diff --git a/Varta_Bharati/url_26_100_1.txt b/Varta_Bharati/url_26_100_1.txt new file mode 100644 index 0000000000000000000000000000000000000000..d5f5de58e77e405dec01c3886f21b08d8de0344b --- /dev/null +++ b/Varta_Bharati/url_26_100_1.txt @@ -0,0 +1 @@ +ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಅವರ ಹೆಸರು ಹೇಳುವಂತೆ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾಗಿದ್ದ ಬಿ. ಕಲ್ಲೇಶಪ್ಪ ಅವರಿಗೆ ಇ.ಡಿ ಆಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಮಂಗಳವಾರ ಧರಣಿ ನಡೆಸಿದರು.ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ‘ಕಾನೂನು ರೀತಿಯ ಹೋರಾಟ ಮಾಡಲು ನಾವು ತಯಾರಿದ್ದೇವೆ. ಯಾರ ಮುಲಾಜಿಗೂ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣೆ ಮಾಡುವುದಿಲ್ಲ. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ‘ನನಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿದ್ದ ಕಲ್ಲೇಶ್‌ ಅವರನ್ನು ವಿಚಾರಣೆಗೆ ಕರೆದು ಬೆದರಿಸಿ ನನ್ನ ಹೆಸರು ಹೇಳುವಂತೆ ಒತ್ತಡ ಹೇರುತ್ತಿದ್ದಾರೆ. ಈ ವಿಚಾರವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ನಾವು ಪ್ರಸ್ತಾಪಿಸುತ್ತೇವೆ. ರಾಜಕೀಯ ದ್ವೇಷ, ರಾಜಕೀಯ ಸೇಡಿನ ಬಗ್ಗೆ ತೀವ್ರವಾಗಿ ಖಂಡಿಸುತ್ತೇವೆ. ಹೈಕಮಾಂಡ್ ನಾಯಕರ ಜೊತೆಗೂ ನಾವು ಈ ಬಗ್ಗೆ ಮಾತನಾಡಿದ್ದೇವೆ. ಲೋಕಸಭೆಯಲ್ಲಿಯೂ ವಿಷಯ ಪ್ರಸ್ತಾಪಿಸಲು ಹೇಳಿದ್ದೇವೆ’ ಎಂದರು.ವಾಲ್ಮೀಕಿ ಹಗರಣಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಆದರೂ, ಈ ಪ್ರಕರಣ ಮುಂದಿಟ್ಟು ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸುವ ಯತ್ನಗಳು ನಡೆಯುತ್ತಿವೆ. ಇಡಿ ಅಧಿಕಾರಿಗಳು ಬೆದರಿಕೆಯೊಡ್ಡಿರುವ ಬಗ್ಗೆ ಪೊಲೀಸರಿಗೆ ಕಲ್ಲೇಶ್‌ ಅವರು ದೂರು ನೀಡಿದ್ದು ಎಫ್‌ಐಆರ್‌ ಕೂಡಾ ದಾಖಲಾಗಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿದೆ ಎಂದರು.‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಎಸ್ಐಟಿ, ಸಿಬಿಐ, ಇ.ಡಿ ಹೀಗೆ ಮೂರು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಒಂದೇ ಪ್ರಕರಣದಲ್ಲಿ ಮೂರು ತನಿಖಾ ಸಂಸ್ಥೆಗಳು ತನಿಖೆ ಮಾಡುತ್ತಿರುವುದು ವಿಶೇಷ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ನಾವು ಯಾವತ್ತೂ ಹೇಳಿಲ್ಲ. ಹಿಂದೆ ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳನ್ನು ಈಡಿ ತನಿಖೆಯೇ ಮಾಡಿಲ್ಲ. ಸಿಬಿಐಗೂ ಕೊಟ್ಟಿಲ್ಲ. ಕೇಂದ್ರದಲ್ಲಿ ಅವರದ್ದೇ (ಬಿಜೆಪಿ) ಸರ್ಕಾರ ಇರುವುದರಿಂದ ಈಗ ಸಿಬಿಐಗೆ ಕೊಡಿ, ಸಿಬಿಐಗೆ ಕೊಡಿ ಎಂದು ಹೇಳುತ್ತಿದ್ದಾರೆ’ ಎಂದರು.ನಾವು ಎಸ್ಐಟಿ ರಚನೆ ಮಾಡಿದ ಮೇಲೆ ತ್ವರಿತವಾಗಿ ತನಿಖೆ ನಡೆಯುತ್ತಿದ್ದು, ಶೇ 90ರಷ್ಟು ತನಿಖೆ ಮುಗಿದಿದೆ. ಅಗತ್ಯವಿರುವಪ್ರಕರಣಗಳನ್ನು ನಾವು ಸಿಬಿಐಗೆ ಕೊಟ್ಟಿದ್ದೇವೆ. ₹ 25 ಕೋಟಿಗಿಂತ ಹೆಚ್ಚು ಮೊತ್ತದ ಹಗರಣ ನಡೆದರೆ ಸಿಬಿಐ ತನಿಖೆ ಮಾಡಲಿ. ನಮ್ಮದೇನು‌ ತಕರಾರು ಇಲ್ಲ. ಆದರೆ ಕಾನೂನು ಬಾಹಿರವಾಗಿ ಯಾರನ್ನೂ ಗುರಿಯಾಗಿಸಿಕೊಂಡು ತನಿಖೆ ಮಾಡಬಾರದು. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಹೋಗಬಾರದು’ ಎಂದರು.‘ನಿಗಮದಲ್ಲಿ ₹ 187 ಕೋಟಿ ದುರುಪಯೋಗ ಆಗಿದೆ ಎಂದು ವಿರೋಧ ಪಕ್ಷದವರು ಪದೇ ಪದೇ ಹೇಳುತ್ತಿದ್ದಾರೆ. ಎಂ.ಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ನಿಂದ ತೆಲಂಗಾಣಕ್ಕೆ ಹೋಗಿರುವುದು ₹ 89.63 ಕೋಟಿ ಮಾತ್ರ. ಅದರಲ್ಲಿ ₹ 34 ಕೋಟಿ ನಗದು ವಸೂಲಿ ಆಗಿದೆ. ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ಶಾಸಕ ದದ್ದಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದು, ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದರು.‘ಅಕ್ರಮವಾಗಿ ಹಣ ವರ್ಗಾವಣೆಯಾಗಲು ಬ್ಯಾಂಕಿನವರು ಕಾರಣ ಎಂದು ಬ್ಯಾಂಕಿನ ಅಧಿಕಾರಿಗಳೇ ದೂರು ಕೊಟ್ಟಿದ್ದಾರೆ. ಹೀಗಾಗಿ ಸಿಬಿಐನವರು ತನಿಖೆ ಮಾಡುತ್ತಿದ್ದಾರೆ. ಆದರೆ ಈ ಮಧ್ಯೆ ಹಣ ವರ್ಗಾವಣೆಗೆ ಮುಖ್ಯಮಂತ್ರಿ ಆದೇಶ ಇತ್ತು ಎಂದು ಬರೆದುಕೊಡುವಂತೆ ಇಡಿಯವರು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. \ No newline at end of file diff --git a/Varta_Bharati/url_26_100_10.txt b/Varta_Bharati/url_26_100_10.txt new file mode 100644 index 0000000000000000000000000000000000000000..43c52ee6f73dba12708173e9eb5ead41706b82cf --- /dev/null +++ b/Varta_Bharati/url_26_100_10.txt @@ -0,0 +1 @@ +ಬೆಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆಯುವಂತಹ ಕಂಬಳೋತ್ಸವಕ್ಕೆ ರಾಜ್ಯ ಸರಕಾರದ ವತಿಯಿಂದ ಹೆಚ್ಚುವರಿ ಅನುದಾನ ಒದಗಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಶೋಕ್ ಕುಮಾರ್ ರೈ ಅವರು ಕರಾವಳಿ ಭಾಗದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತಿ ವರ್ಷ ನಡೆಯುವ ಕಂಬಳೋತ್ಸವಕ್ಕೆ ಸರಕಾರ ಅನುದಾನ ನೀಡುತ್ತಿತ್ತು. ಆದರೆ, ಕಳೆದ ವರ್ಷದಿಂದ ಯಾವುದೆ ಅನುದಾನ ನೀಡದಿರುವ ಕುರಿತು ಗಮನ ಸೆಳೆದ ಸೂಚನೆಗೆ ಎಚ್.ಕೆ.ಪಾಟೀಲ್ ಉತ್ತರಿಸಿದರು.ಕಂಬಳೋತ್ಸವಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಆ ಭಾಗದ ಶಾಸಕರನ್ನು ಒಳಗೊಂಡಂತೆ ಸಭೆ ನಡೆಸಲಾಗಿದೆ. ಹಿಂದಿನ ಸರಕಾರದ ಅವಧಿಯಲ್ಲಿ ಅನುದಾನ ನೀಡಲಾಗುತ್ತಿತ್ತು ಎಂಬುದನ್ನು ಶಾಸಕರು ಗಮನ ಸೆಳೆದಿದ್ದಾರೆ. ನಮ್ಮ ಇಲಾಖೆಗೆ ಲಭ್ಯವಿರುವ ಅನುದಾನ ಆಧರಿಸಿ 10 ಕಂಬಳಗಳಿಗೆ ತಲಾ 5 ಲಕ್ಷ ರೂ.ಗಳನ್ನು ನೀಡುವುದಾಗಿ ತಿಳಿಸಿದ್ದೆ ಎಂದು ಅವರು ಹೇಳಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಅಶೋಕ್ ಕುಮಾರ್ ರೈ, ಪ್ರತಿ ವರ್ಷ ಎರಡು ಜಿಲ್ಲೆಗಳು ಸೇರಿ 25 ಕಂಬಳಗಳು ಆಗುತ್ತವೆ. ಈ ಪೈಕಿ ಕೇವಲ 10 ಕಂಬಳಗಳಿಗೆ ಅನುದಾನ ನೀಡಿದರೆ ಸಾಕಾಗುವುದಿಲ್ಲ. ಪ್ರತಿಯೊಂದು ಕಂಬಳಕ್ಕೂ 5 ಲಕ್ಷ ರೂ.ನೀಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ದನಿ ಗೂಡಿಸಿದ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್, ಜಿಲ್ಲಾ ಕಂಬಳ ಸಮಿತಿಯವರು ಆಯೋಜಿಸುವ ಕಂಬಳೋತ್ಸವಕ್ಕೆ ಮಾತ್ರ ಸರಕಾರ ಅನುದಾನ ನೀಡುವುದು. ಹಿಂದಿನ ಸರಕಾರದ ಅವಧಿಯಲ್ಲಿ ಅನುದಾನ ನೀಡಲಾಗಿದೆ. ಕಂಬಳ ಕೇವಲ ಸಾಂಸ್ಕೃತಿಕ ಆಚರಣೆ ಅಲ್ಲ, ಅದೊಂದು ಕ್ರೀಡೆ ಹಾಗೂ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಕನಿಷ್ಠ ಒಂದು ಕಂಬಳಕ್ಕೆ 10 ಲಕ್ಷ ರೂ.ಗಳನ್ನಾದರೂ ನೀಡಬೇಕು ಎಂದು ಕೋರಿದರು. \ No newline at end of file diff --git a/Varta_Bharati/url_26_100_11.txt b/Varta_Bharati/url_26_100_11.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_12.txt b/Varta_Bharati/url_26_100_12.txt new file mode 100644 index 0000000000000000000000000000000000000000..43c52ee6f73dba12708173e9eb5ead41706b82cf --- /dev/null +++ b/Varta_Bharati/url_26_100_12.txt @@ -0,0 +1 @@ +ಬೆಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆಯುವಂತಹ ಕಂಬಳೋತ್ಸವಕ್ಕೆ ರಾಜ್ಯ ಸರಕಾರದ ವತಿಯಿಂದ ಹೆಚ್ಚುವರಿ ಅನುದಾನ ಒದಗಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಶೋಕ್ ಕುಮಾರ್ ರೈ ಅವರು ಕರಾವಳಿ ಭಾಗದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತಿ ವರ್ಷ ನಡೆಯುವ ಕಂಬಳೋತ್ಸವಕ್ಕೆ ಸರಕಾರ ಅನುದಾನ ನೀಡುತ್ತಿತ್ತು. ಆದರೆ, ಕಳೆದ ವರ್ಷದಿಂದ ಯಾವುದೆ ಅನುದಾನ ನೀಡದಿರುವ ಕುರಿತು ಗಮನ ಸೆಳೆದ ಸೂಚನೆಗೆ ಎಚ್.ಕೆ.ಪಾಟೀಲ್ ಉತ್ತರಿಸಿದರು.ಕಂಬಳೋತ್ಸವಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಆ ಭಾಗದ ಶಾಸಕರನ್ನು ಒಳಗೊಂಡಂತೆ ಸಭೆ ನಡೆಸಲಾಗಿದೆ. ಹಿಂದಿನ ಸರಕಾರದ ಅವಧಿಯಲ್ಲಿ ಅನುದಾನ ನೀಡಲಾಗುತ್ತಿತ್ತು ಎಂಬುದನ್ನು ಶಾಸಕರು ಗಮನ ಸೆಳೆದಿದ್ದಾರೆ. ನಮ್ಮ ಇಲಾಖೆಗೆ ಲಭ್ಯವಿರುವ ಅನುದಾನ ಆಧರಿಸಿ 10 ಕಂಬಳಗಳಿಗೆ ತಲಾ 5 ಲಕ್ಷ ರೂ.ಗಳನ್ನು ನೀಡುವುದಾಗಿ ತಿಳಿಸಿದ್ದೆ ಎಂದು ಅವರು ಹೇಳಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಅಶೋಕ್ ಕುಮಾರ್ ರೈ, ಪ್ರತಿ ವರ್ಷ ಎರಡು ಜಿಲ್ಲೆಗಳು ಸೇರಿ 25 ಕಂಬಳಗಳು ಆಗುತ್ತವೆ. ಈ ಪೈಕಿ ಕೇವಲ 10 ಕಂಬಳಗಳಿಗೆ ಅನುದಾನ ನೀಡಿದರೆ ಸಾಕಾಗುವುದಿಲ್ಲ. ಪ್ರತಿಯೊಂದು ಕಂಬಳಕ್ಕೂ 5 ಲಕ್ಷ ರೂ.ನೀಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ದನಿ ಗೂಡಿಸಿದ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್, ಜಿಲ್ಲಾ ಕಂಬಳ ಸಮಿತಿಯವರು ಆಯೋಜಿಸುವ ಕಂಬಳೋತ್ಸವಕ್ಕೆ ಮಾತ್ರ ಸರಕಾರ ಅನುದಾನ ನೀಡುವುದು. ಹಿಂದಿನ ಸರಕಾರದ ಅವಧಿಯಲ್ಲಿ ಅನುದಾನ ನೀಡಲಾಗಿದೆ. ಕಂಬಳ ಕೇವಲ ಸಾಂಸ್ಕೃತಿಕ ಆಚರಣೆ ಅಲ್ಲ, ಅದೊಂದು ಕ್ರೀಡೆ ಹಾಗೂ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಕನಿಷ್ಠ ಒಂದು ಕಂಬಳಕ್ಕೆ 10 ಲಕ್ಷ ರೂ.ಗಳನ್ನಾದರೂ ನೀಡಬೇಕು ಎಂದು ಕೋರಿದರು. \ No newline at end of file diff --git a/Varta_Bharati/url_26_100_13.txt b/Varta_Bharati/url_26_100_13.txt new file mode 100644 index 0000000000000000000000000000000000000000..34ec25fe32d8498548be6b16e2b11a900f0eebec --- /dev/null +++ b/Varta_Bharati/url_26_100_13.txt @@ -0,0 +1 @@ +ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹೆಸರು ಹೇಳುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂಬ ಆರೋಪದಡಿ ಇಬ್ಬರು ಈಡಿ ಅಧಿಕಾರಿಗಳ ವಿರುದ್ಧ ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಕಲ್ಲೇಶ್(54) ಎಂಬುವರು ನೀಡಿನ ದೂರಿನನ್ವಯ ಈಡಿ ಅಧಿಕಾರಿಗಳಾದ ಮಿತ್ತಲ್, ಮುರುಳಿ ಕಣ್ಣನ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ) ತನಿಖೆಯನ್ನು ನಡೆಸುತ್ತಿದ್ದು, ಈ ಸಂಬಂಧ ನನ್ನನ್ನು ವಿಚಾರಣೆಗೆ ಹಾಜರಾಗುವಂತೆ ಈಡಿ ಅಧಿಕಾರಿಗಳು ಜು.16ರಂದು ಸೂಚಿಸಿದ್ದರು. ಅದರಂತೆ ನಾನು ಶಾಂತಿನಗರದ ಜಾರಿ ನಿರ್ದೇಶನಾಲಯ ಕಚೇರಿಗೆ ಹೋಗಿದ್ದು, ಈಡಿ ಅಧಿಕಾರಿ ಮುರುಳಿ ಕಣ್ಣನ್ ಅವರು ನನ್ನ ಹೇಳಿಕೆಯನ್ನು ದಾಖಲಿಸಿಕೊಂಡರು ಎಂದು ಕಲ್ಲೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ, ನನಗೆ 17 ಪ್ರಶ್ನೆಗಳನ್ನು ಕೇಳುತ್ತಾರೆ. ನಾನು 17 ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಅದರಲ್ಲಿ. ಮೂರು ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಕಡತಬೇಕು ಹಾಗು ನನ್ನ ಕೆಳಹಂತದ ಅಧಿಕಾರಿಗಳು ಬೇಕಾಗುತ್ತಾರೆಂದು ತಿಳಿಸಿರುತ್ತೇನೆ, ಆಗ ಕಣ್ಣನ್ ಅವರು ಜು.18ರಂದು ಬನ್ನಿ ಆಗ ಕಡತ ಜೊತೆಗೆ ಇತರೆ ಅಧಿಕಾರಿಗಳನ್ನು ಕರೆಯುತ್ತೇನೆಂದು ಹೇಳಿದರು ಎಂದು ಕಲ್ಲೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.ಮತ್ತೆ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ, ಅವರು ನನ್ನ ಹೇಳಿಕೆಗೆ ಸಹಿ ಪಡಿಯುತ್ತಾರೆ. ನಾನು ನನ್ನ ಹೇಳಿಕೆಯ ಪ್ರತಿಯನ್ನು ನನಗೊಂದು ಕೊಡಿ ಎಂದು ಕೇಳುತ್ತೇನೆ. ಆದರೆ, ಈಡಿಯವರು ಕೊಡಲಿಲ್ಲ. ನಂತರ ಪುನಃ ನನ್ನನ್ನು ಪ್ರಶ್ನೆ ಕೇಳುತ್ತಾರೆ. ಆದರೆ, ಈ ಸಲ ಯಾವುದೇ ಲಿಖಿತ ರೂಪದಲ್ಲಿ ಪ್ರಶ್ನೆ ನೀಡುವುದಿಲ್ಲ. ಪ್ರಕರಣದಲ್ಲಿ ನನ್ನದು ಯಾವುದು ತಪ್ಪಿಲ್ಲ ಎಂದು ಹೇಳಿದರೂ, ಸಹ ನಿಮ್ಮನ್ನು ಬಂಧಿಸುತ್ತೇವೆಂದು ಅಧಿಕಾರಿಗಳು ಧಮ್ಮಿ ಹಾಕಿದ್ದಾರೆ. ಅಲ್ಲದೆ, ಎರಡು ವರ್ಷ ಆದರೂ ನಿಮಗೆ ಜಾಮೀನು ಸಿಗುವುದಿಲ್ಲವೆಂದು ಬೆದರಿಕೆ ಹಾಕಿದ್ದಾರೆ ಎಂದು ಕಲ್ಲೇಶ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ.ಈ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಸರಕಾರದ ಉನ್ನತ ಮಟ್ಟದಲ್ಲಿರುವವರ ಹೆಸರು ಹೇಳಿದರೆ ಈಡಿಯು ನಿಮಗೆ ಸಹಾಯ ಮಾಡುತ್ತದೆ, ಇಲ್ಲದಿದ್ದರೆ ಬಂಧಿಸುತ್ತೇವೆಂದು ಮಾನಸಿಕ ಹಿಂಸೆಯನ್ನು ನೀಡಿರುತ್ತಾರೆ. ಆದ್ದರಿಂದ ನನಗೆ ಮಾನಸಿಕ ಹಿಂಸೆ ನೀಡಿದ ಈಡಿ ಅಧಿಕಾರಿ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಅವರ ವಿರುದ್ಧ ಕಾನೂನು ಕ್ರಮವನ್ನು ಜರುಗಿಸಬೇಕು ಎಂದು ಕಲ್ಲೇಶ್ ದೂರಿನಲ್ಲಿ ಒತ್ತಾಯಿಸಿದ್ದಾರೆ. \ No newline at end of file diff --git a/Varta_Bharati/url_26_100_14.txt b/Varta_Bharati/url_26_100_14.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_15.txt b/Varta_Bharati/url_26_100_15.txt new file mode 100644 index 0000000000000000000000000000000000000000..34ec25fe32d8498548be6b16e2b11a900f0eebec --- /dev/null +++ b/Varta_Bharati/url_26_100_15.txt @@ -0,0 +1 @@ +ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹೆಸರು ಹೇಳುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂಬ ಆರೋಪದಡಿ ಇಬ್ಬರು ಈಡಿ ಅಧಿಕಾರಿಗಳ ವಿರುದ್ಧ ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಕಲ್ಲೇಶ್(54) ಎಂಬುವರು ನೀಡಿನ ದೂರಿನನ್ವಯ ಈಡಿ ಅಧಿಕಾರಿಗಳಾದ ಮಿತ್ತಲ್, ಮುರುಳಿ ಕಣ್ಣನ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ) ತನಿಖೆಯನ್ನು ನಡೆಸುತ್ತಿದ್ದು, ಈ ಸಂಬಂಧ ನನ್ನನ್ನು ವಿಚಾರಣೆಗೆ ಹಾಜರಾಗುವಂತೆ ಈಡಿ ಅಧಿಕಾರಿಗಳು ಜು.16ರಂದು ಸೂಚಿಸಿದ್ದರು. ಅದರಂತೆ ನಾನು ಶಾಂತಿನಗರದ ಜಾರಿ ನಿರ್ದೇಶನಾಲಯ ಕಚೇರಿಗೆ ಹೋಗಿದ್ದು, ಈಡಿ ಅಧಿಕಾರಿ ಮುರುಳಿ ಕಣ್ಣನ್ ಅವರು ನನ್ನ ಹೇಳಿಕೆಯನ್ನು ದಾಖಲಿಸಿಕೊಂಡರು ಎಂದು ಕಲ್ಲೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ, ನನಗೆ 17 ಪ್ರಶ್ನೆಗಳನ್ನು ಕೇಳುತ್ತಾರೆ. ನಾನು 17 ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಅದರಲ್ಲಿ. ಮೂರು ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಕಡತಬೇಕು ಹಾಗು ನನ್ನ ಕೆಳಹಂತದ ಅಧಿಕಾರಿಗಳು ಬೇಕಾಗುತ್ತಾರೆಂದು ತಿಳಿಸಿರುತ್ತೇನೆ, ಆಗ ಕಣ್ಣನ್ ಅವರು ಜು.18ರಂದು ಬನ್ನಿ ಆಗ ಕಡತ ಜೊತೆಗೆ ಇತರೆ ಅಧಿಕಾರಿಗಳನ್ನು ಕರೆಯುತ್ತೇನೆಂದು ಹೇಳಿದರು ಎಂದು ಕಲ್ಲೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.ಮತ್ತೆ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ, ಅವರು ನನ್ನ ಹೇಳಿಕೆಗೆ ಸಹಿ ಪಡಿಯುತ್ತಾರೆ. ನಾನು ನನ್ನ ಹೇಳಿಕೆಯ ಪ್ರತಿಯನ್ನು ನನಗೊಂದು ಕೊಡಿ ಎಂದು ಕೇಳುತ್ತೇನೆ. ಆದರೆ, ಈಡಿಯವರು ಕೊಡಲಿಲ್ಲ. ನಂತರ ಪುನಃ ನನ್ನನ್ನು ಪ್ರಶ್ನೆ ಕೇಳುತ್ತಾರೆ. ಆದರೆ, ಈ ಸಲ ಯಾವುದೇ ಲಿಖಿತ ರೂಪದಲ್ಲಿ ಪ್ರಶ್ನೆ ನೀಡುವುದಿಲ್ಲ. ಪ್ರಕರಣದಲ್ಲಿ ನನ್ನದು ಯಾವುದು ತಪ್ಪಿಲ್ಲ ಎಂದು ಹೇಳಿದರೂ, ಸಹ ನಿಮ್ಮನ್ನು ಬಂಧಿಸುತ್ತೇವೆಂದು ಅಧಿಕಾರಿಗಳು ಧಮ್ಮಿ ಹಾಕಿದ್ದಾರೆ. ಅಲ್ಲದೆ, ಎರಡು ವರ್ಷ ಆದರೂ ನಿಮಗೆ ಜಾಮೀನು ಸಿಗುವುದಿಲ್ಲವೆಂದು ಬೆದರಿಕೆ ಹಾಕಿದ್ದಾರೆ ಎಂದು ಕಲ್ಲೇಶ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ.ಈ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಸರಕಾರದ ಉನ್ನತ ಮಟ್ಟದಲ್ಲಿರುವವರ ಹೆಸರು ಹೇಳಿದರೆ ಈಡಿಯು ನಿಮಗೆ ಸಹಾಯ ಮಾಡುತ್ತದೆ, ಇಲ್ಲದಿದ್ದರೆ ಬಂಧಿಸುತ್ತೇವೆಂದು ಮಾನಸಿಕ ಹಿಂಸೆಯನ್ನು ನೀಡಿರುತ್ತಾರೆ. ಆದ್ದರಿಂದ ನನಗೆ ಮಾನಸಿಕ ಹಿಂಸೆ ನೀಡಿದ ಈಡಿ ಅಧಿಕಾರಿ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಅವರ ವಿರುದ್ಧ ಕಾನೂನು ಕ್ರಮವನ್ನು ಜರುಗಿಸಬೇಕು ಎಂದು ಕಲ್ಲೇಶ್ ದೂರಿನಲ್ಲಿ ಒತ್ತಾಯಿಸಿದ್ದಾರೆ. \ No newline at end of file diff --git a/Varta_Bharati/url_26_100_16.txt b/Varta_Bharati/url_26_100_16.txt new file mode 100644 index 0000000000000000000000000000000000000000..931f1a8a531103536af91f98499d854d2a2d667a --- /dev/null +++ b/Varta_Bharati/url_26_100_16.txt @@ -0,0 +1 @@ +ಬೆಂಗಳೂರು : ಬೆಂಗಳೂರು ಮತ್ತು ಮಂಗಳೂರು ರಸ್ತೆ ಅಭಿವೃಧ್ಧಿ ಕುರಿತಾಗಿ ಚರ್ಚೆ ಮಾಡಲು ಮಂಗಳೂರಿನಲ್ಲಿ ಸಭೆಯನ್ನು ನಡೆಸಿ, ಸಲಹೆಗಳನ್ನು ಪಡೆದುಕೊಳ್ಳಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸೋಮವಾರ ವಿಧಾನ ಪರಿಷತ್‍ನಲ್ಲಿ ಬಿಜೆಪಿ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಮತ್ತು ಮಂಗಳೂರಿಗೆ ರಸ್ತೆ ಸಂಪರ್ಕವು ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಬರಲಿದ್ದು, ರಾಜ್ಯ ಸರಕಾರ ಸಲಹೆಗಳನ್ನು ಮಾತ್ರ ಕೊಡಬಹುದು. ಆದರೆ ಕೇಂದ್ರ ಸರಕಾರವೇ ಕ್ರಮ ವಹಿಸಬೇಕು ಎಂದರು. \ No newline at end of file diff --git a/Varta_Bharati/url_26_100_17.txt b/Varta_Bharati/url_26_100_17.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_18.txt b/Varta_Bharati/url_26_100_18.txt new file mode 100644 index 0000000000000000000000000000000000000000..931f1a8a531103536af91f98499d854d2a2d667a --- /dev/null +++ b/Varta_Bharati/url_26_100_18.txt @@ -0,0 +1 @@ +ಬೆಂಗಳೂರು : ಬೆಂಗಳೂರು ಮತ್ತು ಮಂಗಳೂರು ರಸ್ತೆ ಅಭಿವೃಧ್ಧಿ ಕುರಿತಾಗಿ ಚರ್ಚೆ ಮಾಡಲು ಮಂಗಳೂರಿನಲ್ಲಿ ಸಭೆಯನ್ನು ನಡೆಸಿ, ಸಲಹೆಗಳನ್ನು ಪಡೆದುಕೊಳ್ಳಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸೋಮವಾರ ವಿಧಾನ ಪರಿಷತ್‍ನಲ್ಲಿ ಬಿಜೆಪಿ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಮತ್ತು ಮಂಗಳೂರಿಗೆ ರಸ್ತೆ ಸಂಪರ್ಕವು ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಬರಲಿದ್ದು, ರಾಜ್ಯ ಸರಕಾರ ಸಲಹೆಗಳನ್ನು ಮಾತ್ರ ಕೊಡಬಹುದು. ಆದರೆ ಕೇಂದ್ರ ಸರಕಾರವೇ ಕ್ರಮ ವಹಿಸಬೇಕು ಎಂದರು. \ No newline at end of file diff --git a/Varta_Bharati/url_26_100_19.txt b/Varta_Bharati/url_26_100_19.txt new file mode 100644 index 0000000000000000000000000000000000000000..785dfdbbc86890a200710ee9ec97ae44096b4a94 --- /dev/null +++ b/Varta_Bharati/url_26_100_19.txt @@ -0,0 +1 @@ +ಬೆಂಗಳೂರು : ಅಪೆಕ್ಸ್ ಬ್ಯಾಂಕ್ ರಾಜ್ಯ ಸರಕಾರದ ಅಧೀನದಲ್ಲಿಲ್ಲ. ಅದೊಂದು ಶೆಡ್ಯೂಲ್ಡ್ ಬ್ಯಾಂಕ್. ನಿರ್ದಿಷ್ಟವಾಗಿ ಈ ಬ್ಯಾಂಕ್‍ನಲ್ಲಿ ಯಾವುದಾದರೂ ಹಗರಣ ನಡೆದಿರುವ ಕುರಿತು ಮಾಹಿತಿ, ದಾಖಲೆ ನೀಡಿದರೆ ಸರಕಾರ ತನಿಖೆ ನಡೆಸಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಆನಂದ್ ಕೆ.ಎಸ್ ಅವರು ಅಪೆಕ್ಸ್ ಬ್ಯಾಂಕಿನಿಂದ ಸಾಲ ಪಡೆದಿರುವ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರ ವಿವರವಾದ ಮಾಹಿತಿ ನೀಡುವಂತೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು. ಆರ್‌ಬಿಐ ಸುತ್ತೋಲೆಯಂತೆ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿರುವವರ ಮಾಹಿತಿಯನ್ನು ಗ್ರಾಹಕರ ಒಪ್ಪಿಗೆ ಇಲ್ಲದೆ ಬಹಿರಂಗ ಮಾಡುವಂತಿಲ್ಲ ಎಂದು ರಾಜಣ್ಣ ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಆನಂದ್, ಅಪೆಕ್ಸ್ ಬ್ಯಾಂಕ್‍ಗೆ ನಬಾರ್ಡ್‍ನಿಂದ ಎರಡು ಸಾವಿರ ಕೋಟಿ ರೂ.ನೆರವು ಬಂದಿದೆ. ಬಹುತೇಕ ಶಾಸಕರು ಸಕ್ಕರೆ ಕಾರ್ಖಾನೆ ಮಾಡಲು ಅಪೆಕ್ಸ್ ಬ್ಯಾಂಕ್‍ನಿಂದ ಸಾಲ ಪಡೆದಿದ್ದಾರೆ ಎಂದರು. ಕೆಲವು ಸಮರ್ಪಕವಾದ ದಾಖಲೆಗಳನ್ನು ನೀಡದೆ ಸಾಲ ಪಡೆದಿದ್ದಾರೆ. ಇದರಲ್ಲಿ ಭ್ರಷ್ಟಾಚಾರ ಆಗಿದೆ. ಹೈಕೋರ್ಟ್ ಸಹ ಈ ಬಗ್ಗೆ ಪ್ರಶ್ನೆ ಎತ್ತಿದೆ. ಡಿಸಿಸಿ ಬ್ಯಾಂಕ್‍ಗಳಲ್ಲಿ ನಲ್ಲಿ ರೈತರಿಗೆ, ಸಾಮಾನ್ಯ ಜನರಿಗೆ ಸಾಲ ಸಿಗುತ್ತಿಲ್ಲ. ಆದರೆ, ಉದ್ಯಮಿಗಳಿಗೆ ಮಾತ್ರ ಸಾಲ ನೀಡುತ್ತಿದ್ದಾರೆ. ಇಲ್ಲಿ ಸಾವಿರಾರು ಕೋಟಿ ರೂ. ಹಗರಣಗಳು ಆಗಿವೆ ಎಂದು ಆನಂದ್ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ಅಪೇಕ್ಸ್ ಬ್ಯಾಂಕ್ ನಲ್ಲಿ ಯಾವುದೇ ಹಗರಣ ನಡೆದಿದ್ದರೂ ತನಿಖೆ ಮಾಡಿಸುತ್ತೇವೆ. ಒಂದು ವೇಳೆ ಅಂತಹ ಯಾವುದಾದರೂ ನಿರ್ದಿಷ್ಟ ಪ್ರಕರಣ ಗಮನಕ್ಕೆ ತಂದರೆ ತನಿಖೆ ಮಾಡಿಸುತ್ತೇವೆ ಎಂದರು. \ No newline at end of file diff --git a/Varta_Bharati/url_26_100_2.txt b/Varta_Bharati/url_26_100_2.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_20.txt b/Varta_Bharati/url_26_100_20.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_21.txt b/Varta_Bharati/url_26_100_21.txt new file mode 100644 index 0000000000000000000000000000000000000000..785dfdbbc86890a200710ee9ec97ae44096b4a94 --- /dev/null +++ b/Varta_Bharati/url_26_100_21.txt @@ -0,0 +1 @@ +ಬೆಂಗಳೂರು : ಅಪೆಕ್ಸ್ ಬ್ಯಾಂಕ್ ರಾಜ್ಯ ಸರಕಾರದ ಅಧೀನದಲ್ಲಿಲ್ಲ. ಅದೊಂದು ಶೆಡ್ಯೂಲ್ಡ್ ಬ್ಯಾಂಕ್. ನಿರ್ದಿಷ್ಟವಾಗಿ ಈ ಬ್ಯಾಂಕ್‍ನಲ್ಲಿ ಯಾವುದಾದರೂ ಹಗರಣ ನಡೆದಿರುವ ಕುರಿತು ಮಾಹಿತಿ, ದಾಖಲೆ ನೀಡಿದರೆ ಸರಕಾರ ತನಿಖೆ ನಡೆಸಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಆನಂದ್ ಕೆ.ಎಸ್ ಅವರು ಅಪೆಕ್ಸ್ ಬ್ಯಾಂಕಿನಿಂದ ಸಾಲ ಪಡೆದಿರುವ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರ ವಿವರವಾದ ಮಾಹಿತಿ ನೀಡುವಂತೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು. ಆರ್‌ಬಿಐ ಸುತ್ತೋಲೆಯಂತೆ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿರುವವರ ಮಾಹಿತಿಯನ್ನು ಗ್ರಾಹಕರ ಒಪ್ಪಿಗೆ ಇಲ್ಲದೆ ಬಹಿರಂಗ ಮಾಡುವಂತಿಲ್ಲ ಎಂದು ರಾಜಣ್ಣ ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಆನಂದ್, ಅಪೆಕ್ಸ್ ಬ್ಯಾಂಕ್‍ಗೆ ನಬಾರ್ಡ್‍ನಿಂದ ಎರಡು ಸಾವಿರ ಕೋಟಿ ರೂ.