋಗುವುದನ್ನು ನೋಡಿಕೊಂಡು ಮನೆಗೆ ಬಂದು ಸುಮಲತಾಳಿಗೆ ಗಂಡನನ್ನು ಬಿಟ್ಟು ಬರುವಂತೆ ಹಿಂಸಿಸತೊಡಗಿದ. ಹೀಗೆ ಆಕ್ಟೋಬರ್ 16 ರಂದು ರಾತ್ರಿ ಸುಮಲತಾಳ ಮನೆಗೆ ಕಬಾಬ್ ತೆಗೆದುಕೊಂಡು ಬಂದು ತನ್ನೊಂದಿಗೆ ಬರುವಂತೆ ಪೀಡಿಸಿದ್ದ. ಸುಮಲತಾ ಒಪ್ಪದಕ್ಕೆ ಮಗು ಮಲಗಿಸುವ ಸೀರೆಯ ಜೋಳಿಯಿಂದ ಕುತ್ತಿಗೆ ಬಿಗಿದು ಸಾಯಿಸಿ ಮಗುವಿಗೆ ಯಾರಿಗೂ ಹೇಳದಂತೆ ತಿಳಿಸಿ ಹೋಗಿ ತಲೆ ಮರೆಸಿಕೊಂಡಿದ್ದ.
20
-
21
- ಕೊಲೆಗಾರ ಎಷ್ಟೇ ಬುದ್ಧಿವಂತನಾಗಿದರೂ ಸಣ್ಣದೊಂದು ಸುಳಿವು ಬಿಟ್ಟಿರುತ್ತಾನೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದ್ದು, ಐದು ವರ್ಷದ ಮಗು ತನ್ನ ತಾಯಿಯ ರಹಸ್ಯ ಬಯಲು ಮಾಡಿ ಕೊಲೆ ಆರೋಪಿಯ ಬಂಧನಕ್ಕೆ ಕಾರಣವಾಗಿದೆ. ಸಹಜ ಸಾವೆಂದು ಸುಮನಿದ್ದವರಿಗೆ ಮಗುವಿನ ಮೂಲಕ ಸತ್ಯ ತಿಳಿದು ಗ್ರಾಮಸ್ಥರಿಗೆ ಶಾಕ್ ಆಗಿದೆ.
22
-
23
-
24
-
 
 
 
 
 
 
 
 
 
 
 
 
 
 
 
 
 
 
 
 
 
 
 
 
 
PublicTV_World/0071b842.txt DELETED
@@ -1,16 +0,0 @@
1
- ಮಡಿಕೇರಿ:ಹುಲಿ ಕಾಡು ಪ್ರಾಣಿ. ಅದು ಕಾಡಿಗೆ ಹೋಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸದೆ ತಿರುಗೇಟು ನೀಡಿದ್ದಾರೆ.
2
-
3
- ಹುಲಿ ಕಾಡು ಪ್ರಾಣಿ. ಅದು ಕಾಡಿಗೆ ಹೋಗಬೇಕು. ಆ ಮೂಲಕ ರಾಜ್ಯವನ್ನು ಕಾಡು ಪ್ರಾಣಿಗಳಿಂದ ರಕ್ಷಿಸಬೇಕಾಗಿದೆ ಎಂದು ತಿರುಗೇಟು ನೀಡಿದರು. ನಾವು ಯಾರಿಗೂ ಹುಲಿ ಅನ್ನೋ ಬಿರುದು ಕೊಟ್ಟಿಲ್ಲ. ಆದರೆ ಕೆಲವರು ಅವರೇ ಸ್ವಯಂ ಘೋಷಿತ ಹುಲಿಗಳಾಗಿದ್ದಾರೆ ಎಂದರು.
4
-
5
-
6
-
7
- ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಿದ್ದರಾಮಯ್ಯ ಮತ್ತು ಡಿಕೆಶಿಯೇ ನೇರ ಹೊಣೆ ಎಂದು ಗಂಭೀರ ಆರೋಪ ಮಾಡಿದರು. ಬಂಡೆ ದೊಡ್ಡದ ಅಥವಾ ಹುಲಿ ದೊಡ್ಡದಾ ಎನ್ನೋ ಗುದ್ದಾಟ ಕಾಂಗ್ರೆಸ್ ನಲ್ಲಿ ಶುರುವಾಗಿದೆ. ಈ ಗುದ್ದಾಟದ ಭಾಗವಾಗಿ ಅವರದ್ದೇ ಶಾಸಕರ ಮನೆಗೆ ಬೆಂಕಿ ಹಾಕಲಾಗಿದೆ.
8
-
9
-
10
-
11
- ಮಾಜಿ ಮೇಯರ್ ಸಂಪತ್ ರಾಜ್ ಡಿಕೆಶಿ ಹಿಂದೆ ಬಂದವರು. ಅಖಂಡ ಶ್ರೀನಿವಾಸಮೂರ್ತಿ ಅವರು ಸಿದ್ದರಾಮಯ್ಯ ಅವರ ಹಿಂದೆ ಬಂದವರು. ಇವರ ಜಗಳದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬಿದ್ದಿತ್ತು. ಹೀಗಾಗಿ ಅಖಂಡ ಶ್ರೀನಿವಾಸ್ ಮೂರ್ತಿ ಸಂಪತ್ ರಾಜ್ ಅವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದರು. ಪೊಲೀಸ್ ತನಿಖೆ ಡಿಕೆಶಿ ಮತ್ತು ಸಿದ್ದರಾಮಯ್ಯನವರ ಜಗಳವೇ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಾಟೆಗೆ ಕಾರಣ ಎನ್ನೋದನ್ನು ಬಯಲುಗೊಳಿಸಿದೆ ಎಂದರು.ಇದನ್ನೂ ಓದಿ:ಸಿದ್ದರಾಮಯ್ಯಗೆ ಧಮ್ ಇದ್ರೆ ಚಿದಂಬರಂ ಮುಂದೆ ನಿಂತು ಮಾತಾಡಲಿ – ಕಟೀಲ್ ಟಾಂಗ್
12
-
13
-
14
-
15
-
16
-
 
