diff --git a/PublicTV_World/0000508e.txt b/PublicTV_World/0000508e.txt new file mode 100644 index 0000000000000000000000000000000000000000..db0ba58e4d65689a60930bb907cc5db30b6cc89a --- /dev/null +++ b/PublicTV_World/0000508e.txt @@ -0,0 +1,16 @@ +ಬೆಂಗಳೂರು:ನನಗೆ ಯಾವುದೇ ರೋಗ ಲಕ್ಷಣ ವಿಲ್ಲದಿದ್ದರೂ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ. + +ನಾನು ಶ್ರೀ.ಶಂತವೇರಿ ಗೋಪಾಲ್ ಗೌಡ ಆಸ್ಪತ್ರೆಯಲ್ಲಿ ರೋಗಿಯನ್ನು ನೋಡಲು ಹೋಗಿದ್ದೆ. ಆಂಟಿಜೆನ್ ಟೆಸ್ಟ್ ಇತ್ತು ಅಲ್ಲಿ ನೆಗೆಟಿವ್ ಎಂದು ಬಂದಿತ್ತು. ಆದರೂ ನಾನು ಆರ್‌ಟಿಪಿಸಿಆರ್‌ಗಾಗಿ ಹೋಗಿದ್ದೆನು. ನನಗೆ ಯಾವುದೇ ರೋಗಲಕ್ಷಣಗಳನ್ನು ನಾನು ಹೊಂದಿಲ್ಲದಿದ್ದರೂ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಯಾರು ನನ್ನೊಂದಿಗೆ ಸಂಪರ್ಕಕ್ಕೆ ಬಂದರು ಟೆಸ್ಟ್ ಮಾಡಿಸಿಕೊಳ್ಳಿ, ಪ್ರತ್ಯೇಕವಾಗಿ ಜಾಗೃತರಾಗಿರಿ ಎಂದು ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ. + +Dear all, morning I went to see a patient at Sri.Shantaveri Gopal Gowda hospital n had a Rapid Antigen Test n it was negative. Yet I went for RTPCR n it turned out to be positive though I don’t hv any symptoms. Whoever came in contact with me, pls isolate yourself. Sorry. + +— Pratap Simha (@mepratap)May 11, 2021 + + + +ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, 480 ಮಂದಿ ಮೃತಪಟ್ಟಿದ್ದಾರೆ. ಏಪ್ರಿಲ್ ನಲ್ಲಿ ಮೃತಪಟ್ಟವರ ವಿವರಗಳನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ತಡವಾಗಿ ನೀಡುತ್ತಿರುವುದರಿಂದ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 19,852ಕ್ಕೆ ಏರಿಕೆಯಾಗಿದೆ. + +ಇಂದು ಆಸ್ಪತ್ರೆಯಿಂದ 22,584 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.33.66 ಮತ್ತು ಮರಣ ಪ್ರಮಾಣ ಶೇ.1.21ರಷ್ಟಿದೆ. ಟೆಸ್ಟಿಂಗ್ ಇಳಿಕೆಯಾಗಿದ್ದು, ಇಂದು 1,16,238 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. + + + diff --git a/PublicTV_World/0001a090.txt b/PublicTV_World/0001a090.txt new file mode 100644 index 0000000000000000000000000000000000000000..adbb385fe9f142027cb36a68c0e1e2471ea82345 --- /dev/null +++ b/PublicTV_World/0001a090.txt @@ -0,0 +1,20 @@ +ಮಂಡ್ಯ:ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ. ಮಂಡ್ಯ ಜಿಲ್ಲೆಯ ಜನತೆಯ ನಿರೀಕ್ಷೆಯನ್ನು ಈ ಸರ್ಕಾರ ಹುಸಿಗೊಳಿಸಿದೆ ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ. + +ಮಂಡ್ಯ ಜಿಲ್ಲೆಯ ಬಹುಪಾಲು ವರ್ಗದ ಜೀವನೋಪಾಯಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅನುಕೂಲ ಮಾಡಿಕೊಡುತ್ತಿದ್ದ ಬಹು ಆಕಾಂಕ್ಷಿತ ಮೈಸೂರು ಸಕ್ಕರೆ ಕಾರ್ಖಾನೆಗೆ ಘೋಷಿಸಿರುವ 50 ಕೋಟಿ ರೂಪಾಯಿ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ. ಯಂತ್ರೋಪಕರಣ ದುರಸ್ತಿಗೆ ಈ ಹಣವನ್ನು ಒದಗಿಸುವುದಾಗಿ ಹೇಳಲಾಗಿದೆ. ಆದರೆ ಕಾರ್ಖಾನೆ ಅಭಿವೃದ್ಧಿಗೆ ಈ ಹಣ ಯಾವುದಕ್ಕೂ ಸಾಲದು ಎಂಬುದು ತಿಳಿಯುತ್ತದೆ. ಹಾಲಿ ಕಾರ್ಖಾನೆ ಅಭಿವೃದ್ಧಿಗೆ 200 ಕೋಟಿ ರೂಪಾಯಿಯ ಅನುದಾನವನ್ನು ಕೇಳಿದ್ದೇವು. ಅಲ್ಲದೇ ಎಥೆನಾಲ್ ಘಟಕವನ್ನು ಸ್ಥಾಪಿಸಿ ಕಾರ್ಖಾನೆಯನ್ನು ಲಾಭದಾಯಕವನ್ನಾಗಿ ಮಾಡಲೂ ಕೇಳಿಕೊಂಡಿದ್ದೇವು. ಆದರೆ, ಸರ್ಕಾರಕ್ಕೆ ಇದಾವುದರ ಮೇಲೂ ಆಸಕ್ತಿ ಇಲ್ಲ ಎಂಬುದು ಈ ಬಜೆಟ್ ಮೂಲಕ ಸಾಬೀತಾಗಿದೆ ಎಂದಿದ್ದಾರೆ.ಇದನ್ನೂ ಓದಿ:ಬಿಸಿಯೂಟ ತಯಾರಕರಿಗೆ 1,000 ರೂ. ಗೌರವಧನ ಹೆಚ್ಚಳ + + + +ನಾನು ಮಾನ್ಯ ಮುಖ್ಯಮಂತ್ರಿಯವರಲ್ಲಿ ಮನವಿ ಈಗಲೂ ಕಾಲಾವಕಾಶ ಮಿಂಚಿಲ್ಲ. ತಾವು ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಇದನ್ನು ಮರುಪರಿಶೀಲನೆ ಮಾಡಿ 200 ಕೋಟಿ ರೂ. ಅನುದಾನ ಮೀಸಲಿಡಬೇಕು. ಜೊತೆಗೆ ಎಥೆನಾಲ್ ಘಟಕ ಸ್ಥಾಪನೆಗೆ ಕ್ರಮ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ವಿಶ್ವೇಶ್ವರಯ್ಯ ನಾಲೆ ಆಧುನೀಕರಣಕ್ಕೆ 500 ಕೋಟಿ ರೂಪಾಯಿಯನ್ನು ಕೇಳಲಾಗಿತ್ತು. ಅದನ್ನೂ ನೀಡದಿರುವುದು ತೀವ್ರ ಬೇಸರ ತಂದಿದೆ. ಇದನ್ನೂ ಸಹ ಮುಖ್ಯಮಂತ್ರಿಯವರು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. + + + +ಅಂತಾರಾಷ್ಟ್ರೀಯ ಗುಣಮಟ್ಟದ ರೈತ ತರಬೇತಿ ಕೇಂದ್ರಕ್ಕೋಸ್ಕರ ಅಂತಾರಾಷ್ಟ್ರೀಯ ಮಟ್ಟದ ರೈತ ಭವನವನ್ನು ಸ್ಥಾಪಿಸುವಂತೆ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಇದನ್ನು ಹುಸಿಗೊಳಿಸಿದೆ. ಕೋವಿಡ್ ಸಮಯದಲ್ಲಿ ಮೃತಪಟ್ಟ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಬೇಕಿತ್ತು. ಆದರೆ ಅದರ ಬಗ್ಗೆ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದನ್ನು ಸಹ ಬಜೆಟ್ ಮೇಲಿನ ಚರ್ಚೆ ಸಮಯದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಮರುಪರಿಶೀಲಿಸಿ ಕೋವಿಡ್ ಸಮಯದಲ್ಲಿ ಮೃತಪಟ್ಟ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತ ಕುಟುಂಬಗಳಿಗೆ ನೆರವಾಗಬೇಕು ಎಂದು ತಿಳಿಸಿದ್ದಾರೆ.ಇದನ್ನೂ ಓದಿ:Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ + + + +ಮಂಡ್ಯ ಜಿಲ್ಲೆ ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ವಿಶೇಷವಾದಂತಹ ಯಾವುದೇ ರೀತಿಯ ಕೊಡುಗೆಯನ್ನು ನೀಡಿಲ್ಲ. ಯಾವುದೇ ರೀತಿಯ ಕಾರ್ಯಕ್ರಮವನ್ನು ಘೋಷಣೆ ಮಾಡದೇ ಮುಖ್ಯಮಂತ್ರಿಯವರು ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನೂ ರೈತರ ಆದಾಯವನ್ನು ದ್ವಿಗುಣ ಮಾಡುತ್ತೇವೆ ಎಂದು ಹೇಳುತ್ತಾ ಬರಲಾಗುತ್ತಿದೆಯೇ ಹೊರತು ಅಂತಹ ಯಾವುದೇ ಘೋಷಣೆಗಳು, ನಿರ್ಧಾರಗಳು ಈ ಬಜೆಟ್‍ನಲ್ಲಿ ಕಾಣಿಸಲಿಲ್ಲ. ಹೀಗಾಗಿ ಇದು ನಿರಾಶಾದಾಯಕ ಬಜೆಟ್ ಎಂದು ಹೇಳಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾರೆ. + + + + + diff --git a/PublicTV_World/0002539d.txt b/PublicTV_World/0002539d.txt new file mode 100644 index 0000000000000000000000000000000000000000..ab0d737c980523cc2ebe828704cd3886685257c0 --- /dev/null +++ b/PublicTV_World/0002539d.txt @@ -0,0 +1,24 @@ +ಬಿಗ್‍ಬಾಸ್ ಮನೆಗೆ ಕಳುಹಿಸುವ ಮುನ್ನ ಹುಡುಗರ ಜೊತೆ ಹೆಚ್ಚಾಗಿ ಸೇರಬೇಡ ಎಂದು ಅಮ್ಮ ಹೇಳಿದ್ದ ವಿಚಾರವನ್ನು ವೈಷ್ಣವಿ ಇಂದು ಬಹಿರಂಗ ಮಾಡಿದ್ದಾರೆ. + +ಬಿಗ್‍ಬಾಸ್ ಮನೆಯಿಂದ ಹೊರಗೆ ಹೋಗುತ್ತಿರುವ ಸ್ಪರ್ಧಿಗಳಿಗೆ ಏನಾದರೂ ಭಯ ಕಾಡುತ್ತಿದ್ಯಾ ಎಂದು ಕಣ್ಮಣಿ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ವೈಷ್ಣವಿ ನಮ್ಮ ಅಮ್ಮ ದೊಡ್ಮನೆಗೆ ಬರುವಾಗ ಹುಡುಗರ ಜೊತೆ ಜಾಸ್ತಿ ಸೇರಬೇಡ, ಇರಬೇಡ ಎಂದು ಹೇಳಿ ಕಳುಹಿಸಿದ್ದರು. ಆದರೆ ನಾನು ಇಲ್ಲಿ ಇದ್ದಿದ್ದೆ ಹೆಚ್ಚಾಗಿ ಹುಡುಗರ ಜೊತೆ ಹಾಗಾಗಿ ಭಯ ಆಗುತ್ತಿದೆ. ಇನ್ನೊಂದು ವಿಪರ್ಯಾಸ ಎಂದರೆ ಈ ಎಪಿಸೋಡ್‍ನ ನಾನು ಅವರೊಟ್ಟಿಗೆಯೇ ಕುಳಿತು ನೋಡಬೇಕು. ಸೋ ಹಾಗಾಗಿ ಸ್ವಲ್ಪ ಟೆನ್ಷನ್ ಆಗ್ತಿದೆ ಎನ್ನುತ್ತಾರೆ. + + + +ಈ ವೇಳೆ ರಘು ನಾನು ಕೂಡ ಆಗಾಗ ಎಕ್ಸ್ ಗರ್ಲ್ ಫ್ರೆಂಡ್, ಹಾಗೇ, ಹೀಗೆ ಅಂತ ಹೇಳಿಬಿಟ್ಟಿದ್ದೇನೆ. ಸೋ ನೀವು ಸ್ವಲ್ಪ ಎಕ್ಸ್‌ಪ್ಲೇನ್ ಮಾಡಿ ಬಿಡಿ ಕಣ್ಮಣಿ ಎಂದು ಹೇಳುತ್ತಾಳೆ. ಆಗ ಕಣ್ಮಣಿ ಇನ್ನೂ ನಾಲ್ಕೆ ಘಂಟೆ ರಘು ನೀವೇ ಮಾಡಬಹುದು ಅಂತಾಳೆ. + + + +ನಂತರ ವೈಷ್ಣವಿಗೆ ಒಂದೇ ಒಂದು ಪ್ರಶ್ನೆ ಕೇಳುತ್ತೇನೆ. ನಿಮ್ಮ ಮನೆ ಇರುವುದು ಯಾವ ಏರಿಯಾ ಎಂದು ಕಣ್ಮಣಿ ಕೇಳುತ್ತಾಳೆ. ಆಗ ವೈಷ್ಣವಿ ರಾಜಾಜಿನಗರ ಎಂಬ ಸತ್ಯ ರಿವೀಲ್ ಮಾಡಿದ್ದಾರೆ. ನಂತರ ರಘುಗೆ ಆ ಕಡೆ ತಲೆ ಹಾಕಿ ಕೂಡ ಮಲಗಬೇಡಿ ಅಂತ ಕಣ್ಮಣಿ ಅಣುಗಿಸುತ್ತಾಳೆ. ಈ ವೇಳೆ ನಗುತ್ತಾ ರಘು ನಮ್ಮಿಬ್ಬರದ್ದು ಒಂದೇ ಏರಿಯಾ ನಮ್ಮ ಏರಿಯಾಗೆ ಹೋಗಲೇ ಬೇಕು ಕಣ್ಮಣಿ ನಾನೇದರೂ ಜಾಸ್ತಿ ಮಾತನಾಡಿದ್ನಾ ಎಂದು ಕೇಳುತ್ತಾರೆ. + + + +ವೈಷ್ಣವಿ ಬಿಗ್‍ಬಾಸ್ ಕಾರ್ಯಕ್ರಮದ ಆರಂಭದಲ್ಲಿ ನೀವು ವೇದಿಕೆ ಮೇಲೆ ಸುದೀಪ್ ಅವರ ಜೊತೆ ಹೇಳಿದ್ದನ್ನೆಲ್ಲಾ ರಘು ಜೊತೆ ಹಂಚಿಕೊಂಡಿದ್ದೀರಾ, ಅದೇ ನಿಮ್ಮ ಅಮ್ಮ ಯಾವ ಯಾವದರಲ್ಲಿ ನಿಮಗೆ ಹೊಡೆಯುತ್ತಾರೆ ಅಂತ ಎಂದು ಕಣ್ಮಣಿ ನೆನಪಿಸುತ್ತಾರೆ. ಆಗ ಮನೆಮಂದಿ ಜೋರಾಗಿ ನಗುತ್ತಾ ಚಪ್ಪಾಳೆ ಹೊಡೆಯುತ್ತಾರೆ. + + + +ಈ ವೇಳೆ ರಘು ಈ ಸೈಡ್ ಹೋದರೆ ನನ್ನ ಹೆಂಡತಿ, ಆ ಸೈಡ್ ಹೋದರೆ ವೈಷ್ಣವಿ ಅಮ್ಮ ನಾನು ಎಲ್ಲಿ ಹೋಗಲಿ ಎಂದು ಹೇಳುತ್ತಾ ಹಾಸ್ಯ ಮಾಡುತ್ತಾರೆ. + + + + + diff --git a/PublicTV_World/000c45a8.txt b/PublicTV_World/000c45a8.txt new file mode 100644 index 0000000000000000000000000000000000000000..6aa0507ef1b792cde749c6cc845a49d0ee197d12 --- /dev/null +++ b/PublicTV_World/000c45a8.txt @@ -0,0 +1,16 @@ +ಉಡುಪಿ:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಕಂಡುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಈ ಕೇಸ್‍ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. + +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಅವರು 40 ಪರ್ಸೆಂಟ್ ಆರೋಪ ಮಾಡಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‍ನಲ್ಲಿ ಶವ ಪತ್ತೆ ಆಗಿದೆ. ಈಗಾಗಲೇ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ರೀತಿಯ ತನಿಖೆ ಆಗುತ್ತದೆ. ಇದರ ಪ್ರಾಥಮಿಕ ವರದಿ ಏನು ಬರುತ್ತದೆ ಎನ್ನುವುದರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಈ ಸಾವಿನ ಹಿನ್ನೆಲೆ ಸಂಪೂರ್ಣವಾಗಿ ತನಿಖೆ ನಡೆಯುತ್ತದೆ ಎಂದು ಹೇಳಿದರು. + + + +ಪ್ರತಿಪಕ್ಷಗಳು ರಾಜೀನಾಮೆಗೆ ಒತ್ತಾಯಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡರು. ಆಗ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರಾ ಪ್ರಶ್ನಿಸಿದರು. ಈ ಕುರಿತು ತನಿಖೆ ನಡೆಸುತ್ತೇವೆ. ಇದರ ಸತ್ಯಾಂಶ ಹೊರಬರುತ್ತದೆ. ಅದಾದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.ಇದನ್ನೂ ಓದಿ:ರಾಜ್ಯದಲ್ಲಿ ಡಿಜಿಪಿ ಬದುಕಿದ್ದರೆ, ಕ್ರಮ ಕೈಗೊಳ್ಳಬೇಕು: ಡಿಕೆಶಿ + + + +ಪೊಲೀಸ್ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಹೇಳಿದ್ದೇವೆ. ಸಂತೋಷ್ ಸಾವಿನ ಕುರಿತು ಕಾನೂನು ಬದ್ಧವಾಗಿ ಆಗಬೇಕು. ಪಾರದರ್ಶಕ ತನಿಖೆ ಆಗುತ್ತದೆ. ಗುತ್ತಿಗೆದಾರ ಸಂತೋಷ್ ಮಾಡಿದ್ದ ಆರೋಪವನ್ನು ಈಶ್ವರಪ್ಪ ಅವರು ಅಲ್ಲಗಳೆದಿದ್ದಾರೆ. ಅಷ್ಟೇ ಅಲ್ಲದೇ ಕೋಟ್‍ನಲ್ಲಿ ಕೇಸ್ ಹಾಕಿದ್ದಾರೆ. ಸಂತೋಷ್‍ಗೆ ನೋಟಿಸ್ ಹೋಗಿದೆ. ಇದೆಲ್ಲವನ್ನು ತನಿಖೆ ಸಂದರ್ಭದಲ್ಲಿ ಒಳಪಡುತ್ತದೆ. ಯಾವ ಸಂದರ್ಭದಲ್ಲಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ:ನಾನು ಯಾವುದೇ ತಪ್ಪು ಮಾಡಿಲ್ಲ, ಸಂತೋಷ್ ತಪ್ಪು ಮಾಡಿರೋದು : ಈಶ್ವರಪ್ಪ + + + + + diff --git a/PublicTV_World/000e0f25.txt b/PublicTV_World/000e0f25.txt new file mode 100644 index 0000000000000000000000000000000000000000..d9dff22f2f2ed301169fdcb1ce580e9dec38f250 --- /dev/null +++ b/PublicTV_World/000e0f25.txt @@ -0,0 +1,20 @@ +ನವದೆಹಲಿ: ಕಾಂಗ್ರೆಸ್ ತಮ್ಮ ಅಧಿಕಾರವಧಿಯಲ್ಲಿನ ಸ್ಥಿತಿಯನ್ನು ಮರೆತು ಈಗಿನ ತೈಲ ಬೆಲೆ ಏರಿಕೆಗೆ ಕೇಂದ್ರಸರ್ಕಾರವೇ ಕಾರಣ ಎಂದು ಆರೋಪಿಸುತ್ತಿದೆ ಎಂದು ಬಿಜೆಪಿ ಮುಖಂಡ ಜೆ ಮಿಶ್ರಾ ಆರೋಪಿಸಿದ್ದಾರೆ. + +2004 ರಲ್ಲಿ ಒಂದು ಲೀಟರ್ ಪೆಟ್ರೋಲ್ ಗೆ 29 ರೂ. ಇತ್ತು. 2014 ರಲ್ಲಿ 74 ರೂ ಆಗಿತ್ತು. ಒಂದು ಕೆಜಿ ತುಪ್ಪಕ್ಕೆ 2004 ರಲ್ಲಿ 130 ರೂ ಇತ್ತು. 2014 ರಲ್ಲಿ 380 ರೂ ಆಗಿತ್ತು. ಮೊಬೈಲ್ ಡೆಟಾ ದರ 1 ಜಿಬಿ ಗೆ 300 ರೂ ಇತ್ತು. ಈಗ 300 ರೂ. ಗೆ 100 ಜಿಬಿ ಸಿಗುತ್ತೆ. ಕಾಂಗ್ರೆಸ್ ಇದ್ದಾಗ ಕಾಲ್ ದರಗಳು 1 ನಿಮಿಷಕ್ಕೆ 8 ರೂ. ಇತ್ತು. ಈಗ ಡೆಟಾ ಪ್ಯಾಕ್ ಜೊತೆ ಕಾಲ್ ಉಚಿತವಾಗಿದೆ ಎಂದು ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ. + +ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 25 ರೂ. ಕಡಿಮೆ ಮಾಡಬಹುದು. ಆದರೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಬುಧವಾರ ಆರೋಪಿಸಿದ್ದರು. + +ಈ ಸಂಬಂಧ ನಿರಂತರ ಟ್ವಿಟ್ ಮಾಡಿರುವ ಅವರು, ಪೆಟ್ರೋಲ್ ದರದಲ್ಲಿ ಕೇಂದ್ರ ಸರ್ಕಾರವು ಹೆಚ್ಚು ಹಣ ಉಳಿತಾಯ ಮಾಡುತ್ತಿದೆ. ಕಚ್ಚಾ ತೈಲದಲ್ಲಿ ಕೇಂದ್ರ ಸರ್ಕಾರವು ಪ್ರತಿ ಲೀಟರ್ ಗೆ  15 ರೂ. ಉಳಿತಾಯ ಮಾಡುತ್ತಿದೆ. ಅಲ್ಲದೇ 10 ರೂ. ಅಬಕಾರಿ ಸುಂಕ ಹಾಕುತ್ತಿದೆ ಎಂದು ಅವರು ಹೇಳಿದ್ದರು. + +ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 24ರಿಂದ ಮೇ14ರವರೆಗೆ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಆಗಿರಲಿಲ್ಲ. ಈಗ ಪ್ರತಿ ದಿನ ಹೆಚ್ಚಾಗುತ್ತಿದ್ದು, ಗುರುವಾರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 78.43 ರೂ ಇದ್ದರೆ, ಪ್ರತಿ ಲೀಟರ್ ಡೀಸೆಲ್ ಬೆಲೆ 69.74 ರೂ ಇದೆ. + +Congress talks about fuel price to criticise govt. Don't they remember their past? Petrol was Rs29/l in '04&Rs74/l in '14, Ghee Rs130/kg in '04&Rs380/kg in '14, data charges Rs300 for 1 GB,100 GB at Rs300 now, call rates Rs 8/min & free with data pack today: J Mishra, BJP (23.05)pic.twitter.com/BqSSuvSoko + +— ANI (@ANI)May 24, 2018 + + + + + + + diff --git a/PublicTV_World/0011b7d2.txt b/PublicTV_World/0011b7d2.txt new file mode 100644 index 0000000000000000000000000000000000000000..f23113bf64f4e0964ceeb61f5e2964b31616735f --- /dev/null +++ b/PublicTV_World/0011b7d2.txt @@ -0,0 +1,14 @@ +ಬೆಳಗಾವಿ:ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶಹೊರಹಾಕಿದ್ದಾರೆ. + + + +ಬೆಳಗಾವಿ ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನಿಲಜಿ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಲಾಗಿದೆ.ಇದನ್ನೂ ಓದಿ:ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ + + + +ಯಾವುದೇ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕಾದರೆ ಮೊದಲಿಗೆ ಟೆಂಡರ್ ಕರೆಯಬೇಕು. ಅದಕ್ಕೆ ಅನುಮೋದನೆ ಸಿಗಬೇಕು. ಆದರೆ ಇದ್ಯಾವುದನ್ನು ಪಾಲಿಸದೇ ವರ್ಕ್ ಆರ್ಡರ್ ಇಲ್ಲದೇ ಇದ್ದರೂ ಶಾಸಕಿ ಪುತ್ರನಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದಲ್ಲದೇ ಸಂಬಂಧಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರ ಗಮನಕ್ಕೆ ತರದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಡಿಸಿಗೆ ಒತ್ತಾಯಿಸಿದರು.ಇದನ್ನೂ ಓದಿ:ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ + + + + + diff --git a/PublicTV_World/001318e2.txt b/PublicTV_World/001318e2.txt new file mode 100644 index 0000000000000000000000000000000000000000..a35c9e501d3518d4e23f8d11a94f6a060ffee3f6 --- /dev/null +++ b/PublicTV_World/001318e2.txt @@ -0,0 +1,16 @@ +ಗದಗ:ಇಂದು 2ನೇ ದಿನವೂ ಸಾರಿಗೆ ಬಸ್ ಬಂದ್ ನಿಂದ ಸಾರ್ವಜನಿಕರು ಸಾಕಷ್ಟು ಪರದಾಡಿದರು. ಅನಿವಾರ್ಯತೆ ಇರುವ ಪ್ರಯಾಣಿಕರು ರೈಲು ಪ್ರಯಾಣದತ್ತ ಮುಖ ಮಾಡಿದ್ದಾರೆ. ಬಸ್ ಇಲ್ಲದೇ ಸರಿಯಾಗಿ ರೈಲು ಇಲ್ಲದೆ ಅಸ್ತವ್ಯಸ್ತತೆಯಿಂದ ಮಹಿಳಾ ಪ್ರಯಾಣಿಕರೊಬ್ಬರು ಪಬ್ಲಿಕ್ ಟಿವಿ ಎದುರು ಕಣ್ಣೀರಿಟ್ಟು ತನ್ನ ಅಳಲನ್ನು ತೋಡಿಕೊಂಡಿದ್ದಾರೆ. + + + +ಕೊಪ್ಪಳ ಮೂಲದ ದೀಪಾ ಕುಲಕರ್ಣಿ ಎಂಬ ಮಹಿಳೆ ಮಗಳೊಂದಿಗೆ ಗದಗಿನಲ್ಲಿ ಅನಾರೋಗ್ಯಕ್ಕೊಳಗಾದ ಸಂಬಂಧಿಕರೊಬ್ಬರನ್ನು ಮಾತನಾಡಿಸಲು ಬಂದಿದ್ದರು. ನಿನ್ನೆ ಏಕಾಏಕಿ ಬಸ್ ಬಂದ್ ನಿಂದ ಮರಳಿ ಊರಿಗೆ ಹೋಗಲಾಗದೆ ಸಾಕಷ್ಟು ಪರದಾಡಿದ್ದಾರೆ. + + + +ಇಂದು ರೈಲ್ವೆ ನಿಲ್ದಾಣದಲ್ಲೂ ಸರಿಯಾಗಿ ರೈಲು ಇಲ್ಲದಕ್ಕೆ ಕಣ್ಣೀರಿಟ್ಟ ಮಹಿಳೆ ತಮಗಾದ ತೊಂದರೆ ಬಗ್ಗೆ ಪಬ್ಲಿಕ್ ಟಿವಿ ಎದುರು ಕಣ್ಣೀರಿಟ್ಟು ಅಳಲು ತೋಡಿಕೊಂಡಿದ್ದಾರೆ. ದಿಢೀರ್ ಬಂದ್ ಮಾಡಿರುವುದು ಸಾಕಷ್ಟು ತೊಂದರೆಯಾಗಿದೆ. ಮಗಳನ್ನು ಕಟ್ಟಿಕೊಂಡು ಬಸ್ ಹಾಗೂ ರೈಲು ನಿಲ್ದಾಣದಲ್ಲಿ ಹೇಗೆ ಇರಬೇಕು. ಅರ್ಧ ದಾರಿನಲ್ಲಿ ಹೀಗಾದ ವೇಳೆ ಯಾರಾದರೂ ಸಂಬಂಧಿಕರು ಇದ್ದರೆ ಪರವಾಗಿಲ್ಲ ಇಲ್ಲವಾದರೆ ನಮ್ಮ ಪರಸ್ಥಿತಿ ಕೇಳುವವರು ಯಾರು. ಸರ್ಕಾರ ಜನಸಾಮಾನ್ಯರಿಗಾಗುವ ತೊಂದರೆ ತಪ್ಪಿಸಬೇಕು ಅಂತ ಆಗ್ರಹಿಸಿದರು. + +ಖಾಸಗಿ ವಾಹನಗಳ ದುಪ್ಪಟ್ಟು ದರದಿಂದ ಬೇಸತ್ತ ಜನರು ರೈಲು ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ದೂರದ ಪ್ರದೇಶಗಳಿಗೆ ತೆರಳುವ ಸಾರ್ವಜನಿಕರು ಟಿಕೆಟ್ ಕೌಂಟರ್ ನಲ್ಲಿ ಸರದಿಯ ಸಾಲಿನಲ್ಲಿ ನಿಂತು ಟಿಕೆಟ್ ಪಡೆದು ಪ್ರಯಾಣ ಮಾಡುತ್ತಿದ್ದಾರೆ. + +Advertisement + + + diff --git a/PublicTV_World/0016f8c3.txt b/PublicTV_World/0016f8c3.txt new file mode 100644 index 0000000000000000000000000000000000000000..f164d55d548d7925c0b3147d088323046e58112b --- /dev/null +++ b/PublicTV_World/0016f8c3.txt @@ -0,0 +1,12 @@ +ಬೆಂಗಳೂರು:ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ. + + + +2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.ಇದನ್ನೂ ಓದಿ:ಸರ್ಕಾರಿ ಅಂಗನವಾಡಿಗಳ ಕರೆಂಟ್ ಬಿಲ್ ಕಟ್ಟಲು ದುಡ್ಡಿಲ್ಲ – ಫ್ಯೂಸ್ ಕಿತ್ತ ಬೆಸ್ಕಾಂ + +ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ. + + + + + diff --git a/PublicTV_World/001c3940.txt b/PublicTV_World/001c3940.txt new file mode 100644 index 0000000000000000000000000000000000000000..aa00111be89c9b1e66cdafcedb436106d46adbac --- /dev/null +++ b/PublicTV_World/001c3940.txt @@ -0,0 +1,14 @@ +ಬೆಂಗಳೂರು:ಒಂದು ಕಡೆ ಕೊರೊನಾ ಕಾಟ ಹೆಚ್ಚಿದ್ದರೆ ಬೆಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಕಾಟ ಹೆಚ್ಚಾಗಿದೆ. ನಗರದಲ್ಲಿ ಒಟ್ಟು 14 ಮಂದಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. + +14 ಮಂದಿಯಲ್ಲಿ 7 ಮಂದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ, 7 ಮಂದಿ ಇಎನ್‍ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ ಇಬ್ಬರು ಬ್ಲ್ಯಾಕ್ ಫಂಗಸ್‍ಗೆ ಮೃತಪಟ್ಟಿದ್ದಾರೆ. + + + +ಪಬ್ಲಿಕ್ ಟಿವಿಗೆ ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತ ಪ್ರತಿಕ್ರಿಯಿಸಿ, ಲಿವರ್, ಆಕ್ಸಿಜನ್, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದವರಲ್ಲೂ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. 14 ಜನ ಕೂಡ ಬೆಂಗಳೂರಿನವರಾಗಿದ್ದಾರೆ. ಕೋವಿಡ್‍ನಿಂದ ಬಳಲುತ್ತಿದ್ದು, ಡಯಾಬಿಟಿಸ್ ಹೆಚ್ಚು ಇದ್ದವರಿಗೆ ಬ್ಲ್ಯಾಕ್ ಫಂಗಸ್ ಬಂದಿದೆ ಎಂದು ಅವರು ತಿಳಿಸಿದ್ದಾರೆ. + +ಬೆಳಗಾವಿಯಲ್ಲೂ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಹಿಡಕಲ್ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ. ಬೀದರ್ ನಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. + + + + + diff --git a/PublicTV_World/001d7557.txt b/PublicTV_World/001d7557.txt new file mode 100644 index 0000000000000000000000000000000000000000..a15e6da50cde6081f3596558e17f66ee37c400d2 --- /dev/null +++ b/PublicTV_World/001d7557.txt @@ -0,0 +1,18 @@ +ಇಂದು ಸಂಜೆ  6.40ಕ್ಕೆ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಈ ಸಮಾರಂಭದಲ್ಲಿ ಭಾಗವಹಿಸುವುದಕ್ಕಾಗಿ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಬೆಂಗಳೂರಿಗೆ ಬಂದಿಳಿದ್ದಾರೆ. ಪ್ರತಿಷ್ಠಿತ ಹೊಟೇಲ್ ವೊಂದರಲ್ಲಿ ತಂಗಿರುವ ಅವರನ್ನು ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ಚಿತ್ರತಂಡ ಭೇಟಿ ಮಾಡಿದೆ.ಇದನ್ನೂ ಓದಿ :ಕೆಜಿಎಫ್ 2 ಟ್ರೈಲರ್ ಮೊದಲ ವಿಮರ್ಶೆ : ಹೇಗಿದೆ ರಾಕಿಭಾಯ್ KGF 2 ಹವಾ + + + +ಕೆಜಿಎಫ್ 2 ಸಿನಿಮಾದ ಟ್ರೈಲರ್ ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ  ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್.ಇದನ್ನೂ ಓದಿ :ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ + + + +ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್‍ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕೆಜಿಎಫ್ 2 ಮಲಯಾಳಂ ಟ್ರೈರಲ್ ಅನ್ನು ಅಲ್ಲಿನ ಖ್ಯಾತ ನಟ ಪೃಥ್ವಿರಾಜ್ ರಿಲೀಸ್ ಮಾಡಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ ಹೇಳಿದೆ.  ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ.ಇದನ್ನು ಓದಿ :ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ + + + +ಹಾಗೆಯೇ ಹಿಂದಿಯಲ್ಲೂ ಈ ಟ್ರೈಲರ್ ಬಿಡುಗಡೆ ಆಗುತ್ತಿದ್ದು, ಅದನ್ನು ಬಾಲಿವುಡ್ ಖ್ಯಾತ ನಟ ಫರಾನ್ ಅಖ್ತರ್ ರಿಲೀಸ್ ಮಾಡುತ್ತಿದ್ದಾರೆ. ಈಗಾಗಲೇ ನಾಲ್ಕು ಟ್ರೈಲರ್ ಗಳನ್ನು ಯಾರೆಲ್ಲ ರಿಲೀಸ್ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಕನ್ನಡದ ಟ್ರೈಲರ್ ರಿಲೀಸ್ ಯಾರು ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಇನ್ನೂ ಹಂಚಿಕೊಂಡಿಲ್ಲ. ಇವತ್ತು ಟ್ರೈಲರ್ ಬಿಡುಗಡೆಯ ಮುಖ್ಯ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗಿ ಆಗುತ್ತಿರುವುದರಿಂದ ಇವರೇ ಬಹುಶಃ ಟ್ರೈಲರ್ ಬಿಡುಗಡೆ ಮಾಡಬಹುದು ಎನ್ನಲಾಗುತ್ತಿದೆ. + + + + + diff --git a/PublicTV_World/001f61a8.txt b/PublicTV_World/001f61a8.txt new file mode 100644 index 0000000000000000000000000000000000000000..2fafeff78381b932b985cfb7c02cecd72424d625 --- /dev/null +++ b/PublicTV_World/001f61a8.txt @@ -0,0 +1,14 @@ +ಗದಗ:ರಾಜ್ಯದೆಲ್ಲೆಡೆ ದ್ವಿತೀಯ ಪಿಯು ಪರೀಕ್ಷೆ ನಡೆದಿದ್ದು, ಹಲವೆಡೆ ವಿದ್ಯಾರ್ಥಿಗಳು ಗುಂಪಾಗಿ ಸೇರಿ ಅವಾಂತರ ಸೃಷ್ಟಿಸಿದ್ದರು. ಇನ್ನೂ ಹಲವೆಡೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಗದಗನಲ್ಲಿ ಒರ್ವ ವಿದ್ಯಾರ್ಥಿಯ ದೇಹದಲ್ಲಿ ಹೆಚ್ಚು ಉಷ್ಣಾಂಶ ಕಂಡು ಬಂದು ಆತಂಕಕ್ಕೀಡು ಮಾಡಿದೆ. + + + +ನಗರದ ಜೆ.ಟಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿ ದೇಹದಲ್ಲಿ ಹೆಚ್ಚು ಉಷ್ಣಾಂಶ ಕಂಡು ಬಂದಿದ್ದು, ಥರ್ಮಲ್ ಸ್ಕ್ರೀನಿಂಗ್ ಮಾಡುವ ವೇಳೆ ಹೆಚ್ಚು ಉಷ್ಣಾಂಶ ಇರುವುದು ಪತ್ತೆಯಾಗಿದೆ. ಪರೀಕ್ಷೆಗೆ ತಡವಾಗುತ್ತದೆ ಎಂಬ ತವಕದಿಂದ ಓಡಿಬಂದಿದ್ದಾನೆ. ಈ ವೇಳೆ ಹೈಟೆಂಪ್ರೆಚರ್ ತೋರಿಸಿದೆ ಎನ್ನಲಾಗುತ್ತಿದೆ. ಇನ್ನು ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಕಂಟೈನ್ಮೆಂಟ್ ಪ್ರದೇಶದ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಈ 3 ಜನರನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿದೆ. ಈ ಮೂವರು ವಿದ್ಯಾರ್ಥಿಗಳಿಗೆ ಸೋಂಕಿನ ಲಕ್ಷಣಗಳಿಲ್ಲ ಎನ್ನಲಾಗಿದೆ. + +ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ. ಜಿಲ್ಲೆಯ ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮಾಯವಾಗಿತ್ತು. ವಿದ್ಯಾರ್ಥಿಗಳು ಗುಂಪು ಗುಂಪಾಗಿ ಚರ್ಚೆಯಲ್ಲಿ ತೊಡಗಿದ್ದರು. ಮುನ್ಸಿಪಲ್ ಕಾಲೇಜ್ ಆವರಣದಲ್ಲಿ ಸೆಕ್ಷನ್ 144 ನಿಯಮ ಉಲ್ಲಂಘನೆ ಮಾಡಲಾಗಿದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜಾರಾಗಿದ್ದರೂ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುವ ದೃಶ್ಯಗಳು ಕಂಡುಬಂತು. + + + +ಪರೀಕ್ಷಾ ಕೇಂದ್ರದ ಬಳಿ ಹೇಳೋರು, ಕೆಳೋರು ಯಾರೂ ಇಲ್ಲದಂತಾಗಿತ್ತು. ಜಿಲ್ಲೆಯ ಗದಗ ರೋಣ, ಗಜೇಂದ್ರಗಡ, ಮುಂಡರಗಿ ಪಟ್ಟಣದಲ್ಲೂ ಇದೇ ರೀತಿಯ ಪರಿಸ್ಥಿತಿ ಇತ್ತು. ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 11,081 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಬೇರೆ ಜಿಲ್ಲೆಗಳಿಂದ ಬಂದ 541 ವಿದ್ಯಾರ್ಥಿಗಳು ಹಾಗೂ ಹೊರ ರಾಜ್ಯದಿಂದ ಬಂದ ಓರ್ವ ವಿದ್ಯಾರ್ಥಿ ಪರೀಕ್ಷೆ ಬರೆಯುತ್ತಿದ್ದಾರೆ. + + + diff --git a/PublicTV_World/001ffbf3.txt b/PublicTV_World/001ffbf3.txt new file mode 100644 index 0000000000000000000000000000000000000000..f11d168eb3748fed4df91d82bda83d616e777ea4 --- /dev/null +++ b/PublicTV_World/001ffbf3.txt @@ -0,0 +1,10 @@ +ಬೆಳಗಾವಿ/ಚಿಕ್ಕೋಡಿ:ಮೇ 19ರಂದು ಹಸೆಮಣೆ ಏರಬೇಕಿದ್ದ ಚಿಕ್ಕೋಡಿ ಪೊಲೀಸ್ ಠಾಣೆಯ ಪೇದೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. + +28 ವರ್ಷದ ರಾಮ್ ನಾಯಿಕ್ ಅಪಘಾತದಲ್ಲಿ ಮೃತ ಪೇದೆ. ಇಂದು ಕೆಲಸ ಮುಗಿಸಿ ಗೋಕಾಕ್ ತಾಲೂಕಿನ ಸ್ವಗ್ರಾಮ ಪಾಮಲದಿನ್ನಿಗೆ ಬೈಕಿನಲ್ಲಿ ಹೊರಟಿದ್ದರು. ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಬಳಿಯ ಬೆಳಗಲಿ ಕ್ರಾಸ್ ನಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಾಮ್ ನಾಯಿಕ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ. + + + +ಮೃತ ಪೇದೆಯ ಮದುವೆ ಇದೇ ಮೇ 19ರಂದು ನಿಗದಿಯಾಗಿತ್ತು. ಸದ್ಯ ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಚಿಕ್ಕೋಡಿಯ ಸರ್ಕಾರ ಆಸ್ಪತ್ರೆಯಲ್ಲಿರಿಸಲಾಗಿದೆ. ಘಟನೆ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. + + + diff --git a/PublicTV_World/002063a1.txt b/PublicTV_World/002063a1.txt new file mode 100644 index 0000000000000000000000000000000000000000..2e57325adccc2e63542d36941abeab4dce1bdd8e --- /dev/null +++ b/PublicTV_World/002063a1.txt @@ -0,0 +1,18 @@ +ಬೆಂಗಳೂರು:ನಟ ದುನಿಯಾ ವಿಜಯ್ ಅವರ ತಾಯಿ ಇಂದು ನಿಧನರಾಗಿದ್ದಾರೆ. + +ಕಳೆದ ಕೆಲವು ದಿನಗಳಿಂದ ವಿಜಯ್ ತಾಯಿ ನಾರಾಯಣಮ್ಮ ಅವರು ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದಿನ ಕಳೆಯುತ್ತಿದ್ದಂತೆಯೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ. + + + +ಈ ಕುರಿತು ಸ್ವತಃ ನಟನೇ ತನ್ನ ತಾಯಿ ಜೊತೆಗಿನ ಫೋಟೋ ಹಾಕಿ ‘ಮತ್ತೆ ಹುಟ್ಟಿ ಬಾ ಅಮ್ಮ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ನಾರಾಯಣಮ್ಮ ಅವರ  ಅಂತಿಮ ವಿಧಿವಿಧಾನ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದು,  ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ. + +ಕೆಲ ದಿನಗಳ ಹಿಂದಷ್ಟೇ ಕೋವಿಡ್ ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಗಂಭೀರವಾಗಿದ್ದು, ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. + + + +ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನ ಆಸೆ. ದಿನಂಪ್ರತಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಆದರೆ ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ ಎಂದು ದುನಿಯಾ ವಿಜಯ್ ಈ ಹಿಂದೆ ಹೇಳಿದ್ದರು. + + + + + diff --git a/PublicTV_World/0020d6d8.txt b/PublicTV_World/0020d6d8.txt new file mode 100644 index 0000000000000000000000000000000000000000..8eaffd09683d64d626f4a9b420bea6e80916a093 --- /dev/null +++ b/PublicTV_World/0020d6d8.txt @@ -0,0 +1,18 @@ +ಕಾರವಾರ:ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಇಂದು ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಭೇಟಿ ನೀಡಿದರು. ನೌಕಾಪಡೆಯ ಮುಖ್ಯಸ್ಥ, ಅಡ್ಮಿರಲ್ ಕರಂಬೀರ್ ಸಿಂಗ್‍ರೊಂದಿಗೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್‍ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್‍ಗೆ ಆಗಮಿಸುವ ವೇಳೆ ಕದಂಬ ನೌಕಾನೆಲೆಯ ಎರಡನೇಯ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. + + + +ನೌಕಾನೆಲೆಗೆ ಆಗಮಿಸಿದ ರಕ್ಷಣಾ ಸಚಿವರನ್ನ ವೆಸ್ಟರ್ನ್ ನೇವಲ್ ಕಮಾಂಡ್, ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೈಸ್ ಅಡ್ಮಿರಲ್ ಆರ್.ಹರಿ ಕುಮಾರ್ ಮತ್ತು ಕರ್ನಾಟಕ ನೌಕಾ ಪ್ರದೇಶದ ಧ್ವಜ ಅಧಿಕಾರಿ, ರಿಯರ್ ಅಡ್ಮಿರಲ್ ಮಹೇಶ್ ಸಿಂಗ್ ಸ್ವಾಗತಿಸಿದರು. ಬಳಿಕ ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್ ರಿಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು.ಇದನ್ನೂ ಓದಿ:ಕೋವಿಡ್ ವಾರ್ಡ್‍ನಲ್ಲಿ ಆಮ್ಲಜನಕ ಸೋರಿಕೆ ತಡೆಗೆ ನೌಕಾದಳದ ತಾಂತ್ರಿಕ ತಂಡ ನಿಯೋಜನೆ + + + +ಜೊತೆಗೆ ನೌಕಾ ಜಟ್ಟಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನ ಪರಿಶೀಲಿಸಿದರು. ಬಳಿಕ ನೌಕಾನೆಲೆ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾದ ವಸತಿಗೃಹಕ್ಕೆ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದು ಅಲ್ಲಿನ ಮೂಲಭೂತ ಸೌಕರ್ಯಗಳು, ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ವೀಕ್ಷಿಸಿದರು. ಈ ವೇಳೆ ನೌಕಾನೆಲೆಯ ಎರಡನೇಯ ಹಂತದ ಕಾಮಗಾರಿಯ ಕಾಂಟ್ರ್ಯಾಕ್ಟರ್, ಎಂಜಿನಿಯರ್, ಅಧಿಕಾರಿಗಳು ಹಾಗೂ ನೌಕಾನೆಲೆ ಸಿಬ್ಬಂದಿಯೊಂದಿಗೂ ರಾಜನಾಥ್ ಸಿಂಗ್ ಮಾತುಕತೆ ನಡೆಸಿದರು.