ನೆರವು ಬಂದಿದೆ. ಬಹುತೇಕ ಶಾಸಕರು ಸಕ್ಕರೆ ಕಾರ್ಖಾನೆ ಮಾಡಲು ಅಪೆಕ್ಸ್ ಬ್ಯಾಂಕ್‍ನಿಂದ ಸಾಲ ಪಡೆದಿದ್ದಾರೆ ಎಂದರು. ಕೆಲವು ಸಮರ್ಪಕವಾದ ದಾಖಲೆಗಳನ್ನು ನೀಡದೆ ಸಾಲ ಪಡೆದಿದ್ದಾರೆ. ಇದರಲ್ಲಿ ಭ್ರಷ್ಟಾಚಾರ ಆಗಿದೆ. ಹೈಕೋರ್ಟ್ ಸಹ ಈ ಬಗ್ಗೆ ಪ್ರಶ್ನೆ ಎತ್ತಿದೆ. ಡಿಸಿಸಿ ಬ್ಯಾಂಕ್‍ಗಳಲ್ಲಿ ನಲ್ಲಿ ರೈತರಿಗೆ, ಸಾಮಾನ್ಯ ಜನರಿಗೆ ಸಾಲ ಸಿಗುತ್ತಿಲ್ಲ. ಆದರೆ, ಉದ್ಯಮಿಗಳಿಗೆ ಮಾತ್ರ ಸಾಲ ನೀಡುತ್ತಿದ್ದಾರೆ. ಇಲ್ಲಿ ಸಾವಿರಾರು ಕೋಟಿ ರೂ. ಹಗರಣಗಳು ಆಗಿವೆ ಎಂದು ಆನಂದ್ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ಅಪೇಕ್ಸ್ ಬ್ಯಾಂಕ್ ನಲ್ಲಿ ಯಾವುದೇ ಹಗರಣ ನಡೆದಿದ್ದರೂ ತನಿಖೆ ಮಾಡಿಸುತ್ತೇವೆ. ಒಂದು ವೇಳೆ ಅಂತಹ ಯಾವುದಾದರೂ ನಿರ್ದಿಷ್ಟ ಪ್ರಕರಣ ಗಮನಕ್ಕೆ ತಂದರೆ ತನಿಖೆ ಮಾಡಿಸುತ್ತೇವೆ ಎಂದರು. \ No newline at end of file diff --git a/Varta_Bharati/url_26_100_22.txt b/Varta_Bharati/url_26_100_22.txt new file mode 100644 index 0000000000000000000000000000000000000000..ca25a00c10e3866708d5ef6eff0721ffd679d9b2 --- /dev/null +++ b/Varta_Bharati/url_26_100_22.txt @@ -0,0 +1 @@ +ಬೆಂಗಳೂರು : ಈ ಬಾರಿ ಮಳೆ ಹೆಚ್ಚಾಗಿರುವ ಪರಿಣಾಮ ಭಾರೀ ನಷ್ಟ ಸಂಭವಿಸಿದ್ದು, ರಾಜ್ಯ ಸರಕಾರ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ಅಡಿ ಅನುದಾನ ಘೋಷಣೆ ಮಾಡಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪ ವೇಳೆ ಬಿಜೆಪಿ ಸದಸ್ಯ ಹರೀಶ್ ಪೂಂಜ ವಿಷಯ ಪ್ರಸ್ತಾಪಿಸಿ, ಮಳೆಯಿಂದಾಗಿ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅಗತ್ಯ ಮೂಲಸೌಕರ್ಯ ಕಲ್ಪಿಸಲು ಅನುದಾನ ಬೇಕಾಗಿದ್ದು, ರಾಜ್ಯ ಸರಕಾರ ಗಮನ ಹರಿಸಬೇಕು ಎಂದು ಹೇಳಿದರು. ಈ ಹಿಂದೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯಿಂದ ಅನಾಹುತ ಸಂಭವಿಸಿದಾಗ ಅಂದಿನ ಬಿಜೆಪಿ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿತ್ತು. ಅದೇ ರೀತಿ ಉತ್ತರ ಕರ್ನಾಟಕ ಭಾಗಕ್ಕೂ ವಿಶೇಷ ಪ್ಯಾಕೇಜ್‍ಗಳನ್ನು ಘೋಷಣೆ ಮಾಡಿಕೊಂಡು ಬರಲಾಗುತ್ತಿದೆ. ಇದೇ ಮಾದರಿಯಲ್ಲಿ ಇದೀಗ ಕರಾವಳಿ ಭಾಗಗಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ಮನವಿ ಮಾಡಿದರು. ಕರಾವಳಿ ಭಾಗ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಅಗತ್ಯವಿದೆ. ಶಾಸಕರ ಅನುದಾನದಲ್ಲಿ ವ್ಯತ್ಯಾಸ ಬೇಡ. ಅಲ್ಲದೇ, ಹೊಸ ಸರಕಾರ ಬಂದ ನಂತರ ಅನುದಾನ ತೀರ ಕಡಿಮೆ ಆಗಿದೆ ಎಂದು ಅವರು ಉಲ್ಲೇಖಿಸಿದರು. ಇದಕ್ಕೆ ದನಿಗೂಡಿಸಿದ ಸುನೀಲ್ ಕುಮಾರ್, ಎನ್‍ಡಿಆರ್‌ಎಫ್ ಅಡಿ ಅನುದಾನ ನೀಡಿದರೆ ರಸ್ತೆ ದುರಸ್ಥಿ ಸಾಧ್ಯವೇ ಇಲ್ಲ. ಲೋಕೋಪಯೋಗಿ ಇಲಾಖೆ ಅಡಿಯಲ್ಲಿಯೇ ಅನುದಾನ ನೀಡಲು ರಾಜ್ಯ ಸರಕಾರ ಮುಂದಾಗಬೇಕು ಎಂದು ಹೇಳಿದರು. ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿ, ಈ ಹಿಂದೆ ಅನಾಹುತ ಸಂಭವಿಸಿದಾಗ ನಾವು ಅನುದಾನ ನೀಡುವ ಸಂದರ್ಭದಲ್ಲಿ ಅಲ್ಲಿ ಯಾವ ಪಕ್ಷ ಇದೆ ಎಂದು ನೋಡಿಲ್ಲ. ಅತಿಯಾದ ತಾರತಮ್ಯ ಮಾಡಲು ಹೋಗಬೇಡಿ. ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಲಿ ಎಂದು ತಿಳಿಸಿದರು. ಇದಕ್ಕೆ ಉತ್ತರಿಇದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮಳೆಗಾಲದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ತಾತ್ಕಲಿಕವಾಗಿ ಕ್ರಮ ಕೈಗೊಂಡು ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದರು. \ No newline at end of file diff --git a/Varta_Bharati/url_26_100_23.txt b/Varta_Bharati/url_26_100_23.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_24.txt b/Varta_Bharati/url_26_100_24.txt new file mode 100644 index 0000000000000000000000000000000000000000..ca25a00c10e3866708d5ef6eff0721ffd679d9b2 --- /dev/null +++ b/Varta_Bharati/url_26_100_24.txt @@ -0,0 +1 @@ +ಬೆಂಗಳೂರು : ಈ ಬಾರಿ ಮಳೆ ಹೆಚ್ಚಾಗಿರುವ ಪರಿಣಾಮ ಭಾರೀ ನಷ್ಟ ಸಂಭವಿಸಿದ್ದು, ರಾಜ್ಯ ಸರಕಾರ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ಅಡಿ ಅನುದಾನ ಘೋಷಣೆ ಮಾಡಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪ ವೇಳೆ ಬಿಜೆಪಿ ಸದಸ್ಯ ಹರೀಶ್ ಪೂಂಜ ವಿಷಯ ಪ್ರಸ್ತಾಪಿಸಿ, ಮಳೆಯಿಂದಾಗಿ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅಗತ್ಯ ಮೂಲಸೌಕರ್ಯ ಕಲ್ಪಿಸಲು ಅನುದಾನ ಬೇಕಾಗಿದ್ದು, ರಾಜ್ಯ ಸರಕಾರ ಗಮನ ಹರಿಸಬೇಕು ಎಂದು ಹೇಳಿದರು. ಈ ಹಿಂದೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯಿಂದ ಅನಾಹುತ ಸಂಭವಿಸಿದಾಗ ಅಂದಿನ ಬಿಜೆಪಿ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿತ್ತು. ಅದೇ ರೀತಿ ಉತ್ತರ ಕರ್ನಾಟಕ ಭಾಗಕ್ಕೂ ವಿಶೇಷ ಪ್ಯಾಕೇಜ್‍ಗಳನ್ನು ಘೋಷಣೆ ಮಾಡಿಕೊಂಡು ಬರಲಾಗುತ್ತಿದೆ. ಇದೇ ಮಾದರಿಯಲ್ಲಿ ಇದೀಗ ಕರಾವಳಿ ಭಾಗಗಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ಮನವಿ ಮಾಡಿದರು. ಕರಾವಳಿ ಭಾಗ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಅಗತ್ಯವಿದೆ. ಶಾಸಕರ ಅನುದಾನದಲ್ಲಿ ವ್ಯತ್ಯಾಸ ಬೇಡ. ಅಲ್ಲದೇ, ಹೊಸ ಸರಕಾರ ಬಂದ ನಂತರ ಅನುದಾನ ತೀರ ಕಡಿಮೆ ಆಗಿದೆ ಎಂದು ಅವರು ಉಲ್ಲೇಖಿಸಿದರು. ಇದಕ್ಕೆ ದನಿಗೂಡಿಸಿದ ಸುನೀಲ್ ಕುಮಾರ್, ಎನ್‍ಡಿಆರ್‌ಎಫ್ ಅಡಿ ಅನುದಾನ ನೀಡಿದರೆ ರಸ್ತೆ ದುರಸ್ಥಿ ಸಾಧ್ಯವೇ ಇಲ್ಲ. ಲೋಕೋಪಯೋಗಿ ಇಲಾಖೆ ಅಡಿಯಲ್ಲಿಯೇ ಅನುದಾನ ನೀಡಲು ರಾಜ್ಯ ಸರಕಾರ ಮುಂದಾಗಬೇಕು ಎಂದು ಹೇಳಿದರು. ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿ, ಈ ಹಿಂದೆ ಅನಾಹುತ ಸಂಭವಿಸಿದಾಗ ನಾವು ಅನುದಾನ ನೀಡುವ ಸಂದರ್ಭದಲ್ಲಿ ಅಲ್ಲಿ ಯಾವ ಪಕ್ಷ ಇದೆ ಎಂದು ನೋಡಿಲ್ಲ. ಅತಿಯಾದ ತಾರತಮ್ಯ ಮಾಡಲು ಹೋಗಬೇಡಿ. ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಲಿ ಎಂದು ತಿಳಿಸಿದರು. ಇದಕ್ಕೆ ಉತ್ತರಿಇದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮಳೆಗಾಲದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ತಾತ್ಕಲಿಕವಾಗಿ ಕ್ರಮ ಕೈಗೊಂಡು ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದರು. \ No newline at end of file diff --git a/Varta_Bharati/url_26_100_25.txt b/Varta_Bharati/url_26_100_25.txt new file mode 100644 index 0000000000000000000000000000000000000000..c9358e393365eb446a4c0641e06b737f3cc886c6 --- /dev/null +++ b/Varta_Bharati/url_26_100_25.txt @@ -0,0 +1 @@ +ಬೆಂಗಳೂರು : ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿ ಉತ್ಪಾದಿಸಿರುವ ಸಹ್ಯಾದ್ರಿ ಕೆಂಪು ಮುಕ್ತಿ ಭತ್ತದ ತಳಿ 40 ವರ್ಷಗಳ ಹಿಂದೆ ಕೇರಳದಿಂದ ಪರಿಚಯಸಲ್ಪಟ್ಟ ಎಂಓ-4 ಗಿಂತಲೂ ಹೆಚ್ಚು ಇಳುವರಿ ಹಾಗೂ ರೋಗನಿರೋಧಕ ಸಾಮರ್ಥ್ಯ ಹೊಂದಿದೆ. ಹೀಗಾಗಿ ಆ ಬಿತ್ತನೆ ಬೀಜ ಪೂರೈಕೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಗುರುರಾಜ್ ಶೆಟ್ಟಿ ಗಂಟಿಹೊಳೆ ಗಮನ ಸೆಳೆಯುವ ಸೂಚನೆಯಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಬರ ಸ್ಥಿತಿಯಿಂದ ಉತ್ಪಾದನೆ ಕೊರತೆಯಾದರೂ ಕರಾವಳಿಗೆ ಜಿಲ್ಲೆಗಳಿಗೆ 1,492 ಕ್ವಿಂಟಾಲ್ ಬಿತ್ತನೆಬೀಜ ಪೂರೈಸಿದೆ. ಜೊತೆಗೆ ಬೀಜ ನಿಗಮ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿವಿ ಮೂಲಕ 959 ಕ್ವಿಂಟಾಲ್ ಪ್ರಮಾಣೀಕೃತ ಬಿತ್ತನೆ ಬೀಜ ಪೂರೈಸಿದೆ. ಹೀಗಾಗಿ ಬಿತ್ತನೆಬೀಜ ಪೂರೈಕೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಹೇಳಿದರು. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ 1,492 ಕ್ವಿಂಟಾಲ್ ಪ್ರಮಾಣಿತ ಎಂಓ-4 ಭತ್ತದ ಬಿತ್ತನೆ ಬೀಜ ಪೂರೈಸಿದ್ದು ಇದರ ಜೊತೆಗೆ ಸ್ಥಳೀಯವಾಗಿ ಉತ್ಪಾದಿತ ಸಹ್ಯಾದ್ರಿ ಕೆಂಪುಮುಕ್ತಿ 730 ಕ್ವಿಂಟಾಲ್ ಹಾಗೂ 196.50 ಕ್ವಿಂಟಾಲ್ ಉಮಾ ತಳಿ 229 ಕ್ವಿಂಟಾಲ್ ಜ್ಯೋತಿ ತಳಿ ಬಿತ್ತನೆ ಬೀಜಗಳು ಸೇರಿದಂತೆ ಒಟ್ಟು 2,648 ಕ್ವಿಂಟಾಲ್‍ಗೂ ಅಧಿಕ ಬಿತ್ತನೆಬೀಜಗಳನ್ನು ರಾಜ್ಯ ಬೀಜ ನಿಗಮದಿಂದ ರೈತ ಸಂಪರ್ಕ ಕೇಂದ್ರಗಳ ಮೂಲಕ ಸರಬರಾಜು ಮಾಡಲಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು. ಕರಾವಳಿ ಜಿಲ್ಲೆಗಳಿಗೆ ಸುಮಾರು 2,400 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ಬೇಡಿಕೆ ಇತ್ತು, ಇದರಲ್ಲಿ 1492.21 ಕ್ವಿಂಟಾಲ್ ಒಔ-4 ಹಾಗೂ 959 ಕ್ವಿಂಟಾಲ್ ಸಹ್ಯಾದ್ರಿ ಕೆಂಪುಮುಕ್ತಿ ಬಿತ್ತನೆ ಬೀಜ ಸರಬರಾಜು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. \ No newline at end of file diff --git a/Varta_Bharati/url_26_100_26.txt b/Varta_Bharati/url_26_100_26.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_27.txt b/Varta_Bharati/url_26_100_27.txt new file mode 100644 index 0000000000000000000000000000000000000000..c9358e393365eb446a4c0641e06b737f3cc886c6 --- /dev/null +++ b/Varta_Bharati/url_26_100_27.txt @@ -0,0 +1 @@ +ಬೆಂಗಳೂರು : ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿ ಉತ್ಪಾದಿಸಿರುವ ಸಹ್ಯಾದ್ರಿ ಕೆಂಪು ಮುಕ್ತಿ ಭತ್ತದ ತಳಿ 40 ವರ್ಷಗಳ ಹಿಂದೆ ಕೇರಳದಿಂದ ಪರಿಚಯಸಲ್ಪಟ್ಟ ಎಂಓ-4 ಗಿಂತಲೂ ಹೆಚ್ಚು ಇಳುವರಿ ಹಾಗೂ ರೋಗನಿರೋಧಕ ಸಾಮರ್ಥ್ಯ ಹೊಂದಿದೆ. ಹೀಗಾಗಿ ಆ ಬಿತ್ತನೆ ಬೀಜ ಪೂರೈಕೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಗುರುರಾಜ್ ಶೆಟ್ಟಿ ಗಂಟಿಹೊಳೆ ಗಮನ ಸೆಳೆಯುವ ಸೂಚನೆಯಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಬರ ಸ್ಥಿತಿಯಿಂದ ಉತ್ಪಾದನೆ ಕೊರತೆಯಾದರೂ ಕರಾವಳಿಗೆ ಜಿಲ್ಲೆಗಳಿಗೆ 1,492 ಕ್ವಿಂಟಾಲ್ ಬಿತ್ತನೆಬೀಜ ಪೂರೈಸಿದೆ. ಜೊತೆಗೆ ಬೀಜ ನಿಗಮ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿವಿ ಮೂಲಕ 959 ಕ್ವಿಂಟಾಲ್ ಪ್ರಮಾಣೀಕೃತ ಬಿತ್ತನೆ ಬೀಜ ಪೂರೈಸಿದೆ. ಹೀಗಾಗಿ ಬಿತ್ತನೆಬೀಜ ಪೂರೈಕೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಹೇಳಿದರು. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ 1,492 ಕ್ವಿಂಟಾಲ್ ಪ್ರಮಾಣಿತ ಎಂಓ-4 ಭತ್ತದ ಬಿತ್ತನೆ ಬೀಜ ಪೂರೈಸಿದ್ದು ಇದರ ಜೊತೆಗೆ ಸ್ಥಳೀಯವಾಗಿ ಉತ್ಪಾದಿತ ಸಹ್ಯಾದ್ರಿ ಕೆಂಪುಮುಕ್ತಿ 730 ಕ್ವಿಂಟಾಲ್ ಹಾಗೂ 196.50 ಕ್ವಿಂಟಾಲ್ ಉಮಾ ತಳಿ 229 ಕ್ವಿಂಟಾಲ್ ಜ್ಯೋತಿ ತಳಿ ಬಿತ್ತನೆ ಬೀಜಗಳು ಸೇರಿದಂತೆ ಒಟ್ಟು 2,648 ಕ್ವಿಂಟಾಲ್‍ಗೂ ಅಧಿಕ ಬಿತ್ತನೆಬೀಜಗಳನ್ನು ರಾಜ್ಯ ಬೀಜ ನಿಗಮದಿಂದ ರೈತ ಸಂಪರ್ಕ ಕೇಂದ್ರಗಳ ಮೂಲಕ ಸರಬರಾಜು ಮಾಡಲಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು. ಕರಾವಳಿ ಜಿಲ್ಲೆಗಳಿಗೆ ಸುಮಾರು 2,400 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ಬೇಡಿಕೆ ಇತ್ತು, ಇದರಲ್ಲಿ 1492.21 ಕ್ವಿಂಟಾಲ್ ಒಔ-4 ಹಾಗೂ 959 ಕ್ವಿಂಟಾಲ್ ಸಹ್ಯಾದ್ರಿ ಕೆಂಪುಮುಕ್ತಿ ಬಿತ್ತನೆ ಬೀಜ ಸರಬರಾಜು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. \ No newline at end of file diff --git a/Varta_Bharati/url_26_100_28.txt b/Varta_Bharati/url_26_100_28.txt new file mode 100644 index 0000000000000000000000000000000000000000..15de1f6bd8e42686fc27ef6f2a20caddeb24ec9f --- /dev/null +++ b/Varta_Bharati/url_26_100_28.txt @@ -0,0 +1 @@ +ಬೆಂಗಳೂರು: ಕಳೆದ ವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿಗೆ ಅನುಮೋದನೆ ನೀಡಲಾಗಿದ್ದು, ಈ ಸಂಬಂಧ ಸರಕಾರದಿಂದ ಸೋಮವಾರ ಅಧಿಕೃತ ಆದೇಶ ಹೊರಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್(ಟ್ವಿಟ್ಟರ್) ಖಾತೆಯಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಸರಕಾರಿ ನೌಕರರಿಗೆ ನೀಡಿದ್ದ ಬಹುದೊಡ್ಡ ಭರವಸೆಯನ್ನು ಈಡೇರಿಸುವ ಮೂಲಕ ರಾಜ್ಯ ಸರಕಾರವು ನುಡಿದಂತೆ ನಡೆದಿದೆʼ ಎಂದು ಪ್ರಕಟಿಸಿದ್ದಾರೆ. ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಆದೇಶ ಹೊರಡಿಸಿದ್ದು, 2022ರ ಜುಲೈ 1ರಿಂದ ಜಾರಿಗೆ ಬರುವಂತೆ 7ನೆ ವೇತನ ಆಯೋಗದ ವರದಿಯಂತೆ ವೇತನ ಜಾರಿ ಗೊಳಿಸುವುದಾಗಿ ಘೋಷಣೆ ಮಾಡಿದ್ದರು. ರಾಜ್ಯ ಸರಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಮಾಡಲಾಗಿದೆ. ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 1ರಿಂದ ಜಾರಿಗೆ ಬರಲಿದ್ದು, ಇದರಿಂದ ಸರಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹಾಗೂ ಮನೆಬಾಡಿಗೆ ಭತ್ಯೆಯಲ್ಲಿ ಶೇ.32 ಹೆಚ್ಚಳವಾಗಲಿದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿವಿಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದ್ದು, ಇದಕ್ಕಾಗಿ ವಾರ್ಷಿಕ 20,208 ಕೋಟಿ ರೂ.ಹೆಚ್ಚುವರಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. \ No newline at end of file diff --git a/Varta_Bharati/url_26_100_29.txt b/Varta_Bharati/url_26_100_29.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_3.txt b/Varta_Bharati/url_26_100_3.txt new file mode 100644 index 0000000000000000000000000000000000000000..d5f5de58e77e405dec01c3886f21b08d8de0344b --- /dev/null +++ b/Varta_Bharati/url_26_100_3.txt @@ -0,0 +1 @@ +ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಅವರ ಹೆಸರು ಹೇಳುವಂತೆ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾಗಿದ್ದ ಬಿ. ಕಲ್ಲೇಶಪ್ಪ ಅವರಿಗೆ ಇ.ಡಿ ಆಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಮಂಗಳವಾರ ಧರಣಿ ನಡೆಸಿದರು.ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ‘ಕಾನೂನು ರೀತಿಯ ಹೋರಾಟ ಮಾಡಲು ನಾವು ತಯಾರಿದ್ದೇವೆ. ಯಾರ ಮುಲಾಜಿಗೂ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣೆ ಮಾಡುವುದಿಲ್ಲ. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ‘ನನಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿದ್ದ ಕಲ್ಲೇಶ್‌ ಅವರನ್ನು ವಿಚಾರಣೆಗೆ ಕರೆದು ಬೆದರಿಸಿ ನನ್ನ ಹೆಸರು ಹೇಳುವಂತೆ ಒತ್ತಡ ಹೇರುತ್ತಿದ್ದಾರೆ. ಈ ವಿಚಾರವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ನಾವು ಪ್ರಸ್ತಾಪಿಸುತ್ತೇವೆ. ರಾಜಕೀಯ ದ್ವೇಷ, ರಾಜಕೀಯ ಸೇಡಿನ ಬಗ್ಗೆ ತೀವ್ರವಾಗಿ ಖಂಡಿಸುತ್ತೇವೆ. ಹೈಕಮಾಂಡ್ ನಾಯಕರ ಜೊತೆಗೂ ನಾವು ಈ ಬಗ್ಗೆ ಮಾತನಾಡಿದ್ದೇವೆ. ಲೋಕಸಭೆಯಲ್ಲಿಯೂ ವಿಷಯ ಪ್ರಸ್ತಾಪಿಸಲು ಹೇಳಿದ್ದೇವೆ’ ಎಂದರು.ವಾಲ್ಮೀಕಿ ಹಗರಣಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಆದರೂ, ಈ ಪ್ರಕರಣ ಮುಂದಿಟ್ಟು ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸುವ ಯತ್ನಗಳು ನಡೆಯುತ್ತಿವೆ. ಇಡಿ ಅಧಿಕಾರಿಗಳು ಬೆದರಿಕೆಯೊಡ್ಡಿರುವ ಬಗ್ಗೆ ಪೊಲೀಸರಿಗೆ ಕಲ್ಲೇಶ್‌ ಅವರು ದೂರು ನೀಡಿದ್ದು ಎಫ್‌ಐಆರ್‌ ಕೂಡಾ ದಾಖಲಾಗಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿದೆ ಎಂದರು.‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಎಸ್ಐಟಿ, ಸಿಬಿಐ, ಇ.ಡಿ ಹೀಗೆ ಮೂರು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಒಂದೇ ಪ್ರಕರಣದಲ್ಲಿ ಮೂರು ತನಿಖಾ ಸಂಸ್ಥೆಗಳು ತನಿಖೆ ಮಾಡುತ್ತಿರುವುದು ವಿಶೇಷ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ನಾವು ಯಾವತ್ತೂ ಹೇಳಿಲ್ಲ. ಹಿಂದೆ ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳನ್ನು ಈಡಿ ತನಿಖೆಯೇ ಮಾಡಿಲ್ಲ. ಸಿಬಿಐಗೂ ಕೊಟ್ಟಿಲ್ಲ. ಕೇಂದ್ರದಲ್ಲಿ ಅವರದ್ದೇ (ಬಿಜೆಪಿ) ಸರ್ಕಾರ ಇರುವುದರಿಂದ ಈಗ ಸಿಬಿಐಗೆ ಕೊಡಿ, ಸಿಬಿಐಗೆ ಕೊಡಿ ಎಂದು ಹೇಳುತ್ತಿದ್ದಾರೆ’ ಎಂದರು.ನಾವು ಎಸ್ಐಟಿ ರಚನೆ ಮಾಡಿದ ಮೇಲೆ ತ್ವರಿತವಾಗಿ ತನಿಖೆ ನಡೆಯುತ್ತಿದ್ದು, ಶೇ 90ರಷ್ಟು ತನಿಖೆ ಮುಗಿದಿದೆ. ಅಗತ್ಯವಿರುವಪ್ರಕರಣಗಳನ್ನು ನಾವು ಸಿಬಿಐಗೆ ಕೊಟ್ಟಿದ್ದೇವೆ. ₹ 25 ಕೋಟಿಗಿಂತ ಹೆಚ್ಚು ಮೊತ್ತದ ಹಗರಣ ನಡೆದರೆ ಸಿಬಿಐ ತನಿಖೆ ಮಾಡಲಿ. ನಮ್ಮದೇನು‌ ತಕರಾರು ಇಲ್ಲ. ಆದರೆ ಕಾನೂನು ಬಾಹಿರವಾಗಿ ಯಾರನ್ನೂ ಗುರಿಯಾಗಿಸಿಕೊಂಡು ತನಿಖೆ ಮಾಡಬಾರದು. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಹೋಗಬಾರದು’ ಎಂದರು.‘ನಿಗಮದಲ್ಲಿ ₹ 187 ಕೋಟಿ ದುರುಪಯೋಗ ಆಗಿದೆ ಎಂದು ವಿರೋಧ ಪಕ್ಷದವರು ಪದೇ ಪದೇ ಹೇಳುತ್ತಿದ್ದಾರೆ. ಎಂ.ಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ನಿಂದ ತೆಲಂಗಾಣಕ್ಕೆ ಹೋಗಿರುವುದು ₹ 89.63 ಕೋಟಿ ಮಾತ್ರ. ಅದರಲ್ಲಿ ₹ 34 ಕೋಟಿ ನಗದು ವಸೂಲಿ ಆಗಿದೆ. ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ಶಾಸಕ ದದ್ದಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದು, ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದರು.‘ಅಕ್ರಮವಾಗಿ ಹಣ ವರ್ಗಾವಣೆಯಾಗಲು ಬ್ಯಾಂಕಿನವರು ಕಾರಣ ಎಂದು ಬ್ಯಾಂಕಿನ ಅಧಿಕಾರಿಗಳೇ ದೂರು ಕೊಟ್ಟಿದ್ದಾರೆ. ಹೀಗಾಗಿ ಸಿಬಿಐನವರು ತನಿಖೆ ಮಾಡುತ್ತಿದ್ದಾರೆ. ಆದರೆ ಈ ಮಧ್ಯೆ ಹಣ ವರ್ಗಾವಣೆಗೆ ಮುಖ್ಯಮಂತ್ರಿ ಆದೇಶ ಇತ್ತು ಎಂದು ಬರೆದುಕೊಡುವಂತೆ ಇಡಿಯವರು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. \ No newline at end of file diff --git a/Varta_Bharati/url_26_100_30.txt b/Varta_Bharati/url_26_100_30.txt new file mode 100644 index 0000000000000000000000000000000000000000..15de1f6bd8e42686fc27ef6f2a20caddeb24ec9f --- /dev/null +++ b/Varta_Bharati/url_26_100_30.txt @@ -0,0 +1 @@ +ಬೆಂಗಳೂರು: ಕಳೆದ ವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿಗೆ ಅನುಮೋದನೆ ನೀಡಲಾಗಿದ್ದು, ಈ ಸಂಬಂಧ ಸರಕಾರದಿಂದ ಸೋಮವಾರ ಅಧಿಕೃತ ಆದೇಶ ಹೊರಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್(ಟ್ವಿಟ್ಟರ್) ಖಾತೆಯಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಸರಕಾರಿ ನೌಕರರಿಗೆ ನೀಡಿದ್ದ ಬಹುದೊಡ್ಡ ಭರವಸೆಯನ್ನು ಈಡೇರಿಸುವ ಮೂಲಕ ರಾಜ್ಯ ಸರಕಾರವು ನುಡಿದಂತೆ ನಡೆದಿದೆʼ ಎಂದು ಪ್ರಕಟಿಸಿದ್ದಾರೆ. ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಆದೇಶ ಹೊರಡಿಸಿದ್ದು, 2022ರ ಜುಲೈ 1ರಿಂದ ಜಾರಿಗೆ ಬರುವಂತೆ 7ನೆ ವೇತನ ಆಯೋಗದ ವರದಿಯಂತೆ ವೇತನ ಜಾರಿ ಗೊಳಿಸುವುದಾಗಿ ಘೋಷಣೆ ಮಾಡಿದ್ದರು. ರಾಜ್ಯ ಸರಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಮಾಡಲಾಗಿದೆ. ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 1ರಿಂದ ಜಾರಿಗೆ ಬರಲಿದ್ದು, ಇದರಿಂದ ಸರಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹಾಗೂ ಮನೆಬಾಡಿಗೆ ಭತ್ಯೆಯಲ್ಲಿ ಶೇ.32 ಹೆಚ್ಚಳವಾಗಲಿದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿವಿಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದ್ದು, ಇದಕ್ಕಾಗಿ ವಾರ್ಷಿಕ 20,208 ಕೋಟಿ ರೂ.ಹೆಚ್ಚುವರಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. \ No newline at end of file diff --git a/Varta_Bharati/url_26_100_31.txt b/Varta_Bharati/url_26_100_31.txt new file mode 100644 index 0000000000000000000000000000000000000000..2574ad2088d8fa332f98bbff0cbf0b7b2b47f870 --- /dev/null +++ b/Varta_Bharati/url_26_100_31.txt @@ -0,0 +1 @@ +ಬೆಂಗಳೂರು : 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವಂತೆ ‘ಡೇ ಕೇರ್ ಕೀಮೊ ಥೆರಪಿ ಕೇಂದ್ರ’ಗಳನ್ನು ಆರೋಗ್ಯ ಇಲಾಖೆಯಡಿಯಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವರ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ತಡೆಗಟ್ಟಲು ಪ್ರಸಕ್ತ ವರ್ಷದ ಬಜೆಟ್‍ನಂತೆ ಯಂತ್ರಗಳ ಖರೀದಿಗಾಗಿ ಅನುದಾನ ಅನುಮೋದನೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಸ್ತನ ಕ್ಯಾನ್ಸರ್ ತಪಾಸಣೆಗಾಗಿ 20 ಜಿಲ್ಲಾ ಆಸ್ಪತ್ರೆಗಳಿಗೆ ಡಿಜಿಟಲ್ ಮೊಮೋಗ್ರಾಮ್ ಯಂತ್ರಗಳನ್ನು ಟೆಂಡರ್ ಮುಖಾಂತರ ಖರೀದಿಸುವ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆಯಲ್ಲಿ ಎಸ್‍ಸಿಡಿ ವಿಭಾಗದಲ್ಲಿ ಮೂರು ಕ್ಯಾನ್ಸರ್ ಗಳಾದ ಬಾಯಿ, ಸ್ತನ ಹಾಗೂ ಗರ್ಭ ಕಂಠದ ಕ್ಯಾನ್ಸರ್ ಗಳ ತಪಾಸಣೆ ಪತ್ತೆ ಹಚ್ಚುವಿಕೆ ಹಾಗೂ ತೃತೀಯ ಹಂತದ ಚಿಕಿತ್ಸೆ ರಾನೆಯ ಕಾರ್ಯಕ್ರಮಗಳನ್ನು ಇಲಾಖೆಯ ಪೋರ್ಟಲ್‍ನಲ್ಲಿ ದಾಖಲೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯದಲ್ಲಿ 35-40ರ ವಯಸ್ಸಿನ ಮಹಿಳೆಯರಿಗೆ ಕ್ಯಾನ್ಸರ್ ತಪಾಸಣೆಯನ್ನು ಕಡ್ಡಾಯಗೊಳಿಸಿರುವುದಿಲ್ಲ. ಸ್ವಯಂ ದೈಹಿಕ ಪರೀಕ್ಷೆ ಮುಖಾಂತರ ಸ್ತನ ಕ್ಯಾನ್ಸರ್ ಪತ್ತೆ ಹಚ್ಚಲಾಗುತ್ತಿದೆ. ಬಾಯಿ ಪರೀಕ್ಷೆ ಮೂಲಕ ಬಾಯಿ ಕ್ಯಾನ್ಸರ್ ಪತ್ತೆ ಹಚ್ಚಲಾಗುತ್ತಿದೆ. ಸಂಶಯಾಸ್ಪದ ಪ್ರಕರಣಗಳ ಹೆಚ್ಚಿನ ತಪಾಸಣೆಗಾಗಿ ಅಂದರೆ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಹೆಚ್ಚಿನ ಚಿಕಿತ್ಸೆಗಾಗಿ ತೃತೀಯ ಹಂತದ ಆಸ್ಪತ್ರೆಗಳಿಗೆ ಎಬಿ-ಎಆರ್‌ ಕೆ ಅಡಿಯಲ್ಲಿ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗುತ್ತಿದೆ ಎಂದು ಅವರು ತಿಳಿಸಿದರು. \ No newline at end of file diff --git a/Varta_Bharati/url_26_100_32.txt b/Varta_Bharati/url_26_100_32.