 
 
 
 
 
 
 
 
 
 
 
 
 
 
 
 
PublicTV_World/007255a0.txt DELETED
@@ -1,20 +0,0 @@
1
- ಬೆಂಗಳೂರು:ಶಾಸಕ ಬಿ ವೈ ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಸೋಮವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
2
-
3
- ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ, ನಿಕಟಪೂರ್ವ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ. ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು ಬಹಳ ಸಂತೋಷ ಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ ನಿನ್ನ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಣಯ ಮಾಡಿದ್ದಾಗಿ ಬೊಮ್ಮಾಯಿಯವರು ಹೇಳಿದ್ದಾರೆಂದು ತಿಳಿಸಿದರು.
4
-
5
- ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ@BSBommaiಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆಯಲಾಯಿತು. ವಿಶ್ರಾಂತಿಯಲ್ಲಿರುವ ತಾವು ಶೀಘ್ರವಾಗಿ ಚೇತರಿಸಿಕೊಂಡು ಪಕ್ಷ ಸಂಘಟನೆಗೆ ಸಕ್ರಿಯರಾಗಲೆಂದು ಹಾರೈಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಂ ಕೃಷ್ಣಪ್ಪನವರು, ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ…pic.twitter.com/hPfa7qSzfM
6
-
7
- — Vijayendra Yediyurappa (@BYVijayendra)November 13, 2023
8
-
9
-
10
-
11
- ಈ ನೇಮಕದಿಂದ ರಾಜ್ಯಕ್ಕೆ, ರಾಜ್ಯ ಬಿಜೆಪಿಗೆ (Karnataka BJP) ದೊಡ್ಡ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾಗಿ ವಿವರಿಸಿದರು. ನಾನಷ್ಟೇ ಅಲ್ಲ, ಹಿರಿಯರೆಲ್ಲರೂ ನಿನ್ನ ಜೊತೆ ಇರಲಿದ್ದೇವೆ. ಸಹಕಾರ ನೀಡುವ ಮತ್ತು ಮಾರ್ಗದರ್ಶನ ನೀಡುವ ಮಾತನಾಡಿದ್ದಾರೆ ಎಂದರು.ಇದನ್ನೂ ಓದಿ:ದೀಪಾವಳಿಗೆ ಭಾರತದ ಕಂಪನಿಗಳು ದೀರ್ಘ ರಜೆ ನೀಡಲ್ಲ ಯಾಕೆ – ಎಡೆಲ್ವೀಸ್ ಮ್ಯೂಚುವಲ್‌ ಫಂಡ್‌ ಸಿಇಒ ಪ್ರಶ್ನೆ
12
-
13
- ದೇಶದ ಭವಿಷ್ಯ ರೂಪಿಸುವ ಮುಂಬರುವ ಲೋಕಸಭಾ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ನಿನ್ನ ನೇತೃತ್ವದಲ್ಲಿ ಮಾಡೋಣ ಎಂದು ತಿಳಿಸಿದ್ದಾರೆ. ಇದೇ 15ರಂದು ಬುಧವಾರ ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ತಾವು ಬಂದು ಆಶೀರ್ವಾದ ಮಾಡಬೇಕೆಂದು ಕೋರಿದ್ದೇನೆ. ಕಾರ್ಯಕ್ರಮಕ್ಕೆ ಬರಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
14
-
15
-
16
-
17
- ಈ ವೇಳೆ ಬಿ.ವೈ.ವಿಜಯೇಂದ್ರ ಅವರನ್ನು ಬಸವರಾಜ ಬೊಮ್ಮಾಯಿ ಅವರು ಅಭಿನಂದಿಸಿ ಶುಭ ಹಾರೈಸಿದರು. ಶಾಸಕ ಕೃಷ್ಣಪ್ಪ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
18
-
19
-
20
-
 