ಇದನ್ನೂ ಓದಿ:ಕದಂಬ ನೌಕಾನೆಲೆಗೆ ಸಂಸದೀಯ ಸಮಿತಿ ಸದಸ್ಯರ ಭೇಟಿ + +Visited Karwar Naval Base today to review the progress of ongoing infrastructure development under ‘Project Seabird’. I am confident that after the completion of this project, the Karwar Naval Base would become Asia's largest and most efficient Naval base.pic.twitter.com/8z6QcST4QM + +— Rajnath Singh (@rajnathsingh)June 24, 2021 + + + + + diff --git a/PublicTV_World/00230bec.txt b/PublicTV_World/00230bec.txt new file mode 100644 index 0000000000000000000000000000000000000000..2b25fd9c889661d2346f05ecbf6863a98d860bf3 --- /dev/null +++ b/PublicTV_World/00230bec.txt @@ -0,0 +1,18 @@ +ಬೆಂಗಳೂರು:ಜಿಂದಾಲ್ ದಂಗಾಲ್‍ಗೆ ಸ್ಫೋಟಕ ಟ್ವಿಸ್ಟ್ ದೊರಕಿದ್ದು, ಜಿಂದಾಲ್ ಅಕ್ರಮದ ಬಗ್ಗೆ ಬಿಜೆಪಿಗೆ ಮಾಹಿತಿ ಕೊಟ್ಟವರಾರು ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಒಂದು ಕಾಲದ ಬಿಎಸ್‍ವೈ ಶತ್ರುವಾಗಿದ್ದ ವ್ಯಕ್ತಿಯೇ ಈಗ ಮಿತ್ರರಾಗಿದ್ದಾರೆ. ಅವರು ಕೊಟ್ಟ ಮಾಹಿತಿಯಿಂದಾಗಿಯೇ ಬಿಜೆಪಿ ಈ ಹೋರಾಟಕ್ಕೆ ನಿರ್ಧರಿಸಿದ್ದು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. + +ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್. ಆರ್ ಹಿರೇಮಠ್ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಜಿಂದಾಲ್‍ಗೆ ಸರ್ಕಾರಿ ಭೂಮಿ ಲೀಸ್ ಸಂಬಂಧ ಚರ್ಚೆ ನಡೆದಿದೆ. ಜಿಂದಾಲ್ ಹೋರಾಟ ಶುರುವಾಗುತ್ತಿದ್ದಂತೆಯೇ ಭೇಟಿ ನೀಡಿದ್ದು, ಆರ್‍ಎಸ್‍ಎಸ್ ನಾಯಕ ಸಂತೋಷ್ ಭೇಟಿಯ ಫೋಟೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. + + + +ಸಂತೋಷ್ ಭೇಟಿ ಮೂಲಕ ಜಿಂದಾಲ್ ಹೋರಾಟಕ್ಕೆ ಹಿರೇಮಠ್ ಪ್ರೇರಿಪಿಸಿದ್ರಾ ಅನ್ನೋ ಅನುಮಾನ ಮೂಡಿದೆ. ಈ ಮೊದಲು ಯಡಿಯೂರಪ್ಪ ಭೇಟಿಗೆ ಎಸ್‍ಆರ್ ಹಿರೇಮಠ್ ಅವರು ಪತ್ರ ಬರೆದಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಹಿರೇಮಠ್ ಅವರು ಆರ್‍ಎಸ್‍ಎಸ್ ನಾಯಕ ಸಂತೋಷ್ ಭೇಟಿ ಮಾಡಿದ್ದಾರೆ. + +ಬೇಟಿ ವೇಳೆ ಜಿಂದಾಲ್ ಅಕ್ರಮದ ಬಗ್ಗೆ ಸಂತೋಷ್ ಅವರಿಗೆ ಎಳೆಎಳೆಯಾಗಿ ಮಾಹಿತಿ ನೀಡಿದ್ದಾರೆ. ಹಿರೇಮಠ್ ಕೊಟ್ಟ ದಾಖಲೆಗಳನ್ನು ಬಿಜೆಪಿ ನಾಯಕರಿಗೆ ಸಂತೋಷ್ ತಲುಪಿಸಿದ್ದಾರೆ. ಹಿರೇಮಠ್-ಸಂತೋಷ್ ಭೇಟಿ ಬೆನ್ನಲ್ಲೇ ನಿನ್ನೆ ಆರ್‍ಎಸ್‍ಎಸ್ ಮತ್ತು ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ ಎನ್ನಲಾಗಿದೆ. + + + +ಒಟ್ಟಿನಲ್ಲಿ ಒಂದು ಕಾಲದಲ್ಲಿ ಯಡಿಯೂರಪ್ಪ ವಿರುದ್ಧ ಹೋರಾಟ ಮಾಡಿದ್ದ ಹಿರೇಮಠ್, ಇಂದು ಅವರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಅಂದು ಯಡಿಯೂರಪ್ಪ ವಿರುದ್ಧ ಸಂಗ್ರಹಿಸಿದ್ದ ದಾಖಲೆಗಳು ಇಂದು ಸಿಎಂ ವಿರುದ್ಧ ಬಳಕೆಯಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ. + + + + + diff --git a/PublicTV_World/002718ac.txt b/PublicTV_World/002718ac.txt new file mode 100644 index 0000000000000000000000000000000000000000..9f9ed68462f83f828a58d638610d5e81af95e12c --- /dev/null +++ b/PublicTV_World/002718ac.txt @@ -0,0 +1,42 @@ +ಚಾಮರಾಜನಗರ:ಅಂಬುಲೆನ್ಸ್ ಡೋರ್ ಓಪನ್ ಆಗದ ಕಾರಣ ರೋಗಿ ಹಾಗೂ ರೋಗಿಯ ಸಂಬಂಧಿಗಳು ಅರ್ಧಗಂಟೆಗೂ ಹೆಚ್ಚು ಕಾಲ ಅಂಬುಲೆನ್ಸ್ ಒಳಗೆ ಪರದಾಡಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. + +ತೆಂಗಿನಕಾಯಿ ಸುಲಿಯುವ ವೇಳೆ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಕರಿನಂಜನಪುರದಿಂದ ರೋಗಿಯನ್ನು ಅಂಬುಲೆನ್ಸ್ ಮೂಲಕ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಅರ್ಧ ಗಂಟೆಗೂ ಹೆಚ್ಚಿನ ಕಾಲ ಅಂಬುಲೆನ್ಸ್ ಡೋರ್ ಲಾಕ್ ಆಗಿತ್ತು. ಎಷ್ಟೆ ಪ್ರಯತ್ನ ಮಾಡಿದರೂ ಡೋರ್ ಓಪನ್ ಆಗಲಿಲ್ಲ. + +ಅಂಬುಲೆನ್ಸ್ ಒಳಗಿದ್ದ ರೋಗಿಯ ಹೊಟ್ಟೆ ಭಾಗದಲ್ಲಿ ಗಾಯವಾಗಿದ್ದು ತೀವ್ರವಾಗಿ ರಕ್ತ ಸ್ರಾವವಾಗುತ್ತಿತ್ತು. ಹೀಗಾಗಿ ಇದನ್ನು ಕಂಡು ರೋಗಿಯ ಸಂಬಂಧಿಕರು ಹಾಗೂ ಸ್ಥಳೀಯರು ಸುಮಾರು ಅರ್ಧ ಗಂಟೆಯಷ್ಟು ಪರಿಶ್ರಮ ಪಟ್ಟು ರಾಡ್ ಹಾಗೂ ಸುತ್ತಿಗೆ ಉಪಯೋಗಿಸಿ ಅಂಬುಲೆನ್ಸ್ ಬಾಗಿಲನ್ನು ತೆರೆದು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. + + + + + + + + + + + + + + + + + + + + + + + + + + + + + + + + + + + + + diff --git a/PublicTV_World/00289422.txt b/PublicTV_World/00289422.txt new file mode 100644 index 0000000000000000000000000000000000000000..bdfb052441d363a6f9596d3b351a361e12bd38f4 --- /dev/null +++ b/PublicTV_World/00289422.txt @@ -0,0 +1,24 @@ +ಬೆಂಗಳೂರು:ಸದಾ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ರಾಜಕೀಯ ವಿಭಾಗದ ಟೀಚರ್ ಆಗಿ ವಿದ್ಯಾರ್ಥಿಗಳಿಗೆ ಪಾಠ ಮಾಡೋ ರೀತಿ ಶಾಸಕರು, ಪಕ್ಷದ ನಾಯಕರಿಗೆ ಪಾಠ ಮಾಡಿದರು. + +ಬಿಡದಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಾರ್ಯಾಗಾರದಲ್ಲಿ ಇಂದು ಪಕ್ಷ ಸಂಘಟನೆ ಕುರಿತು ಶಾಸಕರು ಮತ್ತು ನಾಯಕರಿಗೆ ಮನವಿ ಮಾಡಿಕೊಡಲು ಟೀಚರ್ ಆಗಿದ್ದರು. ಪವರ್ ಪಾಯಿಂಟ್ ಪ್ರೆಸಂಟೇಷನ್ ಮೂಲಕ ಪಕ್ಷದ 2023 ಚುನಾವಣೆಯ ರೋಡ್ ಮ್ಯಾಪ್ ತೆರೆದಿಟ್ಟರು. + + + +ದೇಶದಲ್ಲಿ ಪ್ರಾದೇಶಿಕ ರಾಜಕಾರಣಕ್ಕೆ ಹೆಚ್ಚು ಬಲವಿದೆ. ಅದರ ಮೂಲ ಬೇರುಗಳು ನಮ್ಮ ರಾಜ್ಯದಲ್ಲೇ ಇವೆ. ಜೆಡಿಎಸ್ ಈ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ಪೋಷಿಸಲಿದೆ ಎಂದು ಹೆಚ್‍ಡಿಕೆ ಎಲ್ಲಾ ಮುಖಂಡರಿಗೆ ಉದಾಹರಣೆಗಳ ಮುಖೇನ ವಿವರಿಸಿದರು. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಸಂಸ್ಕೃತಿ ಇರೋದಿಲ್ಲ. ಕನ್ನಡಿಗರ ಕೈಯ್ಯಲ್ಲಿಯೇ ಅಧಿಕಾರ ಇರುತ್ತದೆ. ಪ್ರತಿಯೊಂದಕ್ಕೂ ದೆಹಲಿ ಕಡೆ ನೋಡಬೇಕಾಗಿಲ್ಲ. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಐತಿಹಾಸಿಕ ನಿರ್ಧಾರಗಳನ್ನು ಹೈಕಮಾಂಡ್ ಹಂಗಿಲ್ಲದೆ ತೆಗೆದುಕೊಳ್ಳಬಹುದು ಅಂತ ತಿಳಿಸಿದರು.ಇದನ್ನೂ ಓದಿ:2023ರ ವಿಧಾನಸಭಾ ಚುನಾವಣೆ, ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: ಹೆಚ್‍ಡಿಕೆ + + + +ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡೋಣ. ಕಾಲಮಿತಿಯಲ್ಲಿ ಅವುಗಳ ಪರಿಹಾರಕ್ಕೆ ಭರವಸೆ ಕೊಡೋಣ. ನೀರಾವರಿ ಯೋಜನೆಗಳು ಮತ್ತು ರೈತ ಪರ ಯೋಜನೆಗಳು ನಮ್ಮ ಪಕ್ಷದ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ಜನರ ಬಳಿಗೆ ಹೋಗಬೇಕು. ಪಕ್ಷದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು. ರಾಜ್ಯದ ಐದು ನೀರಾವರಿ ಯೋಜನೆಗಳಿಗೆ ಜೀವ ತುಂಬುವುದು ನಮ್ಮ ಮಹತ್ವದ ನಿಲುವು. ಮೇಕೆದಾಟು, ಯುಕೆಪಿ, ಮಹದಾಯಿ, ಎತ್ತಿನಹೊಳೆ ಯೋಜನೆಗಳ ಕ್ಷಿಪ್ರ ಕಾರ್ಯಗತದ ಭರವಸೆಯೊಂದಿಗೆ ಮುಂದಕ್ಕೆ ಹೋಗೋಣ ಅಂತ ತಿಳಿಸಿದರು.ಇದನ್ನೂ ಓದಿ:ದತ್ತಪೀಠಕ್ಕೆ ಮೌಲ್ವಿ ನೇಮಕ ರದ್ದು + + + +ಎತ್ತಿನಹೊಳೆ ಹೆಸರು ಹೇಳಿಕೊಂಡು ಮೊದಲು 8000 ಕೋಟಿ ರೂ. DPR ಮಾಡಲಾಯಿತು. ಆಮೇಲೆ 13000 ಕೋಟಿಗೆ ಮರು DPR ಮಾಡಲಾಯಿತು. ಈಗ ಪುನಾ 24000 ಕೋಟಿ ರೂ.ಗಳಿಗೆ ಆPಖ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಜೆಡಿಎಸ್ ವಿಷನ್- ಮಿಷನ್ 2023 ಪ್ರಸ್ತುತ ಪಡಿಸಿದ ಕುಮಾರಸ್ವಾಮಿ,2023 ಕ್ಕೆ ಸ್ವಂತ ಬಲದಲ್ಲಿ 123 ಸೀಟು ಪಡೆಯುವುದು ಪಕ್ಷದ ದೊಡ್ಡ ಗುರಿ. ಈ ನಿಟ್ಟಿನಲ್ಲಿ ಪಂಚರತ್ನ ಯೋಜನೆ ಜಾರಿ ಮಾಡೋದು ನಮ್ಮ ಗುರಿ. (ಆರೋಗ್ಯ, ಶಿಕ್ಷಣ, ಕೃಷಿ, ವಸತಿ, ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಯೋಜನೆ). ಈ ಮೂಲಕ ರಾಜ್ಯದ ಆಮೂಲಾಗ್ರ ಅಭಿವೃದ್ಧಿಗೆ ಕಾಣಿಕೆ ನೀಡುವುದು ಪಕ್ಷದ ಉದ್ದೇಶವಾಗಿದೆ. ತಳ ಮಟ್ಟದಿಂದ ಅಭಿವೃದ್ಧಿ ಸಾಧನೆ ಮಾಡುವುದು ನಮ್ಮ ಪರಿಕಲ್ಪನೆ ಆಗಿದ್ದು, ಅದಕ್ಕೆ ಬೇಕಾದ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಅಂತ ತಿಳಿಸಿದರು. + + + +ಜೆಡಿಎಸ್ ಸದಸ್ಯರ ನಿಧಿ ಸ್ಥಾಪನೆ ಮಾಡುವ ಮೂಲಕ ಪ್ರಾಮಾಣಿಕ ಕಾರ್ಯಕರ್ತರ ರಕ್ಷಣೆಗೆ ನಿಲ್ಲುವುದು ನಮ್ಮ ನಿಲುವು. ಪಕ್ಷದ ಸದಸ್ಯತ್ವ ನೋಂದಣಿಯಿಂದ ಬಂದ ಹಣದಿಂದ ಕಾರ್ಯಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಆರೋಗ್ಯ ಸಮಸ್ಯೆಗೆ ಹಣ ನೀಡುವುದು. ಕಾರ್ಯಕರ್ತರು ಮೃತರಾದಾಗ ಈ ನಿಧಿಯಿಂದ ಪರಿಹಾರ ನೀಡಲಾಗುತ್ತೆ ಅಂತ ತಿಳಿಸಿದರು. + +Advertisement + + + diff --git a/PublicTV_World/002b8697.txt b/PublicTV_World/002b8697.txt new file mode 100644 index 0000000000000000000000000000000000000000..caa4047dfc2cbb54abc73b0551e16fa82eee42df --- /dev/null +++ b/PublicTV_World/002b8697.txt @@ -0,0 +1,16 @@ +ಹಾಸನ:ಜೋರು ಮಳೆಗಾಲ ಸಂದರ್ಭದಲ್ಲಿ ಯಾವುದೇ ಆಟ ಅಥವಾ ಸ್ಪರ್ಧೆ ನಡೆಯೋದು ಕಡಿಮೆ. ಆದರೆ ಹಾಸನದಲ್ಲಿ ಅದೇ ಮಳೆಯ ನಡುವೆ ರಾಜ್ಯಮಟ್ಟದ ಬೈಕ್ ರೇಸ್ ಸ್ಪರ್ಧೆ ನಡೆದಿದ್ದು, ಅಪಾರ ಮಂದಿಯ ಎದೆಯಲ್ಲಿ ಚಳಿ ಬದಲಿಗೆ ಬಿಸಿ ಹೆಚ್ಚಿಸಿತು. + +ಹಾಸನದ ಅಂಬೇಡ್ಕರ್ ಯುವ ಬ್ರಿಗೇಡ್ ಹಾಗೂ ಬಿ.ಝಡ್ ಸಂಘಟನೆ ಆಶ್ರಯದಲ್ಲಿ ಶನಿವಾರ ಕಾರ್ ರೇಸ್ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮುಂದುವರಿದು ಭಾನುವಾರ ಆಯೋಜನೆ ಮಾಡಿದ್ದ ರಾಜ್ಯಮಟ್ಟದ ಬೈಕ್ ರೇಸ್ ಸ್ಪರ್ಧೆ ನಿಜಕ್ಕೂ ಅದ್ಭುತವಾಗಿತ್ತು. + +ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ನೂರಾರು ಮಂದಿ ರೇಡರ್ ಗಳು ಬಂದಿದ್ದರು. ಭಾನುವಾರದ ರಜೆ ಮೂಡ್‍ನಲ್ಲಿ ಬಂದಿದ್ದ ಸಾವಿರಾರು ಮಂದಿ ರೇಡರ್ ಗಳ ಸಾಹಸಮಯ ಪ್ರದರ್ಶನ ನೋಡಿ ಎಂಜಾಯ್ ಮಾಡಿದ್ದಾರೆ. ಬೈಕ್ ರೇಡರ್ ಗಳ ಸ್ಪೀಡ್ ಮತ್ತು ಬ್ಯಾಲೆನ್ಸ್ ನಿಂದ ನೋಡುಗರನ್ನು ರೋಮಾಂಚನಗೊಳಿಸಿತ್ತು. ಒಬ್ಬರನ್ನು ಹಿಂದಿಕ್ಕಿ ಮತ್ತೊಬ್ಬರು ಗೆಲ್ಲಲು ನಡೆಸಿದ ಪೈಪೋಟಿ ಕ್ರೀಡಾಸಕ್ತರಿಗೆ ಹೊಸದೊಂದು ಥ್ರಿಲ್ ನೀಡಿತು. ಯುವಕರು ಮಾತ್ರವಲ್ಲದೇ ಸ್ಪರ್ಧೆ ನೋಡಲು ಆಗಮಿಸಿದ್ದ ಹಳ್ಳಿ ಜನರು ಸಖತ್ ಎಂಜಾಯ್ ಮಾಡಿದರು ಎಂದು ಪ್ರೇಕ್ಷಕರು ಹೇಳಿದ್ದಾರೆ. + + + +ವಿವಿಧೆಡೆಗಳಿಂದ ಆಗಮಿಸಿದ್ದ ರೈಡರ್ ಗಳು, ಅಂಕು-ಡೊಂಕಾದ ತಿರುವಿನ ತೇವವಾದ ಮಣ್ಣ ದಾರಿಯಲ್ಲಿ ಕೆಸರು ಹಾರಿಸುತ್ತ ಚಂಗನೆ ಹಾರಿದಂತೆ, ಬಳುಕಾಡುತ್ತಾ ಮಿಂಚಿನ ವೇಗದಲ್ಲಿ ಸಾಗಿದ ದೃಶ್ಯ ಅಬ್ಬಾಬ್ಬಾ ಎನಿಸಿತು. ಗೆದ್ದವರು ಸಖತ್ ಖುಷಿಯಿಂದ ಬೀಗಿದರು. ಈಗಾಗಲೇ ನಡೆದಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಕ್ಕೆ ಕೊರಳೊಡ್ಡಿದ್ದವರು, ತಮ್ಮ ಬಹುಮಾನಗಳ ಪಟ್ಟಿಯನ್ನು ಹಿಗ್ಗಿಸಿಕೊಂಡು ಸಂಭ್ರಮಿಸಿದರು. ಮಳೆಯಿಂದ ಟ್ರ್ಯಾಕ್ ತುಸು ಕ್ಲಿಷ್ಟಕರವಾಗಿದ್ದರೂ, ಸಾಹಸ ಪಟ್ಟು ರೈಡರ್ ಗಳು ಗುರಿಮುಟ್ಟಿ ಸಂತಸಪಟ್ಟರು. + +ಬೆಂಗಳೂರಿನ ಸೊಹೇಲ್ ಅಹಮದ್ 4 ಸ್ಟ್ರೋಕ್ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದು ಗಮನ ಸೆಳೆದಿದ್ದಾರೆ. ಸ್ಪರ್ಧೆ ಕಣ್ತುಂಬಿಕೊಳ್ಳಲು ಆಗಮಿಸಿದ್ದ ಮಹಿಳೆಯರು, ಮಕ್ಕಳು ಹಾಗೂ ಕ್ರೀಡಾ ಪ್ರೇಮಿಗಳು ಬೈಕ್ ಸವಾರರ ಮಿಂಚಿನ ಸಂಚಾರಕ್ಕೆ ಮಾರು ಹೋಗಿದ್ದು, ಕೆಲವರು ತಮ್ಮ ತಮ್ಮ ನೆಚ್ಚಿನ ರೈಡರ್ಸ್ ಗಳನ್ನು ಹುರಿದುಂಬಿಸಿ ತಾವೂ ಖುಷಿಪಟ್ಟರು. + +Advertisement + + + diff --git a/PublicTV_World/002ec927.txt b/PublicTV_World/002ec927.txt new file mode 100644 index 0000000000000000000000000000000000000000..135b79df3667aea3d075280fa3d101ece1366e51 --- /dev/null +++ b/PublicTV_World/002ec927.txt @@ -0,0 +1,22 @@ +ಬೆಂಗಳೂರು:ಮಾಜಿ ಸಚಿವರ ರಾಸಲೀಲೆ ವೀಡಿಯೋದಲ್ಲಿರುವ ಎನ್ನಲಾಗಿರುವ ಯುವತಿ ಮತ್ತೊಂದು ವೀಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ಸಂಜೆ ಲೀಕ್ ಆಗಿದ್ದ ಆಡಿಯೋ ಕ್ಲಿಪ್ ತಮ್ಮದೇ ಎಂದು ಒಪ್ಪಿಕೊಂಡಿರುವ ಯುವತಿ, ಸಹಾಯ ಕೇಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ಹೋಗಿದ್ದು ನಿಜ ಎಂದಿದ್ದಾರೆ. + + + +ಮಾರ್ಚ್ 2ರಂದು ನನ್ನ ಸಿಡಿ ರಿಲೀಸ್ ಆದಾಗ ಭಯ ಆಗಿತ್ತು. ಮಾಧ್ಯಮಗಳಲ್ಲಿ ಸುದ್ದಿ ನೋಡಿ ಆತಂಕವಾಗಿತ್ತು. ಮಾಧ್ಯಮಗಳಲ್ಲಿ ನನಗೆ ನರೇಶ್ ಒಬ್ಬರೇ ಪರಿಚಯ. ಹಾಗಾಗಿ ನರೇಶಣ್ಣನಿಗೆ ಫೋನ್ ಮಾಡಿ ಸಹಾಯ ಕೇಳಿದೆ. ಅದಕ್ಕೆ ನರೇಶ್ ಇದು ದೊಡ್ಡ ಪ್ರಕರಣ. ಇದಕ್ಕೆ ರಾಜಕೀಯ ಮುಖಂಡರ ಸಹಾಯ ಬೇಕಾಗುತ್ತೆ. ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯರನ್ನ ಸಂಪರ್ಕಿಸಿ ಸಹಾಯ ಕೇಳೋಣ ಎಂದು ನರೇಶ್ ಹೇಳಿದ್ರು. + + + +ನಾನಿರುವ ಸ್ಥಳಕ್ಕೆ ಬಂದ ನರೇಶ್ ನನ್ನನ್ನು ಪಿಕ್ ಮಾಡಿದರು. ಡಿ.ಕೆ.ಶಿವಕುಮಾರ್ ಮನೆ ಬಳಿ ಬಂದಾಗ ನನ್ನ ಕುಟುಂಬಸ್ಥರು ಪದೇ ಪದೇ ಫೋನ್ ಮಾಡುತ್ತಿದ್ದರು. ಅಮ್ಮ ಅಳುತ್ತಿದ್ದಾಗ ಸಮಾಧಾನ ಮಾಡೋಕೆ ಮುಂದಾದೆ. ಅವರು ಅಳೋದು ನೋಡಿ ನಾನು ಏನು ಮಾಡಿಲ್ಲ. ಕುಟುಂಬಸ್ಥರ ಆತಂಕ ನೋಡಿ ಭಯ ಆಗಿದ್ದರಿಂದ ಅವರ ಸಮಾಧಾನಕ್ಕೆ ಮುಂದಾಗಿ, ಡಿ.ಕೆ.ಶಿವಕುಮಾರ್ ಮನೆ ಬಳಿ ಬಂದಿದ್ದೇನೆ. ಅವರನ್ನ ಭೇಟಿಯಾಗಿ ಎಲ್ಲ ಹೇಳುತ್ತೇನೆ ಎಂದು ಹೇಳಿದೆ. ಆದ್ರೆ ನಮಗೆ ಡಿ.ಕೆ.ಶಿವಕುಮಾರ್ ಸಿಗದ ಕಾರಣ ವಾಪಸ್ ಅಲ್ಲಿಂದ ಹೊರಡಬೇಕಾಯ್ತು.ಇದನ್ನೂ ಓದಿ:ಸರ್ಕಾರವನ್ನೇ ಬೀಳಿಸಿದ್ದೀನಿ ಇದೇನು ಮಹಾ – ರಮೇಶ್ ಜಾರಕಿಹೊಳಿ + + + +ನಮ್ಮ ಅಪ್ಪ-ಅಮ್ಮ ಎಲ್ಲಿದ್ದಾರೆ ಅನ್ನೋದು ನನಗೆ ಗೊತ್ತಾಗುತ್ತಿಲ್ಲ. ಎಸ್‍ಐಟಿ ರಕ್ಷಣೆ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದ್ರೆ ಅವರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಅಪ್ಪ-ಅಮ್ಮ, ಅಜ್ಜಿ ಹಾಗೂ ತಮ್ಮಂದಿರನ್ನ ಬೆಂಗಳೂರಿಗೆ ಕರೆದುಕೊಂಡು ಬನ್ನಿ. ನನ್ನನ್ನು ಯಾರು ಅಪಹರಿಸಿಲ್ಲ, ಸುರಕ್ಷಿತವಾಗಿದ್ದೇನೆ. ಕಳೆದ 24 ದಿನಗಳಿಂದ ಏನು ಮಾಡಬೇಕು ಅನ್ನೋದು ಗೊತ್ತಾಗುತ್ತಿಲ್ಲ. ಎಸ್‍ಐಟಿ ತನಿಖೆಯಿಂದ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇದೆ.ಇದನ್ನೂ ಓದಿ:ನಾನು ಡಿ.ಕೆ.ಶಿವಕುಮಾರ್ ಮನೆ ಬಳಿಯೇ ಇದ್ದೇನೆ, ಯಾವುದೇ ಕಾರಣಕ್ಕೂ ಹೆದರಬೇಡಿ- ಯುವತಿಯ ಫೋನ್‌ ಕಾಲ್‌ ಲೀಕ್‌ + + + +ಒಂದು ದಿನದಲ್ಲಿ ಸರ್ಕಾರ ಬೀಳಿಸಿಬಲ್ಲೆ. ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ. ಅವರನ್ನ ಜೈಲಿಗೆ ಹಾಕಿಸುತ್ತೇನೆ ಎಂದು ಬಹಿರಂಗವಾಗಿಯೇ ಬೆದರಿಕೆ ಹಾಕುತ್ತಾರೆ. ಎಷ್ಟೇ ಹಣ ಖರ್ಚಾಗಲಿ ಅಂದ್ರೆ ಏನರ್ಥ ಅನ್ನೋದನ ಜನರು ಅರ್ಥ ಮಾಡಿಕೊಳ್ಳಬೇಕು. ನಾಳೆ ನನ್ನನ್ನೇ ಕೊಲ್ಲಬಹುದು ಅಥವಾ ಅಪ್ಪ-ಅಮ್ಮನ ಜೀವಕ್ಕೆ ಅಪಾಯ ಉಂಟು ಮಾಡಬಹುದು. ದಯವಿಟ್ಟು ಅಪ್ಪ-ಅಮ್ಮನ ಬೆಂಗಳೂರಿಗೆ ಕರೆ ತಂದು ರಕ್ಷಣೆ ಕೊಡಿ ಎಂದು ಯುವತಿ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ:ಡಿ.ಕೆ.ಶಿವಕುಮಾರ್ ಒಳ್ಳೆಯವರು, ರಾಜೀನಾಮೆ ನೀಡಬಾರದು: ರಮೇಶ್ ಜಾರಕಿಹೊಳಿ + + + + + diff --git a/PublicTV_World/00319a11.txt b/PublicTV_World/00319a11.txt new file mode 100644 index 0000000000000000000000000000000000000000..103c020fc4d216e09d44459160a56345c30c781d --- /dev/null +++ b/PublicTV_World/00319a11.txt @@ -0,0 +1,16 @@ +ನಿನ್ನೆಯಷ್ಟೇ ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಆಸ್ಪತ್ರೆಗೆ ದಾಖಲಾಗಿದ್ದರು. ಇದ್ದಕ್ಕಿದ್ದಂತೆಯೇ ಅಜಿತ್ ಪ್ರತಿಷ್ಠಿತ ಆಸ್ಪತ್ರೆಗೆ ಸೇರಿರುವುದು ನಾನಾ ಊಹಾಪೋಹಗಳನ್ನು ಸೃಷ್ಟಿ ಮಾಡಿತ್ತು. ನಟ ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಹೇಳಲಾಗಿತ್ತು. ಈ ಎಲ್ಲದಕ್ಕೂ ಅಜಿತ್ ಮ್ಯಾನೇಜರ್ ಸುರೇಶ್ ಚಂದ್ರ ಸ್ಪಷ್ಟನೆ ನೀಡಿದ್ದಾರೆ. ಅವರು ಸಣ್ಣದೊಂದು ಶಸ್ತ್ರ ಚಿಕಿತ್ಸೆ (Surgery) ಮಾಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. + + + +ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಅಜಿತ್ ಆಸ್ಪತ್ರೆಗೆ (Hospital) ಭೇಟಿ ನೀಡಿದ್ದರು. ಈ ವೇಳೆ ಅವರ ಕಿವಿಯ ಕೆಳಗೆ ಸಣ್ಣದಾಗಿ ಊತ ಕಾಣಿಸಿಕೊಂಡಿರುವುದು ಗಮನಕ್ಕೆ ಬಂತು. ವೈದ್ಯರ ಸಲಹೆ ಮೇರೆಗೆ ಅದಕ್ಕೆ ಚಿಕಿತ್ಸೆ ನೀಡಲಾಯಿತು. ಅರ್ಧ ಗಂಟೆಯಲ್ಲಿ ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಸಾಮಾನ್ಯ ವಾರ್ಡ್ ನಲ್ಲಿ ಸದ್ಯ ಅವರು ಇದ್ದಾರೆ. ಯಾವುದೇ ಅಪಾಯವಿಲ್ಲ ಎಂದಿದ್ದಾರೆ ಮ್ಯಾನೇಜರ್. + + + +ಮೆದುಳಿನ ಗಡ್ಡೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎನ್ನುವುದು ಶುದ್ಧ ಸುಳ್ಳು. ಅಂಥದ್ದೇನೂ ಅವರಿಗೆ ಆಗಿಲ್ಲ. ಮೂರು ತಿಂಗಳ ವಿಶ್ರಾಂತಿ ಬೇಕು ಎನ್ನುವ ವದಂತಿಯನ್ನೂ ಮ್ಯಾನೇಜರ್ ತಳ್ಳಿ ಹಾಕಿದ್ದಾರೆ. ಆದಷ್ಟು ಬೇಗ ಅಜಿತ್ ಶೂಟಿಂಗ್ ನಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಸ್ಪಷ್ಟ ಪಡಿಸಿದ್ದಾರೆ. ಅತೀ ಶೀಘ್ರದಲ್ಲೇ ಡಿಸ್ಚಾರ್ಜ್ ಕೂಡ ಆಗಲಿದ್ದಾರೆ ಎಂದಿದ್ದಾರೆ. + + + +ನಿನ್ನ ಅಜಿತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಸಾಕಷ್ಟು ವದಂತಿಗಳು ಹರಡಿದ್ದವು. ಹಾಗಾಗಿ ಅಭಿಮಾನಿಗಳು ಸಹಜವಾಗಿ ಆತಂಕಕ್ಕೆ ಒಳಗಾಗಿದ್ದರು. ಯಾವುದೇ ಕಾರಣಕ್ಕೂ ಆತಂಕ ಪಡುವಂಥದ್ದು ಏನು ಆಗಿಲ್ಲ ಅಂದಿದ್ದಾರೆ ಸುರೇಶ್ ಚಂದ್ರ. + + + diff --git a/PublicTV_World/00335b73.txt b/PublicTV_World/00335b73.txt new file mode 100644 index 0000000000000000000000000000000000000000..1da2e08dc6c25ebc8a5e429419cff070f9af29c0 --- /dev/null +++ b/PublicTV_World/00335b73.txt @@ -0,0 +1,16 @@ +ಸ್ಯಾಂಡಲ್‌ವುಡ್ ನಟ ದಿಗಂತ್ ಮಂಚಾಲೆ ಸ್ಪೈನಲ್ ಮೈನರ್ ಇಂಜುರಿ ಆಗಿದೆ ಎಂದು ದಿಗಂತ್ ತಂದೆ ತಂದೆ ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ. ಇದೀಗ ದಿಗಂತ್ ಆರೋಗ್ಯ ಸ್ಥಿತಿಯ ಕುರಿತು ಮಾಧ್ಯಮಕ್ಕೆ ದಿಗಂತ್ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. + + + +ನಟ ದಿಗಂತ್ ತಮ್ಮ ಕುಟುಂಬ ಸಮೇತ ಗೋವಾ ಪ್ರವಾಸದಲ್ಲಿದ್ದರು. ಅಂತೆಯೇ ಬೀಚ್‌ನಲ್ಲಿ ಸ್ಟಂಟ್ ಮಾಡಲು ಹೋಗಿ ಕುತ್ತಿಗೆಗೆ ಏಟು ಮಾಡಿಕೊಂಡಿದ್ದಾರೆ. ಕೂಡಲೇ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡಿರುವ ನಟನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ. ಸದ್ಯ ನಟ ಚಿಕಿತ್ಸೆ ಪಡೆಯುತ್ತಿರುವುದರ ಬಗ್ಗೆ ದಿಗಂತ್ ತಂದೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.‌ಇದನ್ನೂ ಓದಿ:ದಿಗಂತ್‌ಗೆ ಆಗಿರೋದು ಸಣ್ಣ ಗಾಯ, ಗಾಬರಿಪಡುವ ಅಗತ್ಯವಿಲ್ಲ: ಯೋಗರಾಜ್ ಭಟ್ + + + +ಡಾಕ್ಟರ್ ಹೇಳಿದ್ದಾರೆ ಏನೂ ಆಗಲ್ಲ ಅಂತ. ಒಂದೆರಡು ದಿನಗಳಲ್ಲಿ ಎದ್ದು ಓಡಾಡ್ತಾನೆ ಅಂತ ಹೇಳಿದ್ದಾರೆ. ಇನ್ಸಿಡೆಂಟ್ ಬಗ್ಗೆ ನಾನು ನೋಡಿಲ್ಲ. ಓಡಾಡುವಾಗ ಬೀಳೋದು ಸಹಜ. ಇದೀಗ ಚೆನ್ನಾಗಿ ಮಾತನಾಡ್ತಿದ್ದಾನೆ. ದಿಗಂತ್‌ನನ್ನು ಆಪರೇಷನ್ ಕರೆದುಕೊಂಡು ಹೋಗಿದ್ದಾರೆ. ಮೈನರ್ ಇಂಜುರಿ ಆಗಿರೋದ್ರಿಂದ ಈಗಲೇ ಆಪರೇಷನ್ ಮಾಡ್ತೀವಿ ಅಂತ ಕರೆದುಕೊಂಡು ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಸಮಸ್ಯೆ ಆಗಬಾರದು ಅಂತ ಈಗಲೇ ಆಪರೇಷನ್ ಮಾಡಲಿದ್ದಾರೆ. ಇನ್ನು ಡಾ.ವಿಧ್ಯಾದರ್ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ 3 ಗಂಟೆಗಳ ಕಾಲ ನಡೆಯಲಿದೆ ಅಂತಾ ದಿಗಂತ್ ತಂದೆ ಶ್ರೀ ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ. + + + + + + + diff --git a/PublicTV_World/00337c87.txt b/PublicTV_World/00337c87.txt new file mode 100644 index 0000000000000000000000000000000000000000..06d9e1fb92f1c1a65ac680ef587bdb02d87d381d --- /dev/null +++ b/PublicTV_World/00337c87.txt @@ -0,0 +1,14 @@ +ಮಂಗಳೂರು:ಮೋದಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತಿದರೆ ಪೊಲೀಸ್ ಕೇಸ್ ಹಾಕಿ ಹೆದರಿಸುವ ಪರಿಪಾಠ ಹೆಚ್ಚುತ್ತಿದ್ದು, ಇಂತಹ ಕೇಸ್ ಗಳಿಗೆ ಹೆದರಿ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದರು. + +ರೈತ ಹೋರಾಟ ಬೆಂಬಲಿಸಿ ಸಿದ್ಧಪಡಿಸಿದ್ದ ಟೂಲ್ ಕಿಟ್ ಎಡಿಟ್ ಮಾಡಿದ್ದಾಳೆ ಎಂದು ಆರೋಪಿಸಿ ದೆಹಲಿ ಪೊಲೀಸರು ಬಂಧಿಸಿದ ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನವನ್ನು ಖಂಡಿಸಿ ಡಿವೈಎಫ್‍ಐ ಹಾಗೂ ಎಸ್.ಎಫ್.ಐ ಸಂಘಟನೆಗಳು ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸರ್ವಾಧಿಕಾರಿ ನೀತಿಯನ್ನು ಅನುಸರಿಸುತ್ತಿದೆ. ಕನ್ಹಯ್ಯ ಕುಮಾರ್ ನಿಂದ ಹಿಡಿದು ದಿಶಾ ರವಿವರೆಗೆ ಈ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿ ಅನೇಕ ಬುದ್ಧಿಜೀವಿಗಳು, ವಿದ್ಯಾರ್ಥಿಗಳು, ವಿದ್ವಾಂಸರನ್ನು ಜೈಲಿಗಟ್ಟಿದೆ. ಸರ್ಕಾರದ ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಎಡಪಂಥೀಯ ಸಂಘಟನೆಗಳ ಕಾರ್ಯಕರ್ತರಾದ ನಾವುಗಳು ಬೀದಿಗಿಳಿದು ಹೋರಾಡಿ ದೇಶದ ಸಂವಿಧಾವನ್ನು ರಕ್ಷಿಸಲಿದ್ದೇವೆ ಎಂದರು. + + + +ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್‍ಐ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆಸಿ ರೋಡ್, ರಾಜ್ಯ ಗೃಹ ಇಲಾಖೆಯ ಅಥವಾ ಸ್ಥಳೀಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರದೇ ಒಕ್ಕೂಟ ವ್ಯವಸ್ಥೆಯ ಎಲ್ಲಾ ಪದ್ಧತಿಗಳಿಗೆ ತಿಲಾಂಜಲಿ ನೀಡಿ ಪರಿಸರ ಹೋರಾಗಾರ್ತಿ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಇದೊಂದು ರಾಜ್ಯದ ಪೊಲೀಸ್ ಇಲಾಖೆಗೆ ಅವಮಾನವಾಗಿದ್ದು ಇದರ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡಬೇಕಿದ್ದ ಗೃಹ ಸಚಿವರು ಸರ್ವಾಧಿಕಾರಿ ಮೋದಿಯ ಮುಂದೆ ಮೂಗನಂತಾಗಿದ್ದಾರೆ. ಸರ್ಕಾರ ಕೂಡಲೇ ದಿಶಾ ರವಿಯನ್ನು ಬಿಡುಗಡೆ ಮಾಡಬೇಕು ಮತ್ತು ದೇಶ ವಿರೋಧಿ ಕೃಷಿ ಕಾಯ್ದೆಯನ್ನು ವಾಪಸ್ ಪಡೆದು ದೇಶದ ರೈತರ ಹಿತಕಾಯಲು ಮುಂದಾಗಬೇಕೆಂದು ಅವರು ಒತ್ತಾಯಿಸಿದರು. + +ಪ್ರತಿಭಟನೆಯಲ್ಲಿ ಡಿವೈಎಫ್‍ಐ ಮಂಗಳೂರು ನಗರ ಅಧ್ಯಕ್ಷ ನವೀನ್ ಕೊಂಚಾಡಿ, ಜಿಲ್ಲಾ ನಾಯಕ ನೌಷಾದ್ ಬೆಂಗ್ರೆ, ಸುನಿಲ್ ತೇವುಲ, ವರಪ್ರಸಾದ್ ಬಜಾಲ್, ಮಹಿಳಾ ಹೋರಾಟಗಾರ್ತಿ ಪ್ರಮೀಳಾ ದೇವಾಡಿಗ, ಅಸುಂತಾ ಡಿಸೋಜಾ, ಎಸ್.ಎಫ್.ಐ ನ ವಿನೀತ್ ದೇವಾಡಿಗ, ಸಿನಾನ್ ಬೆಂಗ್ರೆ, ತಿಲಕ್ ಕುತ್ತಾರ್ , ಸಾಮಾಜಿಕ ಕಾರ್ಯಕರ್ತ ಆಲ್ವಿನ್ ಮೊದಲಾದವರು ಭಾಗವಹಿಸಿದ್ದರು. + +Advertisement + + + diff --git a/PublicTV_World/0034d360.txt b/PublicTV_World/0034d360.txt new file mode 100644 index 0000000000000000000000000000000000000000..3fa0b3fb7d636ab344e0a7ed25ba03f31762d649 --- /dev/null +++ b/PublicTV_World/0034d360.txt @@ -0,0 +1,22 @@ +ಬೆಂಗಳೂರು:ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಹದಿನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. + +ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ವಸಂತ ನಗರದ ವರ್ಚುವಲ್ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಪ್ರಕರಣದ ಗಂಭೀರತೆ, ಆರೋಪಿಗಳಿಂದ ಇನ್ನೂ ಸಾಕಷ್ಟು ಮಾಹಿತಿ ಕಲೆಹಾಕುವ ದೃಷ್ಟಿಯಿಂದ ಮೂವರನ್ನು ಹದಿನಾಲ್ಕು ದಿನಗಳ ಕಾಲ ಕಸ್ಟಡಿಗೆ ನೀಡಿ ಹತ್ತನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. + + + +ಇದೇ ವೇಳೆ ಮತ್ತೋರ್ವ ಆರೋಪಿ ಕೊರೊನಾ ಪಾಸಿಟಿವ್ ಆಗಿದೆ ಅಂತಾ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದ. ಹಾಗಾಗಿ ಆ ಆರೋಪಿಗೆ ಠಾಣೆಯಲ್ಲೇ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. + +ಇದೇ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡುವ ವೇಳೆ ಪ್ರಮುಖ ಇಬ್ಬರು ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಕಾಲಿಗೆ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದಾರೆ. ಸದ್ಯ ಯುವತಿ ಮೇಲೆ ಗ್ಯಾಂಗ್‍ರೇಪ್ ಸಂಬಂಧ ಇಬ್ಬರು ಮಹಿಳೆಯರು ಸೇರಿ ಆರು ಜನರನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ನಂತರ ಯುವತಿ ಕೇರಳದ ಸಂಬಂಧಿಕರ ಮನೆಯಲ್ಲಿ ವಾಸವಿರುವ ಮಾಹಿತಿ ಲಭ್ಯವಾಗಿದೆ. ಪೊಲೀಸರ ತಂಡ ಸಂತ್ರಸ್ತ ಯುವತಿಯ ಬಳಿ ಹೇಳಿಕೆ ಪಡೆಯಲು ಮುಂದಾಗಿದೆ. + + + +ಏನಿದು ಪ್ರಕರಣ?ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟೆಲ್ ಇರಿಸಿ ಕಾಮುಕರು ವಿಕೃತಿ ಮರೆದಿದ್ದಾರೆ. ವೀಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ವರು ಕಾಮುಕರಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ.ಇದನ್ನೂ ಓದಿ:ಬೆಂಗಳೂರು ಅತ್ಯಾಚಾರ ಪ್ರಕರಣ- ಕಾಮುಕರ ಕಾಲಿಗೆ ಗುಂಡು ಹೊಡೆದ ಪೊಲೀಸರು + +ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಬಂಧಿತ ಆರೋಪಿಗಳು. ಆರೋಪಿಗಳು ಬಾಂಗ್ಲಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಸಂತ್ರಸ್ಥೆ ಸೇರಿದಂತೆ ಆರೋಪಿಗಳು ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ನಲ್ಲಿ ವಾಸವಾಗಿದ್ದರು. ಯುವತಿಯನ್ನು ಅತ್ಯಾಚಾರಗೈದು, ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಯನ್ನು ಕಿರಾತಕರು ವೀಡಿಯೋ ಮಾಡಿದ್ದಾರೆ. ಯುವತಿಯ ಮೇಲೆ ದ್ವೇಷಕ್ಕಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. + + + +ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ಅತ್ಯಾಚಾರದ ವೀಡಿಯೋ ವೈರಲ್ ಆಗಿತ್ತು. ಅಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಅಸ್ಸಾಂ ರಾಜ್ಯದ ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ವೀಡಿಯೋದಲ್ಲಿ ಬಾಂಗ್ಲಾ ಪ್ರಜೆಗಳು ಭಾಗಿಯಾಗಿದ್ದರಿಂದ ಅಲ್ಲಿನ ಪೊಲೀಸರಿಗೂ ಮಾಹಿತಿ ರವಾನಿಸಲಾಗಿತ್ತು. ಆ ಬಳಿಕ ಬಾಂಗ್ಲಾ ಪೊಲೀಸರು ಸಂತ್ರಸ್ತೆಯ ಕುಟುಂಬಸ್ಥರನ್ನ ಪತ್ತೆ ಮಾಡಿದ್ದಾರೆ. ಆ ನಂತರ ಘಟನೆ ಬೆಂಗಳೂರಿನಲ್ಲಿ ನಡೆದಿರೋದು ಬಗ್ಗೆ ತಿಳಿದು ಬಂದಿದೆ.ಇದನ್ನೂ ಓದಿ:ಬೆಂಗ್ಳೂರಿನಲ್ಲೊಂದು ನಿರ್ಭಯಾ ಪ್ರಕರಣ – ಅತ್ಯಾಚಾರಗೈದು ಗುಪ್ತಾಂಗಕ್ಕೆ ಬಾಟಲ್ ಇರಿಸಿ ವಿಕೃತಿ! + + + diff --git a/PublicTV_World/003d44b6.txt b/PublicTV_World/003d44b6.txt new file mode 100644 index 0000000000000000000000000000000000000000..c44a2e3febc470b0ac12746037b49eaf9bebfc79 --- /dev/null +++ b/PublicTV_World/003d44b6.txt @@ -0,0 +1,16 @@ +ಯಾದಗಿರಿ:ಮುಂದಿನ ವಾರದಿಂದ ಅಕ್ಟೋಬರ್ ಎರಡನೇ ವಾರದ ವರೆಗೆ ಭೀಮಾ ನದಿಯ ನೀರಿನ ಪ್ರಮಾಣ ಜಾಸ್ತಿಯಾಗುವ ಸಂಭವಿದ್ದು, ಮತ್ತೆ ಭೀಮಾ ನದಿ ಪ್ರವಾಹ ಆತಂಕ ಶುರುವಾಗಿದೆ. ನದಿ ತೀರಕ್ಕೆ ಸಾರ್ವಜನಿಕರು ತೆರಳದಂತೆ ಮತ್ತು ಮೀನುಗಾರಿಕೆ ಮಾಡದಂತೆ ಯಾದಗಿರಿ ಡಿಸಿ ರಾಗಪ್ರಿಯಾ ಸೂಚನೆ ನೀಡಿದ್ದಾರೆ. + + + +ಈ ಬಗ್ಗೆ ಪಬ್ಲಿಕ್ ಟಿವಿಯ ಮುಖಾಂತರ ಜಿಲ್ಲೆಯ ಜನತೆ ಡಿಸಿ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಭೀಮಾ ನದಿಗೆ ಸದ್ಯ ಒಂದು ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ, 3 ರಿಂದ 4 ಲಕ್ಷ ನೀರು ಬಂದರೆ ತೊಂದರೆಯಾಗುತ್ತದೆ. ಈಗಾಗಲೇ ಸಂಬಂಧಪಟ್ಟ ತಹಶೀಲ್ದಾರರ ಸಭೆ ನಡೆಸಲಾಗಿದೆ. ನದಿ ತೀರದ ಗ್ರಾಮಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭೀಮಾ ನದಿ ತೀರದ ಜನರು ಜಿಲ್ಲಾಡಳಿತಕ್ಕೆ ಸಹಕಾರ ನೀಡಿ ಎಂದು ಮನವಿ ಮಾಡಿದ್ದಾರೆ.ಇದನ್ನೂ ಓದಿ:ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕೊಚ್ಚಿಹೋದ ಸೇತುವೆಗೆ ಡಿಸಿ, ಎಸ್ಪಿ ಭೇಟಿ, ಶೀಘ್ರ ದುರಸ್ತಿಗೆ ಆದೇಶ + + + +ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದೆ, ನಾಯ್ಕಲ್ ಸೇರಿದಂತೆ ಹಲವಾರು ಗ್ರಾಮದ ಮನೆಗಳಿಗೆ ಹಾನಿಯಾಗಿದೆ, ಯಡ್ಡಳ್ಳಿ ಸೇತುವೆ ಕೊಚ್ಚಿ ಹೋಗಿದೆ, ಈ ಬಗ್ಗೆ ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಕಾಳಜೀ ಕೇಂದ್ರಗಳನ್ನು ಓಪನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ:ಹಿಂದೂ ದೇವಸ್ಥಾನ ಟಾರ್ಗೆಟ್ ಮಾಡಿ ಧ್ವಂಸ ಮಾಡಲಾಗುತ್ತಿದೆ: ಪ್ರತಾಪ್ ಸಿಂಹ + + + +Advertisement + + + diff --git a/PublicTV_World/0042acc7.txt b/PublicTV_World/0042acc7.txt new file mode 100644 index 0000000000000000000000000000000000000000..387d3b5ca04de80abdf3a4c29d06dba58563c720 --- /dev/null +++ b/PublicTV_World/0042acc7.txt @@ -0,0 +1,16 @@ +ಬೆಂಗಳೂರು:ಕ್ರಿಕೆಟ್ ಬೆಟ್ಟಿಂಗ್ ದಂಧೆ ಹಾಗೂ ಮೀಟರ್ ಬಡ್ಡಿ ಪ್ರತ್ಯೇಕ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐದು ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂದಿದ್ದಾರೆ. + +ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಗುಡ್ಡೆ ಮಂಜ, ಗಣೇಶ್, ಗೋಪಾಲನ್ ಹಾಗೂ ವಿಧ್ಯಾದರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ದೇಶ, ವಿದೇಶದಲ್ಲಿ ನಡೆಯುವ ಅಂತಾರಾಷ್ಟ್ರೀಯ ಪಂದ್ಯಗಳಿಂದ ಹಿಡಿದು ರಣಜಿ ಪಂದ್ಯಗಳು ನಡೆಯುವಾಗಲೂ ಬೆಟ್ಟಿಂಗ್ ದಂಧೆಯನ್ನು ನಡೆಸುತ್ತಿದ್ದರು. ಅಷ್ಟೇ ಅಲ್ಲದೆ ಬೆಟ್ ಪ್ಲೇ, ಲೈನ್ ಸೇರಿದಂತೆ ಹಲವು ಆಪ್ ಗಳ ಮೂಲಕ ಬಾಲ್ ಟೂ ಬಾಲ್ ಬೆಟ್ಟಿಂಗ್ ಆಡುತ್ತಿದ್ದರು. + +ಆರೋಪಿಗಳ ಮೇಲೆ ಕಳೆದ ಮೂರು ತಿಂಗಳಿಂದ ನೀಗಾ ಇಡಲಾಗಿತ್ತು. ಬಳಿಕ ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಪರ್ಕ ಹೊಂದಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. + + + +ಮೀಟರ್ ಬಡ್ಡಿ ಆರೋಪಿ ಅರೆಸ್ಟ್:ಮೀಟರ್ ಬಡ್ಡಿ ಹೆಸರಲ್ಲಿ ಅಮಾಯಕರ ಜಮೀನುಗಳನ್ನ ಕಬಳಿಸುತ್ತಿದ್ದ ಆನೇಕಲ್ ಕೃಷ್ಣ ಎಂಬವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕಳೆದ ಹತ್ತು ವರ್ಷದಿಂದ ಪ್ರಜಾ ವಿಮೋಚನೆ ಎಂಬ ಚಳುವಳಿಯ ಅಧ್ಯಕ್ಷನಾಗಿ ಕೆಲಸ ಮಾಡಿಕೊಂಡಿದ್ದ. ಮೀಟರ್ ಬಡ್ಡಿಯನ್ನು ದಂಧೆಯಾಗಿಸಿಕೊಂಡು ಸಾಲ ಪಡೆದವರಿಂದ ಖಾಲಿ ಬಾಂಡ್‍ಗಳ ಮೇಲೆ ಸಹಿ ಹಾಕಿಸಿಕೊಳ್ಳುತ್ತಿದ್ದ. + +ಆರು ತಿಂಗಳಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ ಸಾಲ ಪಡೆದವರ ಆಸ್ತಿಯನ್ನು ಕೃಷ್ಣ ಕಬಳಿಸುತ್ತಿದ್ದ. ಈತನಿಂದ ಅನೇಕರು ಶೋಷಣೆಗೆ ಹಾಗೂ ವಂಚನೆಗೆ ಒಳಗಾಗಿದ್ದಾರೆ. ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿರುವ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. + +ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv ,ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ:play.google.com/publictv + + + diff --git a/PublicTV_World/0042ec44.txt b/PublicTV_World/0042ec44.txt new file mode 100644 index 0000000000000000000000000000000000000000..5a2b88c7548dd9100bab54a0e3d307d2cff18c36 --- /dev/null +++ b/PublicTV_World/0042ec44.txt @@ -0,0 +1,10 @@ +ಹಾಸನ:ಗ್ರಾಮದಲ್ಲಿ ಮತಗಟ್ಟೆ (Poll Booth) ತೆರೆಯುವಂತೆ ಒತ್ತಾಯಿಸಿ ಬೋವಿ ಕಾಲೋನಿ ಗ್ರಾಮಸ್ಥರು ಪ್ರತಿಭಟನೆ (Protest) ನಡೆಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. + +ಹಾಸನ (Hassan) ಜಿಲ್ಲೆಯ ಬೇಲೂರು (Beluru) ತಾಲೂಕಿನ ಹಳೇಬೀಡು ಹೋಬಳಿಯ ಬೋವಿ ಕಾಲೋನಿ ಗ್ರಾಮಸ್ಥರು ಬೇಲೂರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು ಗ್ರಾಮದಲ್ಲಿ 550 ಮತದಾರರಿದ್ದಾರೆ. ಮತದಾನ ಮಾಡಲು 2 ಕಿ.ಮೀ ದೂರದ ನರಸೀಪುರ ಗ್ರಾಮದಲ್ಲಿ ಮತ ಚಲಾವಣೆ ಮಾಡಬೇಕು ಎಂದರು.ಇದನ್ನೂ ಓದಿ:ಶಾಲೆಗೆ ಬಾಂಬ್ ಬೆದರಿಕೆ – ಸ್ಥಳಕ್ಕೆ ಪೊಲೀಸರ ದೌಡು + + + +ಗ್ರಾಮದಲ್ಲಿ ವಯೋವೃದ್ದರು, ಅನಾರೋಗ್ಯ ಪೀಡಿತರಿದ್ದಾರೆ. ಎರಡು ಕಿಲೋ ಮೀಟರ್ ಹೋಗಿ ಮತದಾನ ಮಾಡಲು ಕಷ್ಟವಾಗುತ್ತದೆ. ಹಾಗಾಗಿ ಬೋವಿ ಕಾಲೋನಿಯಲ್ಲಿಯೇ ಮತಗಟ್ಟೆ ತೆರೆಯಿರಿ. ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.