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_33.txt b/Varta_Bharati/url_26_100_33.txt new file mode 100644 index 0000000000000000000000000000000000000000..2574ad2088d8fa332f98bbff0cbf0b7b2b47f870 --- /dev/null +++ b/Varta_Bharati/url_26_100_33.txt @@ -0,0 +1 @@ +ಬೆಂಗಳೂರು : 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವಂತೆ ‘ಡೇ ಕೇರ್ ಕೀಮೊ ಥೆರಪಿ ಕೇಂದ್ರ’ಗಳನ್ನು ಆರೋಗ್ಯ ಇಲಾಖೆಯಡಿಯಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವರ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ತಡೆಗಟ್ಟಲು ಪ್ರಸಕ್ತ ವರ್ಷದ ಬಜೆಟ್‍ನಂತೆ ಯಂತ್ರಗಳ ಖರೀದಿಗಾಗಿ ಅನುದಾನ ಅನುಮೋದನೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಸ್ತನ ಕ್ಯಾನ್ಸರ್ ತಪಾಸಣೆಗಾಗಿ 20 ಜಿಲ್ಲಾ ಆಸ್ಪತ್ರೆಗಳಿಗೆ ಡಿಜಿಟಲ್ ಮೊಮೋಗ್ರಾಮ್ ಯಂತ್ರಗಳನ್ನು ಟೆಂಡರ್ ಮುಖಾಂತರ ಖರೀದಿಸುವ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆಯಲ್ಲಿ ಎಸ್‍ಸಿಡಿ ವಿಭಾಗದಲ್ಲಿ ಮೂರು ಕ್ಯಾನ್ಸರ್ ಗಳಾದ ಬಾಯಿ, ಸ್ತನ ಹಾಗೂ ಗರ್ಭ ಕಂಠದ ಕ್ಯಾನ್ಸರ್ ಗಳ ತಪಾಸಣೆ ಪತ್ತೆ ಹಚ್ಚುವಿಕೆ ಹಾಗೂ ತೃತೀಯ ಹಂತದ ಚಿಕಿತ್ಸೆ ರಾನೆಯ ಕಾರ್ಯಕ್ರಮಗಳನ್ನು ಇಲಾಖೆಯ ಪೋರ್ಟಲ್‍ನಲ್ಲಿ ದಾಖಲೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯದಲ್ಲಿ 35-40ರ ವಯಸ್ಸಿನ ಮಹಿಳೆಯರಿಗೆ ಕ್ಯಾನ್ಸರ್ ತಪಾಸಣೆಯನ್ನು ಕಡ್ಡಾಯಗೊಳಿಸಿರುವುದಿಲ್ಲ. ಸ್ವಯಂ ದೈಹಿಕ ಪರೀಕ್ಷೆ ಮುಖಾಂತರ ಸ್ತನ ಕ್ಯಾನ್ಸರ್ ಪತ್ತೆ ಹಚ್ಚಲಾಗುತ್ತಿದೆ. ಬಾಯಿ ಪರೀಕ್ಷೆ ಮೂಲಕ ಬಾಯಿ ಕ್ಯಾನ್ಸರ್ ಪತ್ತೆ ಹಚ್ಚಲಾಗುತ್ತಿದೆ. ಸಂಶಯಾಸ್ಪದ ಪ್ರಕರಣಗಳ ಹೆಚ್ಚಿನ ತಪಾಸಣೆಗಾಗಿ ಅಂದರೆ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಹೆಚ್ಚಿನ ಚಿಕಿತ್ಸೆಗಾಗಿ ತೃತೀಯ ಹಂತದ ಆಸ್ಪತ್ರೆಗಳಿಗೆ ಎಬಿ-ಎಆರ್‌ ಕೆ ಅಡಿಯಲ್ಲಿ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗುತ್ತಿದೆ ಎಂದು ಅವರು ತಿಳಿಸಿದರು. \ No newline at end of file diff --git a/Varta_Bharati/url_26_100_34.txt b/Varta_Bharati/url_26_100_34.txt new file mode 100644 index 0000000000000000000000000000000000000000..e8a9c2d022d0ddfdf5e77d833faf225946e2f525 --- /dev/null +++ b/Varta_Bharati/url_26_100_34.txt @@ -0,0 +1 @@ +ಚಿಕ್ಕಮಗಳೂರು : ಜಿಲ್ಲೆಯಲ್ಲಿ ಈ ಬಾರಿ ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ವಾಡಿಕೆಗಿಂತ ಹೆಚ್ಚುವರಿ ಮಳೆಯಾಗಿದ್ದು, ಭಾರೀ ಮಳೆ, ಗಾಳಿಗೆ ಜಿಲ್ಲಾದ್ಯಂತ ಒಟ್ಟು 192 ಮನೆಗಳಿಗೆ ಹಾನಿಯಾಗಿದ್ದು, ಅಂದಾಜು 100ಕೋಟಿ ರೂ. ಗೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಳೆ ಹಾನಿ ಬಗ್ಗೆ ಮಾಹಿತಿ ನೀಡಿದ ಅವರು, "ಜ.1ರಿಂದ ಜು.22ರವರೆಗೆ ಜಿಲ್ಲೆಯ ವಾಡಿಕೆ ಮಳೆ 887ಮಿಮೀ. ಆಗಿದ್ದು, ಈ ಬಾರಿ 1096ಮಿಮೀ. ಮಳೆಯಾಗಿದೆ. ಶೇ.24ರಷ್ಟು ಹೆಚ್ಚುವರಿ ಮಳೆಯಾಗಿದೆ. ಕಳೆದ 7ದಿನಗಳ ವಾಡಿಕೆ ಮಳೆ 124ಮಿಮೀ. ಆಗಿದ್ದು, ಜಿಲ್ಲಾದ್ಯಂತ 329ಮಿಮೀ. ಮಳೆಯಾಗಿದೆ. ಶೇ.166ರಷ್ಟು ಹೆಚ್ಚುವರಿ ಮಳೆಯಾಗಿದೆ" ಎಂದರು. ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಮಳೆಯಿಂದಾಗಿ ಕೃಷಿ, ತೋಟಗಾರಿಕೆ ಬೆಳೆಗಳು ಹಾಗೂ ಮನೆಗಳು, ರಸ್ತೆ. ಸೇತುವೆ ಸೇರಿದಂತೆ ಸಾರ್ವಜನಿಕರ ಆಸ್ತಿಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಜಿಲ್ಲೆಯ ಜೂನ್-ಜುಲೈ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಜಿಲ್ಲಾದ್ಯಂತ ಒಟ್ಟು 192 ಮನೆಗಳಿಗೆ ಹಾನಿಯಾಗಿದ್ದು, ಅಂದಾಜು 100 ಕೋಟಿ. ರೂ.ನಷ್ಟು ಹಾನಿ ಸಂಭವಿಸಿದೆ ಎಂದು ಹೇಳಿದರು.192 ಮನೆಗಳ ಪೈಕಿ 122ಮನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿದ್ದರೆ, 70 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 37 ಮನೆಗಳಿಗೆ ಹಾನಿಯಾಗಿದ್ದರೆ, ಮೂಡಿಗೆರೆ ತಾಲೂಕಿನಲ್ಲಿ 45, ಕಡೂರು ತಾಲೂಕಿನಲ್ಲಿ 23, ತರೀಕೆರೆ ತಾಲೂಕಿನಲ್ಲಿ 10, ಅಜ್ಜಂಪುರ ತಾಲೂಕಿನಲ್ಲಿ 9, ಕೊಪ್ಪ ತಾಲೂಕಿನಲ್ಲಿ 17, ಶೃಂಗೇರಿ ತಾಲೂಕಿನಲ್ಲಿ 7, ಎನ್.ಆರ್.ಪುರ ತಾಲೂಕಿನಲ್ಲಿ 22 ಹಾಗೂ ಕಳಸ ತಾಲೂಕಿನಲ್ಲಿ 12 ಮನೆಗಳಿಗೆ ಹಾನಿ ಸಂಭವಿಸಿದೆ ಎಂದು ಮಾಹಿತಿ ನೀಡಿದರು. ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಪ್ರತೀ ಮನೆಗಳಿಗೆ 1.20ಲಕ್ಷ ರೂ. ಪಾವತಿಸಲಾಗಿದ್ದು, ಒಟ್ಟಾರೆ 70.59ಲಕ್ಷ ರೂ. ಪರಿಹಾರ ನೀಡಲಾಗಿದೆ. 72 ಮನೆಗಳಿಗೆ ಪರಿಹಾರ ನೀಡಲು ಬಾಕಿ ಇದ್ದು, 43 ಅನಧೀಕೃತ ಮನೆಗಳಿಗೆ ಪರಿಹಾರ ನೀಡಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ 4 ಜಾನುವಾರುಗಳು ಮೃತಪಟ್ಟಿದ್ದು, ತಲಾ 37,500 ರೂ. ನಂತೆ ಪರಿಹಾರಧನ ವಿತರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯ 41 ಸೇತುವೆ ಹಾಗೂ 8ಕಿಮೀ ರಸ್ತೆಗೆ ಹಾನಿಯಾಗಿದ್ದು, ಒಟ್ಟು 56ಕೋಟಿ ರೂ. ಹಾನಿ ಸಂಭವಿಸಿದೆ. ಪಿಆರ್‌ಇಡಿ ಇಲಾಖೆಯ 339 ಕಿಮೀ ರಸ್ತೆ, 27 ಕಿರುಸೇತುವೆಗಳು, 10 ಶಾಲಾ ಕಟ್ಟಡಗಳು ಹಾಗೂ 7 ನೀರಿನ ಟ್ಯಾಂಕ್‍ಗಳಿಗೆ ಹಾನಿಯಾಗಿದ್ದು, ಒಟ್ಟು 48ಕೋಟಿ ರೂ. ಹಾನಿ ಸಂಭವಿಸಿದೆ. ರಸ್ತೆ, ಸೇತುವೆಗಳ ದುರಸ್ತಿಗೆ 4 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದ್ದು, 15 ದಿನಗಳೊಳಗೆ ದುರಸ್ತಿ ಕೆಲಸ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಮಳೆಯಿಂದಾಗಿ ಜಿಲ್ಲಾದ್ಯಂತ 1849 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಈ ಪೈಕಿ 1493 ವಿದ್ಯುತ್ ಕಂಬಗಳನ್ನು ಬದಲಾಯಿಸಲಾಗಿದೆ. ವಿದ್ಯುತ್ ಕಂಬಗಳು ಉರುಳಿರುವ ಕೆಲ ಕುಗ್ರಾಮಗಳಲ್ಲಿ ಕಂಬಗಳನ್ನು ಬದಲಾಯಿಸಲು ಸಮಸ್ಯೆ ಇರುವುದರಿಂದ ಕೆಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗಿಲ್ಲ. ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಲಾಗುವುದು ಎಂದರು.ಜಿಲ್ಲಾದ್ಯಂತ 80 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದ್ದು, ಅಂದಾಜು 19 ಲಕ್ಷ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶಗಳಲ್ಲಿ ಮಣ್ಣು ತೆರವು ಕೆಲಸ ಪೂರ್ಣಗೊಳಿಸಲಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದ್ದ ಭಾಗಗಳಲ್ಲಿ ಸಂಪರ್ಕ ಪುನಾರಂಭವಾಗಿದೆ. ಅತೀವೃಷ್ಟಿಯಿಂದಾಗಿ ಹಾನಿ ಸಂಭವಿಸಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ, ಮನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಡೂರು, ಅಜ್ಜಂಪುರ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಪರಿಹಾರ ಕ್ರಮಗಳಿಗಾಗಿ ಕೊಪ್ಪ, ಕಳಸ ತಾಲೂಕಿಗೆ ನಿಯೋಜಿಸಲಾಗಿದೆ. ಜಿಲ್ಲಾದ್ಯಂತ 77 ಕಾಳಜಿ ಕೇಂದ್ರ ತೆರೆಯಲಾಗಿದ್ದು, ಸದ್ಯ ಇಬ್ಬರು ಈ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದರು. ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಸದ್ಯ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹೆದ್ದಾರಿ ಭಾಗದಲ್ಲಿ ತೆರವು ಮಾಡಬೇಕಾದ ಮರಗಳನ್ನು ಗುರುತಿಸಿ ತೆರವು ಕಾರ್ಯ ಮಾಡಲಾಗಿದೆ. ಶೃಂಗೇರಿ-ಮಂಗಳೂರು-ತೀರ್ಥಹಳ್ಳಿ ಹೆದ್ದಾರಿಯಲ್ಲಿ ಶೃಂಗೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ತೆರವು ಮಾಡಲಾಗಿದೆ. ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದರು. ಎಸ್ಪಿ ಡಾ.ವಿಕ್ರಮ್ ಅಮಟೆ, ಜಿಪಂ ಸಿಇಒ ಕೀರ್ತನಾ ಸುದ್ದಿಗೋಷ್ಠಿಯಲ್ಲಿದ್ದರು. ʼಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ಭೂಕುಸಿತ ಉಂಟಾಗಿದ್ದು, ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸದ್ಯ ಗಿರಿಭಾಗಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪ್ರವಾಸಿಗರು ಮಳೆ ಕಡಿಮೆಯಾಗುವ ತನಕ ತಮ್ಮ ಪ್ರವಾಸವನ್ನು ಮುಂದೂಡುವಂತೆ ಸೂಚಿಸಲಾಗಿದೆʼ- ಮೀನಾ ನಾಗರಾಜ್, ಜಿಲ್ಲಾಧಿಕಾರಿ \ No newline at end of file diff --git a/Varta_Bharati/url_26_100_35.txt b/Varta_Bharati/url_26_100_35.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_36.txt b/Varta_Bharati/url_26_100_36.txt new file mode 100644 index 0000000000000000000000000000000000000000..e8a9c2d022d0ddfdf5e77d833faf225946e2f525 --- /dev/null +++ b/Varta_Bharati/url_26_100_36.txt @@ -0,0 +1 @@ +ಚಿಕ್ಕಮಗಳೂರು : ಜಿಲ್ಲೆಯಲ್ಲಿ ಈ ಬಾರಿ ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ವಾಡಿಕೆಗಿಂತ ಹೆಚ್ಚುವರಿ ಮಳೆಯಾಗಿದ್ದು, ಭಾರೀ ಮಳೆ, ಗಾಳಿಗೆ ಜಿಲ್ಲಾದ್ಯಂತ ಒಟ್ಟು 192 ಮನೆಗಳಿಗೆ ಹಾನಿಯಾಗಿದ್ದು, ಅಂದಾಜು 100ಕೋಟಿ ರೂ. ಗೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಳೆ ಹಾನಿ ಬಗ್ಗೆ ಮಾಹಿತಿ ನೀಡಿದ ಅವರು, "ಜ.1ರಿಂದ ಜು.22ರವರೆಗೆ ಜಿಲ್ಲೆಯ ವಾಡಿಕೆ ಮಳೆ 887ಮಿಮೀ. ಆಗಿದ್ದು, ಈ ಬಾರಿ 1096ಮಿಮೀ. ಮಳೆಯಾಗಿದೆ. ಶೇ.24ರಷ್ಟು ಹೆಚ್ಚುವರಿ ಮಳೆಯಾಗಿದೆ. ಕಳೆದ 7ದಿನಗಳ ವಾಡಿಕೆ ಮಳೆ 124ಮಿಮೀ. ಆಗಿದ್ದು, ಜಿಲ್ಲಾದ್ಯಂತ 329ಮಿಮೀ. ಮಳೆಯಾಗಿದೆ. ಶೇ.166ರಷ್ಟು ಹೆಚ್ಚುವರಿ ಮಳೆಯಾಗಿದೆ" ಎಂದರು. ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಮಳೆಯಿಂದಾಗಿ ಕೃಷಿ, ತೋಟಗಾರಿಕೆ ಬೆಳೆಗಳು ಹಾಗೂ ಮನೆಗಳು, ರಸ್ತೆ. ಸೇತುವೆ ಸೇರಿದಂತೆ ಸಾರ್ವಜನಿಕರ ಆಸ್ತಿಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಜಿಲ್ಲೆಯ ಜೂನ್-ಜುಲೈ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಜಿಲ್ಲಾದ್ಯಂತ ಒಟ್ಟು 192 ಮನೆಗಳಿಗೆ ಹಾನಿಯಾಗಿದ್ದು, ಅಂದಾಜು 100 ಕೋಟಿ. ರೂ.ನಷ್ಟು ಹಾನಿ ಸಂಭವಿಸಿದೆ ಎಂದು ಹೇಳಿದರು.192 ಮನೆಗಳ ಪೈಕಿ 122ಮನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿದ್ದರೆ, 70 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 37 ಮನೆಗಳಿಗೆ ಹಾನಿಯಾಗಿದ್ದರೆ, ಮೂಡಿಗೆರೆ ತಾಲೂಕಿನಲ್ಲಿ 45, ಕಡೂರು ತಾಲೂಕಿನಲ್ಲಿ 23, ತರೀಕೆರೆ ತಾಲೂಕಿನಲ್ಲಿ 10, ಅಜ್ಜಂಪುರ ತಾಲೂಕಿನಲ್ಲಿ 9, ಕೊಪ್ಪ ತಾಲೂಕಿನಲ್ಲಿ 17, ಶೃಂಗೇರಿ ತಾಲೂಕಿನಲ್ಲಿ 7, ಎನ್.ಆರ್.ಪುರ ತಾಲೂಕಿನಲ್ಲಿ 22 ಹಾಗೂ ಕಳಸ ತಾಲೂಕಿನಲ್ಲಿ 12 ಮನೆಗಳಿಗೆ ಹಾನಿ ಸಂಭವಿಸಿದೆ ಎಂದು ಮಾಹಿತಿ ನೀಡಿದರು. ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಪ್ರತೀ ಮನೆಗಳಿಗೆ 1.20ಲಕ್ಷ ರೂ. ಪಾವತಿಸಲಾಗಿದ್ದು, ಒಟ್ಟಾರೆ 70.59ಲಕ್ಷ ರೂ. ಪರಿಹಾರ ನೀಡಲಾಗಿದೆ. 72 ಮನೆಗಳಿಗೆ ಪರಿಹಾರ ನೀಡಲು ಬಾಕಿ ಇದ್ದು, 43 ಅನಧೀಕೃತ ಮನೆಗಳಿಗೆ ಪರಿಹಾರ ನೀಡಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ 4 ಜಾನುವಾರುಗಳು ಮೃತಪಟ್ಟಿದ್ದು, ತಲಾ 37,500 ರೂ. ನಂತೆ ಪರಿಹಾರಧನ ವಿತರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯ 41 ಸೇತುವೆ ಹಾಗೂ 8ಕಿಮೀ ರಸ್ತೆಗೆ ಹಾನಿಯಾಗಿದ್ದು, ಒಟ್ಟು 56ಕೋಟಿ ರೂ. ಹಾನಿ ಸಂಭವಿಸಿದೆ. ಪಿಆರ್‌ಇಡಿ ಇಲಾಖೆಯ 339 ಕಿಮೀ ರಸ್ತೆ, 27 ಕಿರುಸೇತುವೆಗಳು, 10 ಶಾಲಾ ಕಟ್ಟಡಗಳು ಹಾಗೂ 7 ನೀರಿನ ಟ್ಯಾಂಕ್‍ಗಳಿಗೆ ಹಾನಿಯಾಗಿದ್ದು, ಒಟ್ಟು 48ಕೋಟಿ ರೂ. ಹಾನಿ ಸಂಭವಿಸಿದೆ. ರಸ್ತೆ, ಸೇತುವೆಗಳ ದುರಸ್ತಿಗೆ 4 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದ್ದು, 15 ದಿನಗಳೊಳಗೆ ದುರಸ್ತಿ ಕೆಲಸ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಮಳೆಯಿಂದಾಗಿ ಜಿಲ್ಲಾದ್ಯಂತ 1849 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಈ ಪೈಕಿ 1493 ವಿದ್ಯುತ್ ಕಂಬಗಳನ್ನು ಬದಲಾಯಿಸಲಾಗಿದೆ. ವಿದ್ಯುತ್ ಕಂಬಗಳು ಉರುಳಿರುವ ಕೆಲ ಕುಗ್ರಾಮಗಳಲ್ಲಿ ಕಂಬಗಳನ್ನು ಬದಲಾಯಿಸಲು ಸಮಸ್ಯೆ ಇರುವುದರಿಂದ ಕೆಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗಿಲ್ಲ. ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಲಾಗುವುದು ಎಂದರು.ಜಿಲ್ಲಾದ್ಯಂತ 80 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದ್ದು, ಅಂದಾಜು 19 ಲಕ್ಷ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶಗಳಲ್ಲಿ ಮಣ್ಣು ತೆರವು ಕೆಲಸ ಪೂರ್ಣಗೊಳಿಸಲಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದ್ದ ಭಾಗಗಳಲ್ಲಿ ಸಂಪರ್ಕ ಪುನಾರಂಭವಾಗಿದೆ. ಅತೀವೃಷ್ಟಿಯಿಂದಾಗಿ ಹಾನಿ ಸಂಭವಿಸಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ, ಮನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಡೂರು, ಅಜ್ಜಂಪುರ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಪರಿಹಾರ ಕ್ರಮಗಳಿಗಾಗಿ ಕೊಪ್ಪ, ಕಳಸ ತಾಲೂಕಿಗೆ ನಿಯೋಜಿಸಲಾಗಿದೆ. ಜಿಲ್ಲಾದ್ಯಂತ 77 ಕಾಳಜಿ ಕೇಂದ್ರ ತೆರೆಯಲಾಗಿದ್ದು, ಸದ್ಯ ಇಬ್ಬರು ಈ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದರು. ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಸದ್ಯ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹೆದ್ದಾರಿ ಭಾಗದಲ್ಲಿ ತೆರವು ಮಾಡಬೇಕಾದ ಮರಗಳನ್ನು ಗುರುತಿಸಿ ತೆರವು ಕಾರ್ಯ ಮಾಡಲಾಗಿದೆ. ಶೃಂಗೇರಿ-ಮಂಗಳೂರು-ತೀರ್ಥಹಳ್ಳಿ ಹೆದ್ದಾರಿಯಲ್ಲಿ ಶೃಂಗೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ತೆರವು ಮಾಡಲಾಗಿದೆ. ಅಧಿಕ ಭಾರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದರು. ಎಸ್ಪಿ ಡಾ.ವಿಕ್ರಮ್ ಅಮಟೆ, ಜಿಪಂ ಸಿಇಒ ಕೀರ್ತನಾ ಸುದ್ದಿಗೋಷ್ಠಿಯಲ್ಲಿದ್ದರು. ʼಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ಭೂಕುಸಿತ ಉಂಟಾಗಿದ್ದು, ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸದ್ಯ ಗಿರಿಭಾಗಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪ್ರವಾಸಿಗರು ಮಳೆ ಕಡಿಮೆಯಾಗುವ ತನಕ ತಮ್ಮ ಪ್ರವಾಸವನ್ನು ಮುಂದೂಡುವಂತೆ ಸೂಚಿಸಲಾಗಿದೆʼ- ಮೀನಾ ನಾಗರಾಜ್, ಜಿಲ್ಲಾಧಿಕಾರಿ \ No newline at end of file diff --git a/Varta_Bharati/url_26_100_4.txt b/Varta_Bharati/url_26_100_4.txt new file mode 100644 index 0000000000000000000000000000000000000000..c151df078fbc43ae80949b83cd147ba226fdc382 --- /dev/null +++ b/Varta_Bharati/url_26_100_4.txt @@ -0,0 +1 @@ +ಬೆಂಗಳೂರು : ನೀಟ್ ಪರೀಕ್ಷೆ, ಒಂದು ದೇಶ ಒಂದು ಚುನಾವಣೆಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವ ಸಂಬಂಧ ಬಿ.ಎಸ್.ಪಾಟೀಲ್ ಅಧ್ಯಕ್ಷತೆಯ ಸಮಿತಿ ನೀಡಿರುವ ವರದಿಯನ್ನು ಸಚಿವ ಸಂಪುಟ ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ರಚನೆ ಮಾಡುವ ಸಂಬಂಧ ನೀಡಿರುವ ಶಿಫಾರಸ್ಸು ಒಪ್ಪಿಕೊಂಡಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡನೆಗೆ ನಿರ್ಧರಿಸಿದೆ.ಕಾರ್ಮಿಕರ ಕೆಲಸದ ಅವಧಿಯ ಹೆಚ್ಚಳ ವಿಚಾರ: ಕಾರ್ಮಿಕರ ಕೆಲಸದ ಅವಧಿಯನ್ನು12 ರಿಂದ 14 ತಾಸು ಹೆಚ್ಚಳ ಮಾಡುವ ಕುರಿತು ವಿಧೇಯಕ ಮಂಡನೆ ಮಾಡುವ ವಿಚಾರದಲ್ಲಿ ಸಚಿವ ಸಂಪುಟ ಹಿಂದೆ ಸರಿದಿದೆ.ಈ ಬಗ್ಗೆ ಸಚಿವ ಸಂಪುಟದಲ್ಲಿ ಅನೌಪಚಾರಿಕ ಚರ್ಚೆ ನಡೆದಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ಈ‌ ಬಗ್ಗೆ ಸದ್ಯ ಯಾವುದೇ ತೀರ್ಮಾನ ಬೇಡ. ಮುಂದಿನ ದಿನಗಳಲ್ಲಿ ಚರ್ಚಿಸೋಣ ಎಂದು ಸಂಪುಟ ಸದಸ್ಯರು ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ ವಿಚಾರವು ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಚರ್ಚೆಯಾಗಿದೆ. ಈ ಬಗ್ಗೆಯೂ ಯಾವುದೇ ಆತುರದ ನಿರ್ಧಾರ ಬೇಡ. ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.ಇದಲ್ಲದೇ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ 13 ಕೈಗಾರಿಕಾ ವಸಾಹತುಗಳನ್ನು ಭಾರತ ಸರಕಾರದ ಎಂ.ಎಸ್.ಇ-ಸಿಡಿಪಿ ಯೋಜನೆಯಡಿ 39 ಕೋಟಿ ರೂ.ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ಲೋಕಾಯುಕ್ತ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ 9 ಹಿರಿಯ ಸಹಾಯಕ ಸರಕಾರಿ ಅಭಿಯೋಜಕರ ಸೇವೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.ರಾಜ್ಯ ವಿದ್ಯುತ್ ನಿಗಮವು ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳಿಂದ 6750 ಕೋಟಿ ರೂ.ಗಳ ಸಾಲ ಪಡೆಯುವ ಸಂಬಂಧ ಸರಕಾರದ ಖಾತರಿಯನ್ನು ನೀಡಿ ಪ್ರಸಕ್ತ ಸಾಲಿನ ಮಾ.30ರಂದು ಸರಕಾರಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.‘ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಕೆಲವು ಇತರೆ ಕಾನೂನು(ತಿದ್ದುಪಡಿ) ವಿಧೇಯಕ-2024ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ವಿಜ್ಞಾನ ಗ್ಯಾಲರಿ ಸಂಸ್ಥೆಯಲ್ಲಿ 10 ಕೋಟಿ ರೂ.ಮೊತ್ತದ ಕಾರ್ಪಸ್ ಫಂಡ್ ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಲಗೇರಿ ನೌಕಾ ನೆಲೆಯ ಸಮೀಪದಲ್ಲಿ ಕಾರವಾರ ಸಿವಿಲ್ ಎನ್‌ಕ್ಲೇವ್ ಅನ್ನು ಅಭಿವೃದ್ಧಿಪಡಿಸಲು ಹೆಚ್ಚುವರಿ ಭೂ ಪರಿಹಾರ ಮೊತ್ತ 70.40 ಕೋಟಿ ರೂ.ಗಳನ್ನು ಭೂ ಮಾಲಕರಿಗೆ ಪಾವತಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 44 ಪೂರ್ಣ ಕವಚ ನಿರ್ಮಿತ ಗ್ರಾಮಾಂತರ ಸಾರಿಗೆ ಬಸ್ಸುಗಳನ್ನು 18.42 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.ಖಾಸಗಿ ಆಸ್ಪತ್ರೆ, ವೈದ್ಯೋಪಚಾರ ಸಿಬ್ಬಂದಿ, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು, 50 ಸಾವಿರ ರೂ. ದಂಡ ವಿಧಿಸುವ ವಿಧೇಯಕ ಮಂಡಿಸಲು ಸರ್ಕಾರ ನಿರ್ಧರಿಸಿದೆ. \ No newline at end of file diff --git a/Varta_Bharati/url_26_100_5.txt b/Varta_Bharati/url_26_100_5.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_6.txt b/Varta_Bharati/url_26_100_6.txt new file mode 100644 index 0000000000000000000000000000000000000000..c151df078fbc43ae80949b83cd147ba226fdc382 --- /dev/null +++ b/Varta_Bharati/url_26_100_6.txt @@ -0,0 +1 @@ +ಬೆಂಗಳೂರು : ನೀಟ್ ಪರೀಕ್ಷೆ, ಒಂದು ದೇಶ ಒಂದು ಚುನಾವಣೆಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವ ಸಂಬಂಧ ಬಿ.ಎಸ್.ಪಾಟೀಲ್ ಅಧ್ಯಕ್ಷತೆಯ ಸಮಿತಿ ನೀಡಿರುವ ವರದಿಯನ್ನು ಸಚಿವ ಸಂಪುಟ ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ರಚನೆ ಮಾಡುವ ಸಂಬಂಧ ನೀಡಿರುವ ಶಿಫಾರಸ್ಸು ಒಪ್ಪಿಕೊಂಡಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡನೆಗೆ ನಿರ್ಧರಿಸಿದೆ.ಕಾರ್ಮಿಕರ ಕೆಲಸದ ಅವಧಿಯ ಹೆಚ್ಚಳ ವಿಚಾರ: ಕಾರ್ಮಿಕರ ಕೆಲಸದ ಅವಧಿಯನ್ನು12 ರಿಂದ 14 ತಾಸು ಹೆಚ್ಚಳ ಮಾಡುವ ಕುರಿತು ವಿಧೇಯಕ ಮಂಡನೆ ಮಾಡುವ ವಿಚಾರದಲ್ಲಿ ಸಚಿವ ಸಂಪುಟ ಹಿಂದೆ ಸರಿದಿದೆ.ಈ ಬಗ್ಗೆ ಸಚಿವ ಸಂಪುಟದಲ್ಲಿ ಅನೌಪಚಾರಿಕ ಚರ್ಚೆ ನಡೆದಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ಈ‌ ಬಗ್ಗೆ ಸದ್ಯ ಯಾವುದೇ ತೀರ್ಮಾನ ಬೇಡ. ಮುಂದಿನ ದಿನಗಳಲ್ಲಿ ಚರ್ಚಿಸೋಣ ಎಂದು ಸಂಪುಟ ಸದಸ್ಯರು ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ ವಿಚಾರವು ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಚರ್ಚೆಯಾಗಿದೆ. ಈ ಬಗ್ಗೆಯೂ ಯಾವುದೇ ಆತುರದ ನಿರ್ಧಾರ ಬೇಡ. ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.ಇದಲ್ಲದೇ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ 13 ಕೈಗಾರಿಕಾ ವಸಾಹತುಗಳನ್ನು ಭಾರತ ಸರಕಾರದ ಎಂ.ಎಸ್.ಇ-ಸಿಡಿಪಿ ಯೋಜನೆಯಡಿ 39 ಕೋಟಿ ರೂ.ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ಲೋಕಾಯುಕ್ತ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ 9 ಹಿರಿಯ ಸಹಾಯಕ ಸರಕಾರಿ ಅಭಿಯೋಜಕರ ಸೇವೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.ರಾಜ್ಯ ವಿದ್ಯುತ್ ನಿಗಮವು ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳಿಂದ 6750 ಕೋಟಿ ರೂ.ಗಳ ಸಾಲ ಪಡೆಯುವ ಸಂಬಂಧ ಸರಕಾರದ ಖಾತರಿಯನ್ನು ನೀಡಿ ಪ್ರಸಕ್ತ ಸಾಲಿನ ಮಾ.30ರಂದು ಸರಕಾರಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.‘ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಕೆಲವು ಇತರೆ ಕಾನೂನು(ತಿದ್ದುಪಡಿ) ವಿಧೇಯಕ-2024ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ವಿಜ್ಞಾನ ಗ್ಯಾಲರಿ ಸಂಸ್ಥೆಯಲ್ಲಿ 10 ಕೋಟಿ ರೂ.ಮೊತ್ತದ ಕಾರ್ಪಸ್ ಫಂಡ್ ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಲಗೇರಿ ನೌಕಾ ನೆಲೆಯ ಸಮೀಪದಲ್ಲಿ ಕಾರವಾರ ಸಿವಿಲ್ ಎನ್‌ಕ್ಲೇವ್ ಅನ್ನು ಅಭಿವೃದ್ಧಿಪಡಿಸಲು ಹೆಚ್ಚುವರಿ ಭೂ ಪರಿಹಾರ ಮೊತ್ತ 70.40 ಕೋಟಿ ರೂ.ಗಳನ್ನು ಭೂ ಮಾಲಕರಿಗೆ ಪಾವತಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 44 ಪೂರ್ಣ ಕವಚ ನಿರ್ಮಿತ ಗ್ರಾಮಾಂತರ ಸಾರಿಗೆ ಬಸ್ಸುಗಳನ್ನು 18.42 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.ಖಾಸಗಿ ಆಸ್ಪತ್ರೆ, ವೈದ್ಯೋಪಚಾರ ಸಿಬ್ಬಂದಿ, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು, 50 ಸಾವಿರ ರೂ. ದಂಡ ವಿಧಿಸುವ ವಿಧೇಯಕ ಮಂಡಿಸಲು ಸರ್ಕಾರ ನಿರ್ಧರಿಸಿದೆ. \ No newline at end of file diff --git a/Varta_Bharati/url_26_100_7.txt b/Varta_Bharati/url_26_100_7.txt new file mode 100644 index 0000000000000000000000000000000000000000..6cb59b118927d8e76a254d487188c2af36e9acb9 --- /dev/null +++ b/Varta_Bharati/url_26_100_7.txt @@ -0,0 +1 @@ +PC : x/@BYVijayendraಬೆಂಗಳೂರು: ರಾಜ್ಯ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ವರಿಷ್ಠರು ನೇಮಿಸಿದ್ದಾರೆ.ವಿಪಕ್ಷ ನಾಯನಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಆ ಸ್ಥಾನವು ತೆರವಾಗಿತ್ತು. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡರಾದ ಸಿ.ಟಿ. ರವಿ ಮತ್ತು ರವಿ ಕುಮಾರ್ ಅವರ ಮಧ್ಯೆ ಪೈಪೋಟಿ ಏರ್ಪಟ್ಟಿತು. ಆದರೆ, ವರಿಷ್ಠರು ಛಲವಾದಿ ನಾರಾಯಸ್ವಾಮಿ ಅವರನ್ನು ಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿದೆ."ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವ ನಮ್ಮ ಪಕ್ಷದ ನಾಯಕ, ನಮ್ಮ ಪರಿಶಿಷ್ಟ ಜಾತಿ ಬಂಧುಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು"ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹಿರಿಯ ಮುಖಂಡವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವ ನಮ್ಮ ಪಕ್ಷದ ನಾಯಕ, ನಮ್ಮ ಪರಿಶಿಷ್ಟ ಜಾತಿ ಬಂಧುಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.@NswamyChalavadi @BJP4Karnataka ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ… pic.twitter.com/w76g6aUUzj ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಅವರ ಆದೇಶದ ಮೇರೆಗೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾಗಿ ನೇಮಕಗೊಂಡಿರುವ ಶ್ರೀ @NswamyChalavadi ಹೃತ್ಪೂರ್ವಕ ಅಭಿನಂದನೆಗಳು. pic.twitter.com/9s2PT9lKZ8 \ No newline at end of file diff --git a/Varta_Bharati/url_26_100_8.txt b/Varta_Bharati/url_26_100_8.