 
 
 
 
 
 
 
 
 
 
 
 
 
 
 
 
 
 
 
 
PublicTV_World/00742bf4.txt DELETED
@@ -1,12 +0,0 @@
1
- ಕೊಪ್ಪಳ:ಮದುವೆ ಎನ್ನುವುದು ಎಲ್ಲರಿಗೂ ಮರೆಯಲಾಗದ ದಿನವಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಮದುವೆ ದಿನ ಕುಣಿದು ಕುಪ್ಪಳಿಸ್ತಾರೆ. ಆದರೆ ಕೊಪ್ಪಳದಲ್ಲಿ ಸಾಮೂಹಿಕ ವಿವಾಹದಲ್ಲಿ 51 ಜೋಡಿಗಳು ಜಗತ್ತೆ ಮೆಚ್ಚುವ ಕೆಲಸ ಮಾಡಿದ್ದಾರೆ.
2
-
3
- ಎಲ್ಲರ ಜೀವನದಲ್ಲೂ ಮದುವೆ ಎನ್ನುವುದು ಒಂದು ಸಂತಸದ ಕ್ಷಣ. ಮದುವೆಯ ಆ ಕ್ಷಣ ನೆನಪಿನಲ್ಲಿ ಉಳಿಯೋಕೆ ಕೆಲವರು ದಾಮ್ ದುಮ್ ಎಂದು ಖರ್ಚು ಮಾಡಿ ಮದುವೆ ಮಾಡಿಕೊಳ್ಳುತ್ತಾರೆ. ಆದರೆ ಕೊಪ್ಪಳದ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ನೆಡೆದ ಸಾಮೂಹಿಕ ಮದುವೆ ಎಲ್ಲರ ಗಮನ ಸೆಳೆಯಿತು. ಭಾನುವಾರ ಬರೋಬ್ಬರಿ 51 ನವ ಜೋಡಿಗಳು ಹಸೆಮಣೆ ಎರಿದರು. ಈ ವೇಳೆ ನವ ಜೀವನಕ್ಕೆ ಕಾಲಿಟ್ಟ ನವ ಜೋಡಿಗಳು ಸಾಮೂಹಿಕವಾಗಿ ನೇತ್ರದಾನದ ಶಪಥ ಮಾಡಿದರು.
4
-
5
-
6
-
7
- ಅಂಧರ ಬಾಳಿಗೆ ಬೆಳಕು ಕೊಡುವುದಕ್ಕೆ ನಿರ್ಧಾರ ಮಾಡಿದ ನವ ಜೋಡಿಗಳು ಮದುವೆಯ ಸಂದರ್ಭದಲ್ಲೆ ಇಂತಹದೊಂದು ನಿರ್ಣಯ ತೆಗೆದುಕೊಂಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಇನ್ನೂ ನಾವು ಸತ್ತ ಮೇಲೂ ಜಗತ್ತನ್ನೂ ನೋಡಬೇಕು ಅಂದರೆ ನೇತ್ರದಾನ ಮಾಡಬೇಕು ಎಂದು ನವ ಜಿವನಕ್ಕೆ ಕಾಲಿಟ್ಟ ವಧು ಹೇಳಿದ್ದರು.
8
-
9
- ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಸಾಮೂಹಿಕ ವಿವಾಹದಲ್ಲಿ ನವಜೋಡಿಗಳು ನೇತ್ರದಾನ ಶಪಥ ಮಾಡಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಯುವಕ ಸಂಘ, ಸಮರ್ಪಣಾ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ 51 ಜೋಡಿಗಳ ಸರಳ ಸಾಮೂಹಿಕ ವಿವಾಹದಲ್ಲಿ ಅಂಧರ ಬಾಳಿಗೆ ಬೆಳಕಾಗಲು ಮುಂದಾಗಿದ್ದಾರೆ. ದಾನದಲ್ಲಿ ಶ್ರೇಷ್ಠದಾನ ನೇತ್ರದಾನ, ಇಂತಹ ನೇತ್ರದಾನ ಮಾಡುವ ಮೂಲಕ ಈ ನವ ದಂಪತಿಗಳು ಸಮಾಜಕ್ಕೆ ಮಾದರಿಯಾಗಿದ್ದಾರೆ. ಪ್ರತಿ ವರ್ಷ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳುವ ಅಂಬೇಡ್ಕರ್ ಯುವಕ ಸಂಘ ಈ ಬಾರಿ ತುಸು ವಿಭಿನ್ನವಾಗಿ ಸಾಮಾಜಿಕ ಜಾಗೃತಿ ಕಾರ್ಯಕ್ರಮದ ಮೂಲಕ ಮದುವೆ ಮಾಡಿಕೊಟ್ಟರು. ಮದುವೆಯಾದ 51 ಜೋಡಿಗಳಿಗೆ ಸಸಿ ವಿತರಣೆ ಮಾಡಿ ಮದುವೆಯಲ್ಲಿ ಪರಿಸರ ಕಾಳಜಿ ಮೆರೆದಿದ್ದಾರೆ.
10
-
11
-
12
-
 