ಇದನ್ನೂ ಓದಿ:ಚುನಾವಣಾ ಅಧಿಕಾರಿಗಳಿಂದ ರಾಜ್ಯಾದ್ಯಂತ 145 ಕೋಟಿ ರೂ. ನಗದು ಜಪ್ತಿ – ಯಾವ ಜಿಲ್ಲೆಯಲ್ಲಿ ಎಷ್ಟು ಸೀಜ್? + + + diff --git a/PublicTV_World/0044a24d.txt b/PublicTV_World/0044a24d.txt new file mode 100644 index 0000000000000000000000000000000000000000..85fe32ea8f53da1a7d3a3794a5adc0e3f7bcb847 --- /dev/null +++ b/PublicTV_World/0044a24d.txt @@ -0,0 +1,24 @@ +– ರಸ್ತೆಯಲ್ಲಿ ಬೆಂಕಿ ಹಾಕಿ ಆಕ್ರೋಶ + +ಮಂಡ್ಯ:ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Issue) ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಜೆಪಿ (BJP) ಮಂಡ್ಯದ (Mandya) ಬೆಂಗಳೂರು – ಮೈಸೂರು ಹಳೆ ಹೆದ್ದಾರಿಯಲ್ಲಿ (Bengaluru-Mysuru highway) ಹುರುಳಿ ಬಿತ್ತಿ ಪ್ರತಿಭಟನೆ ನಡೆಸಿದೆ. + +ಸಂಜಯ್ ಸರ್ಕಲ್‍ನಲ್ಲಿ ಸಂಸದೆ ಸುಮಲತಾ ಅಂಬರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸದಾನಂದಗೌಡ, ಮಾಜಿ ಸಚಿವ ಅಶ್ವತ್ಥ್ ನಾರಾಯಣ್, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇನ್ನಿತರ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ.ಇದನ್ನೂ ಓದಿ:ತಮಿಳುನಾಡಿಗೆ ನೀರು ಬಿಡುಗಡೆ – ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 106 ಅಡಿಗೆ ಕುಸಿತ + + + +ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್ ಗೌಡ, ರಾಜ್ಯ ಸರ್ಕಾರಕ್ಕೆ ನಮ್ಮ ರಾಜ್ಯದ ರೈತರ ಹಿತ ಬೇಕಾಗಿಲ್ಲ. ವಾಸ್ತವ ಸ್ಥಿತಿಯನ್ನು ಕೋರ್ಟ್‍ಗೆ ಅರ್ಥ ಮಾಡಿಸದೇ ನೀರು ಬಿಟ್ಟಿದ್ದಾರೆ. ತಮಿಳುನಾಡು ಅರ್ಜಿ ಹಾಕಿದ ತಕ್ಷಣವೇ ನೀರು ಬಿಡುವ ಅಗತ್ಯ ಏನಿತ್ತು? ಲೋಕಸಭಾ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ರೈತರ ಹಿತ ಬಲಿಕೊಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. + + + +ಪ್ರತಿಭಟನೆ ವೇಳೆ ಕಿವಿಗೆ ಹೂ ಇಟ್ಟುಕೊಂಡು, ಬಾಯಿ ಬಡಿದುಕೊಂಡು ತಮಿಳಿನಾಡಿಗೆ ನೀರು ಹರಿಸುವುದನ್ನು ನಿಲ್ಲುಸುವಂತೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇದೇ ವೇಳೆ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಸ್ತೆ ಮಧ್ಯೆ ಬೆಂಕಿ ಹಾಕಿ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ. + + + +ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಜಯ್ ಸರ್ಕಲ್‍ನಲ್ಲಿ 4 ಡಿಎಆರ್ ತುಕಡಿ ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ವೇಳೆ ಯಾವುದೇ ಅವಘಡಗಳು ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಮಂಡ್ಯದಲ್ಲಿ ಕಾವೇರಿದ ಹಿನ್ನೆಲೆಯಲ್ಲಿ ಐಜಿ ಬೋರಲಿಂಗಯ್ಯ ಬೇಟಿ ನೀಡಿ ಪೊಲೀಸ್ ಬಂದೋಬಸ್ತ್ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ:ಚಂದ್ರಯಾನ-3: ನೆಹರೂ ತಾರಾಲಯದಲ್ಲಿ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯೋ ದೃಶ್ಯ ನೇರಪ್ರಸಾರ + +Web StoriesActress Jyothi Rai New Photo Shootಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳುಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! + + + + + diff --git a/PublicTV_World/00458d7e.txt b/PublicTV_World/00458d7e.txt new file mode 100644 index 0000000000000000000000000000000000000000..7ed8b03f2bfd0585ad553b0d591a11b9679b5ba4 --- /dev/null +++ b/PublicTV_World/00458d7e.txt @@ -0,0 +1,18 @@ +ದಾವಣಗೆರೆ:ಮಾಜಿ ಸಚಿವರ ಸಿಡಿ ಪ್ರಕರಣದಲ್ಲಿ ನೈತಿಕತೆ ಬಗ್ಗೆ ಹೆಚ್ಚು ಆದ್ಯತೆ ಕೊಡಬೇಕಾಗುತ್ತದೆ. ನಾನು ಈ ಪ್ರಕರಣಕ್ಕೆ ಉತ್ತರಿಸಿದರೂ ಒಂದು ಮಾತು ಬರುತ್ತದೆ, ಉತ್ತರಿಸುತ್ತಿದ್ದರೂ ಒಂದು ಮಾತು ಬರುತ್ತದೆ. ನನ್ನದು ಅಂತಹ ಯಾವುದೇ ಸಿಡಿಗಳು ಇಲ್ಲ ಎಂದು ಸಚಿವ ಮಾಧುಸ್ವಾಮಿ ನಗೆ ಚಟಾಕಿ ಹಾರಿಸಿದರು. + + + +ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಪಂಚಮಸಾಲಿ ಗುರುಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವರ ವಿಚಾರದಲ್ಲಿ ತಪ್ಪು ಸರಿ ಎಂಬುದನ್ನ ಕೋರ್ಟ್ ಹೇಳುತ್ತದೆ. ಆದರೆ ಅಷ್ಟರಲ್ಲಿ ಅವರ ತೇಜೋವಧೆ ಆಗಿ ಹೋಗಿರುತ್ತದೆ. ಈ ಕಾರಣಕ್ಕಾಗಿಯೇ ಕೆಲ ಸಚಿವರು ಕೋರ್ಟ್ ಮೊರೆ ಹೋಗಿ ಮಾಧ್ಯಮಗಳಲ್ಲಿ ಪ್ರಸಾರ ಆಗದಂತೆ ತಡೆ ತರುತ್ತಿದ್ದಾರೆ ಎಂದರು. + + + +ತೇಜೋವಧೆ ತಡೆಯಲು ಇಂತಹ ಪ್ರಯತ್ನ ನಡೆದಿದೆ. ಮಾಜಿ ಸಚಿವರ ವಿಚಾರದಲ್ಲಿ ಸಂತ್ರಸ್ತೆ ಬಂದು ದೂರು ನೀಡಿಲ್ಲ ಎಂಬುದು ಚರ್ಚೆ ಆಗುತ್ತದೆ. ಯಾವುದೇ ಆರೋಪ ಇದ್ದರೆ ಅದರ ಬಗ್ಗೆ ಬೇಕಾದವರು ದೂರು ಸಲ್ಲಿಸಬಹುದು ಎಂದು ಈ ಹಿಂದೆ ಸುಪ್ರೀಂಕೋರ್ಟ್ ತೀರ್ಪು ಬಂದಿದೆ. ಅದನ್ನ ಬಳಕೆ ಮಾಡಿಕೊಂಡು ಮೂರನೇ ವ್ಯಕ್ತಿಗಳು ದೂರು ನೀಡುತ್ತಿದ್ದಾರೆ. ಇಲ್ಲವಾದ್ರೆ ಪ್ರಕರಣಕ್ಕೆ ಸಂಬಂಧಿಸಿವರು ಮಾತ್ರ ದೂರು ನೀಡಬೇಕು ಎಂದು ಹೇಳಿದರು. + + + +25ಕ್ಕೂ ಹೆಚ್ಚು ಸಚಿವರು ಕೋರ್ಟ್ ಮೊರೆ ಹೋಗುತ್ತಿದ್ದಾರೆ ಎಂಬ ವಿಚಾರದ ಕುರಿತು ನನಗೆ ಗೊತ್ತಿಲ್ಲ ಎಂದು ಮಾಧುಸ್ವಾಮಿ ತಿಳಿಸಿದರು. + +Advertisement + + + diff --git a/PublicTV_World/00482b04.txt b/PublicTV_World/00482b04.txt new file mode 100644 index 0000000000000000000000000000000000000000..9caf5efd82a952a9b524ca763ab852e74f0ba536 --- /dev/null +++ b/PublicTV_World/00482b04.txt @@ -0,0 +1,18 @@ +ಬಿಗ್ ಬಾಸ್ 9ನೇ (Bigg Boss Season 9) ಸೀಸನ್ ಶುರುವಾಗಿದೆ. ಪ್ರವೀಣರ ಜೊತೆ ನವೀನರ ಜುಗಲ್ ಬಂದಿ ಕೂಡ ಜೋರಾಗಿದೆ. ಇದೀಗ ದೊಡ್ಮನೆಯಲ್ಲಿ ಮೊದಲ ದಿನವೇ ಜಗಳ ಶುರುವಾಗಿದ್ದು,  ಕೆಣಕಲು ಬಂದ ಪ್ರಶಾಂತ್ ಸಂಬರ್ಗಿಗೆ ಆರ್ಯವಧನ್ ಗುರೂಜಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ:2024ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಮೋದಿ, ಹೇಮಾ ಮಾಲಿನಿಗೆ ರಾಖಿ ಸಾವಂತ್ ಥ್ಯಾಂಕ್ಸ್ ಹೇಳಿದ್ದೇಕೆ? + + + +ದೊಡ್ಮನೆಯಲ್ಲಿ 18 ಜನ ಭಿನ್ನ ವ್ಯಕ್ತಿಗಳಿದ್ದಾರೆ. ಮನೆಯ ರಂಗು ಮತ್ತಷ್ಟು ಜೋರಾಗಿದೆ. ಇನ್ನೂ ಈ ವೇಳೆ ಗುರೂಜಿ ಪ್ರಶಾಂತ್ ಸಂಬರ್ಗಿ (Prashant Sambargi) ಅವರನ್ನು ಸಂಪಂಗಿ ಅಂದಿದ್ದಾರೆ. ಈ ಮಾತು ಜಗಳಕ್ಕೆ ಎಡೆ ಮಾಡಿ ಕೊಟ್ಟಿದೆ. ರೀ ಅದು ಸಂಬರ್ಗಿ ಊರಿನ ಹೆಸರು ಎಂದು ಪ್ರಶಾಂತ್ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಬಳಿಕ ನೀವು ಆರ್ಯವರ್ಧನ್ ಅಂತಾ ಯಾಕೆ  ಇಟ್ಟುಕೊಂಡ್ರಿ ನಾನು ಹೇಳಲಾ ನಿಮ್ಮ ನಿಜವಾದ ಹೆಸರು ಎಂದು ಪ್ರಶಾಂತ್, ಗುರೂಜಿಗೆ ಟಾಂಗ್ ಕೊಟ್ಟಿದ್ದಾರೆ. + + + +ಆರ್ಯವರ್ಧನ್ (Aryavardhan Guruji) ಉರುಫ್ ಏನು ಎಂದು ಪ್ರಶಾಂತ್ ಮತ್ತೆ ಕೇಳಿದ್ದಾರೆ. ಈ ಮಾತಿನ ಚಕಮಕಿ ಉರ್ಫಿಯಿಂದ ಉರಿಸೋದರವೆಗೆ ಚರ್ಚೆ ಆಗಿದೆ. ಈ ಜಗಳದ ನಡುವೆ ಇತ್ತ ಅರುಣ್ ಸಾಗರ್ (Arun Sagar) ಉರ್ಫಿಗೆ ಉರವಿದ್ದಾರೆ ಎಂದು ನಗೆಚಟಾಕಿ ಹಾರಿಸಿದ್ದಾರೆ. ಇವರು ಇನ್ಮೇಲೆ ಆರ್ಯವರ್ಧನ್ ಉರಸು ಎಂದು ಅರಣ್ ಸಾಗರ್ ಮನೆ ಮಂದಿ ಮುಂದೆ ಹೇಳಿದ್ದಾರೆ. ಅಷ್ಟಕ್ಕೇ ನಿಲ್ಲದ ಈ ಚರ್ಚೆ ಕಡೆಗೆ ಗುರೂಜಿ ಸಂಬರ್ಗಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. + + + +ನನಗೆ ಏನೇ ಹೇಳಬೇಕಿದ್ದರೂ ನೇರವಾಗಿ ಹೇಳಿ ಎಂದು ನಾನು ಸೈಲೆಂಟ್ (Silent) ಅಲ್ಲ ವೈಲೆಂಟ್.. ಫೈಯರ್ ನಾನು‌ ಎಂದು ಸಂಬರ್ಗಿಗೆ ನೇರವಾಗಿ ಟಾಂಗ್ ಕೊಟ್ಟಿದ್ದಾರೆ. ಉರಿಸಲು ಬಂದ ಪ್ರಶಾಂತ್ ಗೆ ಪಂಚಿಂಗ್ ಡೈಲಾಗ್ ಗಳ ಮೂಲಕ ಗುರೂಜಿ ಬೆವರಿಳಿಸಿದ್ದಾರೆ. + + + + + diff --git a/PublicTV_World/004f93b9.txt b/PublicTV_World/004f93b9.txt new file mode 100644 index 0000000000000000000000000000000000000000..21012ba8382ab19258b328bc2ed6c6e430e04eb0 --- /dev/null +++ b/PublicTV_World/004f93b9.txt @@ -0,0 +1,16 @@ +ಬೆಂಗಳೂರು:ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ತನಿಖೆ ಚುರುಕುಗೊಂಡಿದೆ. ಸಿಡಿಯಲ್ಲಿ ಇರುವ ಯವತಿ ಯಾರು? ಈಗ ಎಲ್ಲಿದ್ದಾಳೆ ಎಂಬುದರ ಬಗ್ಗೆ ಮಾಹಿತಿಗಳು ಲಭ್ಯವಾಗಿಲ್ಲ. ಆದರೆ ಆಕೆ ಬೆಂಗಳೂರಿನಲ್ಲಿ ನೆಲೆಸಿದ್ದ ಬಗ್ಗೆ ಹಲವು ಮಾಹಿತಿಗಳು ಈಗ ಲಭ್ಯವಾಗಿದ್ದು, ಮಾರ್ಚ್ 2ರ ರಾತ್ರಿ 9:30ಕ್ಕೆ ಮನೆಯಿಂದ ಯುವತಿ ಹೊರಕ್ಕೆ ಹೋಗಿದ್ದಾಳೆ. + +ಹೌದು. ಮಂಗಳವಾರ ಸಂಜೆ ಸ್ಫೋಟಕ ಸಿಡಿ ರಿಲೀಸ್‌ ಆಗಿತ್ತು. ಸಿಡಿ ರಿಲೀಸ್ ಆಗಿ 4 ಗಂಟೆ ಬಳಿಕ ಸಂತ್ರಸ್ತೆ ಮನೆಯಿಂದ ಹೊರಗಡೆ ಬಂದಿದ್ದಾಳೆ. ಬ್ಯಾಗ್ ಇಟ್ಟುಕೊಂಡು ಮನೆಯಿಂದ ಏಕಾಂಗಿಯಾಗಿ ಹೊರಗೆ ಬಂದ ಯುವತಿ ನಡೆದುಕೊಂಡೇ ಮುಖ್ಯ ರಸ್ತೆಗೆ ತಲುಪಿದ್ದಳು ಎಂಬ ವಿಚಾರ ಮೂಲಗಳಿಂದ ಲಭ್ಯವಾಗಿದೆ. + + + +ಮನೆಯಿಂದ ಹೊರಬಂದ ಬಳಿಕ ಮೊಬೈಲ್ ಸ್ವಿಚ್‍ಆಫ್ ಮಾಡಿ ಸಿಮ್ ಡಿಆಕ್ಟಿವೇಟ್ ಮಾಡಿದ್ದಾಳೆ. ಮೊಬೈಲ್ ಸ್ವಿಚ್‍ ಆಫ್‌ ಮಾಡಿರುವ  ವಿಚಾರ ತಾಂತ್ರಿಕ ದಾಖಲೆಗಳಿಂದ ಲಭ್ಯವಾಗಿದೆ + +ಆರಂಭದಲ್ಲಿ ಯುವತಿ ಆರ್‌ಟಿ ನಗರದ ಪಿಜಿಯಲ್ಲಿ ವಾಸವಾಗಿದ್ದಳು ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಈಗ ಆಕೆ ‌ಪಿಜಿಯಲ್ಲಿ ಇರಲಿಲ್ಲ. ಆರ್.ಟಿ.ನಗರದ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿ ಒಬ್ಬಳೇ ವಾಸವಾಗಿದ್ದ ವಿಚಾರ ಈಗ ಲಭ್ಯವಾಗಿದೆ. + +ಯುವತಿಯ ಬಗ್ಗೆ ಪಬ್ಲಿಕ್‌ ಟಿವಿ ಮನೆ ಮಾಲೀಕರನ್ನು ಮಾತನಾಡಿಸಿದೆ. ಈ ವೇಳೆ ಅವರು, ಇದು ಪಿಜಿಯಲ್ಲ. ಅವರಿಗೆ ಬಾಡಿಗೆ ನೀಡಿದ್ದೆ. ಬಾಡಿಗೆಯಲ್ಲಿ ನಾಲ್ಕು ಜನ ಸೇರಿ ಮನೆ ತೆಗೆದುಕೊಂಡಿದ್ದಾರೆ. 2018ರಿಂದ ಅವರು ಇಲ್ಲಿ ನೆಲೆಸಿದ್ದರು. ರೂಮಿನಲ್ಲ ಆಕೆ ಒಬ್ಬಳೇ ಇದ್ದಳು. ಸೋಮವಾರ ಇಲ್ಲಿಂದ ತೆರಳಿದ್ದಾಳೆ ಎಂದು ತಿಳಿಸಿದ್ದಾರೆ. + + + + + diff --git a/PublicTV_World/0050684a.txt b/PublicTV_World/0050684a.txt new file mode 100644 index 0000000000000000000000000000000000000000..df871e2186ef06b1306ba0292bf1b958408bce18 --- /dev/null +++ b/PublicTV_World/0050684a.txt @@ -0,0 +1,14 @@ +ಬೀದರ್:ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ವಿಕ್ರಂ ಸಿಂಹರನ್ನು ಬಂಧಿಸಿರುವುದು ಕಾನೂನಿನ ವಿರುದ್ಧವಾಗಿದೆ. ಎಫ್‍ಐಆರ್‍ನಲ್ಲಿ ಹೆಸರಿಲ್ಲದಿದ್ದರೂ ಅವರನ್ನು ಬಂಧಿಸಲಾಗಿದ್ದು, ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಅವರು ಆರೋಪಿಸಿದ್ದಾರೆ. + +ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಕೆಟ್ಟ ಹೆಸರು ತರಲು ಹೀಗೆ ಮಾಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯನವರ ಕುತಂತ್ರವಾಗಿದೆ. ಈ ರೀತಿ ಕುತಂತ್ರ ಮಾಡಿದರೂ ಸಹ ಪ್ರತಾಪ್ ಸಿಂಹ ಅವರನ್ನು ಅಲ್ಲಿಯ ಜನ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದಿದ್ದಾರೆ.ಇದನ್ನೂ ಓದಿ:ನಮ್ಮನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ: ವಿಕ್ರಂ ಸಿಂಹ + + + +ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸರು ಯಾರ ಮೂಗಿನ ಅಳತೆ ಮೇಲೆ ಕೆಲಸ ಮಾಡುತ್ತಿರುವುದು ಗೊತ್ತಿದೆ. ಇದು ಸರಿಯಾದ ನಡೆಯಲ್ಲ. ಪ್ರತಾಪ್ ಸಿಂಹ ಅವರೇ ನೀವು ಎದೆಗುಂದುವುದು ಬೇಡ, ಸತ್ಯಕ್ಕೆ ಜಯವಾಗಲಿದೆ ಎಂದಿದ್ದಾರೆ. + + + +ಕಾನೂನು ಎಲ್ಲರಿಗೂ ಒಂದೇ ಎನ್ನುವುದು ದೇಶದ ಜನರಿಗೆ ಗೊತ್ತಿದೆ, ನಿಮ್ಮ ಕ್ಷೇತ್ರದಲ್ಲಿ ದಲಿತರ ಮೇಲೆ ಹಾಗೂ ಸಾಮಾನ್ಯರಿಗೆ ಎಷ್ಟು ದೌರ್ಜನ್ಯವಾಗುತ್ತಿದೆ ಗೊತ್ತಾ ಎಂದು ಅವರು ಪ್ರಶ್ನಿಸಿದ್ದಾರೆ.ಇದನ್ನೂ ಓದಿ:ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ + + + diff --git a/PublicTV_World/0054782e.txt b/PublicTV_World/0054782e.txt new file mode 100644 index 0000000000000000000000000000000000000000..7bbb6d5d2e381961c6145097df1cc22af61c4ee2 --- /dev/null +++ b/PublicTV_World/0054782e.txt @@ -0,0 +1,14 @@ +ಚಾಮರಾಜನಗರ:ಇಂದು ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಾಮರಾಜನಗರದಲ್ಲಿ 15 ಮಂದಿ ಬಂಧಿಸಲಾಗಿದೆ. + +ಬೆಳಗ್ಗೆ 10:30ಕ್ಕೆ ಅಯೋಧ್ಯೆ ತೀರ್ಪು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಹಾಗೆಯೇ ರಾಜ್ಯದಲ್ಲಿಯೂ ನಿಗಾ ಇಡಲಾಗಿದ್ದು, ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚೆತ್ತಿರುವ ಚಾಮರಾಜನಗರ ಟೌನ್ ಪೋಲಿಸರು, ಮುಂಜಾಗ್ರತಾ ಕ್ರಮವಾಗಿ 15 ಮಂದಿ ಕಮ್ಯೂನಲ್ ಗೂಂಡಾಗಳನ್ನು ಬಂಧಿಸಿದ್ದಾರೆ. + + + +ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕೇಂದ್ರದಲ್ಲಿ ಪೊಲೀಸ್ ಬಲ ಪ್ರದರ್ಶನ ನಡೆಯಲಿದೆ. ಚಾಮರಾಜನಗರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. + +ಎಸ್ಪಿ, ಎಎಸ್ಪಿ, ಇಬ್ಬರು ಡಿವೈಎಸ್ಪಿ ಸೇರಿದಂತೆ 2000 ಪೊಲೀಸರಿಂದ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. + + + + + diff --git a/PublicTV_World/0055cf03.txt b/PublicTV_World/0055cf03.txt new file mode 100644 index 0000000000000000000000000000000000000000..f769ebc4c04064dceeea3ba432ed4c8d1f2dad20 --- /dev/null +++ b/PublicTV_World/0055cf03.txt @@ -0,0 +1,14 @@ +ಜ್ಯೂನಿಯರ್ ಎನ್.ಟಿ.ಆರ್ ಸಹೋದರ ನಂದಮೂರಿ ಕಲ್ಯಾಣ್ ರಾಮ್ ಹುಟ್ಟುಹಬ್ಬಕ್ಕೆ (Birthday) ಸಾಲು ಸಾಲು ಉಡುಗೊರೆಗಳು ಸಿಕ್ಕಿದೆ. ಒಂದು ಕಡೆ ಡೆವಿಲ್ ಸಿನಿಮಾದ ಗ್ಲಿಂಪ್ಸ್, ಮತ್ತೊಂದು ಕಡೆ ಕಲ್ಯಾಣ್ ಅವರ 21ನೇ ಚಿತ್ರ ಕೂಡ ಅನೌನ್ಸ್ ಆಗಿದೆ. ಅಶೋಕ ಕ್ರಿಯೇಷನ್ ಹಾಗೂ ಎನ್ ಟಿಆರ್ ಆರ್ಟ್ಸ್ ಬ್ಯಾನರ್ ನಡಿ ಮೂಡಿ ಬರ್ತಿರುವ ಈ ಸಿನಿಮಾಗೆ ಅಶೋಕ್ ವರ್ಧನ್ ಮುಪ್ಪಾ ಮತ್ತು ಸುನಿಲ್ ಬಲುಸು (Sunil Balusu) ಅವರು ಬಂಡವಾಳ ಹೂಡಿದ್ದಾರೆ. ಪ್ರದೀಪ್ ಚಿಲುಕುರಿ (Pradeep Chilukuri) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. + + + +ನಂದಮೂರಿ ಕಲ್ಯಾಣ್ ರಾಮ್ (Nandamuri Kalyan Ram)  ಸಿನಿಮಾ ಕರಿಯರ್ ನಲ್ಲಿ ಅತಿ ದೊಡ್ಡ ಬಜೆಟ್ ಚಿತ್ರ ಇದಾಗಿದೆ. ಔಟ್-ಅಂಡ್-ಔಟ್ ಆಕ್ಷನ್ ಎಂಟರ್‌ಟೈನರ್ ಕಥಾಹಂದರ ಚಿತ್ರದಲ್ಲಿ ಕಲ್ಯಾಣ್ ರಾಮ್ ಹಿಂದೆಂದೂ ಕಾಣದ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹರಿಕೃಷ್ಣ ಭಂಡಾರಿ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದಾರೆ. ಇನ್ನುಳಿದ ತಾರಾಗಣ ಮತ್ತು ತಾಂತ್ರಿಕ ಬಳಗವನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದಿದ್ದಾರೆ ನಿರ್ದೇಶಕರು. + + + +ಈ ಹಿಂದೆ ಎಟಿಆರ್ ಆರ್ಟ್ಸ್ ಬ್ಯಾನರ್ ನಡಿ ಕಲ್ಯಾಣ್ ರಾಮ್ ನಟಿಸಿದ್ದ ಬಿಂಬಿಸಾರ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಇದೇ ಬ್ಯಾನರ್ ನಡಿ ಯಂಗ್ ಟೈಗರ್ ಎನ್.ಟಿ.ಆರ್ ಹಾಗೂ ಕೊರಟಲಾ ಶಿವ ನಟನೆಯ ದೇವರ ಸಿನಿಮಾ ತಯಾರಾಗುತ್ತಿದ್ದು, ಪ್ರಶಾಂತ್ ನೀಲ್ ಹಾಗೂ ತಾರಕ್ ಚಿತ್ರ ಕೂಡ ಎನ್ ಟಿಆರ್ ಬ್ಯಾನರ್ ನಲ್ಲೇ ಮುಂದೊಂದು ದಿನ ಮೂಡಿ ಬರಲಿದೆ. + +Web StoriesActress Jyothi Rai New Photo Shootಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳುಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! + + + diff --git a/PublicTV_World/0056adb5.txt b/PublicTV_World/0056adb5.txt new file mode 100644 index 0000000000000000000000000000000000000000..ff4176f537a5887fbd5e99bc48ab05ff3ba01614 --- /dev/null +++ b/PublicTV_World/0056adb5.txt @@ -0,0 +1,10 @@ +ಚಾಮರಾಜನಗರ:ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರಿಂದಾಗಿ ಜಿಲ್ಲೆಯ ಜನ ಭಯಭೀತರಾಗಿದ್ದಾರೆ. ಹೀಗಾಗಿ ಬಸ್ ತಡೆದು ಪತಿಭಟನೆ ನಡೆಸಿದ್ದು, ನಮ್ಮೂರಿಗೆ ಯಾರೂ ಬರುವುದು ಬೇಡ, ಬಸ್ ನಮಗೆ ಅವಶ್ಯವೇ ಇಲ್ಲ ಮೊದಲು ಬಸ್ ಸಂಚಾರ ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. + +ಬಿಳಿಗಿರಿ ರಂಗನಾಥ ಬೆಟ್ಟದ ಹೊಸಪೋಡು ಬಳಿ ಘಟನೆ ನಡೆದಿದ್ದು, ಕೊರೊನಾ ಆತಂಕ ಹಿನ್ನೆಲೆ ಗ್ರಾಮಕ್ಕೆ ಬಸ್ ಬರದಂತೆ ಸೋಲಿಗರು ರಸ್ತೆ ತಡೆ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಬಿಳಿಗಿರಿ ರಂಗನಾಥನ ಸನ್ನಿಧಿಗೆ ಯಳಂದೂರಿನಿಂದ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಇದೀಗ ಬಸ್ ಸಂಚಾರಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. + + + +ನಾವು ಕಳೆದ ಮೂರ್ನಾಲ್ಕು ದಿನಗಳಿಂದ ಮನವಿ ಮಾಡುತ್ತಿದ್ದೇವೆ. ನಮ್ಮೂರಿಗೆ ಬಸ್ ಬಿಡಬೇಡಿ, ನಮಗೆ ಬಸ್ ಅವಶ್ಯವಿಲ್ಲ ಎಂದು ಸಾರಿಗೆ ಅಧಿಕಾರಿಗಳಿಗೆ ಹೇಳಿದ್ದೇವೆ ಆದರೂ ಬಸ್ ಬಿಡಲಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಕೊರೊನಾ ಭಯ ಕಾಡುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇಂದು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರವಾಸಿಗರಿಗೆ, ಭಕ್ತರಿಗೆ ಬಿಆರ್‍ಟಿಗೆ ನಿರ್ಬಂಧ ವಿಧಿಸುವಂತೆ ಒತ್ತಾಯಿಸಿದ್ದಾರೆ. + + + diff --git a/PublicTV_World/005b604d.txt b/PublicTV_World/005b604d.txt new file mode 100644 index 0000000000000000000000000000000000000000..06f9eaeb515c4b45b748ae2acc1eb544623eb277 --- /dev/null +++ b/PublicTV_World/005b604d.txt @@ -0,0 +1,12 @@ +ತಮ್ಮದೇ ಆದ ಹೋರಾಟದ ದಿನಗಳಲ್ಲಿ ಬ್ಯುಸಿಯಾಗಿ ನಟನೆಯಿಂದ ದೂರವೇ ಉಳಿದು ಬಿಟ್ಟಿದ್ದವರು ಆ ದಿನಗಳು ಚೇತನ್. ಇದೀಗ ಅವರು ಮತ್ತೆ ನಟನೆಯತ್ತ ಮುಖ ಮಾಡಿದ್ದಾರೆ. ವಿಶೇಷವೆಂದರೆ ಇದೇ ಮೊದಲ ಬಾರಿ ಅವರು ಚಿತ್ರವೊಂದರಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. + +ರವಿಚಂದ್ರನ್ ಮತ್ತು ಚೇತನ್ ಜೊತೆಯಾಗಿ ನಟಿಸಲಿರೋ ಈ ಚಿತ್ರಕ್ಕೀಗ ಮುಹೂರ್ತವೂ ನೆರವೇರಿದೆ. ಆದರೆ ಈಗ ಇದಕ್ಕಾಗಿ ತಯಾರಿ ನಡೆಯುತ್ತಿದೆ. ಉಳಿಕೆ ತಾರಾಗಣದ ಆಯ್ಕೆ ಕಾರ್ಯವೆಲ್ಲ ಮುಗಿದ ನಂತರ ಸಂಪೂರ್ಣ ವಿವರ ಹೊರ ಬೀಳಲಿದೆ. ಈ ಚಿತ್ರದ ಮೂಲಕ ಚೇತನ್ ಸಂಪೂರ್ಣವಾಗಿ ಬೇರೆಯದ್ದೇ ರೂಪದಲ್ಲಿ ಕಾಣಿಸಿಕೊಳ್ಳಿದ್ದಾರೆಂಬುದಂತೂ ಸತ್ಯ. + + + +ಇತ್ತೀಚಿನ ದಿನಗಳಲ್ಲಿ ಚೇತನ್ ನೀಳವಾದ ಗಡ್ಡ ಮತ್ತು ಕೂದಲು ಬಿಟ್ಟ ರೂಪದಲ್ಲಿಯೇ ಕಾಣಿಸಿಕೊಂಡಿದ್ದರು. ಆದರೆ ಈ ಚಿತ್ರಕ್ಕಾಗಿ ವರ್ಷಗಳ ನಂತರ ಅವರ ಗಡ್ಡ ಮತ್ತು ಕೂದಲಿಗೆ ಕತ್ತರಿ ಬಿದ್ದು ಮತ್ತಷ್ಟು ಸ್ಟೈಲಿಶ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಪೊಂಗಲ್ ಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಫಸ್ಟ್ ಲುಕ್ ಟೀಸರ್ ಕೂಡಾ ಬಿಡುಗಡೆಯಾಗಲಿದೆಯಂತೆ. + +ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv ,ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ:play.google.com/publictv + + + diff --git a/PublicTV_World/0061dcd4.txt b/PublicTV_World/0061dcd4.txt new file mode 100644 index 0000000000000000000000000000000000000000..2035b119693b4e122a884edecc49c68065c7a3fd --- /dev/null +++ b/PublicTV_World/0061dcd4.txt @@ -0,0 +1,14 @@ +ಬೆಂಗಳೂರು:ಕುಮಾರ್ ನಿರ್ದೇಶನದ ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರ ಇದೇ ತಿಂಗಳು ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿಯೇ ಕರಿಯಪ್ಪನ ಹವಾ ಕನ್ನಡದ ಗಡಿ ದಾಟಿ ಬೇರೆ ಭಾಷೆಗಳಲ್ಲಿಯೂ ಜೋರಾಗಿದೆ. ಭಿನ್ನ ಹಾದಿಯ, ಹೊಸಾ ಅಲೆಯ ಕನ್ನಡ ಚಿತ್ರವೊಂದು ಈ ಪರಿಯಾಗಿ ಜನಪ್ರಿಯಗೊಂಡಿರೋದರ ಬಗ್ಗೆ ಎಲ್ಲರೂ ಅಚ್ಚರಿಗೊಂಡಿದ್ದಾರೆ! + +ಅಷ್ಟಕ್ಕೂ ಈ ಸಿನಿಮಾ ಟ್ರೈಲರ್ ಇಂಥಾದ್ದೊಂದು ಸಂಚಲನ ಸೃಷ್ಟಿಸಬಹುದೆಂಬ ಅಂದಾಜು ಯಾರಿಗೂ ಇರಲಿಲ್ಲ. ಆದರೆ ಬಿಡುಗಡೆಯಾಗಿ ಕ್ಷಣಗಳುರುಳುತ್ತಲೇ ಇದು ವ್ಯಾಪಕ ಮೆಚ್ಚುಗೆ ಪಡೆದುಕೊಂಡಿತ್ತು. ಲಕ್ಷ ಲಕ್ಷ ವೀವ್ಸನ್ನೂ ಪಡೆದುಕೊಂಡಿತ್ತು. ಹೀಗೆ ಕನ್ನಡದಲ್ಲಿ ಹೊಸತನ, ಕಚಗುಳಿಯಿಡೋ ಕಾಮಿಡಿಯೊಂದಿಗೆ ಕ್ರೇಜ್ ಕ್ರಿಯೇಟ್ ಮಾಡಿ ಬಾಲಿವುಡ್ ವರೆಗೂ ತಲುಪಿಕೊಂಡಿತ್ತು. + + + +ಈ ಟ್ರೈಲರನ್ನು ಬಾಲಿವುಡ್‍ನ ಖ್ಯಾತ ವಿಮರ್ಶಕ ಅನೂಪ್ ಕುಮಾರ್ ಸಿನ್ಹಾ ಮೆಚ್ಚಿಕೊಂಡಿದ್ದಾರೆ. ಮಾಮೂಲಿ ಧಾಟಿಯಾಚೆಗೆ ಭಿನ್ನ ಪ್ರಯೋಗವನ್ನ ಧ್ವನಿಸುತ್ತಿರೋ ಕೆಮಿಸ್ಟ್ರಿ ಆಫ್ ಕರಿಯಪ್ಪ ಟ್ರೈಲರ್ ತಾನು ಇತ್ತೀಚೆಗೆ ನೋಡಿರೋ ಬೆಸ್ಟ್ ಟ್ರೈಲರ್ ಅಂತ ಸಿನ್ಹಾ ಶಹಬ್ಬಾಸ್‍ಗಿರಿ ಕೊಟ್ಟಿದ್ದಾರೆ. ಯಾವ ಮುಲಾಜೂ ಇಲ್ಲದ ನಿಷ್ಠುರ ವಿಮರ್ಶೆಗೆ ಹೆಸರಾದ ಸಿನ್ಹಾ ಅವರೇ ಹೊಗಳಿರೋದರಿಂದ ಬಾಲಿವುಡ್ ಲೆವೆಲ್ಲಿನಲ್ಲಿಯೂ ಕರಿಯಪ್ಪ ಸದ್ದು ಮಾಡಿದ್ದಾನೆ. ನಾನಾ ಭಾಷೆಗಳಲ್ಲಿಯೂ ಇಂಥಾದ್ದೇ ಮೆಚ್ಚುಗೆ ಕೇಳಿ ಬರುತ್ತಿದೆ. ಈ ಕಾರಣದಿಂದಲೇ ಇದೀಗ ಕರಿಯಪ್ಪನ ಟ್ರೈಲರಿಗೆ ಮಿಲಿಯನ್ನುಗಟ್ಟಲೆ ವೀವ್ಸ್ ಸಿಕ್ಕಿದೆ. + + + +ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv ,ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ:play.google.com/publictv + + + diff --git a/PublicTV_World/00645a50.txt b/PublicTV_World/00645a50.txt new file mode 100644 index 0000000000000000000000000000000000000000..dbf995267bcdbf69df8f44e173373646ad6aa781 --- /dev/null +++ b/PublicTV_World/00645a50.txt @@ -0,0 +1,10 @@ +ಚಾಮರಾಜನಗರ:ಚೆಕ್​ಪೋಸ್ಟ್​ನಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಆರು ಜನರನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. + +ಜಿಲ್ಲೆಯ ಹೆಗ್ಗವಾಡಿ ಕ್ರಾಸ್ ಚೆಕ್‍ಪೋಸ್ಟ್ ನಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ ಹಾಗೂ ಪೂರ್ವಾನುಮತಿ ಪಡೆಯದೇ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರನ್ನು ಹಾದು ಹೋಗಲು ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಕ್ಕಡಹಳ್ಳಿಯ ಗ್ರಾ.ಪಂ. ಬಿಲ್ ಕಲೆಕ್ಟರ್ ಮಹದೇವಸ್ವಾಮಿ, ನಂಜದೇವನಪುರ ವೃತ್ತದ ಗ್ರಾಮ ಲೆಕ್ಕಿಗ ಸಂತೋಷ್ ಕುಮಾರ್, ತಮ್ಮಡಹಳ್ಳಿ ವೃತ್ತದ ಗ್ರಾಮ ಲೆಕ್ಕಿಗ ಕೆ. ಶ್ರೀಧರ್, ಮುಕ್ಕಡಹಳ್ಳಿ ಗ್ರಾಮ ಪಂಚಾಯತಿಯ ನೀರುಗಂಟಿ ನಂಜುಂಡಸ್ವಾಮಿ, ಕುಲಗಾಣ ವೃತ್ತದ ಲೆಕ್ಕಿಗ ಡಿ.ಜೆ. ಮಹೇಶ್, ಮುಕ್ಕಡಹಳ್ಳಿ ವೃತ್ತದ ಗ್ರಾಮ ಲೆಕ್ಕಿಗ ನಂದೀಶ್ ಆರು ಜನರನ್ನು ಅಮಾನತುಗೊಳಿಸಲಾಗಿದೆ. + + + +ಕೊರೊನಾ ವೈರಸ್ ತಡೆಗಾಗಿ ಹೆಗ್ಗವಾಡಿ ಕ್ರಾಸ್ ನಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಲಾಗಿತ್ತು. ಮೊದಲನೇ ಮತ್ತು ಎರಡನೇ ಪಾಳಿಯಲ್ಲಿ ಕಾರ್ಯ ನಿರ್ವಹಿಸಿದ್ದ ಆರು ಮಂದಿ ನೌಕರರು 23 ವಾಹನಗಳನ್ನು ಪರಿಶೀಲನೆ ನಡೆಸದೇ ಬಿಟ್ಟಿದ್ದರು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸರ್ಕಾರದ ಮಾರ್ಗಸೂಚಿ ಅನ್ವಯ ಜೀವನಾವಶ್ಯಕ ವಸ್ತುಗಳನ್ನು ಮಾತ್ರ ಸಾಗಿಸಲು ಅವಕಾಶವಿದೆ. ಆದರೆ ಈ ನೌಕರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾದುಹೋಗಲು ಅವಕಾಶ ಕಲ್ಪಿಸಿದ್ದರಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. + + + diff --git a/PublicTV_World/006575fd.txt b/PublicTV_World/006575fd.txt new file mode 100644 index 0000000000000000000000000000000000000000..09c92eb8626508b30337b23bc857adecb3af3697 --- /dev/null +++ b/PublicTV_World/006575fd.txt @@ -0,0 +1,22 @@ +ಮೈಸೂರು:ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಇಂದು ದಸರಾದ ಎರಡನೇ ದಿನ ಅರಮನೆ ನಗರಿಯಲ್ಲಿ ವಿವಿಧ ಕಾರ್ಯಕ್ರಮಗಳು ಜನರಿಗೆ ಮಸ್ತ್ ಮನರಂಜನೆ ನೀಡಿತು. + +ಭಾನುವಾರ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾದ ಚಾಲನೆ ಸಿಕ್ಕಿದೆ. ಇಂದು ಎರಡನೇ ದಿನದ ದಸರೆಯನ್ನು ಸ್ತ್ರೀಯರ ಕಲಾನೈಪುಣ್ಯತೆಯಾದ ರಂಗೋಲಿ ಸ್ಪರ್ಧೆಯಿಂದ ಆರಂಭಗೊಳಿಸಲಾಯಿತು. ಅಂಬಾ ವಿಲಾಸ ಅರಮನೆಯ ಮುಂಭಾಗ ಆಯೋಜಿಸಿದ್ದ, ದಸರಾ ರಂಗೋಲಿ ಸ್ಪರ್ಧೆಗೆ ಶಾಸಕ ಆರ್. ರಾಮದಾಸ್ ಚಾಲನೆ ನೀಡಿದರು. ಇಲ್ಲಿ ಮಹಿಳೆಯರು ಚಿತ್ತಾರಗಳನ್ನು ತುಂಬಿದ ರಂಗೋಲಿಗಳನ್ನು ಬಿಡಿಸುವ ಮೂಲಕ ಅರಮನೆಯ ಆವರಣವನ್ನು ವರ್ಣರಂಚಿತಗೊಳಿಸಿದರು. + + + +ಇನ್ನೊಂದೆಡೆ ಜಗನ್ಮೋಹನ ಅರಮನೆಯಲ್ಲಿ ಮಕ್ಕಳಿಗಾಗಿ ನಡೆಯುತ್ತಿರುವ ಚಿಣ್ಣರ ದಸರಾಗೆ ವಿ.ಸೋಮಣ್ಣ ಚಾಲನೆ ನೀಡಿದರು. ಮಹಿಳಾ ದಸರಾಗೆ ಬಂದರೆ ಅಲ್ಲಿ ಹಾಲಿ ಮಾಜಿ ಎಂದು ಬಿಜೆಪಿಯ ಮಹಿಳೆಯರು ಹಾಗೂ ಸಚಿವರು ಗರಂ ಆಗಿದರು. ಜೆಕೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ದಸರಾದ ಬ್ಯಾನರ್ ಅಲ್ಲಿ ಮಾಜಿ ಸಚಿವೆ ಉಮಾಶ್ರೀ ಫೋಟೋ ಇದ್ದ ಕಾರಣ ಸಚಿವ ಸೋಮಣ್ಣ ಮತ್ತು ಬಿಜೆಪಿಯ ಮಹಿಳೆಯರು ಗರಂ ಆಗಿದರು. + + + +ಒಂದು ಕಡೆ ಮೈಸೂರಿನಲ್ಲಿ ದಸರಾ ಕಾರ್ಯಕ್ರಮಗಳ ಮೂಲಕ ಮನರಂಜನೆ ದೊರೆಯುತ್ತಿದ್ರೆ, ಇನ್ನೊಂದೆಡೆ ಆಹಾರ ಮೇಳದಲ್ಲಿ ನೋಡುಗರ ಬಾಯಲ್ಲಿ ನೀರೂರಿಸುವ ಹಾಗೂ ಬಿದ್ದು ನಕ್ಕು ನಲಿಯುವ ಸ್ಪರ್ಧೆಗಳು ನಡೆದವು. ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆಹಾರ ಮೇಳದಲ್ಲಿ ಅತ್ತೆ-ಸೊಸೆ ಜೋಡಿ ಅಡುಗೆ ಮಾಡುವ ಸ್ಪರ್ಧೆ ಕಮಾಲ್ ಮಾಡಿತು. ಅತ್ತೆ-ಸೊಸೆಯರಿಬ್ಬರು ಕೂಡಿಗೊಂಡು ಅಕ್ಕಿ ರೊಟ್ಟಿ ಮತ್ತು ಎಣಗಾಯಿ ಪಲ್ಯ ಮಾಡುತ್ತಿದ್ದು, ಎಲ್ಲರ ಬಾಯಲ್ಲಿ ನೀರೂರಿಸುವಂತೆ ಇತ್ತು. + + + +ಮಹಿಳೆಯರಿಗಾಗಿಯೇ ಆಯೋಜಿಸಿದ್ದ ಇಡ್ಲಿ ತಿನ್ನುವ ಸ್ಪರ್ಧೆ ನೋಡುಗರು ನಕ್ಕು ನಲಿಯುವುದರ ಜೊತೆಗೆ ಬಾಯಿಯ ಮೇಲೆ ಬೆರಳಟ್ಟುಕೊಳ್ಳುವ ಹಾಗೆ ಮಾಡಿತು. ಈ ಸ್ಪರ್ಧೆಯಲ್ಲಿ 60 ವರ್ಷದ ಅಜ್ಜಿ ಸರೋಜಮ್ಮ ಒಂದೇ ನಿಮಿಷದಲ್ಲಿ 6 ಇಡ್ಲಿ ತಿನ್ನುವ ಮೂಲಕ ಮೊದಲ ಸ್ಥಾನ ಪಡೆದುಕೊಂಡರು. + +ದಸರಾ ಮಹೋತ್ಸವ ಮೈಸೂರಿಗೆ ವಿಶೇಷ ಮೆರಗನ್ನು ನೀಡುತ್ತಿದ್ದು, ಹಗಲಿನ ವೇಳೆ ವಿವಿಧ ಕಾರ್ಯಕ್ರಮಗಳ ಮೂಲಕ ಜನರನ್ನು ರಂಜಿಸುತ್ತಿದ್ರೆ, ರಾತ್ರಿಯ ವೇಳೆ ವಿದ್ಯುತ್ ಅಲಂಕಾರದ ಮೂಲಕ ಕೈಲಾಸವೇ ಧರೆಗಿಳಿದಂತೆ ಬಾಸವಾಗುತ್ತಿದೆ. ಈ ರಂಗು ಇನ್ನೂ ಎಂಟು ದಿನಗಳ ಕಾಲ ಮೈಸೂರನ್ನು ಗತಕಾಲಕ್ಕೆ ಕರೆದೊಯ್ಯಲಿದೆ. + + + + + diff --git a/PublicTV_World/0065c643.txt b/PublicTV_World/0065c643.txt new file mode 100644 index 0000000000000000000000000000000000000000..21cd52f6776bf371a657cb43fc9735969e27ae9e --- /dev/null +++ b/PublicTV_World/0065c643.txt @@ -0,0 +1,14 @@ +ಚಿತ್ರದುರ್ಗ:ದಾಖಲೆ ಇಲ್ಲದೆ ಚಿತ್ರದುರ್ಗದಿಂದ (Chitradurga) ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಬರೋಬ್ಬರಿ 8 ಕೋಟಿ ರೂ. ಹಣವನ್ನು (Money)  ಹೊಳಲ್ಕೆರೆ ಪೊಲೀಸರು (Holalkere Police) ಜಪ್ತಿ ಮಾಡಿದ್ದಾರೆ. + +ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಇನೋವಾ ಕಾರಿನಲ್ಲಿ ತೆರಳುತಿದ್ದ ಚಾಲಕ ಸಚಿನ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾರಿನಲ್ಲಿ ತಂಬಾಕು ಚೀಲಗಳಲ್ಲಿ ತುಂಬಲಾಗಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ. + + + +ಈ ಹಣ ಚಿತ್ರದುರ್ಗದ ಅಡಿಕೆ ವರ್ತಕರಿಗೆ ಸೇರಿದ್ದು ಎಂಬ ಅನುಮಾನವಿದ್ದು, ಖಚಿತ ಮಾಹಿತಿಗಾಗಿ ಆದಾಯ ತೆರಿಗೆ ಅಧಿಕಾರಿಗಳಿಗೆ ಈ ಮಾಹಿತಿಯನ್ನು ನೀಡಲಾಗಿದೆ. ವಿಚಾರಣೆ ಬಳಿಕ ಈ ಹಣ ಯಾರಿಗೆ ಸೇರಿದ್ದು ಹಾಗೂ ಯಾವ ಕಾರಣಕ್ಕೆ ಸಾಗಿಸಲಾಗುತ್ತಿತ್ತು ಎಂಬುದು ತಿಳಿಯಲಿದೆ ಎಂದು ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ:ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿಯ ದರ್ಶನಕ್ಕೆ ಪ್ರಾಯೋಗಿಕ ಹಾರಾಟ + + + +ಜಪ್ತಿಯಾಗಿರುವ ಭಾರೀ ಮೊತ್ತದ ಹಣ ಎಣಿಕೆ ಕಾರ್ಯವನ್ನು ಹೊಳಲ್ಕೆರೆ ಪೊಲೀಸರು ಕೈಗೊಂಡಿದ್ದಾರೆ. ಈ ಪ್ರಕರಣ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಇದನ್ನೂ ಓದಿ:ಗೆಳೆಯನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ ಹೋಗಿದ್ದ ಅಂಜು ತವರಿಗೆ ವಾಪಸ್ + + + diff --git a/PublicTV_World/0066074f.txt b/PublicTV_World/0066074f.txt new file mode 100644 index 0000000000000000000000000000000000000000..ad29d9fbc54107500277a8fbc7f53fae5c6bfbe9 --- /dev/null +++ b/PublicTV_World/0066074f.txt @@ -0,0 +1,16 @@ +ಹಾಸನ:ಮ್ಯಾಕ್ಸಿ ಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದ ಆಲೂರು ಪಟ್ಟಣದ ಕೆಇಬಿ ಸರ್ಕಲ್‍ನಲ್ಲಿ ನಡೆದಿದೆ. + +7 ವರ್ಷದ ಸಮರ್ಥ್ ಅಪಘಾತದಲ್ಲಿ ಮೃತಪಟ್ಟ ಬಾಲಕ. ಸಮರ್ಥ್ ಹಾಸನದ ಸಂಗಮೇಶ್ವರ ಬಡಾವಣೆಯ ರೂಪಾ ಎಂಬವರ ಪುತ್ರ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಸಮರ್ಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. + +ಈ ಬಗ್ಗೆ ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. + + + + + + + + + + + diff --git a/PublicTV_World/0067bf85.txt b/PublicTV_World/0067bf85.txt new file mode 100644 index 0000000000000000000000000000000000000000..837f1d0d87823784d3958b19b850560c78b0372d --- /dev/null +++ b/PublicTV_World/0067bf85.txt @@ -0,0 +1,10 @@ +ಕಾರವಾರ:ಗಾಯದ ನೋವು ತಾಳಲಾರದೆ ಕೋತಿಯೊಂದು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಂಡು ತೆರಳಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. + +ದಾಂಡೇಲಿಯ ನರ್ಸಿಂಗ್ ಹೋಂಗೆ ಬಂದ ಕೋತಿಯು ಬೆನ್ನು ಉಜ್ಜಿಕೊಳ್ಳತೊಡಗಿತ್ತು. ಆದರೆ ಕೋತಿ ಕಂಡು ಹೆದರಿದ ಸಿಬ್ಬಂದಿ ಕೋಲು ಹಿಡಿದು ಓಡಿಸಲು ಪ್ರಯತ್ನಿಸಿದರು. ಇಷ್ಟಾದರೂ ಬೆನ್ನು ಉಜ್ಜಿಕೊಳ್ಳುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಗಾಯಗೊಂಡ ಕೋತಿಗೆ ಚಿಕಿತ್ಸೆ ನೀಡಲು ಮುಂದಾದರು. + + + +ಕೋತಿಯನ್ನು ಎತ್ತಿಕೊಂಡು ಕಟ್ಟೆಯ ಮೇಲೆ ಕೂರಿಸಿ ಔಷಧಿ ಹಚ್ಚಿದರು. ಈ ವೇಳೆಯೂ ಕೋತಿ ಯಾರಿಗೂ ಏನು ಮಾಡದೇ ಸುಮ್ಮನೆ ಕುಳಿತು ಚಿಕಿತ್ಸೆಗೆ ಸ್ಪಂದಿಸಿತ್ತು. ಇದು ನೆರೆದವರ ಅಚ್ಚರಿಗೂ ಕಾರಣವಾಗಿತ್ತು. ಚಿಕಿತ್ಸೆ ಬಳಿಕ ಕೋತಿ ಅಲ್ಲಿಂದ ತೆರಳಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ. + + + diff --git a/PublicTV_World/006b0e2b.txt b/PublicTV_World/006b0e2b.txt new file mode 100644 index 0000000000000000000000000000000000000000..6b75aaf6292e658f07ed44483eb618ae6493c004 --- /dev/null +++ b/PublicTV_World/006b0e2b.txt @@ -0,0 +1,14 @@ +ಮಂಗಳೂರು: ರಸ್ತೆ ದಾಟುತಿದ್ದ ಮಹಿಳೆಗೆ (Woman) ಆಟೋ ರಿಕ್ಷಾ (Auto Rickshaw) ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ (Dakshina Kannada)  ಜಿಲ್ಲೆಯ ಮುಲ್ಕಿ (Mulki) ತಾಲೂಕಿನ ಕಿನ್ನಿಗೋಳಿಯ ರಾಮನಗರ ಬಳಿ ನಡೆದಿದೆ. + +ರಾಜರತ್ನಪುರ ನಿವಾಸಿ ಚೇತನಾ (35) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಮಹಿಳೆ ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆತರಲು ಬಂದಿದ್ದರು. ಪಿಗ್ಮಿ ಕಲೆಕ್ಷನ್ ಮುಗಿಸಿ ಚೇತನಾ ಟ್ಯೂಶನ್ ಸೆಂಟರ್‌ನತ್ತ ಬಂದಿದ್ದ ವೇಳೆ ಅಪಘಾತ ಸಂಭವಿಸಿದೆ.ಇದನ್ನೂ ಓದಿ:ಹರಿಯಾಣ ಚುನಾವಣೆ ಸ್ಪರ್ಧೆಗೆ ವಿನೇಶ್‌ ಫೋಗಟ್‌ಗೆ ಕಾಂಗ್ರೆಸ್‌ ಟಿಕೆಟ್‌ + +ಟ್ಯೂಶನ್ ಸೆಂಟರ್ ಬಳಿ ಬಂದ ಚೇತನಾ ಏಕಾಏಕಿ ರಸ್ತೆ ದಾಟಲು ಮುಂದಾಗಿದ್ದರು. ಈ ವೇಳೆ ಕಟೀಲಿನಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದ್ದು, ಘಟನೆ ನಡೆದ ತಕ್ಷಣ ಆಟೋ ಎತ್ತಿ ತಾಯಿಯನ್ನು ಮಗಳು ಮೇಲಕ್ಕೆತ್ತಿದ್ದಾಳೆ.