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_100_9.txt b/Varta_Bharati/url_26_100_9.txt new file mode 100644 index 0000000000000000000000000000000000000000..6cb59b118927d8e76a254d487188c2af36e9acb9 --- /dev/null +++ b/Varta_Bharati/url_26_100_9.txt @@ -0,0 +1 @@ +PC : x/@BYVijayendraಬೆಂಗಳೂರು: ರಾಜ್ಯ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ವರಿಷ್ಠರು ನೇಮಿಸಿದ್ದಾರೆ.ವಿಪಕ್ಷ ನಾಯನಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಆ ಸ್ಥಾನವು ತೆರವಾಗಿತ್ತು. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡರಾದ ಸಿ.ಟಿ. ರವಿ ಮತ್ತು ರವಿ ಕುಮಾರ್ ಅವರ ಮಧ್ಯೆ ಪೈಪೋಟಿ ಏರ್ಪಟ್ಟಿತು. ಆದರೆ, ವರಿಷ್ಠರು ಛಲವಾದಿ ನಾರಾಯಸ್ವಾಮಿ ಅವರನ್ನು ಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿದೆ."ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವ ನಮ್ಮ ಪಕ್ಷದ ನಾಯಕ, ನಮ್ಮ ಪರಿಶಿಷ್ಟ ಜಾತಿ ಬಂಧುಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು"ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹಿರಿಯ ಮುಖಂಡವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವ ನಮ್ಮ ಪಕ್ಷದ ನಾಯಕ, ನಮ್ಮ ಪರಿಶಿಷ್ಟ ಜಾತಿ ಬಂಧುಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.@NswamyChalavadi @BJP4Karnataka ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ… pic.twitter.com/w76g6aUUzj ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಅವರ ಆದೇಶದ ಮೇರೆಗೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾಗಿ ನೇಮಕಗೊಂಡಿರುವ ಶ್ರೀ @NswamyChalavadi ಹೃತ್ಪೂರ್ವಕ ಅಭಿನಂದನೆಗಳು. pic.twitter.com/9s2PT9lKZ8 \ No newline at end of file diff --git a/Varta_Bharati/url_26_101_1.txt b/Varta_Bharati/url_26_101_1.txt new file mode 100644 index 0000000000000000000000000000000000000000..4671947895c79f6937392fa54199ed6106882f63 --- /dev/null +++ b/Varta_Bharati/url_26_101_1.txt @@ -0,0 +1 @@ +ಬೆಂಗಳೂರು: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಚ್.ಎಸ್. ಗೋಪಿನಾಥ್ ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ ಇಲಾಖೆಯಲ್ಲಿ ಮಂಜೂರಾದ 903 ವೈದ್ಯಾಧಿಕಾರಿಗಳ ಪೈಕಿ 677 ವೈದ್ಯಾಧಿಕಾರಿಗಳು ಮತ್ತು 158 ಸ್ನಾತಕೋತ್ತರ ಪದವಿ ಪಡೆದಿರುವ ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.ರಾಜ್ಯದಲ್ಲಿ ಈಗಾಗಲೇ 726 ಚಿಕಿತ್ಸಾಲಯಗಳು, 168 ಆಸ್ಪತ್ರೆಗಳು 3 ಐವತ್ತು ಆಸಿಗೆಯುಳ್ಳ ಆಸ್ಪತ್ರೆಗಳು, ಒಂದು ಹೈ-ಟೆಕ್ ಪಂಚಕರ್ಮ ಆಸ್ಪತ್ರೆ ಹಾಗೂ 7 ಆಯುಷ್ ಕಾಲೇಜಿಗೆ ಹೊಂದಿಕೊಂಡ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲ ವಿಧಾನಸಭಾ ವ್ಯಾಪ್ತಿಯಲ್ಲಿ ಆಯುಷ್ ಆಸ್ಪತ್ರೆಗಳು ಇರುತ್ತವೆ ಎಂದರು. \ No newline at end of file diff --git a/Varta_Bharati/url_26_101_10.txt b/Varta_Bharati/url_26_101_10.txt new file mode 100644 index 0000000000000000000000000000000000000000..bdfe5b829b0a768d013b6da8ca001b647e1a3ba4 --- /dev/null +++ b/Varta_Bharati/url_26_101_10.txt @@ -0,0 +1 @@ +ಬೆಂಗಳೂರು : ರಾಜ್ಯದಲ್ಲಿ ಅನುದಾನರಹಿತ(ಖಾಸಗಿ) ಪದವಿ ಪೂರ್ವ(ಪಿಯು) ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ಆರೋಗ್ಯ ಸಂಜೀವಿನಿ ಸೌಲಭ್ಯ ನೀಡಲು ಚಿಂತನೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಫ್ರೌಡ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಸದಸ್ಯ ಭೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಪನ್ಯಾಸಕರಿಗೆ ಆರೋಗ್ಯ ಸಂಜೀವಿನಿ ಅಥವಾ ಆರೋಗ್ಯ ಕಾರ್ಡ್ ಸೌಲಭ್ಯ ನೀಡಲು ಸರಕಾರಕ್ಕೆ ಆರ್ಥಿಕ ಹೊರೆ ಎಷ್ಟಾಗುತ್ತದೆ ಎಂದು ಪರಿಶೀಲಿಸಿ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು. ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸಂಬಳ ಕಡಿಮೆ ಇದೆ. ಆದುದರಿಂದ ಅನಾರೋಗ್ಯದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ಉಪನ್ಯಾಸಕರಿಗೆ ಕಷ್ಟವಾಗುತ್ತಿದೆ. ಇದು ಸರಕಾರದ ಗಮನಕ್ಕೂ ಬಂದಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು. \ No newline at end of file diff --git a/Varta_Bharati/url_26_101_11.txt b/Varta_Bharati/url_26_101_11.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_12.txt b/Varta_Bharati/url_26_101_12.txt new file mode 100644 index 0000000000000000000000000000000000000000..bdfe5b829b0a768d013b6da8ca001b647e1a3ba4 --- /dev/null +++ b/Varta_Bharati/url_26_101_12.txt @@ -0,0 +1 @@ +ಬೆಂಗಳೂರು : ರಾಜ್ಯದಲ್ಲಿ ಅನುದಾನರಹಿತ(ಖಾಸಗಿ) ಪದವಿ ಪೂರ್ವ(ಪಿಯು) ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ಆರೋಗ್ಯ ಸಂಜೀವಿನಿ ಸೌಲಭ್ಯ ನೀಡಲು ಚಿಂತನೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಫ್ರೌಡ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‍ನ ಸದಸ್ಯ ಭೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಪನ್ಯಾಸಕರಿಗೆ ಆರೋಗ್ಯ ಸಂಜೀವಿನಿ ಅಥವಾ ಆರೋಗ್ಯ ಕಾರ್ಡ್ ಸೌಲಭ್ಯ ನೀಡಲು ಸರಕಾರಕ್ಕೆ ಆರ್ಥಿಕ ಹೊರೆ ಎಷ್ಟಾಗುತ್ತದೆ ಎಂದು ಪರಿಶೀಲಿಸಿ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು. ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸಂಬಳ ಕಡಿಮೆ ಇದೆ. ಆದುದರಿಂದ ಅನಾರೋಗ್ಯದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ಉಪನ್ಯಾಸಕರಿಗೆ ಕಷ್ಟವಾಗುತ್ತಿದೆ. ಇದು ಸರಕಾರದ ಗಮನಕ್ಕೂ ಬಂದಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು. \ No newline at end of file diff --git a/Varta_Bharati/url_26_101_13.txt b/Varta_Bharati/url_26_101_13.txt new file mode 100644 index 0000000000000000000000000000000000000000..ea83b18480c25706c2e3aa7ae50f41648b7e4df6 --- /dev/null +++ b/Varta_Bharati/url_26_101_13.txt @@ -0,0 +1 @@ +ಬೆಂಗಳೂರು: ರಾಜ್ಯದಲ್ಲಿ ಔಷಧಿಗಳ ಕೊರತೆ ಉಂಟಾಗಿಲ್ಲ. ಅಗತ್ಯ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಿದ್ದೇವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪಿ.ಎಸ್.ನಾರಾಯಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಲಭ್ಯತೆ ಆಧಾರದ ಮೇಲೆ ಪೂರೈಕೆ ಮಾಡುತ್ತಿದ್ದೇವೆ. ಒಂದು ವೇಳೆ ಎಲ್ಲಾದರೂ ಕೊರತೆ ಕಂಡುಬಂದಲ್ಲಿ ನಮ್ಮ ಗಮನಕ್ಕೆ ತಂದರೆ ತಕ್ಷಣವೇ ಪೂರೈಕೆ ಮಾಡಲಾಗುವುದು ಎಂದರು. ಆರೋಗ್ಯ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದೆ. ಈಗಾಗಲೇ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿದ್ದೇವೆ. ಅನುಮೋದನೆ ಸಿಕ್ಕ ತಕ್ಷಣ ಹುದ್ದೆಗಳ ಭರ್ತಿಗೆ ಮುಂದಾಗುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ಇನ್ನು ಮುಂದೆ ಆರೋಗ್ಯ ಇಲಾಖೆ ಅಧಿಕಾರಿಗಳು ಎಲ್ಲೇ ಕೆಲಸ ಮಾಡಿದರೂ ಲಾಗಿನ್ ಆಗುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದೇವೆ. ಅದು ಗ್ರಾಮೀಣ ಭಾಗದಿಂದ ಹಿಡಿದು ಬೆಂಗಳೂರಿನ ವರೆಗೂ ಜಾರಿಯಲ್ಲಿರುತ್ತದೆ. ಸಿಬ್ಬಂದಿಗಳು ಕಡ್ಡಾಯವಾಗಿ ಕೆಲಸದ ಸಮಯ, ಹಾಜರಾತಿ, ಬೆರಳಚ್ಚು ನೀಡಲೇಬೇಕು. ಇಲ್ಲದಿದ್ದರೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು. ಇಲಾಖೆಯಲ್ಲಿ ಮೊದಲ ಬಾರಿಗೆ ಸಿಬ್ಬಂದಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿದ್ದೇವೆ. ಇಲ್ಲಿ ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ. ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. \ No newline at end of file diff --git a/Varta_Bharati/url_26_101_14.txt b/Varta_Bharati/url_26_101_14.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_15.txt b/Varta_Bharati/url_26_101_15.txt new file mode 100644 index 0000000000000000000000000000000000000000..ea83b18480c25706c2e3aa7ae50f41648b7e4df6 --- /dev/null +++ b/Varta_Bharati/url_26_101_15.txt @@ -0,0 +1 @@ +ಬೆಂಗಳೂರು: ರಾಜ್ಯದಲ್ಲಿ ಔಷಧಿಗಳ ಕೊರತೆ ಉಂಟಾಗಿಲ್ಲ. ಅಗತ್ಯ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಿದ್ದೇವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪಿ.ಎಸ್.ನಾರಾಯಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಲಭ್ಯತೆ ಆಧಾರದ ಮೇಲೆ ಪೂರೈಕೆ ಮಾಡುತ್ತಿದ್ದೇವೆ. ಒಂದು ವೇಳೆ ಎಲ್ಲಾದರೂ ಕೊರತೆ ಕಂಡುಬಂದಲ್ಲಿ ನಮ್ಮ ಗಮನಕ್ಕೆ ತಂದರೆ ತಕ್ಷಣವೇ ಪೂರೈಕೆ ಮಾಡಲಾಗುವುದು ಎಂದರು. ಆರೋಗ್ಯ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದೆ. ಈಗಾಗಲೇ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿದ್ದೇವೆ. ಅನುಮೋದನೆ ಸಿಕ್ಕ ತಕ್ಷಣ ಹುದ್ದೆಗಳ ಭರ್ತಿಗೆ ಮುಂದಾಗುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ಇನ್ನು ಮುಂದೆ ಆರೋಗ್ಯ ಇಲಾಖೆ ಅಧಿಕಾರಿಗಳು ಎಲ್ಲೇ ಕೆಲಸ ಮಾಡಿದರೂ ಲಾಗಿನ್ ಆಗುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದೇವೆ. ಅದು ಗ್ರಾಮೀಣ ಭಾಗದಿಂದ ಹಿಡಿದು ಬೆಂಗಳೂರಿನ ವರೆಗೂ ಜಾರಿಯಲ್ಲಿರುತ್ತದೆ. ಸಿಬ್ಬಂದಿಗಳು ಕಡ್ಡಾಯವಾಗಿ ಕೆಲಸದ ಸಮಯ, ಹಾಜರಾತಿ, ಬೆರಳಚ್ಚು ನೀಡಲೇಬೇಕು. ಇಲ್ಲದಿದ್ದರೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು. ಇಲಾಖೆಯಲ್ಲಿ ಮೊದಲ ಬಾರಿಗೆ ಸಿಬ್ಬಂದಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿದ್ದೇವೆ. ಇಲ್ಲಿ ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ. ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. \ No newline at end of file diff --git a/Varta_Bharati/url_26_101_16.txt b/Varta_Bharati/url_26_101_16.txt new file mode 100644 index 0000000000000000000000000000000000000000..466709f1e8d7f5279c4cfa5f1c78c283a8f56611 --- /dev/null +++ b/Varta_Bharati/url_26_101_16.txt @@ -0,0 +1 @@ +ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ಮೇಲೆ ನಾನೇಕೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದವರನ್ನು ಖಾರವಾಗಿ ಪ್ರಶ್ನಿಸಿದ್ದಾರೆ. ಸೋಮವಾರ ಪರಿಷತ್ ಪ್ರಶ್ನೋತ್ತರ ಕಲಾಪದ ನಂತರ ನಿಯಮ 68ರ ಅಡಿಯಲ್ಲಿ ನಿಲುವಳಿ ಸೂಚನೆ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ನಿಗಮದಲ್ಲಿ 187 ಕೋಟಿ ರೂ. ಅಕ್ರಮವಾಗಿದೆ ಎಂದು ಆರೋಪಿಸಿದ್ದಾರೆ. ಇಡೀ ಚರ್ಚೆ ನೋಡಿದಾಗ ಸಿಎಂಗೆ ಕಳಂಕ ತರಬೇಕು, ಮಸಿ ಬಳಿಯಬೇಕು, ಎಸ್ಸಿ-ಎಸ್ಟಿ ಜನರ ವಿರುದ್ಧ ಇದ್ದೇವೆಂದು ತಿಳಿಸಲು ಸುಳ್ಳು ಆರೋಪ ಮಾಡಿದ್ದಾರೆ. ಅವರ ಆರೋಪದಲ್ಲಿ ಸತ್ಯಾಂಶವಿಲ್ಲ. ಅಕ್ರಮ ನಡೆದೇ ಇಲ್ಲ ಎಂದು ನಾನು ಹೇಳಲ್ಲ. ಆದರೆ, ಅಕ್ರಮಕ್ಕೆ ಸರಕಾರ, ಹಣಕಾಸು ಇಲಾಖೆ, ಸಿದ್ದರಾಮಯ್ಯಗೆ ಸಂಬಂಧವಿಲ್ಲ. ಯಾಕೆ ರಾಜೀನಾಮೆ ಕೊಡಬೇಕು? ಎಂದು ಪ್ರಶ್ನಿಸಿದರು. ಅಕ್ರಮ ಸಂಬಂಧ ತನಿಖೆ ಪ್ರಾರಂಭವಾಗಿದೆ, ಸತ್ಯ ಹೊರಬರಲಿದೆ. ಈಗಲೇ ಇಂತಹವರು ತಪ್ಪು ಮಾಡಿದ್ದಾರೆ ಎನ್ನಲ್ಲ. ತನಿಖೆ ಮಾಡಿ ಆರೋಪಪಟ್ಟಿ ಸಲ್ಲಿಕೆಯಾದ ನಂತರ ಕೋರ್ಟ್‍ನಲ್ಲಿ ಆರೋಪ ಸಾಬೀತಾದಲ್ಲಿ ಶಿಕ್ಷೆ ಅನುಭವಿಸಲಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು, ಭ್ರಷ್ಟಾಚಾರದಲ್ಲಿ ಯಾರೇ ಭಾಗಿಯಾಗಿದ್ದರೂ ಕೋರ್ಟ್ ಮೂಲಕ ಶಿಕ್ಷೆ ಕೊಡಿಸುವ ಕೆಲಸ ಮಾಡಲಾಗುತ್ತದೆ. ಆದರೆ, ಗೊಬೆಲ್ಸ್ ಥಿಯರಿ ಬಳಸಿ ಸುಳ್ಳನ್ನೆ ಸತ್ಯ ಮಾಡುವ ತಂತ್ರವನ್ನು ಬಿಜೆಪಿಯವರು ಮಾಡುತ್ತಿದ್ದಾರೆಂದು ಅವರು ಟೀಕಿಸಿದರು. ಸುಳ್ಳನ್ನು ಸತ್ಯ ಮಾಡುವುದು ಕಷ್ಟ. ಹಿಟ್ಲರ್ ತಾನೆ ಆತ್ಮಹತ್ಯೆ ಮಾಡಿಕೊಳ್ಳಲಿಲ್ಲವೇ? ಇಲ್ಲಿ ಸಿಎಂಗೆ ಮಸಿ ಬಳಿಯಬೇಕು, ಎಸ್ಸಿ-ಎಸ್ಟಿ, ಒಬಿಸಿ, ಅಲ್ಪಸಂಖ್ಯಾತ, ಮಹಿಳೆ, ರೈತ, ಕಾರ್ಮಿಕರಿಗೆ ವಿರುದ್ಧವಾಗಿದೆ ಎಂದು ಬಿಂಬಿಸುತ್ತಿದ್ದಾರೆ. ಆದರೆ, ಇದು ಬಿಜೆಪಿಗೆ ಅನ್ವಯ, ಇವರು ಸಾಮಾಜಿಕ ನ್ಯಾಯದ ಪರವಿಲ್ಲ. ಸಂವಿಧಾನವನ್ನೇ ವಿರೋಧ ಮಾಡಿದವರು ಬಿಜೆಪಿಯವರು. ಸಮಾನ ಅವಕಾಶ ಕಲ್ಪಿಸಿಕೊಡುವುದರ ಮೇಲೆಯೇ ಬಿಜೆಪಿಯವರಿಗೆ ನಂಬಿಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು. \ No newline at end of file diff --git a/Varta_Bharati/url_26_101_17.txt b/Varta_Bharati/url_26_101_17.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_18.txt b/Varta_Bharati/url_26_101_18.txt new file mode 100644 index 0000000000000000000000000000000000000000..466709f1e8d7f5279c4cfa5f1c78c283a8f56611 --- /dev/null +++ b/Varta_Bharati/url_26_101_18.txt @@ -0,0 +1 @@ +ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ಮೇಲೆ ನಾನೇಕೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದವರನ್ನು ಖಾರವಾಗಿ ಪ್ರಶ್ನಿಸಿದ್ದಾರೆ. ಸೋಮವಾರ ಪರಿಷತ್ ಪ್ರಶ್ನೋತ್ತರ ಕಲಾಪದ ನಂತರ ನಿಯಮ 68ರ ಅಡಿಯಲ್ಲಿ ನಿಲುವಳಿ ಸೂಚನೆ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ನಿಗಮದಲ್ಲಿ 187 ಕೋಟಿ ರೂ. ಅಕ್ರಮವಾಗಿದೆ ಎಂದು ಆರೋಪಿಸಿದ್ದಾರೆ. ಇಡೀ ಚರ್ಚೆ ನೋಡಿದಾಗ ಸಿಎಂಗೆ ಕಳಂಕ ತರಬೇಕು, ಮಸಿ ಬಳಿಯಬೇಕು, ಎಸ್ಸಿ-ಎಸ್ಟಿ ಜನರ ವಿರುದ್ಧ ಇದ್ದೇವೆಂದು ತಿಳಿಸಲು ಸುಳ್ಳು ಆರೋಪ ಮಾಡಿದ್ದಾರೆ. ಅವರ ಆರೋಪದಲ್ಲಿ ಸತ್ಯಾಂಶವಿಲ್ಲ. ಅಕ್ರಮ ನಡೆದೇ ಇಲ್ಲ ಎಂದು ನಾನು ಹೇಳಲ್ಲ. ಆದರೆ, ಅಕ್ರಮಕ್ಕೆ ಸರಕಾರ, ಹಣಕಾಸು ಇಲಾಖೆ, ಸಿದ್ದರಾಮಯ್ಯಗೆ ಸಂಬಂಧವಿಲ್ಲ. ಯಾಕೆ ರಾಜೀನಾಮೆ ಕೊಡಬೇಕು? ಎಂದು ಪ್ರಶ್ನಿಸಿದರು. ಅಕ್ರಮ ಸಂಬಂಧ ತನಿಖೆ ಪ್ರಾರಂಭವಾಗಿದೆ, ಸತ್ಯ ಹೊರಬರಲಿದೆ. ಈಗಲೇ ಇಂತಹವರು ತಪ್ಪು ಮಾಡಿದ್ದಾರೆ ಎನ್ನಲ್ಲ. ತನಿಖೆ ಮಾಡಿ ಆರೋಪಪಟ್ಟಿ ಸಲ್ಲಿಕೆಯಾದ ನಂತರ ಕೋರ್ಟ್‍ನಲ್ಲಿ ಆರೋಪ ಸಾಬೀತಾದಲ್ಲಿ ಶಿಕ್ಷೆ ಅನುಭವಿಸಲಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು, ಭ್ರಷ್ಟಾಚಾರದಲ್ಲಿ ಯಾರೇ ಭಾಗಿಯಾಗಿದ್ದರೂ ಕೋರ್ಟ್ ಮೂಲಕ ಶಿಕ್ಷೆ ಕೊಡಿಸುವ ಕೆಲಸ ಮಾಡಲಾಗುತ್ತದೆ. ಆದರೆ, ಗೊಬೆಲ್ಸ್ ಥಿಯರಿ ಬಳಸಿ ಸುಳ್ಳನ್ನೆ ಸತ್ಯ ಮಾಡುವ ತಂತ್ರವನ್ನು ಬಿಜೆಪಿಯವರು ಮಾಡುತ್ತಿದ್ದಾರೆಂದು ಅವರು ಟೀಕಿಸಿದರು. ಸುಳ್ಳನ್ನು ಸತ್ಯ ಮಾಡುವುದು ಕಷ್ಟ. ಹಿಟ್ಲರ್ ತಾನೆ ಆತ್ಮಹತ್ಯೆ ಮಾಡಿಕೊಳ್ಳಲಿಲ್ಲವೇ? ಇಲ್ಲಿ ಸಿಎಂಗೆ ಮಸಿ ಬಳಿಯಬೇಕು, ಎಸ್ಸಿ-ಎಸ್ಟಿ, ಒಬಿಸಿ, ಅಲ್ಪಸಂಖ್ಯಾತ, ಮಹಿಳೆ, ರೈತ, ಕಾರ್ಮಿಕರಿಗೆ ವಿರುದ್ಧವಾಗಿದೆ ಎಂದು ಬಿಂಬಿಸುತ್ತಿದ್ದಾರೆ. ಆದರೆ, ಇದು ಬಿಜೆಪಿಗೆ ಅನ್ವಯ, ಇವರು ಸಾಮಾಜಿಕ ನ್ಯಾಯದ ಪರವಿಲ್ಲ. ಸಂವಿಧಾನವನ್ನೇ ವಿರೋಧ ಮಾಡಿದವರು ಬಿಜೆಪಿಯವರು. ಸಮಾನ ಅವಕಾಶ ಕಲ್ಪಿಸಿಕೊಡುವುದರ ಮೇಲೆಯೇ ಬಿಜೆಪಿಯವರಿಗೆ ನಂಬಿಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು. \ No newline at end of file diff --git a/Varta_Bharati/url_26_101_19.txt b/Varta_Bharati/url_26_101_19.txt new file mode 100644 index 0000000000000000000000000000000000000000..1f66fa6e2964643e12558044220c6c509c013ded --- /dev/null +++ b/Varta_Bharati/url_26_101_19.txt @@ -0,0 +1 @@ +ಬೆಂಗಳೂರು : ಬೆಂಗಳೂರು ನಗರದ ಸುತ್ತಮುತ್ತಲಿನಲ್ಲಿ ಅನಧಿಕೃತ ಬಡಾವಣೆ(ಲೇಔಟ್)ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಎಸ್.ಆರ್.ವಿಶ್ವನಾಥ್ ಗಮನ ಸೆಳೆಯುವ ಸೂಚನೆಯಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಅವರು, ‘ಕೃಷಿ ಭೂಮಿಯನ್ನು ಅಕ್ರಮವಾಗಿ ಬಡಾವಣೆಗಳನ್ನಾಗಿ ಪರಿವರ್ತಿಸಿ ನೋಂದಣಿ ಮಾಡಿಸುತ್ತಿದ್ದು, ಈ ಪ್ರಕ್ರಿಯೆ ನಿಯಮಬಾಹಿರ. ಅಕ್ರಮಗಳನ್ನೇ ಕಾನೂನು ಬದ್ಧ ಮಾಡುವ ಬುದ್ಧಿವಂತಿಕೆಯನ್ನು ಪ್ರದರ್ಶಿಸಲಾಗುತ್ತಿದೆ. ‘ನಾವು ಚಾಪೆಯ ಕೆಳಗೆ ನುಸುಳಿದರೆ ಅವರು ರಂಗೋಲೆಯ ಕೆಳಗೆ ನುಸುಳುತ್ತಿದ್ದಾರೆ’ ಎಂದು ಹೇಳಿದರು. ‘ಉಪನೊಂದಣಿ ಅಧಿಕಾರಿಗಳ ಕಚೇರಿಯಲ್ಲಿ ‘ಇತರೆ’ ಎಂಬ ವರ್ಗೀಕೃತ ವ್ಯವಸ್ಥೆಯಿದು, ಅದನ್ನು ಗ್ರಾಮ ಠಾಣಾ ಹಾಗೂ ಇತರ ಸ್ವತ್ತುಗಳ ನೋಂದಣಿಗೆ ಬಳಕೆ ಮಾಡಬಹುದು. ಆದರೆ ಅಕ್ರಮ ಮಾಡುವವರು ಬಡಾವಣೆಗಳ ನೋಂದಣಿಗೆ ಈ ವ್ಯವಸ್ಥೆಯನ್ನೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತೆಗೆದುಹಾಕುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಗ್ರಾ.ಪಂ., ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ನೀಡುವ ಇ-ಖಾತಾ ಸೌಲಭ್ಯ ನೇರವಾಗಿ ಉಪ ನೋಂದಣಾಧಿಕಾರಿಗಳ ಆನ್‍ಲೈನ್ ಸಂಪರ್ಕಗೊಂಡರೆ ಅಕ್ರಮ ನೋಂದಣಿ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ಪ್ರತ್ಯೇಕ ಖಾತೆಗಳ ಆನ್‍ಲೈನ್ ಇಂಟಿಗ್ರೇಶನ್‍ಗೆ ಈ ಹಿಂದೆ ವಿಧಾನಮಂಡಲದಲ್ಲಿ ತಿದ್ದುಪಡಿ ಮಸೂದೆ ಅಂಗೀಕರಿಸಲಾಗಿದೆ. ರಾಷ್ಟ್ರಪತಿ ಸಹಿಯ ನಿರೀಕ್ಷೆಯಲ್ಲಿದ್ದೇವೆ. ಆ ಮಸೂದೆ ಅನುಷ್ಠಾನಕ್ಕೆ ಬಂದರೆ ಅನಧಿಕೃತ ಬಡಾವಣೆಗಳ ನೋಂದಣಿಗೆ ಕಡಿವಾಣ ಬೀಳಲಿದೆ ಎಂದರು. 8 ಕೋಟಿ ರೂ.ವಸೂಲಿ: ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ವಿಶ್ವನಾಥ್, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೃಷಿ ಭೂಮಿಯನ್ನು ಅಕ್ರಮವಾಗಿ ನೋಂದಣಿ ಮಾಡುತ್ತಿದ್ದು, ಅಕ್ರಮ ಬಡಾವಣೆ ಒಂದಕ್ಕೆ 35ಸಾವಿರ ರೂ.ಲಂಚ ಪಡೆಯಲಾಗುತ್ತಿದೆ. ದಿನಕ್ಕೆ 100 ಲೇಔಟ್‍ಗಳು ನೋಂದಣಿಯಾಗುತ್ತಿದ್ದು, 35ಲಕ್ಷ ರೂ.ಗಳ ವರೆಗೂ ವಹಿವಾಟು ನಡೆಯುತ್ತಿದೆ. ಪ್ರತಿ ತಿಂಗಳು 8 ಕೋಟಿ ರೂ.ಗಳಷ್ಟು ಹಣವನ್ನು ಲಂಚದ ರೂಪದಲ್ಲಿ ವಸೂಲಿ ಮಾಡಲಾಗುತ್ತಿದೆ ಎಂದು ಉಲ್ಲೇಖಿಸಿದರು. \ No newline at end of file diff --git a/Varta_Bharati/url_26_101_2.txt b/Varta_Bharati/url_26_101_2.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_20.txt b/Varta_Bharati/url_26_101_20.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_21.txt b/Varta_Bharati/url_26_101_21.txt new file mode 100644 index 0000000000000000000000000000000000000000..1f66fa6e2964643e12558044220c6c509c013ded --- /dev/null +++ b/Varta_Bharati/url_26_101_21.txt @@ -0,0 +1 @@ +ಬೆಂಗಳೂರು : ಬೆಂಗಳೂರು ನಗರದ ಸುತ್ತಮುತ್ತಲಿನಲ್ಲಿ ಅನಧಿಕೃತ ಬಡಾವಣೆ(ಲೇಔಟ್)ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಎಸ್.ಆರ್.ವಿಶ್ವನಾಥ್ ಗಮನ ಸೆಳೆಯುವ ಸೂಚನೆಯಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಅವರು, ‘ಕೃಷಿ ಭೂಮಿಯನ್ನು ಅಕ್ರಮವಾಗಿ ಬಡಾವಣೆಗಳನ್ನಾಗಿ ಪರಿವರ್ತಿಸಿ ನೋಂದಣಿ ಮಾಡಿಸುತ್ತಿದ್ದು, ಈ ಪ್ರಕ್ರಿಯೆ ನಿಯಮಬಾಹಿರ. ಅಕ್ರಮಗಳನ್ನೇ ಕಾನೂನು ಬದ್ಧ ಮಾಡುವ ಬುದ್ಧಿವಂತಿಕೆಯನ್ನು ಪ್ರದರ್ಶಿಸಲಾಗುತ್ತಿದೆ. ‘ನಾವು ಚಾಪೆಯ ಕೆಳಗೆ ನುಸುಳಿದರೆ ಅವರು ರಂಗೋಲೆಯ ಕೆಳಗೆ ನುಸುಳುತ್ತಿದ್ದಾರೆ’ ಎಂದು ಹೇಳಿದರು. ‘ಉಪನೊಂದಣಿ ಅಧಿಕಾರಿಗಳ ಕಚೇರಿಯಲ್ಲಿ ‘ಇತರೆ’ ಎಂಬ ವರ್ಗೀಕೃತ ವ್ಯವಸ್ಥೆಯಿದು, ಅದನ್ನು ಗ್ರಾಮ ಠಾಣಾ ಹಾಗೂ ಇತರ ಸ್ವತ್ತುಗಳ ನೋಂದಣಿಗೆ ಬಳಕೆ ಮಾಡಬಹುದು. ಆದರೆ ಅಕ್ರಮ ಮಾಡುವವರು ಬಡಾವಣೆಗಳ ನೋಂದಣಿಗೆ ಈ ವ್ಯವಸ್ಥೆಯನ್ನೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತೆಗೆದುಹಾಕುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಗ್ರಾ.ಪಂ., ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ನೀಡುವ ಇ-ಖಾತಾ ಸೌಲಭ್ಯ ನೇರವಾಗಿ ಉಪ ನೋಂದಣಾಧಿಕಾರಿಗಳ ಆನ್‍ಲೈನ್ ಸಂಪರ್ಕಗೊಂಡರೆ ಅಕ್ರಮ ನೋಂದಣಿ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ಪ್ರತ್ಯೇಕ ಖಾತೆಗಳ ಆನ್‍ಲೈನ್ ಇಂಟಿಗ್ರೇಶನ್‍ಗೆ ಈ ಹಿಂದೆ ವಿಧಾನಮಂಡಲದಲ್ಲಿ ತಿದ್ದುಪಡಿ ಮಸೂದೆ ಅಂಗೀಕರಿಸಲಾಗಿದೆ. ರಾಷ್ಟ್ರಪತಿ ಸಹಿಯ ನಿರೀಕ್ಷೆಯಲ್ಲಿದ್ದೇವೆ. ಆ ಮಸೂದೆ ಅನುಷ್ಠಾನಕ್ಕೆ ಬಂದರೆ ಅನಧಿಕೃತ ಬಡಾವಣೆಗಳ ನೋಂದಣಿಗೆ ಕಡಿವಾಣ ಬೀಳಲಿದೆ ಎಂದರು. 8 ಕೋಟಿ ರೂ.ವಸೂಲಿ: ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ವಿಶ್ವನಾಥ್, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೃಷಿ ಭೂಮಿಯನ್ನು ಅಕ್ರಮವಾಗಿ ನೋಂದಣಿ ಮಾಡುತ್ತಿದ್ದು, ಅಕ್ರಮ ಬಡಾವಣೆ ಒಂದಕ್ಕೆ 35ಸಾವಿರ ರೂ.ಲಂಚ ಪಡೆಯಲಾಗುತ್ತಿದೆ. ದಿನಕ್ಕೆ 100 ಲೇಔಟ್‍ಗಳು ನೋಂದಣಿಯಾಗುತ್ತಿದ್ದು, 35ಲಕ್ಷ ರೂ.ಗಳ ವರೆಗೂ ವಹಿವಾಟು ನಡೆಯುತ್ತಿದೆ. ಪ್ರತಿ ತಿಂಗಳು 8 ಕೋಟಿ ರೂ.ಗಳಷ್ಟು ಹಣವನ್ನು ಲಂಚದ ರೂಪದಲ್ಲಿ ವಸೂಲಿ ಮಾಡಲಾಗುತ್ತಿದೆ ಎಂದು ಉಲ್ಲೇಖಿಸಿದರು. \ No newline at end of file diff --git a/Varta_Bharati/url_26_101_22.txt b/Varta_Bharati/url_26_101_22.txt new file mode 100644 index 0000000000000000000000000000000000000000..909d13395f6585786dd10fc3ba65532f0952775e --- /dev/null +++ b/Varta_Bharati/url_26_101_22.txt @@ -0,0 +1 @@ +ಬೆಂಗಳೂರು : ರಾಜ್ಯದಲ್ಲಿನ ಎಲ್ಲ ಮಾಲ್‍ಗಳು ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ‘ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು. ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯದಂತೆ ಅಗತ್ಯ ನಿಯಮಾವಳಿ ರೂಪಿಸಲಾಗುವುದು ಎಂದು ವಿವರಣೆ ನೀಡಿದರು. ಮಾಲ್‍ಗೆ ಪಂಚೆ ಧರಿಸಿ ಬಂದ ರೈತನನ್ನು ತಡೆದ ವಿಚಾರವಾಗಿ ಇತ್ತೀಚಿಗೆ ವಿಧಾನಸಭೆಯಲ್ಲಿ ಪ್ರಸ್ತಾವನೆ ಮೇಲೆ ಚರ್ಚೆ ನಡೆಸಲಾಗಿತ್ತು. ಈ ವಿಚಾರವಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದ್ದರು. ನಾನು ಶುಕ್ರವಾರ ಗೈರಾಗಿದ್ದ ಕಾರಣ ಈಗ ನನ್ನ ಹೇಳಿಕೆ ನೀಡುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದರು. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿನ ಜಿಟಿ ಮಾಲ್‍ಗೆ ಪಂಚೆ ಉಟ್ಟುಕೊಂಡು ಬಂದ ರೈತನಿಗೆ ಪ್ರವೇಶ ನೀಡದೆ ಇದ್ದ ಕಾರಣ ಮಾಲ್ ಮಾಲಕರಿಗೆ ಕಾರಣ ಕೇಳಿ ನೋಟಿಸ್ ನೀಡಿ, ತೆರಿಗೆ ಬಾಕಿ ಇದ್ದ ಕಾರಣ ಬೀಗ ಹಾಕಲಾಯಿತು. ಅವರು ಇದೀಗ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಅಲ್ಲದೆ, ಚೆಕ್ ಮುಖಾಂತರ ಬಾಕಿ ತೆರಿಗೆ ಪಾವತಿ ಮಾಡಿದ್ದಾರೆ ಎಂದು ಅವರು ಸದನಕ್ಕೆ ತಿಳಿಸಿದರು. ಇದೇ ವೇಳೆ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ‘ಮಾಲ್‍ಗೆ ಒಂದು ವಾರ ಬೀಗ ಹಾಕಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವರು ಹೇಳಿದ್ದರು. ಬೀಗ ಹಾಕಿಸಿದ್ದೀರಾ? ಎಂದು ಪ್ರಶ್ನಿಸಿದರು. ಆಗ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಬೀಗ ಹಾಕಿಸಲಾಗಿತ್ತು ಎಂದರು. ಮತ್ತೆ ಅಶೋಕ್ ಮಾತನಾಡಿ, ಮಾಲ್‍ಗಳಿಗೆ ಪರವಾನಗಿ ಕೊಡುವಾಗಲೇ ಗ್ರಾಮೀಣ ಭಾಗದ ಉಡುಪು ಧರಿಸಿದವರಿಗೆ ಅವಕಾಶ ನಿರಾಕರಿಸಬಾರದು ಎಂಬ ಷರತ್ತು ವಿಧಿಸಬೇಕು. ಸರಕಾರ ಜಮೀನು ಕೊಡುತ್ತದೆ. ಅನುಮತಿ ಕೊಟ್ಟಿರುವ ಕ್ಲಬ್‍ಗಳಿಗೂ ಇದು ಅನ್ವಯವಾಗಬೇಕು ಎಂದು ಒತ್ತಾಯಿಸಿದರು. ಆಡಳಿತ ಪಕ್ಷದ ಶಾಸಕ ಬಸವರಾಜ ರಾಯರೆಡ್ಡಿ ಮಾತನಾಡಿ, ಅಶೋಕ್ ಹೇಳಿದ್ದು ಸರಿಯಿದೆ. ಸರಕಾರದಿಂದಲೇ ಸುತ್ತೋಲೆ ಹೊರಡಿಸಬೇಕೆಂದು ಸಲಹೆ ನೀಡಿದರು. ಕೆಲವು ಕ್ಲಬ್ ಗಳಲ್ಲಿ ಪಂಚೆ ಹಾಕಿದ್ದರೆ, ಶೂ ಹಾಕದೆ ಇದ್ದರೆ ಒಳಗೆ ಬಿಡುವುದಿಲ್ಲ. ಇದರ ಬಗ್ಗೆಯೂ ಗಮನ ಹರಿಸಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮನವಿ ಮಾಡಿದರು. \ No newline at end of file diff --git a/Varta_Bharati/url_26_101_23.txt b/Varta_Bharati/url_26_101_23.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_24.txt b/Varta_Bharati/url_26_101_24.txt new file mode 100644 index 0000000000000000000000000000000000000000..909d13395f6585786dd10fc3ba65532f0952775e --- /dev/null +++ b/Varta_Bharati/url_26_101_24.txt @@ -0,0 +1 @@ +ಬೆಂಗಳೂರು : ರಾಜ್ಯದಲ್ಲಿನ ಎಲ್ಲ ಮಾಲ್‍ಗಳು ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ‘ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು. ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯದಂತೆ ಅಗತ್ಯ ನಿಯಮಾವಳಿ ರೂಪಿಸಲಾಗುವುದು ಎಂದು ವಿವರಣೆ ನೀಡಿದರು. ಮಾಲ್‍ಗೆ ಪಂಚೆ ಧರಿಸಿ ಬಂದ ರೈತನನ್ನು ತಡೆದ ವಿಚಾರವಾಗಿ ಇತ್ತೀಚಿಗೆ ವಿಧಾನಸಭೆಯಲ್ಲಿ ಪ್ರಸ್ತಾವನೆ ಮೇಲೆ ಚರ್ಚೆ ನಡೆಸಲಾಗಿತ್ತು. ಈ ವಿಚಾರವಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದ್ದರು. ನಾನು ಶುಕ್ರವಾರ ಗೈರಾಗಿದ್ದ ಕಾರಣ ಈಗ ನನ್ನ ಹೇಳಿಕೆ ನೀಡುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದರು. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿನ ಜಿಟಿ ಮಾಲ್‍ಗೆ ಪಂಚೆ ಉಟ್ಟುಕೊಂಡು ಬಂದ ರೈತನಿಗೆ ಪ್ರವೇಶ ನೀಡದೆ ಇದ್ದ ಕಾರಣ ಮಾಲ್ ಮಾಲಕರಿಗೆ ಕಾರಣ ಕೇಳಿ ನೋಟಿಸ್ ನೀಡಿ, ತೆರಿಗೆ ಬಾಕಿ ಇದ್ದ ಕಾರಣ ಬೀಗ ಹಾಕಲಾಯಿತು. ಅವರು ಇದೀಗ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಅಲ್ಲದೆ, ಚೆಕ್ ಮುಖಾಂತರ ಬಾಕಿ ತೆರಿಗೆ ಪಾವತಿ ಮಾಡಿದ್ದಾರೆ ಎಂದು ಅವರು ಸದನಕ್ಕೆ ತಿಳಿಸಿದರು. ಇದೇ ವೇಳೆ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ‘ಮಾಲ್‍ಗೆ ಒಂದು ವಾರ ಬೀಗ ಹಾಕಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವರು ಹೇಳಿದ್ದರು. ಬೀಗ ಹಾಕಿಸಿದ್ದೀರಾ? ಎಂದು ಪ್ರಶ್ನಿಸಿದರು. ಆಗ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಬೀಗ ಹಾಕಿಸಲಾಗಿತ್ತು ಎಂದರು. ಮತ್ತೆ ಅಶೋಕ್ ಮಾತನಾಡಿ, ಮಾಲ್‍ಗಳಿಗೆ ಪರವಾನಗಿ ಕೊಡುವಾಗಲೇ ಗ್ರಾಮೀಣ ಭಾಗದ ಉಡುಪು ಧರಿಸಿದವರಿಗೆ ಅವಕಾಶ ನಿರಾಕರಿಸಬಾರದು ಎಂಬ ಷರತ್ತು ವಿಧಿಸಬೇಕು. ಸರಕಾರ ಜಮೀನು ಕೊಡುತ್ತದೆ. ಅನುಮತಿ ಕೊಟ್ಟಿರುವ ಕ್ಲಬ್‍ಗಳಿಗೂ ಇದು ಅನ್ವಯವಾಗಬೇಕು ಎಂದು ಒತ್ತಾಯಿಸಿದರು. ಆಡಳಿತ ಪಕ್ಷದ ಶಾಸಕ ಬಸವರಾಜ ರಾಯರೆಡ್ಡಿ ಮಾತನಾಡಿ, ಅಶೋಕ್ ಹೇಳಿದ್ದು ಸರಿಯಿದೆ. ಸರಕಾರದಿಂದಲೇ ಸುತ್ತೋಲೆ ಹೊರಡಿಸಬೇಕೆಂದು ಸಲಹೆ ನೀಡಿದರು. ಕೆಲವು ಕ್ಲಬ್ ಗಳಲ್ಲಿ ಪಂಚೆ ಹಾಕಿದ್ದರೆ, ಶೂ ಹಾಕದೆ ಇದ್ದರೆ ಒಳಗೆ ಬಿಡುವುದಿಲ್ಲ. ಇದರ ಬಗ್ಗೆಯೂ ಗಮನ ಹರಿಸಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮನವಿ ಮಾಡಿದರು. \ No newline at end of file diff --git a/Varta_Bharati/url_26_101_25.txt b/Varta_Bharati/url_26_101_25.txt new file mode 100644 index 0000000000000000000000000000000000000000..ba964ca03d57cdc21aff57c76127018107bd5a53 --- /dev/null +++ b/Varta_Bharati/url_26_101_25.txt @@ -0,0 +1 @@ +ಬೆಂಗಳೂರು: ಡೆಂಗಿ ಜ್ವರ ಪ್ರಕರಣಗಳು ರಾಜ್ಯದೆಲ್ಲೆಡೆ ಹೆಚ್ಚಾಗುತ್ತಿದ್ದು, ಅದರಲ್ಲೂ ‘ಬೆಂಗಳೂರು ಈಗ ಡೆಂಗ್ಯೂ’ಳೂರು’ ಎನ್ನುವಂತೆ ಆಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ಸೋಮವಾರ ವಿಧಾನಸಭೆಯ ಕಲಾಪದಲ್ಲಿ ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಡೆಂಗಿ ಜ್ವರ ಪ್ರಕರಣಗಳು ಹೆಚ್ಚಾಗಿದ್ದು, ಡೆಂಗಿ ಪರೀಕ್ಷೆಗೆ ಸರಕಾರ ದರ ನಿಗದಿಪಡಿಸಿದ್ದರೂ, ಖಾಸಗಿ ಆಸ್ಪತ್ರೆಗಳು ಬೇಕಾಬಿಟ್ಟು ಹಣ ವಸೂಲಿ ಮಾಡುತ್ತಿವೆ. ಹೀಗಾಗಿ ಸರಕಾರದಿಂದಲೇ ಡೆಂಗಿ ಜ್ವರಕ್ಕೆ ಉಚಿತವಾಗಿ ಪರೀಕ್ಷೆ ಮಾಡಬೇಕು ಎಂದು ಒತ್ತಾಯಿಸಿದರು. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈ ವರ್ಷದ ಜನವರಿ 1ರಿಂದ ಜುಲೈ 19ರ ಅವಧಿಯಲ್ಲಿ ಒಟ್ಟು 10 ಮಂದಿ ಡೆಂಗಿ ಜ್ವರದಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಮಕ್ಕಳೂ ಸೇರಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಜತೆಗೆ, ಡೆಂಗಿಯಿಂದ ಬಾಧಿತರಾಗುತ್ತಿರುವ ಒಂದು ವರ್ಷದೊಳಗಿನ ಮಕ್ಕಳ ಸಂಖ್ಯೆ ಏರುಗತಿ ಪಡೆದಿದ್ದು, ಒಟ್ಟು 217 ಮಕ್ಕಳು ಡೆಂಗಿ ಪೀಡಿತರಾಗಿದ್ದಾರೆ. 1 ರಿಂದ 18 ವರ್ಷದೊಳಗಿನವರ ಸಂಖ್ಯೆಯೂ 4,592ಕ್ಕೆ ಹೆಚ್ಚಿದೆ ಎಂದು ಅವರು ವಿವರಿಸಿದರು. ಕೆಲ ಮಕ್ಕಳಲ್ಲಿ ರೋಗಗಳು ಸುಪ್ತವಾಗಿರುತ್ತವೆ. ಎಷ್ಟೇ ಪರೀಕ್ಷೆ ನಡೆಸಿದರೂ ಅವುಗಳು ಪತ್ತೆಯಾಗುವುದೇ ಇಲ್ಲ. ಅಂತಹವರಲ್ಲಿ ರೋಗ ನಿರೋಧಕ ಶಕ್ತಿಯೂ ಕಡಿಮೆ ಇರುತ್ತದೆ. ಡೆಂಗಿ ವೈರಾಣು ಅವರ ದೇಹದ ಒಳ ಹೊಕ್ಕು ಅಂಗಾಂಗಗಳಿಗೆ ಹಾನಿ ಉಂಟು ಮಾಡುತ್ತದೆ. ಹೀಗಾಗಿ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಇನ್ನೂ, ಡೆಂಗಿ ನಿಯಂತ್ರಣಕ್ಕೆ ರಾಜ್ಯ ಸರಕಾರ ಸೊಳ್ಳೆ ಪರದೆಗಳ ಮೊರೆ ಹೋಗಿರುವ ಸುದ್ದಿ ನೋಡಿದ್ದು, ಇದು ಹಾಸ್ಯಾಸ್ಪದ ಎಂದು ಅಶೋಕ್ ಉಲ್ಲೇಖಿಸಿದರು. ಇದಕ್ಕೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಳೆಗೇರಿಗಳಿಗೆ ಸೊಳ್ಳೆ ಪರದೆ ವಿತರಿಸುತ್ತಿಲ್ಲ. ಈಡಿಸ್ ಸೊಳ್ಳೆ ಬೆಳಗ್ಗೆ ಕಚ್ಚುತ್ತದೆ, ರಾತ್ರಿ ಕಚ್ಚುವುದಿಲ್ಲ. ಹೀಗಾಗಿ ಸೊಳ್ಳೆ ಪರದೆಯ ಅಗತ್ಯವಿಲ್ಲ ಎಂದರು. ನಂತರ, ನಿಲುವಳಿ ಸೂಚನೆ ಬದಲಾಗಿ ನಿಯಮ 69ರಡಿ ಚರ್ಚೆಗೆ ಕೊಡುವುದಾಗಿ ಸ್ಪೀಕರ್ ಯು.ಟಿ.ಖಾದರ್ ಪ್ರಕಟಿಸಿದರು. \ No newline at end of file diff --git a/Varta_Bharati/url_26_101_26.txt b/Varta_Bharati/url_26_101_26.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_27.txt b/Varta_Bharati/url_26_101_27.txt new file mode 100644 index 0000000000000000000000000000000000000000..ba964ca03d57cdc21aff57c76127018107bd5a53 --- /dev/null +++ b/Varta_Bharati/url_26_101_27.txt @@ -0,0 +1 @@ +ಬೆಂಗಳೂರು: ಡೆಂಗಿ ಜ್ವರ ಪ್ರಕರಣಗಳು ರಾಜ್ಯದೆಲ್ಲೆಡೆ ಹೆಚ್ಚಾಗುತ್ತಿದ್ದು, ಅದರಲ್ಲೂ ‘ಬೆಂಗಳೂರು ಈಗ ಡೆಂಗ್ಯೂ’ಳೂರು’ ಎನ್ನುವಂತೆ ಆಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ಸೋಮವಾರ ವಿಧಾನಸಭೆಯ ಕಲಾಪದಲ್ಲಿ ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಡೆಂಗಿ ಜ್ವರ ಪ್ರಕರಣಗಳು ಹೆಚ್ಚಾಗಿದ್ದು, ಡೆಂಗಿ ಪರೀಕ್ಷೆಗೆ ಸರಕಾರ ದರ ನಿಗದಿಪಡಿಸಿದ್ದರೂ, ಖಾಸಗಿ ಆಸ್ಪತ್ರೆಗಳು ಬೇಕಾಬಿಟ್ಟು ಹಣ ವಸೂಲಿ ಮಾಡುತ್ತಿವೆ. ಹೀಗಾಗಿ ಸರಕಾರದಿಂದಲೇ ಡೆಂಗಿ ಜ್ವರಕ್ಕೆ ಉಚಿತವಾಗಿ ಪರೀಕ್ಷೆ ಮಾಡಬೇಕು ಎಂದು ಒತ್ತಾಯಿಸಿದರು. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈ ವರ್ಷದ ಜನವರಿ 1ರಿಂದ ಜುಲೈ 19ರ ಅವಧಿಯಲ್ಲಿ ಒಟ್ಟು 10 ಮಂದಿ ಡೆಂಗಿ ಜ್ವರದಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಮಕ್ಕಳೂ ಸೇರಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಜತೆಗೆ, ಡೆಂಗಿಯಿಂದ ಬಾಧಿತರಾಗುತ್ತಿರುವ ಒಂದು ವರ್ಷದೊಳಗಿನ ಮಕ್ಕಳ ಸಂಖ್ಯೆ ಏರುಗತಿ ಪಡೆದಿದ್ದು, ಒಟ್ಟು 217 ಮಕ್ಕಳು ಡೆಂಗಿ ಪೀಡಿತರಾಗಿದ್ದಾರೆ. 1 ರಿಂದ 18 ವರ್ಷದೊಳಗಿನವರ ಸಂಖ್ಯೆಯೂ 4,592ಕ್ಕೆ ಹೆಚ್ಚಿದೆ ಎಂದು ಅವರು ವಿವರಿಸಿದರು. ಕೆಲ ಮಕ್ಕಳಲ್ಲಿ ರೋಗಗಳು ಸುಪ್ತವಾಗಿರುತ್ತವೆ. ಎಷ್ಟೇ ಪರೀಕ್ಷೆ ನಡೆಸಿದರೂ ಅವುಗಳು ಪತ್ತೆಯಾಗುವುದೇ ಇಲ್ಲ. ಅಂತಹವರಲ್ಲಿ ರೋಗ ನಿರೋಧಕ ಶಕ್ತಿಯೂ ಕಡಿಮೆ ಇರುತ್ತದೆ. ಡೆಂಗಿ ವೈರಾಣು ಅವರ ದೇಹದ ಒಳ ಹೊಕ್ಕು ಅಂಗಾಂಗಗಳಿಗೆ ಹಾನಿ ಉಂಟು ಮಾಡುತ್ತದೆ. ಹೀಗಾಗಿ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಇನ್ನೂ, ಡೆಂಗಿ ನಿಯಂತ್ರಣಕ್ಕೆ ರಾಜ್ಯ ಸರಕಾರ ಸೊಳ್ಳೆ ಪರದೆಗಳ ಮೊರೆ ಹೋಗಿರುವ ಸುದ್ದಿ ನೋಡಿದ್ದು, ಇದು ಹಾಸ್ಯಾಸ್ಪದ ಎಂದು ಅಶೋಕ್ ಉಲ್ಲೇಖಿಸಿದರು. ಇದಕ್ಕೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಳೆಗೇರಿಗಳಿಗೆ ಸೊಳ್ಳೆ ಪರದೆ ವಿತರಿಸುತ್ತಿಲ್ಲ. ಈಡಿಸ್ ಸೊಳ್ಳೆ ಬೆಳಗ್ಗೆ ಕಚ್ಚುತ್ತದೆ, ರಾತ್ರಿ ಕಚ್ಚುವುದಿಲ್ಲ. ಹೀಗಾಗಿ ಸೊಳ್ಳೆ ಪರದೆಯ ಅಗತ್ಯವಿಲ್ಲ ಎಂದರು. ನಂತರ, ನಿಲುವಳಿ ಸೂಚನೆ ಬದಲಾಗಿ ನಿಯಮ 69ರಡಿ ಚರ್ಚೆಗೆ ಕೊಡುವುದಾಗಿ ಸ್ಪೀಕರ್ ಯು.ಟಿ.ಖಾದರ್ ಪ್ರಕಟಿಸಿದರು. \ No newline at end of file diff --git a/Varta_Bharati/url_26_101_28.txt b/Varta_Bharati/url_26_101_28.txt new file mode 100644 index 0000000000000000000000000000000000000000..ddc1259097e0a9e79ab1a52b63eba6af742367e2 --- /dev/null +++ b/Varta_Bharati/url_26_101_28.txt @@ -0,0 +1 @@ +ಬೆಂಗಳೂರು: ನೀರಾವರಿ ಪ್ರದೇಶದಲ್ಲಿನ ನಾಲೆಗಳಿಗೆ ಕಾನೂನುಬಾಹಿರವಾಗಿ ನೀರಿನ ಕೊಳವೆಗಳನ್ನು ಹಾಕುವುದನ್ನು ತಡೆಯಲು ಮತ್ತು ವಲಯ ಫಲಾನುಭವಿಗಳಿಗೆ ನೀರು ತಲುಪುವಂತೆ ನೋಡಿಕೊಳ್ಳುವ ಉದ್ದೇಶದಿಂದ ‘ಕರ್ನಾಟಕ ನೀರಾವರಿ(ತಿದ್ದುಪಡಿ)ವಿಧೇಯಕವನ್ನು ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಂಡನೆ ಮಾಡಿದ್ದಾರೆ. ಸೋಮವಾರ ವಿಧಾನಸಭೆಯ ಶಾಸನ ರಚನಾ ಕಲಾಪದಲ್ಲಿ ವಿಧೇಯಕವನ್ನು ಮಂಡಿಸಿದ್ದು, ಕರ್ನಾಟಕ ನೀರಾವರಿ ಅಧಿನಿಯಮ-1965ಕ್ಕೆ ತಿದ್ದುಪಡಿ ತರಲು ಈ ವಿಧೇಯಕ ಮಂಡಿಸಲಾಗಿದೆ. ಕೃಷಿ ಉಪಕರಣಗಳು, ನಾಲೆ, ನೀರು ಪೂರೈಕೆ ಪ್ರದೇಶ, ನೀರಾವರಿ ನ್ಯಾಯಾಲಯ, ಕಾರ್ಯಪಡೆ ಮತ್ತು ಕಾಲುವೆಯಿಂದ ನೀರಿನ ಅನಧಿಕೃತ ಬಳಕೆ ಎಂಬ ಹೊಸ ಪರಿಭಾಷೆಗಳನ್ನು ಸೇರಿಸಲಾಗುತ್ತದೆ. ಭೂಸ್ವಾಧೀನ ಅಧಿನಿಯಮ -1894ರ ಬದಲಾಗಿ ಭೂ ಆರ್ಜನೆ, ಪುನರ್ ವ್ಯವಸ್ಥೆಯಲ್ಲಿ ನ್ಯಾಯೋಚಿತ ಪಾಲನೆ ಮತ್ತು ಪಾರದರ್ಶಕತೆ ಹಕ್ಕು ಅಧಿನಿಯಮ-2013ನ್ನು ಪ್ರತಿಯೋಜಿಸಲಾಗುತ್ತದೆ. ಅಂತರ್ ಜಲವನ್ನು ಹೊರತೆಗೆಯಲು ಮತ್ತು ಬಳಸಲು ಅನುಮತಿ ಮಂಜೂರು ಮಾಡಲು ಅಸ್ತಿತ್ವದಲ್ಲಿರುವ ಅಂತರ್ ಜಲ‌ ಬಳಕೆದಾರರ ನೋಂದಣಿ ಮಾಡಲು 28 ಎ ಮತ್ತು 28 ಬಿ ಪ್ರಕರಣಗಳ ಉಲ್ಲಂಘನೆಗಾಗಿ ದಂಡ ವಿಧಿಸುವ ಉದ್ದೇಶವನ್ನು ಈ ವಿಧೇಯಕ ಹೊಂದಿದೆ.ಅಪರಾಧಿ ಎಂದು ನಿರ್ಣಯವಾದ ಮೇಲೆ ಶಿಕ್ಷೆಯ ಅವಧಿಯನ್ನು ಹೆಚ್ಚಿಸಲು, ಶಿಕ್ಷೆಯ ಕಾಲಾವಧಿಯನ್ನು ವಿಸ್ತರಿಸಲು ಹಾಗೂ ದಂಡದ ಮೊತ್ತ ಹೆಚ್ಚಿಸಲಾಗುತ್ತದೆ. ನೀರಾವರಿ, ನ್ಯಾಯಾಲಯದ ಅಂತರ್ನಿಹಿತ ಅಧಿಕಾರವನ್ನು ಉಳಿಸುವಿಕೆ, ವಿಚಾರಣೆ ಸ್ಥಳ, ಸಾಕ್ಷ್ಯಗಳ ಕಾರ್ಯವಿಧಾನ, ವಿಚಾರಣೆ ಮತ್ತು ಸಮನ್ಸ್ ಮಾಡುವುದು ಇತ್ಯಾದಿಗಳನ್ನು ಸೇರಿಸಲಾಗುತ್ತದೆ. ತ್ವರಿತ ವಿಲೇವಾರಿಗಾಗಿ ಆರು ತಿಂಗಳ ಕಾಲಾವಧಿಯನ್ನು ನಿಗದಿಪಡಿಸಲು ಈ ವಿಧೇಯಕವನ್ನು ಮಂಡಿಸಲಾಗಿದೆ. \ No newline at end of file diff --git a/Varta_Bharati/url_26_101_29.txt b/Varta_Bharati/url_26_101_29.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_3.txt b/Varta_Bharati/url_26_101_3.txt new file mode 100644 index 0000000000000000000000000000000000000000..4671947895c79f6937392fa54199ed6106882f63 --- /dev/null +++ b/Varta_Bharati/url_26_101_3.txt @@ -0,0 +1 @@ +ಬೆಂಗಳೂರು: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಚ್.ಎಸ್. ಗೋಪಿನಾಥ್ ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ ಇಲಾಖೆಯಲ್ಲಿ ಮಂಜೂರಾದ 903 ವೈದ್ಯಾಧಿಕಾರಿಗಳ ಪೈಕಿ 677 ವೈದ್ಯಾಧಿಕಾರಿಗಳು ಮತ್ತು 158 ಸ್ನಾತಕೋತ್ತರ ಪದವಿ ಪಡೆದಿರುವ ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.ರಾಜ್ಯದಲ್ಲಿ ಈಗಾಗಲೇ 726 ಚಿಕಿತ್ಸಾಲಯಗಳು, 168 ಆಸ್ಪತ್ರೆಗಳು 3 ಐವತ್ತು ಆಸಿಗೆಯುಳ್ಳ ಆಸ್ಪತ್ರೆಗಳು, ಒಂದು ಹೈ-ಟೆಕ್ ಪಂಚಕರ್ಮ ಆಸ್ಪತ್ರೆ ಹಾಗೂ 7 ಆಯುಷ್ ಕಾಲೇಜಿಗೆ ಹೊಂದಿಕೊಂಡ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲ ವಿಧಾನಸಭಾ ವ್ಯಾಪ್ತಿಯಲ್ಲಿ ಆಯುಷ್ ಆಸ್ಪತ್ರೆಗಳು ಇರುತ್ತವೆ ಎಂದರು. \ No newline at end of file diff --git a/Varta_Bharati/url_26_101_30.txt b/Varta_Bharati/url_26_101_30.txt new file mode 100644 index 0000000000000000000000000000000000000000..ddc1259097e0a9e79ab1a52b63eba6af742367e2 --- /dev/null +++ b/Varta_Bharati/url_26_101_30.txt @@ -0,0 +1 @@ +ಬೆಂಗಳೂರು: ನೀರಾವರಿ ಪ್ರದೇಶದಲ್ಲಿನ ನಾಲೆಗಳಿಗೆ ಕಾನೂನುಬಾಹಿರವಾಗಿ ನೀರಿನ ಕೊಳವೆಗಳನ್ನು ಹಾಕುವುದನ್ನು ತಡೆಯಲು ಮತ್ತು ವಲಯ ಫಲಾನುಭವಿಗಳಿಗೆ ನೀರು ತಲುಪುವಂತೆ ನೋಡಿಕೊಳ್ಳುವ ಉದ್ದೇಶದಿಂದ ‘ಕರ್ನಾಟಕ ನೀರಾವರಿ(ತಿದ್ದುಪಡಿ)ವಿಧೇಯಕವನ್ನು ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಂಡನೆ ಮಾಡಿದ್ದಾರೆ. ಸೋಮವಾರ ವಿಧಾನಸಭೆಯ ಶಾಸನ ರಚನಾ ಕಲಾಪದಲ್ಲಿ ವಿಧೇಯಕವನ್ನು ಮಂಡಿಸಿದ್ದು, ಕರ್ನಾಟಕ ನೀರಾವರಿ ಅಧಿನಿಯಮ-1965ಕ್ಕೆ ತಿದ್ದುಪಡಿ ತರಲು ಈ ವಿಧೇಯಕ ಮಂಡಿಸಲಾಗಿದೆ. ಕೃಷಿ ಉಪಕರಣಗಳು, ನಾಲೆ, ನೀರು ಪೂರೈಕೆ ಪ್ರದೇಶ, ನೀರಾವರಿ ನ್ಯಾಯಾಲಯ, ಕಾರ್ಯಪಡೆ ಮತ್ತು ಕಾಲುವೆಯಿಂದ ನೀರಿನ ಅನಧಿಕೃತ ಬಳಕೆ ಎಂಬ ಹೊಸ ಪರಿಭಾಷೆಗಳನ್ನು ಸೇರಿಸಲಾಗುತ್ತದೆ. ಭೂಸ್ವಾಧೀನ ಅಧಿನಿಯಮ -1894ರ ಬದಲಾಗಿ ಭೂ ಆರ್ಜನೆ, ಪುನರ್ ವ್ಯವಸ್ಥೆಯಲ್ಲಿ ನ್ಯಾಯೋಚಿತ ಪಾಲನೆ ಮತ್ತು ಪಾರದರ್ಶಕತೆ ಹಕ್ಕು ಅಧಿನಿಯಮ-2013ನ್ನು ಪ್ರತಿಯೋಜಿಸಲಾಗುತ್ತದೆ. ಅಂತರ್ ಜಲವನ್ನು ಹೊರತೆಗೆಯಲು ಮತ್ತು ಬಳಸಲು ಅನುಮತಿ ಮಂಜೂರು ಮಾಡಲು ಅಸ್ತಿತ್ವದಲ್ಲಿರುವ ಅಂತರ್ ಜಲ‌ ಬಳಕೆದಾರರ ನೋಂದಣಿ ಮಾಡಲು 28 ಎ ಮತ್ತು 28 ಬಿ ಪ್ರಕರಣಗಳ ಉಲ್ಲಂಘನೆಗಾಗಿ ದಂಡ ವಿಧಿಸುವ ಉದ್ದೇಶವನ್ನು ಈ ವಿಧೇಯಕ ಹೊಂದಿದೆ.ಅಪರಾಧಿ ಎಂದು ನಿರ್ಣಯವಾದ ಮೇಲೆ ಶಿಕ್ಷೆಯ ಅವಧಿಯನ್ನು ಹೆಚ್ಚಿಸಲು, ಶಿಕ್ಷೆಯ ಕಾಲಾವಧಿಯನ್ನು ವಿಸ್ತರಿಸಲು ಹಾಗೂ ದಂಡದ ಮೊತ್ತ ಹೆಚ್ಚಿಸಲಾಗುತ್ತದೆ. ನೀರಾವರಿ, ನ್ಯಾಯಾಲಯದ ಅಂತರ್ನಿಹಿತ ಅಧಿಕಾರವನ್ನು ಉಳಿಸುವಿಕೆ, ವಿಚಾರಣೆ ಸ್ಥಳ, ಸಾಕ್ಷ್ಯಗಳ ಕಾರ್ಯವಿಧಾನ, ವಿಚಾರಣೆ ಮತ್ತು ಸಮನ್ಸ್ ಮಾಡುವುದು ಇತ್ಯಾದಿಗಳನ್ನು ಸೇರಿಸಲಾಗುತ್ತದೆ. ತ್ವರಿತ ವಿಲೇವಾರಿಗಾಗಿ ಆರು ತಿಂಗಳ ಕಾಲಾವಧಿಯನ್ನು ನಿಗದಿಪಡಿಸಲು ಈ ವಿಧೇಯಕವನ್ನು ಮಂಡಿಸಲಾಗಿದೆ. \ No newline at end of file diff --git a/Varta_Bharati/url_26_101_31.txt b/Varta_Bharati/url_26_101_31.txt new file mode 100644 index 0000000000000000000000000000000000000000..5d653f75c610b5b5d01e8ff36e8f29edf0465cac --- /dev/null +++ b/Varta_Bharati/url_26_101_31.txt @@ -0,0 +1 @@ +ಬೆಂಗಳೂರು : ಕಾನೂನು ರೀತಿಯಲ್ಲಿ ‘ಕುಮ್ಕಿ ಭೂಮಿ’ ಮಂಜೂರು ಮಾಡಲು ಸಾಧ್ಯವಿಲ್ಲ. ಆದರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯನ್ನೂ ಮಾಡುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಸೋಮವಾರ ವಿಧಾನಸಭಾ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡುವುದು ಸಾಧ್ಯವಿಲ್ಲ. ಆಗುತ್ತೆ, ನೋಡೋಣ ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ನಿರೀಕ್ಷೆಗಳನ್ನು ನೀಡಲು ನಾವು ಸಿದ್ದರಿಲ್ಲ. ಕಹಿಯಾದರೂ ಸತ್ಯವನ್ನು ಹೇಳಲೇಬೇಕು. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದರು. ಕುಮ್ಕಿ ಜನೀನನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ಸಂಪುಟ ಉಪ ಸಮಿತಿ ಸಭೆ ರಚನೆ ಮಾಡಿತ್ತು. ಈ ಸಭೆ ದೀರ್ಘ ಚರ್ಚೆ ನಡೆಸಿದ ನಂತರ ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದು ಈ ವಿಚಾರವನ್ನೇ ಕೈಬಿಟ್ಟಿತ್ತು ಎಂಬ ಮಾಹಿತಿಯನ್ನು ಅವರು ಸದನಕ್ಕೆ ನೀಡಿದರು. ಅಲ್ಲದೆ, ಕೆಎಲ್‍ಆರ್ ಆಕ್ಟ್ ರೂಲ್ಸ್- 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂಬ ಅಂಶ ಕಾನೂನಿನಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಕುಮ್ಕಿ ಜಮೀನನ್ನು ಕನಿಷ್ಠ ಭೋಗ್ಯಕ್ಕೆ ನೀಡುವುದಾದರೂ ಸಾಧ್ಯವಿದೆಯಾ ಎಂಬ ಕುರಿತು ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಸ್ಪಷ್ಟೀಕರಣ ನೀಡಿದರು. ಇದಕ್ಕೂ ಮುನ್ನ ಸುನೀಲ್ ಕುಮಾರ್ ಪ್ರಸ್ತಾಪಿಸಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53-57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು. \ No newline at end of file diff --git a/Varta_Bharati/url_26_101_32.txt b/Varta_Bharati/url_26_101_32.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_33.txt b/Varta_Bharati/url_26_101_33.txt new file mode 100644 index 0000000000000000000000000000000000000000..5d653f75c610b5b5d01e8ff36e8f29edf0465cac --- /dev/null +++ b/Varta_Bharati/url_26_101_33.txt @@ -0,0 +1 @@ +ಬೆಂಗಳೂರು : ಕಾನೂನು ರೀತಿಯಲ್ಲಿ ‘ಕುಮ್ಕಿ ಭೂಮಿ’ ಮಂಜೂರು ಮಾಡಲು ಸಾಧ್ಯವಿಲ್ಲ. ಆದರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯನ್ನೂ ಮಾಡುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಸೋಮವಾರ ವಿಧಾನಸಭಾ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡುವುದು ಸಾಧ್ಯವಿಲ್ಲ. ಆಗುತ್ತೆ, ನೋಡೋಣ ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ನಿರೀಕ್ಷೆಗಳನ್ನು ನೀಡಲು ನಾವು ಸಿದ್ದರಿಲ್ಲ. ಕಹಿಯಾದರೂ ಸತ್ಯವನ್ನು ಹೇಳಲೇಬೇಕು. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದರು. ಕುಮ್ಕಿ ಜನೀನನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ಸಂಪುಟ ಉಪ ಸಮಿತಿ ಸಭೆ ರಚನೆ ಮಾಡಿತ್ತು. ಈ ಸಭೆ ದೀರ್ಘ ಚರ್ಚೆ ನಡೆಸಿದ ನಂತರ ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದು ಈ ವಿಚಾರವನ್ನೇ ಕೈಬಿಟ್ಟಿತ್ತು ಎಂಬ ಮಾಹಿತಿಯನ್ನು ಅವರು ಸದನಕ್ಕೆ ನೀಡಿದರು. ಅಲ್ಲದೆ, ಕೆಎಲ್‍ಆರ್ ಆಕ್ಟ್ ರೂಲ್ಸ್- 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂಬ ಅಂಶ ಕಾನೂನಿನಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಕುಮ್ಕಿ ಜಮೀನನ್ನು ಕನಿಷ್ಠ ಭೋಗ್ಯಕ್ಕೆ ನೀಡುವುದಾದರೂ ಸಾಧ್ಯವಿದೆಯಾ ಎಂಬ ಕುರಿತು ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಸ್ಪಷ್ಟೀಕರಣ ನೀಡಿದರು. ಇದಕ್ಕೂ ಮುನ್ನ ಸುನೀಲ್ ಕುಮಾರ್ ಪ್ರಸ್ತಾಪಿಸಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53-57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು. \ No newline at end of file diff --git a/Varta_Bharati/url_26_101_34.txt b/Varta_Bharati/url_26_101_34.txt new file mode 100644 index 0000000000000000000000000000000000000000..c4e7fdbf6b029484fd3b2ba24830fa4d7c014f6c --- /dev/null +++ b/Varta_Bharati/url_26_101_34.txt @@ -0,0 +1 @@ +ಸೂರಜ್ ರೇವಣ್ಣಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಹಾಸನದ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಎರಡೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. 2 ಲಕ್ಷ ರೂ.ಗಳ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು, ಪಾಸ್‍ ಪೋರ್ಟ್ ತನಿಖಾಧಿಕಾರಿಗಳಿಗೆ ಒಪ್ಪಿಸಬೇಕು, ಆರೋಪ ಪಟ್ಟಿ ಸಲ್ಲಿಸುವವರೆಗೆ ಇಲ್ಲವೇ ಮುಂದಿನ ಆರು ತಿಂಗಳು ಕಾಲ ಪ್ರತಿ ಎರಡನೇ ಭಾನುವಾರ ಠಾಣೆಗೆ ಭೇಟಿ ನೀಡಿ ಸಹಿ ಮಾಡಬೇಕು, ಸಾಕ್ಷ್ಯಗಳಿಗೆ ಬೆದರಿಕೆ ಹಾಕಬಾರದು, ಸಾಕ್ಷಿಗಳನ್ನು ಸಂಪರ್ಕಿಸಲು ಪ್ರಯತ್ನ ಮಾಡಬಾರದು ಎಂಬುದಾಗಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಪ್ರಕರಣ ವಿವರ: ಹೊಳೆನರಸೀಪುರದಲ್ಲಿರುವ ಫಾರ್ಮ್‍ಹೌಸ್‍ಗೆ ಜೂ.16ರಂದು ಕರೆಯಿಸಿಕೊಂಡು ಡಾ.ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಚಾರವನ್ನು ಬಹಿರಂಗಪಡಿಸಿದರೆ ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾರೆ. ಈ ಸಂಬಂಧ ಹಣದ ಆಮಿಷವನ್ನೂ ಒಡ್ಡಿದ್ದರು ಎಂದು ಸಂತ್ರಸ್ತ ಯುವಕನೊಬ್ಬ ಸೂರಜ್ ಮತ್ತು ಅವರ ಬೆಂಬಲಿಗ ಶಿವಕುಮಾರ್ ವಿರುದ್ಧ ಜೂ.22ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಐಪಿಸಿ ವಿವಿಧ ಸೆಕ್ಷನ್‍ಗಳ ಅಡಿ ಎಫ್‍ಐಆರ್ ದಾಖಲಿಸಲಾಗಿತ್ತು. ಅಲ್ಲದೆ, ಸೂರಜ್ ಆಪ್ತ ಎನ್ನಲಾದ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಸೂರಜ್, ಚನ್ನರಾಯಪಟ್ಟಣದ ರಕ್ಷಿತ್ ಮತ್ತು ಹಾಸನದ ಸಚಿನ್ ವಿರುದ್ಧ ಐಪಿಸಿ ಸೆಕ್ಷನ್‍ಗಳ ಅಡಿ ಜೂ.25ರಂದು ಹೊಳೆನರಸೀಪುರದ ಗ್ರಾಮೀಣ ಠಾಣೆಯಲ್ಲಿ ಮತ್ತೊಂದು ಎಫ್‍ಐಆರ್ ದಾಖಲಾಗಿತ್ತು. \ No newline at end of file diff --git a/Varta_Bharati/url_26_101_35.txt b/Varta_Bharati/url_26_101_35.