 
 
 
 
 
 
 
 
 
 
 
 
PublicTV_World/007436fc.txt DELETED
@@ -1,18 +0,0 @@
1
- ರಾಯಚೂರು:ನಗರಸಭೆ ಕೊನೆಗೂ ಎಚ್ಚೆತ್ತಿದ್ದು ನಗರದ ಕೆಲವು ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಕೊಡುವ ವ್ಯವಸ್ಥೆ ಮಾಡಿದೆ.
2
-
3
-
4
-
5
- ಕಲುಷಿತ ನೀರಿನಿಂದ ಈಗಾಗಲೇ ಆರು ಜನ ಸಾವನ್ನಪ್ಪಿದ್ದಾರೆ. ಈಗ ನಗರದಲ್ಲಿರುವ 16 ಜಿಎಸ್‍ಎಲ್‍ಆರ್ ಟ್ಯಾಂಕ್ ಹಾಗೂ 36 ಓವರ್ ಹೆಡ್ ಟ್ಯಾಂಕ್‍ಗಳಲ್ಲಿ 25 ಟ್ಯಾಂಕ್‍ಗಳ ಸ್ವಚ್ಚತಾ ಕಾರ್ಯ ನಡೆಸಿದ್ದಾರೆ. ಬೆಳಗಾವಿ, ಮಂಗಳೂರು ಸೇರಿ ವಿವಿಧೆಡೆಯಿಂದ ಕರೆಯಿಸಲಾಗಿರುವ ತಜ್ಞ ತಂಡದಿಂದ ಟ್ಯಾಂಕ್‍ಗಳ ಸ್ವಚ್ಚತಾ ಕಾರ್ಯ ನಡೆಸಲಾಗಿದೆ.ಇದನ್ನೂ ಓದಿ:ರಾಯಚೂರಿಗೆ ಕೊನೆಗೂ ಭೇಟಿ ನೀಡಿದ ಉಸ್ತುವಾರಿ ಸಚಿವ: ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಣೆ
6
-
7
-
8
-
9
- ರಾಂಪೂರ ಜಲಶುದ್ಧೀಕರಣ ಘಟಕ, ಶುದ್ಧವಾದ ಟ್ಯಾಂಕ್ ಹಾಗೂ ಮನೆಗಳಿಗೆ ಸರಬರಾಜು ಮಾಡಲಾಗುತ್ತಿರುವ ಮಾದರಿಗಳನ್ನ ನಿತ್ಯ ಪರಿಶೀಲನೆ ಮಾಡಿ ಜನರಿಗೆ ಶುದ್ಧ ನೀರು ಕೊಡುವ ಪ್ರಯತ್ನಕ್ಕೆ ನಗರಸಭೆ ಮುಂದಾಗಿದೆ. ಅಪಾಯದ ಮುನ್ಸೂಚನೆ ಸಿಕ್ಕಾಗಲೇ ನಗರಸಭೆ ಎಚ್ಚೆತ್ತಿದ್ದರೆ ಇಷ್ಟೊಂದು ಅವಾಂತರಗಳು ಸಂಭವಿಸುತ್ತಿರಲಿಲ್ಲ.
10
-
11
-
12
-
13
- ವಾಂತಿ-ಭೇದಿಯಿಂದ ದಾಖಲಾದವರಲ್ಲಿ ನೂರಾರು ಜನ ಇನ್ನೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮಸ್ಯೆ ಈಗ ಬಗೆಹರಿದಿದ್ದು, ಮುಂದೆ ಶುದ್ಧ ನೀರು ಪ್ರತಿ ಮನೆಗೂ ಸರಬರಾಜು ಮಾಡುತ್ತೇವೆ ಎಂದು ನಗರಸಭೆ ಆಡಳಿತ ಹಾಗೂ ಅಧಿಕಾರಿಗಳು ಹೇಳುತ್ತಿದ್ದಾರೆ.ಇದನ್ನೂ ಓದಿ:ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆ
14
-
15
-
16
-
17
-
18
-
 