ಇದನ್ನೂ ಓದಿ:ಗಣೇಶನಿಗೆ ಮೊದಲ ಪೂಜೆ ಯಾಕೆ? + + + +ಘಟನೆಯಲ್ಲಿ ಆಟೋ ಚಾಲಕ, ಪ್ರಯಾಣಿಕ ಸೇರಿ ಸ್ಥಳದಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.ಇದನ್ನೂ ಓದಿ:Ganesh Chaturthi | ಗಣೇಶನಿಗೆ `ಏಕದಂತ’ ಹೆಸರು ಹೇಗೆ ಬಂತು? – ಇಲ್ಲಿದೆ ಪುರಾಣದ ಕಥೆ + +Advertisement + + + diff --git a/PublicTV_World/006df185.txt b/PublicTV_World/006df185.txt new file mode 100644 index 0000000000000000000000000000000000000000..ca7fccf449b9e1e51bb1c0b25799295cc3a93b4a --- /dev/null +++ b/PublicTV_World/006df185.txt @@ -0,0 +1,22 @@ +ಮಂಡ್ಯ:ಜಿಲ್ಲೆಯ ಬಸ್ ದುರಂತ ಪ್ರಕರಣ ಮನಕಲಕುವ ಕಥೆಯೊಂದು ಹೇಳುತ್ತಿದೆ. ಪ್ರಾಣದ ಹಂಗು ತೊರೆದು ಬಸ್‍ನೊಳಗಿದ್ದವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟ ಮೊಬೈಲ್ ವಿಡಿಯೋವೊಂದು ವೈರಲ್ ಆಗುತ್ತಿದೆ. + +ನವೆಂಬರ್ 24 ರಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ನಾಲೆಗೆ ಬಸ್ ಉರುಳಿ 30 ಜನ ಮೃತಪಟ್ಟಿದ್ದರು. ಬಸ್ ಬಿದ್ದ ವಿಷಯ ತಿಳಿದು ರಕ್ಷಣೆಗೆ ಧಾವಿಸಿದ ಗ್ರಾಮಸ್ಥರ ಪ್ರಾರಂಭದ ವಿಡಿಯೋ ವೈರಲ್ ಆಗಿದೆ. + + + +ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಆಗಮಿಸುವ ಮುನ್ನವೇ ಗ್ರಾಮಸ್ಥರು ನಾಲೆ ಬಳಿ ಆಗಮಿಸಿದ್ದರು. ಬಸ್‍ನಲ್ಲಿದ್ದವರನ್ನು ಉಳಿಸಲು ಪ್ರಾಣದ ಹಂಗು ತೊರೆದು ಸ್ಥಳೀಯರು ನಾಲೆಗೆ ಧುಮುಕಿದ್ದರು. ಬಸ್‍ನಲ್ಲಿದ್ದವರನ್ನು ಮೇಲೆತ್ತಲು ಸ್ಥಳೀಯರು ಹಗ್ಗವಿಲ್ಲದೆ ತಮ್ಮ ಪಂಚೆ, ವೇಲ್, ಬಟ್ಟೆಗಳನ್ನೆ ಬಿಚ್ಚಿ ಹಗ್ಗದ ರೀತಿ ಬಳಸಿದ್ದಾರೆ. + +ನೀರಿನಲ್ಲಿ ಬಿದ್ದವರ ಪೂರ್ವಾಪರ ತಿಳಿಯದಿದ್ದರೂ ತಮ್ಮ ಮನೆಯವರನ್ನೇ ಕಳೆದುಕೊಂಡ ರೀತಿ ರಕ್ಷಣಾ ಕಾರ್ಯದಲ್ಲಿ ಗ್ರಾಮಸ್ಥರು ತೊಡಗಿದ್ದರು. ಅಯ್ಯೋ ಬನ್ರೋ ಮಾರಾಯ. ಹಗ್ಗ ಏನಾದ್ರು ತನ್ನಿ. ಪಂಚೆ ಎಸೆಯಿರಿ ಎಂದು ಕೂಗುತ್ತ ನಾಲೆಗೆ ಧುಮುಕಿ ಬಸ್‍ನೊಳಗಿದ್ದವರನ್ನು ಮೇಲೆತ್ತುತ್ತಿರುವ ವಿಡಿಯೋ ವೈರಲ್ ಆಗಿದೆ. + + + + + +ಒಬ್ಬರನ್ನು ಮೇಲೆತ್ತುತ್ತಿದ್ದಂತೆ ಅಯ್ಯೋ ಎಲ್ಲ ಸತ್ತೋಗವ್ರೇ. ಮಕ್ಕಳನ್ನಾದ್ರು ಇಸ್ಕೊಳ್ಳಿ, ಅಯ್ಯಯ್ಯಪ್ಪೋ ಎಂದು ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ. ಸತ್ತವರನ್ನು ಬದುಕಿಸಲಾಗದಿದ್ರೂ, ಬದುಕಿಸಲು ಯತ್ನಿಸಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ. + +ವೈರಲ್ ಆಗಿರೋ ವಿಡಿಯೋದಲ್ಲಿ ಗ್ರಾಮಸ್ಥರ ಮಾನವೀಯತೆ, ಬಸ್‍ನೊಳಗಿದ್ದವರನ್ನು ಮನೆ ಮಕ್ಕಳಂತೆ ರಕ್ಷಿಸಲು ಯತ್ನಿಸಿ ಮರುಗುತ್ತಿರುವುದನ್ನು ನೋಡಿ ಮಂಡ್ಯ ಜನತೆ ಭಾವುಕರಾಗುತ್ತಿದ್ದಾರೆ. ಬಸ್ ದುರಂತದಲ್ಲಿ ಓರ್ವ ಶಾಲಾ ಬಾಲಕ ರೋಹಿತ್ ಮತ್ತು ಯುವಕ ಗಿರೀಶ್ ನನ್ನು ಮಾತ್ರ ಬದುಕಿಸುವಲ್ಲಿ ಗ್ರಾಮಸ್ಥರು ಯಶಸ್ವಿಯಾಗಿದ್ದರು. + +ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv ,ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ:play.google.com/publictv + + + diff --git a/PublicTV_World/00706c05.txt b/PublicTV_World/00706c05.txt new file mode 100644 index 0000000000000000000000000000000000000000..5d3558cc6837f8c1486101bb497692ae55489c68 --- /dev/null +++ b/PublicTV_World/00706c05.txt @@ -0,0 +1,18 @@ +ಗದಗ:ಕೊರೊನಾದಿಂದ ಸಾವನ್ನಪ್ಪಿದ್ದ ವೃದ್ಧೆಯ ತಿಥಿ ಕಾರ್ಯ ಮುಗಿದ ಬಳಿಕ ಮೃತದೇಹದ ಅಂತ್ಯಕ್ರಿಯೆ ಮಾಡಿದ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದ ಮಹಾ ಎಡವಟ್ಟು ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. + +ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ 70 ವರ್ಷದ ವೃದ್ಧೆಗೆ ಪಾಶ್ವವಾಯು ಹಾಗೂ ಅನಾರೋಗ್ಯದ ಹಿನ್ನಲೆ ಜುಲೈ 15 ರಂದು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಜುಲೈ 18 ರಂದು ಕೊವಿಡ್-19 ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಎಂದು ದೃಢಪಟ್ಟ ವರದಿ ಬಂದಿದೆ. ನಂತರ ಜುಲೈ 20 ರಂದು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾಳೆ ಎಂದು ಆರೋಗ್ಯ ಇಲಾಖೆ ಕುಟುಂಬಕ್ಕೆ ಫೋನ್ ಮೂಲಕ ತಿಳಿಸಿದ್ದರು. + + + +ತಾಯಿ ಸಾವನ್ನಪ್ಪಿದ ಎಂದು ತಿಳಿಸಿದ ಆರೋಗ್ಯ ಇಲಾಖೆ ಅಂತ್ಯಕ್ರಿಯೆಯನ್ನು ಕೋವಿಡ್ ನಿಯಮಗಳ ಅನ್ವಯ ನೆರವೇರಿಸುತ್ತೇವೆ ಎಂದು ಕುಟುಂಬಸ್ಥರಿಗೆ ತಿಳಿಸಿತ್ತು. ಇದರಿಂದ ಮೃತ ವೃದ್ಧೆಯ ಮಗ ಪರಸಪ್ಪ ಗಡ್ಡದ ಅವರು ಜುಲೈ 28 ರಂದು 9ನೇ ದಿನದ ತಿಥಿ ಕಾರ್ಯ ಮಾಡಿ ಮುಗಿಸಿದ್ದರು. ಆದರೆ ಇದೆಲ್ಲಾ ಮುಗಿದ ಬಳಿಕ ಮತ್ತೆ ಜುಲೈ 30 ರಂದು ಮತ್ತೆ ಗದಗ ಜಿಮ್ಸ್ ಆಸ್ಪತ್ರೆಯಿಂದ ಕರೆ ಮಾಡಿ, ವೃದ್ಧೆಯ ಸ್ವಗ್ರಾಮ ನರೇಗಲ್ ಪಟ್ಟಣಕ್ಕೆ ಶವ ತಂದು ಕೋವಿಡ್ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ಮಾಡುತ್ತೇವೆ ಎಂದು ಹೇಳಿದ್ದರು. + +ಆರೋಗ್ಯ ಇಲಾಖೆಯ ಕರೆಯಿಂದ ಕುಟುಂಬಕ್ಕೆ ಶಾಕ್ ಆಗಿದ್ದು, ಜುಲೈ 20 ರಂದೇ ವೃದ್ಧೆ ಸಾವನ್ನಪ್ಪಿದ ಸಂದರ್ಭದಲ್ಲಿ ಈಗ ಮತ್ತೆ ಹೇಗೆ ಮೃತದೇಹ ತರುತ್ತೀರಿ ಎಂದು ಕುಟುಂಬಸ್ಥರು ಪ್ರಶ್ನೆ ಮಾಡಿದ್ದಾರೆ. ಆದರೆ ಕುಟುಂಬಸ್ಥರ ಪ್ರಶ್ನೆಗೆ ಆರೋಗ್ಯ ಇಲಾಖೆ ಸರಿಯಾದ ಉತ್ತರ ನೀಡದೆ ಅವಾಜ್ ಹಾಕಿದ್ದಾರೆ. + + + +ಎಲ್ಲದರ ನಡುವೆ ನರೇಗಲ್‍ನಲ್ಲಿ ಕೊನೆಗೂ ಕೋವಿಡ್-19 ನಿಯಮದ ಪ್ರಕಾರ ಅಂತ್ಯಕ್ರಿಯೆ ಮಾಡಲಾಯಿತು. ಮುಖ ನೋಡಲು ಬಿಡದೆ ಬೇರೆ ಯಾರದ್ದೋ ಮೃತದೇಹ ತಂದು ಸಿಬ್ಬಂದಿ ಅಂತ್ಯಕ್ರಿಯೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಆದರೆ ಇತ್ತ ಸರಿಯಾದ ಮಾಹಿತಿ ನೀಡದ ಜಿಮ್ಸ್ ಆಸ್ಪತ್ರೆ, ಆರೋಗ್ಯ ಇಲಾಖೆ, ಜಿಲ್ಲಾಡಳಿತ ಬೇಜವಾಬ್ದಾರಿತನದ ವಿರುದ್ಧ ಮೃತ ವೃದ್ಧೆಯ ಮಗ ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿದ್ದಾರೆ. + + + + + diff --git a/PublicTV_World/0070ce25.txt b/PublicTV_World/0070ce25.txt new file mode 100644 index 0000000000000000000000000000000000000000..2900c836e086fda719cdcaa24df65ebbf9d22f7a --- /dev/null +++ b/PublicTV_World/0070ce25.txt @@ -0,0 +1,24 @@ +ಬೆಂಗಳೂರು:ಸಹಜ ಸಾವು ಎಂದು ತಿಳಿದು ಮಹಿಳೆಯ ಅಂತ್ಯಸಂಸ್ಕಾರ ಮಾಡಲಾಗಿದ್ದ ಪ್ರಕರಣಕ್ಕೆ ಆಕೆಯ ಮಗು ಹೇಳಿದ ಭಯಾನಕ ಸತ್ಯದಿಂದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. + +ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವೆಂಕಟೇಶ್ (28) ಎಂಬಾತ 30 ವರ್ಷದ ಗೃಹಿಣಿ ಸುಮಲತಾಳನ್ನು ಆಕೆಯ ಮಗುವಿನ ಮುಂದೆಯೇ ಕೊಲೆ ಮಾಡಿದ್ದಾನೆ. ನಂತರ ಯಾರಿಗೂ ಹೇಳಬೇಡ ಎಂದು ಮಗುವಿಗೆ ಹೇಳಿ ಪರಾರಿಯಾಗಿದ್ದ. ಆದರೆ ಅಪ್ಪನ ಜೊತೆ ಮಗು ಹೇಳಿದ ಒಂದು ಸತ್ಯದಿಂದ ಆರೋಪಿ ವೆಂಕಟೇಶ್ ಪೊಲೀಸರ ಅತಿಥಿಯಾಗಿದ್ದಾನೆ. + + + +ಸುಮಲತಾ ಆರು ವರ್ಷದ ಹಿಂದೆ ಆನೇಕಲ್ ತಾಲೂಕಿನ ಚಿನ್ನಯ್ಯನ ಪಾಳ್ಯದ ದೇವರಾಜು ಎಂಬುವನೊಂದಿಗೆ ಮದುವೆಯಾಗಿ ಸಂಸಾರ ಮಾಡುತ್ತಿದ್ದಳು. ಈಕೆಗೆ 5 ವರ್ಷ, 3 ವರ್ಷದ ಎರಡು ಗಂಡು ಮಕ್ಕಳಿದ್ದು ಅಕ್ಟೋಬರ್ 16 ರಂದು ಬೆಳಿಗ್ಗೆ ಪತಿ ದೇವರಾಜುಗೆ ಕರೆ ಮಾಡಿ ಎದೆ ನೋವು ಅಂದಿದ್ದಾಳೆ. ಜೊತೆಗೆ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿದ್ದಾಳೆ. ಮತ್ತೆ ರಾತ್ರಿ ಗಂಡನೊಂದಿಗೆ ಫೋನ್‍ನಲ್ಲಿ ಮಾತನಾಡಿ ಮಲಗಿದ್ದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಮಕ್ಕಳು ಅಳುತ್ತಿರುವುದನ್ನು ಕಂಡು ಒಂದು ನೋಡಿದಾಗ ಸುಮಲತಾ ಮೃತಪಟ್ಟಿದ್ದಳು. + +ಇತ್ತ ಪತಿ ದೇವರಾಜುಗೆ ಗ್ರಾಮಸ್ಥರು ವಿಷಯ ತಿಳಿಸಿದ್ದು, ದೇವರಾಜು ನಿನ್ನೆ ಎದೆನೋವು ಅಂದಿದ್ದಳು ಎಂದಿದ್ದಾನೆ. ಗ್ರಾಮಸ್ಥರು ಹೃದಯಾಘಾತದಿಂದ ಸಾವನಪ್ಪಿದ್ದಾಳೆ ಎಂದು ತಿಳಿದು ಗ್ರಾಮಸ್ಥರೆಲ್ಲ ಸೇರಿ ಅಂತ್ಯಸಂಸ್ಕಾರ ನಡೆಸಿದ್ದಾರೆ. ಅಂತ್ಯಸಂಸ್ಕಾರ ನಡೆದ ರಾತ್ರಿ ಮಗುವನ್ನು ಸೀರೆ ಜೋಲಿಗೆ ಮಲಗಿಸಲು ಮುಂದಾದಾಗ ಜೋಲಿ ನೋಡಿ ಮಗು ಮಾಮ ಅಮ್ಮನಿಗೆ ಹೊಡೆದಿದ್ದಾರೆ ಎಂದು ಹೇಳಿದೆ. ತಕ್ಷಣ ಪತಿ ದೇವರಾಜು ಮತ್ತವರ ತಂದೆ ತಾಯಿ ಪಕ್ಕದ ಮನೆಯಲ್ಲಿ ವಾಸವಿದ್ದ ವೆಂಕಟೇಶ್ (28) ಎಂಬುವವನ ಮೇಲೆ ಆನೇಕಲ್ ಪೊಲೀಸರಿಗೆ ದೂರು ನೀಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ. + + + +ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ವೆಂಕಟೇಶನನ್ನು ಬಂಧಿಸಿ ಹೂತಿದ್ದ ಶವ ಹೊರತೆಗೆದು ಮಹಜರ್ ನಡೆಸಿ ಶವ ಪರೀಕ್ಷೆ ನಡೆಸಿದ್ದಾರೆ. ಸುಮಲತಾ ದೇವರಾಜು ಮದುವೆ ಆದ ನಂತರ ಚಿಣ್ಣಯ್ಯನಪಾಳ್ಯದಲ್ಲಿ ವಾಸವಿದ್ದರು. ದೇವರಾಜು ವೃತ್ತಿಯಲ್ಲಿ ಚಾಲಕನಾಗಿದ್ದು, ಕೆಲಸದ ಮೇಲೆ ಹೊರ ಹೋದ್ರೆ ತಿರುಗಿ ಬರುತಿದ್ದದ್ದು ಮೂರ್ನಾಲ್ಕು ದಿನ ಅಥವಾ ವಾರಗಳೇ ಕಳೆಯುತಿತ್ತು. ಈ ವೇಳೆ ದೇವರಾಜನ ದೂರದ ಸಂಬಂಧಿ ಆನೇಕಲ್ ತಾಲೂಕಿನ ಚಿಕ್ಕಹಾಗಡೆ ಗ್ರಾಮದ ವೆಂಕಟೇಶ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ ದೇವರಾಜು ಮನೆಯ ಪಕ್ಕದಲ್ಲೇ ವಾಸಕ್ಕೆ ಬಂದಿದ್ದ. + +ಇತ್ತ ವಾರಗಟ್ಟಲೆ ಮನೆಯಿಂದ ಹೊರಗಿರುತ್ತಿದ್ದ ದೇವರಾಜು ವೆಂಕಟೇಶನನ್ನು ನಂಬಿ ಮನೆ ಕಡೆ ಸ್ವಲ್ಪ ನೋಡುಕೊಳ್ಳುವಂತೆ ತಿಳಿಸಿದ್ದ. ಮೊದಲಿಗೆ ಸಭ್ಯನಂತೆ ಇದ್ದ ವೆಂಕಟೇಶ ಸುಮಲತಾಳನ್ನು ಬಲೆಗೆ ಹಾಕಿಕೊಂಡಿದ್ದ. ಇತ್ತ ಗಂಡ ಹೊರಗೆ ಹೆಚ್ಚು ಇರುತ್ತಿದ್ದರಿಂದ ವೆಂಕಟೇಶನ ಸಹವಾಸ ಸುಮಲತಾಳಿಗೆ ಹಿತವಾಗಿತ್ತು. ಇನ್ನು ಕಾಲ ಕಳೆದಂತೆ ಇವರ ಸಂಬಂಧ ಜಗಜ್ಜಾಹೀರಾಗಿ ರಾಜಿ ಪಂಚಾಯಿತಿ ನಡೆದು ವೆಂಕಟೇಶನನ್ನು ಊರು ಬಿಡಿಸಲಾಗಿತ್ತು. ನಂತರ ಸುಮಲತಾ ಕೂಡ ಹಿರಿಯರ ಮಾತಿಗೆ ಬೆಲೆಕೊಟ್ಟು ಗಂಡನೊಂದಿಗೆ ಅನ್ಯೋನ್ಯವಾಗಿದ್ದಳು. + + + +ವೆಂಕಟೇಶ್ ಮಾತ್ರ ದೇವರಾಜು ಕೆಲಸಕ್ಕೆ ಹೋಗುವುದನ್ನು ನೋಡಿಕೊಂಡು ಮನೆಗೆ ಬಂದು ಸುಮಲತಾಳಿಗೆ ಗಂಡನನ್ನು ಬಿಟ್ಟು ಬರುವಂತೆ ಹಿಂಸಿಸತೊಡಗಿದ. ಹೀಗೆ ಆಕ್ಟೋಬರ್ 16 ರಂದು ರಾತ್ರಿ ಸುಮಲತಾಳ ಮನೆಗೆ ಕಬಾಬ್ ತೆಗೆದುಕೊಂಡು ಬಂದು ತನ್ನೊಂದಿಗೆ ಬರುವಂತೆ ಪೀಡಿಸಿದ್ದ. ಸುಮಲತಾ ಒಪ್ಪದಕ್ಕೆ ಮಗು ಮಲಗಿಸುವ ಸೀರೆಯ ಜೋಳಿಯಿಂದ ಕುತ್ತಿಗೆ ಬಿಗಿದು ಸಾಯಿಸಿ ಮಗುವಿಗೆ ಯಾರಿಗೂ ಹೇಳದಂತೆ ತಿಳಿಸಿ ಹೋಗಿ ತಲೆ ಮರೆಸಿಕೊಂಡಿದ್ದ. + +ಕೊಲೆಗಾರ ಎಷ್ಟೇ ಬುದ್ಧಿವಂತನಾಗಿದರೂ ಸಣ್ಣದೊಂದು ಸುಳಿವು ಬಿಟ್ಟಿರುತ್ತಾನೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದ್ದು, ಐದು ವರ್ಷದ ಮಗು ತನ್ನ ತಾಯಿಯ ರಹಸ್ಯ ಬಯಲು ಮಾಡಿ ಕೊಲೆ ಆರೋಪಿಯ ಬಂಧನಕ್ಕೆ ಕಾರಣವಾಗಿದೆ. ಸಹಜ ಸಾವೆಂದು ಸುಮನಿದ್ದವರಿಗೆ ಮಗುವಿನ ಮೂಲಕ ಸತ್ಯ ತಿಳಿದು ಗ್ರಾಮಸ್ಥರಿಗೆ ಶಾಕ್ ಆಗಿದೆ. + + + diff --git a/PublicTV_World/0071b842.txt b/PublicTV_World/0071b842.txt new file mode 100644 index 0000000000000000000000000000000000000000..a61353c81f052de31e0221b656d3706148cbf35d --- /dev/null +++ b/PublicTV_World/0071b842.txt @@ -0,0 +1,16 @@ +ಮಡಿಕೇರಿ:ಹುಲಿ ಕಾಡು ಪ್ರಾಣಿ. ಅದು ಕಾಡಿಗೆ ಹೋಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸದೆ ತಿರುಗೇಟು ನೀಡಿದ್ದಾರೆ. + +ಹುಲಿ ಕಾಡು ಪ್ರಾಣಿ. ಅದು ಕಾಡಿಗೆ ಹೋಗಬೇಕು. ಆ ಮೂಲಕ ರಾಜ್ಯವನ್ನು ಕಾಡು ಪ್ರಾಣಿಗಳಿಂದ ರಕ್ಷಿಸಬೇಕಾಗಿದೆ ಎಂದು ತಿರುಗೇಟು ನೀಡಿದರು. ನಾವು ಯಾರಿಗೂ ಹುಲಿ ಅನ್ನೋ ಬಿರುದು ಕೊಟ್ಟಿಲ್ಲ. ಆದರೆ ಕೆಲವರು ಅವರೇ ಸ್ವಯಂ ಘೋಷಿತ ಹುಲಿಗಳಾಗಿದ್ದಾರೆ ಎಂದರು. + + + +ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಿದ್ದರಾಮಯ್ಯ ಮತ್ತು ಡಿಕೆಶಿಯೇ ನೇರ ಹೊಣೆ ಎಂದು ಗಂಭೀರ ಆರೋಪ ಮಾಡಿದರು. ಬಂಡೆ ದೊಡ್ಡದ ಅಥವಾ ಹುಲಿ ದೊಡ್ಡದಾ ಎನ್ನೋ ಗುದ್ದಾಟ ಕಾಂಗ್ರೆಸ್ ನಲ್ಲಿ ಶುರುವಾಗಿದೆ. ಈ ಗುದ್ದಾಟದ ಭಾಗವಾಗಿ ಅವರದ್ದೇ ಶಾಸಕರ ಮನೆಗೆ ಬೆಂಕಿ ಹಾಕಲಾಗಿದೆ. + + + +ಮಾಜಿ ಮೇಯರ್ ಸಂಪತ್ ರಾಜ್ ಡಿಕೆಶಿ ಹಿಂದೆ ಬಂದವರು. ಅಖಂಡ ಶ್ರೀನಿವಾಸಮೂರ್ತಿ ಅವರು ಸಿದ್ದರಾಮಯ್ಯ ಅವರ ಹಿಂದೆ ಬಂದವರು. ಇವರ ಜಗಳದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬಿದ್ದಿತ್ತು. ಹೀಗಾಗಿ ಅಖಂಡ ಶ್ರೀನಿವಾಸ್ ಮೂರ್ತಿ ಸಂಪತ್ ರಾಜ್ ಅವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದರು. ಪೊಲೀಸ್ ತನಿಖೆ ಡಿಕೆಶಿ ಮತ್ತು ಸಿದ್ದರಾಮಯ್ಯನವರ ಜಗಳವೇ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಾಟೆಗೆ ಕಾರಣ ಎನ್ನೋದನ್ನು ಬಯಲುಗೊಳಿಸಿದೆ ಎಂದರು.ಇದನ್ನೂ ಓದಿ:ಸಿದ್ದರಾಮಯ್ಯಗೆ ಧಮ್ ಇದ್ರೆ ಚಿದಂಬರಂ ಮುಂದೆ ನಿಂತು ಮಾತಾಡಲಿ – ಕಟೀಲ್ ಟಾಂಗ್ + + + + + diff --git a/PublicTV_World/007255a0.txt b/PublicTV_World/007255a0.txt new file mode 100644 index 0000000000000000000000000000000000000000..267979d3f7f9613074297c80cb4e6ee20998ebbc --- /dev/null +++ b/PublicTV_World/007255a0.txt @@ -0,0 +1,20 @@ +ಬೆಂಗಳೂರು:ಶಾಸಕ ಬಿ ವೈ ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಸೋಮವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. + +ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ, ನಿಕಟಪೂರ್ವ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ. ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು ಬಹಳ ಸಂತೋಷ ಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ ನಿನ್ನ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಣಯ ಮಾಡಿದ್ದಾಗಿ ಬೊಮ್ಮಾಯಿಯವರು ಹೇಳಿದ್ದಾರೆಂದು ತಿಳಿಸಿದರು. + +ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ@BSBommaiಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆಯಲಾಯಿತು. ವಿಶ್ರಾಂತಿಯಲ್ಲಿರುವ ತಾವು ಶೀಘ್ರವಾಗಿ ಚೇತರಿಸಿಕೊಂಡು ಪಕ್ಷ ಸಂಘಟನೆಗೆ ಸಕ್ರಿಯರಾಗಲೆಂದು ಹಾರೈಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಂ ಕೃಷ್ಣಪ್ಪನವರು, ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ…pic.twitter.com/hPfa7qSzfM + +— Vijayendra Yediyurappa (@BYVijayendra)November 13, 2023 + + + +ಈ ನೇಮಕದಿಂದ ರಾಜ್ಯಕ್ಕೆ, ರಾಜ್ಯ ಬಿಜೆಪಿಗೆ (Karnataka BJP) ದೊಡ್ಡ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾಗಿ ವಿವರಿಸಿದರು. ನಾನಷ್ಟೇ ಅಲ್ಲ, ಹಿರಿಯರೆಲ್ಲರೂ ನಿನ್ನ ಜೊತೆ ಇರಲಿದ್ದೇವೆ. ಸಹಕಾರ ನೀಡುವ ಮತ್ತು ಮಾರ್ಗದರ್ಶನ ನೀಡುವ ಮಾತನಾಡಿದ್ದಾರೆ ಎಂದರು.ಇದನ್ನೂ ಓದಿ:ದೀಪಾವಳಿಗೆ ಭಾರತದ ಕಂಪನಿಗಳು ದೀರ್ಘ ರಜೆ ನೀಡಲ್ಲ ಯಾಕೆ – ಎಡೆಲ್ವೀಸ್ ಮ್ಯೂಚುವಲ್‌ ಫಂಡ್‌ ಸಿಇಒ ಪ್ರಶ್ನೆ + +ದೇಶದ ಭವಿಷ್ಯ ರೂಪಿಸುವ ಮುಂಬರುವ ಲೋಕಸಭಾ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ನಿನ್ನ ನೇತೃತ್ವದಲ್ಲಿ ಮಾಡೋಣ ಎಂದು ತಿಳಿಸಿದ್ದಾರೆ. ಇದೇ 15ರಂದು ಬುಧವಾರ ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ತಾವು ಬಂದು ಆಶೀರ್ವಾದ ಮಾಡಬೇಕೆಂದು ಕೋರಿದ್ದೇನೆ. ಕಾರ್ಯಕ್ರಮಕ್ಕೆ ಬರಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. + + + +ಈ ವೇಳೆ ಬಿ.ವೈ.ವಿಜಯೇಂದ್ರ ಅವರನ್ನು ಬಸವರಾಜ ಬೊಮ್ಮಾಯಿ ಅವರು ಅಭಿನಂದಿಸಿ ಶುಭ ಹಾರೈಸಿದರು. ಶಾಸಕ ಕೃಷ್ಣಪ್ಪ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. + + + diff --git a/PublicTV_World/00742bf4.txt b/PublicTV_World/00742bf4.txt new file mode 100644 index 0000000000000000000000000000000000000000..6b717e8164cb0ebe46d185e119741d040be50590 --- /dev/null +++ b/PublicTV_World/00742bf4.txt @@ -0,0 +1,12 @@ +ಕೊಪ್ಪಳ:ಮದುವೆ ಎನ್ನುವುದು ಎಲ್ಲರಿಗೂ ಮರೆಯಲಾಗದ ದಿನವಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಮದುವೆ ದಿನ ಕುಣಿದು ಕುಪ್ಪಳಿಸ್ತಾರೆ. ಆದರೆ ಕೊಪ್ಪಳದಲ್ಲಿ ಸಾಮೂಹಿಕ ವಿವಾಹದಲ್ಲಿ 51 ಜೋಡಿಗಳು ಜಗತ್ತೆ ಮೆಚ್ಚುವ ಕೆಲಸ ಮಾಡಿದ್ದಾರೆ. + +ಎಲ್ಲರ ಜೀವನದಲ್ಲೂ ಮದುವೆ ಎನ್ನುವುದು ಒಂದು ಸಂತಸದ ಕ್ಷಣ. ಮದುವೆಯ ಆ ಕ್ಷಣ ನೆನಪಿನಲ್ಲಿ ಉಳಿಯೋಕೆ ಕೆಲವರು ದಾಮ್ ದುಮ್ ಎಂದು ಖರ್ಚು ಮಾಡಿ ಮದುವೆ ಮಾಡಿಕೊಳ್ಳುತ್ತಾರೆ. ಆದರೆ ಕೊಪ್ಪಳದ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ನೆಡೆದ ಸಾಮೂಹಿಕ ಮದುವೆ ಎಲ್ಲರ ಗಮನ ಸೆಳೆಯಿತು. ಭಾನುವಾರ ಬರೋಬ್ಬರಿ 51 ನವ ಜೋಡಿಗಳು ಹಸೆಮಣೆ ಎರಿದರು. ಈ ವೇಳೆ ನವ ಜೀವನಕ್ಕೆ ಕಾಲಿಟ್ಟ ನವ ಜೋಡಿಗಳು ಸಾಮೂಹಿಕವಾಗಿ ನೇತ್ರದಾನದ ಶಪಥ ಮಾಡಿದರು. + + + +ಅಂಧರ ಬಾಳಿಗೆ ಬೆಳಕು ಕೊಡುವುದಕ್ಕೆ ನಿರ್ಧಾರ ಮಾಡಿದ ನವ ಜೋಡಿಗಳು ಮದುವೆಯ ಸಂದರ್ಭದಲ್ಲೆ ಇಂತಹದೊಂದು ನಿರ್ಣಯ ತೆಗೆದುಕೊಂಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಇನ್ನೂ ನಾವು ಸತ್ತ ಮೇಲೂ ಜಗತ್ತನ್ನೂ ನೋಡಬೇಕು ಅಂದರೆ ನೇತ್ರದಾನ ಮಾಡಬೇಕು ಎಂದು ನವ ಜಿವನಕ್ಕೆ ಕಾಲಿಟ್ಟ ವಧು ಹೇಳಿದ್ದರು. + +ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಸಾಮೂಹಿಕ ವಿವಾಹದಲ್ಲಿ ನವಜೋಡಿಗಳು ನೇತ್ರದಾನ ಶಪಥ ಮಾಡಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಯುವಕ ಸಂಘ, ಸಮರ್ಪಣಾ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ 51 ಜೋಡಿಗಳ ಸರಳ ಸಾಮೂಹಿಕ ವಿವಾಹದಲ್ಲಿ ಅಂಧರ ಬಾಳಿಗೆ ಬೆಳಕಾಗಲು ಮುಂದಾಗಿದ್ದಾರೆ. ದಾನದಲ್ಲಿ ಶ್ರೇಷ್ಠದಾನ ನೇತ್ರದಾನ, ಇಂತಹ ನೇತ್ರದಾನ ಮಾಡುವ ಮೂಲಕ ಈ ನವ ದಂಪತಿಗಳು ಸಮಾಜಕ್ಕೆ ಮಾದರಿಯಾಗಿದ್ದಾರೆ. ಪ್ರತಿ ವರ್ಷ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳುವ ಅಂಬೇಡ್ಕರ್ ಯುವಕ ಸಂಘ ಈ ಬಾರಿ ತುಸು ವಿಭಿನ್ನವಾಗಿ ಸಾಮಾಜಿಕ ಜಾಗೃತಿ ಕಾರ್ಯಕ್ರಮದ ಮೂಲಕ ಮದುವೆ ಮಾಡಿಕೊಟ್ಟರು. ಮದುವೆಯಾದ 51 ಜೋಡಿಗಳಿಗೆ ಸಸಿ ವಿತರಣೆ ಮಾಡಿ ಮದುವೆಯಲ್ಲಿ ಪರಿಸರ ಕಾಳಜಿ ಮೆರೆದಿದ್ದಾರೆ. + + + diff --git a/PublicTV_World/007436fc.txt b/PublicTV_World/007436fc.txt new file mode 100644 index 0000000000000000000000000000000000000000..4e4408ebe29c8bd5f89f1c5c2c5477509b506028 --- /dev/null +++ b/PublicTV_World/007436fc.txt @@ -0,0 +1,18 @@ +ರಾಯಚೂರು:ನಗರಸಭೆ ಕೊನೆಗೂ ಎಚ್ಚೆತ್ತಿದ್ದು ನಗರದ ಕೆಲವು ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಕೊಡುವ ವ್ಯವಸ್ಥೆ ಮಾಡಿದೆ. + + + +ಕಲುಷಿತ ನೀರಿನಿಂದ ಈಗಾಗಲೇ ಆರು ಜನ ಸಾವನ್ನಪ್ಪಿದ್ದಾರೆ. ಈಗ ನಗರದಲ್ಲಿರುವ 16 ಜಿಎಸ್‍ಎಲ್‍ಆರ್ ಟ್ಯಾಂಕ್ ಹಾಗೂ 36 ಓವರ್ ಹೆಡ್ ಟ್ಯಾಂಕ್‍ಗಳಲ್ಲಿ 25 ಟ್ಯಾಂಕ್‍ಗಳ ಸ್ವಚ್ಚತಾ ಕಾರ್ಯ ನಡೆಸಿದ್ದಾರೆ. ಬೆಳಗಾವಿ, ಮಂಗಳೂರು ಸೇರಿ ವಿವಿಧೆಡೆಯಿಂದ ಕರೆಯಿಸಲಾಗಿರುವ ತಜ್ಞ ತಂಡದಿಂದ ಟ್ಯಾಂಕ್‍ಗಳ ಸ್ವಚ್ಚತಾ ಕಾರ್ಯ ನಡೆಸಲಾಗಿದೆ.ಇದನ್ನೂ ಓದಿ:ರಾಯಚೂರಿಗೆ ಕೊನೆಗೂ ಭೇಟಿ ನೀಡಿದ ಉಸ್ತುವಾರಿ ಸಚಿವ: ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಣೆ + + + +ರಾಂಪೂರ ಜಲಶುದ್ಧೀಕರಣ ಘಟಕ, ಶುದ್ಧವಾದ ಟ್ಯಾಂಕ್ ಹಾಗೂ ಮನೆಗಳಿಗೆ ಸರಬರಾಜು ಮಾಡಲಾಗುತ್ತಿರುವ ಮಾದರಿಗಳನ್ನ ನಿತ್ಯ ಪರಿಶೀಲನೆ ಮಾಡಿ ಜನರಿಗೆ ಶುದ್ಧ ನೀರು ಕೊಡುವ ಪ್ರಯತ್ನಕ್ಕೆ ನಗರಸಭೆ ಮುಂದಾಗಿದೆ. ಅಪಾಯದ ಮುನ್ಸೂಚನೆ ಸಿಕ್ಕಾಗಲೇ ನಗರಸಭೆ ಎಚ್ಚೆತ್ತಿದ್ದರೆ ಇಷ್ಟೊಂದು ಅವಾಂತರಗಳು ಸಂಭವಿಸುತ್ತಿರಲಿಲ್ಲ. + + + +ವಾಂತಿ-ಭೇದಿಯಿಂದ ದಾಖಲಾದವರಲ್ಲಿ ನೂರಾರು ಜನ ಇನ್ನೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮಸ್ಯೆ ಈಗ ಬಗೆಹರಿದಿದ್ದು, ಮುಂದೆ ಶುದ್ಧ ನೀರು ಪ್ರತಿ ಮನೆಗೂ ಸರಬರಾಜು ಮಾಡುತ್ತೇವೆ ಎಂದು ನಗರಸಭೆ ಆಡಳಿತ ಹಾಗೂ ಅಧಿಕಾರಿಗಳು ಹೇಳುತ್ತಿದ್ದಾರೆ.ಇದನ್ನೂ ಓದಿ:ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆ + + + + + diff --git a/PublicTV_World/00744dc3.txt b/PublicTV_World/00744dc3.txt new file mode 100644 index 0000000000000000000000000000000000000000..e308c082c21e6e6caa0bebdb3f30159f9d6f97a4 --- /dev/null +++ b/PublicTV_World/00744dc3.txt @@ -0,0 +1,24 @@ +ಬೆಂಗಳೂರು: ಶಾಸಕ ಮುನಿರತ್ನ (Muniratna) ಅವರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಮುನಿರತ್ನ ಅವರ ಮನವೊಲಿಸಿ ಉಪವಾಸ ಸತ್ಯಾಗ್ರಹ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಸದ್ಯ ಶಾಸಕರು ತಮ್ಮ ಉಪವಾಸ ಧರಣಿಯನ್ನು ಹಿಂಪಡೆದಿದ್ದಾರೆ. + +ಬಿಜೆಪಿ ಸರ್ಕಾರ ಇದ್ದಾಗ ಕೊಟ್ಟ ಅನುದಾನ ರದ್ದುಪಡಿಸಿ ಸೇಡಿನ ರಾಜಕೀಯ ಮಾಡಿದ್ದಾರೆ. ನಾನು ಸಿಎಂ ಜೊತೆ ಮಾತನಾಡುತ್ತೇನೆ. ಸಿಎಂ ಜೊತೆ ಮಾತನಾಡಿ ಇದನ್ನು ಸರಿ ಮಾಡುತ್ತೇನೆ. ಇದು ಮೇಲ್ನೋಟಕ್ಕೆ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಎಲ್ಲರಿಗೂ ಕೊಟ್ಟಂತೆ ಅನುದಾನ ಇವರಿಗೂ ಕೊಡಬೇಕು ನಾನು ಸಿಎಂ ಜೊತೆ ಮಾತನಾಡುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಇದನ್ನೂ ಓದಿ:ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ- ಬಾಲಕೃಷ್ಣ ಪರೋಕ್ಷ ಹೇಳಿಕೆಗೆ ಭಾರೀ ಆಕ್ರೋಶ + +ಬಿಎಸ್‌ವೈ ಭರವಸೆ ಹಿನ್ನೆಲೆ ಶಾಸಕರು ಧರಣಿ ಕೈಬಿಟ್ಟಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮುನಿರತ್ನ, ಫಲಿತಾಂಶ ಬಂದಾಗಿನಿಂದ ನನ್ನ ಕ್ಷೇತ್ರದಲ್ಲಿ ಒಬ್ಬ ಶಾಸಕನಾಗಿ ಕೆಲಸ ಮಾಡೋದು ಕಷ್ಟ ಆಗುತ್ತಿದೆ. ಪೊಲೀಸ್ ದೌರ್ಜನ್ಯ, ಅಧಿಕಾರಿಗಳ ಅಮಾನತು ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ:ದೇವರಮನೆ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದಾಗ ಯುವಕ ಕಣ್ಮರೆ + +126 ಕೋಟಿ ರೂ. ಅನುದಾನ (Grant) ವಾಪಸ್ ಖಂಡಿಸಿ ಶಾಸಕ ಮುನಿರತ್ನ  ಹಾಗೂ ಅವರ ಬೆಂಬಲಿಗರು ಉಪವಾಸ ಧರಣಿ (Protest) ನಡೆಸಿದ್ದರು. ಈ ಹಿನ್ನೆಲೆ ಮುನಿರತ್ನ ಅವರ ಪ್ರತಿಭಟನೆಗೆ ಅಡ್ಡಿಪಡಿಸಲು ಪೊಲೀಸರು ಪ್ಲಾನ್ ಮಾಡಿದ್ದು, ಹೆಚ್ಚುವರಿ ಪ್ರತಿಭಟನಾಕಾರರಿಗೆ ನಿರ್ಬಂಧ ಹಾಕಿದ್ದಾರೆ.ಇದನ್ನೂ ಓದಿ:ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ + +ವಿಧಾನಸೌಧದ (Vidhana Soudha) ಗಾಂಧಿ ಪ್ರತಿಮೆಯ ಬಳಿ ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಡಿಕೆ ಶಿವಕುಮಾರ್ (DK Shivakumar) ಮತ್ತು ಡಿಕೆ ಸುರೇಶ್ (DK Suresh) ವಿರುದ್ಧ ಬಿತ್ತಿಪತ್ರ ಹಿಡಿದು ಪ್ರತಿಭಟನೆ ಮಾಡುತ್ತಿದ್ದ ಸಂದರ್ಭ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನೆ ನಿಲ್ಲಿಸುವಂತೆ ಮುನಿರತ್ನ ಅವರ ಬಳಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ, ಇದು ಶಾಂತಿಯುತ ಹಾಗೂ ಯಾರಿಗೂ ತೊಂದರೆ ಮಾಡದ ಪ್ರತಿಭಟನೆ. ನನ್ನ ಕ್ಷೇತ್ರಕ್ಕೆ ಅನ್ಯಾಯ ಆಗಿದೆ ಎಂದಿದ್ದಾರೆ.ಇದನ್ನೂ ಓದಿ:ಆರ್.ಆರ್ ನಗರದ ಅನುದಾನಕ್ಕೆ ಕೊಕ್ಕೆ- ಮುನಿರತ್ನ ಉಪವಾಸ ಸತ್ಯಾಗ್ರಹ + + + +ಈ ಸಂದರ್ಭ ಪೊಲೀಸರು ಕಾರ್ಯಕರ್ತರನ್ನು ಬಲವಂತವಾಗಿ ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಅನ್ಯಾಯ, ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕರಿಗೆ ಪ್ರತಿಭಟನೆಗೆ ಅವಕಾಶ ಇದೆ. ಬೇರೆಯವರಿಗೆ ಇಲ್ಲ ಎಂದ ಪೊಲೀಸರು ಶಾಸಕರನ್ನು ಬಿಟ್ಟು ಉಳಿದವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದರಿಂದ ಶಾಸಕ ಮುನಿರತ್ನ ಏಕಾಂಗಿಯಾಗಿ ಪ್ರತಿಭಟನೆ ಮುಂದುವರೆಸಿದ್ದರು.ಇದನ್ನೂ ಓದಿ:ಚೈತ್ರಾ & ಗ್ಯಾಂಗ್‍ನಿಂದ ಟಿಕೆಟ್ ವಂಚನೆ ಪ್ರಕರಣ- ಗೋವಿಂದ ಬಾಬು ಪೂಜಾರಿ ಹೊಸ ಹೈಡ್ರಾಮಾ + + + +ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸುಮಾರು 25 ಕ್ಕೂ ಹೆಚ್ಚು ಪ್ರತಿಭಟನಾ ನಿರತ ಮುನಿರತ್ನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಬೆಂಬಲಿಗರಿಗೆ ಪ್ರತಿಭಟನೆಗೆ ಅನುಮತಿ ಇಲ್ಲದ ಕಾರಣ ವಶಕ್ಕೆ ತೆಗೆದುಕೊಂಡಿದ್ದು, ಶಾಸಕ ಮುನಿರತ್ನ ನೀರು ಸಹ ಕುಡಿಯದೇ ಏಕಾಂಗಿಯಾಗಿ ಉಪವಾಸ ಧರಣಿ ಮುಂದುವರಿಸಿದ್ದರು. ಇದೀಗ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.ಇದನ್ನೂ ಓದಿ:ಸರ್ಕಾರದ ವಿರುದ್ಧ ಸುಧಾಕರ್ ಪ್ರತಿಭಟನೆ- ಬೊಮ್ಮಾಯಿ ಸಾಥ್ + +Web StoriesActress Jyothi Rai New Photo Shootಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳುಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! + + + + + diff --git a/PublicTV_World/00747a1d.txt b/PublicTV_World/00747a1d.txt new file mode 100644 index 0000000000000000000000000000000000000000..05f3342c7cfe8b5fb28d271f5cc9d66ff3c988d3 --- /dev/null +++ b/PublicTV_World/00747a1d.txt @@ -0,0 +1,28 @@ +ಹಾಸನ:ಪತಿಯ ಕಿರುಕುಳಕ್ಕೆ ಬೇಸತ್ತ 19 ವರ್ಷದ ನವವಿವಾಹಿತೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ಆಕೆಯ ಕೊನೆಯ ವಿಡಿಯೋ ಹೇಳಿಕೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. + +ಹಾಸನ ನಗರದ ವಿಜಯನಗರ ನಿವಾಸಿ ರೆಹಮಾನ್ ಷರೀಫ್ ಪುತ್ರಿ ನೇಹಾ ಷರೀಫ್‍ಗೆ ಕಳೆದ 5 ತಿಂಗಳ ಹಿಂದೆ ಸಂಬಂಧಿ ಸಕಲೇಶಪುರದ ಆದಿಲ್ ಜೊತೆ ಮದುವೆ ಮಾಡಲಾಗಿತ್ತು. ಎರಡು ತಿಂಗಳ ಗರ್ಭಿಣಿಯೂ ಆದ ನೇಹಾ ಪತಿಯ ಕಿರುಕುಳಕ್ಕೆ ನಗರದ ಮಹಿಳಾ ಪೊಲೀಸ್ ಠಾಣೆಗೂ ಹೋದರೆ ನ್ಯಾಯ ಸಿಗಲಿಲ್ಲ. ಪತಿಯ ಲೈಂಗಿಕ ಮತ್ತು ಮಾನಸಿಕ ಕಿರುಕುಳಕ್ಕೆ ನೊಂದಿದ್ದ ನೇಹಾ ತಾನು ವಿಷ ಕುಡಿಯುವ ಮೊದಲು ಹೇಳಿಕೆ ಕೊಟ್ಟು ಮೊಬೈಲ್‍ನಲ್ಲಿ ವಿಡಿಯೋ ಮಾಡಿಕೊಂಡಿದ್ದಾಳೆ. + + + +ವಿಡಿಯೋದಲ್ಲಿ ಏನಿದೆ?ನನ್ನ ಹೆಸರು ನೇಹಾ ಷರೀಫ್, ನನ್ನ ತಂದೆಯ ಹೆಸರು ರೆಹಮಾನ್ ಷರೀಫ್. ನಾನು ವಿಜಯನಗರದ ನಿವಾಸಿ. ಆದಿಲ್ ಷರೀಫ್ ಎಂಬವರ ಜೊತೆ ನನಗೆ ಮದುವೆ ಮಾಡಲಾಗಿತ್ತು. 5 ತಿಂಗಳ ಹಿಂದೆ ಎಂ. ಹೆಚ್ ಕನ್ವೆಂಷನ್ ಹಾಲ್ ನಲ್ಲಿ ವರದಕ್ಷಿಣೆಯಾಗಿ ವಾಚ್, ಉಂಗುರ, ಚಿನ್ನದ ಚೈನ್, ಬೀರು, ಮಂಚ, ಕ್ಯಾಶ್, ಸೇರಿದಂತೆ ಎಲ್ಲವನ್ನೂ ಕೊಟ್ಟು ಮದುವೆ ಮಾಡಲಾಗಿತ್ತು. + + + +ಮದುವೆಯಾದ ಒಂದು ವಾರದಲ್ಲಿ ನನಗೆ ಇಲ್ಲಿ ತುಂಬಾ ಚಿತ್ರಹಿಂಸೆ ನೀಡಿದರು. ನನ್ನ ಅತ್ತೆ ನನಗೆ ತುಂಬಾ ಹೊಡೆಯುತ್ತಿದ್ದರು. ನನ್ನ ಅತ್ತೆಯ ಎರಡು ಅಕ್ಕ-ತಂಗಿಯರೂ ಕೂಡ ಫೌಸಿಯಾ ಮತ್ತು ಶಾವರ್ ಎಂಬವರು ಸೇರಿಕೊಂಡು ನುಸ್ರತ್ ಎಂಬಾಕೆಯಿಂದ ಚಿತ್ರ ವಿಚಿತ್ರ ಹಿಂಸೆ ಕೊಡಿಸಿದ್ದಾರೆ. ನನಗೆ ಎಲ್ಲಿಯೂ ಇರದ ರೀತಿಯಲ್ಲಿ ಮಾಡಿಬಿಟ್ಟಿದ್ದಾರೆ. ನನ್ನ ಗಂಡ ರಾತ್ರಿ ಇಡೀ ಸೆಕ್ಸ್ ಗಾಗಿ ಟಾರ್ಚರ್ ಮಾಡುತ್ತಿದ್ದ. ನನ್ನ ಒಳಗಿನ ಎಲ್ಲಾ ರೀತಿಯ ಅಂಗಗಳು ಡ್ಯಾಮೇಜ್ ಆಗಿವೆ. ಏನೂ ಉಳಿಯಲಿಲ್ಲ. ನಾನು ಗರ್ಭಿಣಿ ಎಂದು ಗೊತ್ತಿದ್ದರೂ ಕೂಡ ನನಗೆ ಚಿತ್ರಹಿಂಸೆ ನೀಡಿದರು. + + + +ಏನೂ ಉಳಿಸಲಿಲ್ಲ. ಮೊಕ್ತಿಯಾರ್, ಛೋಟೂ ಇವರಿಬ್ಬರೂ ನನಗೆ ಕೊಲೆ ಬೆದರಿಕೆ ಹಾಕುತ್ತಿದ್ದರು. ಸಕಲೇಶಪುರದಲ್ಲಿ ನಿನ್ನನ್ನು ಹೂತು ಹಾಕುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದರು. ಇನ್ನಷ್ಟು ವರದಕ್ಷಿಣೆ ಬೇಕೆಂದು ನನಗೆ ಹಿಂಸಿಸಿದ್ದಾರೆ. ಅನ್ನ ನೀರು ಏನನ್ನೂ ಕೊಡ್ತಿರಲಿಲ್ಲ. ನನ್ನ ಬದುಕಿನಲ್ಲಿ ಏನೂ ಉಳಿಯಲಿಲ್ಲ. ನನ್ನ ಮಾನವನ್ನೂ ಹರಾಜು ಹಾಕಿದರು. ನನ್ನ ತಂದೆ ತಾಯಿಯ ಮಾನವನ್ನೂ ಹರಾಜು ಹಾಕಿದರು. ನಾನು ಏನಂತ ಉತ್ತರಿಸಲಿ ಎಲ್ಲರಿಗೂ ಪೊಲೀಸರಿಗೆ ದೂರು ನೀಡಲು ಹೋದರೂ ಅಲ್ಲಿಯೂ ಸಹ ನನ್ನ ದೂರು ತೆಗೆದುಕೊಳ್ಳಲಿಲ್ಲ. + + + +ನಮ್ಮ ಬಳಿ ಒಂದು ರೂ.ಯೂ ಇಲ್ಲ, ಪೊಲೀಸರಿಗೆ ಕೊಡಲು ಲಾಯರ್ ಗಳಿಗೆ ಕೊಡಲು ಈ ನ್ಯಾಯಾಲಯದವರಿಗೆ ಕೊಡಲು ನಮ್ಮ ಬಳಿ ಹಣ ಇಲ್ಲ. ನಾನು ನಮ್ಮ ತಂದೆ-ತಾಯಿ ಪಾಲಿಗೆ ತುಂಬ ಕಷ್ಟ ಕೊಟ್ಟುಬಿಟ್ಟೆ. ಅವರಿಗೆ ಮತ್ತೆ ತೊಂದರೆ ಕೊಡಲು ಇಷ್ಟವಿಲ್ಲ. ನಾನು ಅವರಿಗೆ ತುಂಬಾ ತೊಂದರೆ ಕೊಟ್ಟಿದ್ದೇನೆ. ಇನ್ನಷ್ಟು ತೊಂದರೆ ನೀಡಲ್ಲ ಅಮ್ಮ ಅಪ್ಪ. ನಾನೇನು ತಪ್ಪು ಮಾಡಲಿಲ್ಲ. ನಾನೇನು ಅಂತ ಉತ್ತರಿಸಲಿ ಎಲ್ಲರಿಗೂ, ಯಾರಿಗೆ ಅಂತ ಉತ್ತರಿಸಲಿ, ನನ್ನ ಕೈಯಿಂದ ಸಾಧ್ಯವಿಲ್ಲ. + + + +ನಾನು ಸತ್ತ ಮೇಲೆಯದರೂ ನ್ಯಾಯ ಸರಿಯಾಗಿ ತೀರ್ಮಾನವಾಗಲಿ. ನಾನು ಸತ್ತ ಮೇಲೆಯಾದರೂ ನನಗೆ ನ್ಯಾಯಬೇಕು ನನಗೆ ನ್ಯಾಯ ಕೊಡಿಸಿ. ನನ್ನ ಅತ್ತೆ ಮನೆಯವರಾದ ಆಸಿಯಾ, ನನ್ನ ಮಾವನವರಾದ ಏಜಿಯಾಜ್ ಆಹಮದ್, ಮೊಕ್ತಿಯಾರ್ ಪಾಶ್, ಫೌಸಿಯಾ, ಶಾವರ್, ನುಸ್ರತ್ ಮತ್ತು ನನ್ನ ಪತಿ ಆದಿಲ್ ಷರೀಫ್ ಇವರೆಲ್ಲ ನನಗೆ ಚಿತ್ರ ಹಿಂಸೆ ನೀಡಿದ್ದಾರೆ. ನಾನು ಗರ್ಬಿಣಿ ಎನ್ನುವುದನ್ನೂ ನೋಡಲಿಲ್ಲ. ನನ್ನ ಬಳಿ ಏನೂ ಉಳಿಯಲಿಲ್ಲ. ನನ್ನ ತಂದೆ ತಾಯಿ ಉಳಿಸಲು ಪೊಲೀಸರು, ವಕೀಲರು ಎಷ್ಟು ಮಂದಿ ಬಳಿ ಹೊಗಲಿ. ನನಗೆ ಆಗುತ್ತಿರಲಿಲ್ಲ. ನಾನು ಸತ್ತ ಮೇಲಾದರೂ ನನಗೆ ನ್ಯಾಯ ಸಿಗಬೇಕು. ದೇವರೆ ನನಗೆ ನ್ಯಾಯ ಬೇಕು.. ನನಗೆ ನ್ಯಾಯ ಬೇಕು. ನನಗೆ ನ್ಯಾಯ ಬೇಕು ದೇವರೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. + +ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv + + + diff --git a/PublicTV_World/0078fdee.txt b/PublicTV_World/0078fdee.txt new file mode 100644 index 0000000000000000000000000000000000000000..f1a16859747f6ce3fa3bd8864f01f525938b59eb --- /dev/null +++ b/PublicTV_World/0078fdee.txt @@ -0,0 +1,12 @@ +ತುಮಕೂರು:ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ಫೇಸ್‍ಬುಕ್‍ನಲ್ಲಿ ನಿಂದಿಸಿದ್ದ ಡಿಸಿಎಂ ಜಿ. ಪರಮೇಶ್ವರ್ ಅವರ ಬೆಂಬಲಿಗನಿಗೆ ಜಾರಕಿಹೊಳಿ ಬೆಂಬಲಿಗರು ಗೂಸಾ ನೀಡಿದ್ದಾರೆ. + +ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿಯಾದ ಡಿಸಿಎಂ ಬೆಂಬಲಿಗ ದರ್ಶನ್ ಹಲ್ಲೆಗೊಳಗಾದ ವ್ಯಕ್ತಿ. ರಾಜೀನಾಮೆ ವಿಚಾರವಾಗಿ ಪೋಸ್ಟ್ ಮಾಡಿದ್ದ ದರ್ಶನ್, ರಮೇಶ್ ಜಾರಕಿಹೊಳಿ ಅವರನ್ನು ವೇಶ್ಯೆಗೆ ಹೋಲಿಕೆ ಮಾಡುವ ಮೂಲಕ ಟೀಕಿಸಿದ್ದರು. + + + +ಪೋಸ್ಟ್ ನಲ್ಲಿ ಏನಿದೆ?