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_36.txt b/Varta_Bharati/url_26_101_36.txt new file mode 100644 index 0000000000000000000000000000000000000000..c4e7fdbf6b029484fd3b2ba24830fa4d7c014f6c --- /dev/null +++ b/Varta_Bharati/url_26_101_36.txt @@ -0,0 +1 @@ +ಸೂರಜ್ ರೇವಣ್ಣಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಹಾಸನದ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಎರಡೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. 2 ಲಕ್ಷ ರೂ.ಗಳ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು, ಪಾಸ್‍ ಪೋರ್ಟ್ ತನಿಖಾಧಿಕಾರಿಗಳಿಗೆ ಒಪ್ಪಿಸಬೇಕು, ಆರೋಪ ಪಟ್ಟಿ ಸಲ್ಲಿಸುವವರೆಗೆ ಇಲ್ಲವೇ ಮುಂದಿನ ಆರು ತಿಂಗಳು ಕಾಲ ಪ್ರತಿ ಎರಡನೇ ಭಾನುವಾರ ಠಾಣೆಗೆ ಭೇಟಿ ನೀಡಿ ಸಹಿ ಮಾಡಬೇಕು, ಸಾಕ್ಷ್ಯಗಳಿಗೆ ಬೆದರಿಕೆ ಹಾಕಬಾರದು, ಸಾಕ್ಷಿಗಳನ್ನು ಸಂಪರ್ಕಿಸಲು ಪ್ರಯತ್ನ ಮಾಡಬಾರದು ಎಂಬುದಾಗಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಪ್ರಕರಣ ವಿವರ: ಹೊಳೆನರಸೀಪುರದಲ್ಲಿರುವ ಫಾರ್ಮ್‍ಹೌಸ್‍ಗೆ ಜೂ.16ರಂದು ಕರೆಯಿಸಿಕೊಂಡು ಡಾ.ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಚಾರವನ್ನು ಬಹಿರಂಗಪಡಿಸಿದರೆ ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾರೆ. ಈ ಸಂಬಂಧ ಹಣದ ಆಮಿಷವನ್ನೂ ಒಡ್ಡಿದ್ದರು ಎಂದು ಸಂತ್ರಸ್ತ ಯುವಕನೊಬ್ಬ ಸೂರಜ್ ಮತ್ತು ಅವರ ಬೆಂಬಲಿಗ ಶಿವಕುಮಾರ್ ವಿರುದ್ಧ ಜೂ.22ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಐಪಿಸಿ ವಿವಿಧ ಸೆಕ್ಷನ್‍ಗಳ ಅಡಿ ಎಫ್‍ಐಆರ್ ದಾಖಲಿಸಲಾಗಿತ್ತು. ಅಲ್ಲದೆ, ಸೂರಜ್ ಆಪ್ತ ಎನ್ನಲಾದ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಸೂರಜ್, ಚನ್ನರಾಯಪಟ್ಟಣದ ರಕ್ಷಿತ್ ಮತ್ತು ಹಾಸನದ ಸಚಿನ್ ವಿರುದ್ಧ ಐಪಿಸಿ ಸೆಕ್ಷನ್‍ಗಳ ಅಡಿ ಜೂ.25ರಂದು ಹೊಳೆನರಸೀಪುರದ ಗ್ರಾಮೀಣ ಠಾಣೆಯಲ್ಲಿ ಮತ್ತೊಂದು ಎಫ್‍ಐಆರ್ ದಾಖಲಾಗಿತ್ತು. \ No newline at end of file diff --git a/Varta_Bharati/url_26_101_4.txt b/Varta_Bharati/url_26_101_4.txt new file mode 100644 index 0000000000000000000000000000000000000000..87251d32153f40eaea16803fc265273de471c047 --- /dev/null +++ b/Varta_Bharati/url_26_101_4.txt @@ -0,0 +1 @@ +ಬೆಂಗಳೂರು : ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಬಡವರಿಗೆ ಯಡಿಯೂರಪ್ಪ ಅವರ ಅವಧಿಯಲ್ಲಿದ್ದಂತೆ 5ಲಕ್ಷ ರೂ.ನೆರವು ನೀಡಬೇಕು ಎಂದು ಬಿಜೆಪಿ ಸದಸ್ಯ ಬಿ.ವೈ.ವಿಜಯೇಂದ್ರ ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. ಸೋಮವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ ಹಿಂದೆ ಎನ್‍ಡಿಆರ್‌ಎಫ್ ನಿಯಮದ ಪ್ರಕಾರ ಮನೆ ಕಳೆದುಕೊಂಡ ಬಡವರಿಗೆ ಸುಮಾರು 1ಲಕ್ಷ ರೂ. ನೀಡಲಾಗುತ್ತಿದ್ದು, ಅದು ಸಾಕಾಗುವುದಿಲ್ಲ. ಹೀಗಾಗಿ ಬಡವರಿಗೆ ನೆರವಾಗುವ ದೃಷ್ಟಿಯಿಂದ 5 ಲಕ್ಷ ರೂ.ನೀಡುವ ನಿರ್ಧಾರವನ್ನು ಬಿ.ಎಸ್.ಯಡಿಯೂರಪ್ಪರ ನೇತೃತ್ವದ ಬಿಜೆಪಿ ಸರಕಾರವು ಕೈಗೊಂಡಿತ್ತು ಎಂದು ವಿವರಿಸಿದರು. ಗೋಡೆ ಕುಸಿದ ಮನೆಗೆ ಎನ್‍ಡಿಆರ್‌ ಎಫ್ ನಿಯಮದ ಪ್ರಕಾರ 40 ಸಾವಿರ ರೂ. ಕೊಡುತ್ತಿದ್ದರು. ಅದನ್ನು ಒಂದು ಲಕ್ಷ ರೂ.ಗೆ ಹೆಚ್ಚಿಸಲಾಗಿತ್ತು. ಮನೆಗಳಿಗೆ ನೀರು ನುಗ್ಗಿದ್ದರೆ 10 ಸಾವಿರ ರೂ. ಕೊಡುತ್ತಿದ್ದರು ಎಂದ ಅವರು, ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟಿಸುತ್ತಿದೆ. ನಾನು ಈಗಾಗಲೇ ಶಿಕಾರಿಪುರ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ಮಳೆ ಜಾಸ್ತಿಯಾದ ಪರಿಣಾಮ ಮನೆಗಳು, ಮನೆ ಗೋಡೆಗಳು ಕುಸಿದು ಬೀಳುತ್ತಿವೆ ಎಂದರು. ಬಿಜೆಪಿ ಸದಸ್ಯ ಸಿದ್ದು ಸವದಿ ಮಾತನಾಡಿ, ‘ಹಲವು ಕಡೆ ಪ್ರವಾಹ ಉಂಟಾಗಿ ಗುಡ್ಡ ಕುಸಿತವಾಗಿದೆ. ಅದರಲ್ಲೂ ಅನೇಕ ಚಾಲಕರು ವಾಹನಗಳ ಸಮೇತ ಸಿಲುಕಿಕೊಂಡಿದ್ದಾರೆ. ಸರಕಾರ ತುರ್ತು ಪರಿಹಾರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮಾತನಾಡಿ, ಸಂತ್ರಸ್ತರ ನೆರವಿಗಾಗಿ ರಾಜ್ಯ ಸರಕಾರ ಅರೆಸೇನಾ ಪಡೆಯನ್ನು ಕರೆಯಬೇಕು ಎಂದು ಸಲಹೆ ನೀಡಿದರು. ಬಿಜೆಪಿ ಸದಸ್ಯ ವೇದವ್ಯಾಸ ಮಾತನಾಡಿ, ಪರಿಹಾರ ಪಡೆಯಬೇಕಾದರೆ ದಾಖಲೆಗಳನ್ನು ಉಲ್ಲೇಖ ಮಾಡುವ ವ್ಯವಸ್ಥೆ ಇದೆ.ಇದರಿಂದ ಸಂತ್ರಸ್ತರಿಗೆ ತುರ್ತು ಪರಿಹಾರ, ಸಹಾಯಧನ ಮಾಡಲು ಆಗುತ್ತಿಲ್ಲ. ಕೆಲ ದಾಖಲೆ, ನಿಯಮಗಳನ್ನು ಅಧಿಕಾರಿಗಳಿಗೆ ಒದಗಿಸುವ ಪ್ರಕ್ರಿಯೆ ಸಡಿಲಗೊಳಿಸಬೇಕು ಎಂದು ಮನವಿ ಮಾಡಿದರು. \ No newline at end of file diff --git a/Varta_Bharati/url_26_101_5.txt b/Varta_Bharati/url_26_101_5.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_6.txt b/Varta_Bharati/url_26_101_6.txt new file mode 100644 index 0000000000000000000000000000000000000000..87251d32153f40eaea16803fc265273de471c047 --- /dev/null +++ b/Varta_Bharati/url_26_101_6.txt @@ -0,0 +1 @@ +ಬೆಂಗಳೂರು : ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಬಡವರಿಗೆ ಯಡಿಯೂರಪ್ಪ ಅವರ ಅವಧಿಯಲ್ಲಿದ್ದಂತೆ 5ಲಕ್ಷ ರೂ.ನೆರವು ನೀಡಬೇಕು ಎಂದು ಬಿಜೆಪಿ ಸದಸ್ಯ ಬಿ.ವೈ.ವಿಜಯೇಂದ್ರ ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. ಸೋಮವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ ಹಿಂದೆ ಎನ್‍ಡಿಆರ್‌ಎಫ್ ನಿಯಮದ ಪ್ರಕಾರ ಮನೆ ಕಳೆದುಕೊಂಡ ಬಡವರಿಗೆ ಸುಮಾರು 1ಲಕ್ಷ ರೂ. ನೀಡಲಾಗುತ್ತಿದ್ದು, ಅದು ಸಾಕಾಗುವುದಿಲ್ಲ. ಹೀಗಾಗಿ ಬಡವರಿಗೆ ನೆರವಾಗುವ ದೃಷ್ಟಿಯಿಂದ 5 ಲಕ್ಷ ರೂ.ನೀಡುವ ನಿರ್ಧಾರವನ್ನು ಬಿ.ಎಸ್.ಯಡಿಯೂರಪ್ಪರ ನೇತೃತ್ವದ ಬಿಜೆಪಿ ಸರಕಾರವು ಕೈಗೊಂಡಿತ್ತು ಎಂದು ವಿವರಿಸಿದರು. ಗೋಡೆ ಕುಸಿದ ಮನೆಗೆ ಎನ್‍ಡಿಆರ್‌ ಎಫ್ ನಿಯಮದ ಪ್ರಕಾರ 40 ಸಾವಿರ ರೂ. ಕೊಡುತ್ತಿದ್ದರು. ಅದನ್ನು ಒಂದು ಲಕ್ಷ ರೂ.ಗೆ ಹೆಚ್ಚಿಸಲಾಗಿತ್ತು. ಮನೆಗಳಿಗೆ ನೀರು ನುಗ್ಗಿದ್ದರೆ 10 ಸಾವಿರ ರೂ. ಕೊಡುತ್ತಿದ್ದರು ಎಂದ ಅವರು, ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟಿಸುತ್ತಿದೆ. ನಾನು ಈಗಾಗಲೇ ಶಿಕಾರಿಪುರ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ಮಳೆ ಜಾಸ್ತಿಯಾದ ಪರಿಣಾಮ ಮನೆಗಳು, ಮನೆ ಗೋಡೆಗಳು ಕುಸಿದು ಬೀಳುತ್ತಿವೆ ಎಂದರು. ಬಿಜೆಪಿ ಸದಸ್ಯ ಸಿದ್ದು ಸವದಿ ಮಾತನಾಡಿ, ‘ಹಲವು ಕಡೆ ಪ್ರವಾಹ ಉಂಟಾಗಿ ಗುಡ್ಡ ಕುಸಿತವಾಗಿದೆ. ಅದರಲ್ಲೂ ಅನೇಕ ಚಾಲಕರು ವಾಹನಗಳ ಸಮೇತ ಸಿಲುಕಿಕೊಂಡಿದ್ದಾರೆ. ಸರಕಾರ ತುರ್ತು ಪರಿಹಾರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮಾತನಾಡಿ, ಸಂತ್ರಸ್ತರ ನೆರವಿಗಾಗಿ ರಾಜ್ಯ ಸರಕಾರ ಅರೆಸೇನಾ ಪಡೆಯನ್ನು ಕರೆಯಬೇಕು ಎಂದು ಸಲಹೆ ನೀಡಿದರು. ಬಿಜೆಪಿ ಸದಸ್ಯ ವೇದವ್ಯಾಸ ಮಾತನಾಡಿ, ಪರಿಹಾರ ಪಡೆಯಬೇಕಾದರೆ ದಾಖಲೆಗಳನ್ನು ಉಲ್ಲೇಖ ಮಾಡುವ ವ್ಯವಸ್ಥೆ ಇದೆ.ಇದರಿಂದ ಸಂತ್ರಸ್ತರಿಗೆ ತುರ್ತು ಪರಿಹಾರ, ಸಹಾಯಧನ ಮಾಡಲು ಆಗುತ್ತಿಲ್ಲ. ಕೆಲ ದಾಖಲೆ, ನಿಯಮಗಳನ್ನು ಅಧಿಕಾರಿಗಳಿಗೆ ಒದಗಿಸುವ ಪ್ರಕ್ರಿಯೆ ಸಡಿಲಗೊಳಿಸಬೇಕು ಎಂದು ಮನವಿ ಮಾಡಿದರು. \ No newline at end of file diff --git a/Varta_Bharati/url_26_101_7.txt b/Varta_Bharati/url_26_101_7.txt new file mode 100644 index 0000000000000000000000000000000000000000..a4313cd942d4557774609037dae323e706466779 --- /dev/null +++ b/Varta_Bharati/url_26_101_7.txt @@ -0,0 +1 @@ + ಎಚ್.ಕೆ.ಪಾಟೀಲ್ಬೆಂಗಳೂರು : ಕೇಂದ್ರ ಆಯವ್ಯಯ ಮಂಡನೆ ನಾಳೆ(ಜು.23) ನಡೆಯಲಿದ್ದು, ರಾಜ್ಯದಿಂದ ಆಯ್ಕೆಯಾದ ಹಣಕಾಸು ಸಚಿವರೂ ಆಗಿರುವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ನೆರವು ನೀಡುವ ನಿರೀಕ್ಷೆ ಇದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾವು ದಿಲ್ಲಿಗೆ ಹೋಗಿ ಸಂಸದರ, ಕೇಂದ್ರ ಸಚಿವರ ಸಭೆ ಮಾಡಿದ್ದೇವೆ. ಕೇಂದ್ರ ಸಚಿವ ಕುಮಾರಸ್ವಾಮಿ ಹಲವು ಭರವಸೆ ನೀಡಿದ್ದಾರೆ. ಕರ್ನಾಟಕದ ಬಗ್ಗೆ ಕೆಲವು ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಆ ಹಿನ್ನಲೆಯಲ್ಲಿ ನಮ್ಮ ನಿರೀಕ್ಷೆಗಳು ಹೆಚ್ಚಿದೆ ಎಂದು ತಿಳಿಸಿದರು. "ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ಹಣ ಬೇಕು, ನೀರಾವರಿ ಯೋಜನೆಗೆ ನೆರವು ಕೊಡಬೇಕು. ರಾಜ್ಯ ಸರಕಾರದ ಮನವಿ ಏನಿದೆ ಎಂದು ನನಗೆ ಗೊತ್ತಿಲ್ಲ. ಆದರೆ, ಕೇಂದ್ರ ಸರಕಾರವು ರಾಜ್ಯಕ್ಕೆ ಕಾನೂನು ಬದ್ಧವಾಗಿ ಹಣ ಕೊಡಲಿ. ಪ್ರಧಾನಿ ಮೋದಿ , ಹತ್ತು ವರ್ಷಗಳಿಂದ ರಾಜ್ಯಕ್ಕೆ ಅವರು ಅನ್ಯಾಯ ಮಾಡಿಕೊಂಡೇ ಬರುತ್ತಿದ್ದಾರೆ"ಸಂತೋಷ್ ಲಾಡ್, ಕಾರ್ಮಿಕ ಸಚಿವ \ No newline at end of file diff --git a/Varta_Bharati/url_26_101_8.txt b/Varta_Bharati/url_26_101_8.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_101_9.txt b/Varta_Bharati/url_26_101_9.txt new file mode 100644 index 0000000000000000000000000000000000000000..a4313cd942d4557774609037dae323e706466779 --- /dev/null +++ b/Varta_Bharati/url_26_101_9.txt @@ -0,0 +1 @@ + ಎಚ್.ಕೆ.ಪಾಟೀಲ್ಬೆಂಗಳೂರು : ಕೇಂದ್ರ ಆಯವ್ಯಯ ಮಂಡನೆ ನಾಳೆ(ಜು.23) ನಡೆಯಲಿದ್ದು, ರಾಜ್ಯದಿಂದ ಆಯ್ಕೆಯಾದ ಹಣಕಾಸು ಸಚಿವರೂ ಆಗಿರುವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ನೆರವು ನೀಡುವ ನಿರೀಕ್ಷೆ ಇದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾವು ದಿಲ್ಲಿಗೆ ಹೋಗಿ ಸಂಸದರ, ಕೇಂದ್ರ ಸಚಿವರ ಸಭೆ ಮಾಡಿದ್ದೇವೆ. ಕೇಂದ್ರ ಸಚಿವ ಕುಮಾರಸ್ವಾಮಿ ಹಲವು ಭರವಸೆ ನೀಡಿದ್ದಾರೆ. ಕರ್ನಾಟಕದ ಬಗ್ಗೆ ಕೆಲವು ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಆ ಹಿನ್ನಲೆಯಲ್ಲಿ ನಮ್ಮ ನಿರೀಕ್ಷೆಗಳು ಹೆಚ್ಚಿದೆ ಎಂದು ತಿಳಿಸಿದರು. "ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ಹಣ ಬೇಕು, ನೀರಾವರಿ ಯೋಜನೆಗೆ ನೆರವು ಕೊಡಬೇಕು. ರಾಜ್ಯ ಸರಕಾರದ ಮನವಿ ಏನಿದೆ ಎಂದು ನನಗೆ ಗೊತ್ತಿಲ್ಲ. ಆದರೆ, ಕೇಂದ್ರ ಸರಕಾರವು ರಾಜ್ಯಕ್ಕೆ ಕಾನೂನು ಬದ್ಧವಾಗಿ ಹಣ ಕೊಡಲಿ. ಪ್ರಧಾನಿ ಮೋದಿ , ಹತ್ತು ವರ್ಷಗಳಿಂದ ರಾಜ್ಯಕ್ಕೆ ಅವರು ಅನ್ಯಾಯ ಮಾಡಿಕೊಂಡೇ ಬರುತ್ತಿದ್ದಾರೆ"ಸಂತೋಷ್ ಲಾಡ್, ಕಾರ್ಮಿಕ ಸಚಿವ \ No newline at end of file diff --git a/Varta_Bharati/url_26_102_1.txt b/Varta_Bharati/url_26_102_1.txt new file mode 100644 index 0000000000000000000000000000000000000000..72225e203b4a21f03a0d69025850136dc289bf4a --- /dev/null +++ b/Varta_Bharati/url_26_102_1.txt @@ -0,0 +1 @@ +ಮಂಡ್ಯ/ ಬೆಂಗಳೂರು : “ಬಿಳಿಗುಂಡ್ಲುವಿನಲ್ಲಿ ದಾಖಲಾದಂತೆ ಇದುವರೆಗೂ ತಮಿಳುನಾಡಿಗೆ 30 ಟಿಎಂಸಿ ನೀರನ್ನು ಹರಿಸಲಾಗಿದೆ. 10 ಟಿಎಂಸಿ ನೀರನ್ನು ಹರಿಸಿದರೆ ಸಾಮಾನ್ಯ ವರ್ಷದಲ್ಲಿ 40 ಟಿಎಂಸಿ ನೀರು ಹರಿಸಿದಂತಾಗುತ್ತದೆ. ನಿತ್ಯ 51 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ಜಲಾನಯನ ಪ್ರದೇಶದಿಂದ ಹರಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಕೆಆರ್‌ಎಸ್ ಅಣೆಕಟ್ಟು ವೀಕ್ಷಣೆ ನಂತರ ಮಾತನಾಡಿದ ಅವರು, “ಕಾವೇರಿ ಜಲಾನಯನ ಪ್ರದೇಶಗಳಲ್ಲಿ 1,657 ಕೆರೆಗಳಿವೆ. ಮುಂಜಾಗ್ರತ ಕ್ರಮವಾಗಿ ಎಲ್ಲಾ ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ಸಚಿವರ ನೇತೃತ್ವದಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. 5.90 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ, 27 ಲಕ್ಷ ಟನ್ ರಸಗೊಬ್ಬರ ಸಂಗ್ರಹ, 30 ಲಕ್ಷ ರೈತರಿಗೆ ಸಹಕಾರಿ ಸಂಘಗಳಿಂದ ತಲಾ 25 ಸಾವಿರ ಕೋಟಿ ರೂ. ಸಾಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.“ನಮ್ಮ ಸರಕಾರ ರೈತರ ಬದುಕಿಗೆ ಪೂರಕವಾಗಿದೆ. ರೈತರ ಹಿತ ಕಾಯಲು ಬದ್ದತೆ ಹೊಂದಿದ್ದೇವೆ. ನಮ್ಮದು ಬೂಟಾಟಿಕೆಯ ಮಾತಲ್ಲ. ಪ್ರಚಾರಕ್ಕೆ ಮಾಡುವುದಲ್ಲ, ನಮ್ಮ ವಿಚಾರ, ಆಚಾರ ಎಲ್ಲವೂ ರೈತರ ಪರ. ಕಾವೇರಿ ನೀರು ನಿರ್ವಹಣಾ ಸಮಿತಿಯು ಜುಲೈ 11 ರಿಂದ 30 ರ ತನಕ 20 ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶ ನೀಡಿತ್ತು. ಆದರೆ ನಾವು ನೀರನ್ನು ಹರಿಸಲಿಲ್ಲ. ನಮ್ಮ ಸರಕಾರ ಜವಾಬ್ದಾರಿಯಿಂದ ನಡೆದುಕೊಂಡು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಿತ್ತು” ಎಂದರು.ಕಾವೇರಿ ಆರತಿ ಆರಂಭಿಸಲು ಚಿಂತನೆ :“ವಾರಣಾಸಿಯಲ್ಲಿ ಗಂಗಾ ಆರತಿ ನಡೆಸಿದಂತೆ, ಕಾವೇರಿ ಆರತಿ ಕಾರ್ಯಕ್ರಮ ಪ್ರಾರಂಭಿಸುವ ಆಲೋಚನೆ ಇದೆ. ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗು ಅಧಿಕಾರಿಗಳು ಸೇರಿದ 20 ಜನರ ಸಮಿತಿಯನ್ನು ರಚನೆ ಮಾಡಿ, ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಹೇಗೆ ನಡೆಯುತ್ತದೆ ಎನ್ನುವ ಬಗ್ಗೆ ಅಧ್ಯಯನ ನಡೆಸಲಾಗುವುದು. ಅಲ್ಲಿಂದ ಒಂದು ತಂಡವನ್ನು ಕರೆದುಕೊಂಡು ಬಂದು ಯಾವ ಜಾಗದಲ್ಲಿ ಕಾವೇರಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು. ಒಂದು ತಿಂಗಳ ಒಳಗಾಗಿ ಈ ಕಾರ್ಯಕ್ರಮ ಮಾಡಲಾಗುವುದು. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರೇ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸುತ್ತವೆ” ಎಂದು ಹೇಳಿದರು. \ No newline at end of file diff --git a/Varta_Bharati/url_26_102_10.txt b/Varta_Bharati/url_26_102_10.txt new file mode 100644 index 0000000000000000000000000000000000000000..9f3400228ee6ce4fc02b4227756091aee80e699b --- /dev/null +++ b/Varta_Bharati/url_26_102_10.txt @@ -0,0 +1 @@ +ಶಶಿಧರ್‌ ಭಟ್‌ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ, ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ."ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟ ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ. \ No newline at end of file diff --git a/Varta_Bharati/url_26_102_11.txt b/Varta_Bharati/url_26_102_11.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_102_12.txt b/Varta_Bharati/url_26_102_12.txt new file mode 100644 index 0000000000000000000000000000000000000000..9f3400228ee6ce4fc02b4227756091aee80e699b --- /dev/null +++ b/Varta_Bharati/url_26_102_12.txt @@ -0,0 +1 @@ +ಶಶಿಧರ್‌ ಭಟ್‌ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ, ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ."ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟ ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ. \ No newline at end of file diff --git a/Varta_Bharati/url_26_102_13.txt b/Varta_Bharati/url_26_102_13.txt new file mode 100644 index 0000000000000000000000000000000000000000..e7224242889dea2f69e12f1a64b0df580bf1ba0e --- /dev/null +++ b/Varta_Bharati/url_26_102_13.txt @@ -0,0 +1 @@ +ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನದ ಮೊದಲ ವಾರವು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂ.ಹಗರಣದ ಚರ್ಚೆ, ಗದ್ದಲ, ಧರಣಿಗಷ್ಟೇ ಸೀಮಿತವಾಗಿತ್ತು. ಈ ನಡುವೆ ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಗುಡ್ಡ ಕುಸಿತದಿಂದ ಆದ ದುರಂತದ ವಿಚಾರ ಹೊರತುಪಡಿಸಿ, ಬೇರೆ ಯಾವುದೆ ಸಾರ್ವಜನಿಕ ಮಹತ್ವದ ವಿಚಾರಗಳ ಚರ್ಚೆಗೆ ಅವಕಾಶವೇ ಇಲ್ಲದಂತಾಗಿತ್ತು.ಇದೀಗ ಸೋಮವಾರ(ಜು.22)ದಿಂದ ಪುನಃ ಸದನ ಸಮಾವೇಶಗೊಳ್ಳುತ್ತಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾವರ್ತಿಯವರಿಗೆ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಕೋರಲಿದ್ದಾರೆ. ಈಗಾಗಲೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷಗಳು, ಮುಡಾ ವಿಚಾರವು ನೇರವಾಗಿ ಮುಖ್ಯಮಂತ್ರಿಯ ಕುಟುಂಬಕ್ಕೆ ಸಂಬಂಧಪಟ್ಟಿರುವುದರಿಂದ ಸದನದಲ್ಲಿ ಸರಕಾರ ಹಾಗೂ ಮುಖ್ಯಮಂತ್ರಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ರಣತಂತ್ರಗಳನ್ನು ರೂಪಿಸುತ್ತಿವೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಜೊತೆಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರಾಜೀನಾಮೆಗೂ ಪ್ರತಿಪಕ್ಷಗಳು ಆಗ್ರಹಿಸಲಿವೆ. ನಗರಾಭಿವೃದ್ಧಿ ಇಲಾಖೆಯು ನಿಯಮಾವಳಿಗಳನ್ನೆಲ್ಲ ಗಾಳಿಗೆ ತೂರಿ ಅಕ್ರಮವಾಗಿ ಮುಖ್ಯಮಂತ್ರಿಯ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ ನಿವೇಶಗಳನ್ನು ಮಂಜೂರು ಮಾಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ದಾಖಲೆಗಳನ್ನು ಬಿಡುಗಡೆ ಮಾಡಿ ಮುಖ್ಯಮಂತ್ರಿಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಅಲ್ಲದೆ, ನಿನ್ನೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮುಡಾ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸದನದಲ್ಲಿ ಕೋಲಾಹಲ ಎಬ್ಬಿಸಲಿದ್ದಾರೆ ಎಂಬುದನ್ನು ಅರಿತು ಮುಜುಗರವನ್ನು ತಪ್ಪಿಸಿಕೊಳ್ಳಲು ಈಗಾಗಲೆ ಸರಕಾರವು ಹೈಕೋರ್ಟ್‍ನ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ ಮಾಡಿ, ತನಿಖೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಆದೇಶ ಹೊರಡಿಸಿದೆ. ಜೊತೆಗೆ, ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಪಟ್ಟಿ ಮಾಡಿರುವ ಕಾಂಗ್ರೆಸ್ ಸರಕಾರವು, ಸದನದಲ್ಲಿ ಪ್ರತಿಪಕ್ಷಗಳನ್ನು ಕಟ್ಟಿ ಹಾಕಲು ಯತ್ನಿಸಲಿದೆ. ವಿಪಕ್ಷಗಳು ಸದನದಲ್ಲಿ ಸರಕಾರದ ವಿರುದ್ಧ ಮುಗಿಬಿದ್ದಾಗ ಎಲ್ಲ ಶಾಸಕರು ಒಗ್ಗಟ್ಟಾಗಿ ಅವರನ್ನು ಎದುರಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕಲ್ಯಾಣಕ್ಕೆ ಬಳಸಬೇಕಿರುವ ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ರಾಜ್ಯ ಸರಕಾರ ಪಂಚ ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳಲು ಅವಕಾಶ ಕೊಟ್ಟಿರುವುದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರಕಾರದ ವಿರುದ್ಧ ಹೋರಾಟ ಮಾಡಲು ಪ್ರತಿಪಕ್ಷಗಳು ಸಜ್ಜಾಗಿವೆ.ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ಪರೀಕ್ಷೆಯ ವಿರುದ್ಧ ಸರ್ವಾನುಮತದ ನಿರ್ಣಯ ಕೈಗೊಂಡಿರುವ ಬೆನ್ನಲ್ಲೆ ನಮ್ಮ ರಾಜ್ಯದಲ್ಲಿಯೂ ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯ ಮಂಡಿಸಿ ಅಂಗೀಕರಿಸಲು ಸರಕಾರ ಚಿಂತನೆ ನಡೆಸಿದೆ. ಇದರ ಜೊತೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡುವ ಸಂಬಂಧ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ.ಪ್ರತಿಪಕ್ಷಗಳನ್ನು ಕಟ್ಟಿ ಹಾಕಲು ಬಿಜೆಪಿ ಹಾಗೂ ಜೆಡಿಎಸ್ ಅವಧಿಯಲ್ಲಿ ಮುಡಾದಲ್ಲಿ ನಡೆದಿರಬಹುದಾದ ಅಕ್ರಮಗಳ ಕುರಿತು ತನಿಖೆಗೆ ಆದೇಶಿಸಬಹುದು. ಅಲ್ಲದೆ, ದೇವರಾಜ ಅರಸು ಟ್ರಕ್ ಟರ್ಮಿನಲ್, ಭೋವಿ ಅಭಿವೃದ್ಧಿ ನಿಗಮ, ಪರಶುರಾಮ ಥೀಮ್ ಪಾರ್ಕ್, ಎಪಿಎಂಸಿ ಆವರ್ತ ನಿಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣದ ಆರೋಪಗಳನ್ನು ಕಾಂಗ್ರೆಸ್ ಪಕ್ಷವು ಪ್ರಸ್ತಾಪಿಸುವ ಸಾಧ್ಯತೆಗಳಿವೆ. \ No newline at end of file diff --git a/Varta_Bharati/url_26_102_14.txt b/Varta_Bharati/url_26_102_14.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_102_15.txt b/Varta_Bharati/url_26_102_15.txt new file mode 100644 index 0000000000000000000000000000000000000000..e7224242889dea2f69e12f1a64b0df580bf1ba0e --- /dev/null +++ b/Varta_Bharati/url_26_102_15.txt @@ -0,0 +1 @@ +ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನದ ಮೊದಲ ವಾರವು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂ.ಹಗರಣದ ಚರ್ಚೆ, ಗದ್ದಲ, ಧರಣಿಗಷ್ಟೇ ಸೀಮಿತವಾಗಿತ್ತು. ಈ ನಡುವೆ ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಗುಡ್ಡ ಕುಸಿತದಿಂದ ಆದ ದುರಂತದ ವಿಚಾರ ಹೊರತುಪಡಿಸಿ, ಬೇರೆ ಯಾವುದೆ ಸಾರ್ವಜನಿಕ ಮಹತ್ವದ ವಿಚಾರಗಳ ಚರ್ಚೆಗೆ ಅವಕಾಶವೇ ಇಲ್ಲದಂತಾಗಿತ್ತು.ಇದೀಗ ಸೋಮವಾರ(ಜು.22)ದಿಂದ ಪುನಃ ಸದನ ಸಮಾವೇಶಗೊಳ್ಳುತ್ತಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾವರ್ತಿಯವರಿಗೆ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಕೋರಲಿದ್ದಾರೆ. ಈಗಾಗಲೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು ಹಿಡಿದಿರುವ ಪ್ರತಿಪಕ್ಷಗಳು, ಮುಡಾ ವಿಚಾರವು ನೇರವಾಗಿ ಮುಖ್ಯಮಂತ್ರಿಯ ಕುಟುಂಬಕ್ಕೆ ಸಂಬಂಧಪಟ್ಟಿರುವುದರಿಂದ ಸದನದಲ್ಲಿ ಸರಕಾರ ಹಾಗೂ ಮುಖ್ಯಮಂತ್ರಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ರಣತಂತ್ರಗಳನ್ನು ರೂಪಿಸುತ್ತಿವೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಜೊತೆಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರಾಜೀನಾಮೆಗೂ ಪ್ರತಿಪಕ್ಷಗಳು ಆಗ್ರಹಿಸಲಿವೆ. ನಗರಾಭಿವೃದ್ಧಿ ಇಲಾಖೆಯು ನಿಯಮಾವಳಿಗಳನ್ನೆಲ್ಲ ಗಾಳಿಗೆ ತೂರಿ ಅಕ್ರಮವಾಗಿ ಮುಖ್ಯಮಂತ್ರಿಯ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ ನಿವೇಶಗಳನ್ನು ಮಂಜೂರು ಮಾಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ದಾಖಲೆಗಳನ್ನು ಬಿಡುಗಡೆ ಮಾಡಿ ಮುಖ್ಯಮಂತ್ರಿಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಅಲ್ಲದೆ, ನಿನ್ನೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮುಡಾ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸದನದಲ್ಲಿ ಕೋಲಾಹಲ ಎಬ್ಬಿಸಲಿದ್ದಾರೆ ಎಂಬುದನ್ನು ಅರಿತು ಮುಜುಗರವನ್ನು ತಪ್ಪಿಸಿಕೊಳ್ಳಲು ಈಗಾಗಲೆ ಸರಕಾರವು ಹೈಕೋರ್ಟ್‍ನ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ ಮಾಡಿ, ತನಿಖೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಆದೇಶ ಹೊರಡಿಸಿದೆ. ಜೊತೆಗೆ, ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಪಟ್ಟಿ ಮಾಡಿರುವ ಕಾಂಗ್ರೆಸ್ ಸರಕಾರವು, ಸದನದಲ್ಲಿ ಪ್ರತಿಪಕ್ಷಗಳನ್ನು ಕಟ್ಟಿ ಹಾಕಲು ಯತ್ನಿಸಲಿದೆ. ವಿಪಕ್ಷಗಳು ಸದನದಲ್ಲಿ ಸರಕಾರದ ವಿರುದ್ಧ ಮುಗಿಬಿದ್ದಾಗ ಎಲ್ಲ ಶಾಸಕರು ಒಗ್ಗಟ್ಟಾಗಿ ಅವರನ್ನು ಎದುರಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕಲ್ಯಾಣಕ್ಕೆ ಬಳಸಬೇಕಿರುವ ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ರಾಜ್ಯ ಸರಕಾರ ಪಂಚ ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳಲು ಅವಕಾಶ ಕೊಟ್ಟಿರುವುದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರಕಾರದ ವಿರುದ್ಧ ಹೋರಾಟ ಮಾಡಲು ಪ್ರತಿಪಕ್ಷಗಳು ಸಜ್ಜಾಗಿವೆ.