 
 
 
 
 
 
 
 
 
 
 
 
 
 
 
 
 
 
PublicTV_World/00744dc3.txt DELETED
@@ -1,24 +0,0 @@
1
- ಬೆಂಗಳೂರು: ಶಾಸಕ ಮುನಿರತ್ನ (Muniratna) ಅವರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಮುನಿರತ್ನ ಅವರ ಮನವೊಲಿಸಿ ಉಪವಾಸ ಸತ್ಯಾಗ್ರಹ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಸದ್ಯ ಶಾಸಕರು ತಮ್ಮ ಉಪವಾಸ ಧರಣಿಯನ್ನು ಹಿಂಪಡೆದಿದ್ದಾರೆ.
2
-
3
- ಬಿಜೆಪಿ ಸರ್ಕಾರ ಇದ್ದಾಗ ಕೊಟ್ಟ ಅನುದಾನ ರದ್ದುಪಡಿಸಿ ಸೇಡಿನ ರಾಜಕೀಯ ಮಾಡಿದ್ದಾರೆ. ನಾನು ಸಿಎಂ ಜೊತೆ ಮಾತನಾಡುತ್ತೇನೆ. ಸಿಎಂ ಜೊತೆ ಮಾತನಾಡಿ ಇದನ್ನು ಸರಿ ಮಾಡುತ್ತೇನೆ. ಇದು ಮೇಲ್ನೋಟಕ್ಕೆ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಎಲ್ಲರಿಗೂ ಕೊಟ್ಟಂತೆ ಅನುದಾನ ಇವರಿಗೂ ಕೊಡಬೇಕು ನಾನು ಸಿಎಂ ಜೊತೆ ಮಾತನಾಡುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಇದನ್ನೂ ಓದಿ:ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ- ಬಾಲಕೃಷ್ಣ ಪರೋಕ್ಷ ಹೇಳಿಕೆಗೆ ಭಾರೀ ಆಕ್ರೋಶ
4
-
5
- ಬಿಎಸ್‌ವೈ ಭರವಸೆ ಹಿನ್ನೆಲೆ ಶಾಸಕರು ಧರಣಿ ಕೈಬಿಟ್ಟಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮುನಿರತ್ನ, ಫಲಿತಾಂಶ ಬಂದಾಗಿನಿಂದ ನನ್ನ ಕ್ಷೇತ್ರದಲ್ಲಿ ಒಬ್ಬ ಶಾಸಕನಾಗಿ ಕೆಲಸ ಮಾಡೋದು ಕಷ್ಟ ಆಗುತ್ತಿದೆ. ಪೊಲೀಸ್ ದೌರ್ಜನ್ಯ, ಅಧಿಕಾರಿಗಳ ಅಮಾನತು ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ:ದೇವರಮನೆ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದಾಗ ಯುವಕ ಕಣ್ಮರೆ
6
-
7
- 126 ಕೋಟಿ ರೂ. ಅನುದಾನ (Grant) ವಾಪಸ್ ಖಂಡಿಸಿ ಶಾಸಕ ಮುನಿರತ್ನ  ಹಾಗೂ ಅವರ ಬೆಂಬಲಿಗರು ಉಪವಾಸ ಧರಣಿ (Protest) ನಡೆಸಿದ್ದರು. ಈ ಹಿನ್ನೆಲೆ ಮುನಿರತ್ನ ಅವರ ಪ್ರತಿಭಟನೆಗೆ ಅಡ್ಡಿಪಡಿಸಲು ಪೊಲೀಸರು ಪ್ಲಾನ್ ಮಾಡಿದ್ದು, ಹೆಚ್ಚುವರಿ ಪ್ರತಿಭಟನಾಕಾರರಿಗೆ ನಿರ್ಬಂಧ ಹಾಕಿದ್ದಾರೆ.ಇದನ್ನೂ ಓದಿ:ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ
8
-
9