ಕಾಂಗ್ರೆಸ್ ಪಕ್ಷದಿಂದ ನೀನು ಅಷ್ಟೆ. ನಿನ್ನಿಂದ ಕಾಂಗ್ರೆಸ್ ಪಕ್ಷ ಅಲ್ಲಾ. ಅಲ್ಲದೆ ನೀನು ತುಕಾಲಿ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಲಾಗಿತ್ತು. ಬಳಿಕ ಎಂಜಲು ಕಾಸಿಗೆ ವೇಶ್ಯೆಯಂತೆ ಮೈಮಾರಿಕೊಳ್ತಿಯಾ ಎಂದು ಬರೆದು ಪೋಸ್ಟ್ ಮಾಡಲಾಗಿತ್ತು. + +ಈ ಪೋಸ್ಟ್ ನಿಂದ ರೊಚ್ಚಿಗೆದ್ದ ಜಾರಕಿಹೊಳಿ ಬೆಂಬಲಿಗರು ದರ್ಶನ್ ಮೇಲೆ ಹಲ್ಲೆ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಹಲ್ಲೆ ನಡೆಸಿ ಕ್ಷಮೆ ಕೇಳಿಸಿ ಜಾರಕಿಹೊಳಿ ಬೆಂಬಲಿಗರು ಫೇಸ್‍ಬುಕ್‍ನಲ್ಲಿ ಮತ್ತೆ ಪೋಸ್ಟ್ ಮಾಡಿದ್ದಾರೆ. + + + diff --git a/PublicTV_World/007c8475.txt b/PublicTV_World/007c8475.txt new file mode 100644 index 0000000000000000000000000000000000000000..2d371337b2571f0a77e1f143603ac5bd4057c469 --- /dev/null +++ b/PublicTV_World/007c8475.txt @@ -0,0 +1,20 @@ +ಯಶ್ ನಟನೆಯ ಟಾಕ್ಸಿಕ್ ಸಿನಿಮಾದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ (Kareena Kapoor) ನಟಿಸ್ತಾರಾ? ಇಂಥದ್ದೊಂದು ಪ್ರಶ್ನೆ ಹಲವು ತಿಂಗಳ ಹಿಂದೆಯೇ ಶುರುವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಂತೆ ಕಾಣುತ್ತಿದೆ. ಬಿಟೌನ್ ನಲ್ಲಿ ಸುದ್ದಿ ಆಗಿರುವ ಪ್ರಕಾರ, ಸ್ವತಃ ಕರೀನಾ ಅವರೇ ಹೇಳಿಕೊಂಡಂತೆ ಬಾಲಿವುಡ್ (Bollywood) ಚಿತ್ರದಲ್ಲಿ ಕರೀನಾ ನಟಿಸುತ್ತಿದ್ದಾರಂತೆ. ಆದರೆ, ಆ ಸಿನಿಮಾ ಯಾವುದನ್ನು ಎನ್ನುವುದನ್ನು ಸದ್ಯಕ್ಕೆ ಹೇಳಲಾರೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. + + + +ಈ ಹಿಂದೆಯೇ ಸಂದರ್ಶನವೊಂದರಲ್ಲಿ ಕರೀನಾ ಅವರು, ಯಶ್ ಜೊತೆ ಮಾತ್ರ ನಟಿಸುತ್ತೇನೆ. ಪ್ರಭಾಸ್, ಅಲ್ಲು ನಕೋ ಬಾಬಾ ಎಂದಿದ್ದರು. ಯಶ್ ಜೊತೆ ನಟಿಸೋದು ಹೆವ್ವಿ ಇಷ್ಟ. ಅದೇ ಲೈಫ್ ಟೈಮ್ ಅಚೀವ್‌ಮೆಂಟು ಎಂದಿದ್ದರು. ಈ ಮೂಲಕ ತಾವು ಯಶ್ ಜೊತೆ ನಟಿಸುವ ಉತ್ಸಾಹವನ್ನೂ ತೋರಿಸಿದ್ದರು. ಆ ಕನಸು ನನಸಾದಂತೆ ಕಾಣುತ್ತಿದೆ. + + + +ಈ ನಡುವೆ ಯಶ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಇದೆ. ಟಾಕ್ಸಿಕ್ (Toxic) ಸಿನಿಮಾವನ್ನು ಗೀತು ಮೋಹನ್ ದಾಸ್ (Geethu Mohan Das) ನಿರ್ದೇಶನ ಮಾಡಲಿದ್ದಾರೆ ಎನ್ನುವ ವಿಷಯ ಬಿಟ್ಟರೆ, ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದ ಒಂದೇ ಒಂದು ಫೋಟೋ ಕೂಡ ಆಚೆ ಬಂದಿರಲಿಲ್ಲ. ಇದೇ ಮೊದಲ ಬಾರಿಗೆ ಯಶ್ ಮತ್ತು ಗೀತು ಅವರ ಫೋಟೋ ಸಿಕ್ಕಿದೆ. ಗೋವಾದಲ್ಲಿ ಸಿನಿಮಾದ ಶೂಟಿಂಗ್ ನಡೆದಿದ್ದು, ಆ ಫೋಟೋ ಅದು ಎನ್ನಲಾಗುತ್ತಿದೆ. + + + +ಟೆಂಪಲ್ ರನ್ ಮುಗಿಸಿಕೊಂಡು ಸದ್ಯ ಯಶ್ (Yash) ಗೋವಾದಲ್ಲಿ (Goa) ಬೀಡು ಬಿಟ್ಟಿದ್ದಾರೆ. ಗೋವಾದ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದರು. ಸದ್ಯ ಅವರು ಗೋವಾನಲ್ಲಿ ಬೀಡು ಬಿಟ್ಟಿರೋದು ಟಾಕ್ಸಿಕ್ ಸಿನಿಮಾದ ಶೂಟಿಂಗ್ ಗಾಗಿ ಎನ್ನುವ ವಿಚಾರ ಹರಿದಾಡುತ್ತಿತ್ತು. ಅದು ಈಗ ನಿಜವಾಗಿದೆ. ಶೂಟಿಂಗ್ ಸಮಯದ್ದು ಎನ್ನಲಾದ ಫೋಟೋ ವೈರಲ್ ಆಗಿದೆ. + + + +ಟಾಕ್ಸಿಕ್ ಸಿನಿಮಾದ ಬಗ್ಗೆ ಯಾವುದೇ ಅಪ್ ಡೇಟ್ ನೀಡದ ಯಶ್ ಮೊನ್ನೆಯಷ್ಟೇ ಈ ಕುರಿತಂತೆ ಮಾತನಾಡಿದ್ದರು. ತಮ್ಮ 19ನೇ ಸಿನಿಮಾದ ಪ್ರಾಜೆಕ್ಟ್ ಎಲ್ಲಿಗೆ ಬಂತು? ಎಂಬುದರ ಬಗ್ಗೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದರು. ಡೈರೆಕ್ಟರ್ ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಕೆವಿಎನ್ ಸಂಸ್ಥೆ ಜೊತೆ ಯಶ್ ಕೈಜೋಡಿಸಿದ್ದಾರೆ. + + + diff --git a/PublicTV_World/007ccbae.txt b/PublicTV_World/007ccbae.txt new file mode 100644 index 0000000000000000000000000000000000000000..a2910fbb9d74c1f2d1ad8621a5263eecf3b4a7d6 --- /dev/null +++ b/PublicTV_World/007ccbae.txt @@ -0,0 +1,14 @@ +ಹಾಸನ:ಜಿಲ್ಲೆಯಲ್ಲಿ ಕೊರೊನಾ ರುದ್ರ ತಾಂಡವಾಡುತ್ತಿದ್ದು, ಕೊರೊನಾ ಸೋಂಕಿಗೆ ಇಂದು 6 ಜನ ಮೃತಪಟ್ಟಿದ್ದಾರೆ. ಇದುವರೆಗೆ ಮಹಾಮಾರಿಗೆ ಒಟ್ಟು 60 ಮಂದಿ ಬಲಿಯಾಗಿದ್ದಾರೆ. + + + +ಅರಸೀಕೆರೆ ತಾಲೂಕಿನ 55 ವರ್ಷದ ಮಹಿಳೆ, 60 ವರ್ಷದ ಒಬ್ಬ ವ್ಯಕ್ತಿ ಉಸಿರಾಟದ ತೊಂದರೆಯಿಂದ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ 26 ವರ್ಷದ ಮಹಿಳೆ, 68 ವರ್ಷದ ವ್ಯಕ್ತಿ, 52 ವರ್ಷದ ವ್ಯಕ್ತಿ ಹಾಗೂ 50 ವರ್ಷದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್-19 ನಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಸ್ಪಷ್ಟಪಡಿಸಿದ್ದಾರೆ. + +ಜಿಲ್ಲೆಯಲ್ಲಿ ಇಂದು ಹೊಸದಾಗಿ 97 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,030 ಕ್ಕೆ ಏರಿಕೆಯಾಗಿದೆ. ಇಂದು 16 ಜನ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 901 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1069 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. + + + +ಇಂದು ಪತ್ತೆಯಾದ 97 ಪ್ರಕರಣಗಳಲ್ಲಿ 14 ಜನ ಅರಸೀಕೆರೆ, 17 ಮಂದಿ ಚನ್ನರಾಯಪಟ್ಟಣ, 32 ಜನ ಹಾಸನ, 14 ಜನ ಹೊಳೆನರಸೀಪುರ, ಆಲೂರು ತಾಲೂಕಿನಲ್ಲಿ ಒಬ್ಬರು, 7 ಜನ ಅರಕಲಗೂಡು, 11 ಜನ ಬೇಲೂರು ತಾಲೂಕಿನವರಾಗಿದ್ದಾರೆ. ಅಲ್ಲದೆ ಹೊರ ಜಿಲ್ಲೆಯ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. + + + diff --git a/PublicTV_World/007dec2e.txt b/PublicTV_World/007dec2e.txt new file mode 100644 index 0000000000000000000000000000000000000000..33fe67f2fe28c9cb07a7132f7ab78cb730423c0e --- /dev/null +++ b/PublicTV_World/007dec2e.txt @@ -0,0 +1,16 @@ +ಮಂಡ್ಯ:ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಬಿಜೆಪಿ ಕಾರ್ಯಕರ್ತರು ತವರಿಗೆ ಬಾ ತಂಗಿ ಎನ್ನುವ ಮೂಲಕ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಾಗಿನವನ್ನು ಪೋಸ್ಟ್ ಮುಖಾಂತರ ಕಳುಹಿಸಿ ಕೊಟ್ಟಿದ್ದಾರೆ. + +ಕಳೆದ ಒಂದು ವರ್ಷದಿಂದ ಜಿಲ್ಲೆಯಿಂದ ನಾಪತ್ತೆಯಾಗಿರುವ ರಮ್ಯಾರವರು ಪುನಃ ಮಂಡ್ಯಕ್ಕೆ ಆಗಮಿಸುವಂತೆ ಬಿಜೆಪಿ ಕಾರ್ಯಕರ್ತರು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮನವಿ ಮಾಡಿಕೊಂಡಿದ್ದಾರೆ. ರಮ್ಯಾರವರಿಗೆ ಪೋಸ್ಟ್ ಮೂಲಕ ಬಾಗಿನವನ್ನು ತಲುಪಿಸಿ, ತವರಿಗೆ ಬಾ ತಂಗಿ ಎನ್ನುವ ಮೂಲಕ ಉಡುಗೊರೆಯನ್ನು ಕಳುಹಿಸಿಕೊಟ್ಟಿದ್ದಾರೆ. + + + +ಕಳೆದ ವಿಧಾನಸಭೆ ಹಾಗೂ ನಗರಸಭೆ ಚುನಾವಣೆಗಳಿಗೂ ಮತಚಲಾಯಿಸಲು ಬಂದಿಲ್ಲ. ಗೌರಿ-ಗಣೇಶ ಹಬ್ಬಕ್ಕಾದರೂ ತವರು ಕ್ಷೇತ್ರ ಮಂಡ್ಯಕ್ಕೆ ಆಗಮಿಸಿ, ಜನರ ಕಷ್ಟಕ್ಕೆ ಸ್ಪಂದಿಸಲಿ ಎಂದು ಬಿಜೆಪಿ ಕಾರ್ಯಕರ್ತರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಕಳೆದ ಎರಡು ವರ್ಷದಿಂದ ನಾಪತ್ತೆಯಾಗಿರುವ ನೀವು, ಈಗಲಾದರೂ ಆಗಮಿಸದಿದ್ದರೆ ಮುಂದಿನ ಲೋಕಾ ಚುನಾವಣೆಗೆ ಬಂದಾಗ ಘೇರಾವ್ ಹಾಕುವುದಾಗಿ ಎಚ್ಚರಿಸಿದ್ದಾರೆ. + +ಬಾಗಿನದಲ್ಲಿ ಹೂವು, ಬಳೆ ಹಾಗೂ ತೆಂಗಿನಕಾಯಿ ಸೇರಿದಂತೆ ಎಲ್ಲವನ್ನೂ ಅಂಚೆ ಮೂಲಕ ರಮ್ಯಾಗೆ ರವಾನಿಸಿದ್ದಾರೆ. ಗೌರಿ-ಗಣೇಶ ಹಬ್ಬದ ನೆಪಕ್ಕಾದರೂ ರಮ್ಯಾರವರು ತವರು ಜಿಲ್ಲೆಗೆ ಬರುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಕಳೆದ ವಿಧಾನಸಭೆ ಹಾಗೂ ನಗರಸಭೆ ಚುನಾವಣೆಗಳಲ್ಲಿ ಮತ ಚಲಾಯಿಸಿದ ಬಾರಿ ಟೀಕೆಗೆ ರಮ್ಯಾ ಗುರಿಯಾಗಿದ್ದರು. + + + +ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv + + + diff --git a/PublicTV_World/007e7525.txt b/PublicTV_World/007e7525.txt new file mode 100644 index 0000000000000000000000000000000000000000..344db9b83e43473c777001e51306a7e9092a8faa --- /dev/null +++ b/PublicTV_World/007e7525.txt @@ -0,0 +1,18 @@ +ಮೊನ್ನೆಯಷ್ಟೇ ಭಾರತಕ್ಕೆ ಬಂದಿಳಿದಿರುವ ಆಸ್ಕರ್ ಪ್ರಶಸ್ತಿ ವಿಜೇತ, ಬಾಲಿವುಡ್ ನಟ  ವಿಲ್ ಸ್ಮಿತ್, ಭಾರತೀಯ ಸಿನಿಮಾ ರಂಗದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಮಾಡಿದ ವಿಷಯವನ್ನು ಬಹಿರಂಗ ಪಡಿಸದೇ ಇದ್ದರೂ, ಇಬ್ಬರ ಭೇಟಿಗೆ ಕುರುಹು ಎನ್ನುವಂತೆ ಫೋಟೋ ಶೇರ್ ಮಾಡಿದ್ದಾರೆ.ಇದನ್ನೂ ಓದಿ :ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ + + + +ರೆಹಮಾನ್ ಮತ್ತು ವಿಲ್ ಸ್ಮಿತ್ ಭೇಟಿಯಾಗಿದ್ದು ಇದು ಎರಡನೇ ಬಾರಿ. ರೆಹಮಾನ್ ಅವರಿಗೆ ಆಸ್ಕರ್ ಪ್ರಶಸ್ತಿ ದೊರೆತಾಗ ವಿಲ್ ಸ್ಮಿತ್ ಅವರನ್ನು ಹತ್ತಿರದಿಂದ ಭೇಟಿಯಾಗಿದ್ದರಂತೆ. ಈ ವಿಷಯವನ್ನು ಅವರು ಕಪಿಲ್ ಶರ್ಮಾ ಶೋನಲ್ಲಿ ಹೇಳಿಕೊಂಡಿದ್ದರು. ವಿಲ್ ಸ್ಮಿತ್ ಅವರನ್ನು ಹಾಡಿಹೊಗಳಿದ್ದರು. ಅವರೊಬ್ಬ ಅದ್ಭುತ ವ್ಯಕ್ತಿಯೆಂದು ಕೊಂಡಾಡಿದ್ದರು.ಇದನ್ನೂ ಓದಿ :ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ + + + +ವಿಲ್ ಸ್ಮಿತ್ ಇದೀಗ ಸದ್ಗುರು ಆಶ್ರಮದಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ. ಮನಃಶಾಂತಿಗಾಗಿ ಅವರು ಭಾರತವನ್ನು ಹುಡುಕಿಕೊಂಡು ಬಂದಿದ್ದಾರೆ. ರೆಹಮಾನ್ ಅವರು ಆಗಾಗ್ಗೆ ಸದ್ಗುರು ಆಶ್ರಮಕ್ಕೆ ಹೋಗುತ್ತಲೇ ಇರುತ್ತಾರೆ. ಬಹುಶಃ ಅಲ್ಲಿಯೇ ಇಬ್ಬರೂ ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಕುರಿತು ಯಾವುದೇ ಮಾಹಿತಿಯನ್ನು ರೆಹಮಾನ್ ಹಂಚಿಕೊಂಡಿಲ್ಲ.ಇದನ್ನೂ ಓದಿ :ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್ + + + +ಕಳೆದ ತಿಂಗಳು ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮ್ಮ ಪತ್ನಿಗೆ ನಿರೂಪಕ ಅಪಹಾಸ್ಯ ಮಾಡಿದರು ಎನ್ನುವ ಕಾರಣಕ್ಕಾಗಿ ವೇದಿಕೆಯ ಮೇಲೆಯೇ ವಿಲ್ ಸ್ಮಿತ್, ನಿರೂಪಕನ ಕಪಾಳಮೋಕ್ಷ ಮಾಡಿದ್ದರು. ಅದು ಭಾರೀ ಸುದ್ದಿ ಆಗಿತ್ತು. ಆಸ್ಕರ್ ಪ್ರಶಸ್ತಿ ಸಮಾರಂಭದಿಂದ ವಿಲ್ ಸ್ಮಿತ್ ಅವರನ್ನು ಬ್ಯಾನ್ ಮಾಡಲಾಗಿತ್ತು. ಅಲ್ಲಿಂದ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿಯೇ ಅವರು ಶಾಂತಿಯನ್ನು ಬಯಸಿ ಭಾರತಕ್ಕೆ ಬಂದಿದ್ದಾರೆ ಎನ್ನುತ್ತವೆ ಮೂಲಗಳು. + + + + + diff --git a/PublicTV_World/007f3534.txt b/PublicTV_World/007f3534.txt new file mode 100644 index 0000000000000000000000000000000000000000..989f146c82faf5f59881e8b4ff4ed54e13f07516 --- /dev/null +++ b/PublicTV_World/007f3534.txt @@ -0,0 +1,20 @@ +ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಏರಿಳಿತ ಮುಂದುವರಿದಿದೆ. ಇಂದು ಒಟ್ಟು 42,470 ಕೇಸ್ ದಾಖಲಾಗಿದ್ದು, 26 ಮರಣ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 30 ಸಾವಿರ ಗಡಿದಾಟಿದ್ದ ಪಾಸಿಟಿವ್ ಕೇಸ್‍ಗಳ ಸಂಖ್ಯೆ ದಿಢೀರ್ ಆಗಿ 17,266ಕ್ಕೆ ಇಳಿಕೆ ಕಂಡಿದೆ. + + + +ರಾಜ್ಯದಲ್ಲಿ ಇಂದು ಒಟ್ಟು 35,140 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 34,67,472 ಮಂದಿಗೆ ಕೊರೊನಾ ಬಂದಿದೆ. 30,98,432 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಪಾಸಿಟಿವಿಟಿ ರೇಟ್ ಶೇ.19.33 ರಷ್ಟಿದ್ದರೇ, ಕೋವಿಡ್-19 ಮರಣ ಪ್ರಮಾಣ ಶೇ.0.06 ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 17,266 ಪಾಸಿಟಿವ್ ಕೇಸ್ ದಾಖಲಾಗಿದ್ದು, 443 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 6 ಮರಣ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ:ಮುದ್ದು ಮಗಳಿಗೆ ಕನ್ನಡ ಕಲಿಸುತ್ತಿದ್ದಾರೆ ರಾಕಿಂಗ್ ಸ್ಟಾರ್ + + + +ರಾಜ್ಯದಲ್ಲಿ ಇಂದು ಒಟ್ಟು 1,79,816 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 2,19,699 ಸ್ಯಾಂಪಲ್ (ಆರ್​ಟಿಪಿಸಿಆರ್ 1,70,637 + 49,062 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.ಇದನ್ನೂ ಓದಿ:ಮೊದ್ಲು ಜನ್ರಿಗೆ ಆದಾಯ ಬರುವಂತೆ ಮಾಡಿ, ಆಮೇಲೆ ದರ ಏರಿಕೆ ಮಾಡಿ: ಡಿಕೆಶಿ + + + +ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು 6 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚಿನ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 42, ಬಳ್ಳಾರಿ 845, ಬೆಳಗಾವಿ 405, ಬೆಂಗಳೂರು ಗ್ರಾಮಾಂತರ 958, ಬೆಂಗಳೂರು ನಗರ 17,266, ಬೀದರ್ 138, ಚಾಮರಾಜನಗರ 397, ಚಿಕ್ಕಬಳ್ಳಾಪುರ 892, ಚಿಕ್ಕಮಗಳೂರು 166, ಚಿತ್ರದುರ್ಗ 622, ದಕ್ಷಿಣ ಕನ್ನಡ 795, ದಾವಣಗೆರೆ 645, ಧಾರವಾಡ 790, ಗದಗ 306, ಹಾಸನ 2,679, ಹಾವೇರಿ 124, ಕಲಬುರಗಿ 665, ಕೊಡಗು 653, ಕೋಲಾರ 1,417, ಕೊಪ್ಪಳ 138, ಮಂಡ್ಯ 1,822 ಮೈಸೂರು 4,601, ರಾಯಚೂರು 236, ರಾಮನಗರ 506, ಶಿವಮೊಗ್ಗ 474, ತುಮಕೂರು 3,417 ಉಡುಪಿ 877, ಉತ್ತರ ಕನ್ನಡ 390, ವಿಜಯಪುರ 125 ಮತ್ತು ಯಾದಗಿರಿಯಲ್ಲಿ 79 ಪಾಸಿಟಿವ್ ಪ್ರಕರಣ ದಾಖಲಾಗಿದೆ. + + + +Advertisement + + + diff --git a/PublicTV_World/007fffd6.txt b/PublicTV_World/007fffd6.txt new file mode 100644 index 0000000000000000000000000000000000000000..2de98b1fab2867e3d13a1d26390b4115f2ef33a4 --- /dev/null +++ b/PublicTV_World/007fffd6.txt @@ -0,0 +1,32 @@ +ಬೆಳಗಾವಿ:ಪ್ರತಿಯೊಂದು ಸಂಸಾರದಲ್ಲೂ ಜಗಳ ನಡೆಯುತ್ತದೆ. ಸರಸ, ವಿರಸ, ಸಾಮರಸ್ಯ ಇದ್ದರೆ ಅದು ಸಂಸಾರ. ನಮ್ಮ ಸಂಸಾರ ಚೆನ್ನಾಗಿದೆ ಎಂದು ಪ್ರೇಮಕವಿ ಕೆ.ಕಲ್ಯಾಣ್ ತಮ್ಮ ದಾಂಪತ್ಯ ಜೀವನದ ಬಗ್ಗೆ ಸ್ಪಷ್ಟಪಡಿಸಿದರು. + +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಕಲ್ಯಾಣ್, ನಮ್ಮ ತಂದೆ ತೀರಿಕೊಂಡು 14 ವರ್ಷ ಆಗಿದೆ. ನಮ್ಮ ತಾಯಿ ಎರಡೂವರೆ ವರ್ಷದ ಹಿಂದೆ ಸಾವನ್ನಪ್ಪಿದ್ದಾರೆ. ಅಲ್ಲಿಯತನಕ ನಾವೆಲ್ಲರೂ ಒಟ್ಟಿಗೆ ಇದ್ವಿ, ಆಮೇಲೆ ನಾನು, ನನ್ನ ಹೆಂಡತಿ ಒಟ್ಟಿಗೆ ಬೇರೆ ಮನೆಯಲ್ಲಿ ವಾಸಮಾಡುತ್ತಿದ್ವಿ. ನಮ್ಮ ಮನೆಯಿಂದ ಸ್ವಲ್ಪ ದೂರದಲ್ಲಿ ಪತ್ನಿಯ ಪೋಷಕರು ವಾಸಮಾಡುತ್ತಿದ್ದರು. ವಯಸ್ಸಾದರೂ ಯಾಕೆ ಬೇರೆ ಇರಬೇಕು ಎಂದು ನಮ್ಮ ಮನೆಗೆ ಕರೆದುಕೊಂಡು ಬಂದು ಒಟ್ಟಿಗೆ ವಾಸ ಮಾಡುತ್ತಿದ್ದೆವು ಎಂದರು. + + + +ಮೊದಲಿಗೆ ನಾನು ನನ್ನ ಹೆಂಡತಿ ಚೆನ್ನಾಗಿದ್ದೀವಿ. ನಮ್ಮಿಬ್ಬರಲ್ಲಿ ಯಾವುದೇ ಪರಸ್ಪರ ಗೊಂದಲಗಳಿಲ್ಲ. ನನ್ನ ಪತ್ನಿ ಬೆಳಗಾವಿಯವರು ನಾವಿಬ್ಬರು ಮದುವೆಯಾಗಿ 15 ವರ್ಷ ಆಗಿದೆ. ಪ್ರತಿಯೊಬ್ಬರ ಸಂಸಾರದಲ್ಲೂ ಸಣ್ಣಪುಟ್ಟ ಏಳು ಬೀಳುಗಳು ಆರೋಪಗಳಿರುತ್ತವೆ. ಸರಸ, ವಿರಸ, ಸಾಮರಸ್ಯ ಇದ್ದರೇನೆ ಅದು ಸಂಸಾರ. ನಮ್ಮ ಸಂಸಾರನೂ ಚೆನ್ನಾಗಿದೆ ಎಂದು ಸ್ಪಷ್ಟಪಡಿಸಿದರು. + + + +ಅತ್ತ, ಮಾವ ಬಂದ ಒಂದು ವಾರಕ್ಕೆ ಗಂಗಾ ಕುಲಕರ್ಣಿಯನ್ನು ಅಡಿಗೆ ಕೆಲಸಕ್ಕಾಗಿ ನೇಮಿಸಿಕೊಳ್ಳಲಾಗಿತ್ತು. ಆದರೆ ಆಕೆಯ ನಡವಳಿಕೆ ನನಗೂ ನನ್ನ ಪತ್ನಿಗೂ ಇಷ್ಟವಾಗಿರಲಿಲ್ಲ. ಅಲ್ಲದೇ ಆಕೆಯ ಬಂದ 4-5 ದಿನಗಳಲ್ಲಿ ಪತ್ನಿ, ಅತ್ತೆ, ಮಾವ ಯಾಕೋ ಸೈಲೆಂಟ್ ಆದರು. ನನಗೆ ಏನೋ ನಿಗೂಢತೆ ರೀತಿ ಕಾಣಿಸುತ್ತಿತ್ತು. ಒಂದು ದಿನ ಮಧ್ಯರಾತ್ರಿ ಅತ್ತೆ ದೇವರ ಮನೆಯಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ದೀಪ ಹಚ್ಚಿಕೊಂಡು ಬೆಳಗ್ಗೆ ಸುಮಾರು 3 ಗಂಟೆಯವರೆಗೂ ಪೂಜೆ ಮಾಡಲು ಶುರು ಮಾಡಿದರು. ಆಗ ಗಂಗಾ ಕುಲಕರ್ಣಿಯ ಸಲಹೆಯಂತೆ ಪೂಜೆ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಾಯಿತು. + + + +ಪದೇ ಪದೇ ನನಗೆ ಗೊತ್ತಿರುವ ಗುರೂಜಿ ಇದ್ದಾರೆ. ಅವರ ಆಶೀರ್ವಾದ ಪಡೆದುಕೊಂಡರೆ ಒಳ್ಳೆದಾಗುತ್ತದೆ ಎಂದು ಗಂಗಾ ಕುಲಕರ್ಣಿ ಹೇಳುತ್ತಿದ್ದರು. ಒಮ್ಮೆ ಆ ವ್ಯಕ್ತಿಗೆ ಫೋನ್ ಮಾಡಿ ಕೊಟ್ಟಿದ್ದರು. ಆತನ ಹೆಸರು ಶಿವನಂದ ವಾಲಿ. ಪೂಜೆ ಮಾಡಿಸಲು ಹೇಳಿದ್ರು, ನಾನು ಒಪ್ಪಲಿಲ್ಲ. ಆದರೆ ನಮ್ಮ ಅತ್ತೆಯವರು ಗುರೂಜಿ ಜೊತೆ ಗಂಟೆಗಟ್ಟಲೇ ಫೋನಿನಲ್ಲಿ ಮಾತನಾಡುತ್ತಿದ್ದರು. ಜನವರಿ 9 ರಂದು ರಾತ್ರಿ ಬೆಳಗಾವಿಗೆ ಹೋಗಿ ಬರುತ್ತೇವೆ ಎಂದು ಪತ್ನಿ, ಅತ್ತೆ, ಮಾವ ಮೂವರು ಹೋದರು. ಆದರೆ ಜನವರಿ 10ರಂದು ಪತ್ನಿಯ ಫೋನ್ ಸ್ವಿಚ್ ಆಫ್ ಆಗಿತ್ತು. ಕೊನೆಗೆ ಜನವರಿ 17 ರಂದು ಬೆಳಗಾವಿಗೆ ಬಂದು ನೋಡಿದೆ. ಆಗ ಅತ್ತೆ ನನ್ನ ಪತ್ನಿಯನ್ನು ಭೇಟಿ ಮಾಡಲು ಬಿಡಲಿಲ್ಲ. ಅಲ್ಲಿಯೂ ಗಂಗಾ ಕುಲಕರ್ಣಿ ಹೇಳಿದಂತೆ ಪೂಜೆ ಮಾಡುತ್ತಿದ್ದರು ಎಂದು ಕಲ್ಯಾಣ್ ತಿಳಿಸಿದರು. + + + +ಒಂದು ದಿನ ಮೂವರು ಮನೆ ಖಾಲಿ ಮಾಡಿಕೊಂಡು ಬೇರೆ ಕಡೆ ಹೋಗಿದ್ದರು. ಆ ಮನೆಯಲ್ಲಿ ಗಂಗಾ ಕುಲಕರ್ಣಿ, ಶಿವನಂದ ವಾಲಿ ಪೂಜೆ ಮಾಡಲು ಶುರು ಮಾಡಿದ್ದರು. ಈ ವಿಚಾರ ಗೊತ್ತಾಗಿ ಬರುವಷ್ಟರಲ್ಲಿ ಆ ಮನೆಯನ್ನು ಖಾಲಿ ಮಾಡಿ ಬೇರೆ ಕಡೆ ಹೋಗಿದ್ದಾರೆ ಎಂದು ನನಗೆ ಗೊತ್ತಾಯಿತು. ಬೆಂಗಳೂರಿನ ಬಂದು ಎಲ್ಲ ಕಡೆ ಹುಡುಕಿದೆ. ಆಗ ಮೂವರು ಪತ್ತೆಯಾದರು. ಆದರೆ ಈ ವೇಳೆ ನನ್ನ ಪತ್ನಿಯನ್ನು ಮಾತನಾಡಲು ಬಿಡದೆ ರೂಮಿಗೆ ಕರೆದುಕೊಂಡು ಹೋದರು. ಆಕೆಯ ಕತ್ತಲ್ಲಿ ನಾನು ಕಟ್ಟಿದ್ದ ತಾಳಿಯೂ ಇರಲಿಲ್ಲ. ನನ್ನ ಪತ್ನಿ ಬೇರೆ ಅಪರಿಚಿತರ ಜೊತೆ ಮಾತನಾಡುವ ರೀತಿ ಮಾತಾಡಿದರು. + + + +ಅಲ್ಲದೇ ನನ್ನ ಪತ್ನಿಯ ತಾಯಿ ಸಂಬಂಧಿಕರಿಗೆ ಫೋನ್ ಮಾಡಿ ಲಕ್ಷಾಂತರ ಹಣಬೇಕು ಎಂದು ಕೇಳಿದ್ದಾರೆ. ಪೂಜೆ ಮಾಡಿಸಬೇಕು, ಇಲ್ಲವಾದರೆ ನಮ್ಮ ಪ್ರಾಣಕ್ಕೆ ಅಪಾಯ ಇದೆ. ಹಣವನ್ನು ಗುರೂಜಿಗೆ ಕೊಡಬೇಕು ಎಂದು ಹಣ ಕೇಳಿದ್ದಾರೆ. ಒಂದು ದಿನ ನನ್ನ ಪತ್ನಿಯ ಅಕೌಂಟ್‍ನಿಂದ ಏಕಾಏಕಿ 1.20 ಲಕ್ಷ ಹಣ ಶಿವಾನಂದ ವಾಲಿಗೆ ಅಕೌಂಟ್‍ಗೆ ವರ್ಗಾವಣೆಯಾಗಿದೆ. ಸಂಬಂಧಿಕರ ಬಳಿ ಪಡೆದಿದ್ದ ಹಣವನ್ನ ಶಿವಾನಂದ ವಾಲಿಗೆ ಕೊಟ್ಟಿದ್ದಾರೆ. ಅಲ್ಲದೇ ಬೆಳಗಾವಿಯಲ್ಲಿ ಅತ್ತೆ, ಮಾವ ಹೆಸರಿನಲ್ಲಿದ್ದ ಆಸ್ತಿಯೂ ಕೂಡ ಶಿವಾನಂದ ವಾಲಿಗೆ ವರ್ಗಾವಣೆ ಆಗಿದೆ ಎಂದರು. + + + +ಇದ್ದಕ್ಕಿದ್ದಂತೆ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಮೂರು ತಿಂಗಳಿನಿಂದ ಸಂಬಂಧಿಕರ ಸಂಪರ್ಕದಲ್ಲೂ ಇರಲಿಲ್ಲ. ನನ್ನ ಪತ್ನಿಯ ಕುಟುಂಬಸ್ಥರ ಜೊತೆ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ನಾನು ದೂರು ದಾಖಲಿಸಿರುವೆ. ದೂರಿನಲ್ಲಿ ನನ್ನ ಅತ್ತೆ, ಮಾವ ಕಾಣಿಸಿಕೊಳ್ಳುತ್ತಿಲ್ಲ. ನಮ್ಮ ಕುಟುಂಬಕ್ಕೆ ಸಂಬಂಧ ಇಲ್ಲದ ವ್ಯಕ್ತಿಗೆ ಆಸ್ತಿ, ಹಣ ಎಲ್ಲವನ್ನೂ ಬರೆದುಕೊಟ್ಟಿರುವ ಬಗ್ಗೆ ಹೇಳಿದ್ದೇನೆ. ದೂರು ನೀಡಿದ 48 ಗಂಟೆಯ ಒಳಗೆ ಅತ್ತೆ, ಮಾವ, ಪತ್ನಿ ಪತ್ತೆಯಾಗಿದ್ದಾರೆ. ಶಿವಾನಂದ ವಾಲಿ, ಗಂಗಾ ಕುಲಕರ್ಣಿ ಒಂದೇ ದಿನ ಫೋನ್ ಸ್ವಿಚ್ ಆಪ್ ಮಾಡಿದ್ದಾರೆ. ಅತ್ತೆ ಮಾವನಿಗೆ ವಯಸ್ಸಾಗಿದೆ. ಹೀಗಾಗಿ ಅವರು ಕಾಣಿಸಿಕೊಳ್ಳದ ಕಾರಣ ದೂರು ನೀಡಿದ್ದೆ. ಶಿವಾನಂದ ವಾಲಿ ಬಂಧನ ಆಗುತ್ತಿದ್ದಂತೆ ನನ್ಮ ಪತ್ನಿ ನನ್ನ ವಿರುದ್ಧ ಆರೋಪಗಳನ್ನ ಮಾಡಿದ್ದಾರೆ ಎಂದು ನಡೆದ ಘಟನೆಯ ಬಗ್ಗೆ ಕೆ.ಕಲ್ಯಾಣ್ ವಿವರವಾಗಿ ತಿಳಿಸಿದರು. + + + + + diff --git a/PublicTV_World/00815075.txt b/PublicTV_World/00815075.txt new file mode 100644 index 0000000000000000000000000000000000000000..ba9ab8864f77ad591166b3e74b9d9ca878981115 --- /dev/null +++ b/PublicTV_World/00815075.txt @@ -0,0 +1,20 @@ +ಬಾಕ್ಸ್ ಆಫೀಸಿನಲ್ಲಿ ಸಖತ್ ಕಮಾಯಿ ಮಾಡಿರುವ ಬಾಲಿವುಡ್ ನ ಆರ್ಟಿಕಲ್ 370 ಚಿತ್ರವು ಸದ್ಯಲ್ಲದೇ ಒಟಿಟಿಯಲ್ಲೂ (Ott) ಕಾಣಿಸಿಕೊಳ್ಳಲಿದೆ. ಚುನಾವಣೆಯನ್ನು ಮುಂದಿಟ್ಟುಕೊಂಡು ಈ ಚಿತ್ರವನ್ನು ಆತುರಾತುರವಾಗಿ ತರುತ್ತಿದ್ದಾರೆ ಎನ್ನುವ ಆರೋಪದ ನಡುವೆಯೂ ಏಪ್ರಿಲ್ 19ಕ್ಕೆ ಈ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ. + + + +ಈ ಸಿನಿಮಾವನ್ನು ಮೆಚ್ಚಿಕೊಳ್ಳದವರೇ ಇಲ್ಲ. ಈ ಹಿಂದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh)  ತಮ್ಮ ಕುಟುಂಬದೊಂದಿಗೆ ದೆಹಲಿಯಲ್ಲಿ ಆರ್ಟಿಕಲ್ 370 (Article 370) ಸಿನಿಮಾ ನೋಡಿದ್ದರು. ಈ ಕುರಿತಂತೆ ಅವರು ಟ್ವೀಟ್ ಮಾಡಿದ್ದರು. ಈ ಸಿನಿಮಾ ಕುರಿತಂತೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿದ್ದರ ಬಗ್ಗೆ ಮನಮುಟ್ಟುವಂತೆ ಸಿನಿಮಾದಲ್ಲಿ ಹೇಳಿದ್ದಾರೆ. ಇದು ನೈಜ ಘಟನೆಗಳ ಪ್ರೇರಣೆಯಿಂದ ಆಗಿರುವ ಸಿನಿಮಾ’ ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾ ನೋಡುವಾಗ ಭಾವುಕರಾದ ಸಂಗತಿಯನ್ನೂ ಅವರು ಬಿಚ್ಚಿಟ್ಟಿದ್ದರು. + + + +ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೂಡ ಆರ್ಟಿಕಲ್ 370 ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದರು. ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ, ‘ಆರ್ಟಿಕಲ್ 370 ಸಿನಿಮಾ ಜಮ್ಮು ಕಾಶ್ಮೀರದ ವಿಶೇಷ ಅಧಿಕಾರವನ್ನು ಯಾಕೆ ತಗೆಯಲಾಯಿತು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದ್ದರು. + + + +ಮೋದಿಯ ಈ ಭಾಷಣವನ್ನು ಕೇಳಿರುವ ಆರ್ಟಿಕಲ್ 370 ಸಿನಿಮಾದ ನಾಯಕಿ ಯಾಮಿನಿ ಗೌತಮ್ (Yamini Gautam), ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದರು. ಈ ನೈಜ ಕಥೆಯನ್ನು ನಿಮಗೆ ಮತ್ತು ಎಲ್ಲರಿಗೂ ಒಪ್ಪುವಂತೆ ಸಿನಿಮಾ ಮಾಡಿದ್ದೇವೆ ಎನ್ನುವ ಭರವಸೆಯನ್ನು ನಾನು ಮತ್ತು ನನ್ನ ತಂಡ ನೀಡಲಿದೆ ಎಂದು ಯಾಮಿನಿ ಪ್ರತಿಕ್ರಿಯೆ ನೀಡಿದ್ದರು. + + + +ಅಂದಹಾಗೆ ಕನ್ನಡತಿ ಪ್ರಿಯಾ ಮಣಿ ಹಾಗೂ ಬಾಲಿವುಡ್ ಹೆಸರಾಂತ ನಟಿ ಯಾಮಿನಿ ಗೌತಮ್ ಕಾಂಬಿನೇಷನ್ ನ ಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಾತ್ರಗಳು ಇವೆ. ಯಾಮಿ ಗೌತಮ್ ಖಡಕ್ ಎನ್.ಐ.ಎ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. + + + diff --git a/PublicTV_World/00831f5a.txt b/PublicTV_World/00831f5a.txt new file mode 100644 index 0000000000000000000000000000000000000000..2584c8a96a561e8097fe733ca11034fca3255c11 --- /dev/null +++ b/PublicTV_World/00831f5a.txt @@ -0,0 +1,10 @@ +ಚಿಕ್ಕೋಡಿ:ಹೊಟ್ಟೆನೋವು ತಾಳಲಾರದೆ ಮೃತಪಟ್ಟಿದ್ದ ಕರ್ತವ್ಯ ನಿರತ ಯೋಧನ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆಯುತು. + +ವೀರಯೋಧ ಸುನೀಲ್ ಖೀಲಾರಿ (35) ಕಳೆದ 17 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಅಸ್ಸಾಂ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ವೇಳೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ಗುಹವಾಟಿಯ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು. + + + +ಮೃತ ಯೋಧನ ಪಾರ್ಥಿವ ಶರೀರ ಇಂದು ಮಂಗಸೂಳಿ ಗ್ರಾಮಕ್ಕೆ ಆಗಮಿಸಿತ್ತು. ಸುನೀಲ್ ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿತ್ತು. ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಸಲಾಯಿತು. + + + diff --git a/PublicTV_World/008857f5.txt b/PublicTV_World/008857f5.txt new file mode 100644 index 0000000000000000000000000000000000000000..fdcdbcd6b9cf0a5ddd1f9dd85dfca6851a4eb626 --- /dev/null +++ b/PublicTV_World/008857f5.txt @@ -0,0 +1,22 @@ +ಬೆಂಗಳೂರು:73 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರವಾಹದಲ್ಲಿ ಮೃತಪಟ್ಟ ಕುಟುಂಬಕ್ಕೆ ಮತ್ತು ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. + +ಈ ವೇಳೆ ಮಾತನಾಡಿದ ಬಿಎಸ್‍ವೈ ನಾಡ ಬಾಂಧವರೇ ನಿಮ್ಮಗೆಲ್ಲರಿಗೂ 73 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಮಹಾತ್ಮ ಗಾಂಧಿ ಹೇಳಿದಂತೆ ಸ್ವಾತಂತ್ರ್ಯ ಉಸಿರಾಟದಷ್ಟೇ ಅಮೂಲ್ಯವಾದದ್ದು, ಗಾಂಧಿ 150 ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಸಂದೇಶ ನೀಡುವ ಅವಕಾಶ ಸಿಕ್ಕಿದು ಸಂತೋಷ ತಂದಿದೆ. ನಮಗೆ ಅಭಿವೃದ್ಧಿ ಆಡಳಿತದ ಮಂತ್ರ ಎಂದು ಹೇಳಿದರು. + +ಕನ್ನಡಿಗರಿಗೆ ಉದ್ಯೋಗಕ್ಕೆ ಪ್ರಾತಿನಿಧ್ಯ ನೀಡುವುದು ಈ ಸರ್ಕಾರದ ಮೊದಲ ಆದ್ಯತೆ ಮತ್ತು ನಿಲುವು ಆಗಿದೆ. ಕನ್ನಡಿಗರ ಉದ್ಯೋಗ ಅವಕಾಶದಲ್ಲಿ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಎಚ್ಚರ ವಹಿಸುತ್ತೇವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿ 4 ಸಾವಿರ ನೆರವು ಕೊಡುತ್ತಿದ್ದೇವೆ. ಜನರ ಹಿತಕ್ಕಾಗಿ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆ ಮಾಡುತ್ತೇವೆ. ಸಕಾಲದಲ್ಲಿ ಖರೀದಿ ಕೇಂದ್ರ ತೆರೆಯಲು ಸರ್ಕಾರ ಬದ್ಧ ಎಂದು ತಿಳಿಸಿದರು. + + + +ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಗಳ ಸಭೆ ನಡೆಸಿ ಜನರ ಅಭಿವೃದ್ಧಿಗಾಗಿ ಚರ್ಚೆ ಮಾಡಿದ್ದೇನೆ. ಪ್ರಕೃತಿ ವಿಕೋಪ ಮತ್ತು ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ನನ್ನ ಸರ್ಕಾರ ಸಿದ್ಧವಿದೆ. ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದೇನೆ. ಸುಮಾರು ಅರ್ಧ ರಾಜ್ಯ ಜಲಪ್ರಳಯ ಆಗಿದೆ. 103 ತಾಲೂಕುಗಳು ಭೀಕರ ಪ್ರವಾಹಕ್ಕೆ ತುತ್ತಾಗಿದೆ. 5 ಜಿಲ್ಲೆ ಭಾಗದಲ್ಲಿ ಮಳೆ ಇಲ್ಲದೆ ಬರದ ಪರಿಸ್ಥಿತಿಯೂ ಇದೆ. ಪ್ರವಾಹದಲ್ಲಿ 61 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. + +ಕೇಂದ್ರಕ್ಕೆ ಅಗತ್ಯ ನೆರವು ಕೇಳಿದ್ದೇವೆ, ಖುದ್ದು ಕೇಂದ್ರದ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಡಿ ವಿ ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಬಂದು ಪರಿಶೀಲನೆ ಮಾಡಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟ ಕುಟುಂಬದವರಿಗೆ 5 ಲಕ್ಷ ರೂ ಪರಿಹಾರ. ಪ್ರವಾಹ ಸಂತ್ರಸ್ತರಿಗೆ 10 ಸಾವಿರ ರೂ, ಮನೆ ಸಂಪೂರ್ಣ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ. ಪ್ರತಿ ಪಕ್ಷಗಳೂ ಸರ್ಕಾರದ ಪರಿಹಾರ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿವೆ ಎಂದು ಹೇಳಿದರು. + +ರಾಜ್ಯದಲ್ಲಿ ನೀರಾವರಿ ಸೌಲಭ್ಯದ ಹೆಚ್ಚಳಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ರೈತರಿಗೆ ವ್ಯವಸ್ಥಿತ ಮತ್ತು ವೈಜ್ಞಾನಿಕ ಗೋದಾಮು ಸೌಕರ್ಯ ಕಲ್ಪಿಸುತ್ತೇವೆ. ಕೈಗಾರಿಕೆಗಳಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣದ ಸೃಷ್ಟಿ ಮಾಡುವ ನಿಟ್ಟಿನಲ್ಲಿ ನೂತನ ಕೈಗಾರಿಕಾ ನೀತಿಯನ್ನು ರೂಪಿಸುತ್ತೇವೆ. 2019-24 ರ ನೂತನ ಜವಳಿ ಮತ್ತು ಶುದ್ಧ ಉಡುಪು ನೀತಿಯನ್ನು ಜಾರಿಗೊಳಿಸಲಿದ್ದೇವೆ ಎಂದು ಹೇಳಿದರು. + + + +ಧ್ವಜಾರೋಹಣಕ್ಕಿಂತ ಮೊದಲು ಸಿಎಂ ಅವರಿಂದ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಬಳಿಕ ಗೌರವ ರಕ್ಷೆ ಸ್ವೀಕಾರ ಪಥಸಂಚಲದಲ್ಲಿ ಕೆ ಎಸ್ ಆರ್ ಪಿ, ಸ್ಕೌಟ್ಸ್, ಗೈಡ್ಸ್, ಎನ್ ಸಿಸಿ, ಸೇವಾದಳ ಹಾಗೂ ಶಾಲಾ ಮಕ್ಕಳನೊಳಗೊಂಡ ಕವಾಯತು ಮತ್ತು ಬ್ಯಾಂಡ್ ನ 34 ತುಕಡಿಗಳಲ್ಲಿ ಸುಮಾರು 1130 ಮಂದಿ ಭಾಗಿಯಾಗಿದ್ದರು. + +Advertisement + + + diff --git a/PublicTV_World/008cd0f3.txt b/PublicTV_World/008cd0f3.txt new file mode 100644 index 0000000000000000000000000000000000000000..58257e3f8c16ccba06be197110f75f265f1c8391 --- /dev/null +++ b/PublicTV_World/008cd0f3.txt @@ -0,0 +1,16 @@ +ಸುಧೀರ್‌ ಶಾನುಭೋಗ್‌ ನಿರ್ದೇಶಿಸುತ್ತಿರುವ ಚಿತ್ರ ಧರಣಿ (Dharani). ಅಪ್ಪಟ ದೇಸೀ ಕಥಾವಸ್ತು ಹೊಂದಿರುವ ಧರಣಿ ಚಿತ್ರದಲ್ಲಿ ಕೋಳಿ ಪಂದ್ಯ ಸೇರಿದಂತೆ ಅನೇಕ ಹೊಸ ವಿಚಾರಗಳು ಸೇರಿಕೊಂಡಿವೆ. ಈ ಹಿಂದೆ ಟಕ್ಕರ್‌ ಸಿನಿಮಾದ ಮೂಲಕ ನಾಯಕನಾಗಿ ಪರಿಚಯಗೊಂಡಿದ್ದ ಮನೋಜ್‌ ಕುಮಾರ್‌  (Manoj Kumar) ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಶಿವಮೊಗ್ಗ ಜೈಲು (Jail), ಚಿಕ್ಕಬಳ್ಳಾಪುರ, ಶ್ರೀನಿವಾಸಪುರ, ಚನ್ನಪಟ್ಟಣ ಸೇರಿದಂತೆ ಅನೇಕ ಜಾಗಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ. + + + +ಇತ್ತೀಚೆಗೆ ಶಿವಮೊಗ್ಗ ಜೈಲಿನಲ್ಲಿ ಬಾರೀ ಹೊಡೆದಾಟದ ದೃಶ್ಯಗಳ ಚಿತ್ರೀಕರಣ ನೆರವೇರಿದೆ. ಮುನ್ನೂರಕ್ಕೂ ಅಧಿಕ ಜ್ಯೂನಿಯರ್‌ ಕಲಾವಿದರು, ಹತ್ತಾರು ಜನ ಫೈಟರ್‌ಗಳು, ನಾಯಕ, ನಾಯಕಿ ಸೇರಿದಂತೆ ಹಲವರು ಪಾಲ್ಗೊಂಡಿದ್ದ ದೃಶ್ಯಗಳು ಅದ್ದೂರಿಯಾಗಿ ಸೆರೆಯಾಗಿದೆ. ಸಾಹಸ ದೃಶ್ಯಗಳ ಜೊತೆಗೆ ಒಂದು ಹಾಡನ್ನು ಕೂಡಾ ಇಲ್ಲಿ ಚಿತ್ರೀಕರಿಸಲಾಗಿದೆ. ಸದ್ಯ ಧರಣಿ ಚಿತ್ರತಂಡ ಚನ್ನಪಟ್ಟಣದಲ್ಲಿ ಬೀಡುಬಿಟ್ಟಿದೆ. ರಾಘು ಮೈಸೂರು ನಿರ್ಮಿಸಿರುವ ವಿಶೇಷ ಸೆಟ್‌ ಮತ್ತು ಹಳ್ಳಿಯ ವಾತಾವರಣದಲ್ಲಿ ಮಾತಿನ ಭಾಗದ ಚಿತ್ರೀಕರಣ ಸಾಗುತ್ತಿದೆ. + + + +ಕೋಳಿ ಪಂದ್ಯದ ಸುತ್ತ ಬೆಸೆದುಕೊಂಡಿರುವ ಈ ಧರಣಿ ಚಿತ್ರದಲ್ಲಿ ಈ ವರೆಗೆ ಎಲ್ಲೂ ಅನಾವರಣಗೊಳ್ಳದ ಸಾಮಾಜಿಕ ವ್ಯವಸ್ಥೆ, ಸಮುದಾಯದ ಸಮಸ್ಯೆಗಳೂ ದೃಶ್ಯ ರೂಪದಲ್ಲಿ ತೆರೆದುಕೊಳ್ಳಲಿದೆ ಅನ್ನೋದು ನಿರ್ದೇಶಕ ಸುಧೀರ್‌ ಶಾನುಭೋಗ್‌ ವಿವರಣೆ. + + + +ಶಶಾಂಕ್‌ ಶೇಷಗಿರಿ ಸಂಗೀತ, ಅರುಣ್‌ ಸುರೇಶ್‌ ಛಾಯಾಗ್ರಹಣವಿರುವ ಧರಣಿ ಚಿತ್ರದಲ್ಲಿ  ಸಂಪತ್‌ ಮೈತ್ರೇಯ, ಫ್ರೆಂಚ್‌ ಬಿರಿಯಾನಿ ಮಹಂತೇಶ್‌, ಸತ್ಯರಾಜ್‌, ಮೊದಲಾದವರ ತಾರಾಗಣವಿದೆ. ಇನ್ನೂ ಅನೇಕ ಹೆಸರಾಂತ ಸಿನಿಮಾ ಮತ್ತು ರಂಗಭೂಮಿ ಕಲಾವಿದರು ಈ ಚಿತ್ರದ ಭಾಗವಾಗಲಿದ್ದಾರೆ ಮನೋಜ್‌ ಅವರಿಗೆ ಜೋಡಿಯಾಗಿ ಹೊಸ ಪ್ರತಿಭೆ ರವೀಕ್ಷಾ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ. + + + diff --git a/PublicTV_World/0092bde9.txt b/PublicTV_World/0092bde9.txt new file mode 100644 index 0000000000000000000000000000000000000000..df5c260425dc958d3d3047c8f9448b04b0284a6f --- /dev/null +++ b/PublicTV_World/0092bde9.txt @@ -0,0 +1,18 @@ +ಮಡಿಕೇರಿ:ರಾಜ್ಯದ ರಣಜಿ ತಂಡದ ಮಾಜಿ ಆಟಗಾರ ಹಾಗೂ ಬಿಗ್ ಬಾಸ್ 3 ಸೀಸನ್ ಸ್ಪರ್ಧಿಯಾಗಿ ಪ್ರಸಿದ್ಧಿ ಪಡೆದಿರುವ ಎನ್.ಸಿ ಅಯ್ಯಪ್ಪ ಹಾಗೂ ಸ್ಯಾಂಡಲ್‍ವುಡ್ ನಟಿ ಅನು ಪೂವಮ್ಮ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. + +ಎನ್.ಸಿ ಅಯ್ಯಪ್ಪ ಹಾಗೂ ನಟಿ ಅನು ಪೂವಮ್ಮ ಅವರ ಮದುವೆ ಇಂದು ಕೊಡಗಿನ ವೀರಾಜಪೇಟೆ ಕೊಡವ ಸಮಾಜದಲ್ಲಿ ನಡೆಯುತ್ತಿದೆ. ಕೊಡವ ಸಂಪ್ರದಾಯದಂತೆ ಮದುವೆ ನಡೆದಿದೆ. ಖ್ಯಾತ ಚಿತ್ರನಟಿ ಪ್ರೇಮಾ ಅವರ ಸಹೋದರ ಅಯ್ಯಪ್ಪರ ಮದುವೆ ಸಮಾರಂಭದಲ್ಲಿ ಉತ್ಸಾಹದಿಂದ ಭಾಗಿಯಾಗಿದ್ದಾರೆ. + + + +ಶನಿವಾರ ರಾತ್ರಿ ಆರತಕ್ಷತೆ ನಡೆದಿದ್ದು, ನಟಿ ಪ್ರೇಮಾ ಅವರು ಕೊಡಗಿನ ಸಂಗೀತಕ್ಕೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಚಿತ್ರರಂಗದ ಗಣ್ಯರು ಈ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ವರ ಎನ್.ಸಿ ಅಯ್ಯಪ್ಪ ಹಾಗೂ ವಧು ನಟಿ ಅನು ಪೂವಮ್ಮ ಅವರು ಕೊಡಗಿನ ಉಡುಗೆಯನ್ನು ತೊಟ್ಟು ಮಿಂಚಿದ್ದು, ಸಂಬಂಧಿಕರು, ಗಣ್ಯರು ನೂತನ ವಧು-ವರರಿಗೆ ಶುಭಕೋರುತ್ತಿದ್ದಾರೆ. + + + +2018ರ ಮೇ ತಿಂಗಳಿನಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಕೊಡವ ಸಮಾಜದಲ್ಲಿ ಸಂಪ್ರದಾಯದಂತೆ ಇವರಿಬ್ಬರ ನಿಶ್ಚಿತಾರ್ಥವಾಗಿತ್ತು. 2016ರಲ್ಲಿ ಅಯ್ಯಪ್ಪ ಮತ್ತು ಅನು ಇಬ್ಬರು ಭೇಟಿಯಾಗಿದ್ದು, ಪರಿಚಯವಾಗಿ ಸ್ನೇಹವಾಗಿತ್ತು. ಬಳಿಕ ಸ್ನೇಹ ಪ್ರೀತಿಯಾಗಿ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದರು. + +ಎರಡು ಕುಟುಂಬದವರು ಕೂಡ ಇವರಿಬ್ಬರ ಪ್ರೀತಿಗೆ ಒಪ್ಪಿಗೆ ಸೂಚಿಸಿದ್ದರು. ಅನು ಪೂವಮ್ಮ ಕನ್ನಡದ ಕರ್ವ, ಕಥಾವಿಚಿತ್ರ, ಲೈಫ್ ಸೂಪರ್, ಪಾನಿಪೂರಿ ಚಿತ್ರಗಳಲ್ಲಿ ನಟಿಸಿದ್ದಾರೆ. ಸದ್ಯ ಈಗ ಅವರು ಖಾಸಗಿ ವಾಹಿನಿಯ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ. + +ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv ,ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ಮಾಡಿ:play.google.com/publictv + + + diff --git a/PublicTV_World/0098a762.txt b/PublicTV_World/0098a762.txt new file mode 100644 index 0000000000000000000000000000000000000000..ff99f4061c32ece451a0700d068e9a7427d4b8d3 --- /dev/null +++ b/PublicTV_World/0098a762.txt @@ -0,0 +1,18 @@ +ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು ಇಂದು 173 ಮಂದಿಗೆ ಸೋಂಕು ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. + + + +ರಾಜ್ಯದಲ್ಲಿ ಅತಿ ಹೆಚ್ಚು ಬೆಂಗಳೂರಿನಲ್ಲಿ 82 ಮಂದಿಗೆ ಕೋವಿಡ್‌ ಬಂದಿದ್ದರೆ, ಮೈಸೂರಿನಲ್ಲಿ 16, ದಕ್ಷಿಣ ಕನ್ನಡದಲ್ಲಿ 13 ಮಂದಿಗೆ ಸೋಂಕು ಬಂದಿದೆ.