ತಮಿಳುನಾಡು ವಿಧಾನಸಭೆಯಲ್ಲಿ ನೀಟ್ ಪರೀಕ್ಷೆಯ ವಿರುದ್ಧ ಸರ್ವಾನುಮತದ ನಿರ್ಣಯ ಕೈಗೊಂಡಿರುವ ಬೆನ್ನಲ್ಲೆ ನಮ್ಮ ರಾಜ್ಯದಲ್ಲಿಯೂ ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯ ಮಂಡಿಸಿ ಅಂಗೀಕರಿಸಲು ಸರಕಾರ ಚಿಂತನೆ ನಡೆಸಿದೆ. ಇದರ ಜೊತೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡುವ ಸಂಬಂಧ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ.ಪ್ರತಿಪಕ್ಷಗಳನ್ನು ಕಟ್ಟಿ ಹಾಕಲು ಬಿಜೆಪಿ ಹಾಗೂ ಜೆಡಿಎಸ್ ಅವಧಿಯಲ್ಲಿ ಮುಡಾದಲ್ಲಿ ನಡೆದಿರಬಹುದಾದ ಅಕ್ರಮಗಳ ಕುರಿತು ತನಿಖೆಗೆ ಆದೇಶಿಸಬಹುದು. ಅಲ್ಲದೆ, ದೇವರಾಜ ಅರಸು ಟ್ರಕ್ ಟರ್ಮಿನಲ್, ಭೋವಿ ಅಭಿವೃದ್ಧಿ ನಿಗಮ, ಪರಶುರಾಮ ಥೀಮ್ ಪಾರ್ಕ್, ಎಪಿಎಂಸಿ ಆವರ್ತ ನಿಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣದ ಆರೋಪಗಳನ್ನು ಕಾಂಗ್ರೆಸ್ ಪಕ್ಷವು ಪ್ರಸ್ತಾಪಿಸುವ ಸಾಧ್ಯತೆಗಳಿವೆ. \ No newline at end of file diff --git a/Varta_Bharati/url_26_102_16.txt b/Varta_Bharati/url_26_102_16.txt new file mode 100644 index 0000000000000000000000000000000000000000..11d22dc752f67675ca59c3bfe2da169327a35350 --- /dev/null +++ b/Varta_Bharati/url_26_102_16.txt @@ -0,0 +1 @@ +Photo credit: X/sameernigamಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸಂಬಂಧ ಹೇಳಿಕೆ ನೀಡಿದ್ದ ಫೋನ್ ಪೇ (Phonepe) ಸಿಇಒ ಸಮೀರ್ ನಿಗಮ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವರು ಇಂದು ಭೇಷರತ್‌ ಕ್ಷಮೆಯಾಚಿಸಿದ್ದಾರೆ.ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ್ದ ಸಮೀರ್ ನಿಗಮ್, ಸರ್ಕಾರದ ನಿರ್ಧಾರವು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದರು. ಸಮೀರ್ ನಿಗಮ್ ಹೇಳಿಕೆಗೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇಂದು ಎಕ್ಸ್‌ನಲ್ಲಿ ಫೋನ್ ಪೇ ಸಂಸ್ಥೆಯ ಅಧಿಕೃತ ಖಾತೆಯಿಂದ ಪೋಸ್ಟ್‌ ಮಾಡಿ ಕ್ಷಮೆ ಕೋರಿದ್ದಾರೆ. "ಫೋನ್ ಪೇ ಬೆಂಗಳೂರಿನಲ್ಲಿ ಹುಟ್ಟಿದೆ. ಕಳೆದೊಂದು ದಶಕದಲ್ಲಿ ಫೋನ್‌ಪೇ ಬೆಂಗಳೂರಿನಿಂದ ಭಾರತದ ಉದ್ದಗಲಕ್ಕೂ ವಿಸ್ತರಿಸಿದೆ. ಈ ಮೂಲಕ ದೇಶದ 55 ಕೋಟಿಗೂ ಹೆಚ್ಚಿನ ಜನರಿಗೆ ಸುರಕ್ಷಿತ ಮತ್ತು ಪರಿಣಾಮಕಾರಿ ಡಿಜಿಟಲ್ ಪಾವತಿಗಳನ್ನು ನೀಡಲು ಸಾಧ್ಯವಾಗಿದೆ. ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧ ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ ವರದಿಗಳನ್ನು ಓದಿದೆ. ಇದಕ್ಕೆ ಅನುಗುಣವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ಕರ್ನಾಟಕ ಮತ್ತು ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡುವ ಯಾವುದೇ ಉದ್ದೇಶ ಹೊಂದಿಲ್ಲ. ನನಗೆ ಕನ್ನಡ ಸೇರಿ ದೇಶದ ಎಲ್ಲಾ ಭಾರತೀಯ ಭಾಷೆಗಳ ಬಗ್ಗೆ ಅತೀವ ಗೌರವವಿದೆ. ಭಾಷಾ ವೈವಿಧ್ಯತೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ, ಪರಂಪರೆಯು ದೇಶದ ಆಸ್ತಿಯಾಗಿದೆ. ಇದಕ್ಕೆ ಎಲ್ಲಾ ಭಾರತೀಯರು ಹೆಮ್ಮೆಪಡಬೇಕಿದೆ. ನನ್ನ ಉದ್ದೇಶ ಕನ್ನಡಿಗರನ್ನು ಅವಮಾನಿಸುವುದು ಆಗಿರಲಿಲ್ಲ. ನನ್ನ ಹೇಳಿಕೆಯಿಂದ ಯಾರದ್ದಾದರೂ ಭಾವನೆಗಳಿಗೆ ನೋವುಂಟಾಗಿದ್ದರೆ ಬೇಷರತ್ ಕ್ಷಮೆಯಾಚಿಸುತ್ತೇನೆ" ಎಂದು ಹೇಳಿದ್ದಾರೆ."ಕರ್ನಾಟಕದಾದ್ಯಂತ ಕನ್ನಡಿಗರಿಗೆ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಲು ನಾನು ಸಹಾಯ ಮಾಡಲು ಸಿದ್ಧ. ಸುಸ್ಥಿರವಾದ ಉದ್ಯೋಗದ ದಾರಿಯನ್ನು ಸೃಷ್ಟಿಸಬೇಕಿದೆ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ನಿರ್ವಹಿಸಬೇಕಿದೆ" ಎಂದು ಸಮೀರ್ ನಿಗಮ್ ಹೇಳಿದ್ದಾರೆ.ಖಾಸಗಿ ವಲಯಗಳಲ್ಲಿ ಕನ್ನಡಿಗರನ್ನು ನೇಮಕ ಮಾಡಿಕೊಳ್ಳುವ ಸಂಬಂಧ ಸರ್ಕಾರವು ಮಸೂದೆ ಮಂಡಿಸಲು ನಿರ್ಧರಿಸಿ ನಂತರ ಖಾಸಗಿ ವಲಯದಿಂದ ವಿರೋಧ ವ್ಯಕ್ತವಾದ್ದರಿಂದ ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆ ಹಿಡಿದಿದೆ. Our CEO and Founder @_sameernigam, has issued a personal statement clarifying his views on the Karnataka draft job reservation bill. Read the full statement below. Personal Statement from Sameer Nigam - CEO & Founder of PhonePePhonePe was born in Bengaluru and we are… \ No newline at end of file diff --git a/Varta_Bharati/url_26_102_17.txt b/Varta_Bharati/url_26_102_17.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_102_18.txt b/Varta_Bharati/url_26_102_18.txt new file mode 100644 index 0000000000000000000000000000000000000000..11d22dc752f67675ca59c3bfe2da169327a35350 --- /dev/null +++ b/Varta_Bharati/url_26_102_18.txt @@ -0,0 +1 @@ +Photo credit: X/sameernigamಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸಂಬಂಧ ಹೇಳಿಕೆ ನೀಡಿದ್ದ ಫೋನ್ ಪೇ (Phonepe) ಸಿಇಒ ಸಮೀರ್ ನಿಗಮ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವರು ಇಂದು ಭೇಷರತ್‌ ಕ್ಷಮೆಯಾಚಿಸಿದ್ದಾರೆ.ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ್ದ ಸಮೀರ್ ನಿಗಮ್, ಸರ್ಕಾರದ ನಿರ್ಧಾರವು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದರು. ಸಮೀರ್ ನಿಗಮ್ ಹೇಳಿಕೆಗೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇಂದು ಎಕ್ಸ್‌ನಲ್ಲಿ ಫೋನ್ ಪೇ ಸಂಸ್ಥೆಯ ಅಧಿಕೃತ ಖಾತೆಯಿಂದ ಪೋಸ್ಟ್‌ ಮಾಡಿ ಕ್ಷಮೆ ಕೋರಿದ್ದಾರೆ. "ಫೋನ್ ಪೇ ಬೆಂಗಳೂರಿನಲ್ಲಿ ಹುಟ್ಟಿದೆ. ಕಳೆದೊಂದು ದಶಕದಲ್ಲಿ ಫೋನ್‌ಪೇ ಬೆಂಗಳೂರಿನಿಂದ ಭಾರತದ ಉದ್ದಗಲಕ್ಕೂ ವಿಸ್ತರಿಸಿದೆ. ಈ ಮೂಲಕ ದೇಶದ 55 ಕೋಟಿಗೂ ಹೆಚ್ಚಿನ ಜನರಿಗೆ ಸುರಕ್ಷಿತ ಮತ್ತು ಪರಿಣಾಮಕಾರಿ ಡಿಜಿಟಲ್ ಪಾವತಿಗಳನ್ನು ನೀಡಲು ಸಾಧ್ಯವಾಗಿದೆ. ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧ ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ ವರದಿಗಳನ್ನು ಓದಿದೆ. ಇದಕ್ಕೆ ಅನುಗುಣವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ಕರ್ನಾಟಕ ಮತ್ತು ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡುವ ಯಾವುದೇ ಉದ್ದೇಶ ಹೊಂದಿಲ್ಲ. ನನಗೆ ಕನ್ನಡ ಸೇರಿ ದೇಶದ ಎಲ್ಲಾ ಭಾರತೀಯ ಭಾಷೆಗಳ ಬಗ್ಗೆ ಅತೀವ ಗೌರವವಿದೆ. ಭಾಷಾ ವೈವಿಧ್ಯತೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ, ಪರಂಪರೆಯು ದೇಶದ ಆಸ್ತಿಯಾಗಿದೆ. ಇದಕ್ಕೆ ಎಲ್ಲಾ ಭಾರತೀಯರು ಹೆಮ್ಮೆಪಡಬೇಕಿದೆ. ನನ್ನ ಉದ್ದೇಶ ಕನ್ನಡಿಗರನ್ನು ಅವಮಾನಿಸುವುದು ಆಗಿರಲಿಲ್ಲ. ನನ್ನ ಹೇಳಿಕೆಯಿಂದ ಯಾರದ್ದಾದರೂ ಭಾವನೆಗಳಿಗೆ ನೋವುಂಟಾಗಿದ್ದರೆ ಬೇಷರತ್ ಕ್ಷಮೆಯಾಚಿಸುತ್ತೇನೆ" ಎಂದು ಹೇಳಿದ್ದಾರೆ."ಕರ್ನಾಟಕದಾದ್ಯಂತ ಕನ್ನಡಿಗರಿಗೆ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಲು ನಾನು ಸಹಾಯ ಮಾಡಲು ಸಿದ್ಧ. ಸುಸ್ಥಿರವಾದ ಉದ್ಯೋಗದ ದಾರಿಯನ್ನು ಸೃಷ್ಟಿಸಬೇಕಿದೆ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ನಿರ್ವಹಿಸಬೇಕಿದೆ" ಎಂದು ಸಮೀರ್ ನಿಗಮ್ ಹೇಳಿದ್ದಾರೆ.ಖಾಸಗಿ ವಲಯಗಳಲ್ಲಿ ಕನ್ನಡಿಗರನ್ನು ನೇಮಕ ಮಾಡಿಕೊಳ್ಳುವ ಸಂಬಂಧ ಸರ್ಕಾರವು ಮಸೂದೆ ಮಂಡಿಸಲು ನಿರ್ಧರಿಸಿ ನಂತರ ಖಾಸಗಿ ವಲಯದಿಂದ ವಿರೋಧ ವ್ಯಕ್ತವಾದ್ದರಿಂದ ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆ ಹಿಡಿದಿದೆ. Our CEO and Founder @_sameernigam, has issued a personal statement clarifying his views on the Karnataka draft job reservation bill. Read the full statement below. Personal Statement from Sameer Nigam - CEO & Founder of PhonePePhonePe was born in Bengaluru and we are… \ No newline at end of file diff --git a/Varta_Bharati/url_26_102_19.txt b/Varta_Bharati/url_26_102_19.txt new file mode 100644 index 0000000000000000000000000000000000000000..e68d9a66003c0956642d29f9550bc1f8b338e989 --- /dev/null +++ b/Varta_Bharati/url_26_102_19.txt @@ -0,0 +1 @@ +ಸಾಂದರ್ಭಿಕ ಚಿತ್ರ (Credit: Meta AI)ಬೆಂಗಳೂರು: ಮಾಹಿತಿ ತಂತ್ರಜ್ಞಾನ(ಐಟಿ) ಕ್ಷೇತ್ರಗಳಲ್ಲಿ ದುಡಿಯುವ ಉದ್ಯೋಗಿಗಳ ಕೆಲಸದ ಅವಧಿಯನ್ನು ವಿಸ್ತರಿಸಲು ತಿದ್ದುಪಡಿ ಕಾಯ್ದೆ ತರಲು ಮುಂದಾಗಿರುವ ರಾಜ್ಯ ಸರಕಾರದ ಕ್ರಮಕ್ಕೆ ಕಾರ್ಮಿಕ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿವೆ.ಕರ್ನಾಟಕ ರಾಜ್ಯ ಐಟಿ ನೌಕರರ ಒಕ್ಕೂಟ (ಕೆಐಟಿಯು) ಹಾಗೂ ಕಾರ್ಮಿಕ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ತಿದ್ದುಪಡಿಯು ಪ್ರಸ್ತುತ ಮೂರು ಪಾಳಿಗಳಲ್ಲಿರುವ ಪದ್ಧತಿಯ ಬದಲಿಗೆ ಎರಡು ಪದ್ಧತಿಯನ್ನು ಅನುಮತಿಸುವುದಾಗಿದೆ. ಇದರಿಂದ ಮೂರನೇ ಒಂದು ಭಾಗದಷ್ಟು ಕಾರ್ಮಿಕರನ್ನು ವಜಾಗೊಳಿಸುವ ಹುನ್ನಾರವಾಗಿದೆ ಎಂದು ತಿಳಿಸಿದೆ. ಐಟಿ ವಲಯದ ಶೇ.45 ರಷ್ಟು ಉದ್ಯೋಗಿಗಳು ಒತ್ತಡದಂತ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಶೇ.55 ರಷ್ಟು ಮಂದಿ ದೈಹಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಈಗ ಜಾರಿಗೆ ತರಲು ಹೊರಟಿರುವ ತಿದ್ದುಪಡಿ ಉದ್ಯೋಗಿಗಳನ್ನು ಮತ್ತಷ್ಟು ಆಘಾತಕ್ಕೆ ದೂಡುತ್ತದೆ ಎಂದೂ ಆತಂಕ ವ್ಯಕ್ತಪಡಿಸಿವೆ. ಏನಿದು ಕಾಯ್ದೆ?: ರಾಜ್ಯ ಸರಕಾರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಆ ಮೂಲಕ ಐಟಿ ಕ್ಷೇತ್ರದ ಉದ್ಯೋಗಿಗಳ ಕೆಲಸದ ಅವಧಿ ದಿನಕ್ಕೆ 12 ತಾಸಿಗೂ ಹೆಚ್ಚಿಗೆ ವಿಸ್ತರಣೆಯಾಗಲಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಳೆದ ಶುಕ್ರವಾರ ಈ ಸಂಬಂಧ ವಿಕಾಸಸೌಧದಲ್ಲಿ ಸಭೆ ನಡೆಸಿದ್ದರು. ಸಭೆಯಲ್ಲಿ ಐಟಿ ಬಿಟಿ ಕ್ಷೇತ್ರದಲ್ಲಿ ದುಡಿಯುವ ನೌಕರರ ಕೆಲಸದ ಅವಧಿ ವಿಸ್ತರಣೆ ಬಗ್ಗೆ ಸಭೆ ಚರ್ಚಿಸಿದ್ದಾರೆ. ಈ ಪ್ರಸ್ತಾಪಿತ ತಿದ್ದುಪಡಿಯಂತೆ ಐಟಿ, ಬಿಪಿಒ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ದಿನಕ್ಕೆ 12 ತಾಸಿಗೂ ಹೆಚ್ಚು ಅವಧಿ ಕೆಲಸ ಮಾಡಬೇಕಾಗುತ್ತದೆ. ಸತತ ಮೂರು ತಿಂಗಳಲ್ಲಿ 125 ತಾಸು ಮೀರದಂತೆ ಕೆಲಸ ಮಾಡುವ ತಿದ್ದುಪಡಿ ಇದಾಗಿದೆ. ಪ್ರಸಕ್ತ ಕಾಯ್ದೆಯಂತೆ ದಿನಕ್ಕೆ ಗರಿಷ್ಠ 10 ತಾಸು ಕೆಲಸ ಮಾಡಬಹುದಾಗಿದೆ. ಇದರಲ್ಲಿ ಒಟಿಯೂ ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/Varta_Bharati/url_26_102_2.txt b/Varta_Bharati/url_26_102_2.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_102_20.txt b/Varta_Bharati/url_26_102_20.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_102_21.txt b/Varta_Bharati/url_26_102_21.txt new file mode 100644 index 0000000000000000000000000000000000000000..e68d9a66003c0956642d29f9550bc1f8b338e989 --- /dev/null +++ b/Varta_Bharati/url_26_102_21.txt @@ -0,0 +1 @@ +ಸಾಂದರ್ಭಿಕ ಚಿತ್ರ (Credit: Meta AI)ಬೆಂಗಳೂರು: ಮಾಹಿತಿ ತಂತ್ರಜ್ಞಾನ(ಐಟಿ) ಕ್ಷೇತ್ರಗಳಲ್ಲಿ ದುಡಿಯುವ ಉದ್ಯೋಗಿಗಳ ಕೆಲಸದ ಅವಧಿಯನ್ನು ವಿಸ್ತರಿಸಲು ತಿದ್ದುಪಡಿ ಕಾಯ್ದೆ ತರಲು ಮುಂದಾಗಿರುವ ರಾಜ್ಯ ಸರಕಾರದ ಕ್ರಮಕ್ಕೆ ಕಾರ್ಮಿಕ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿವೆ.ಕರ್ನಾಟಕ ರಾಜ್ಯ ಐಟಿ ನೌಕರರ ಒಕ್ಕೂಟ (ಕೆಐಟಿಯು) ಹಾಗೂ ಕಾರ್ಮಿಕ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ತಿದ್ದುಪಡಿಯು ಪ್ರಸ್ತುತ ಮೂರು ಪಾಳಿಗಳಲ್ಲಿರುವ ಪದ್ಧತಿಯ ಬದಲಿಗೆ ಎರಡು ಪದ್ಧತಿಯನ್ನು ಅನುಮತಿಸುವುದಾಗಿದೆ. ಇದರಿಂದ ಮೂರನೇ ಒಂದು ಭಾಗದಷ್ಟು ಕಾರ್ಮಿಕರನ್ನು ವಜಾಗೊಳಿಸುವ ಹುನ್ನಾರವಾಗಿದೆ ಎಂದು ತಿಳಿಸಿದೆ. ಐಟಿ ವಲಯದ ಶೇ.45 ರಷ್ಟು ಉದ್ಯೋಗಿಗಳು ಒತ್ತಡದಂತ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಶೇ.55 ರಷ್ಟು ಮಂದಿ ದೈಹಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಈಗ ಜಾರಿಗೆ ತರಲು ಹೊರಟಿರುವ ತಿದ್ದುಪಡಿ ಉದ್ಯೋಗಿಗಳನ್ನು ಮತ್ತಷ್ಟು ಆಘಾತಕ್ಕೆ ದೂಡುತ್ತದೆ ಎಂದೂ ಆತಂಕ ವ್ಯಕ್ತಪಡಿಸಿವೆ. ಏನಿದು ಕಾಯ್ದೆ?: ರಾಜ್ಯ ಸರಕಾರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಆ ಮೂಲಕ ಐಟಿ ಕ್ಷೇತ್ರದ ಉದ್ಯೋಗಿಗಳ ಕೆಲಸದ ಅವಧಿ ದಿನಕ್ಕೆ 12 ತಾಸಿಗೂ ಹೆಚ್ಚಿಗೆ ವಿಸ್ತರಣೆಯಾಗಲಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಳೆದ ಶುಕ್ರವಾರ ಈ ಸಂಬಂಧ ವಿಕಾಸಸೌಧದಲ್ಲಿ ಸಭೆ ನಡೆಸಿದ್ದರು. ಸಭೆಯಲ್ಲಿ ಐಟಿ ಬಿಟಿ ಕ್ಷೇತ್ರದಲ್ಲಿ ದುಡಿಯುವ ನೌಕರರ ಕೆಲಸದ ಅವಧಿ ವಿಸ್ತರಣೆ ಬಗ್ಗೆ ಸಭೆ ಚರ್ಚಿಸಿದ್ದಾರೆ. ಈ ಪ್ರಸ್ತಾಪಿತ ತಿದ್ದುಪಡಿಯಂತೆ ಐಟಿ, ಬಿಪಿಒ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ದಿನಕ್ಕೆ 12 ತಾಸಿಗೂ ಹೆಚ್ಚು ಅವಧಿ ಕೆಲಸ ಮಾಡಬೇಕಾಗುತ್ತದೆ. ಸತತ ಮೂರು ತಿಂಗಳಲ್ಲಿ 125 ತಾಸು ಮೀರದಂತೆ ಕೆಲಸ ಮಾಡುವ ತಿದ್ದುಪಡಿ ಇದಾಗಿದೆ. ಪ್ರಸಕ್ತ ಕಾಯ್ದೆಯಂತೆ ದಿನಕ್ಕೆ ಗರಿಷ್ಠ 10 ತಾಸು ಕೆಲಸ ಮಾಡಬಹುದಾಗಿದೆ. ಇದರಲ್ಲಿ ಒಟಿಯೂ ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/Varta_Bharati/url_26_102_22.txt b/Varta_Bharati/url_26_102_22.txt new file mode 100644 index 0000000000000000000000000000000000000000..c850c54a85d4c4c4bef1346be4085b6753c2e5d2 --- /dev/null +++ b/Varta_Bharati/url_26_102_22.txt @@ -0,0 +1 @@ +ಆರ್. ಅಶೋಕ್ ಬೆಂಗಳೂರು: ‘ಕಾಂಗ್ರೆಸ್ ಸರಕಾರಕ್ಕೆ ಕನ್ನಡವೆಂದರೆ ನಿಕೃಷ್ಟ, ಕನ್ನಡ ನಾಡಿನ ಕಲೆ ಸಂಸ್ಕೃತಿ ಅಂದರೆ ಕನಿಷ್ಠ. ಸಿಎಂ ಸಿದ್ದರಾಮಯ್ಯ ಸರಕಾರದಲ್ಲಿ ಸಿಕ್ಕಸಿಕ್ಕವರಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಟ್ಟು ಮೆರೆಸಲು ದುಡ್ಡಿದೆ, ಶಾಸಕರಿಗೆ, ಮಂತ್ರಿಗಳಿಗೆ ಕೋಟಿಗಟ್ಟಲೆ ಬೆಲೆಬಾಳುವ ಐಷಾರಾಮಿ ಕಾರು ಖರೀದಿ ಮಾಡಲು ದುಡ್ಡಿದೆ, ಕಲಾವಿದರಿಗೆ ಪಿಂಚಣಿ ನೀಡುವುದಕ್ಕೆ ಹಣವಿಲ್ಲ’ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.ರವಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, "ನಿಗಮ ಮಂಡಳಿಗಳಲ್ಲಿ, ಟೆಂಡರ್ ಕಿಕ್‍ಬ್ಯಾಕ್‍ಗಳಲ್ಲಿ ನೂರಾರು ಕೋಟಿ ರೂ.ಲೂಟಿ ಮಾಡಲು ದುಡ್ಡಿದೆ, ಆದರೆ ನಾಡಿನ ಹೆಮ್ಮೆಯ ಸಂಗೀತ ಸರಸ್ವತಿ ಪದ್ಮಭೂಷಣ ಡಾ.ಗಂಗೂಬಾಯಿ ಹಾನಗಲ್ ಜ್ಞಾಪಕಾರ್ಥವಾಗಿ ಹುಬ್ಬಳ್ಳಿಯಲ್ಲಿ ಸ್ಥಾಪಿಸಿರುವ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗುರುಕುಲಕ್ಕೆ ವಾರ್ಷಿಕ 1.25 ಕೋಟಿ ರೂ. ಅನುದಾನ ನೀಡಲು ಸರಕಾರದ ಬಳಿ ದುಡ್ಡಿಲ್ಲ" ಎಂದು ಟೀಕಿಸಿದ್ದಾರೆ. ಕಲಾವಿದರಿಗೆ ಪಿಂಚಣಿ ನೀಡುವುದಕ್ಕೆ ಹಣವಿಲ್ಲ, ಕಲಾತಂಡಗಳಿಗೆ ಧನ ಸಹಾಯಕ್ಕೆ ದುಡ್ಡಿಲ್ಲ. ರಾಜ್ಯ, ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನಕ್ಕೆ ದುಡ್ಡಿಲ್ಲ. ರಂಗಮಂದಿರ, ಬಯಲು ಮಂದಿರಗಳಿಗೆ ಹಣ ನೀಡುತ್ತಿಲ್ಲ, ಕನ್ನಡ-ಸಂಸ್ಕೃತಿ ಇಲಾಖೆಗೆ ನಿಗದಿ ಹಣ ನೀಡುತ್ತಿಲ್ಲ. ಕಲೆ ಮತ್ತು ಸಂಸ್ಕೃತಿಗೆ ಮೀಸಲು ಹಣವಿಲ್ಲ, ಕಲಾಸಂಘಗಳಿಗೂ ನೀಡುವುದಕ್ಕೂ ರೊಕ್ಕವಿಲ್ಲ. ಇದೇನಾ ನೀವು ನಮ್ಮ ನಾಡಿನ ಕಲೆ ಸಂಸ್ಕೃತಿಗೆ ಬೆಲೆ ನೀಡುವ ಪರಿ?’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ‘ಚುನಾವಣೆ ಬಂದರೆ ಸಾಕು ಭಾಷೆಯ ವಿಷಯದಲ್ಲಿ ರಾಜಕಾರಣ ಮಾಡುವ ಸಿದ್ದರಾಮಯ್ಯನವರು ಕನ್ನಡದ ಕೆಲಸಕ್ಕೆ ಕವಡೆ ಕಿಮ್ಮತ್ತು ಕೊಡುತ್ತಿಲ್ಲ. ನಾಡು, ನುಡಿ, ಸಂಸ್ಕೃತಿಯ ಬೆಳವಣಿಗೆಗೆ ನೀಡಬೇಕಿದ್ದ ಅನುದಾನಕ್ಕೆ ಕೊಕ್ಕೆ ಹಾಕುವ ಮೂಲಕ ಕಾಂಗ್ರೆಸ್ ಸರಕಾರ ಮಾತೃಭಾಷೆಗೆ, ನಾಡಿನ ಸಂಸ್ಕೃತಿಗೆ ದ್ರೋಹ ಬಗೆದಿದೆ ಎಂದು ಅವರು ದೂರಿದ್ದಾರೆ. ‘ಕನ್ನಡ ರಾಮಯ್ಯ’ನ ನಕಲಿ ಕನ್ನಡ ಪ್ರೀತಿ ನೋಡಿ ಕನ್ನಡಿಗರೇ, ಭ್ರಷ್ಟ ಸಿಎಂ ಸಿದ್ದರಾಮಯ್ಯನವರು ಮದರಸಾಗಳಲ್ಲಿ ಕನ್ನಡ ಕಲಿಸುವುದನ್ನು ಕೈಬಿಟ್ಟಿದ್ದಾರೆ. ಹಾಗಾದರೆ ಮುಸಲ್ಮಾನರು ಕನ್ನಡಿಗರಲ್ಲ ಎಂದೋ ನೀವು ಹೇಳುವುದು?, ಕನ್ನಡ ಕಲಿಸಿದರೆ ತಮ್ಮ ಭ್ರಷ್ಟಾಚಾರ, ಅನಾಚಾರಗಳು ಎಲ್ಲವೂ ಅವರಿಗೆ ಗೊತ್ತಾಗುತ್ತದೆ ಎನ್ನುವ ಭಯ ಕಾಂಗ್ರೆಸ್ ಸರಕಾರಕ್ಕೆ ಇರಬೇಕು. ಮದರಸಾಗಳಲ್ಲಿ ಕನ್ನಡ ಕಲಿಸುವುದಿಲ್ಲ, ಅವರಿಗೆ ಕನ್ನಡ ಬೇಕಾಗಿಲ್ಲ ಎಂದರೆ, ಕೊಟ್ಟಿರುವ ಅನುದಾನವನ್ನು ಹಿಂಪಡೆಯಿರಿ ಹಾಗೂ ಮುಂದೆ ಕೊಡುವ ಅನುದಾನವನ್ನು ನಿಲ್ಲಿಸಿ’ ಎಂದು ಅಶೋಕ್ ಸಲಹೆ ನೀಡಿದ್ದಾರೆ.ದಸಂಸ ಹೋರಾಟಕ್ಕೆ ಬಿಜೆಪಿ ಬೆಂಬಲ: ‘ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಹಣವನ್ನ ದುರ್ಬಳಕೆ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸುವ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ದಲಿತರು, ಹಿಂದುಳಿದವರು, ಬಡವರ ಪರ ದನಿ ಎತ್ತುವವರ ಜೊತೆಗೆ ದನಿಗೂಡಿಸಲು ನಮ್ಮ ಪಕ್ಷ ಸದಾ ಬದ್ಧವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಸರಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಲಿದೆ’ -ಆರ್.ಅಶೋಕ್, ಪ್ರತಿಪಕ್ಷ ನಾಯಕ ನಾಡದ್ರೋಹಿ @INCKarnataka ಸರ್ಕಾರಕ್ಕೆ ಕನ್ನಡವೆಂದರೆ ನಿಕೃಷ್ಟ, ಕನ್ನಡ ನಾಡಿನ ಕಲೆ ಸಂಸ್ಕೃತಿ ಅಂದರೆ ಕನಿಷ್ಠ.ಸಿಎಂ @siddaramaiah ಅವರ ಸರ್ಕಾರದಲ್ಲಿ ಸಿಕ್ಕಸಿಕ್ಕವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಕೊಟ್ಟು ಮೆರೆಸಲು ದುಡ್ಡಿದೆ, ಶಾಸಕರಿಗೆ, ಮಂತ್ರಿಗಳಿಗೆ ಕೋಟಿಗಟ್ಟಲೆ ಬೆಲೆಬಾಳುವ ಐಷಾರಾಮಿ ಕಾರು ಖರೀದಿ ಮಾಡಲು ದುಡ್ಡಿದೆ, ನಿಗಮ… pic.twitter.com/3Nm3vEWqNW \ No newline at end of file diff --git a/Varta_Bharati/url_26_102_23.txt b/Varta_Bharati/url_26_102_23.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_102_24.txt b/Varta_Bharati/url_26_102_24.txt new file mode 100644 index 0000000000000000000000000000000000000000..c850c54a85d4c4c4bef1346be4085b6753c2e5d2 --- /dev/null +++ b/Varta_Bharati/url_26_102_24.txt @@ -0,0 +1 @@ +ಆರ್. ಅಶೋಕ್ ಬೆಂಗಳೂರು: ‘ಕಾಂಗ್ರೆಸ್ ಸರಕಾರಕ್ಕೆ ಕನ್ನಡವೆಂದರೆ ನಿಕೃಷ್ಟ, ಕನ್ನಡ ನಾಡಿನ ಕಲೆ ಸಂಸ್ಕೃತಿ ಅಂದರೆ ಕನಿಷ್ಠ. ಸಿಎಂ ಸಿದ್ದರಾಮಯ್ಯ ಸರಕಾರದಲ್ಲಿ ಸಿಕ್ಕಸಿಕ್ಕವರಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಟ್ಟು ಮೆರೆಸಲು ದುಡ್ಡಿದೆ, ಶಾಸಕರಿಗೆ, ಮಂತ್ರಿಗಳಿಗೆ ಕೋಟಿಗಟ್ಟಲೆ ಬೆಲೆಬಾಳುವ ಐಷಾರಾಮಿ ಕಾರು ಖರೀದಿ ಮಾಡಲು ದುಡ್ಡಿದೆ, ಕಲಾವಿದರಿಗೆ ಪಿಂಚಣಿ ನೀಡುವುದಕ್ಕೆ ಹಣವಿಲ್ಲ’ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.ರವಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, "ನಿಗಮ ಮಂಡಳಿಗಳಲ್ಲಿ, ಟೆಂಡರ್ ಕಿಕ್‍ಬ್ಯಾಕ್‍ಗಳಲ್ಲಿ ನೂರಾರು ಕೋಟಿ ರೂ.ಲೂಟಿ ಮಾಡಲು ದುಡ್ಡಿದೆ, ಆದರೆ ನಾಡಿನ ಹೆಮ್ಮೆಯ ಸಂಗೀತ ಸರಸ್ವತಿ ಪದ್ಮಭೂಷಣ ಡಾ.ಗಂಗೂಬಾಯಿ ಹಾನಗಲ್ ಜ್ಞಾಪಕಾರ್ಥವಾಗಿ ಹುಬ್ಬಳ್ಳಿಯಲ್ಲಿ ಸ್ಥಾಪಿಸಿರುವ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗುರುಕುಲಕ್ಕೆ ವಾರ್ಷಿಕ 1.25 ಕೋಟಿ ರೂ. ಅನುದಾನ ನೀಡಲು ಸರಕಾರದ ಬಳಿ ದುಡ್ಡಿಲ್ಲ" ಎಂದು ಟೀಕಿಸಿದ್ದಾರೆ. ಕಲಾವಿದರಿಗೆ ಪಿಂಚಣಿ ನೀಡುವುದಕ್ಕೆ ಹಣವಿಲ್ಲ, ಕಲಾತಂಡಗಳಿಗೆ ಧನ ಸಹಾಯಕ್ಕೆ ದುಡ್ಡಿಲ್ಲ. ರಾಜ್ಯ, ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನಕ್ಕೆ ದುಡ್ಡಿಲ್ಲ. ರಂಗಮಂದಿರ, ಬಯಲು ಮಂದಿರಗಳಿಗೆ ಹಣ ನೀಡುತ್ತಿಲ್ಲ, ಕನ್ನಡ-ಸಂಸ್ಕೃತಿ ಇಲಾಖೆಗೆ ನಿಗದಿ ಹಣ ನೀಡುತ್ತಿಲ್ಲ. ಕಲೆ ಮತ್ತು ಸಂಸ್ಕೃತಿಗೆ ಮೀಸಲು ಹಣವಿಲ್ಲ, ಕಲಾಸಂಘಗಳಿಗೂ ನೀಡುವುದಕ್ಕೂ ರೊಕ್ಕವಿಲ್ಲ. ಇದೇನಾ ನೀವು ನಮ್ಮ ನಾಡಿನ ಕಲೆ ಸಂಸ್ಕೃತಿಗೆ ಬೆಲೆ ನೀಡುವ ಪರಿ?’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ‘ಚುನಾವಣೆ ಬಂದರೆ ಸಾಕು ಭಾಷೆಯ ವಿಷಯದಲ್ಲಿ ರಾಜಕಾರಣ ಮಾಡುವ ಸಿದ್ದರಾಮಯ್ಯನವರು ಕನ್ನಡದ ಕೆಲಸಕ್ಕೆ ಕವಡೆ ಕಿಮ್ಮತ್ತು ಕೊಡುತ್ತಿಲ್ಲ. ನಾಡು, ನುಡಿ, ಸಂಸ್ಕೃತಿಯ ಬೆಳವಣಿಗೆಗೆ ನೀಡಬೇಕಿದ್ದ ಅನುದಾನಕ್ಕೆ ಕೊಕ್ಕೆ ಹಾಕುವ ಮೂಲಕ ಕಾಂಗ್ರೆಸ್ ಸರಕಾರ ಮಾತೃಭಾಷೆಗೆ, ನಾಡಿನ ಸಂಸ್ಕೃತಿಗೆ ದ್ರೋಹ ಬಗೆದಿದೆ ಎಂದು ಅವರು ದೂರಿದ್ದಾರೆ. ‘ಕನ್ನಡ ರಾಮಯ್ಯ’ನ ನಕಲಿ ಕನ್ನಡ ಪ್ರೀತಿ ನೋಡಿ ಕನ್ನಡಿಗರೇ, ಭ್ರಷ್ಟ ಸಿಎಂ ಸಿದ್ದರಾಮಯ್ಯನವರು ಮದರಸಾಗಳಲ್ಲಿ ಕನ್ನಡ ಕಲಿಸುವುದನ್ನು ಕೈಬಿಟ್ಟಿದ್ದಾರೆ. ಹಾಗಾದರೆ ಮುಸಲ್ಮಾನರು ಕನ್ನಡಿಗರಲ್ಲ ಎಂದೋ ನೀವು ಹೇಳುವುದು?, ಕನ್ನಡ ಕಲಿಸಿದರೆ ತಮ್ಮ ಭ್ರಷ್ಟಾಚಾರ, ಅನಾಚಾರಗಳು ಎಲ್ಲವೂ ಅವರಿಗೆ ಗೊತ್ತಾಗುತ್ತದೆ ಎನ್ನುವ ಭಯ ಕಾಂಗ್ರೆಸ್ ಸರಕಾರಕ್ಕೆ ಇರಬೇಕು. ಮದರಸಾಗಳಲ್ಲಿ ಕನ್ನಡ ಕಲಿಸುವುದಿಲ್ಲ, ಅವರಿಗೆ ಕನ್ನಡ ಬೇಕಾಗಿಲ್ಲ ಎಂದರೆ, ಕೊಟ್ಟಿರುವ ಅನುದಾನವನ್ನು ಹಿಂಪಡೆಯಿರಿ ಹಾಗೂ ಮುಂದೆ ಕೊಡುವ ಅನುದಾನವನ್ನು ನಿಲ್ಲಿಸಿ’ ಎಂದು ಅಶೋಕ್ ಸಲಹೆ ನೀಡಿದ್ದಾರೆ.ದಸಂಸ ಹೋರಾಟಕ್ಕೆ ಬಿಜೆಪಿ ಬೆಂಬಲ: ‘ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಹಣವನ್ನ ದುರ್ಬಳಕೆ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸುವ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ದಲಿತರು, ಹಿಂದುಳಿದವರು, ಬಡವರ ಪರ ದನಿ ಎತ್ತುವವರ ಜೊತೆಗೆ ದನಿಗೂಡಿಸಲು ನಮ್ಮ ಪಕ್ಷ ಸದಾ ಬದ್ಧವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಸರಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಲಿದೆ’ -ಆರ್.