- ವಿಧಾನಸೌಧದ (Vidhana Soudha) ಗಾಂಧಿ ಪ್ರತಿಮೆಯ ಬಳಿ ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಡಿಕೆ ಶಿವಕುಮಾರ್ (DK Shivakumar) ಮತ್ತು ಡಿಕೆ ಸುರೇಶ್ (DK Suresh) ವಿರುದ್ಧ ಬಿತ್ತಿಪತ್ರ ಹಿಡಿದು ಪ್ರತಿಭಟನೆ ಮಾಡುತ್ತಿದ್ದ ಸಂದರ್ಭ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನೆ ನಿಲ್ಲಿಸುವಂತೆ ಮುನಿರತ್ನ ಅವರ ಬಳಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ, ಇದು ಶಾಂತಿಯುತ ಹಾಗೂ ಯಾರಿಗೂ ತೊಂದರೆ ಮಾಡದ ಪ್ರತಿಭಟನೆ. ನನ್ನ ಕ್ಷೇತ್ರಕ್ಕೆ ಅನ್ಯಾಯ ಆಗಿದೆ ಎಂದಿದ್ದಾರೆ.ಇದನ್ನೂ ಓದಿ:ಆರ್.ಆರ್ ನಗರದ ಅನುದಾನಕ್ಕೆ ಕೊಕ್ಕೆ- ಮುನಿರತ್ನ ಉಪವಾಸ ಸತ್ಯಾಗ್ರಹ
10
-
11
-
12
-
13
- ಈ ಸಂದರ್ಭ ಪೊಲೀಸರು ಕಾರ್ಯಕರ್ತರನ್ನು ಬಲವಂತವಾಗಿ ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಅನ್ಯಾಯ, ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕರಿಗೆ ಪ್ರತಿಭಟನೆಗೆ ಅವಕಾಶ ಇದೆ. ಬೇರೆಯವರಿಗೆ ಇಲ್ಲ ಎಂದ ಪೊಲೀಸರು ಶಾಸಕರನ್ನು ಬಿಟ್ಟು ಉಳಿದವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದರಿಂದ ಶಾಸಕ ಮುನಿರತ್ನ ಏಕಾಂಗಿಯಾಗಿ ಪ್ರತಿಭಟನೆ ಮುಂದುವರೆಸಿದ್ದರು.ಇದನ್ನೂ ಓದಿ:ಚೈತ್ರಾ & ಗ್ಯಾಂಗ್‍ನಿಂದ ಟಿಕೆಟ್ ವಂಚನೆ ಪ್ರಕರಣ- ಗೋವಿಂದ ಬಾಬು ಪೂಜಾರಿ ಹೊಸ ಹೈಡ್ರಾಮಾ
14
-
15
-
16
-
17
- ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸುಮಾರು 25 ಕ್ಕೂ ಹೆಚ್ಚು ಪ್ರತಿಭಟನಾ ನಿರತ ಮುನಿರತ್ನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಬೆಂಬಲಿಗರಿಗೆ ಪ್ರತಿಭಟನೆಗೆ ಅನುಮತಿ ಇಲ್ಲದ ಕಾರಣ ವಶಕ್ಕೆ ತೆಗೆದುಕೊಂಡಿದ್ದು, ಶಾಸಕ ಮುನಿರತ್ನ ನೀರು ಸಹ ಕುಡಿಯದೇ ಏಕಾಂಗಿಯಾಗಿ ಉಪವಾಸ ಧರಣಿ ಮುಂದುವರಿಸಿದ್ದರು. ಇದೀಗ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.ಇದನ್ನೂ ಓದಿ:ಸರ್ಕಾರದ ವಿರುದ್ಧ ಸುಧಾಕರ್ ಪ್ರತಿಭಟನೆ- ಬೊಮ್ಮಾಯಿ ಸಾಥ್
18
-
19
- Web StoriesActress Jyothi Rai New Photo Shootಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳುಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌!
20
-
21
-
22
-
23
-
24
-