ಇದನ್ನೂ ಓದಿ:Ram Mandir- ರಾಮಮಂದಿರ ಉದ್ಘಾಟನೆಯ ಕೇಂದ್ರಬಿಂದು ಗರ್ಭಗುಡಿ ವಿಶೇಷತೆ ನಿಮಗೆಷ್ಟು ಗೊತ್ತು? + + + + + +ಸದ್ಯ 702 ಸಕ್ರಿಯ ಪ್ರಕರಣಗಳಿದ್ದು ಮನೆಯಲ್ಲಿ 649 ಮಂದಿ, ಆಸ್ಪತ್ರೆಯಲ್ಲಿ 53 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 12 ಮಂದಿ ಐಸಿಯುನಲ್ಲಿದ್ದರೆ 41 ಮಂದಿ ಜನರಲ್‌ ಬೆಡ್‌ನಲ್ಲಿ ಇದ್ದಾರೆ. + +ಒಟ್ಟು 8,349 ಕೊರೊನಾ ಟೆಸ್ಟ್‌ ಮಾಡಲಾಗಿದೆ. ಇಂದು 37 ಮಂದಿ ಡಿಸ್ಚಾರ್ಜ್‌ ಆಗಿದ್ದಾರೆ. + + + + + diff --git a/PublicTV_World/009d5480.txt b/PublicTV_World/009d5480.txt new file mode 100644 index 0000000000000000000000000000000000000000..0835a7891b8c9440d30c948f0773a523abda456e --- /dev/null +++ b/PublicTV_World/009d5480.txt @@ -0,0 +1,22 @@ +ಬೆಂಗಳೂರು:ಲಾಕ್‍ಡೌನ್ ಬಳಿಕ ಮತ್ತೆ ಬಿಗ್‍ಬಾಸ್ ಸೀಸನ್-8 ಕಾರ್ಯಕ್ರಮ ಆರಂಭವಾಗಿದೆ. ಸದ್ಯ ಕಾರ್ಯಕ್ರಮವನ್ನು ಕಂಟಿನ್ಯೂ ಮಾಡಿರುವ ಕಿಚ್ಚ ಸುದೀಪ್ ಸ್ಪರ್ಧಿಗಳನ್ನು ಮತ್ತೆ ದೊಡ್ಮನೆಗೆ ಬರಮಾಡಿಕೊಳ್ಳುತ್ತಾ, ಕೆಲವೊಂದು ಪ್ರಶ್ನೆಗಳನ್ನು ಕೇಳಿದ್ದಾರೆ. + + + +ಈ ಮಧ್ಯೆ ದೊಡ್ಮನೆಯಿಂದ ಹೊರ ಹೋದ ಕೆ.ಪಿ ಅರವಿಂದ್‍ರವರಿಗೆ ಎಷ್ಟು ಮದುವೆ ಪ್ರಪೋಸಲ್ಸ್ ಗಳು ಬಂದಿದೆ ಎಂಬ ವಿಚಾರ ವೇದಿಕೆ ಮೇಲೆ ಬಹಿರಂಗವಾಗಿದೆ. + + + +ಹೌದು, ಬಿಗ್‍ಬಾಸ್ ಮನೆಯಿಂದ ಹೊರಗಡೆ ಹೋದ ಮೇಲೆ ಸಿನಿಮಾ ಆಫರ್‌ಗಳು ಜಾಸ್ತಿ ಬಂತಾ, ಮದುವೆ ಆಫರ್‌ಗಳು ಜಾಸ್ತಿ ಬಂತಾ, ರೇಸ್ ಸರ್ಕಲ್‍ಗಳಿಂದ ಆಫರ್ ಜಾಸ್ತಿ ಬಂತಾ ಏನೇನು ಬಂತು ಎಂದು ಕಿಚ್ಚ ಸುದೀಪ್ ಅರವಿಂದ್‍ರವರಿಗೆ ಪ್ರಶ್ನೆ ಕೇಳಿದ್ದಾರೆ. + + + +ಆಗ ಅರವಿಂದ್ ಕೋವಿಡ್ ಇರುವ ಕಾರಣ ರೇಸ್ ಸರ್ಕಲ್‍ನಿಂದ ಜಾಸ್ತಿ ಆಫರ್‌ಗಳು ಬಂದಿಲ್ಲ. ಸದ್ಯಕ್ಕೆ ಸಿನಿಮಾ ಆಫರ್‌ಗಳು ಬಂದಿಲ್ಲ. ಆದರೆ ಮದುವೆ ಆಫರ್‌ಗಳು ಒಂದೆರಡು-ಮೂರು ಬಂದಿದೆ ಎಂದಿದ್ದಾರೆ. ಇದಕ್ಕೆ ಕಿಚ್ಚ, ಸತ್ಯ ಮಾತಾಡುತ್ತೇನೆ ಸತ್ಯ ಬಿಟ್ಟು ಬೇರೆನೂ ಮಾತನಾಡುವುದಿಲ್ಲ ಎಂದು ಈ ನೆಲ ಮುಟ್ಟಿ ಹೇಳಿ ಎಂದು ಕೇಳಿದಾಗ ಇದಕ್ಕೆ ನಗುತ್ತಾ ಅರವಿಂದ್, ನೆಲ ಮುಟ್ಟಿ ಸತ್ಯ ಮಾತನಾಡುತ್ತಿದ್ದೇನೆ ಸರ್, ಒಂದೆರಡು ಮೂರು ಪ್ರಪೋಸಲ್ಸ್ ಓದಿದ್ದೇನೆ. ಆದರೆ 1000ಕ್ಕೂ ಅಧಿಕ ಮೆಸೇಜ್‍ಗಳು ಬಂದಿದೆ ಎಂದು ಬಾಯ್ಬಿಟ್ಟಿದ್ದಾರೆ. + + + +ಅದರಲ್ಲಿ ಬಹಳಷ್ಟು ಇಂಟ್ರೆಸ್ಟಿಂಗ್ ಯಾವುದು ಎಂದು ಕೇಳಿದಾಗ, ಸ್ಟ್ರೆಟ್ ಆಗಿ ಮ್ಯಾರಿ ಮೀ ಎಂದು ಕಳುಹಿಸಿದ್ದರು ಎಂದು ಹೇಳಿದ್ದಾರೆ.ಇದನ್ನೂ ಓದಿ:ಬಿಗ್‍ಬಾಸ್ ಮನೆಯಲ್ಲಿ ನಾಮಿನೇಷನ್ ಬೆಂಕಿ ಶುರು + +Advertisement + + + diff --git a/PublicTV_World/009f0ab3.txt b/PublicTV_World/009f0ab3.txt new file mode 100644 index 0000000000000000000000000000000000000000..0d113bcab7a388330774b2456ce37dde780a2969 --- /dev/null +++ b/PublicTV_World/009f0ab3.txt @@ -0,0 +1,14 @@ +ಚಾಮರಾಜನಗರ:ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಜನರ ಬೆಳೆ, ಬದುಕು, ಆಸ್ತಿಪಾಸ್ತಿ ನಾಶವಾಗಿದ್ದರೆ, ಇತ್ತ ದಕ್ಷಿಣ ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಜನರು ಬರದ ಛಾಯೆಯಿಂದ ಹೊರ ಬಂದು ಕೃಷಿ ಚಟುವಟಿಕೆಯಲ್ಲಿ ತೊಡಗುತ್ತಿದ್ದಾರೆ. + +ಉತ್ತರ ಕರ್ನಾಟಕದ ಜನರು ಪ್ರವಾಹದಿಂದ ನಲುಗಿ ಹೋಗಿದ್ದು ಅವರು ಬೆಳೆದಂತಹ ಬೆಳೆ ಸೇರಿದಂತೆ ಆಸ್ತಿಪಾಸ್ತಿ ನಷ್ಟದಿಂದ ದಿಕ್ಕು ತೋಚದಂತಾಗಿದ್ದಾರೆ. ಇತ್ತ ದಕ್ಷಿಣ ಕರ್ನಾಟಕದ ಬರದನಾಡು ಚಾಮರಾಜನಗರದ ಜನರು ಸಖತ್ ಖುಷಿಯಲ್ಲಿದ್ದು, ಕೃಷಿ ಚಟುವಟಿಕೆ ಆರಂಭಿಸಲು ಮುಂದಾಗಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಮುಂಗಾರು ಮಳೆಯಿಲ್ಲದೆ ಈ ಬಾರಿಯೂ ವ್ಯವಸಾಯ ಮಾಡಲು ಸಾಧ್ಯವಿಲ್ಲ ಎಂದು ಕೈಕಟ್ಟಿ ಕುಳಿತಿದ್ದ ರೈತಾಪಿ ವರ್ಗ ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದೆ. + + + +ಎರಡು ವರ್ಷದ ಸತತ ಬರಯಿದ್ದ ಕಾರಣ ಜೀವನಕ್ಕೆ ಮುಂದೆ ಏನು ಎಂಬ ಯೋಚನೆಯಲ್ಲಿ ತೊಡಗಿದ್ದ ಚಾಮರಾಜನಗರ, ಕೊಳ್ಳೆಗಾಲ, ಯಳಂದೂರು ತಾಲೂಕಿನ ಜನರು ಇದೀಗ ತಮ್ಮ ಬದುಕು ಕಟ್ಟಿಕೊಳ್ಳಲು ವ್ಯವಸಾಯಕ್ಕೆ ಮುಂದಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೊಡಗು ಭಾಗದಲ್ಲಿ ಸುರಿದ ಮಳೆಗೆ ಕಬಿನಿ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ಗಡಿ ಜಿಲ್ಲೆಯ ರೈತರು ಈಗಾಗಲೇ ಗದ್ದೆಯನ್ನು ಹದಗೊಳಿಸುವ ಕಾಯಕಕ್ಕೆ ಮುಂದಾಗಿದ್ದು, ಈ ಬಾರಿ ಉತ್ತಮ ಬೆಳೆ ಬೆಳೆಯುವ ನಿರೀಕ್ಷೆಯಲ್ಲಿ ಇದ್ದಾರೆ. + + + +ಕಳೆದ ಎರಡು ವರ್ಷಗಳಿಂದ ಉಳುಮೆ ಕಾಣದ ಗದ್ದೆಗಳು ಇದೀಗ ಉಳುಮೆಗೆ ಸಿದ್ಧವಾಗಿದ್ದು, ನಾಲೆಗಳಲ್ಲಿ ನೀರು ಹರಿಯುತ್ತಿದೆ. ಈ ಬಾರಿ ಭತ್ತ, ಕಬ್ಬು, ರಾಗಿ, ಜೋಳ ಸೇರಿದಂತೆ ಇತರ ಬೆಳೆಗಳನ್ನು ಬೆಳೆಯುವ ಮೂಲಕ ತಮ್ಮ ಬದುಕನ್ನು ಹಸನು ಮಾಡಿಕೊಳ್ಳಲು ರೈತರು ತಮ್ಮ ಎಂದಿನ ಕಾಯಕಕ್ಕೆ ಮುಂದಾಗಿದ್ದಾರೆ. ಈ ಬಾರಿ ಪೂರ್ಣ ಪ್ರಮಾಣದಲ್ಲಿ ನೀರು ಸಿಗುವ ಭರವಸೆ ಹೊಂದಿರುವ ರೈತರು ತಮ್ಮ ಎರಡು ವರ್ಷದ ಬರವನ್ನು ಬೆಳೆ ಬೆಳೆಯುವ ಮೂಲಕ ನೀಗಿಸುವ ಕನಸು ಕಂಡಿದ್ದಾರೆ. ಈಗಾಗಲೇ ಗದ್ದೆಗಳನ್ನು ಹದಗೊಳಿಸುವ ಮೂಲಕ ವ್ಯವಸಾಯಕ್ಕೆ ಮುಂದಾಗುತ್ತಿದ್ದು, ಈ ಬಾರಿ ಉತ್ತಮ ಮಳೆಯಾಗುವುದರಿಂದ ನಮಗೆ ಸಂತಸ ಆಗುತ್ತಿದೆ. ಆದರೆ ಉತ್ತರ ಕರ್ನಾಟಕ ಭಾಗದ ಜನರಿಗೆ ಪ್ರವಾಹದಿಂದಾಗಿರುವ ತೊಂದರೆ ನಮಗೂ ನೋವು ತಂದಿದೆ ಎಂದು ರೈತರು ಹೇಳಿದ್ದಾರೆ. + + + diff --git a/PublicTV_World/009f2968.txt b/PublicTV_World/009f2968.txt new file mode 100644 index 0000000000000000000000000000000000000000..6ee91d0b220ff889d9560e8f6618293b4cf6b1c7 --- /dev/null +++ b/PublicTV_World/009f2968.txt @@ -0,0 +1,18 @@ +ಬೆಂಗಳೂರು:ಇಂದು ಬಿಜೆಪಿಯ (BJP) ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ (BY Vijayendra) ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಆದರೆ ಇಂದು ನಡೆಯಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿಯ ಕೆಲ ನಾಯಕರು ಗೈರಾಗುವ ಸಾಧ್ಯತೆಯಿದೆ. ಅದರಲ್ಲೂ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ (ST Somashekhar) ಅವರು ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗುವ ಸಾಧ್ಯತೆಯಿದೆ. + +ಇಂದು ಬೆಳಗ್ಗೆ 10:35ಕ್ಕೆ ಕುಂಬಳಗೋಡು ಪೊಲೀಸ್ ಸ್ಟೇಷನ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಎಸ್ ಟಿ ಸೋಮಶೇಖರ್ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಪರಮೇಶ್ವರ್, ರಾಮಲಿಂಗಾ ರೆಡ್ಡಿ ಪಾಲ್ಗೊಳ್ಳುವ ಸಾಧ್ಯತೆಯಿದೆ. + + + +ಇತ್ತೀಚೆಗಷ್ಟೇ ಸೋಮಶೇಖರ್ ಅವರು ಸ್ವಪಕ್ಷದ ಬಗ್ಗೆ ಭಾರೀ ಅಸಮಾಧಾನವನ್ನು ಹೊರಹಾಕಿದ್ದರು. ಜಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ, ಅಧಿಕಾರ ಮುಗಿದಮೇಲೆ ವಿಷ ಕೊಡುತ್ತಾರೆ ಎಂದು ಖಾರವಾಗಿ ನುಡಿದಿದ್ದರು. + +ನಾನು ಕಾಂಗ್ರೆಸ್‌ನಲ್ಲಿದ್ದವನು, ಅವರಾಗೇ ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡರು. ಈಗ ಎಸ್‌ಟಿ ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನು ಬಿಡಿಸಲು ಪಕ್ಷದವರು ರೆಡಿಯಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದರು.ಇದನ್ನೂ ಓದಿ:ಉಡುಪಿಯಲ್ಲಿ ನಾಲ್ವರ ಬರ್ಬರ ಹತ್ಯೆ – 10ಕ್ಕೂ ಹೆಚ್ಚು ಮಂದಿ ವಶಕ್ಕೆ, ಸಾಂಗ್ಲಿಯ ಶಂಕಿತನ ಮೇಲೆ ಅನುಮಾನ ಜಾಸ್ತಿ ಯಾಕೆ? + + + +ಸ್ವಪಕ್ಷದ ಬಗ್ಗೆ ಭಾರೀ ಅಸಮಾಧಾನ ಹೊರಹಾಕಿದ ಬಳಿಕ ಬಿಜೆಪಿ ಶಾಸಕ ಕಾಂಗ್ರೆಸ್ ಕಡೆಗೆ ಮತ್ತೆ ಮುಖ ಮಾಡಿದ್ದಾರೆ ಎನ್ನುವ ಗುಸುಗುಸು ಪ್ರಾರಂಭವಾಗಿದೆ. ಇದೀಗ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಗೈರಾಗಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟಿರುವ ಸೋಮಶೇಖರ್ ನಡೆ ಭಾರೀ ಚರ್ಚೆಗೆ ಕಾರಣವಾಗುತ್ತಿದೆ. + +ಪ್ರಮುಖರು ಗೈರು ಸಾಧ್ಯತೆ?ಸಿ.ಟಿ ರವಿ, ಬಸನಗೌಡ ಪಾಟೀಲ್ ಯತ್ನಾಳ್, ವಿ ಸೋಮಣ್ಣ, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ, ಡಾ.ಕೆ ಸುಧಾಕರ್, ಎಸ್‌ಟಿ ಸೋಮಶೇಖರ್, ಸುನೀಲ್ ಕುಮಾರ್ ಗೈರಾಗುವ ಸಾಧ್ಯತೆಯಿದೆ.ಇದನ್ನೂ ಓದಿ:ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ನಿಧನ + + + diff --git a/PublicTV_World/00a07bdd.txt b/PublicTV_World/00a07bdd.txt new file mode 100644 index 0000000000000000000000000000000000000000..24f63090abe7c449fd41acfe6a6aff466c5248c4 --- /dev/null +++ b/PublicTV_World/00a07bdd.txt @@ -0,0 +1,20 @@ +– ವಿಲ್ಸನ್‌ಗಾರ್ಡನ್ ನಾಗನದ್ದು ಸೇರಿದಂತೆ 18 ಮೊಬೈಲ್ ಸೀಜ್– ಡಿಸಿಪಿ ಸ.ರಾ ಫಾತಿಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ + +ಬೆಂಗಳೂರು:ದರ್ಶನ್ (Actor Darshan) ರಾಜಾತಿಥ್ಯ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿಗೆ (Parappana Agrahara Jail) ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಮೊಬೈಲ್ ಸೇರಿದಂತೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ. + + + +ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದ ದರ್ಶನ್ ಹಾಗೂ ವಿಲ್ಸನ್‌ಗಾರ್ಡನ್ ನಾಗನ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ಹದ್ದಿನ ಕಣ್ಣಿದ್ದರು. ಜೊತೆಗೆ ಜೈಲಾಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಆದರೆ ಇದೀಗ ಏಕಾಏಕಿ ದಾಳಿ ನಡೆಸಿದ್ದಾರೆ.ಇದನ್ನೂ ಓದಿ:Breaking – ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌! + + + +ಪರಪ್ಪನ ಅಗ್ರಹಾರ ಜೈಲಿನ ಮೇಲೆ ಆಗ್ನೇಯ ಪೊಲೀಸರಿಂದ ದಾಳಿ ನಡೆದಿದ್ದು, ರಾತ್ರಿ ಏಕಾಏಕಿ ಡಿಸಿಪಿ ಸರಾ ಫಾತಿಮಾ (DCP Sarah Fathima) ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ ನಡೆಸಲಾಗಿದೆ. ಜೈಲಿನಲ್ಲಿ ಮೊಬೈಲ್ ಬಳಕೆಗೆ ಬಲವಾದ ಪುರಾವೆಗಳು ಲಭ್ಯವಾಗಿದ್ದು, ಜೈಲಾಧಿಕಾರಿಗಳ ಕಳ್ಳಾಟ ಮುಂದುವರೆದಿರುವುದು ದಾಳಿ ವೇಳೆ ಸಾಬೀತಾಗಿದೆ. + + + +ಕುಖ್ಯಾತ ರೌಡಿ ವಿಲ್ಸನ್‌ಗಾರ್ಡನ್ ನಾಗನ (Wilson Garden Naga) ಬ್ಯಾರಕ್ ಅಕ್ಕಪಕ್ಕದಲ್ಲಿ ಮೊಬೈಲ್‌ಗಳು ಪತ್ತೆಯಾಗಿದ್ದು, ಸುಮಾರು 17 ಆಂಡ್ರಾಯ್ಡ್ ಫೋನ್‌ಗಳು ಸಿಕ್ಕಿವೆ. ವಿಲ್ಸನ್ ಗಾರ್ಡನ್ ನಾಗನ ಮೊಬೈಲ್ ಸೇರಿದಂತೆ ಸಹಚರರ ಸುಮಾರು 18 ಮೊಬೈಲ್ ಸೀಜ್ ಮಾಡಿದ್ದಾರೆ. ಜೊತೆಗೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ. ಇದನ್ನು ಕಂಡು ಖುದ್ದು ಪೊಲೀಸರೇ ಶಾಕ್ ಆಗಿದ್ದಾರೆ. ಇಷ್ಟೆಲ್ಲಾ ಇದ್ದರೂ ವಿಲ್ಸನ್‌ಗಾರ್ಡನ್ ನಾಗನನ್ನು ಬೇರೆ ಕಡೆ ಏಕೆ ವರ್ಗಾವಣೆ ಮಾಡಲಿಲ್ಲ. ಅವನ ಹಿಂದೆ ಯಾರಿದ್ದಾರೆ? ಅವನಿಗೆ ಇಲಾಖೆಯಲ್ಲಿ ಇಷ್ಟೊಂದು ಪ್ರಭಾವವಿದೇಯಾ? ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.ಇದನ್ನೂ ಓದಿ:ಶಾಸಕ ಮುನಿರತ್ನ ಬಂಧನ ಪ್ರಕರಣ – ತಪ್ಪು ಮಾಡಿರೋದು ಸಾಮಾನ್ಯ ವ್ಯಕ್ತಿಯಲ್ಲ ಒಬ್ಬ ಮಾಜಿ ಮಂತ್ರಿ: ಡಿಕೆ ಸುರೇಶ್‌ + + + + + diff --git a/PublicTV_World/00a3466e.txt b/PublicTV_World/00a3466e.txt new file mode 100644 index 0000000000000000000000000000000000000000..5655cbb7768f5d390978dbbf638e86e17f512c9e --- /dev/null +++ b/PublicTV_World/00a3466e.txt @@ -0,0 +1,22 @@ +ಬೆಂಗಳೂರು:ಕರ್ನಾಟಕಕ್ಕೆ ಗಡಿಭಾಗವೇ ಟೆನ್ಶನ್ ಹೆಚ್ಚಿಸಿತ್ತು. ಯಾಕೆಂದರೆ ತಮಿಳುನಾಡು-ಕರ್ನಾಟಕ ಗಡಿಯಲ್ಲಿ ಕಳ್ಳದಾರಿಯಲ್ಲಿ ಜನ ಎಗ್ಗಿಲ್ಲದೇ ಸಾಗುತ್ತಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಲ್ಲಿ ಖಡಕ್ ಸೂಚನೆ ಕೊಟ್ಟಿದ್ದಾರೆ. + +ಮಹಾರಾಷ್ಟ್ರ, ತಮಿಳುನಾಡು, ಗುಜರಾತ್‍ಗಳಿಂದ ಕಳ್ಳ ಮಾರ್ಗದಲ್ಲಿ ಬರುವವರಿಗೆ ಪ್ರವೇಶ ನೀಡಬೇಡಿ. ಈಗಾಗಲೇ ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡು ಗಡಿಗಳು ಬಂದ್ ಮಾಡಲಾಗಿದೆ. ಆದ್ದರಿಂದ ಈ ರಾಜ್ಯಗಳಿಂದ ಕಳ್ಳ ಮಾರ್ಗಗಳಿಂದ ಬರುವವರ ಮೇಲೆ ನಿಗಾ ಇರಲಿ. ಕಳ್ಳ ಮಾರ್ಗದಲ್ಲಿ ಎರಡು ಜಿಲ್ಲೆಗಳಿಗೂ ಬಂದಿರುವವರನ್ನು ಪತ್ತೆ ಹಚ್ಚಿ. ಬೇರೆ ರಾಜ್ಯಗಳಿಂದ ಕಳ್ಳ ಮಾರ್ಗದಿಂದ ಬಂದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಿ ಎಂದು ಖಡಕ್ ಸೂಚನೆ ನೀಡಿದರು. + + + +ಕದ್ದು ಮುಚ್ಚಿ ಬರುವುದಕ್ಕೆ ಅವಕಾಶ ಕೊಡಬೇಡಿ. ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ನಿಯಂತ್ರಣದಲ್ಲಿತ್ತು. ಮಹಾರಾಷ್ಟ್ರದಿಂದ ಬರುವವರ ಸಂಖ್ಯೆ ಹೆಚ್ಚಳದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ಬರುವವರನ್ನು ಸದ್ಯ ನಿಲ್ಲಿಸಲಾಗಿದೆ. ಆದರೆ ಕಳ್ಳಮಾರ್ಗದಿಂದ ಬಂದಿರುವವರಿಂದನೂ ಸೋಂಕು ಹಬ್ಬುವ ಸಾಧ್ಯತೆ ಇದೆ. ಹೀಗಾಗಿ ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಎಚ್ಚರವಹಿಸಿ ಎಂದು ಸೂಚನೆ ನೀಡಿದರು. + + + +ತಮಿಳುನಾಡು ಕರ್ನಾಟಕ ಹೆದ್ದಾರಿಯಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ. ಅಲ್ಲಿ ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗುತ್ತೆ. ಹೀಗಾಗಿ ಕ್ವಾರಂಟೈನ್ ಆಗುವುದನ್ನು ತಪ್ಪಿಸಿಕೊಳ್ಳಲು ನೂರಾರು ಜನ ತೋಪು, ಹೊಲಗದ್ದೆ ಮೂಲಕ ರಾಜ್ಯ ಪ್ರವೇಶಿಸುತ್ತಿದ್ದರು. ಜನ ಬಳ್ಳೂರು ಸೋಲೂರು ಗ್ರಾಮಗಳ ಮುಖಾಂತರ ಬೆಂಗಳೂರು ಪ್ರವೇಶಿಸುತ್ತಿದ್ದರು. ಜನ ರಸ್ತೆಗೆ ಅಡ್ಡಲಾಗಿ ಮಣ್ಣು ಹಾಕಿದರೂ ಅದರ ಮೇಲೆ ಸಾಹಸ ಮಾಡಿ ತಮಿಳುನಾಡಿನ ಜನ ರಾಜ್ಯಕ್ಕೆ ನುಗ್ಗುತ್ತಿದ್ದರು ಎಂದು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಪಬ್ಲಿಕ್ ಟಿವಿ ವರದಿ ಬೆನ್ನಲ್ಲೆ ಸಿಎಂ ಯಡಿಯೂರಪ್ಪ ಜಿಲ್ಲಾಡಳಿತಕ್ಕೆ ಎಚ್ಚರಿಸುವಂತೆ ಆದೇಶಿಸಿದ್ದಾರೆ. + +ಇನ್ನೂ ಪಬ್ಲಿಕ್ ವರದಿ ಬಳಿಕ ಅತ್ತಿಬೆಲೆಯಲ್ಲಿ ಕಳ್ಳರ ರಹದಾರಿಯನ್ನು ಪೊಲೀಸರು ಬಂದ್ ಮಾಡಿದ್ದಾರೆ. ಈ ಮೂಲಕ ಕೊರೊನಾ ಕಳ್ಳ ಕಿಂಡಿ ಅಭಿಯಾನಕ್ಕೆ ಪೊಲೀಸರ ಹೈ ಅಲರ್ಟ್ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ ಚನ್ನಣ್ಣನವರ್ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. + + + +ಅಲ್ಲದೇ ಹೊರ ರಾಜ್ಯದಿಂದ ಕಳ್ಳದಾರಿಯಲ್ಲಿ ಬಂದ ಏಳು ಜನರನ್ನ ಕ್ವಾರಂಟೈನ್ ಮಾಡಲಾಗಿದೆ. ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮಕ್ಕೆ ತಮಿಳುನಾಡಿನಿಂದ ಬಂದಿದ್ದರು. ಇವರು ಯಾವುದೇ ತಪಾಸಣೆ ಇಲ್ಲದೆ ಕಳ್ಳದಾರಿಯಲ್ಲಿ ಬಂದಿದ್ದರು. ಹೀಗಾಗಿ ತ್ಯಾಮಗೊಂಡ್ಲು ಆರೋಗ್ಯ ಅಧಿಕಾರಿಗಳು ಪಾನಿಪುರಿ ಮಾರಾಟ ಮಾಡುತಿದ್ದ ಒಂದೇ ಕುಟುಂಬದ 7 ಮಂದಿಯನ್ನು ಕ್ವಾರಂಟೈನ್ ಮಾಡಿದ್ದಾರೆ. + + + + + diff --git a/PublicTV_World/00a59deb.txt b/PublicTV_World/00a59deb.txt new file mode 100644 index 0000000000000000000000000000000000000000..106f54f2cb2587c2028481ca6a27056d5cb2101e --- /dev/null +++ b/PublicTV_World/00a59deb.txt @@ -0,0 +1,12 @@ +ಬೆಂಗಳೂರು:ಪಾಗಲ್ ಪ್ರೇಮಿಯೊಬ್ಬ ಯುವತಿಗೆ ಆ್ಯಸಿಡ್ ಎರಚುವ ಬೆದರಿಕೆ ಹಾಕಿದ ಘಟನೆ ನಗರದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. + +ಫೈಸಲ್ ಬಂಧಿತ ಪಾಗಲ್ ಪ್ರೇಮಿ. ಯುವತಿಯು ಬಿ.ಫಾರ್ಮ್ ವ್ಯಾಸಂಗ ಮಾಡುತ್ತಿದ್ದು, ತಾಯಿ ಹಾಗೂ ಸಹೋದರನ ಜೊತೆ ಜೆ.ಜೆ.ನಗರದಲ್ಲಿ ವಾಸುತ್ತಿದ್ದಾಳೆ. + + + +ಫೈಸಲ್ ಯುವತಿಯ ಸಂಬಂಧಿಕ. ಹೀಗಾಗಿ ಕಳೆದ ಫೆಬ್ರವರಿಯಿಂದ ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಆದರೆ ಮಾದಕ ವ್ಯಸನಿ ಆಗಿರುವ ಫೈಸಲ್‍ನನ್ನು ಮದುವೆಯಾಗಲು ಯುವತಿ ನಿರಾಕರಿಸಿದ್ದಳು. ಅಷ್ಟೇ ಅಲ್ಲದೆ ಕುಟುಂಬ ಸಂಬಂಧಿ ಎಂಬ ಕಾರಣಕ್ಕೆ ವಾರ್ನಿಂಗ್ ಮಾಡಿ ಸುಮ್ಮನಿದ್ದಳು. ಇಷ್ಟಕ್ಕೆ ಸುಮ್ಮನೆ ಬಿಡದ ಫೈಸಲ್ ರೊಚ್ಚಿಗೆದ್ದು ಯುವತಿಯ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಮನೆಗೆ ಹೋಗಿ ರಂಪಾಟ ನಡೆಸಿದ್ದ. ಮನೆ ಹಾಗೂ ವಾಹನದ ಮೇಲೆ ಕಲ್ಲು ತೂರಿ ಜಖಂಗೊಳಿಸಿದ್ದ. + +ಫೈಸಲ್ ವರ್ತನೆಯಿಂದ ಯುವತಿಯು ಜೆ.ಜೆ ನಗರ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪಾಗಲ್ ಪ್ರೇಮಿ ಫೈಸಲ್‍ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. + + + diff --git a/PublicTV_World/00a98a43.txt b/PublicTV_World/00a98a43.txt new file mode 100644 index 0000000000000000000000000000000000000000..2326762054e57d96c67d53a4b51e70181d9f05f9 --- /dev/null +++ b/PublicTV_World/00a98a43.txt @@ -0,0 +1,18 @@ +ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿತ್ರೋದ್ಯಮದ ಹಿರಿಯ ನಟ ಶ್ರೀನಾಥ್ (Srinath), ನಟಿ ಪದ್ಮಾ ವಾಸಂತಿ (Padma Vasanthi), ನಟ ಸುಂದರಾಜ್, ಪ್ರಮೀಳಾ ಜೋಷಾಯಿ ಸೇರಿದಂತೆ ಹಲವರು ಲೀಲಾವತಿ ಅವರ ನಿವಾಸಕ್ಕೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ. + + + +ಎರಡು ತಿಂಗಳು ಹಿಂದೆಯಷ್ಟೇ ನಟಿಯರಾದ ಶ್ರುತಿ ಸೇರಿದಂತೆ ಹಲವರು ಲೀಲಾವತಿ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದರು. ಇದೀಗ ಶ್ರೀನಾಥ್ ಮತ್ತು ತಂಡ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಕೆಲ ಸಮಯ ಕಳೆದಿದೆ. ಹಳೆಯ ದಿನಗಳನ್ನು ಅವರೊಂದಿಗೆ ಮೆಲುಕು ಹಾಕಿದೆ.ಇದನ್ನೂ ಓದಿ:ಸೀರೆಯುಟ್ಟು ಮಿಂಚಿದ `ವಜ್ರಕಾಯ’ ನಟಿ ನಭಾ ನಟೇಶ್ + + + +ಸಿನಿಮಾ ರಂಗದಿಂದ ದೂರವಾದ ನಂತರ ಲೀಲಾವತಿ ಅವರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ಊರಲ್ಲಿ ಆಸ್ಪತ್ರೆ ಕಟ್ಟಿಸಿದ್ದಾರೆ. ಅಲ್ಲದೇ, ರೈತರಿಗೆ ನಾನಾ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಲೀಲಾವತಿ ಅವರ ಜೊತೆ ಪುತ್ರ ವಿನೋದ್ ರಾಜ್ ಕುಮಾರ್ ಕೂಡ ಸಾಥ್ ನೀಡಿದ್ದಾರೆ. + + + + + +Join our Whatsapp group by clicking the below linkhttps://chat.whatsapp.com/E6YVEDajTzH06LOh77r25k + + + diff --git a/PublicTV_World/00a9dda9.txt b/PublicTV_World/00a9dda9.txt new file mode 100644 index 0000000000000000000000000000000000000000..1c209cfbcb16edd3a9767ae4019df323e6c52c12 --- /dev/null +++ b/PublicTV_World/00a9dda9.txt @@ -0,0 +1,16 @@ +ಹಾವೇರಿ:ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದೆ. ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಕೋಡಿ ಮಠದ ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. + + + +ರಾಣೇಬೆನ್ನೂರು ನಗರದ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ನಾನು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ. ಅದರಂತೆ ಭಾರತೀಯ ಸೇನೆಯ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ ಪ್ರಕರಣ ನಡೆದು ಹೋಯಿತು. ಇದೀಗ ಮತ್ತೆ ಅಂಥದ್ದೇ ದುರಂತ ಸಂಭವಿಸುವ ಲಕ್ಷಣವಿದೆ ಎಂದರು.ಇದನ್ನೂ ಓದಿ:ಕರ್ನಾಟಕ ಬಂದ್‍ಗೆ ಮತ್ತಷ್ಟು ಅಪಸ್ವರ – ಚಿತ್ರೋದ್ಯಮದ ನಡೆಗೆ ಸಾ.ರಾ.ಗೋವಿಂದು ಕಿಡಿ + + + +ಕೊರೊನಾ ರೂಪಾಂತರಿ ಹೆಚ್ಚಾಗುವ ಎಲ್ಲಾ ಲಕ್ಷಣಗಳಿವೆ. ದೇಶದಲ್ಲಿ ಸಂಶಯ, ಅಸಹನೆ, ದ್ವೇಷ ಹಾಗೂ ರಾಜಕೀಯ ಕಲಹಗಳು ಹೆಚ್ಚಾಗಲಿವೆ. ಕೆಲವೇ ದಿನಗಳಲ್ಲಿ ಮಳೆ ಕೂಡ ಅಧಿಕವಾಗಿ ಸುರಿಯುವ ಲಕ್ಷಣವಿದೆ ಎಂದು ಕೋಡಿ ಮಠದ ಶ್ರೀಗಳು ತಿಳಿಸಿದ್ದಾರೆ.ಇದನ್ನೂ ಓದಿ:ಕುಮಾರಸ್ವಾಮಿ ಸ್ಲೋ ಪಾಯಿಸನ್: ಬಾಲಕೃಷ್ಣ ಕಿಡಿ + + + +Advertisement + + + diff --git a/PublicTV_World/00abe481.txt b/PublicTV_World/00abe481.txt new file mode 100644 index 0000000000000000000000000000000000000000..404433481a4aec0578514f9e03acece45e95b370 --- /dev/null +++ b/PublicTV_World/00abe481.txt @@ -0,0 +1,10 @@ +ನವದೆಹಲಿ:ಲೋಕಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಕುರಿತಾಗಿ ದೆಹಲಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ರಾಜ್ಯ ನಾಯಕರ ಅಸಮಾಧಾನ ಸ್ಫೋಟಗೊಂಡಿದೆ. ಹಾಲಿ ಸಂಸದರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ರಾಜ್ಯ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ. + +ಹೈಕಮಾಂಡ್ ಮುಂದೆ ಆಡಳಿತ ವಿರೋಧಿ ಅಲೆ ಇರುವ ಸಂಸದರಿಗೆ ಕೊಕ್ ನೀಡಬೇಕೆಂಬ ಮಾತುಗಳು ಕೇಳಿ ಬಂದಿವೆ. ಈ ವಿಚಾರವಾಗಿ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದ್ದು, ಮೈಸೂರು, ಬೀದರ್, ದ.ಕನ್ನಡ, ಉಡುಪಿ-ಚಿಕ್ಕಮಗಳೂರು ಮತ್ತು ಬಾಗಲಕೋಟೆ ವಿಷಯದಲ್ಲಿ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗುತ್ತಿದೆ. ಸ್ಥಳೀಯರ ವಿರೋಧದ ನಡುವೆ ಹಾಲಿ ಸಂಸದರಿಗೆ ಟಿಕೆಟ್ ನೀಡುವುದು ಒಳ್ಳೆಯದಲ್ಲ ಎಂಬ ವಾದವನ್ನು ಕೆಲ ಮುಖಂಡರು ಮಂಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. + + + +ಸಭೆಯಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಪಿ.ಸಿ.ಗದ್ದಿಗೌಡರ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿಂತಿದ್ದಾರೆ. ಯಡಿಯೂರಪ್ಪರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪಿ.ಸಿ ಗದ್ದಿಗೌಡರ್ ಮತ್ತು ಪ್ರತಾಪ್ ಸಿಂಹ ಕಾರ್ಯಕ್ಷಮತೆಗೆ ವಿರೋಧ ವ್ಯಕ್ತವಾಗಿದೆ. ಹೀಗಾಗಿ ನಾಲ್ಕೈದು ಕ್ಷೇತ್ರಗಳ ಟಿಕೆಟ್ ಹಂಚಿಕೆಯಲ್ಲಿ ಬಿಕ್ಕಟ್ಟು ನಿರ್ಮಾಣವಾಗಿದ್ದರಿಂದ ಅಂತಿಮ ಪಟ್ಟಿ ಬಿಡುಗಡೆ ತಡವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. + + + diff --git a/PublicTV_World/00ac17cb.txt b/PublicTV_World/00ac17cb.txt new file mode 100644 index 0000000000000000000000000000000000000000..fb9207edd21a694f172f515099dfc2d82b9ccf84 --- /dev/null +++ b/PublicTV_World/00ac17cb.txt @@ -0,0 +1,10 @@ +ವಿಜಯಪುರ:ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಕರ್ತವ್ಯ ನಿರತ ಬಿಎಸ್‍ಎಫ್ ಯೋಧ ಸಾವನ್ನಪ್ಪಿದ್ದಾರೆ. + +ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಯೋಧ ಶಿವಾನಂದ ಬಡಿಗೇರ(31) ನಿಧನವಾದ ಯೋಧ. ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರತ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಯೋಧ ಸಾವನ್ನಪ್ಪಿದ್ದು, ಭಾರತೀಯ ಸೇನೆ ದೂರವಾಣಿ ಕರೆ ಮೂಲಕ ಕುಟುಂಬಸ್ಥರಿಗೆ ಮಾಹಿತಿ ನೀಡಿದೆ. + +ಶಿವಾನಂದ ಒಂದೂವರೆ ವರ್ಷದ ಹಿಂದಷ್ಟೇ ಜಿಲ್ಲೆಯ ತಾಳಿಕೋಟೆ ತಾಲೂಕಿನ ತುಂಬಗಿಯ ಪುಷ್ಪಾ ಅವರನ್ನು ವಿವಾಹವಾಗಿದ್ದ. ಶಿವಾನಂದ 14 ವರ್ಷಗಳ ಹಿಂದೆ ಸೇನೆ ಸೇರಿದ್ದರು. ಬಾಂಗ್ಲಾ, ಚೀನಾ ಗಡಿಯಲ್ಲಿ ಸೇವೆ ಸಲ್ಲಿಸಿ, ಸದ್ಯ ಜಮ್ಮು ಕಾಶ್ಮೀರದ ಗಡಿಯಲ್ಲಿ ನಿಯೋಜನೆಯಾಗಿದ್ದರು. + +ಶಿವಾನಂದ ಅವರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಬಗ್ಗೆ ಶಿವಾನಂದ ಅವರ ಸಹೋದರ ಕಾಳಪ್ಪ ಬಡಿಗೇರಗೆ ಸೇನೆ ಮಾಹಿತಿ ನೀಡಿದೆ. ಕಾಳಪ್ಪ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮನೆಯವರು ದುಃಖಿತರಾಗಿದ್ದಾರೆ. ಶಿವಾನಂದ ಅವರ ಪಾರ್ಥೀವ ಶರೀರವನ್ನು ಬೇಗನೆ ತರುವಂತೆ ಜಿಲ್ಲಾಡಳಿತಕ್ಕೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. + + + diff --git a/PublicTV_World/00b26600.txt b/PublicTV_World/00b26600.txt new file mode 100644 index 0000000000000000000000000000000000000000..0b7820e035b92e52ab3aae5fdce5bb10556162ed --- /dev/null +++ b/PublicTV_World/00b26600.txt @@ -0,0 +1,16 @@ +ಚಿತ್ರದುರ್ಗ:ಪ್ರೇಮಿಗಳ ದಿನಾಚರಣೆ ಬದಲಾಗಿ ಕೋಟೆನಾಡಿನ ಕಾಲೇಜು ವಿದ್ಯಾರ್ಥಿಗಳಿಂದ ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರ ಬಲಿದಾನ ದಿವಸ್ ಆಚರಣೆ ಮಾಡಲಾಗಿದೆ. + +ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದ ಮುಂಭಾಗದಲ್ಲಿ, ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ನಿವೃತ ಯೋಧರು ಸೇರಿ ಪುಲ್ವಾಮಾದಲ್ಲಿ ವೀರ ಮರಣ ಹೊಂದಿದ 40 ಜನ ವೀರಯೋಧರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. + + + +ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದ ಬಳಿಕ ಪುಲ್ವಾಮಾ ದಾಳಿ ಕುರಿತು ಮೆಲಕು ಹಾಕಿದ ನಿವೃತ್ತ ಯೋಧ ಸತ್ಯನಾರಾಯಣ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅಮೂಲ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಇಂತಹ ಪ್ರೇಮಿಗಳ ದಿನ ಸೇರಿದಂತೆ ದೈನಂದಿನ ಬದುಕಲ್ಲಿ ದುಷ್ಪರಿಣಾಮ ಬೀರುವ ಆಚರಣೆಗಳನ್ನು ಆಚರಿಸುವ ಬದಲಾಗಿ ರಾಷ್ಟ್ರ ಪ್ರೇಮ ಬೆಳಸಿಕೊಂಡು ದೇಶ ಸೇವೆಗೆ ಮುಂದಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. + + + +ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಸತ್ಯನಾರಾಯಣ್ ಉಪನ್ಯಾಸಕರಾದ ಲೇಪಾಕ್ಷ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಸಾರ್ವಜನಿಕರು ಭಾಗಿಯಾಗಿದ್ದರು. + +Advertisement + + + diff --git a/PublicTV_World/00b30ebc.txt b/PublicTV_World/00b30ebc.txt new file mode 100644 index 0000000000000000000000000000000000000000..62057b3129c009cce174d852b1905dc21b60acdf --- /dev/null +++ b/PublicTV_World/00b30ebc.txt @@ -0,0 +1,10 @@ +ಕೋಲಾರ:ಸಹಾಯ ಮಾಡುವ ಸೋಗಿನಲ್ಲಿ ಅಮಾಯಕರ ಬಳಿ ಎಟಿಎಂ (ATM) ಪಿನ್ ಪಡೆದು ಹಣ ಎಗರಿಸುತ್ತಿದ್ದ ಮೂವರು ಅಂತರಾಜ್ಯ ಕಳ್ಳರನ್ನು ಮುಳಬಾಗಿಲು (Mulbagal) ಪೊಲೀಸರು (Police) ಬಂಧಿಸಿದ್ದಾರೆ. + +ಆರೋಪಿಗಳನ್ನು ತಮಿಳುನಾಡಿನ ಹೊಸೂರು ಮೂಲದ ಮಂಜುನಾಥ್, ಚಿನ್ನದೊರೈ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 13 ಸಾವಿರ ನಗದು, ನಾಲ್ಕು ಎಟಿಎಂ ಕಾರ್ಡ್‍ಗಳು, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಎಟಿಎಂ ಬಳಿ ಹಣ ಡ್ರಾ ಮಾಡಲು ಸಹಾಯ ಕೇಳಿದವರ ಪಿನ್ ಪಡೆದು ವಂಚಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳು ಬೆಂಗಳೂರು ಸೇರಿದಂತೆ ಕೋಲಾರ, ಆಂದ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ಇದನ್ನೂ ಓದಿ:ಕೇರಳ ಬ್ಲಾಸ್ಟ್- ತೀವ್ರವಾಗಿ ಗಾಯಗೊಂಡಿದ್ದ 61 ವರ್ಷದ ಮಹಿಳೆ ಸಾವು + + + +ಹಲವು ವರ್ಷಗಳಿಂದ ಕೊಲೆ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ. ಮೂರು ರಾಜ್ಯಗಳ ಪೊಲೀಸರಿಗೂ ಆರೋಪಿಗಳು ಹಲವಾರು ಪ್ರಕರಣದಲ್ಲಿ ಬೇಕಾಗಿದ್ದಾರೆ. ಆರೋಪಿಗಳ ವಿರುದ್ಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ:ಸತತ 4ನೇ ದಿನ ವಾಯುಗುಣಮಟ್ಟ ಕುಸಿತ – ದೆಹಲಿಯಲ್ಲಿ ಹೈವೋಲ್ಟೇಜ್‌ ಸಭೆ ಕರೆದ ಸಿಎಂ + + + diff --git a/PublicTV_World/00b31142.txt b/PublicTV_World/00b31142.txt new file mode 100644 index 0000000000000000000000000000000000000000..a13e1f1a041619c5f3825c48cabe5b955ed6db9f --- /dev/null +++ b/PublicTV_World/00b31142.txt @@ -0,0 +1,12 @@ +ಕಾರವಾರ:ಕಟ್ಟಡದ ಮೇಲ್ಛಾವಣಿ ಪದರ ಕುಸಿದು ಐದು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲ ನಗರದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ನಡೆದಿದೆ. + +ಬುಧವಾರ ಅಂಕೋಲದ ನಿರ್ಮಲ ಕಾನ್ವೆಂಟ್ ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿಯ ಪದರ ಕುಸಿದಿದೆ. ಈ ಸಂದರ್ಭದಲ್ಲಿ ತರಗತಿಯಲ್ಲಿ ಪಾಠ ಕೇಳುತಿದ್ದ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಇದನ್ನೂ ಓದಿ:ಪುರುಷರಿಗೆ ಮಹಿಳೆಯರೇ ಸ್ಪೂರ್ತಿ, ಅವರಿಂದಲೇ ನಾವು: ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ + + + +ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅಂಕೋಲದ ತಹಶೀಲ್ದಾರ್ ಹಾಗೂ ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ:ದಕ್ಷಿಣ ಭಾರತೀಯರಿಗೆ ಯುದ್ಧದ ಅನುಭವವಾಯ್ತು- ನನಗೆ ಮಾತೃಭೂಮಿ ಮೇಲೆ ಪ್ರೀತಿ ಜಾಸ್ತಿಯಾಯ್ತು: ಅನೀಫ್ರೆಡ್ ಡಿಸೋಜಾ + + + + + diff --git a/PublicTV_World/00b33442.txt b/PublicTV_World/00b33442.txt new file mode 100644 index 0000000000000000000000000000000000000000..521735f5dfad3400d613573019dab3dc47bb33d6 --- /dev/null +++ b/PublicTV_World/00b33442.txt @@ -0,0 +1,16 @@ +ಕಲಬುರಗಿ:ಪಿಎಸ್‍ಐಗೆ ಅವಾಚ್ಯ ಪದಗಳಿಂದ ನಿಂದಿಸಿ ಆವಾಜ್ ಹಾಕಿದ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು  ತಾಳ್ಮೆ ಕಳೆದುಕೊಂಡಿದ್ದಾರೆ. ಕರೆಸಿ ಮಾತನಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. + +ಕಲಬುರಗಿಯಲ್ಲಿ ಈ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಶಾಸಕರು ತಾಳ್ಮೆ ಕಳೆದುಕೊಂಡಿದ್ದಾರೆ ಅಂತ ಅನ್ಸುತ್ತೆ. ಎಂ.ಪಿ. ಕುಮಾರಸ್ವಾಮಿ ಅವರು ತಾಳ್ಮೆ ಕಳೆದುಕೊಂಡಿದ್ದಾರೆ. ಎಂ.ಪಿ. ಕುಮಾರಸ್ವಾಮಿ ಅವರು ಪಿಎಸ್‍ಐಗೆ ಅವಾಚ್ಯವಾಗಿ ನಿಂದನೆ ಮಾಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ನಾನು ರಿಪೋರ್ಟ್ ತರಿಸುತ್ತೇನೆ. ಘಟನೆ ಕುರಿತು ಶಾಸಕರನ್ನು ಕರೆಸಿ ಮಾತಾಡುವುದಾಗಿ ತಿಳಿದಿರು. + + + +ಪಿಡಬ್ಲೂ ಇಲಾಖೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶಿಟ್ ಆಗಿದೆ. ಸದ್ಯ ಪಿಎಸ್‍ಐ ಪ್ರಕರಣದಲ್ಲಿ ಬೇರು ಮಟ್ಟಕ್ಕೆ ಹೋಗಿದ್ದೇವೆ. ಅಕ್ರಮ ಮಾಡಿದವರನ್ನು ಬಿಡೋದಿಲ್ಲ, ನಾವ್ಯಾರು ಈ ಸೂತಕದಲ್ಲಿ ಇಲ್ಲ ನಮಗೆ ನೈತಿಕತೆ ಇದೆ. ತನಿಖೆ ಮಾಡಿಸುತ್ತೆವೆ ಎಂದು ಭರವಸೆ ನೀಡಿದರು.ಇದನ್ನೂ ಓದಿ:ವಿಜಯಪುರ ಹೆಚ್ಚು ಕಡಿಮೆ ಪಾಕಿಸ್ತಾನ ಇದ್ದಂಗೆ ಇದೆ: ಯತ್ನಾಳ್‌ + + + +ಮೈಸೂರಿನಲ್ಲಿ ಮಿನಿ ಪಾಕಿಸ್ತಾನ ಘೋಷಣೆ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಬಂದಿದೆ. ಹೀಗಾಗಿ ಹಿರಿಯ ಅಧಿಕಾರಿಗಳ ಹತ್ತಿರ ಮಾತಾಡಿದ್ದೇನೆ. ಜೊತೆಗೆ ವರದಿ ಕೊಡಲು ತಿಳಿಸಿದ್ದೇನೆ ಎಂದರು.ಇದನ್ನೂ ಓದಿ:ಮರ್ಯಾದೆಯಿಂದ ವಾಪಸ್ ಹೋಗೋ ಲೇ – ಇನ್ಸ್‌ಪೆಕ್ಟರ್‌ಗೆ ಎಂ.ಪಿ.ಕುಮಾರಸ್ವಾಮಿ ಆವಾಜ್ + + + + + diff --git a/PublicTV_World/00b3ebad.txt b/PublicTV_World/00b3ebad.txt new file mode 100644 index 0000000000000000000000000000000000000000..c56f5551ac7b207753f887912e5f436aec0f6717 --- /dev/null +++ b/PublicTV_World/00b3ebad.txt @@ -0,0 +1,16 @@ +ಹಾಸನ:ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಾಜಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. + +ಯುವ ಮುಖಂಡ ಮುಖ್ಯಮಂತ್ರಿ ಆಗಿರುವುದು ಸಂತೋಷ. ಅವರು ಭ್ರಷ್ಟಾಚಾರ ತೆಗೆಯೋದು ನಮ್ಮಗುರಿ ಅಂದಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡಲಿ ಎಂದು ನೂತನ ಮುಖ್ಯಮಂತ್ರಿಗೆ ರೇವಣ್ಣ ಸಲಹೆ ನೀಡಿದ್ದಾರೆ. + + + +ಚನ್ನರಾಯಪಟ್ಟಣ ತಾಲೂಕಿನ ಉದಯಪುರದಲ್ಲಿ ಕೃಷಿ ಯಂತ್ರಧಾರೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯನದವರೊಂದಿಗೆ ಮಾತನಾಡಿದ ಅವರು, ಹಿಂದಿನ ಎರಡು ವರ್ಷ ಸುಲಿಗೆ ನಡೆಯುತ್ತಿತ್ತು. ಈಗಿನ ಮುಖ್ಯಮಂತ್ರಿ ಒಳ್ಳೆ ಕೆಲಸ ಮಾಡಿ ಜನರ ವಿಶ್ವಾಸ ಗಳಿಸಲಿ. ಹಾಸನ ಜಿಲ್ಲೆಯ ಕೆಲಸ ತಡೆ ಹಿಡಿದದ್ದಾಗಿ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ. ಈಗ ಹೊಸ ಮುಖ್ಯಮಂತ್ರಿ ಬಂದಿದ್ದಾರೆ. ಅವರು ರೈತಪರ, ಒಳ್ಳೆಯ ಕೆಲಸ ಮಾಡಲಿ. ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಗಳಾಗಿರುವುದು. ಆ ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದು ರೇವಣ್ಣ ಶುಭ ಹಾರೈಸಿದ್ದಾರೆ. + + + +ಇದೇ ವೇಳೆ, ನಾನು ಸಂತೋಷ್ ಅವರ ಮನೆಗಾಗಲಿ, ಪ್ರಹ್ಲಾದ್ ಜೋಶಿ ಅವರ ಮನೆಗಾಗಲಿ ಹೋಗಿಲ್ಲ. ನನಗೆ ಅದರ ಅವಶ್ಯಕತೆ ಇಲ್ಲ. ಹಿಂದೆ ಗಡ್ಕರಿ ಅವರೇ ಬಂದು ಕೆಲವು ಯೋಜನೆಗಳಿಗೆ ಅಡಿಗಲ್ಲು ಹಾಕಿದ್ದರು. ಹೀಗಾಗಿ ಆ ಬಗ್ಗೆ ಮಾತಾಡಲು ದೆಹಲಿಗೆ ಹೋಗಿದ್ದೆ. ನಾನು ಯಾವುದೇ ರಾಜಕೀಯ ಕಾರಣಕ್ಕೆ ದೆಹಲಿಗೆ ಹೋಗಿರಲಿಲ್ಲ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಸಿಎಂ ನಿರ್ಧಾರಕ್ಕೆ ಬದ್ಧ: ಮಾಜಿ ಸಚಿವ ನಿರಾಣಿ + +Advertisement + + + diff --git a/PublicTV_World/00b4ec69.txt b/PublicTV_World/00b4ec69.txt new file mode 100644 index 0000000000000000000000000000000000000000..9f65bfdedaee09cbe8a53bb8f93cea1efc00f655 --- /dev/null +++ b/PublicTV_World/00b4ec69.txt @@ -0,0 +1,56 @@ +ಬೆಂಗಳೂರು:ಇಂದು ನಗರದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ಪ್ರಧಾನಿ ಮೋದಿ ಅವರಿಗೆ ತಪ್ಪು ಮಾಹಿತಿಗಳನ್ನು ನೀಡಿ ಭಾಷಣ ಮಾಡಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ್ಯ ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ. + +ಮೋದಿ ಸಮಾವೇಶಕ್ಕೆ ತಿರುಗೇಟು ನೀಡಲೆಂದು ಜಿ.ಪರಮೇಶ್ವರ್ ನೇತೃತ್ವದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಲಾಯಿತು. ಮೋದಿಯವರು ತಮ್ಮ ಒಂದು ಗಂಟೆ ಭಾಷಣದಲ್ಲಿ ಕೆಲವು ಭರವಸೆ ಮಾತು ಟೀಕೆ ಟಿಪ್ಪಣಿ ಮಾಡಿದ್ದಾರೆ. ಕಾಂಗ್ರೆಸ್ ಭ್ರಷ್ಟ ಸರ್ಕಾರ, ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಸಮಯ ಬಂದಿದೆ ಎಂದು ಮಾತನಾಡಿದ್ದಾರೆ. ಈ ಹಿಂದೆ ಬಿಜೆಪಿ ರಾಜ್ಯದಲ್ಲಿದ್ದಾಗ ಮಾಡಿದ ಬ್ರಷ್ಟಾಚಾರ ಮಾಡಿದ್ದನ್ನು ಮೋದಿ ಮರೆತಿರುವ ಹಾಗಿದೆ. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದಿದ್ದ ಯಡಿಯೂರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಮಾತನಾಡಿದ್ದಾರೆ. ರಾಜ್ಯ ಸರ್ಕಾರ 10% ಕಮೀಷನ್ ತೆಗೆದುಕೊಳ್ಳುತ್ತದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರದ ನಂಗಾನಾಚ್ ಆಗ್ತಿದೆ ಎಂದು ಹೇಳುವ ಮೂಲಕ ನಾಡಿನ ಸಮಸ್ತ ಜನತೆಗೆ ಅವಮಾನ ಮಾಡಿದ್ದಾರೆ. ಇದೆಲ್ಲಾ ರಾಜ್ಯ ಬಿಜೆಪಿ ನಾಯಕರು ತಪ್ಪು ಮಾಹಿತಿ ನೀಡಿದ್ದರಿಂದ ಆಗಿದೆ ಅಂತಾ ಜಿ.ಪರಮೇಶ್ವರ್ ಅಂದ್ರು. + + + +ಕೇಂದ್ರ ಸರ್ಕಾರಕ್ಕೆ ಕೌಂಟ್ ಡೌನ್ ಶುರು:ಮೋದಿ ತಮ್ಮ ಭಾಷಣದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಕೌಂಟ್ ಡೌನ್ ಆರಂಭವಾಗಿದೆ ಅಂತಾ ಹೇಳಿದ್ದಾರೆ. ಆದ್ರೆ ನಿಜಕ್ಕೂ ಕೇಂದ್ರ ಸರ್ಕಾರದಲ್ಲಿ ಕೌಂಟ್ ಡೌನ್ ಶುರು ಆಗಿದ್ದರ ಬಗ್ಗೆ ಬಜೆಪಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಅಂದೇ ಕೈ ಬಿಟ್ಟಿದೆ. ಆದ್ರೆ ಮೋದಿಯವರು ಸ್ಟೀಲ್ ಬ್ರಿಡ್ಜ್ ನಲ್ಲಿ ಹಗರಣ ನಡೆದಿದೆ ಅಂತಾ ಹೇಳ್ತಾರೆ, ಪ್ರಧಾನಿಗಳಾಗಿ ಅರ್ಥ ಮಾಡಿಕೊಂಡು ಮಾತನಾಡಬೇಕು ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ರು. + +ದೇಶದಲ್ಲಿ 4 ಕೋಟಿ ಜನರು ಕಗ್ಗತ್ತಲಿನಲ್ಲಿ ಇದ್ದಾರೆ ಅಂತಾ ಮಾತ್ರ ಹೇಳಿದ್ರು. ಆದ್ರೆ ಉಳಿದ 126 ಕೋಟಿ ಜನರು ಬೆಳಕಿನಲ್ಲಿದ್ದಾರೆ ಎಂಬುದನ್ನು ಹೇಳಲಿಲ್ಲ. ಇದು ಮೋದಿ ಅವರ ಋಣಾತ್ಮಕ ಮನಸ್ಥಿತಿಯನ್ನು ತೋರಿಸುತ್ತದೆ. ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಕೇಂದ್ರ ಸರ್ಕಾರ 17 ಸಾವಿರ ಕೋಟಿ ಅನುದಾನ ಬಿಡುಗೊಡೆ ಮಾಡಿದ್ದು, ಅದು ಕೇವಲ ಶೇ.20ರಷ್ಟು ಮಾತ್ರ. ಸಬ್ ಅರ್ಬನ್ ಯೋಜನೆಗೆ ರಾಜ್ಯ ಸರ್ಕಾರ ಶೇ.20ರಷ್ಟು ಬಂಡವಾಳವನ್ನು ಹೂಡಿಕೆ ಮಾಡುತ್ತದೆ. ಇನ್ನುಳಿದ ಶೇ.60ರಷ್ಟು ಅನುದಾನವನ್ನು ಇನ್ನೀತರ ಹಣದ ಮೂಲಗಳಿಂದ ಪಡೆಯಲಾಗುತ್ತದೆ. ಎಲ್ಲರೂ ಸೇರಿ ಕೆಲಸವನ್ನು ಮಾಡಿದ್ದೇವೆ ಅಂತಾ ಹೇಳುವ ಬದಲು ಮೋದಿ ನಾವೇ ಮಾಡಿದ್ದೇವೆ ಅಂತಾ ಹೇಳಿಕೊಂಡಿದ್ದಾರೆ ಅಂತಾ ಅಂದ್ರು. + + + +ಮಹದಾಯಿ ವಿಚಾರದಲ್ಲಿ ಮೌನ:ಸುಮಾರು ಒಂದು ಗಂಟೆಗಳ ಕಾಲ ಸುದೀರ್ಘ ಭಾಷಣ ಮಾಡಿದ ಮೋದಿ ಅವರು, ಮಹದಾಯಿ ವಿಚಾರದಲ್ಲಿ ಚಕಾರ ಎತ್ತಲಿಲ್ಲ. ದೇಶದ ಪ್ರಧಾನಿಗಳಾಗಿ ಮೂರು ರಾಜ್ಯಗಳ ಸಭೆಯನ್ನು ಕರೆದು ಮಧ್ಯಸ್ಥಿಕೆಯನ್ನು ವಹಿಸಿಕೊಳ್ಳಬೇಕು. ಮಹದಾಯಿ ನೀರಿಗಾಗಿ ಉತ್ತರ ಕರ್ನಾಟಕದಲ್ಲಿ ಹೋರಾಟ ಉಗ್ರ ರೂಪ ತಾಳಿದೆ. ಮಹದಾಯಿ ಹೋರಾಟದ ಬಗ್ಗೆ ಮಾತನಾಡದ ಇವರದು ರೈತ ಪರ ಸರ್ಕಾರ ಅಂತಾ ಹೇಳಿಕೊಳ್ಳುತ್ತಾರೆ ಎಂದು ಕುಟುಕಿದರು. + +ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗಿದೆ ಅಂತಾ ಹೇಳ್ತಾರೆ. ಆದ್ರೆ ಕರ್ನಾಟಕ ಅಪರಾಧ ನಡೆಯುವ ಟಾಪ್ 10 ರಾಜ್ಯಗಳಲ್ಲಿ ಬರುವುದಿಲ್ಲ. ಬಿಜೆಪಿ ಆಡಳಿತ ಹೊಂದಿರುವ ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶ ರಾಜ್ಯಗಳಲ್ಲಿ ಅಪರಾಧ ಸಂಖ್ಯೆಗಳು ಹೆಚ್ಚು ನಡೆಯುತ್ತವೆ. ಕೇವಲ ರಾಜಕೀಯ ಉದ್ದೇಶಕ್ಕೆ ಈ ರೀತಿಯ ಹೇಳಿಕೆ ನೀಡುವುದು ರಾಜ್ಯಕ್ಕೆ ಅವಮಾನ ಮಾಡಿದಂತಾಗುತ್ತದೆ ಎಂದು ಆಕ್ರೋಶವನ್ನು ಹೊರ ಹಾಕಿದರು. + +"Bengaluru is known as a Dynamic City worldwide. But@narendramodiaccuses Karnataka of having a Law & Order issue. Does he know that Uttar Pradesh and Madhya Pradesh, both ruled by BJP, have the highest occurrences of crime in India?":@DrParameshwara#ModiLiespic.twitter.com/zrFuMzIxrb + +— Karnataka Congress (@INCKarnataka)February 4, 2018 + + + +"How can a PM use words such as 'Nanga Naach'? Isn't that an insult to people of Karnataka. The countdown for the end of Central BJP Government has actually started":@DrParameshwara#ModiLiespic.twitter.com/XkebsXjnF4 + +— Karnataka Congress (@INCKarnataka)February 4, 2018 + + + +"Rs. 17,000 crores given to Suburban Rail to Bengaluru is another lie by@narendramodi. Central Share in the Project is just 20% of total cost":@DrParameshwara#ModiLies + +— Karnataka Congress (@INCKarnataka)February 4, 2018 + + + +"According to@narendramodi, Karnataka State Government which did a Farm Loan Waiver benefitting 22 lakh+ people is anti-Farmer. But@narendramodiwho didn't open his mouth on Mahadayi issue in a hour long speech is pro-Farmer?":@DrParameshwara#ModiLies + +— Karnataka Congress (@INCKarnataka)February 4, 2018 + + + +"Bengaluru is known as a Dynamic City worldwide. But@narendramodiaccuses Karnataka of having a Law & Order issue. Does he know that Uttar Pradesh and Madhya Pradesh, both ruled by BJP, have the highest occurrences of crime in India?":@DrParameshwara#ModiLiespic.twitter.com/zrFuMzIxrb + +— Karnataka Congress (@INCKarnataka)February 4, 2018 + + + + + + + + + + + + + diff --git a/PublicTV_World/00b705d6.txt b/PublicTV_World/00b705d6.txt new file mode 100644 index 0000000000000000000000000000000000000000..df68d53608351a64bc9b71797a986896210cd892 --- /dev/null +++ b/PublicTV_World/00b705d6.txt @@ -0,0 +1,16 @@ +ಬೆಂಗಳೂರು:2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಶತಾಯಗತಾಯ ಪಕ್ಷವನ್ನ ಅಧಿಕಾರಕ್ಕೆ ತರಲು ಅನೇಕ ಪ್ಲ್ಯಾನ್ ರೂಪಿಸುತ್ತಿದೆ. ಖುದ್ದು ಅಖಾಡಕ್ಕೆ ಇಳಿದಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿರುವ ನಾಯಕರನ್ನು ಮನವೊಲಿಸಲು ಕಸರತ್ತು ನಡೆಸಿದ್ದಾರೆ. ಪಕ್ಷದಿಂದ ಹೊರ ಹೋಗಲು ಮನಸು ಮಾಡಿರುವ ನಾಯಕರನ್ನು ಉಳಿಸಿಕೊಳ್ಳಲು ಮುಂದಾಗಿದ್ದು, ಮುನಿಸಿಕೊಂಡ ನಾಯಕರಿಗೆ ದೂರವಾಣಿ ಕರೆ ಮಾಡಿ ಪಕ್ಷ ಬಿಟ್ಟು ಹೋಗದಂತೆ ಮನವೊಲಿಕೆ ಮಾಡುತ್ತಿದ್ದಾರೆ. + + + +ಇದರ ಭಾಗವಾಗಿ ಇದೀಗ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮೇಲೆ ಮುನಿಸಿಕೊಂಡಿರುವ ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದಾರೆ. ಇದನ್ನು ಸರಿಪಡಿಸಲು ಜೆಡಿಎಸ್ ವರಿಷ್ಠ ದೇವೇಗೌಡರೇ ಮುಂದಾಗಿದ್ದು, ಜಿ.ಟಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡಿ, ಮಾತನಾಡಿ ಮನವೊಲಿಕೆ ಮಾಡಿದ್ದಾರೆ. ಈ ಮೂಲಕ ಬಿರುಕು ಬಿಟ್ಟಿರುವ ಪಕ್ಷವನ್ನು ಸಂಧಾನದ ಮೂಲಕ ಒಂದು ಗೂಡಿಸಲು ಪ್ರಯತ್ನ ಮಾಡುತ್ತಿದ್ದಾರೆ.ಇದನ್ನೂ ಓದಿ:ಇನ್ನೊಂದು ವಾರದಲ್ಲಿ ಮುನಿರತ್ನ ಮಂತ್ರಿಯಾಗಲಿದ್ದಾರೆ: ಸೋಮಣ್ಣ ಭವಿಷ್ಯ + + + +ಎರಡು ದಿನಗಳ ಹಿಂದೆ ಜಿ.ಟಿ.ದೇವೇಗೌಡರಿಗೆ ಕರೆ ಮಾಡಿದ್ದ ಮಾಜಿ ಪ್ರಧಾನಿ ದೇವೇಗೌಡರು, ಪಕ್ಷ ಬಿಡುವ ಆಲೋಚನೆ ಮಾಡಬೇಡ ಎಂದು ಮನವೊಲಿಸಿದ್ದಾರೆ. ಏನೇ ಬೇಸರ ಇದ್ದರೂ ಕುಳಿತು ಮಾತನಾಡೋಣ. ಯಾವುದೇ ಆತುರದ ನಿರ್ಧಾರ ಮಾಡದಂತೆ ಮನವಿ ಮಾಡಿದ್ದಾರೆ. ಒಂದು ಪಕ್ಷದಲ್ಲಿ ಸಣ್ಣ ಪುಟ್ಟ ಅಸಮಾಧಾನ ಸಹಜ. ಹಾಗಂತ ಪಕ್ಷ ಬಿಟ್ಟು ಹೋಗೋ ಚಿಂತನೆ ಮಾಡಬೇಡ. ನಿನ್ನನ್ನು ಯಾವತ್ತೂ ಕೈ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. + + + +ಏನೇ ಭಿನ್ನಾಭಿಪ್ರಾಯ ಇದ್ದರೂ, ಮಾತನಾಡಿ ಸರಿ ಮಾಡಿಕೊಳ್ಳೋಣ, ನಿನಗೆ ಮತ್ತು ನಿನ್ನ ಮಗನಿಗೆ ಅನ್ಯಾಯ ಆಗದಂತೆ ನಾನು ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ದೇವೇಗೌಡರ ಮಾತನ್ನು ಸಮಾಧಾನದಿಂದಲೇ ಆಲಿಸಿರುವ ಜಿ.ಟಿ.ದೇವೇಗೌಡರು, ಅವರ ಮಾತಿಗೆ ಸಕಾರಾತ್ಮಕವಾಗಿಯೇ ಉತ್ತರಿಸಿದ್ದಾರೆ ಎನ್ನಲಾಗಿದೆ. ಹಾಗಾದರೆ ದೇವೇಗೌಡರ ಮನವೊಲಿಕೆಗೆ ಜಿ.ಟಿ.ದೇವೇಗೌಡರು ಒಪ್ಪಿಕೊಳ್ಳುತ್ತಾರಾ? ಎಲ್ಲ ಭಿನ್ನಾಭಿಪ್ರಾಯ ಮರೆತು ಪಕ್ಷದಲ್ಲೇ ಉಳಿಯುತ್ತಾರಾ? ದೊಡ್ಡಗೌಡರ ಸಂಧಾನ ತಂತ್ರ ಫಲ ಕೊಡುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ. + + + diff --git a/PublicTV_World/00b8e632.txt b/PublicTV_World/00b8e632.txt new file mode 100644 index 0000000000000000000000000000000000000000..5f5b7aa23c9281bbb8d9ef485bdc2579c2a06749 --- /dev/null +++ b/PublicTV_World/00b8e632.txt @@ -0,0 +1,16 @@ +ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳ ದಾಳಿಗೆ ತುತ್ತಾಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. + +ಪ್ರವೀಣ್ (13) ಮೃತ ದುರ್ದೈವಿ. ನಾಯಿಗಳ ದಾಳಿಗೆ ಸಿಕ್ಕ ಬಾಲಕ ಪ್ರವೀಣ್ ಸ್ಥಿತಿ ಚಿಂತಾಜನಕದಲ್ಲಿದ್ದು, ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಬಾಲಕ ಮೃತಪಟ್ಟಿದ್ದಾನೆ. + +ಪ್ರವೀಣ್ ಮುರಗಮ್ಮ ಹಾಗೂ ಮನೋಜ್ ದಂಪತಿಯ ಮಗನಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲೇ ಪ್ರವೀಣ್ ಪೋಷಕರು ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಚಿಕಿತ್ಸೆಗೆ ಹಣವಿಲ್ಲದಿದ್ದಾಗ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದರು. ಆಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಪ್ರವೀಣ್ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಮೇಯರ್ ಸಂಪತ್ ರಾಜ್ ಅವರು ತಿಳಿಸಿದ್ದರು. ಈ ಘಟನೆ ಹೆಚ್‍ಎಎಲ್‍ನ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರಂ ಬಳಿ ನಡೆದಿತ್ತು. + + + +ಬುಧವಾರ ಪ್ರವೀಣ್ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದನು. ಈ ವೇಳೆ ಬಾಲಕನ ಮೇಲೆ ಸುಮಾರು 10 ಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿದ್ದು, ಪ್ರವೀಣ್ ನ ಕತ್ತು, ಮೈ ಹಾಗೂ ಕೈ ಭಾಗಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಇದನ್ನು ಕಂಡ ಸ್ಥಳೀಯರು ನಾಯಿಗಳನ್ನು ಓಡಿಸಿ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಬಾಲಕನ ಸ್ಥಿತಿಯು ಚಿಂತಾಜನಕವಾಗಿತ್ತು. ಆಗ ವೈದ್ಯರು ಇನ್ನು ಮೂರು ದಿನಗಳ ಕಾಲ ಏನು ಹೇಳುವುದಕ್ಕೆ ಆಗುವುದಿಲ್ಲ ಎಂದಿದ್ದರು. + +ಈ ಘಟನೆ ನಡೆದ ಬಳಿಕ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಏರಿಯಾಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದೆ. ಇವುಗಳಿಗೆ ಮೂಲ ಕಾರಣ ವಿಭೂತಿಪುರಂನಲ್ಲಿರುವ ಹೆಚ್ಚಿನ ಮಾಂಸದ ಅಂಗಡಿಗಳು. ಅಂಗಡಿಯವರು ನಾಯಿಗಳಿಗೆ ಮಾಂಸದ ತುಂಡುಗಳನ್ನು ಹಾಕುತ್ತಾರೆ. ಹೀಗಾಗಿ ಇವನ್ನೇ ರೂಢಿ ಮಾಡಿಕೊಂಡಿರುವ ನಾಯಿಗಳು ಜನರ ಮೇಲೂ ದಾಳಿ ನಡೆಸುತ್ತಲೇ ಇರುತ್ತವೆ. ಈ ಬಗ್ಗೆ ಸ್ಥಳೀಯ ಕಾರ್ಪೋರೇಟರ್ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಹೇಳಿದ್ದರು. + +ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv + + + diff --git a/PublicTV_World/00bb510d.txt b/PublicTV_World/00bb510d.txt new file mode 100644 index 0000000000000000000000000000000000000000..5120d0bf356a3b0de181a0a0aba434f5936e1d0f --- /dev/null +++ b/PublicTV_World/00bb510d.txt @@ -0,0 +1,16 @@ +ಕೊಪ್ಪಳ:ಹೆತ್ತು ಹೊತ್ತು ಸಾಕಿ ಸಲುಹಿದ ತಾಯಿಯನ್ನು ಮರೆಯುವ ಈ ಕಾಲದಲ್ಲಿ ಜಗತ್ತಿನ ಜ್ಞಾನವನ್ನೇ ಅರಿಯದ ಮಗ್ಧ ಬಾಲಕಿಯೊಬ್ಬಳು ಅನಾರೋಗ್ಯದಿಂದ ಬಳಲುತ್ತಿರುವ ತಾಯಿಗೆ ಆರೈಕೆಯನ್ನು ಮಾಡುತ್ತಿದ್ದಾಳೆ. ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಇಂತಹ ಮನಕಲುಕುವ ದೃಶ್ಯ ಕಂಡು ಬಂದಿದೆ. + +ಕಾರಟಗಿ ತಾಲೂಕಿನ ಸಿದ್ದಾಪುರದ ದುರ್ಗಮ್ಮ ಎಂಬವರು ಕಳೆದ ನಾಲ್ಕು ದಿನಗಳ ಹಿಂದೆ ತಲೆ ನೋವು ಹಾಗೂ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ದುರ್ಗಮ್ಮ ಅವರ ಪತಿ ಅರ್ಜುನ್ ತಮ್ಮ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ನಾಳೆ ಬರುತ್ತೇನೆಂದು 6 ವರ್ಷದ ಮಗಳು ಭಾಗ್ಯಶ್ರೀಗೆ ಹೇಳಿ ಹೋಗಿದ್ದನು. ಆದರೆ ಆಸ್ಪತ್ರೆಯಲ್ಲಿ ಪತ್ನಿ, ಮಗಳನ್ನು ಬಿಟ್ಟು ಹೋದ ಅರ್ಜುನ್ ಮತ್ತೆ ಹಿಂದಿರುಗಲಿಲ್ಲ. ಹೀಗಾಗಿ ಒಬ್ಬಂಟಿಯಾದ ತಾಯಿಗೆ ಬಾಲಕಿ ಭಾಗ್ಯಶ್ರೀ ಆಸೆರೆಯಾಗಿದ್ದಾಳೆ. + + + +ತಂದೆ ತನ್ನನ್ನು ಹಾಗೂ ತಾಯಿಯನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋದ ಕಾರಣ ಭಾಗ್ಯಶ್ರೀ ಆಸ್ಪತ್ರೆಯ ಆವರಣ ಸುತ್ತಮುತ್ತ ಭಿಕ್ಷೆ ಬೇಡುತ್ತಿದ್ದಾಳೆ. ಬಳಿಕ ಬಂದ ಹಣದಲ್ಲಿ ತಾಯಿಗೆ ಬೇಕಾದ ಎಳನೀರು, ಹಾಲು ಇನ್ನಿತರ ಪದಾರ್ಥಗಳನ್ನು ತಂದು ಕೊಡುತ್ತಿದ್ದಾಳೆ. ಅಲ್ಲದೆ ಜನರು ಅನ್ನ ಅಥವಾ ರೊಟ್ಟಿಯನ್ನು ಕೊಟ್ಟರೆ ಅದನ್ನು ತನ್ನ ತಾಯಿಗೆ ತಿನ್ನಿಸುತ್ತಾಳೆ. ಊಟ ಮಾಡಿಸುವುದಲ್ಲದೇ ತಾಯಿಯ ತಲೆ ಬಾಚುವುದು, ಸ್ವಚ್ಛಗೊಳಿಸುವ ಕೆಲಸ ಕೂಡ ಭಾಗ್ಯಶ್ರೀ ಮಾಡುತ್ತಿದ್ದಾಳೆ. + + + +ದುರ್ಗಮ್ಮರಿಗೆ ಮಗಳಲ್ಲದೇ ನಾಲ್ಕನೇ ತರಗತಿ ಓದುತ್ತಿರುವ ವೆಂಕಟೇಶ್ ಎಂಬ ಮಗ ಕೂಡ ಇದ್ದಾನೆ. ಭಾಗ್ಯಶ್ರೀ 1ನೇ ತರಗತಿ ಓದುತ್ತಿದ್ದು, ತನ್ನ ತಾಯಿಯ ಆರೈಕೆ ಮಾಡುತ್ತಿದ್ದಾಳೆ. ದುರ್ಗಮ್ಮ ಅವರ ಪರಿಸ್ಥಿತಿ ನೋಡಿ ಆಸ್ಪತ್ರೆಗೆ ದಾಖಲಾಗಿರುವ ಬೇರೆ ರೋಗಿಗಳು ಅವರಿಗೆ ಸಹಾಯ ಮಾಡುತ್ತಿದ್ದಾರೆ. ಪತಿ ಅರ್ಜುನ್ ಎರಡನೇ ಮದುವೆಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ದುರ್ಗಮ್ಮ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದಾಳೆ. ದುರ್ಗಮ್ಮರನ್ನು ಆಸ್ಪತ್ರೆಯಲ್ಲಿ ಇಟ್ಟುಕೊಳ್ಳುವುದು ಕಷ್ಟ ಎಂದು ವೈದ್ಯರು ಮನೆಗೆ ಹೋಗಲು ತಿಳಿಸಿದ್ದಾರೆ ಎನ್ನಲಾಗಿದೆ. + +ಇತ್ತ ಹಣವಿಲ್ಲದ ಕಾರಣ ಭಾಗ್ಯಶ್ರೀ ಭಿಕ್ಷೆ ಬೇಡಿ ತನ್ನ ತಾಯಿ ದುರ್ಗಮ್ಮರ ಆರೈಕೆ ಮಾಡುತ್ತಿದ್ದಾಳೆ. + + + diff --git a/PublicTV_World/00bb665c.txt b/PublicTV_World/00bb665c.txt new file mode 100644 index 0000000000000000000000000000000000000000..bee89604c9d1be87b0ce917e71a76b06b8f7f069 --- /dev/null +++ b/PublicTV_World/00bb665c.txt @@ -0,0 +1,18 @@ +ಬೆಂಗಳೂರು:ರಾಜ್ಯಕ್ಕೆ ಬಿಜೆಪಿಯ ಚುನಾವಣಾ ಚಾಣಕ್ಯ ಅಮಿತ್ ಶಾ ಎಂಟ್ರಿ ಕೊಟ್ಟಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲೆ ಮೈತ್ರಿ ನಾಯಕರ ಭೇಟಿ ಇಂದೆ ನಡೆಯಬಹುದು ಎಂಬ ಚರ್ಚೆಗಳು ನಡೆಯುತ್ತಿದೆ. + +ಮೈತ್ರಿ ಪ್ರಾಬಲ್ಯದ ಅಂಗಳದಲ್ಲೆ ಸೀಟ್ ಬೇಡಿಕೆಯ ಒತ್ತಡ ಹೆಚ್ಚಿಸಲು ಮಾಜಿ ಸಿಎಂ ಕುಮಾರಸ್ವಾಮಿ ಮುಂದಾಗುವ ಸಾಧ್ಯತೆಗಳಿವೆ. ಅಮಿತ್ ಶಾ, ಕುಮಾರಸ್ವಾಮಿ ಭೇಟಿ ಹಾಗೂ ಮಾತುಕತೆಗೆ ಸಾಂಸ್ಕೃತಿಕ ನಗರಿ ವೇದಿಕೆ ಆದರೂ ಅಚ್ಚರಿ ಇಲ್ಲ. ಮೈತ್ರಿ ಪಾಲಿನ ಹಕ್ಕು ಮಂಡಿಸಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಮಿತ್ ಶಾ ಮುಂದೆ ರಾಜಕೀಯ ದಾಳ ಉರುಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. + + + +ಒಟ್ಟಾರೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ರಾಜ್ಯಕ್ಕೆ ಬಂದಿರುವುದು ಮೈತ್ರಿ ನಾಯಕರ ಮಾತುಕತೆಯ ಕುತೂಹಲವನ್ನು ಹೆಚ್ಚಿಸಿದೆ ಎನ್ನಲಾಗುತ್ತಿದೆ.ಇದನ್ನೂ ಓದಿ:ಮೈಸೂರಿಗೆ ಅಮಿತ್ ಶಾ ಆಗಮನ- ಲೋಕಸಭಾ ಚುನಾವಣೆ ಗೆಲ್ಲಲು ರಣತಂತ್ರ + +ಅಮಿತ್ ಶಾ ಮೀಟಿಂಗ್ ಅಜೆಂಡಾ ಏನು?:ರಾಜ್ಯದ 28 ಕ್ಷೇತ್ರಗಳ ಕ್ಷೇತ್ರವಾರು ಸರ್ವೆ ಮಾಡಿಸಿರೋ ಅಮಿತ್ ಶಾ ಅವರು 28 ಕ್ಷೇತ್ರಗಳಲ್ಲಿ ಸೋಲು- ಗೆಲುವಿನ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಯಾವ ಕ್ಷೇತ್ರ ಜೆಡಿಎಸ್‍ಗೆ ಬಿಟ್ಟು ಕೊಡಬೇಕು ಅನ್ನೋ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. + + + +ಈಗಾಗಲೇ ಜೆಡಿಎಸ್ (JDS) 5-6 ಕ್ಷೇತ್ರಗಳ ಪಟ್ಟಿ ಬಿಜೆಪಿ (BJP) ಹೈಕಮಾಂಡ್‍ಗೆ ನೀಡಿದೆ. ಈ ಪಟ್ಟಿಯಲ್ಲಿ ಮಂಡ್ಯ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ತುಮಕೂರು, ಬೆಂಗಳೂರು ಗ್ರಾಂ., ಬೆಂಗಳೂರು ಉತ್ತರ ಕ್ಷೇತ್ರಗಳನ್ನ ಪ್ರಸ್ತಾಪ ಮಾಡಿದೆ. 7 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಪ್ರಾಬಲ್ಯದ ಬಗ್ಗೆ ರಿಪೆÇೀರ್ಟ್ ಪಡೆಯುತ್ತಾರೆ. ಬಳಿಕ ಹೆಚ್‍ಡಿಕೆ ಸ್ಪರ್ಧೆ & ಕ್ಷೇತ್ರ, ಸ್ಪರ್ಧೆಯಿಂದಾಗುವ ಲಾಭಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ. + + + + + diff --git a/PublicTV_World/00bb915f.txt b/PublicTV_World/00bb915f.txt new file mode 100644 index 0000000000000000000000000000000000000000..d8f810783cd5a144cd8f7791c52dec5647ca8818 --- /dev/null +++ b/PublicTV_World/00bb915f.txt @@ -0,0 +1,10 @@ +ತುಮಕೂರು: ಎಲ್ಲರ ಜೊತೆಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ಅಂಬಿ, ನಮ್ಮನ್ನ ಬೆಂಬಲಿಸುವ ನಿರ್ಧಾರ ಮಾಡಿದ್ರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. + +ಪ್ರಚಾರದಲ್ಲಿ ಮಾತನಾಡುವ ವೇಳೆ ಕುಮಾರಸ್ವಾಮಿ, ಅಂಬರೀಶ್ ನಮ್ಮ ಹಿರಿಯ ಸಹೋದರ. ಅವರು ಯಾವುದೇ ಪಕ್ಷದಲ್ಲಿದ್ರೂ ಒಂದು ರೀತಿ ಅಜಾತ ಶತ್ರು. ಎಲ್ಲರ ಜೊತೆಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ಅವರು ನಮ್ಮನ್ನ ಬೆಂಬಲಿಸುವ ನಿರ್ಧಾರ ಮಾಡಿದ್ರೆ ಸ್ವಾಗತಿಸುತ್ತೇನೆ. ನಾನು ಒತ್ತಾಯ ಮಾಡಲ್ಲ. ಸಮಾಜದ ಎಲ್ಲಾ ವಿಚಾರಗಳನ್ನು ಅವರು ಗಮನಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಒಳಿತಿನ ದೃಷ್ಟಿಯಿಂದ ಅವರು ಸೂಕ್ತ ನಿರ್ಧಾರ ಮಾಡಬಹುದು ಎಂದು ಅಭಿಪ್ರಾಯಪಟ್ಟರು.ಇದನ್ನೂ ಓದಿ:ನಾನು ಯಾವತ್ತಿದ್ರೂ ಸ್ಟಾರ್, ರಾಜಕೀಯ, ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ಚಿರಋಣಿ: ಅಂಬರೀಶ್ + +ಹಲವಾರು ವರ್ಷದಿಂದ ಯಾವುದೇ ಪಕ್ಷದಲ್ಲಿದ್ರೂ ದೇವೇಗೌಡರ ವಿಚಾರ, ಅವರ ಹೋರಾಟದ ಬಗ್ಗೆ ಬಿಚ್ಚು ಮನಸ್ಸಿನಿಂದ, ತುಂಬು ಹೃದಯದಿಂದ ಚರ್ಚೆ ಮಾಡುವುದರಲ್ಲಿ ಅಂಬರೀಶ್ ಮೊದಲನೇ ವ್ಯಕ್ತಿ ಎಂದು ಎಚ್‍ಡಿಕೆ ಹೇಳಿದರು. + +ಕುಮಾರಸ್ವಾಮಿ ಖಾಕಿ ಚಡ್ಡಿ ಎಂದು ಜಮೀರ್ ಅಹ್ಮದ್ ಹೇಳಿದ್ದಕ್ಕೆ, ಜಮೀರ್ ಒಬ್ಬ ಅನಾಗರೀಕ, ಅವರ ವಿಚಾರಕ್ಕೆಲ್ಲ ನಾನು ಉತ್ತರ ನೀಡುವುದಿಲ್ಲ. ಕೆಸರಿಗೆ ಕಲ್ಲುಹಾಕಿ ಮುಖಕ್ಕೆ ಸಿಡಿಸಿಕೊಳ್ಳಲು ಇಷ್ಟವಿಲ್ಲ ಎಂದು ತಿರುಗೇಟು ನೀಡಿದರು. + + + diff --git a/PublicTV_World/00bce75a.txt b/PublicTV_World/00bce75a.txt new file mode 100644 index 0000000000000000000000000000000000000000..8ea9c8d94430ecfe57276d840fad1c6b66c73be7 --- /dev/null +++ b/PublicTV_World/00bce75a.txt @@ -0,0 +1,16 @@ +ಕೊಪ್ಪಳ:ಜಿಲ್ಲೆಯ ಗಂಗಾವತಿ ತಾಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಕಳೆದ ಎರಡ್ಮೂರು ದಿನಗಳ ಹಿಂದೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ, ಅಕ್ರಮ ಮರಳು ಜಪ್ತಿ ಮಾಡಿದ್ದಾರೆ. ಆದರೆ ಜಪ್ತಿ ಮಾಡಿದ ಮರಳು ಸಾಗಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದರಿಂದ ಅಕ್ರಮ ಮರಳು ಕಾಯುವುದೇ ಕಂದಾಯ ಇಲಾಖೆಯ ಸಿಬ್ಬಂದಿಗೆ ಸಂಕಷ್ಟವಾಗಿ ಮಾರ್ಪಟಿದೆ. + + + +ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗೆದು, ನಾಗನಹಳ್ಳಿ ಸಮೀಪದ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ಆಪಾರ ಪ್ರಮಾಣದ ಮರಳು ಸಂಗ್ರಹ ಮಾಡಲಾಗಿದ್ದು, ಮಾಹಿತಿ ತಿಳಿದ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜೂನ್ 30 ರಂದು ದಾಳಿ ನಡೆಸಿ, 20 ಟ್ರ್ಯಾಕ್ಟರ್‍ಗೂ ಅಧಿಕ ಮರಳು ವಶಕ್ಕೆ ಪಡೆದು ಜಪ್ತಿ ಮಾಡಿದ್ದಾರೆ. ಸರ್ಕಾರಿ ಜಮೀನುಗಳಲ್ಲಿ ಮರಳು ಇರುವುದರಿಂದ ದಂಧೆಕೋರರ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಸದ್ಯ ಮರಳಿನ ಬೆಲೆಯ ಪ್ರಕಾರ 1 ಲಕ್ಷ ರೂ.ಗೂ ಅಧಿಕ ಬೆಲೆಬಾಳುವ ಮರಳು ಇದಾಗಿದ್ದು, ಸದ್ಯ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. + + + +ಅಧಿಕಾರಿಗಳು ದಾಳಿ ನಡೆಸಿ, ಮರಳು ಜಪ್ತಿ ಮಾಡಿ ಈಗಾಗಲೇ 4 ದಿನಗಳು ಕಳೆದಿವೆ. ಆದರೂ ಕೂಡ ಜಪ್ತಿ ಮರಳು ಸಾಗಾಟ ಮಾಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದು ಕಂದಾಯ ಇಲಾಖೆಯವರಿಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಪಾರ ಪ್ರಮಾಣದ ಮರಳು ಇರುವುರಿಂದ ಅಕ್ರಮ ಮರಳು ಸಾಗಾಟಗಾರರು ರಾತ್ರೋ ರಾತ್ರಿ ಸಾಗಿಸುತ್ತಾರೆ ಎನ್ನುವ ಭಯದಲ್ಲಿ ಕಂದಾಯ ಇಲಾಖೆಯವರು ಹಗಲು, ರಾತ್ರಿ ಎನ್ನದೆ ಮರಳು ರಾಶಿಗಳನ್ನು ಕಾಯಬೇಕಾಗಿದೆ. ರಾತ್ರಿ ವೇಳೆಯಲ್ಲಿ ಮರಳು ರಾಶಿಗಳ ಮುಂದೆಯೇ ಗ್ರಾಮ ಸಹಾಯಕರು ಮಲಗುವ ಪರಿಸ್ಥಿತಿ ಉಂಟಾಗಿದೆ. ರಾತ್ರಿ ವೇಳೆ ಒಬ್ಬಂಟಿಯಾಗಿ ಮಲಗುವುದರಿಂದ ಕಾಡು ಪ್ರಾಣಿಗಳ ಕಾಟವನ್ನೂ ಸಿಬ್ಬಂದಿ ಎದುರಿಸುತ್ತಿದ್ದಾರೆ. ಸದ್ಯ ಜೀವ ಭಯದಲ್ಲಿಯೇ ಕಾಯಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. + + + +ಗಣಿ ಮತ್ತು ಭೂವಿಜ್ಞಾನ ಇಲಾಖೆ ಮೌನ:ಟಾಸ್ಕ್ ಫೋರ್ಸ್ ಸಮಿತಿಯಲ್ಲಿನ ಅಧಿಕಾರಿಗಳು ದಾಳಿ ನಡೆಸಿ, ಮರಳು ಜಪ್ತಿ ಮಾಡಿದರೆ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಆಗಮಿಸಿ, ಇರುವ ಮರಳಿನ ಪ್ರಮಾಣ, ಅಂದಾಜು ಬೆಲೆಯನ್ನು ನಿಗದಿ ಮಾಡಿ, ಸುರಕ್ಷಿತವಾಗಿರುವ ಬೇರೆ ಕಡೆಗೆ ಸ್ಥಳಾಂತರಿಸಬೇಕು. ನಂತರ ಅದಕ್ಕೆ ಟೆಂಡರ್ ಕರೆದು ಮಾರಾಟ ಮಾಡಬೇಕು. ಆದರೆ ಆದ್ಯಾವುದು ಇಲ್ಲಿ ನಡೆಸಯುತ್ತಿಲ್ಲ. ದಾಳಿ ನಡೆಸಿ, ಮೂರು ದಿನ ಕಳೆದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಇದು ಸದ್ಯ ಗ್ರಾಮಸ್ಥರಲ್ಲಿ ನಾನಾ ಅನುಮಾನಗಳಿಗೆ ಕಾರಣವಾಗುತ್ತಿದೆ. + + + diff --git a/PublicTV_World/00bd6622.txt b/PublicTV_World/00bd6622.txt new file mode 100644 index 0000000000000000000000000000000000000000..bedf2c6084920234df166642723867d72002181e --- /dev/null +++ b/PublicTV_World/00bd6622.txt @@ -0,0 +1,12 @@ +ಬೆಳಗಾವಿ:ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಮುಂದಿನ ದಿನದಲ್ಲಿ ಮುಖ್ಯಮಂತ್ರಿಯ ಆಗುವ ಭಾಗ್ಯ ಸಿಗಲಿದೆ ಎಂದು ಇಂಚಲ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. + +ಇಂದು ಬೈಲಹೊಂಗಲ ತಾಲೂಕಿನ ಇಂಚಲದಲ್ಲಿ ಮಾತನಾಡಿದ ಡಾ. ಶಿವಾನಂದ ಭಾರತಿ ಸ್ವಾಮೀಜಿ, ಲಕ್ಷ್ಮಣ ಸವದಿ ಉಪಮುಖ್ಯಮಂತ್ರಿ ಆಗಿದ್ದು, ನನಗೆ ಸಂತೋಷವಾಗಿದೆ. ಅವರು ಜನರ ಸೇವೆಗೆ ಬಂದಿದ್ದಾರೆ. ಈ ರೀತಿಯ ವ್ಯಕ್ತಿ ನಮ್ಮ ಭಕ್ತನಾಗಿದ್ದು ನನಗೆ ಖುಷಿ ಕೊಟ್ಟಿದೆ ಎಂದು ಹೇಳಿದ್ದಾರೆ. + + + +ಅವರು ಕರ್ನಾಟಕದ ಜನರ ಸೇವೆ ಮಾಡಲು ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸವದಿ ಅವರು ನಮ್ಮ ಮಠದ ಪರಮ ಭಕ್ತರಾಗಿದ್ದವರು. ಅವರು ಜನ ಸೇವೆ, ಮಠಗಳ ಸೇವೆಯನ್ನ ಮಾಡುತ್ತಾ ಬಂದಿದ್ದಾರೆ. ಲಕ್ಷ್ಮಣ ಸವದಿ ಅವರಿಗೆ ಮುಂದಿನ ದಿನದಲ್ಲಿ ಉನ್ನತ ಮಟ್ಟದ ಸ್ಥಾನ ಕೊಡಲಿ ಎಂದು ಹೇಳಿದರು. + +ಲಕ್ಷ್ಮಣ ಸವದಿ ಅವರು ನಿಷ್ಠಾವಂತ ವ್ಯಕ್ತಿ, ರಾಜಕಾರಣದಲ್ಲಿ ಯಾವುದೇ ಜಾತಿ ಭೇದ ಬಾವವಿಲ್ಲದ ರಾಜಕಾರಣ ಮಾಡುವ ವ್ಯಕ್ತಿ. ಈಗ ಉಪ ಮುಖ್ಯಮಂತ್ರಿ ಆಗಿರುವ ಲಕ್ಷ್ಮಣ ಸವದಿ ಮುಂದಿನ ದಿನದಲ್ಲಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸ್ವಾಮೀಜಿ ಭವಿಷ್ಯ ನುಡಿದರು. + + + diff --git a/PublicTV_World/00be9560.txt b/PublicTV_World/00be9560.txt new file mode 100644 index 0000000000000000000000000000000000000000..0dd41e2bba4f7ba5a871a47665d06054ae4dca96 --- /dev/null +++ b/PublicTV_World/00be9560.txt @@ -0,0 +1,18 @@ +ಮೈಸೂರು:ಒಂದು ದೇಶವನ್ನ ಹಾಳು ಮಾಡಬೇಕಾದರೆ ಬಾಂಬ್ ಹಾಕಬೇಕಿಲ್ಲ. ಆ ದೇಶದ ಯುವಕರನ್ನ ಮಾದಕ ವ್ಯಸನಿಗಳನ್ನಾಗಿ ಮಾಡಿದರೆ ಸಾಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. + +ನಗರದಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗವಾಗಿದೆ. ಒಂದು ದೇಶವನ್ನ ಹಾಳು ಮಾಡಬೇಕಾದರೆ ಬಾಂಬ್ ಹಾಕಬೇಕಿಲ್ಲ. ಆ ದೇಶದ ಯುವಕರನ್ನ ಮಾದಕ ವ್ಯಸನಿಗಳನ್ನಾಗಿ ಮಾಡಿದರೆ ಸಾಕು. ಅವರ ಮುಂದಿನ ಪೀಳಿಗೆ ಸೇರಿ ಇಡೀ ಕುಟುಂಬವನ್ನ ಸರ್ವನಾಶವಾಗಿಸಿ ಬಿಡುತ್ತದೆ. ಈ ದಂಧೆ ಕೇವಲ ಸ್ಯಾಂಡಲ್‍ವುಡ್ ಬಾಲಿವುಡ್ ಅಷ್ಟೇ ಸೀಮಿತವಾಗಿಲ್ಲ. ಎಲ್ಲ ಕಡೆ ಡ್ರಗ್ಸ್ ಹಾಗೂ ಗಾಂಜಾ ಸಿಗುತ್ತಿದೆ. ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದರು. + + + +ಈ ಘಟನೆಯನ್ನ ಎಚ್ಚರಿಕೆ ಪಾಠವಾಗಿ ಭಾವಿಸಿ ಡ್ರಗ್ಸ್ ನಿರ್ನಾಮ ಮಾಡಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ. ಯಾವ ದೇಶದ ಯಾವ ಪೆಡ್ಲರ್‌ಗಳು ಇದ್ದಾರೆ ಅವರೆಲ್ಲರನ್ನ ಬಂಧಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಇರುವವರು ಮಾಹಿತಿ ಕೊಡಿ. ಎಲ್ಲ ಕಡೆ ರೇಡ್ ಆಗಲಿ, ಡ್ರಗ್ಸ್ ವಿರುದ್ಧ ನಾವೆಲ್ಲರೂ ಹೋರಾಟ ಮಾಡಬೇಕು. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಗೃಹಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು. + +ಆಧಾರ ರಹಿತ ಆರೋಪಗಳಿಗೆ ನಾನು ಉತ್ತರ ಕೊಡುವುದಿಲ್ಲ. ಯಾರಾದರೂ ಒಂದು ವಿಷಯದ ಬಗ್ಗೆ ಮಾತನಾಡಬೇಕು ಎಂದರೆ ಅದಕ್ಕೆ ಸಾಕ್ಷಿ, ಆಧಾರ ಇರಬೇಕು ಎಂದು ಹೆಚ್‍ಡಿಕೆ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದರು. + + + +ಡ್ರಗ್ಸ್, ಗಾಂಜಾ ಸಾಮಾನ್ಯವಾಗಿ ಬಳಕೆಯಲ್ಲಿರುವ ಪದಗಳಾಗಿವೆ. ಯಾಕೆಂದರೆ ಡ್ರಗ್ಸ್‌ನಿಂದ ವಾಸನೆ ಬರಲ್ಲ, ಹೀಗಾಗಿ ಯಾರು ಸೇವನೆ ಮಾಡಿದ್ದಾರೆ ಎಂಬುದು ಗೊತ್ತಾಗಲ್ಲ. ಮದ್ಯ ಸೇವನೆ ಮಾಡಿದರು ತೂರಾಡುತ್ತಾರೆ. ಅದರಿಂದ ಅವರನ್ನು ನೋಡಿದರೆ ಕುಡಿದಿರುವುದು ಗೊತ್ತಾಗುತ್ತೆ ಅಥವಾ ವಾಸನೆಯಿಂದ ಗೊತ್ತಾಗುತ್ತದೆ. ಆದರೆ ಡ್ರಗ್ಸ್‌ ಯಾರು ಸೇವಿಸಿದ್ದಾರೆ ಎಂಬುದು ಗೊತ್ತಾಗುವುದಿಲ್ಲ.ಇದೊಂದು ಸಮಾಜಕ್ಕೆ ಪಿಡುಗಾಗಿರುವುದರಿಂದ ನಮ್ಮೆಲ್ಲರ ಜವಾಬ್ದಾರಿ ಇದೆ. ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಪ್ರತಾಪ್ ಸಿಂಹ ಹೇಳಿದರು. + + + + + diff --git a/PublicTV_World/00bf0676.txt b/PublicTV_World/00bf0676.txt new file mode 100644 index 0000000000000000000000000000000000000000..a121557973a178681c37e439f55b33ab911676ec --- /dev/null +++ b/PublicTV_World/00bf0676.txt @@ -0,0 +1,10 @@ +ಶಿವಮೊಗ್ಗ:ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡೆ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ವಿರೋಧಿಸಿ ಶಿವಮೊಗ್ಗದಲ್ಲಿ ಇಂದು ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದವು. + +ನಗರದ ಸವಳಂಗ ರಸ್ತೆಯಲ್ಲಿರುವ ಸುನ್ನಿ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಮುಸ್ಲಿಂ ಬಾಂಧವರು ಪೌರತ್ವ ಕಾಯ್ದೆ ಜಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ ಕಾಯ್ದೆ ಜಾರಿಗೆ ತರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ಕಾಯ್ದೆ ಜಾರಿಗೊಳಿಸಿದರೆ ಭಾರತೀಯರು ಸಹ ಅತಂತ್ರರಾಗುತ್ತಾರೆ. ಈ ಕಾಯ್ದೆಯಿಂದ ಮುಸ್ಲಿಮರಲ್ಲಿ ಆತಂಕ ಎದುರಾಗಿದೆ. ಹೀಗಾಗಿ ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆ ಜಾರಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. + + + +ಈ ನೂತನ ಕಾಯ್ದೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಗಿರೀಶ್ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು. ಇಂದು ನಡೆದ ಪ್ರತಿಭಟನೆ ಶಾಂತಿಯುತವಾಗಿ ನಡೆದಿದ್ದು, ರಾಷ್ಟ್ರಗೀತೆ ಹಾಡುವ ಮೂಲಕ ಅಂತ್ಯಗೊಳಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. + + + diff --git a/PublicTV_World/00bf912f.txt b/PublicTV_World/00bf912f.txt new file mode 100644 index 0000000000000000000000000000000000000000..da28c7331d12b995d4720cb0dec3b9da83693f73 --- /dev/null +++ b/PublicTV_World/00bf912f.txt @@ -0,0 +1,40 @@ +ಹಾವೇರಿ/ಹುಬ್ಬಳ್ಳಿ:ಉತ್ತರ ಕರ್ನಾಟಕದ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದ್ದಾರೆ. ಬಿಜೆಪಿ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದು ಎಮ್ಮೆ ಚರ್ಮದ ಸರ್ಕಾರವಲ್ಲ. ಇದೊಂದು ಘೇಂಡಾಮೃಗ ಚರ್ಮದ ಸರ್ಕಾರ ಎಂದು ಕಿಡಿಕಾರಿದ್ದಾರೆ. + +ನೀರಾವರಿ ಯೋಜನೆಗಾಗಿ ರೈತರ ಭೂಮಿ ಸ್ವಾಧೀನ ಮಾಡಿಕೊಳ್ಳೋದನ್ನ ವಿರೋಧಿಸಿ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಪಟ್ಟಣದಲ್ಲಿ ಧಾರವಾಡ ಹೈಕೋರ್ಟ್ ನ ಹಿರಿಯ ವಕೀಲ ಬಿ.ಡಿ.ಹಿರೇಮಠ ನಡೆಸುತ್ತಿರೋ ಉಪವಾಸ ಸತ್ಯಾಗ್ರಹ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಪಟ್ಟಣದ ಭಗತ್ ಸಿಂಗ್ ವೃತ್ತದಲ್ಲಿ ನಡೆಸುತ್ತಿರೋ ಸತ್ಯಾಗ್ರಹಕ್ಕೆ ಮಾಜಿ ಸಿ.ಎಂ.