ಅಶೋಕ್, ಪ್ರತಿಪಕ್ಷ ನಾಯಕ ನಾಡದ್ರೋಹಿ @INCKarnataka ಸರ್ಕಾರಕ್ಕೆ ಕನ್ನಡವೆಂದರೆ ನಿಕೃಷ್ಟ, ಕನ್ನಡ ನಾಡಿನ ಕಲೆ ಸಂಸ್ಕೃತಿ ಅಂದರೆ ಕನಿಷ್ಠ.ಸಿಎಂ @siddaramaiah ಅವರ ಸರ್ಕಾರದಲ್ಲಿ ಸಿಕ್ಕಸಿಕ್ಕವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಕೊಟ್ಟು ಮೆರೆಸಲು ದುಡ್ಡಿದೆ, ಶಾಸಕರಿಗೆ, ಮಂತ್ರಿಗಳಿಗೆ ಕೋಟಿಗಟ್ಟಲೆ ಬೆಲೆಬಾಳುವ ಐಷಾರಾಮಿ ಕಾರು ಖರೀದಿ ಮಾಡಲು ದುಡ್ಡಿದೆ, ನಿಗಮ… pic.twitter.com/3Nm3vEWqNW \ No newline at end of file diff --git a/Varta_Bharati/url_26_102_25.txt b/Varta_Bharati/url_26_102_25.txt new file mode 100644 index 0000000000000000000000000000000000000000..328a32ce5876b562e152ac003ef3bea1ca041ba4 --- /dev/null +++ b/Varta_Bharati/url_26_102_25.txt @@ -0,0 +1 @@ +ಸಚಿವ ಡಾ.ಎಚ್.ಸಿ.ಮಹದೇವಪ್ಪಬೆಂಗಳೂರು: ‘ಪ್ರಬುದ್ಧ ಯೋಜನೆ’ಯಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಪಿಎಚ್‍ಡಿ ಅಧ್ಯಯನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಉಂಟಾಗಿದ್ದು ಸರಕಾರವು ಹಿಂದಿನ ರೀತಿಯಲ್ಲೇ ಈ ಯೋಜನೆಯನ್ನು ಮುಂದುವರೆಸಲಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.ರವಿವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು ಸಾಧ್ಯ ಎಂಬ ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮ ಜವಾಬ್ದಾರಿಯೇ ಆಗಿದೆ’ ಎಂದು ತಿಳಿಸಿದ್ದಾರೆ. ‘ಈ ಹಿನ್ನಲೆಯಲ್ಲಿ ಈ ಹಿಂದಿನಂತೆಯೇ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳಲ್ಲಿ ಪಿಎಚ್‍ಡಿ ವ್ಯಾಸಂಗಕ್ಕೆ ಆಯ್ಕೆಯಾಗುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರಬುದ್ಧ ಯೋಜನೆಯ ಅನುಕೂಲ ಸಿಗಲಿದೆ. ಈ ಯೋಜನೆಯನ್ನು ಮುಂದುವರೆಸುವ ಕುರಿತು ನಮ್ಮ ಇಲಾಖೆಯ ಅಧಿಕಾರಿಗಳಿಗೆ ನಾನು ಸೂಚನೆ ನೀಡಿದ್ದು, ಸಮುದಾಯದ ಬಂಧುಗಳು ಈ ವಿಷಯದಲ್ಲಿ ಗೊಂದಲಗಳಿಗೆ ಎಡೆ ಮಾಡಿಕೊಡಬಾರದೆಂದು ಮಹದೇವಪ್ಪ ಮನವಿ ಮಾಡಿದ್ದಾರೆ.ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಪಿಹೆಚ್ ಡಿ ಅಧ್ಯಯನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಉಂಟಾಗಿದ್ದು ಸರ್ಕಾರವು ಈ ಹಿಂದಿನ ರೀತಿಯಲ್ಲೇ ಈ ಯೋಜನೆಯನ್ನು ಮುಂದುವರೆಸಲಿದೆ.ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು… pic.twitter.com/IQXFpkGw90 \ No newline at end of file diff --git a/Varta_Bharati/url_26_102_26.txt b/Varta_Bharati/url_26_102_26.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_102_27.txt b/Varta_Bharati/url_26_102_27.txt new file mode 100644 index 0000000000000000000000000000000000000000..328a32ce5876b562e152ac003ef3bea1ca041ba4 --- /dev/null +++ b/Varta_Bharati/url_26_102_27.txt @@ -0,0 +1 @@ +ಸಚಿವ ಡಾ.ಎಚ್.ಸಿ.ಮಹದೇವಪ್ಪಬೆಂಗಳೂರು: ‘ಪ್ರಬುದ್ಧ ಯೋಜನೆ’ಯಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಪಿಎಚ್‍ಡಿ ಅಧ್ಯಯನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಉಂಟಾಗಿದ್ದು ಸರಕಾರವು ಹಿಂದಿನ ರೀತಿಯಲ್ಲೇ ಈ ಯೋಜನೆಯನ್ನು ಮುಂದುವರೆಸಲಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.ರವಿವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು ಸಾಧ್ಯ ಎಂಬ ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮ ಜವಾಬ್ದಾರಿಯೇ ಆಗಿದೆ’ ಎಂದು ತಿಳಿಸಿದ್ದಾರೆ. ‘ಈ ಹಿನ್ನಲೆಯಲ್ಲಿ ಈ ಹಿಂದಿನಂತೆಯೇ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳಲ್ಲಿ ಪಿಎಚ್‍ಡಿ ವ್ಯಾಸಂಗಕ್ಕೆ ಆಯ್ಕೆಯಾಗುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರಬುದ್ಧ ಯೋಜನೆಯ ಅನುಕೂಲ ಸಿಗಲಿದೆ. ಈ ಯೋಜನೆಯನ್ನು ಮುಂದುವರೆಸುವ ಕುರಿತು ನಮ್ಮ ಇಲಾಖೆಯ ಅಧಿಕಾರಿಗಳಿಗೆ ನಾನು ಸೂಚನೆ ನೀಡಿದ್ದು, ಸಮುದಾಯದ ಬಂಧುಗಳು ಈ ವಿಷಯದಲ್ಲಿ ಗೊಂದಲಗಳಿಗೆ ಎಡೆ ಮಾಡಿಕೊಡಬಾರದೆಂದು ಮಹದೇವಪ್ಪ ಮನವಿ ಮಾಡಿದ್ದಾರೆ.ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಪಿಹೆಚ್ ಡಿ ಅಧ್ಯಯನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಉಂಟಾಗಿದ್ದು ಸರ್ಕಾರವು ಈ ಹಿಂದಿನ ರೀತಿಯಲ್ಲೇ ಈ ಯೋಜನೆಯನ್ನು ಮುಂದುವರೆಸಲಿದೆ.ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು… pic.twitter.com/IQXFpkGw90 \ No newline at end of file diff --git a/Varta_Bharati/url_26_102_28.txt b/Varta_Bharati/url_26_102_28.txt new file mode 100644 index 0000000000000000000000000000000000000000..8d6f29b665106a06bea3a431d8e4f4a926e2e1d1 --- /dev/null +++ b/Varta_Bharati/url_26_102_28.txt @@ -0,0 +1 @@ +ಅಂಕೋಲ: ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು.ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ?ಒಂದೇ ಸಮನೆ ಸುರಿಯುತ್ತಿದ್ದ ಭೀಕರ ಮಳೆ ನಡುವೆ ಕಾರ್ಯ ನಿರ್ವಹಿಸುತ್ತಿದ್ದ ಪತ್ರಕರ್ತರು ಮತ್ತು ಕ್ಯಾಮರಾಮನ್ ಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಪತ್ರಕರ್ತರಿಗೆಲ್ಲಾ ರೇನ್ ಕೋಟ್ ಮತ್ತು ರಬ್ಬರ್ ಶೂ ಕೊಟ್ಟಿದ್ದೀರಾ" ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.ಮುಖ್ಯಮಂತ್ರಿಗಳಿಂದ ಈ ಪ್ರಶ್ನೆ ನಿರೀಕ್ಷಿಸಿರದ ಅಧಿಕಾರಿಗಳು ತಬ್ಬಿಬ್ಬಾದರು. \ No newline at end of file diff --git a/Varta_Bharati/url_26_102_29.txt b/Varta_Bharati/url_26_102_29.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_102_3.txt b/Varta_Bharati/url_26_102_3.txt new file mode 100644 index 0000000000000000000000000000000000000000..72225e203b4a21f03a0d69025850136dc289bf4a --- /dev/null +++ b/Varta_Bharati/url_26_102_3.txt @@ -0,0 +1 @@ +ಮಂಡ್ಯ/ ಬೆಂಗಳೂರು : “ಬಿಳಿಗುಂಡ್ಲುವಿನಲ್ಲಿ ದಾಖಲಾದಂತೆ ಇದುವರೆಗೂ ತಮಿಳುನಾಡಿಗೆ 30 ಟಿಎಂಸಿ ನೀರನ್ನು ಹರಿಸಲಾಗಿದೆ. 10 ಟಿಎಂಸಿ ನೀರನ್ನು ಹರಿಸಿದರೆ ಸಾಮಾನ್ಯ ವರ್ಷದಲ್ಲಿ 40 ಟಿಎಂಸಿ ನೀರು ಹರಿಸಿದಂತಾಗುತ್ತದೆ. ನಿತ್ಯ 51 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ಜಲಾನಯನ ಪ್ರದೇಶದಿಂದ ಹರಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಕೆಆರ್‌ಎಸ್ ಅಣೆಕಟ್ಟು ವೀಕ್ಷಣೆ ನಂತರ ಮಾತನಾಡಿದ ಅವರು, “ಕಾವೇರಿ ಜಲಾನಯನ ಪ್ರದೇಶಗಳಲ್ಲಿ 1,657 ಕೆರೆಗಳಿವೆ. ಮುಂಜಾಗ್ರತ ಕ್ರಮವಾಗಿ ಎಲ್ಲಾ ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ಸಚಿವರ ನೇತೃತ್ವದಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. 5.90 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ, 27 ಲಕ್ಷ ಟನ್ ರಸಗೊಬ್ಬರ ಸಂಗ್ರಹ, 30 ಲಕ್ಷ ರೈತರಿಗೆ ಸಹಕಾರಿ ಸಂಘಗಳಿಂದ ತಲಾ 25 ಸಾವಿರ ಕೋಟಿ ರೂ. ಸಾಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.“ನಮ್ಮ ಸರಕಾರ ರೈತರ ಬದುಕಿಗೆ ಪೂರಕವಾಗಿದೆ. ರೈತರ ಹಿತ ಕಾಯಲು ಬದ್ದತೆ ಹೊಂದಿದ್ದೇವೆ. ನಮ್ಮದು ಬೂಟಾಟಿಕೆಯ ಮಾತಲ್ಲ. ಪ್ರಚಾರಕ್ಕೆ ಮಾಡುವುದಲ್ಲ, ನಮ್ಮ ವಿಚಾರ, ಆಚಾರ ಎಲ್ಲವೂ ರೈತರ ಪರ. ಕಾವೇರಿ ನೀರು ನಿರ್ವಹಣಾ ಸಮಿತಿಯು ಜುಲೈ 11 ರಿಂದ 30 ರ ತನಕ 20 ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶ ನೀಡಿತ್ತು. ಆದರೆ ನಾವು ನೀರನ್ನು ಹರಿಸಲಿಲ್ಲ. ನಮ್ಮ ಸರಕಾರ ಜವಾಬ್ದಾರಿಯಿಂದ ನಡೆದುಕೊಂಡು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಿತ್ತು” ಎಂದರು.ಕಾವೇರಿ ಆರತಿ ಆರಂಭಿಸಲು ಚಿಂತನೆ :“ವಾರಣಾಸಿಯಲ್ಲಿ ಗಂಗಾ ಆರತಿ ನಡೆಸಿದಂತೆ, ಕಾವೇರಿ ಆರತಿ ಕಾರ್ಯಕ್ರಮ ಪ್ರಾರಂಭಿಸುವ ಆಲೋಚನೆ ಇದೆ. ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗು ಅಧಿಕಾರಿಗಳು ಸೇರಿದ 20 ಜನರ ಸಮಿತಿಯನ್ನು ರಚನೆ ಮಾಡಿ, ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಹೇಗೆ ನಡೆಯುತ್ತದೆ ಎನ್ನುವ ಬಗ್ಗೆ ಅಧ್ಯಯನ ನಡೆಸಲಾಗುವುದು. ಅಲ್ಲಿಂದ ಒಂದು ತಂಡವನ್ನು ಕರೆದುಕೊಂಡು ಬಂದು ಯಾವ ಜಾಗದಲ್ಲಿ ಕಾವೇರಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು. ಒಂದು ತಿಂಗಳ ಒಳಗಾಗಿ ಈ ಕಾರ್ಯಕ್ರಮ ಮಾಡಲಾಗುವುದು. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರೇ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸುತ್ತವೆ” ಎಂದು ಹೇಳಿದರು. \ No newline at end of file diff --git a/Varta_Bharati/url_26_102_30.txt b/Varta_Bharati/url_26_102_30.txt new file mode 100644 index 0000000000000000000000000000000000000000..8d6f29b665106a06bea3a431d8e4f4a926e2e1d1 --- /dev/null +++ b/Varta_Bharati/url_26_102_30.txt @@ -0,0 +1 @@ +ಅಂಕೋಲ: ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು.ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ?ಒಂದೇ ಸಮನೆ ಸುರಿಯುತ್ತಿದ್ದ ಭೀಕರ ಮಳೆ ನಡುವೆ ಕಾರ್ಯ ನಿರ್ವಹಿಸುತ್ತಿದ್ದ ಪತ್ರಕರ್ತರು ಮತ್ತು ಕ್ಯಾಮರಾಮನ್ ಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಪತ್ರಕರ್ತರಿಗೆಲ್ಲಾ ರೇನ್ ಕೋಟ್ ಮತ್ತು ರಬ್ಬರ್ ಶೂ ಕೊಟ್ಟಿದ್ದೀರಾ" ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.ಮುಖ್ಯಮಂತ್ರಿಗಳಿಂದ ಈ ಪ್ರಶ್ನೆ ನಿರೀಕ್ಷಿಸಿರದ ಅಧಿಕಾರಿಗಳು ತಬ್ಬಿಬ್ಬಾದರು. \ No newline at end of file diff --git a/Varta_Bharati/url_26_102_31.txt b/Varta_Bharati/url_26_102_31.txt new file mode 100644 index 0000000000000000000000000000000000000000..126cdc0c5e62bd6f08daa470867b1e5cae16de69 --- /dev/null +++ b/Varta_Bharati/url_26_102_31.txt @@ -0,0 +1 @@ +ಬೆಂಗಳೂರು: ಅಂತರ್ಜಾಲದ ಮೂಲಕ ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b) ಅಡಿ ಅಪರಾಧವಾಗುವುದಿಲ್ಲ ಎಂಬುದಾಗಿ ಜುಲೈ 10ರಂದು ನೀಡಿದ್ದ ಆದೇಶವನ್ನು ಹೈಕೋರ್ಟ್ ಹಿಂಪಡೆದಿದೆ.ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡಿದ ಆರೋಪದಲ್ಲಿ ದಾಖಲಾದ ಪ್ರಕರಣ ರದ್ದು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ಕುರಿತ ಆದೇಶವನ್ನು ಹಿಂಪಡೆಯಲು ಕೋರಿ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಜುಲೈ 10ರಂದು ಪ್ರಕಟಿಸಿರುವ ಆದೇಶ ದೋಷಪೂರಿತವಾಗಿದೆ ಎಂದು ತಿಳಿಸಿದೆ.ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b)ಯಲ್ಲಿ ತಿಳಿಸಿರುವಂತೆ, ಯಾವುದೇ ವ್ಯಕ್ತಿಯು ಮಕ್ಕಳ ಆಶ್ಲೀಲ ಚಿತ್ರಗಳನ್ನು ಸಿದ್ಧಪಡಿಸುವುದು ಮತ್ತು ಅದನ್ನು ವಿದ್ಯುನ್ಮಾನ ಉಪಕರಣಗಳ ಮೂಲಕ ಹಂಚಿಕೊಳ್ಳುವುದಕ್ಕೆ ಶಿಕ್ಷೆ ವಿಧಿಸಲು ಅವಕಾಶವಿದೆ. ಅರ್ಜಿದಾರರು ಮಕ್ಕಳ ಆಶ್ಲೀಲ ಚಿತ್ರಗಳನ್ನು ಸಿದ್ಧಪಡಿಸಿಲ್ಲ. ಜೊತೆಗೆ, ಅದನ್ನು ಯಾರೊಂದಿಗೂ ಹಂಚಿಕೊಂಡಿಲ್ಲ, ಕೇವಲ ವೀಕ್ಷಿಸಿದ್ದಾರೆ. ಹೀಗಾಗಿ, ಸೆಕ್ಷನ್ 67B(b) ಅಡಿ ಅಪರಾಧವಾಗುವುದಿಲ್ಲ ಎಂದು ನ್ಯಾಯಪೀಠ ಈ ಹಿಂದೆ ತಿಳಿಸಿತ್ತು.ಆದರೆ, ಅರ್ಜಿದಾರರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b) ಅಡಿ ಪ್ರಕರಣ ದಾಖಲಾಗಿದ್ದು, ಈ ಸೆಕ್ಷನ್ ಮಕ್ಕಳ ಆಶ್ಲೀಲ ಚಿತ್ರಗಳನ್ನು ಅಂತರ್ಜಾಲದಲ್ಲಿ ಹುಡುಕುವುದು, ವೀಕ್ಷಿಸುವುದು, ಡೌನ್‌ಲೋಡ್ ಮಾಡುವುದು ಹಾಗೂ ಪ್ರಚಾರ ಮಾಡುವುದೂ ಸೇರಿದೆ. ಆದ್ದರಿಂದ ಸೆಕ್ಷನ್ 67B(b) ಪ್ರಕಾರ ಅರ್ಜಿದಾರರ ವಿರುದ್ಧ ಪ್ರಕರಣ ರದ್ದುಪಡಿಸಲು ಅವಕಾಶವಿಲ್ಲ. ಹೀಗಾಗಿ, ಆದೇಶ ಹಿಂಪಡೆಯುತ್ತಿರುವುದಾಗಿ ಪೀಠ ಹೇಳಿದೆ.ನ್ಯಾಯಾಧೀಶರೂ ಮನುಷ್ಯರೇ: ನ್ಯಾಯಾಧೀಶರೂ ಮನುಷ್ಯರೇ ಆಗಿದ್ದಾರೆ. ನಾವೂ ತಪ್ಪುಗಳಿಂದ ಹೊರತಲ್ಲ. ನಾವು ಮಾಡಿರುವ ತಪ್ಪು ಅರಿವಿಗೆ ಬಂದಿದ್ದು, ಅದನ್ನು ಮುಂದುವರೆಸುವುದು ಸಾಧುವಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.ಅರ್ಜಿದಾರ ವ್ಯಕ್ತಿ 2023ರ ಮಾರ್ಚ್ 23ರಂದು ಮಧ್ಯಾಹ್ನ 3.30ರಿಂದ 4.40 ಗಂಟೆ ಅವಧಿಯಲ್ಲಿ ತನ್ನ ಮೊಬೈಲ್ ಮೂಲಕ ಮಕ್ಕಳ ಆಶ್ಲೀಲ ಚಿತ್ರಗಳನ್ನು ವೀಕ್ಷಣೆ ಮಾಡಿದ್ದರು. ಈ ಸಂಬಂಧ ಕೇಂದ್ರ ಸರ್ಕಾರ ಜಾರಿ ಮಾಡಿರುವ ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪ್ರಾರಂಭಿಸಿರುವ ಪೋರ್ಟಲ್ ಮೂಲಕ ಮಾಹಿತಿ ಪಡೆದಿದ್ದ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ನೀಡಿದ ಮಾಹಿತಿಯಂತೆ ಬೆಂಗಳೂರು ನಗರ ಸಿಐಡಿ ಘಟಕ ಬೆಂಗಳೂರು ಸೈಬರ್ ಕ್ರೈಂ ಠಾಣೆಗೆ ವರದಿಯೊಂದನ್ನು ರವಾನಿಸಿತ್ತು.ಈ ವರದಿಯನ್ನು ಪರಿಶೀಲಿಸಿ ಮಕ್ಕಳ ಆಶ್ಲೀಲ ವಿಡಿಯೋ ಪರಿಶೀಲಿಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲಾಗಿದ್ದು, ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b) ಅಡಿ ಘಟನೆ ನಡೆದ ಎರಡು ತಿಂಗಳ ಬಳಿಕ, ಅಂದರೆ 2023ರ ಮೇ 3ರಂದು ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರು ರದ್ದುಪಡಿಸಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, 'ಅರ್ಜಿದಾರರು ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆಯ ವ್ಯಸನಿಯಾಗಿದ್ದಾರೆ. ಆದರೆ, ಯಾವುದೇ ವಿಡಿಯೋವನ್ನು ಸಿದ್ಧಪಡಿಸಿಲ್ಲ ಮತ್ತು ಯಾರೊಂದಿಗೂ ಹಂಚಿಕೆ ಮಾಡಿಲ್ಲ. ಹೀಗಾಗಿ, ಪ್ರಕರಣ ರದ್ದು ಮಾಡಬೇಕು' ಎಂದು ಕೋರಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಾಸಿಕ್ಯೂಷನ್, ಮಕ್ಕಳ ಆಶ್ಲೀಲ ವಿಡಿಯೋಗಳನ್ನು ನೋಡಿರುವುದಾಗಿ ಅರ್ಜಿದಾರರೇ ಒಪ್ಪಿಕೊಂಡಿದ್ದಾರೆ. ಇದು ಮಾಹಿತಿ ಹಕ್ಕು ಕಾಯಿದೆ ಉಲ್ಲಂಘನೆಯಾಗಿದೆ. ಆದ್ದರಿಂದ ವಿಚಾರಣೆ ಮುಂದುವರೆಯಬೇಕಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದೆ. \ No newline at end of file diff --git a/Varta_Bharati/url_26_102_32.txt b/Varta_Bharati/url_26_102_32.txt new file mode 100644 index 0000000000000000000000000000000000000000..e69de29bb2d1d6434b8b29ae775ad8c2e48c5391 diff --git a/Varta_Bharati/url_26_102_33.txt b/Varta_Bharati/url_26_102_33.txt new file mode 100644 index 0000000000000000000000000000000000000000..126cdc0c5e62bd6f08daa470867b1e5cae16de69 --- /dev/null +++ b/Varta_Bharati/url_26_102_33.txt @@ -0,0 +1 @@ +ಬೆಂಗಳೂರು: ಅಂತರ್ಜಾಲದ ಮೂಲಕ ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b) ಅಡಿ ಅಪರಾಧವಾಗುವುದಿಲ್ಲ ಎಂಬುದಾಗಿ ಜುಲೈ 10ರಂದು ನೀಡಿದ್ದ ಆದೇಶವನ್ನು ಹೈಕೋರ್ಟ್ ಹಿಂಪಡೆದಿದೆ.ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡಿದ ಆರೋಪದಲ್ಲಿ ದಾಖಲಾದ ಪ್ರಕರಣ ರದ್ದು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ಕುರಿತ ಆದೇಶವನ್ನು ಹಿಂಪಡೆಯಲು ಕೋರಿ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಜುಲೈ 10ರಂದು ಪ್ರಕಟಿಸಿರುವ ಆದೇಶ ದೋಷಪೂರಿತವಾಗಿದೆ ಎಂದು ತಿಳಿಸಿದೆ.ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b)ಯಲ್ಲಿ ತಿಳಿಸಿರುವಂತೆ, ಯಾವುದೇ ವ್ಯಕ್ತಿಯು ಮಕ್ಕಳ ಆಶ್ಲೀಲ ಚಿತ್ರಗಳನ್ನು ಸಿದ್ಧಪಡಿಸುವುದು ಮತ್ತು ಅದನ್ನು ವಿದ್ಯುನ್ಮಾನ ಉಪಕರಣಗಳ ಮೂಲಕ ಹಂಚಿಕೊಳ್ಳುವುದಕ್ಕೆ ಶಿಕ್ಷೆ ವಿಧಿಸಲು ಅವಕಾಶವಿದೆ. ಅರ್ಜಿದಾರರು ಮಕ್ಕಳ ಆಶ್ಲೀಲ ಚಿತ್ರಗಳನ್ನು ಸಿದ್ಧಪಡಿಸಿಲ್ಲ. ಜೊತೆಗೆ, ಅದನ್ನು ಯಾರೊಂದಿಗೂ ಹಂಚಿಕೊಂಡಿಲ್ಲ, ಕೇವಲ ವೀಕ್ಷಿಸಿದ್ದಾರೆ. ಹೀಗಾಗಿ, ಸೆಕ್ಷನ್ 67B(b) ಅಡಿ ಅಪರಾಧವಾಗುವುದಿಲ್ಲ ಎಂದು ನ್ಯಾಯಪೀಠ ಈ ಹಿಂದೆ ತಿಳಿಸಿತ್ತು.ಆದರೆ, ಅರ್ಜಿದಾರರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b) ಅಡಿ ಪ್ರಕರಣ ದಾಖಲಾಗಿದ್ದು, ಈ ಸೆಕ್ಷನ್ ಮಕ್ಕಳ ಆಶ್ಲೀಲ ಚಿತ್ರಗಳನ್ನು ಅಂತರ್ಜಾಲದಲ್ಲಿ ಹುಡುಕುವುದು, ವೀಕ್ಷಿಸುವುದು, ಡೌನ್‌ಲೋಡ್ ಮಾಡುವುದು ಹಾಗೂ ಪ್ರಚಾರ ಮಾಡುವುದೂ ಸೇರಿದೆ. ಆದ್ದರಿಂದ ಸೆಕ್ಷನ್ 67B(b) ಪ್ರಕಾರ ಅರ್ಜಿದಾರರ ವಿರುದ್ಧ ಪ್ರಕರಣ ರದ್ದುಪಡಿಸಲು ಅವಕಾಶವಿಲ್ಲ. ಹೀಗಾಗಿ, ಆದೇಶ ಹಿಂಪಡೆಯುತ್ತಿರುವುದಾಗಿ ಪೀಠ ಹೇಳಿದೆ.ನ್ಯಾಯಾಧೀಶರೂ ಮನುಷ್ಯರೇ: ನ್ಯಾಯಾಧೀಶರೂ ಮನುಷ್ಯರೇ ಆಗಿದ್ದಾರೆ. ನಾವೂ ತಪ್ಪುಗಳಿಂದ ಹೊರತಲ್ಲ. ನಾವು ಮಾಡಿರುವ ತಪ್ಪು ಅರಿವಿಗೆ ಬಂದಿದ್ದು, ಅದನ್ನು ಮುಂದುವರೆಸುವುದು ಸಾಧುವಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.ಅರ್ಜಿದಾರ ವ್ಯಕ್ತಿ 2023ರ ಮಾರ್ಚ್ 23ರಂದು ಮಧ್ಯಾಹ್ನ 3.30ರಿಂದ 4.40 ಗಂಟೆ ಅವಧಿಯಲ್ಲಿ ತನ್ನ ಮೊಬೈಲ್ ಮೂಲಕ ಮಕ್ಕಳ ಆಶ್ಲೀಲ ಚಿತ್ರಗಳನ್ನು ವೀಕ್ಷಣೆ ಮಾಡಿದ್ದರು. ಈ ಸಂಬಂಧ ಕೇಂದ್ರ ಸರ್ಕಾರ ಜಾರಿ ಮಾಡಿರುವ ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪ್ರಾರಂಭಿಸಿರುವ ಪೋರ್ಟಲ್ ಮೂಲಕ ಮಾಹಿತಿ ಪಡೆದಿದ್ದ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ನೀಡಿದ ಮಾಹಿತಿಯಂತೆ ಬೆಂಗಳೂರು ನಗರ ಸಿಐಡಿ ಘಟಕ ಬೆಂಗಳೂರು ಸೈಬರ್ ಕ್ರೈಂ ಠಾಣೆಗೆ ವರದಿಯೊಂದನ್ನು ರವಾನಿಸಿತ್ತು.ಈ ವರದಿಯನ್ನು ಪರಿಶೀಲಿಸಿ ಮಕ್ಕಳ ಆಶ್ಲೀಲ ವಿಡಿಯೋ ಪರಿಶೀಲಿಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲಾಗಿದ್ದು, ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b) ಅಡಿ ಘಟನೆ ನಡೆದ ಎರಡು ತಿಂಗಳ ಬಳಿಕ, ಅಂದರೆ 2023ರ ಮೇ 3ರಂದು ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರು ರದ್ದುಪಡಿಸಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, 'ಅರ್ಜಿದಾರರು ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆಯ ವ್ಯಸನಿಯಾಗಿದ್ದಾರೆ. ಆದರೆ, ಯಾವುದೇ ವಿಡಿಯೋವನ್ನು ಸಿದ್ಧಪಡಿಸಿಲ್ಲ ಮತ್ತು ಯಾರೊಂದಿಗೂ ಹಂಚಿಕೆ ಮಾಡಿಲ್ಲ. ಹೀಗಾಗಿ, ಪ್ರಕರಣ ರದ್ದು ಮಾಡಬೇಕು' ಎಂದು ಕೋರಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಾಸಿಕ್ಯೂಷನ್, ಮಕ್ಕಳ ಆಶ್ಲೀಲ ವಿಡಿಯೋಗಳನ್ನು ನೋಡಿರುವುದಾಗಿ ಅರ್ಜಿದಾರರೇ ಒಪ್ಪಿಕೊಂಡಿದ್ದಾರೆ. ಇದು ಮಾಹಿತಿ ಹಕ್ಕು ಕಾಯಿದೆ ಉಲ್ಲಂಘನೆಯಾಗಿದೆ. ಆದ್ದರಿಂದ ವಿಚಾರಣೆ ಮುಂದುವರೆಯಬೇಕಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದೆ. \ No newline at end of file diff --git a/Varta_Bharati/url_26_102_34.txt b/Varta_Bharati/url_26_102_34.txt new file mode 100644 index 0000000000000000000000000000000000000000..803d9e8f77911b183f216cf4875e99ad1a7568e2 --- /dev/null +++ b/Varta_Bharati/url_26_102_34.txt @@ -0,0 +1 @@ +ಬೆಂಗಳೂರು: ಜಾತ್ಯತೀತತೆಗೆ ದಾಪುಗಾಲಿಟ್ಟಿರುವ ವಿರೋಧ ಪಕ್ಷಗಳು ಒಗ್ಗೂಡಿ ಜನರಿಗೆ ರಾಜಕೀಯ ಪ್ರಜಾಪ್ರಭುತ್ವ ಮಾತ್ರವಲ್ಲದೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವದ ಮಹತ್ವವನ್ನು ಒತ್ತಿಹೇಳಬೇಕು ಎಂದು ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟಿದ್ದಾರೆ.ಶನಿವಾರ ನಗರದ ಕ್ವೀನ್ಸ್‍ರಸ್ತೆಯ ಬಿಐಎಫ್‍ಟಿ ಸಭಾಂಗಣದಲ್ಲಿ ಫೋರಂ ಫಾರ್ ಡೆಮಾಕ್ರಸಿ ಆ್ಯಂಡ್ ಕಮ್ಯುನಲ್ ಸೌಹಾರ್ದ ಸಂಘಟನೆಯ ರಾಜ್ಯದ ಘಟಕದ ವತಿಯಿಂದ ನಡೆದ ‘2024ರ ಸಂಸತ್ ಚುನಾವಣೆಯ ಜನಾದೇಶ-ಮುಂದಿನ ದಾರಿ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಇತ್ತೀಚಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಾಮಾನ್ಯ ಜನರು ಅಧಿಕಾರದಲ್ಲಿರುವ ಪಕ್ಷವು ಮುನ್ನೆಲೆಗೆ ಬಂದಿದ್ದು, ಭಾವನಾತ್ಮಕ ವಿಷಯಗಳಿಂದ ಚುನಾವಣೆ ಎದುರಿಸಿದ್ದ ಪಕ್ಷವನ್ನು ನಿರಾಕರಿಸುವ ಜನರು ನಿರಾಕರಿಸುವ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಿದ್ದಾರೆ ಎಂದರು. ಚುನಾವಣೆಗಳಲ್ಲಿ ಹಣ ಬಲ, ಧರ್ಮ ಮತ್ತು ಜಾತಿ ಸಮಸ್ಯೆಗಳನ್ನು ಎದುರಿಸಲು ಸಂವಿಧಾನದ ಬಗ್ಗೆ ಸಾಮಾನ್ಯ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ. ಅನುಪಾತ ಪ್ರಾತಿನಿಧ್ಯ ವ್ಯವಸ್ಥೆ ಮತ್ತು ಅಲ್ಪಸಂಖ್ಯಾತರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವುದು. ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ತಕ್ಷಣದ ಮೀಸಲಾತಿ ಅಗತ್ಯವಿದೆ ಎಂದು ನಾಗಮೋಹನ್ ದಾಸ್ ಹೇಳಿದರು. 2024ರ ಲೋಕಸಭಾ ಚುನಾವಣೆಯ ನಂತರ ಪ್ರಜಾಪ್ರಭುತ್ವವನ್ನು ಮರುಪಡೆಯಲು ದ್ವೇಷ, ಸುಳ್ಳು ಮತ್ತು ಕೋಮು ಧ್ರುವೀಕರಣವನ್ನು ಹರಡುವ ಬಿಜೆಪಿಯ ‘ಪೇಯ್ಡ್ ಟ್ರೋಲ್ ಆರ್ಮಿ’ಯನ್ನು ಎದುರಿಸಲು ನಾಗರಿಕ ಸಮಾಜದ ಸಾಮೂಹಿಕ ಮತ್ತು ವ್ಯಕ್ತಿಗಳ ‘ಸತ್ಯ ಸೇನೆ’ ಅಗತ್ಯವಿದೆ ಎಂದು ನಾಗಮೋಹನ್ ದಾಸ್ ಹೇಳಿದರು. ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಮಾತನಾಡಿ, ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಪರ್ಯಾಯ ಮಾಧ್ಯಮಗಳನ್ನು ನಾಗರಿಕ ಸಮಾಜವು ಬೆಂಬಲಿಸಬೇಕು. ಈ ಮೂಲಕ ಪ್ರಜಾಪ್ರಭುತ್ವದ ದ್ವೇಷಿಗಳನ್ನು ಎದುರಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು. ದೀರ್ಘಾವಧಿಯಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ಚುನಾವಣೆಗಳಿಗೆ ರಾಜ್ಯ ಧನಸಹಾಯ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರದ ಅಗತ್ಯವಿದೆ ಎಂದು ಅವರು ಹೇಳಿದರು. ಅಕ್ಯುರಾ ಆಸ್ಪತ್ರೆಯ ನಿರ್ದೇಶಕ ಡಾ.ಮೊಹಮ್ಮದ್ ತಾಹಾ ಮತೀನ್ ಮಾತನಾಡಿ, 2024 ಲೋಕಸಭಾ ಚುನಾವಣೆಯಲ್ಲಿ ಸರ್ವಾಧಿಕಾರ ಮದ ಸೋತಿದೆ. ಪ್ರಜಾಪ್ರಭುತ್ವ ಗೆಲುವು ಸಾಧಿಸಿದೆ. ಪ್ರಜ್ಞಾವಂತ ಸಮಾಜವು ಸೈದ್ಧಾಂತಿಕ ಹೋರಾಟಗಳನ್ನು ನಡೆಸಿ ಕೋಮುವಾದಿಗಳನ್ನು ಸಂಪೂರ್ಣ ಮಟ್ಟದಲ್ಲಿ ಬುಡಮೇಲು ಮಾಡುವ ಮೂಲಕ ಸಹೋದರತ್ವ ಮತ್ತು ನಿಯಮಾಧಾರಿತ ಸಮಾಜವನ್ನು ನಿರ್ಮಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಎದ್ದೇಳು ಕರ್ನಾಟಕ ಸಂಘಟನೆಯ ಸದಸ್ಯೆ ತಾರಾ ರಾವ್, ‘ಎಫ್‍ಡಿಸಿಎ’ನ ರಾಜ್ಯ ಪ್ರಧಾನ ಕಾರ್ಯದರ್ಶಿ ಫಿರೋಜ್ ಪಾಷ ಉಪಸ್ಥಿತರಿದ್ದರು. \ No newline at end of file