ಸಿದ್ದರಾಮಯ್ಯ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಪವಾಸ ಸತ್ಯಾಗ್ರಹವನ್ನ ಬಿಡುವಂತೆ ಮನವಿ ಮಾಡಿಕೊಂಡರು. + + + +ಈ ಸರ್ಕಾರಕ್ಕೆ ಎಲ್ಲ ಇಂದ್ರಿಯಗಳು ಹೋಗಿ ಬಿಟ್ಟಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಬಾರದು. ಈ ಕ್ಷೇತ್ರದವರೆ ಸಚಿವರಿದ್ದಾರೆ. ಸಚಿವರು ಬಂದು ಕೇಳಬಹುದಿತ್ತು. ಈವರೆಗೂ ಇಲ್ಲಿನ ಮಂತ್ರಿ ಬಿ.ಸಿ.ಪಾಟೀಲ ರೈತರನ್ನ ಭೇಟಿ ಆಗಿಲ್ಲ ಎಂದು ಕೃಷಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು. + + + +ಬಿ.ಸಿ.ಪಾಟೀಲ ಪೊಲೀಸ್ ಅಧಿಕಾರಿ ಆಗಿದ್ದವ. ಈಗ ಹಸಿರು ಶಾಲು ಹಾಕ್ಕೊಂಡು ತಿರುಗಾಡ್ತಿದ್ದಾನೆ ಗಿರಾಕಿ. ನಾನು ನಿಮ್ಮ ಕ್ಷೇತ್ರದಲ್ಲಿ ಐದು ಯೋಜನೆ ಜಾರಿ ಮಾಡಿದ್ದೇನೆ. ಆಗ ನಾನು ಎಂದಾದ್ರೂ ಹಸಿರು ಶಾಲು ಹಾಕ್ಕೊಂಡು ಬಂದಿದ್ದನಾ? ರೈತರು ಹೆಚ್ಚು ಹೆಚ್ಚು ಭಾಗವಹಿಸಬೇಕು, ಹೋರಾಟ ತೀವ್ರಗೊಳ್ಳಬೇಕು. ನಾನೂ ಈ ಬಗ್ಗೆ ಯಡಿಯೂರಪ್ಪ ಜೊತೆ ಚರ್ಚಿಸ್ತೇನೆ. ರೈತರಿಗೆ ಮೋಸ ಮಾಡುವಂತಹ ಇಂಥಾ ಯೋಜನೆ ಕೈಬಿಡಿ ಎಂದು ಸಿಎಂಗೆ ಒತ್ತಾಯಿಸುತ್ತೆನೆ ಎಂದು ಸತ್ಯಾಗ್ರಹ ಹೋರಾಟಗಾರಿಗೆ ತಿಳಿಸಿದರು. + + + +ಗ್ರಾಮ ಸ್ವರಾಜ್ಯ ಕಾಂಗ್ರೆಸ್ ಕೂಸು:ಗ್ರಾಮ ಸ್ವರಾಜ್ಯ ಅಭಿಯಾನ ಕಾಂಗ್ರೆಸ್ಸಿನ ಕೂಸು. ಮಹಾತ್ಮ ಗಾಂಧಿಯವರು ಜಾರಿಗೆ ತಂದಿರುವ ಗ್ರಾಮ ಸ್ವರಾಜ್ಯವನ್ನು ಈಗ ರಾಜಕೀಯ ಲಾಭಕ್ಕಾಗಿ ನಾವು ಜಾರಿಗೆ ತಂದಿದ್ದೇವೆ ಎಂದು ಬಿಜೆಪಿ ಗ್ರಾಮ ಸ್ವರಾಜ್ಯ ಅಭಿಯಾನವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. + + + +ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮ ಪಂಚಾಯತ ವ್ಯವಸ್ಥೆ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಗ್ರಾಮದ ಆಡಳಿತ ಜನರ ಕೈಯಲ್ಲಿ ಇರಬೇಕೆಂದು ಜಾರಿಗೆ ತಂದಿದ್ದು ಕಾಂಗ್ರೆಸ್ ಆದರೇ ಬಿಜೆಪಿಯವರು ಯಾವತ್ತು ರಾಜಕೀಯ ಮೀಸಲಾತಿ ಪರವಾಗಿದ್ದವರಲ್ಲ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು. + +ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನೀರಾವರಿ ಯೋಜನೆಗಾಗಿ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ-ಹಿರೇಕೆರೂರು ತಾಲೂಕಿನ ಗ್ರಾಮಗಳಲ್ಲಿ ರೈತರ ಜಮೀನನ್ನು ನಿಯಮ ಬಾಹಿರವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಸರ್ಕಾರದ ಈ ಅಸಂವಿಧಾನಿಕ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. 1/2#Rattihalli#ಸತ್ಯಾಗ್ರಹpic.twitter.com/hSXhUb7Jf8 + +— Siddaramaiah (@siddaramaiah)December 11, 2020 + + + +ರಾಜಕೀಯ ಮೀಸಲಾತಿ ಕಾಂಗ್ರೆಸ್ ನ ಕೊಡುಗೆಯಾಗಿದೆ. ಬಿಜೆಪಿಯವರಿಗೆ ಅಧಿಕಾರ ವಿಕೇಂದ್ರಿಕರಣ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಲ್ಲ. ಗ್ರಾಮಸ್ವರಾಜ್ಯ ಕಾಂಗ್ರೆಸ್ ನ ಕೂಸು, ಅದು ಬಿಜೆಪಿಗೆ ಸಂಬಂಧವಿಲ್ಲ ಎಂದ ಅವರು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುತ್ತದೆ. ಹಣ ಚೆಲ್ಲಿ, ಅಧಿಕಾರ ದುರುಪಯೋಗಪಡಿಸಿಕೊಂಡು ಬಿಜೆಪಿಯವರು ತಿಪ್ಪರಲಾಗ ಹಾಕಿದರು ಬಹುಮತ ಪಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. + +ಸರ್ಕಾರದಿಂದ ಅನ್ಯಾಯಕ್ಕೊಳಗಾದ ರೈತರು ಹಿರಿಯ ವಕೀಲ ಹಿರೇಮಠ್ ಅವರ ನೇತೃತ್ವದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹ ನಡೆಯುತ್ತಿರುವ ರಟ್ಟೀಹಳ್ಳಿಗೆ ಇಂದು ಭೇಟಿ ನೀಡಿದೆ.ರೈತರ ಹೋರಾಟಕ್ಕೆ ನನ್ನ ಬೆಂಬಲವಿದೆ. ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆಯನ್ನೂ ಅವರಿಗೆ ನೀಡಿದ್ದೇನೆ. 2/2#Rattihallipic.twitter.com/Nn9hAzNYzM + +— Siddaramaiah (@siddaramaiah)December 11, 2020 + + + +ತಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ಆದರೆ ಕಾಂಗ್ರೆಸ್ ಜಾರಿಗೊಳಿಸಿದ ಬಹುತೇಕ ಯೋಜನೆಯನ್ನು ಬಿಜೆಪಿ ನಿಲ್ಲಿಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ಕಾಂಗ್ರೇಸ್ ಅಭಿವೃದ್ಧಿ ಕಾರ್ಯದ ಬಗ್ಗೆ ಗೊತ್ತಿದೆ ಎಂದರು. + +ಗ್ರಾಮ ಪಂಚಾಯತಿಯಲ್ಲಿ ಸೀಟ್ ಹರಾಜು ವಿಷಯದ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯತಿಯಲ್ಲಿ ಸೀಟ್ ಹರಾಜು ಹಾಕಬಾರದು. ಅದು ಕಾನೂನು ಬಾಹಿರ, ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಕಬೇಕು, ಇದಕ್ಕೆ ಬಿಜೆಪಿ ಕಾರಣ ಎಂದು ಆರೋಪಿಸಿದರು. + + + diff --git a/PublicTV_World/00c0d89c.txt b/PublicTV_World/00c0d89c.txt new file mode 100644 index 0000000000000000000000000000000000000000..331317329a9586c1a2ae7b9381786284581a12b0 --- /dev/null +++ b/PublicTV_World/00c0d89c.txt @@ -0,0 +1,30 @@ +ಬೆಂಗಳೂರು: ಹಬ್ಬ ಹರಿದಿನಗಳು ಬಂದರೆ ಪ್ರೈವೇಟ್ ಬಸ್‍ಗಳು ಲೂಟಿ ಮಾಡೋದು ಸಾಮಾನ್ಯವಾಗಿತ್ತು. ಈಗ ಈ ಸಾಲಿಗೆ ಸರ್ಕಾರಿ ಸಾರಿಗೆ ಸಂಸ್ಥೆಯೂ ಸೇರಿಕೊಂಡಿದೆ. ಹಬ್ಬಗಳ ಸಮಯದಲ್ಲಿ ಖಾಸಗಿ ಬಸ್ ದರ ದುಪ್ಪಟ್ಟು ಮಾಡಿದರೆ, ಇತ್ತ ಕೆಎಸ್ ಆರ್ ಟಿಸಿ ಅವರು ನಾವೇನ್ ಕಡಿಮೆ ನಾವೂ ಸಹ ಜಾಸ್ತಿ ಮಾಡುತ್ತೇವೆ ಎಂದು ಪ್ರಯಾಣಿಕರ ಮೇಲೆ ಹೊರೆ ಹಾಕಲು ಮುಂದಾಗಿದ್ದಾರೆ. ಈ ವಿಚಾರ ಪಬ್ಲಿಕ್ ಟಿವಿ ನಡೆಸಿದ ರಹಸ್ಯ ಕಾರ್ಯಾಚರಣೆಯ ವೇಳೆ ಬಯಲಾಗಿದೆ. + +ಇದೇ ಸೋಮವಾರ ಗಣೇಶನ ಚತುರ್ಥಿ ಹಬ್ಬವಿದೆ. ಹೀಗಾಗಿ ಶುಕ್ರವಾರ, ಶನಿವಾರದಿಂದ ಊರಿಗೆ ಹೋಗುವವರ ಪ್ಲಾನ್ ಶುರುವಾಗುತ್ತದೆ. ಸೋಮವಾರದವರೆಗೆ ಸಾಲು ಸಾಲು ರಜೆ ಇರುವುದರಿಂದ ಊರುಗಳಿಗೆ ಹೋಗಿ ಮನೆಮಂದಿ, ನೆಂಟರೊಂದಿಗೆ ಹಬ್ಬವನ್ನ ಆಚರಿಸುವ ಬಯಕೆ ಎಲ್ಲರಿಗೂ ಇರುತ್ತದೆ. ಆದರೆ ಊರಿಗೆ ಹೋಗುವ ಮೊದಲೇ ಎಲ್ಲ ಆಸೆಗಳಿಗೆ ಬಸ್ ಗಳು ಕೊಳ್ಳಿ ಇಡಲು ಮುಂದಾಗಿವೆ. + +ಕೆಎಸ್ಆರ್‌ಟಿಸಿಯಿಂದಲೂ ಹಗಲುದರೋಡೆ:ಪ್ರತಿನಿಧಿ: ಮೇಡಂ, ಮಂಗಳೂರಿಗೆ.. ದಿನಾಂಕ 30 ನೈಟ್..ಕೆಎಸ್ಆರ್‌ಟಿಸಿ ಸಿಬ್ಬಂದಿ: ಫಿಲ್ ಮಾಡಿ..ಪ್ರತಿನಿಧಿ: ಮೇಡಂ ಐರಾವತ..ಕೆಎಸ್ಆರ್‌ಟಿಸಿ ಸಿಬ್ಬಂದಿ: ಮಾರ್ನಿಂಗಾ..? ನೈಟಾ..?ಪ್ರತಿನಿಧಿ: ನೈಟ್ಕೆಎಸ್ಆರ್‌ಟಿಸಿ ಸಿಬ್ಬಂದಿ: ಯಶವಂತಪುರಕ್ಕೆ 10:55ಕ್ಕೆ ಬರುತ್ತೆ ಕೊಡ್ಲಾ..?ಪ್ರತಿನಿಧಿ: ಮೆಜೆಸ್ಟಿಕ್‍ನಿಂದ ಇಲ್ವಾ..?ಕೆಎಸ್ಆರ್‌ಟಿಸಿ ಸಿಬ್ಬಂದಿ:ಇಲ್ಲ.. ಎಲ್ಲಾ ಎಕ್ಸ್ಟ್ರಾ ಬಸ್ಪ್ರತಿನಿಧಿ: ಎಷ್ಟು ಮೇಡಂ ರೇಟ್ ಅದು…?ಕೆಎಸ್ಆರ್‌ಟಿಸಿ ಸಿಬ್ಬಂದಿ:ಟೋಟಲ್ ನಾಲ್ಕು ಜನಕ್ಕೆ 4,400 ರೂ.ಪ್ರತಿನಿಧಿ: ಒಬ್ಬೊಬ್ಬರಿಗೆ ಎಷ್ಟಾಗುತ್ತೆ..?ಕೆಎಸ್ಆರ್‌ಟಿಸಿ ಸಿಬ್ಬಂದಿ: 1,110 ರೂ. + + + +ಪ್ರತಿನಿಧಿ: ನಾರ್ಮಲ್ ಪ್ರೈಸ್ ಜಾಸ್ತಿ ಆಗಿದ್ದೀಯಾ ಮೇಡಂ..?ಕೆಎಸ್ಆರ್‌ಟಿಸಿ ಸಿಬ್ಬಂದಿ:ಹಾ…. 600 ರೂಪಾಯಿ ಜಾಸ್ತಿ ಆಗಿದೆಪ್ರತಿನಿಧಿ: ಪರ್‍ಹೆಡ್‍ಗೆ 600 ರೂಪಾಯಿ ಜಾಸ್ತಿ ಆಗಿದ್ದೀಯಾ..?ಕೆಎಸ್ಆರ್‌ಟಿಸಿ ಸಿಬ್ಬಂದಿ: ಇಲ್ಲ ನಾಲ್ಕು ಜನಕ್ಕೆ..ಪ್ರತಿನಿಧಿ: ಅಂದ್ರೆ 200 ರೂಪಾಯಿ ಜಾಸ್ತಿ ಮಾಡಿದ್ದೀರಾ..?ಕೆಎಸ್ಆರ್‌ಟಿಸಿ ಸಿಬ್ಬಂದಿ:ಹೂ.. 150 ಜಾಸ್ತಿ ಆಗಿದೆ..ಪ್ರತಿನಿಧಿ: ಹಬ್ಬಕ್ಕೋಸ್ಕರನಾ..?ಕೆಎಸ್ಆರ್‌ಟಿಸಿ ಸಿಬ್ಬಂದಿ: ಹೂ..ಪ್ರತಿನಿಧಿ: ಈಗ ನಾರ್ಮಲ್ ಪ್ರೈಸ್ ಎಷ್ಟು..? + +ಕೆಎಸ್ಆರ್‌ಟಿಸಿ ಸಿಬ್ಬಂದಿ: ನಾರ್ಮಲ್ ಡೇಸ್‍ನಲ್ಲಿ 3,800 ಆಗುತ್ತೆ.. ಈಗ 4,440 ಆಗಿದೆ. ಡಿಸ್ಕೌಂಟ್ 4,200 ಆಗಬಹುದು.. 400 ರೂಪಾಯಿ ಜಾಸ್ತಿಯಾಗಿದೆ.. ನೂರು, ನೂರೈವತ್ತು ರೂಪಾಯಿ ಜಾಸ್ತಿ ಆಗುತ್ತೆ..ಪ್ರತಿನಿಧಿ: ರಿಟರ್ನ್ ರೇಟು ಸೋಮವಾರಕ್ಕೂ ಜಾಸ್ತಿ ಆಗಿದೆಯಾ..?ಕೆಎಸ್ಆರ್‌ಟಿಸಿ ಸಿಬ್ಬಂದಿ: ಹೂ… ಸೇಮ್ ರೇಟ್..ಪ್ರತಿನಿಧಿ: ಆರ್ಡಿನರಿ ಬಸ್ ಅಷ್ಟೇ ಇದ್ದೀಯಾ ಮೇಡಂ…? ಆರ್ಡಿನರಿ ಬಸ್‍ನಲ್ಲೂ ಪರ್ಸೆಂಟೇಜ್ ಜಾಸ್ತಿ ಮಾಡಿದ್ದೀರಾ..?ಕೆಎಸ್ಆರ್‌ಟಿಸಿ ಸಿಬ್ಬಂದಿ: ಹೂ..ಪ್ರತಿನಿಧಿ: ಯಾವತ್ತು?ಕೆಎಸ್ಆರ್‌ಟಿಸಿ ಸಿಬ್ಬಂದಿ: ಶುಕ್ರವಾರ, ಸೋಮವಾರಕೆಎಸ್ಆರ್‌ಟಿಸಿ ಸಿಬ್ಬಂದಿ:ಆರ್ಡಿನರಿ ಕೂಡ ಜಾಸ್ತಿ ಮಾಡಿದ್ದಾರೆ. 60, 70 ರೂಪಾಯಿ ಹೆಚ್ಚು ಮಾಡಿದ್ದಾರೆ… + +ಸಾಮಾನ್ಯ ದಿನಗಳಲ್ಲಿ 400 ರಿಂದ 1000 ಇದ್ದ ದರಗಳು ಹಬ್ಬದ ಪ್ರಯುಕ್ತ ದುಪ್ಪಟ್ಟು ಮಾಡಿದ್ದಾರೆ. ಸಾರಿಗೆ ಬಸ್‍ಗೆ ನಾರ್ಮಲ್ ಆಗಿ 300 ರೂಪಾಯಿ ಇದೆ. ಆದರೆ ಈಗ ಪ್ರೈವೆಟ್‍ಗಳಂತೆ 100 ರೂಪಾಯಿಗಿಂತ ಹೆಚ್ಚಾಗಿದೆ. ಇದು ಹಬ್ಬದ ಜೊತೆ ಬರೆ ಎಳೆದಂತಾಗಿದೆ. + +ಇನ್ನು ಕೆಎಸ್‍ಆರ್‍ಟಿಸಿಯ ದರೋಡೆಯನ್ನು ಬಂಡವಾಳ ಮಾಡಿಕೊಂಡಿರೋ ಪ್ರೈವೇಟ್ ಟ್ರಾನ್ಸ್ ಪೋರ್ಟ್‍ಗಳು ಸುಮ್ನಿರುತ್ತಾ ಹೇಳಿ..? ಸಿಕ್ಕಿದ್ದೇ ಚಾನ್ಸ್ ಎಂದು ಪ್ರಯಾಣಿಕರ ಬಳಿ ಟಿಕೆಟ್ ರೇಟನ್ನ ಓನ್‍ಟು ಡಬ್ಬಲ್ ಪಡೆಯುತ್ತಿದ್ದಾರೆ. + + + +ಪ್ರತಿನಿಧಿ: ಸರ್.. ಧರ್ಮಸ್ಥಳ. ಶುಕ್ರವಾರಕ್ಕೆ 10 ಗಂಟೆ ನಂತ್ರಖಾಸಗಿ ಬಸ್ ಸಿಬ್ಬಂದಿ: 1,400 ಆಗುತ್ತೆ..ಪ್ರತಿನಿಧಿ: ಸರ್ ಒಂದು ಸೀಟ್‍ಗೆ 1400 ರೂಪಾಯಿನಾ? ಒಂದು ಸೀಟ್‍ಗೆ..?ಖಾಸಗಿ ಬಸ್ ಸಿಬ್ಬಂದಿ: ಹೂ…ಪ್ರತಿನಿಧಿ: ಶನಿವಾರ ಸರ್..?ಖಾಸಗಿ ಬಸ್ ಸಿಬ್ಬಂದಿ:ಸೇಮ್ ರೇಟ್ಪ್ರತಿನಿಧಿ: ಅಷ್ಟೊಂದ್ ರೇಟ್ ಯಾಕೆ…?ಖಾಸಗಿ ಬಸ್ ಸಿಬ್ಬಂದಿ:ರಜೆ ಇದೆ. ಅದಕ್ಕೆ + +ಪ್ರತಿನಿಧಿ: ಸರ್ 6ನೇ ತಾರೀಕಿಗೆ ಎಷ್ಟ್ ರೂಪಾಯಿ ಇದೆ..?ಖಾಸಗಿ ಬಸ್ ಸಿಬ್ಬಂದಿ: 800ಪ್ರತಿನಿಧಿ: ರೆಗ್ಯೂಲರ್ 800 ರೂಪಾಯಿನ ಸರ್…?ಖಾಸಗಿ ಬಸ್ ಸಿಬ್ಬಂದಿ:ರೆಗ್ಯೂಲರ್ ಅಂತಾ ಅಲ್ಲ ಸರ್… ದಿನಕ್ಕೆ ಒಂದು ರೇಟ್ ಇರುತ್ತೆ.. + +ಪ್ರತಿನಿಧಿ: ಸರ್ ಹುಬ್ಬಳ್ಳಿಗೆ ಟಿಕೆಟ್ ಎಷ್ಟಣ್ಣಾ..?ಖಾಸಗಿ ಬಸ್ ಸಿಬ್ಬಂದಿ:ಯಾವತ್ತು…?ಪ್ರತಿನಿಧಿ: ಶುಕ್ರವಾರಖಾಸಗಿ ಬಸ್ ಸಿಬ್ಬಂದಿ:ರಾತ್ರಿಗಾ…?ಪ್ರತಿನಿಧಿ: ಹೂ.. ನೈಟ್‍ಗೆಖಾಸಗಿ ಬಸ್ ಸಿಬ್ಬಂದಿ: ಸ್ಲೀಪರ್ 1,600..ಪ್ರತಿನಿಧಿ: ಇವತ್ತಿಗೆ ಎಷ್ಟು ಅಣ್ಣ..?ಖಾಸಗಿ ಬಸ್ ಸಿಬ್ಬಂದಿ:650 ರೂಪಾಯಿಪ್ರತಿನಿಧಿ: ಅವತ್ತಿಗೂ ಇವತ್ತಿಗೂ ಏನ್ ಚೇಂಜ್ ಅಣ್ಣಾ..?ಖಾಸಗಿ ಬಸ್ ಸಿಬ್ಬಂದಿ: ಗಣೇಶ ಹಬ್ಬ ಇರೋದಕ್ಕೆ ಜಾಸ್ತಿ ಮಾಡಿರೋದು.. + +ಒಟ್ಟಿನಲ್ಲಿ ದುಪ್ಪಟ್ಟು ಹಣ ಕೊಟ್ಟು ಊರಿಗೆ ಹೋಗಿ ಹಬ್ಬ ಮಾಡಬೇಕಾದ ಸ್ಥಿತಿ ನಮ್ಮ ನಾಡಿನ ಜನತೆಯದ್ದಾಗಿದೆ. + + + + + diff --git a/PublicTV_World/00d15420.txt b/PublicTV_World/00d15420.txt new file mode 100644 index 0000000000000000000000000000000000000000..374c6f21440277243ac3c427d96cb918fe8c263f --- /dev/null +++ b/PublicTV_World/00d15420.txt @@ -0,0 +1,18 @@ +ವಿಜಯಪುರ:ಚಹಾ, ಸಿಗರೇಟ್ ತಂದುಕೊಡುವಂತಹ ರೌಡಿಗಳಿಂದ ನಾನೇನು ಕಲಿಯಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ್ ಕಿಡಿಕಾರಿದರು. + +ಡಿಕೆಶಿ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆಶಿ ಒಂದು ಬಾರಿ ಮಾನನಷ್ಟ ಮೊಕದ್ದಮೆ ಹಾಕಿದ್ದಾನೆ. ಮತ್ತೇನು ಹಾಕ್ತಾನೆ. ಹಣ ಇದೆ ಹಾಕ್ತಾನೆ, ಹಾಕಲಿ ಅದರಿಂದ ಏನಾಗುತ್ತೆ. ಮಾನ ಇದ್ದವರಿಗೆ ಮಾನನಷ್ಟ ಆಗುತ್ತೆ. ಮಾನ ಇಲ್ಲದವರಿಗೆ ಏನು ಮಾನನಷ್ಟ ಆಗುತ್ತೆ. ಕೋತ್ವಾಲ್ ರಾಮಚಂದ್ರನಿಗೆ ಚಹಾ, ಸಿಗರೇಟ್ ತಂದುಕೊಡುವಂತಹ ರೌಡಿಗಳಿಂದ ನಾನೇನು ಕಲಿಯಬೇಕಾಗಿಲ್ಲ ಎಂದು ಟಾಂಗ್ ನೀಡಿದರುಇದನ್ನೂ ಓದಿ:ಪತಿ ಆಸೆ ಈಡೇರಿಸಿದ ಪತ್ನಿ: ಹುತಾತ್ಮ ಯೋಧನ ಪತ್ನಿ ಈಗ ಲೆಫ್ಟಿನೆಂಟ್ + + + +ಧ್ವನಿವರ್ಧಕ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನಂತೆ ಧ್ವನಿವರ್ಧಕ ವಿಷಯದಲ್ಲಿ ನಡೆಯಬೇಕಾಗುತ್ತೆ. ಸರ್ಕಾರ ಇದನ್ನು ಪಾಲಿಸಬೇಕು. ಈ ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಸರಿಯಾಗಿ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು ಎಂದು ವಿವರಿಸಿದರು. + +ಉತ್ತರ ಪ್ರದೇಶದಲ್ಲಿ ಯಾವ ರೀತಿ ಕ್ರಮ ಜರುಗಿಸಿದ್ದಾರೆ. ಅದೇ ರೀತಿ ನಮ್ಮಲ್ಲಿ ಏಕೆ ಮಾಡುವುದಕ್ಕೆ ಆಗುವುದಿಲ್ಲ. ಗೃಹ ಸಚಿವರು ಈ ಕೂಡಲೇ ಕ್ರಮಕ್ಕೆ ಮುಂದಾಗಬೇಕು. ದೇವಸ್ಥಾನ, ಮಸೀದಿ, ಚರ್ಚ್ ಯಾವುದೇ ಇರಲಿ, ನಿಯಮ ಮೀರಿ ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದರು. + + + +ಒಂದು ವೇಳೆ ಅವರು ಹೇಳಿದಂತೆ ಕೇಳದೆ ಹೋದ್ರೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಹೇಳಿದಂತೆ ದೇವಸ್ಥಾನಗಳಲ್ಲಿ ಹನುಮಾನ್ ಚಾಲಿಸಾ, ಸುಪ್ರಭಾತ, ಭಕ್ತಿಗೀತೆ 5 ಬಾರಿ ನುಡಿಸಬೇಕು ಎಂಬ ನಿರ್ಧಾರಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದರು.ಇದನ್ನೂ ಓದಿ:ಧ್ವನಿವರ್ಧಕ ಗಲಾಟೆ ಮುಗಿದಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸಿದೆ: ಸಂಜಯ್ ರಾವತ್ + + + + + diff --git a/PublicTV_World/00d5b31a.txt b/PublicTV_World/00d5b31a.txt new file mode 100644 index 0000000000000000000000000000000000000000..94d0da7f616735444b1d7f5429a8a60b9d43f63a --- /dev/null +++ b/PublicTV_World/00d5b31a.txt @@ -0,0 +1,16 @@ +– ನರೇಗಾ ಯೋಜನೆ ಸದ್ಬಳಕೆಗೆ ಮುಂದಾದ ಅಧಿಕಾರಿಗಳು + +ಯಾದಗಿರಿ:ಜಿಲ್ಲೆಯ ಜನ ಬೆಂಗಳೂರು, ಮುಂಬೈ ಹಾಗೂ ಪುಣೆಗೆ ಗೂಳೆ ಹೋಗುವುದನ್ನು ತಪ್ಪಿಸಲು, ನರೇಗಾ ಯೋಜನೆ ಅಡಿ ಅವರ ಊರಲ್ಲೇ ಕೆಲಸ ನೀಡಲು ಜಿ.ಪಂ ಮುಂದಾಗಿದೆ. + + + +ಗ್ರಾಪಂಚಾಯ್ತಿ ವ್ಯಾಪ್ತಿಯಲ್ಲಿ ಉಳು ತೆಗೆವುದು, ಬಸಿಗೌಲಿ ಸ್ವಚ್ಛತೆ, ಬದು ನಿರ್ಮಾಣ ಹಾಗೂ ಕೃಷಿ ಹೊಂಡ ಕೆಲಸಗಳು ನಡೆಯುತ್ತಿವೆ. ಒಂದು ಕುಟುಂಬಕ್ಕೆ 100 ದಿನ ಕೆಲಸ ಕೊಟ್ಟಿದ್ದು, ಪ್ರತಿಯೊಬ್ಬರಿಗೆ ದಿನಕ್ಕೆ 289 ರೂಪಾಯಿ ಕೂಲಿ ಸಿಗುತ್ತದೆ. ಅಲ್ಲದೇ ಒಂದು ವಾರದ ನಂತರ ನೇರವಾಗಿ ಅವರ ಖಾತೆ ಹಣ ಜಮೆಯಾಗುತ್ತದೆ.ಇದನ್ನೂ ಓದಿ:ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ + + + +ವಲಸೆ ಹೋದಾಗ ಕಟ್ಟಡ ಕೆಲಸ ಮಾಡುವಾಗ ಅನಾಹುತಗಳು ಸಂಭವಿಸುತ್ತವೆ. ಹೀಗಾಗಿ ಇಲ್ಲೇ ನರೇಗಾದಲ್ಲಿ ಕೆಲಸ ಕೊಡಲಾಗಿದೆ. ಉತ್ತಮವಾಗಿ ಕೆಲಸವೂ ನಡೆಯುತ್ತಿದೆ. ಬಸ್, ರೈಲಿನಲ್ಲಿ ಮೂಲಕ ಗುಳೆ ಹೋಗುವ ಜನರನ್ನು, ತಡೆದು ಅವರಿಗೆ ಜಾಗೃತಿ ಮೂಡಿಸಿ, ಜಿಲ್ಲೆಯಲ್ಲಿಯೆ ದುಡಿಯುವಂತೆ ಮನವೊಲಿಸಲು ಮುಂದಾಗಿ ಕೆಲವನ್ನು ಕೊಡುತ್ತಿದ್ದಾರೆ. + +Advertisement + + + diff --git a/PublicTV_World/00dbda2c.txt b/PublicTV_World/00dbda2c.txt new file mode 100644 index 0000000000000000000000000000000000000000..9e8884a10fa880010d55851dcd6dee0c5e79c1eb --- /dev/null +++ b/PublicTV_World/00dbda2c.txt @@ -0,0 +1,20 @@ +ಬೆಂಗಳೂರು: ಶಿವಮೊಗ್ಗದಲ್ಲಿ (Shivamogga) ರಾಜ್ಯ ಸರ್ಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ (Airport) ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರವನ್ನು ತಲುಪಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (M.B.Patil) ತಿಳಿಸಿದ್ದಾರೆ. + +ಮಂಗಳವಾರ ಈ ಕುರಿತು ಮಾತನಾಡಿದ ಅವರು, ವಿಮಾನಯಾನ ಸೇವೆಗಳ ಮೊದಲ ಹೆಜ್ಜೆಯಾಗಿ ಇಂಡಿಗೋ ಸಂಸ್ಥೆಯ ವಿಮಾನವು ಗುರುವಾರ ಬೆಳಗ್ಗೆ 9:50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Kempegowda International Airport) ಹೊರಟು 11:05ಕ್ಕೆ ಶಿವಮೊಗ್ಗ ತಲುಪಲಿದೆ. ಮೊದಲ ಯಾನದಲ್ಲಿ ತಾವೂ ಪ್ರಯಾಣಿಸಲಿದ್ದು, ಜೊತೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳೂ ಇರಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದೊಡನೆಯೇ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಣೆ ಮಾಡಲಾಗುವುದು ಎಂದರು.ಇದನ್ನೂ ಓದಿ:ಎರಡೂ ಕಡೆ ಬಾಗಿಲು ಇರುವ ಬಸ್ ಇದ್ದಂತೆ ನಮ್ಮ ಪಕ್ಷ: ಸಂತೋಷ್ ಲಾಡ್ + + + +ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, ಇದಕ್ಕೆ 450 ಕೋಟಿ ರೂ. ವಿನಿಯೋಗಿಸಲಾಗಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್‌ಪೋರ್ಟ್ ಮೈದಾಳಿದ್ದು, ಇದರಲ್ಲಿ ಏರ್‌ಬಸ್ ಮಾದರಿಯ ವಿಮಾನಗಳೂ ಬಂದಿಳಿಯುವ ಅನುಕೂಲಗಳನ್ನು ಕಲ್ಪಿಸಲಾಗಿದೆ. ಇದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.ಇದನ್ನೂ ಓದಿ:ಜನತೆಗೆ ಸಿಹಿ ಸುದ್ದಿ- ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ + +ಮುಂದಿನ ದಿನಗಳಲ್ಲಿ ಶಿವಮೊಗ್ಗದಿಂದ ದೆಹಲಿ, ಮುಂಬೈ, ಹೈದರಾಬಾದ್, ಚೆನ್ನೈ, ಗೋವಾ ಮುಂತಾದ ನಗರಗಳಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗುವುದು. ತಕ್ಷಣಕ್ಕೆ ಬೆಂಗಳೂರಿನಲ್ಲಿ ಈ ಸ್ಥಳಗಳಿಗೆ ಕನೆಕ್ಟಿಂಗ್ ವಿಮಾನಗಳು ಲಭ್ಯ ಇರಲಿವೆ. ಜೊತೆಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ವಿಸ್ತರಿಸಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದು ಅಂತಿಮ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ:ಮೋದಿ ಹೆಸರು ಹೇಳಿಕೊಂಡು ಗೆಲ್ಲೋದಲ್ಲ – ಸ್ವಪಕ್ಷದ ವಿರುದ್ಧ ಮತ್ತೆ ಗುಡುಗಿದ ರೇಣುಕಾಚಾರ್ಯ + + + +ಮೂಲ ಯೋಜನೆಯಲ್ಲಿ ಈ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಇರಲಿಲ್ಲ. ಈಗ ಅದನ್ನು ಪರಿಷ್ಕರಿಸಿ, ಆ ಅನುಕೂಲವನ್ನೂ ನೀಡಲಾಗಿದೆ. 4,340 ಚದರ ಮೀಟರ್ ವಿಸ್ತೀರ್ಣದ ಪ್ರಯಾಣಿಕರ ಟರ್ಮಿನಲ್ ಮತ್ತು 3,050 ಮೀಟರ್ ಉದ್ದದ ರನ್‌ವೇಯನ್ನು ಇದು ಒಳಗೊಂಡಿದೆ. ಮುಂದಿನ ಮೂರು ವಾರಗಳ ವಿಮಾನಯಾನ ಟಿಕೆಟ್ ಮುಂಗಡವಾಗಿ ಬುಕಿಂಗ್ ಆಗಿದ್ದು, ಒಳ್ಳೆಯ ಬೇಡಿಕೆ ವ್ಯಕ್ತವಾಗಿದೆ ಎಂದು ಹೇಳಿದರು.ಇದನ್ನೂ ಓದಿ:ಗಣೇಶೋತ್ಸವದ ಲಾಟರಿ ಖರೀದಿಗೆ ಮುಗಿಬಿದ್ದ ಜನ- ಕಿ.ಮೀ ಉದ್ದದ ಸಾಲು + +Web StoriesActress Jyothi Rai New Photo Shootಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳುಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! + + + + + diff --git a/PublicTV_World/00e14716.txt b/PublicTV_World/00e14716.txt new file mode 100644 index 0000000000000000000000000000000000000000..bb572daccceb78d5d55085885a2c53c05954828a --- /dev/null +++ b/PublicTV_World/00e14716.txt @@ -0,0 +1,16 @@ +ಬಳ್ಳಾರಿ:ಕರ್ನಾಟಕದಲ್ಲಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತ ಶಿಷ್ಯನ ಮೇಲೆ ಮುನಿಸಿಕೊಂಡಿದ್ದಾರಂತೆ. ಇಂದು ನಡೆದ ಪಕ್ಷದ ಮುಖಂಡ ರ ಸಭೆಯಲ್ಲಿ ಹೆಸರು ಪ್ರಸ್ತಾಪಿಸದೇ ನಮ್ಮ ನಾಲಿಗೆ ಮೇಲೆ ಹಿಡಿತ ಇರಬೇಕು. ಚುನಾವಣೆ ಪ್ರಚಾರದಲ್ಲಿ ಏನೇನೋ ಮಾತನಾಡಬಾರದು ಎಂದು ಹೇಳುವ ಶಾಸಕ ವಿ.ಸೋಮಣ್ಣರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. + +ಇಂದು ಬಳ್ಳಾರಿಯ ಖಾಸಗಿ ಹೋಟೆಲ್‍ನಲ್ಲಿ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಮುಖಂಡರ ಸಭೆ ನಡೆದಿತ್ತು. ಈ ವೇಳೆ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಉದ್ದೇಶಿಸಿ ಮಾತನಾಡುತ್ತಿರುವಾಗ, ಯಾವುದೇ ಸಂದರ್ಭದಲ್ಲಿ ಭಾವೋದ್ವೇಗಕ್ಕೆ ಒಳಗಾಗಿ ಹೇಳಿಕೆ ನೀಡಬಾರದು. ಬಾಯಿಗೆ ಬಂದಂತೆ ಭರವಸೆ ಕೊಡುವುದಕ್ಕೆ ಚುನಾವಣೆ ಪ್ರಚಾರ ಅಂತಾ ಹೇಳಲ್ಲ. ಜನರು ನಿಮ್ಮ ಮಾತನ್ನು ಗಮನಿಸುತ್ತಾ ಇರುತ್ತಾರೆ. ಮುಂದಿನ ದಿನಗಳಲ್ಲಿ ಅದು ಬೇರೆ ಬೇರೆ ಬೆಳವಣಿಗೆಗೆ ಕಾರಣವಾಗುತ್ತೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. + + + +ಸಭೆಯಲ್ಲಿ ಯಡಿಯೂರಪ್ಪನವರು ಪರೋಕ್ಷವಾಗಿ ಅಸಮಾಧಾನ ಹೊರಹಾಕುತ್ತಿದ್ದಂತೆ ವಿ.ಸೋಮಣ್ಣ ಸಭೆಯಿಂದ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. + +ಯಾಕೆ ಈ ಮುನಿಸು..?ಈ ಹಿಂದೆ ಬಳ್ಳಾರಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ಮಾತನಾಡಿದ್ದ ವಿ.ಸೋಮಣ್ಣ, ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷಣಗಳನ್ನು ರಾಜ್ಯದಲ್ಲಿ ಶ್ರೀರಾಮುಲು ಹೊಂದಿದ್ದಾರೆ. ಇತ್ತ ಕೇದಾರನಾಥ ಸ್ವಾಮೀಜಿ ಕೂಡ ಶ್ರೀರಾಮುಲು ಅವರಿಗೆ ಮುಖ್ಯಮಂತ್ರಿ ಆಗುವ ಲಕ್ಷಣಗಳಿವೆ. ಅವರಿಗೆ ಆಶೀರ್ವಾದ ಮಾಡಿ, ಬೆಳವಣಿಗೆಗೆ ಶ್ರಮಿಸಿ ಅಂತಾ ಸಲಹೆ ನೀಡಿದ್ದಾರೆ. ಹೀಗಾಗಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶ್ರೀರಾಮುಲು ಖಂಡಿತ ಉಪಮುಖ್ಯಮಂತ್ರಿ ಅಲ್ಲ, ಮುಖ್ಯಮಂತ್ರಿಯೇ ಆಗುತ್ತಾರೆ ಎಂದು ಹೇಳಿದ್ದರು. + +ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿwww.instagram.com/publictv + + + + + diff --git a/PublicTV_World/00e3ed48.txt b/PublicTV_World/00e3ed48.txt new file mode 100644 index 0000000000000000000000000000000000000000..d510077959074e0889b61a5a5e283fc4ec02e0c7 --- /dev/null +++ b/PublicTV_World/00e3ed48.txt @@ -0,0 +1,14 @@ +ಬೆಂಗಳೂರು:ನನಗೆ ಎಂಎಸ್‍ಐಎಲ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡವೇ ಬೇಡ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ. + +ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ನನಗೆ ಎಂಎಸ್‍ಐಎಲ್ ನಿಗಮ ಮಂಡಳಿ ಅಧ್ಯಕ್ಷಗಿರಿ ಕೊಟ್ಟ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಎಂಎಸ್‍ಐಎಲ್ ಅಧ್ಯಕ್ಷ ಸ್ಥಾನ ನನಗೆ ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ. + + + +ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಿ ಉಪ ಚುನಾವಣೆಯಲ್ಲಿ ಗೆದ್ದ 11 ಜನ ಶಾಸಕರ ಪೈಕಿ 10 ಜನರಿಗೆ ಸಚಿವಸ್ಥಾನ ನೀಡಲಾಗಿದೆ. ಹೀಗಾಗಿ ಸಚಿವ ಸ್ಥಾನ ವಂಚಿತ ಮಹೇಶ್ ಕುಮಟಳ್ಳಿ ಅವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಹೊಂದಿರುವ ಎಂಎಸ್‍ಐಎಲ್ ಅಧ್ಯಕ್ಷ ಸ್ಥಾನ ನೀಡಿ ಸಿಎಂ ಆದೇಶ ಹೊರಡಿಸಿದ್ದರು. ಆದರೆ ಇದರಿಂದ ಕಿಡಿಕಾರಿದ ಮಹೇಶ್ ಕುಮಟಳ್ಳಿ ಅವರು ಎಂಎಸ್‍ಐಎಲ್ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದಾರೆ. + +ಸಚಿವ ಸ್ಥಾನ ಕೈ ತಪ್ಪಿದರೂ, ರಮೇಶ್ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ಮಹೇಶ್ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದ್ದರು. ಮಂತ್ರಿ ಸ್ಥಾನ ಕೊನೆ ಕ್ಷಣದಲ್ಲಿ ಕೈತಪ್ಪಿ ಕುದಿಯುತ್ತಿರುವ ಶಾಸಕ ಉಮೇಶ್ ಕತ್ತಿ, ನನಗಿಂತ ಸವದಿಗೆ ಅನುಭವ ಹೆಚ್ಚು. ಹೀಗಾಗಿ ಅವರು ಸಚಿವರಾಗಿದ್ದಾರೆ ಅಂತ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. + + + + + diff --git a/PublicTV_World/00e45ba5.txt b/PublicTV_World/00e45ba5.txt new file mode 100644 index 0000000000000000000000000000000000000000..3384843fd2a0d18e2571cdcc2d99df47053e88c0 --- /dev/null +++ b/PublicTV_World/00e45ba5.txt @@ -0,0 +1,14 @@ +ಬಾಗಲಕೋಟೆ: ನೂತನ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳಲಿಲ್ಲದೆ ಸಂತ್ರಸ್ತರು ಪರದಾಡುತ್ತಿದ್ದು, ತಮ್ಮ ಆಕ್ರೋಶ ಹೊರಹಾಕಿದ್ದಾರೆ. + +ಇತ್ತ ಮುಧೋಳ ತಾಲೂಕಿನ ಒಂಟಗೋಡಿಯಲ್ಲಿ ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಘಟಪ್ರಭಾ ನದಿ ಪ್ರವಾಹದದಿಂದಾಗಿ ಸರ್ಕಾರಿ ಶಾಲೆ ಮುಳುಗಡೆಯಾಗಿದ್ದು, ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಆದರೂ ಮಕ್ಕಳಿಗೆ ಪಾಠ ಮಾಡಲು ಬೇರೆ ಕಟ್ಟಡವಿಲ್ಲ. ಹೀಗಾಗಿ ಮಕ್ಕಳು ಬಯಲಲ್ಲೇ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣವಾಗಿದೆ. + + + +ಶಾಲೆಯ ಕಟ್ಟಡ ಬೀಳುವ ಭಯದಿಂದ ಸಿಬ್ಬಂದಿ ಈಗಾಗಲೇ ಕಟ್ಟಡಕ್ಕೆ ಬೀಗ ಜಡಿದಿದ್ದಾರೆ. ಹೀಗಾಗಿ ಮಳೆ ಬಂದರೆ ಶಾಲೆಯ ಹೊರಗಡೆ ತಲೆ ಮೇಲೆ ಟಾರ್ಪಲ್ ಹಾಕಿಕೊಂಡು ಪಾಠ ಕೇಳುವ ಅನಿವಾರ್ಯ ಮಕ್ಕಳದ್ದಾಗಿದೆ. + +ಶಾಲಾ ಕಟ್ಟಡ ನೀರಲ್ಲಿ ಮುಳುಗಿ ಹಾಳಾಗಿ ಹೋಗಿದ್ದರಿಂದ ಯಾವಾಗ ಬೀಳುತ್ತೋ ಅನ್ನೋ ಆತಂಕದಲ್ಲಿರುವ ಸ್ಥಳೀಯರು ಇಷ್ಟೆಲ್ಲ ಆದರೂ ಯಾವೊಬ್ಬ ನಾಯಕರು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರ ಸ್ಥಿತಿ ಆಲಿಸಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಕೂಡಲೇ ಮಕ್ಕಳಿಗೆ ಶಾಲಾ ಕಟ್ಟಡದ ವ್ಯವಸ್ಥೆ ಮಾಡಿಸುವಂತೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. + + + + + diff --git a/PublicTV_World/00e544df.txt b/PublicTV_World/00e544df.txt new file mode 100644 index 0000000000000000000000000000000000000000..97981eb2502910fbdbf4c79607b0433ff9e60cd2 --- /dev/null +++ b/PublicTV_World/00e544df.txt @@ -0,0 +1,18 @@ +ಬೆಂಗಳೂರು:ಹೊರ ರಾಜ್ಯಗಳಿಂದ ಅಮಾಯಕ ಯುವತಿಯರನ್ನು ಕರೆ ತಂದು ಮಾಂಸದ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. + +ದಾಳಿಯ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಹೊರ ರಾಜ್ಯದ ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿ ಅವರ ಮನೆಗಳಿಗೆ ಕಳುಹಿಸಿಕೊಡುವ ಕೆಲಸ ಮಾಡಿದ್ದಾರೆ. ಯುವತಿಯರಿಗೆ ಉದ್ಯೋಗ ಕೊಡಿಸುವುದಾಗಿ ಬೇರೆ ಬೇರೆ ರಾಜ್ಯದಿಂದ ಕರೆ ತಂದು ಶ್ರೀರಾಂಪುರದಲ್ಲಿ ಮನೆ ಮಾಡಿ ಇರಿಸಿಕೊಳ್ಳುತ್ತಿದ್ದರು. + + + +ಮಾಂಸದ ದಂಧೆಯಲ್ಲಿ ತೊಡಗಿಕೊಂಡರೆ ಕಡಿಮೆ ಅವಧಿಯಲ್ಲಿ ಕೈ ತುಂಬಾ ಹಣ ಮಾಡಬಹುದೆಂದು ಆರೋಪಿಗಳು ಯುವತಿಯರಿಗೆ ಹಣದ ಆಮೀಷ ತೋರುತ್ತಿದ್ದರು. ಅಲ್ಲದೆ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಕೊಳ್ಳುವಂತೆ ಯುವತಿಯರಿಗೆ ಪ್ರೇರಣೆ ನೀಡುತ್ತಿದ್ದರು. + +ಆರೋಪಿಗಳಾದ ಪ್ರಜ್ವಲ್, ಸುಭೇಂದ್ರ ಫೋನ್ ಮೂಲಕ ಗಿರಾಕಿಗಳನ್ನು ಸಂಪರ್ಕ ಮಾಡಿ ಯುವತಿಯರ ಫೋಟೋ ಕಳುಹಿಸುತ್ತಿದ್ದರು. ಗಿರಾಕಿಗಳು ಯುವತಿಯರ ಫೋಟೋ ನೋಡಿ ಓಕೆ ಮಾಡಿದ ಮೇಲೆ ಆರೋಪಿಗಳು 2 ಸಾವಿರದಿಂದ 3 ಸಾವಿರ ಹಣ ಫಿಕ್ಸ್ ಮಾಡಿ ಯುವತಿಯರನ್ನು ಗಿರಾಕಿ ಬಳಿ ಕಳುಹಿಸಿಕೊಡುತ್ತಿದ್ದರು. + + + +ಆರೋಪಿಗಳು ಯುವತಿಯರನ್ನು ಹೊರ ರಾಜ್ಯದಿಂದ ಕರೆ ತಂದು ಮಾಂಸದ ದಂಧೆಗೆ ದೂಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿರುವ ಬಗ್ಗೆ ಸ್ಥಳೀಯರು ದೂರು ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೆರೆಗೆ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. + +ಸದ್ಯ ಬಂಧಿತ ಆರೋಪಿ ಸುಭೇಂದ್ರ ಹಾಗೂ ಪ್ರಜ್ವಲ್‍ನಿಂದ 35 ಸಾವಿರ ನಗದು ಹಾಗೂ ಮೊಬೈಲ್ ವಶಪಡಿಕೊಂಡಿದ್ದಾರೆ. ಈ ಬಗ್ಗೆ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. + + + diff --git a/PublicTV_World/00e76598.txt b/PublicTV_World/00e76598.txt new file mode 100644 index 0000000000000000000000000000000000000000..45830c5ed3224726cc4ac289504c12b2fb47f72d --- /dev/null +++ b/PublicTV_World/00e76598.txt @@ -0,0 +1,18 @@ +ಬೆಂಗಳೂರು:ನಟ ಯುವರಾಜ್ ಕುಮಾರ್ ಅವರು ಕರ್ನಾಟಕ ಪ್ರವಾಹಕ್ಕೆ ಸಂಬಂಧಿಸಿದಂತೆ ತಮ್ಮ ಫೇಸ್‍ಬುಕ್‍ನಲ್ಲಿ ಒಂದು ಸುದೀರ್ಘವಾದ ಪೋಸ್ಟ್ ಮಾಡಿದ್ದಾರೆ. ಇದೀಗ ಆ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. + +ಉತ್ತರ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಪ್ರವಾಹದಿಂದ ರಾಜ್ಯದ ಲಕ್ಷಾಂತರ ಮಂದಿಯ ಬದುಕು ಬೀದಿಗೆ ಬಿದ್ದಿದೆ. ಪ್ರವಾಹ ಸಂತ್ರಸ್ತರಿಗೆ ಅನೇಕರು ಸಹಾಯ ಮಾಡುತ್ತಿದ್ದಾರೆ. ಆದರೆ ಹೊರಗಿನ ಸೆಲೆಬ್ರಿಟಿಗಳು, ಸ್ಟಾರ್‌ಗಳು ಯಾರು ಬಂದಿಲ್ಲ ಎಂದು ಯುವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. + + + +ಫೇಸ್‍ಬುಕ್ ಪೋಸ್ಟ್?ಒಂದು ಆಲೋಚನೆ – ನಮ್ಮ ಕರ್ನಾಟಕದ ಎಷ್ಟೋ ಜಿಲ್ಲೆಗಳಲ್ಲಿ ಜಲಪ್ರಳಯದ ಪರಿಣಾಮ ಲಕ್ಷಾಂತರ ಜನರು ನಷ್ಟದಲ್ಲಿದಾರೆ. ಅವರಲ್ಲಿ ನೂರಾರು ಜನರು ನಿರಾಶ್ರಿತರಾಗಿದ್ದಾರೆ, ಆಹಾರವಿಲ್ಲ, ಮೂಲಭೂತ ಸೌಕರ್ಯಗಳಿಲ್ಲ. ನಾವು ಕನ್ನಡಿಗರು, ಇಲ್ಲಿನ ಸಂಘ ಸಂಸ್ಥೆಗಳು, ಸೇನಾ ದಳಗಳು ಹಾಗೂ ಕರ್ನಾಟಕ ಸರ್ಕಾರ ಎಲ್ಲರೂ ಒಂದಾಗಿ ಕೈಲಾದಷ್ಟು ಸಹಾಯ ಮಾಡಲು ಪ್ರಯತ್ನ ಪಡುತ್ತಿದ್ದೇವೆ ಎಂದು ಹೇಳಿದ್ದಾರೆ. + +ಆದರೆ, ಎಲ್ಲಾ ಹೊರಗಿನ ಸೆಲೆಬ್ರಿಟಿಗಳು, ಸ್ಟಾರ್‌ಗಳು, ರಾಜಕಾರಣಿಗಳು ತಮ್ಮ ಚಲನಚಿತ್ರಗಳನ್ನು ಪ್ರಚಾರ ಮಾಡಲು, ತಮ್ಮ ಬ್ರಾಂಡ್ ಅನ್ನು ಉತ್ತೇಜಿಸಲು, ತಮ್ಮ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಲು, ಮತ ಕೇಳಲು ಕರ್ನಾಟಕಕ್ಕೆ ಬರುತ್ತಾರೆ. ಆದರೆ ಈಗ ಅವರೆಲ್ಲಾ ಎಲ್ಲಿದ್ದಾರೆ? ಇಲ್ಲಿ ಬರೋದು, ಸಹಾಯ ಮಾಡೋದು ಇರಲಿ, ನನಗೆ ಯಾರ ಟ್ವೀಟ್, ಪೋಸ್ಟ್ ನೋಡಿದ ನೆನಪು ಆಗುತ್ತಿಲ್ಲ. ಅಂದಹಾಗೆ ಸಹಾಯ ಮಾಡಲು ಮುಂದೆ ಬಂದಿರುವ ಎಲ್ಲರಿಗೂ ನಮ್ಮ ಕೋಟಿ ವಂದನೆಗಳು, ನಾನು ಏನಾದರೂ ತಪ್ಪು ಹೇಳುತ್ತಿದ್ದೇನೆಯೇ? ಎಂದು ಪ್ರಶ್ನೆ ಮಾಡಿದ್ದಾರೆ. ನಂತರ ತಪ್ಪಿದ್ದರೆ ಕ್ಷಮೆ ಇರಲಿ. ಯಾರೇ ಬರಲಿ ಬಿಡಲಿ ನಮ್ಮವರ ಜತೆ, ಎಲ್ಲರ ಜೊತೆ ನಾವು ಇರೋಣ ಎಂದು ಕರೆ ನೀಡಿದ್ದಾರೆ. + + + +ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮೈಸೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ಹಿಂದೆ ತಮಿಳುನಾಡು ಮತ್ತು ಕೇರಳದಲ್ಲಿ ಪ್ರವಾಹ ಉಂಟಾದಾಗ ಕರ್ನಾಟಕದಿಂದ ಸಾಕಷ್ಟು ಮಂದಿ ನೆರವಿಗೆ ಹೋಗಿದ್ದರು. ಇದೀಗ ಯುವರಾಜ್ ಕುಮಾರ್ ಮಾಡಿರುವ ಪೋಸ್ಟ್ ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. + + + + + diff --git a/PublicTV_World/00e8c3c7.txt b/PublicTV_World/00e8c3c7.txt new file mode 100644 index 0000000000000000000000000000000000000000..3e12f0a93c9d992c1b8dcd2a824ac84471990af2 --- /dev/null +++ b/PublicTV_World/00e8c3c7.txt @@ -0,0 +1,18 @@ +ಉಡುಪಿ:ಜಿಲ್ಲೆಯಲ್ಲಿ ಹೋಟೆಲ್, ಸರ್ಕಾರಿ ಕ್ವಾರಂಟೈನನ್ನು ಏಳು ದಿನಗಳಿಗೆ ಮೊಟಕು ಮಾಡಿ ವರದಿ ಬರುವ ಮೊದಲೇ ಎಲ್ಲರನ್ನು ಹೋಂ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. ಹೋಂ ಕ್ವಾರಂಟೈನ್ ಹೋದವರ ಪೈಕಿ 13 ಜನಕ್ಕೆ ಕೊರೊನಾ ಆವರಿಸಿದೆ. ಇದರಿಂದ ಆತಂಕಗೊಂಡಿರುವ ಸರ್ಕಾರ ಹೊಸ ಆ್ಯಪ್ ಸಿದ್ಧ ಮಾಡಿದ್ದು, ಹೋಂ ಕ್ವಾರಂಟೈನ್‍ನಲ್ಲಿರುವವರ ಮೇಲೆ ಜಿಲ್ಲಾಡಳಿತ ಕಣ್ಗಾವಲು ಇಟ್ಟಿದೆ. + +ವಿದೇಶ, ಹೋರ ರಾಜ್ಯದಿಂದ ಬಂದು ಮನೆ ಸೇರಿರುವ 6,000 ಜನರಿದ್ದು, ಎಲ್ಲರೂ ಕ್ವಾರಂಟೈನ್ ವಾಚ್ ಅಪ್ಲಿಕೇಶನ್ ಡೌನ್‍ಲೋಡ್ ಮಾಡಿಕೊಳ್ಳಲು ಜಿಲ್ಲಾಡಳಿತ ಸೂಚಿಸಿದೆ. ಹೋಂ ಕ್ವಾರಂಟೈನ್ ಇರುವವರ ಮೇಲೆ ವಾಚ್ ಅಪ್ಲಿಕೇಷನ್ ಮೂಲಕ ಜಿಲ್ಲಾಡಳಿತ ಕಣ್ಗಾವಲು ಇಡಲಿದೆ. + + + +ತಂತ್ರಜ್ಞಾನದ ಮೊರೆ ಹೋದ ಜಿಲ್ಲಾಡಳಿತ, ಮನೆಯ ಸುತ್ತ ಕ್ವಾರಂಟೈನ್ ಆ್ಯಪ್ ಜೊತೆ ಫೆನ್ಸಿಂಗ್ ವ್ಯವಸ್ಥೆ ಜಾರಿ ಮಾಡಿದೆ. ಕ್ವಾರಂಟೈನ್ ಇರುವವರು ಹೊರಗಡೆ ಬಂದ್ರೆ ಜಿಲ್ಲಾಡಳಿತಕ್ಕೆ ತಕ್ಷಣ ಮಾಹಿತಿ ಬರಲಿದೆ. ಮನೆ ಬಿಟ್ಟು ಹೊರಗೆ ಬಂದರೆ ಪ್ರಕರಣ ದಾಖಲು ಮಾಡುವುದಾಗಿ ಡಿಸಿ ಎಚ್ಚರಿಕೆ ನೀಡಿದ್ದಾರೆ. ಹೋಂ ಕ್ವಾರಂಟೈನ್ ನಲ್ಲಿ ಇರುವ ವ್ಯಕ್ತಿ ವಿಎ, ಪಿಡಿಒ ಜೊತೆಗೆ ನಿಂತು ಸೆಲ್ಫಿ ರವಾನೆಗೆ ಸೂಚನೆ ಕೊಡಲಾಗಿದೆ. + +ಸ್ಮಾರ್ಟ್ ಫೋನ್ ಇರುವ ಮನೆಗಳಿಗೆ ಅಪ್ಲಿಕೇಷನ್ ಮೂಲಕ ಮೂಲಕ ಕಾವಲು ಇಟ್ಟಿರುವ ಜಿಲ್ಲಾಡಳಿತ, ಸ್ಮಾಟ್ ಫೋನ್‍ಗಳಿಲ್ಲದ ಮನೆಗಳ ಪಟ್ಟಿಯನ್ನು ನೀಡಿ ಗ್ರಾಮ ಪಂಚಾಯ್ ಮೂಲಕ ನಿಗಾ ವಹಿಸಲು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್‍ಪಿ ವಿಷ್ಣುವರ್ಧನ್ ಸೂಚನೆ ನೀಡಿದ್ದಾರೆ. + + + +ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಹೊರನಾಡು ಕನ್ನಡಿಗರು ಉಡುಪಿಗೆ ಬಂದವರು 8 ಸಾವಿರಕ್ಕೂ ಹೆಚ್ಚು. 14 ದಿನ ಪೂರೈಸಿದರೂ ವರದಿ ಬಾರದ ಕಾರಣ ಮನೆಗೆ ಕಳುಹಿಸಲಾಗಿದೆ. ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ ಬಹಳ ಒತ್ತಡ ಬಂತು. ಮನೆಯಲ್ಲಿ ಜಾಗರೂಕತೆಯಿಂದ ಇರಲು ಸೂಚನೆ ನೀಡಲಾಗಿದೆ. ಪಾಸಿಟಿವ್ ಬಂದವರನ್ನು ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತದೆ ಎಂದರು. + + + + +